Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಹೊಟೇಲ್ ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರ್ ಬಳಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಮಂಗಳವಾರ ಹೊಟೇಲ್ ಗಳ ಮೇಲೆ ದಾಳಿ ನಡೆಸಿ ೧೫ಕ್ಕೂ ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ.ನಗರದ ಸೋಲಾಪುರ ರಸ್ತೆ ಪಕ್ಕದಲ್ಲಿರುವ ಹೋಟೆಲಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲಿಂಡರಗಳನ್ನು ಬಳಕೆಯಾಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಧಿಕಾರಿಗಳು, ಒಟ್ಟು ೧೫ ಗೃಹ ಬಳಕೆ ಸಿಲಿಂಡರಗಳನ್ನು ಜಪ್ತಿ ಮಾಡಿದ್ದಾರೆ. ತನ್ಮೂಲಕ ಹೊಟೇಲ್ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಮಾಡುವ ಹೊಟೇಲ್ ಮಾಲೀಕರಿಗೆ ಎಚ್ಚರಿಕೆ ನೀಡಿದರು.ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ ಹಾಗೂ ಆಹಾರ ನಿರೀಕ್ಷಕ ವಿಜಯಕುಮಾರ್ ಗುಮಶೆಟ್ಟಿ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.
ವಿಜಯಪುರದಲ್ಲಿ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಪಂ ಸಿಇಒ ರಿಷಿ ಆನಂದ ಕಟ್ಟುನಿಟ್ಟಿನ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸೇರಿದಂತೆ ಸರಕಾರದ ವಿವಿಧ ಯೋಜನೆಯಡಿ ಅನೇಕ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈವರೆಗೂ ಅರ್ಜಿಗಳನ್ನು ಬ್ಯಾಂಕ್ ಗಳು ಬಾಕಿ ಉಳಿಸಿಕೊಂಡಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ತಕ್ಷಣಕ್ಕೆ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಸಭೆ ಹಾಗೂ ಡಿಸ್ಟ್ರಿಕ್ಟ್ ಲೆವೆಲ್ ರಿವಿವ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಒಂದು ವಾರದಲ್ಲಿ ಬಾಕಿ ಉಳಿದ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಸಂಪೂರ್ಣವಾಗಿ ವಿಲೇವಾರಿ ಮಾಡತಕ್ಕದ್ದು. ಒಂದು ವೇಳೆ ವಿಳಂಬವಾದಲ್ಲಿ ಸಂಬಂಧಿಸಿದ ಬ್ಯಾಂಕ್ ವ್ಯವಸ್ಥಾಪಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲೆಯ ಪಜಾ, ಪಪಂ, ಅಲ್ಪ ಸಂಖ್ಯಾತರ ಹೀಗೆ ಅನೇಕ ದುರ್ಬಲ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಹೃದಯ ಭಾಗದಲ್ಲಿರುವ ಡಾ. ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಯನ್ನು ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರ ನಿಧಿಯಿಂದ ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಸುಸ್ಥಿರ ಕಟ್ಟಡ ವಿನ್ಯಾಸದ ಪರಿಕಲ್ಪನೆ ಸಂಬಂಧ ವಿಸಿಟ್ ಮಾಡಿ ಚರ್ಚಿಸಿದರು.ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ ಮಾತನಾಡಿ, ತಾಲೂಕಿನ ಹೃದಯ ಭಾಗದಲ್ಲಿರುವ ಈ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಬೇಕಾಗಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಮತ್ತಷ್ಟು ವಿನ್ಯಾಸದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರ, ದಲಿತ ನಾಯಕ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಡಾ. ಬಾಬು ಜಗಜೀವನ್ ರಾಂ ಈ ಒಂದು ಸ್ಥಳಕ್ಕೆ ಭೇಟಿ ನೀಡಿದ್ದು ಇತಿಹಾಸ. ಶಾಸಕರಾಗಿದ್ದಾಗ ಎಂ.ಪಿ. ವೆಂಕಟೇಶ್ ಅವರು, ಈ ಜಾಗವನ್ನು ನಮ್ಮ ಸಮುದಾಯಕ್ಕೆ ಮೀಸಲಿರಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ಮಾತ್ರ್ರ ಮಾಡದೇ ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಸಹ ನಿರ್ವಹಿಸುತ್ತವೆ ಎಂದು ವೈದ್ಯ ಎಸ್.ಎಸ್.ಮುತ್ತತ್ತಿ ಹೇಳಿದರು.ಪಟ್ಟಣದ ಮಾದಿನಾಳ ಕ್ರಾಸ್ ಬಳಿ ಇರುವ ಸಮರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯ ೭ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಮರ್ಥ ಶಾಲೆ ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ಸಮಾಜದ ಹೊಣೆಗಾರಿಕೆ ಮತ್ತು ದೇಶಭಕ್ತಿ ಭಾವನೆಯನ್ನು ಬೆಳೆಸುವ ಕಾರ್ಯವನ್ನು ಸಮರ್ಪಕವಾಗಿ ಮಾಡುತ್ತಿರೋದು ಹೆಮ್ಮೆಯ ವಿಷಯ ಎಂದರು.ಮುಖ್ಯ ಅತಿಥಿಯಾಗಿದ್ದ ಶಿಕ್ಷಕ ಎಂ.ಎ.ತಳ್ಳಿಕೇರಿ ಅವರು ಮಾತನಾಡಿ, ಓಡುತ್ತಿರುವ ದಿನಮಾನಗಳಲ್ಲಿ ಕೆಲವೇ ಮಕ್ಕಳಿಂದ ಪ್ರಾರಂಭವಾದ ಈ ಶಾಲೆ, ಸಧ್ಯ ಉತ್ತಮ ಪರಿಸರ, ಬೃಹತ್ ಕಟ್ಟಡ, ಸುಭದ್ರ ಕೊಠಡಿಗಳು, ವಿಶಾಲವಾದ ಹಸಿರಿನಿಂದ ಕೂಡಿದ ಮೈದಾನ, ಅಚ್ಚುಕಟ್ಟಾದ ಕಂಪೌಂಡ್ ನ ಮೂಲಕ ಬೆಳೆದು ನಿಂತಿದೆ ಅಂದರೆ ಅದಕ್ಕೆ ಶಾಲಾ ಮುಖ್ಯಸ್ಥರ ಸೇವಾ ಮನೋಭಾವನೆ ಮತ್ತು ಕಠಿಣ ಪರಿಶ್ರಮವೇ ಕಾರಣ. ಬರುವ ದಿನಗಳಲ್ಲಿ ಈ ಸಂಸ್ಥೆ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಕನ್ನಡ ಚಲನಚಿತ್ರರಂಗದ ಅಪ್ಪು, ಕರ್ನಾಟಕ ರತ್ನ ದಿ; ಪವರ್ಸ್ಟಾರ ಪುನೀತರಾಜಕುಮಾರ ರವರ ೫೧ನೇ ಜನ್ಮದಿನಾಚರಣೆಯನ್ನು ಅವರ ಅಭಿಮಾನಿ ಬಳಗದವರಿಂದ ಸಂಭ್ರಮದಿಂದ ಆಚರಿಸಲಾಯಿತು.ಚಿಮ್ಮಡ ಗ್ರಾಮದ ಬಸ್ ನಿಲ್ದಾಣದ ಆವರಣದಲ್ಲಿ ಮಂಗಳವಾರ ಮುಂಜಾನೆ ಪುನಿತ್ ಅಭಿಮಾನಿಗಳಾದ ಶ್ರೀಶೈಲ ಬಗನಾಳ, ಮುಸ್ತಾಕ ಯಾದವಾಡರವರಿಂದ ಆಯೋಜಿಸಲಾಗಿದ್ದ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಕೇಕ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.