Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿರುವಂತಹ ತಪ್ಪು, ದೋಷಗಳನ್ನು ಕವಿತೆ ಹಾಗೂ ವಚನಗಳ ಮೂಲಕ ಅವರ ವಿಚಾರದಾರೆಗಳನ್ನು ಸಮಾಜಕ್ಕೆ ಕೊಟ್ಟಂತಹ ಅನೇಕ ಮಹಾ ಪುರುಷರುಗಳನ್ನು ಸ್ಮರಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ನಗರ ಶಾಸಕರಾದ ಬಸನಗೌಡ ರಾ. ಪಾಟೀಲ(ಯತ್ನಾಳ) ಹೇಳಿದರು.ಇಂದು ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಜಾತಿಗಳನ್ನು ಮೀರಿ ಸಮಾಜದಲ್ಲಿ ಬದಲಾವಣೆಯನ್ನು ಮಾಡಿ, ಕ್ರಾಂತಿ ಮಾಡಿದಂತಹ ಸತ್ಪುರುಷರಾದ ನಮ್ಮ ಮಹಾಯೋಗಿ ವೇಮನರು ಹದಿನೈದನೇ ಶತಮಾನದಲ್ಲಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜವನ್ನು ಸರಿದಾರಿಗೆ ತರಲು ಯತ್ನಿಸಿದ ಮಹಾಯೋಗಿ ವೇಮನರು. ಅವರ ವಚನಗಳು ಇಂದು ನಮಗೆ ದಾರಿದೀಪವಾಗಿವೆ. ಸುಮಾರು ೧೫ ಸಾವಿರ ಪದ್ಯಗಳನ್ನು ಬರೆದು ಸಮಾಜಕ್ಕೆ ಒಂದು ಒಳ್ಳೆಯ ಕೊಡುಗೆಯನ್ನು ನಮಗೆ ನೀಡಿದ್ದಾರೆ. ಮಹಾಯೋಗಿಯ ಜೀವನ ಸಂದೇಶ ಎಲ್ಲರಿಗೂ ಪ್ರೇರಣೆಯಾಗಲಿ. ಮಹನೀಯರ ಸಾರಿದ ತತ್ವ ಸಿದ್ದಾಂತಗಳನ್ನು ಅರ್ಥ ಮಾಡಿಕೊಂಡು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸರಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ದೊಡ್ಡ ಸಂಘಟನೆ, ಜನ ಪ್ರತಿನಿಧಿಗಿಂತ ಹೆಚ್ಚಿನ ಜವಾಬ್ದಾರಿ ಸರಕಾರಿ ನೌಕರರ ಮೇಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ಪಟ್ಟಣದ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಘಟಕ ಇಂಡಿ ಮತ್ತು ಸರಕಾರಿ ನೌಕರರ ಸಹಕಾರಿ ಬ್ಯಾಂಕ ಇವರ ಸಹಯೋಗದಲ್ಲಿ ನಡೆದ ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೂ ಹಾಗೂ ನಿರ್ದೇಶಕರಿಗೂ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಜನರಿಗೆ ಸರಕಾರಿ ನೌಕರರ ಮೇಲೆ ವಿಶ್ವಾಸ ನಂಬಿಕೆ ಇದೆ. ವಿಶ್ವಾಸಾರ್ಹತೆಗೆ ಧಕ್ಕೆ ಬರದಂತೆ ಕೆಲಸ ಮಾಡಿ ಎಂದರು.ಸರಕಾರಿ ನೌಕರರ ಸಂಘದ ಇಂಡಿ ಘಟಕದ ಅಧ್ಯಕ್ಷ ಬಸವರಾಜ ರಾಹೂರ ಮಾತನಾಡಿ, ನೂತನ ಪದಾಧಿಕಾರಿಗಳು ನೌಕರರ ಹಿತ ಕಾಯುವ ಕೆಲಸವನ್ನು ನಿಭಾಯಿಸಬೇಕು, ಒಗ್ಗಟ್ಟು ಇದ್ದಾಗ ನಮ್ಮ ರಕ್ಷಣೆ ನಮ್ಮಿಂದಲೇ ಸಾದ್ಯವಿದೆ. ಸದಸ್ಯರು ಸಂಘಕ್ಕೆ ಶಕ್ತಿ ಯಾಗಬೇಕು ಎಂದರು.ಅದ್ಯಕ್ಷರು ಜೆಒಸಿಸಿ ಬ್ಯಾಂಕ ಆನಂದಗೌಡ ಬಿರಾದಾರ, ಕಾಂತು ಇಂಡಿ, ಅರ್ಜುನ ಲಮಾಣಿ, ಅಧ್ಯಕ್ಷರು ಇಂಡಿ ಶಿಕ್ಷಕರ ಸಂಘದ ಅಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಾಲುಮತಸ್ಥರು ಜಾಗೃತರಾಗಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ ಹೇಳಿದರು.ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದ ಬಳಿಯಿರುವ ರವಿಕಾಂತ ನಾಯ್ಕೋಡಿ ಅವರ ಮನೆಯ ಆವರಣದಲ್ಲಿ ಹಮ್ಮಿಕೊಂಡ ಕ್ರಾಂತಿವೀರ ಬ್ರಿಗೇಡ್ ಕಾರ್ಯಕ್ರಮ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಇಂದು ಸಣ್ಣಪುಟ್ಟ ಸಮುದಾಯಗಳು ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತುಳಿತಕ್ಕೆ ಒಳಗಾಗುತ್ತಿವೆ. ಅಂತಹ ಸಮುದಾಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ನಮ್ಮ ಕ್ರಾಂತಿವೀರ ಬ್ರಿಗೇಡ್ ದ್ವನಿ ಎತ್ತುವ ಕೆಲಸ ಪ್ರಾಮಾಣಿಕವಾಗಿ ನಿರ್ವಹಿಸಲಿದೆ. ಬರುವ ಫೆ.೪ರಂದು ೧೦೦೮ ಶ್ರೀಗಳ ಪಾದ ಪೂಜೆ ಮೂಲಕ ಕೊಲ್ಲಾಪುರ ಶ್ರೀಗಳಿಂದ ವಿಜಯಪುರ ಜಿಲ್ಲೆಯ ಬಸವನಾಡು ಬಸವನ ಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಸಮಾವೇಶ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಕಾರಣ ಸಿಂದಗಿ ಹಾಗೂ ಆಲಮೇಲ ತಾಲೂಕಿನಿಂದ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡು ಸಂಘಟನೆಗೆ ಬಲ ತುಂಬಬೇಕು. ಎಂದು ಮನವಿ ಮಾಡಿದರು.ಗೋ ಎಂದರೆ ತಾಯಿ, ಅವಳನ್ನು ಕಣ್ಣೆದುರೇ ಕೊಲೆ ಮಾಡುವ ಕಾರ್ಯ ನಡೆಯುತ್ತಿದೆ. ಸದ್ಯಕ್ಕೆ ಮಹಾತ್ಮ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆಂಧ್ರಪ್ರದೇಶದಲ್ಲಿ ಜನಿಸಿದ ೧೫ನೇ ಶತಮಾನದ ಕವಿ, ವಚನಕಾರ ವೇಮನ ದುಶ್ಚಟಗಳ ದಾಸನಾಗಿದ್ದರು. ಅತ್ತಿಗೆ ಹೇಮರೆಡ್ಡಿ ಮಲ್ಲಮ್ಮಳಿಂದಾಗಿ ಮಹಾನ್ ಯೋಗಿ ಆದರು ಎಂದು ನಿವೃತ್ತ ಮುಖ್ಯಗುರು ಆರ್.ಎಸ್ ಬಿರಾದಾರ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡ ವೇಮನರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲಿ ಸರ್ವಜ್ಞ, ತಮಿಳುನಾಡಿನಲ್ಲಿ ತಿರುವಳ್ಳುವರ್ ಅವರಂತೆ ಆಂಧ್ರದಲ್ಲಿ ವೇಮನ ಅವರು ಮಹಾನ್ ಯೋಗಿ, ಸಮಾಜ ಚಿಂತಕ ಹಾಗೂ ವಚನಕಾರರು. ದುಶ್ಚಟಗಳ ದಾಸನಾಗಿದ್ದ ಅವರು ವೇಶ್ಯೆಗೆ ಮೂಗುತಿ ಕೊಡುವ ಸಂಬಂಧ ಅತ್ತಿಗೆ ಬಳಿ ಬರುತ್ತಾನೆ. ಆಗ ಆಕೆ ಕರಾರು ಹಾಕುತ್ತಾಳೆ. ವೇಮನ ಮಂಚದ ಮೇಲೆ ಕುಳಿತುಕೊಳ್ಳಬೇಕು. ವೇಶ್ಯೆ ನಗ್ನಳಾಗಿ ಬಂದು ಮಂಚವನ್ನು ಮುರು ಸುತ್ತು ಹಾಕಿ, ಹಿಮ್ಮುಖವಾಗಿ ಬಾಗಿ ಮೂಗುತಿ ಪಡೆಯಬೇಕು. ಅಲ್ಲಿಯ ತನಕ ವೇಮನ ತದೇಕಚಿತ್ತದಿಂದ ಅವಳನ್ನು ನೋಡಬೇಕು ಎನ್ನುತ್ತಾಳೆ. ಇದನ್ನು ಪಾಲಿಸಿದ ವೇಮನ ಜಿಗುಪ್ಸೆಗೊಳ್ಳುತ್ತಾನೆ. ಅಸಹ್ಯಭಾವನೆ ಮೂಡುತ್ತೆ. ಹುಟ್ಟುವಾಗ ಬೆತ್ತಲೆ, ಸತ್ತಮೇಲೆ ಬೆತ್ತಲೆ ಎನ್ನುವುದು ಅರಿವಾಗಿ ಬದುಕಿನುದ್ದಕ್ಕೂ ನಗ್ನನಾಗಿ ವೈರಗ್ಯಮೂರ್ತಿಯಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಫೆ೧೫ ರಿಂದ ೨೦ರ ಒಳಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಿದ್ದೇವೆ. ಎಲ್ಲ ಸಾಹಿತಿಗಳು ಸಾಹಿತ್ಯಾಸಕ್ತರು ಸೂಕ್ತ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ವಿನಂತಿಸಿದರು.