Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಡಚಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಶಾಮನೂರ ಶಿವಶಂಕರಪ್ಪ ಮತ್ತು ವಚನ ಶಿಲಾ ಮಂಟಪದ ರೂವಾರಿಗಳು ಆದ ಇಂಗಳೇಶ್ವರ ವಿರಕ್ತಮಠದ ಶ್ರೀ ಮನಿಪ್ರ ಚೆನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದರ ನಿಮಿತ್ಯ ಚಡಚಣ ಪಟ್ಟಣದಲ್ಲಿ ವೀರಶೈವ ಮಹಾಸಭಾದ ವತಿಯಿಂದ ನುಡಿನಮನ ಕಾರ್ಯಕ್ರಮ ಸೋಮವಾರ ಪಟ್ಟಣದ ವೀರಕ್ತ ಮಠದಲ್ಲಿ ಜರುಗಿತು.ವೀರಶೈವ ಲಿಂಗಾಯತ ಮಹಾಸಭಾದ ಚಡಚಣ ತಾಲೂಕ ಘಟಕದ ಗೌರವ ಅಧ್ಯಕ್ಷರು ಮನಿಪ್ರ ಷಡಕ್ಷರಿ ಮಹಾಸ್ವಾಮಿಗಳು ಮಾತನಾಡಿ ಚೆನ್ನಬಸವ ಮಹಾಸ್ವಾಮಿಗಳು ಕಾಯಕ ಮತ್ತು ದಾಸೋಹದ ಸಿದ್ಧಾಂತವನ್ನು ತಮ್ಮ ಕೊನೆ ಉಸಿರು ಇರುವವರೆಗೂ ಪಾಲಿಸಿಕೊಂಡು ಬಂದವರು ಅವರ ನೆನಪು ಸದಾ ನಮಗೆ ಶ್ರೀರಕ್ಷೆ ಎಂದರು.ಅಧ್ಯಕ್ಷ ಸಂಗಮೇಶ ಅವಜಿ ಮಾತನಾಡಿ, ಶಾಮನೂರ ಶಿವಶಂಕರಪ್ಪ ನಮ್ಮನ್ನ ಅಗಲಿದ್ದು ನಮ್ಮ ಸಮಾಜಕ್ಕೆ ತುಂಬಲಾರದ ನಷ್ಠ ಆಗಿದೆ, ನೇರ ಮಾತುಗಳ ಮೂಲಕ ಕರ್ನಾಟಕ ರಾಜಕಾರಣದಲ್ಲಿ ಅಜಾತಶತ್ರುಗಳಾಗಿ ದಾವಣಗೆರೆ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ ಮಾಡುವದರ ಮೂಲಕ ಜನ ಸಾಮಾನ್ಯರ ಬೆಳಕಾಗಿದ್ದರು ಎಂದರು.ಪ್ರೊ ರವಿ ಅರಳಿ, ವೀರಶೈವ ಲಿಂಗಾಯತ ಮಹಾಸಭಾ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಬಹುತೇಕ ಸೋಷಿಯಲ್ ಮೀಡಿಯಾ ಗ್ರೂಪ್ ಗಳಲ್ಲಿ ಹರಿದಾಡುತ್ತಿರುವ ಕಳ್ಳರ ಹಾವಳಿಯ ಸಿಸಿಟಿವ್ಹಿ ಫೂಟೇಜ್ನ ವಿಡಿಯೊ ಪಟ್ಟಣದ ಜನರಲ್ಲಿ ಭಯ ಮತ್ತು ಆತಂಕ ಹುಟ್ಟಿಸಿದೆ.ದಿ.20 ರಂದು ರಾತ್ರಿ 3.16 ಗಂಟೆಗೆ ಸಿಸಿ ಟಿವಿ ಫೂಟೇಜ್ನಲ್ಲಿ 6 ಕಳ್ಳರು ಪಟ್ಟಣದ ಶಿವಾಜಿ ವೃತ್ತದಲ್ಲಿ ಹತ್ತಳ್ಳಿ ಗ್ರಾಮದ ರಸ್ತೆಗೆ ಓಡಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಇವರೆಲ್ಲರೂ ಕಳ್ಳರಾಗಿದ್ದು, ಪೊಲೀಸ್ ವಾಹನದ ಸದ್ದು ಕೇಳಿ ಓಡಿ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಮರಡಿಯ ನೇಕಾರ ಕಾಲೊನಿಯಲ್ಲಿಯ 3 ಮನೆಗಳ ಕಳ್ಳತನ ನಡೆದಿದೆ ಮತ್ತು ಇಂದಿರಾನಗರದಲ್ಲಿ ಒಂದು ಮನೆ ಕಳ್ಳತನವಾಗಿವೆ, ಸಮೀಪದ ಶಿರಾಡೋಣ ಗ್ರಾಮದ ದೇವಸ್ಥಾನದಲ್ಲಿಯ ವಸ್ತುಗಳನ್ನು ಕಳ್ಳರು ಕದ್ದೋಯ್ದಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.ಈ ಮೊದಲು ಮರಡಿ ಮೇಲಿನ ಆದರ್ಶ ನಗರ ಮತ್ತು ಸಂಗಮೇಶ್ವರ ನಗರದ ಮಧ್ಯದಲ್ಲಿ ಇರುವ ಮನೆಯಲ್ಲಿ ನ.25 ರಂದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದರು, ಆದರೆ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಪೋಲೀಸರು ಬಂದು ಕಳ್ಳನನ್ನು ಹಾಗೂ…