ನಂತರ ನೂರಾರು ಜನರಿಗೆ ಸಿಹಿ, ತಂಪು ಶರಬತ್ ವಿತರಿಸಲಾಯಿತು. ಸಾಯಂಕಾಲ ದೀಪ ಬೆಳಗುವ ಮೂಲಕ ಗೌರವ ಸಲ್ಲಿಸಲಾಯಿತು. ಗ್ರಾಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಗುರುಪಾದ ಉರಭಿನವರ, ಬಸವರಾಜ ಮಮದಾಪೂರ, ಪೀರಸಾಬ ನದಾಫ, ಸಿದ್ದು ಯಮಗರಣಿ ಸೇರಿದಂತೆ ನೂರಾರು ಜನ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ದೈವಿ ಪುರುಷ ಲಿಂಗೈಕ್ಯ ಶ್ರೀ ವಿರಕ್ತಮಹಾಸ್ವಾಮಿಗಳ ೩೩ ನೇ ಪುಣ್ಯ ಸ್ಮರಣೋತ್ಸವ ಹಾಗೂ ಶಿವಶರಣೆ ಅಕ್ಕಮಹಾದೇವಿ ಜಯಂತೋತ್ಸವ ಕಾರ್ಯಕ್ರಮವನ್ನು ಅಧ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಸ್ಥಳಿಯ ವಿರಕ್ತಮಠದ ಚನ್ನಬಸವೇಶ್ವರ ಸಭಾ ವೇದಿಕೆಯಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕೆ ಬಿಡುಗಡೆ ಹಾಗೂ ಪೂರ್ವಭಾವಿ ಸಭೆಯ ನಂತರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರಕ್ತಶ್ರೀಗಳ ಪುಣ್ಯ ಸ್ಮರಣೋತ್ಸವದ ನಿಮಿತ್ತ ಕಲಬುರ್ಗಿ ಶ್ರೀ ಶರಣಬಸವೇಶ್ವರರ ಪುರಾಣ ಪ್ರವಚನ ಕಾರ್ಯಕ್ರಮ ಮಾ. ೧೯ ರಿಂದ ಎ.೧ ರ ವರೆಗೆ ನಡೆಯಲಿದ್ದು, ಗಂಗಾವತಿ ಹಿರೇಮಠ ಮದ್ಲಾಪುರದ ಪಂ. ರುದ್ರಯ್ಯ ಸ್ವಾಮಿಗಳು ನಡೆಸಿ ಕೊಡಲಿದ್ದಾರೆ, ಅಲ್ಲದೇ ಮಾ. ೨೭ರಿಂದ ಎಪ್ರಿಲ್ ೨ರವರೆಗೆ ನಿರಂತರ ವಿಶೇಷ ಕಾರ್ಯಕ್ರಮಗಳು ಹಾಗೂ ನಿರಂತರ ಅನ್ನಪ್ರಸಾದವಿತರಣೆ ನಡೆಸಲು ತೀರ್ಮಾನಿಸಲಾಗಿದ್ದು ನಾಡಿನ ಪ್ರಮಖ ಶ್ರೀಗಳು, ಸಮಾಜ ಸೇವಕರು, ಧುರೀಣರು, ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಸಾರ್ವಜನಿಕರು ತನು, ಮನ, ಧನದೊಂದಿಗೆ ಭಕ್ತಿಪೂರ್ವಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶ್ರೀಗಳ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪರಮಾತ್ಮನ ಪೂಜೆ ಮಾಡುವ ಕೈಗಳಿಗಿಂತ, ಅಲ್ಲಾಹುನನ್ನ ನೆನೆದು ನಮಾಜ ಮಾಡುವದಕ್ಕಿಂತ ಬಡವರಿಗೆ ದಾನ ಮಾಡಿ ಅಲ್ಲಾಹುನನ್ನ ಕಾಣುವ ಕೈಗಳು ದೊಡ್ಡದು ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮ ಮಹಾಸ್ವಾಮಿಗಳು ನುಡಿದರು.ಪಟ್ಟಣದ ಮನಿಯಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ, ಬಡ ಮತ್ತು ನಿರ್ಗತಿಕರಿಗೆ ರಂಜಾನ್ ಕಿಟ್ ವಿತರಿಸುವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ತಾನು ಮಾತ್ರ ಹಬ್ಬವನ್ನು ಆಚರಿಸದೇ ತನ್ನವರೂ ಹಬ್ಬವನ್ನು ಆಚರಿಸಬೇಕು ಎಂದು ಸಾಕಷ್ಟು ವರ್ಷಗಳಿಂದ ಕಿಟ್ ವಿತರಿಸುವ ಮೂಲಕ ಮಾನವೀಯತೆಗೆ ಪಾತ್ರರಾದ ಅಯೂಬ ಮನಿಯಾರ್ ಅವರ ಕಾರ್ಯ ಶ್ಲಾಘನೀಯ ಎಂದರು.ವಾಗ್ಮಿ ಲಾಲ್ಹುಸೇನ ಕಂದಗಲ್ಲ ಮಾತನಾಡಿ, ಬಡವರಿಗೆ ದಾನ ಮಾಡುವದು ಉಪಕಾರ ಅಲ್ಲ, ಭಗವಂತ ನೀಡಿದ ಅವಕಾಶ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರೋದು ಅಯೂಬ್ ಮನಿಯಾರ್ ಮಾತ್ರ ಎಂದರು.ಕಾರ್ಯಕ್ರಮದ ರೂವಾರಿ ಅಯೂಬ್ ಮನಿಯಾರ್ ಮಾತನಾಡಿ ಭೂಮಿಯಲ್ಲಿ ಕೆಲ ವರ್ಷ ಬದುಕಲು ಕೋಟ್ಯಾಂತರ ಬೆಲೆ ಬಾಳುವ ಮನೆ ಕಟ್ಟಿಸುವ ಬದಲು ಶಾಶ್ವತವಾಗಿ ಬದುಕುವ ೩-೬ ಅಡಿ ಭೂಮಿಯನ್ನು ಶೃಂಗಾರಗೊಳಿಸಲು…
ಇತರ ಸಮುದಾಯದಿಂದ ಅಲ್ಲ, ಮುಸ್ಲಿಮರಿಂದಲೇ ಅತಿಕ್ರಮಣ ಎಂದ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಗಳೂರು: ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಸೋಮವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಲಾಗಿದೆ, ಈ ಪೈಕಿ ಹೆಚ್ಚಿನವರು ಮುಸ್ಲಿಮರೇ ಆಗಿದ್ದಾರೆ ಎಂದು ತಿಳಿಸಿದ್ದಾರೆ.ಪ್ರಶ್ನೋತ್ತರ ಅವಧಿಯಲ್ಲಿ ಅಫ್ಜಲ್ಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ರಾಜ್ಯಾದ್ಯಂತ ಒಟ್ಟು 1,12,860 ಎಕರೆಗಳಷ್ಟು ವಕ್ಫ್ ಆಸ್ತಿ ಇದ್ದು, ಅದರಲ್ಲಿ ಕೇವಲ 20,054 ಎಕರೆಗಳು ನಮ್ಮ ಕೈಯಲ್ಲಿವೆ. 17,969 ಎಕರೆಗಳನ್ನು ಅತಿಕ್ರಮಣ ಮಾಡಲಾಗಿದೆ, 47,263 ಎಕರೆಗಳನ್ನು ಇನಾಂ ರದ್ದತಿ ಕಾಯ್ದೆಯಡಿ ಮತ್ತು 23,627 ಎಕರೆಗಳನ್ನು ಭೂ ಸುಧಾರಣಾ ಕಾಯ್ದೆಯಡಿ ಒತ್ತುವರಿ ಮಾಡಲಾಗಿದೆ” ಎಂದು ಖಾನ್ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಾವು ಇಲಾಖೆಯ ಸಚಿವರಾದ ನಂತರ, ಅತಿಕ್ರಮಣಗಳನ್ನು ತೆಗೆದುಹಾಕುವ ಉದ್ದೇಶದಿಂದ ರಾಜ್ಯಾದ್ಯಂತ ವಕ್ಫ್ ಅದಾಲತ್ಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.1,12,860 ಎಕರೆ ವಕ್ಫ್…
ಕರಜಗಿ ಕಾನೂನು ವಿದ್ಯಾರ್ಥಿಗಳಿಂದ ಲೋಕ್ಅದಾಲತ್ ವೀಕ್ಷಣೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಲೋಕ್ ಅದಾಲತ್ ಎಂದರೆ ಜನಸಾಮಾನ್ಯರಿಗೆ ವೇಗವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸುವ ವ್ಯವಸ್ಥೆಯಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಹೇಳಿದರು.ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕ್ ಅದಾಲತ್ನ್ನು ವೀಕ್ಷಣೆ ಮಾಡಲು ಬಂದಿದ್ದ ತಾಳಿಕೋಟೆಯ ಮಾತೋಶ್ರಿ ಕಮಲಾಬಾಯಿ ಸಿದ್ದಪ್ಪ ಕರಜಗಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು.ಲೋಕ್ಅದಾಲತ್ ನಲ್ಲಿ ಪ್ರಕರಣಗಳನ್ನು ಪರಸ್ಪರ ಸಮಾಧಾನದ ಮೂಲಕ ಬಗೆಹರಿಸಲಾಗುತ್ತದೆ. ಇಲ್ಲಿ ಎರಡೂ ಪಕ್ಷಗಳು ಗೆದ್ದಂತಾಗುವ ಜೊತೆಗೆ ಸಂಬAಧಗಳು ದೂರಾಗುವದಿಲ್ಲ. ಹಾಗಾಗಿ ದೇಶದಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ ಎಂದರು.ಈ ವೇಳೆ ವಿದ್ಯಾರ್ಥಿಗಳು ನ್ಯಾಯಾಲಯದ ಕಾರ್ಯವಿಧಾನ, ಪ್ರಕರಣಗಳ ವಿಚಾರಣೆ ಹಾಗೂ ನ್ಯಾಯಾಧೀಶರ ಕರ್ತವ್ಯಗಳ ಕುರಿತು ತಿಳಿದುಕೊಂಡರು. ನ್ಯಾಯಾಧೀಶರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೬ರ ಏಪ್ರಿಲ್ ೫ ರಂದು ಡಾ.ಬಾಬು ಜಗಜೀವನ ರಾಮ್ ಅವರ ೧೧೯ನೇ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ ೨೪ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ .ಈ ಪೂರ್ವಭಾವಿ ಸಭೆಗೆ ಗಣ್ಯರು, ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