ಸೈನಿಕ ಶಾಲೆ ಬಿಜಾಪುರ ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಿಂಗ್ ಕಮಾಂಡರ್ ಸುಮನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೈನಿಕ ಶಾಲೆ ಬಿಜಾಪುರದಲ್ಲಿ 22ನೇ ಡಿಸೆಂಬರ್ 2025, ಸೋಮವಾರ ರಂದು ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಿತು.ಬಿಜಾಪುರದ ಸೈನಿಕ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಸೈಬರ್ ವಾರ್ಫೇರ್ ಮತ್ತು ಸೈಬರ್ ಸೆಕ್ಯುರಿಟಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಮಾಂಡಿಂಗ್ ಆಫೀಸರ್, ವಿಂಗ್ ಕಮಾಂಡರ್ ಸುಮನ್ ಅಧಿಕಾರಿ ಯವರು ಉಪನ್ಯಾಸ ನೀಡಿದರು.ಸೈಬರ್ ವಾರ್ಫೇರ್ (Cyber Warfare) ಎಂದರೆ ರಾಷ್ಟ್ರಗಳು ಅಥವಾ ಸಂಘಟನೆಗಳು ಪರಸ್ಪರರ ಕಂಪ್ಯೂಟರ್ ವ್ಯವಸ್ಥೆಗಳನ್ನು ಗುರಿಯಾಗಿಸಿ ಮಾಡುವ ದಾಳಿ (ವೈರಸ್, ಡಿನಯಲ್-ಆಫ್-ಸರ್ವಿಸ್) ಮೂಲಕ ಮೂಲಸೌಕರ್ಯಗಳಿಗೆ ಹಾನಿ ಅಥವಾ ಅಡ್ಡಿಪಡಿಸುವುದು, ಹಾಗೂ ಸೈಬರ್ ಸೆಕ್ಯುರಿಟಿ (Cybersecurity) ಎಂದರೆ ಡಿಜಿಟಲ್ ವ್ಯವಸ್ಥೆಗಳು, ನೆಟ್ವರ್ಕ್ಗಳು ಮತ್ತು ಡೇಟಾವನ್ನು ಸೈಬರ್ ದಾಳಿಗಳಿಂದ ರಕ್ಷಿಸುವ ತಂತ್ರಜ್ಞಾನ, ಪ್ರಕ್ರಿಯೆ ಮತ್ತು ನೀತಿಗಳ ಸಮೂಹವಾಗಿದ್ದು ಇಂದಿನ ದಿನಮಾನದಲ್ಲಿ ಸೈಬರ್ ಅಪರಾಧಗಳ ಹಾವಳಿ ಹೆಚ್ಚಾಗಿದ್ದು ಸರ್ವರೂ ಅಂತರ್ಜಾಲದ…
ಯಾವುದೇ ಕಾರಣಕ್ಕೂ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಂಡ ಮಾಜಿ ಡಿಸಿಎಂ ಈಶ್ವರಪ್ಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವೇಷ ಭಾಷಣ ವಿರೋಧಿ ವಿಧೇಯಕ ಮಂಡಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಪುನ: ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಹವಣಿಸುತ್ತಿದೆ, ಹೀಗಾಗಿ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಬಾರದು, ಈ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸರ್ವಾಧಿಕಾರ ವರ್ತನೆ ತೋರಿದ ದಿ.ಇಂದಿರಾ ಗಾಂಧೀ ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ನಂತರ ಕಾಂಗ್ರೆಸ್ ಪಕ್ಷ ನೆಲಕಚ್ಚಿತು. ಈಗ ದ್ವೇಷ ಭಾಷಣ ವಿರೋಧಿ ಮಸೂದೆ ಹಿಂದೂ ನಾಯಕರನ್ನು ಹತ್ತಿಕ್ಕಲು ತಂದಿರುವ ಕರಾಳ ಶಾಸನ, ಪಾಕಿಸ್ತಾನ್ ಜಿಂದಾಬಾದ್ ಎನ್ನುವ ದುಷ್ಟರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅರೆಸ್ಟ್ ಮಾಡಿಲ್ಲ, ತಮಗೆ ಸರಿ ಕಾಣದವರನ್ನು ಅರೆಸ್ಟ್ ಮಾಡುವ ವ್ಯವಸ್ಥಿತ ಷಡ್ಯಂತ್ರಕ್ಕಾಗಿ ಕಾಂಗ್ರೆಸ್ ಈ ಕಾಯ್ದೆ ಜಾರಿಗೆ ತಂದಿದೆ ಎಂದು ದೂರಿದರು.ಹಿಂದೂ ನಾಯಕರನ್ನು, ಹಿಂದೂ ಸಂಘಟನೆಗಳನ್ನು…
ಹೋರಾಟಗಾರರ ದಿಕ್ಕು ತಪ್ಪಿಸುತ್ತಿರುವ ಕೆಲ ಬಿಜೆಪಿ ನಾಯಕರು | ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವ | ಸಚಿವ ಡಾ. ಎಂ.ಬಿ.ಪಾಟೀಲ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹೋರಾಟಗಾರರ ಬಗ್ಗೆ ನನಗೆ ಅಪಾರ ಗೌರವವಿದೆ, ಅವರು ನಮ್ಮವರು, ಆದರೆ ಹೋರಾಟಗಾರರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಬಿಜೆಪಿ ನಾಯಕರು ಮೊದಲು ಹೋಗಿ ಪ್ರಧಾನಿ ಅವರನ್ನು ಖಾಸಗೀಕರಣದ ಪ್ರಶ್ನೆ ಮಾಡಲಿ, ಪಿಪಿಪಿ ಬಿಜೆಪಿ ಹಾಗೂ ಮೋದಿ ಅವರ ಕೂಸು, ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಿದ್ದೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದರು.ಖಾಸಗಿ ಸಹಭಾಗಿತ್ವದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿಯ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಹೊರಡಿಸಲಾದ ಅಧಿಸೂಚನೆ ಮೊದಲಾದ ದಾಖಲಾತಿಗಳನ್ನು ಪ್ರದರ್ಶಿಸಿದರು. ಈ ಬಗ್ಗೆ ಸದನದಲ್ಲಿಯೂ ಬಿಜೆಪಿ ನಾಯಕರು ಬಿಜೆಪಿ ನಿಲುವಿನ ಬಗ್ಗೆ ಸ್ಪಷ್ಟಪಡಿಸಿದ್ದಾರೆ, ಆ ದಾಖಲಾತಿಯೂ ನನ್ನ ಬಳಿ ಇದೆ, ಇಷ್ಟೆಲ್ಲ ಇರುವಾಗ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರವಾಡ ಮತ್ತು ಸುತ್ತಮುತ್ತಲಿನ ತೊನಶ್ಯಾಳ, ದದಾಮಟ್ಟಿ, ಹೊನಗನಹಳ್ಳಿ, ಸವನಹಳ್ಳಿ, ಅತಾಲಟ್ಟಿ, ತೊರವಿ ಮುಂತಾದ ಗ್ರಾಮಗಳಿಗೆ ರೇವಣಸಿದ್ಧೇಶ್ವರ ಏತನೀರಾವರಿ ಯೋಜನೆ 2ನೇ ಹಂತದಲ್ಲಿ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರೂ. 10 ಕೋ. ಅನುದಾನದಲ್ಲಿ ಸಾರವಾಡ – ಬಬಲೇಶ್ವರ ರಸ್ತೆಯ ಹಲಗಣಿ ಕ್ರಾಸ್ ವರೆಗೆ ಸುಧಾರಣೆ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ರೂ. 2 ಕೋ. ಅನುದಾನದಲ್ಲಿ ಸಾರವಾಡ – ತೊನಶ್ಯಾಳ ರಸ್ತೆ ಸುಧಾರಣೆ ಕಾಮಗಾರಿ, ಲೋಕೋಪಯೋಗಿ ಇಲಾಖೆಯ ರೂ. 5 ಕೋ. ಅನುದಾನದಲ್ಲಿ ಸಾರವಾಡ – ದದಾಮಟ್ಟಿ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ, ರೂ.2 ಕೋ. ವೆಚ್ಚದ ಡೋಣಿ ನದಿಯಲ್ಲಿರುವ ಹೂಳೆತ್ತುವ ಕಾರ್ಯಕ್ಕೆ ಚಾಲನೆ, ರೂ. 1…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಶ್ರೀ ಶರಣಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿ ಏಳನೇ ಸೆಮಿಸ್ಟರ್ ವಿದ್ಯಾರ್ಥಿ ಪ್ರಜ್ವಲ್ ಅಳ್ಳಗಿ ಮಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೊಥೆರಪಿಯಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ರಾಜ್ಯ ಮಟ್ಟದ ದೇಹ ದಾರ್ಡ್ಯ ಸ್ಪರ್ಧೆಯಲ್ಲಿಬೆಸ್ಟ್ ಫಿಸಿಕ್ (75 ಕೆಜಿ) ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಕೊರಳಿಗೆ ಹಾಕಿಕೊಂಡಿದ್ದಾರೆ.ತಮ್ಮ ಸಂಸ್ಥೆಯ ಕಾಲೇಜು ವಿದ್ಯಾರ್ಥಿಯ ಸಾಧನೆಗೆ ಶ್ರೀ ಶರಣಬಸವೇಶ್ವರ ಸಂಸ್ಥೆಯಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರರು ಅಭಿನಂದನಿಸಿ, ರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದ್ದಾರೆ.
ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆ ಪರಿಶೀಲಿಸಿದ ಶಾಸಕ ಅಶೋಕ ಮನಗೂಳಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಳಗಾನೂರ ಕರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ರೂ.೨೦ ಕೋಟಿ ಮೊತ್ತದ ಅನುದಾನ ಮಂಜೂರಾಗಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಮತಕ್ಷೇತ್ರದ ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಭೇಟಿ ನೀಡಿ ಪರಿಶೀಲನೆ ಮಾತನಾಡಿದ ಅವರು, ಬಳಗಾನೂರ ಕೆರೆ ಪ್ರದೇಶದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ವರದಿ ನೀಡುವಂತೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಈ ವೇಳೆ ಬೆಳಗಾವಿಯ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಆನಂದಕುಮಾರ ಎಮ್. ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಚೈತ್ರಾ, ರಾಂಪೂರ ಪಿಎ ಕೆಬಿಜೆಎನ್ಎಲ್ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ, ಸತೀಶಬಾಬು, ವಿಜಯಪುರ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ವಿಜಯಪುರ ತೋಟಗಾರಿಕೆ ಇಲಾಖೆ ಶಾಲಿನಿ ತಳಕೇರಿ, ಆಲಮೇಲ ತಹಶೀಲ್ದಾರ್ ಎಮ್.ಎಸ್.ಅರಕೇರಿ, ಸಿಂದಗಿ ಅರಣ್ಯ ಇಲಾಖಾಧಿಕಾರಿ ರಾಜೀವ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಸಿದರು. ಇನ್ನಿತರ ಸಮಸ್ಯೆಗಳನ್ನು ಮುಂದಿನ ದಿನಮಾನಗಳಲ್ಲಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಧಿಕಾರಿ ಎಸ್.ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಬಸವರಾಜ ಸಜ್ಜನ, ಸದಸ್ಯ ಗೊಲ್ಲಾಳಪ್ಪ ಬಂಕಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮುತ್ತಪ್ಪ ಜಂಗಮಶೆಟ್ಟಿ, ಶ್ರೀಮಂತ ಮಲ್ಲೇದ, ಮುಸ್ತಾಕ್ ಮುಲ್ಲಾ, ಪ್ರಕಾಶ ಗುಣಾರಿ, ಆರ್.ಎಮ್.ಸೋಂಪುರ, ರವಿ ನಾವಿ, ರವಿ ಕಟಕೆ ಸೇರಿದಂತೆ ಸ್ಥಳೀಯ ನಿವಾಸಿಗಳು ಇತರರು ಇದ್ದರು.
ಹಂದಿಗನೂರ ಸಿದ್ರಾಮಪ್ಪ ರಂಗಮಂದಿರಕ್ಕೆ ಭೂಮಿ ಪೂಜೆ | ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಂದಿಗನೂರ ಸಿದ್ರಾಮಪ್ಪ ಅವರು ಸಿಂದಗಿ ತಾಲೂಕನ್ನು ರಾಜ್ಯಮಟ್ಟದಲ್ಲಿ ಖ್ಯಾತಿಯನ್ನು ತಂದುಕೊಟ್ಟ ಮಹಾನ್ ಮೇರು ನಟ, ವರನಟ, ನಟಸಾರ್ವಭೌಮ ಡಾ.ರಾಜಕುಮಾರ ಅವರ ಸಮಾನರಾದ ಮಹಾನ್ ನಟ. ರಾಜ್ಯದಲ್ಲಿ ರಂಗಭೂಮಿಗೆ ಬುನಾದಿ ಹಾಕಿದ ಪ್ರಮುಖರಲ್ಲಿ ಹಂದಿಗನೂರ ಸಿದ್ರಾಮಪ್ಪ ಅವರು ಒಬ್ಬರು ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.ಸಿಂದಗಿ ಪಟ್ಟಣದ ಜಿ.ಪಿ.ಪೋರವಾಲ ಕಾಲೇಜಿನ ಎದುರುಗಡೆ ಇರುವ ಜಾಗೆಯಲ್ಲಿ ಸಿಂದಗಿ ಪುರಸಭೆ ಕಾರ್ಯಾಲಯ ವತಿಯಿಂದ ಮುಖ್ಯಮಂತ್ರಿ ಅಮೃತ ನಾಗರೋತ್ತಾನ ಯೋಜನೆ (ಹಂತ-೪) ವಿವೇಚನಾ ಅನುದಾನದಡಿಯಲ್ಲಿ ಮೊದಲನೇ ಹಂತದ ಹಂದಿಗನೂರ ಸಿದ್ರಾಮಪ್ಪ ಅವರ ರಂಗಮಂದಿರ ಭೂಮಿ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಂದಗಿ ತಾಲೂಕು ಹಂದಿಗನೂರ ಗ್ರಾಮದ ರಂಗಭೂಮಿ ಮೇರು ನಟ, ಕಲಾಸಾಮ್ರಾಟ, ನಟ ಭಯಂಕರ ಎಂದೇ ಪ್ರಖ್ಯಾತಿ ಹೊಂದಿದ್ದ ಹಂದಿಗನೂರ ಸಿದ್ರಾಮಪ್ಪನವರ ಹೆಸರಿನಲ್ಲಿ ಅವರು ಹುಟ್ಟುರಿನ ನೆಲದಲ್ಲಿ ಸ್ಮಾರಕ ರಂಗಮಂದಿರ ನಿರ್ಮಾಣವಾಗಬೇಕು ಎಂಬ ಕನಸನ್ನು ಗದಗ-ಡಂಬಳದ…