ಪಟ್ಟಣದ ಶಾರದಾ ವಿದ್ಯಾಮಂದಿರದಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಅವಧಿ ಕಡಿಮೆ ಇರುವದರಿಂದ ಸಮಿತಿ ರಚನೆ, ಲಾಂಛನ ಸಿದ್ಧಪಡಿಸುವಿಕೆ, ಕವಿಗೋಷ್ಟಿಗಳಿಗೆ ಹೆಸರುಗಳ ಬಿಡುಗಡೆ, ಸಂಪನ್ಮೂಲ ಕ್ರೂಢಿಕರಣ ಹೀಗೆ ಹಲವು ಕಾರ್ಯಗಳು ತುರ್ತಾಗಿ ಆಗಬೇಕಾಗಿರುವದರಿಂದ ಎಲ್ಲ ಹಿರಿಯ ಸಾಹಿತಿಗಳ, ಅನುಭವಿಗಳ ಮಾರ್ಗದರ್ಶನ, ಸಲಹೆಗಳು ಅತೀ ಅವಶ್ಯ. ಪೂರ್ವಭಾವಿ ಸಭೆ ಕರೆದಾಗ ಎಲ್ಲರೂ ತಪ್ಪದೇ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದಲ್ಲಿ ಮಾತ್ರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಾಧ್ಯ. ಬರುವ ದಿನಗಳಲ್ಲಿ ಮತ್ತೊಮ್ಮೆ ಪೂರ್ವಭಾವಿ ಸಭೆ ಕರೆಯಲಾಗುವದು. ತಪ್ಪದೇ ಭಾಗಿಯಾಗುವಂತೆ ಮನವಿ ಮಾಡಿಕೊಂಡರು.ಈ ವೇಳೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಮಾಜಿ ಕಸಾಪ ಅಧ್ಯಕ್ಷ ಎಂ.ಬಿ.ನಾವದಗಿ, ಹಿರಿಯ ಸಾಹಿತಿಗಳಾದ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ದೇಶ ಕಂಡ ಮಹಾನ್ ಚೇತನ, ಮನುಕುಲದ ಒಳಿತಿಗಾಗಿ ಶ್ರಮಿಸಿದ 15 ನೇ ಶತಮಾನದ ವಚನಕಾರ ಶ್ರೀ ‌ ಮಹಾಯೋಗಿ ವೇಮನರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪ ಎಂದು ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಕಾಕಾ ಡಿಗ್ಗಾವಿ ಹೇಳಿದರು.ಪಟ್ಟಣದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಪತ್ತಿನ ಸಹಕಾರಿ ಸಂಘ (ನಿ) ಕಾರ್ಯಾಲಯದಲ್ಲಿ ರವಿವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಶ್ರೀ ಮಹಾಯೋಗಿ ವೇಮನರ 613 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಕನ್ನಡದಲ್ಲಿ ಸರ್ವಜ್ಞ, ತಮಿಳಿನಲ್ಲಿ ತಿರುವಳ್ಳುವರ್, ಅವರಂತೆ ತೆಲುಗಿಗೆ ವೇಮನ ವಚನಕಾರರು ಎಂದವರು, ಜನಸಾಮಾನ್ಯರ ಕವಿಯಾಗಿ, ಕಾವ್ಯದ ಮೂಲಕ ಅಸಮಾನತೆಯನ್ನು ಧಿಕ್ಕರಿಸಿದ ಶ್ರೇಷ್ಠ ಸಂತ ಶ್ರೀ ಮಹಾಯೋಗಿ ವೇಮನರ ಬದುಕು ಬರಹಗಳನ್ನು ಇಂದಿನ ಯುವಜನತೆ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ, ಸಮಾಜದ ಶಕ್ತಿಯಾಗಿ ಬಾಳುವಂತೆ ಕರೆ…

Read More

ಇಂದು ಜನವರಿ 21 ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ನಿಮಿತ್ತ ಈ ವಿಶೇಷ ಲೇಖನ ಲೇಖನ- ಶ್ರೀಮತಿ ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಅದೊಂದು ಸೋಮವಾರದ ದಿನ ಮಂತ್ರಿಮಂಡಲಕ್ಕೆ ರಜೆ. ಅಣ್ಣ ಬಸವಣ್ಣನವರು ತಮ್ಮ ಇಬ್ಬರು ಪತ್ನಿಯರನ್ನು ಕರೆದು ಇಂದು ಹೊಳೆಯ ಆಚೆಗಿನ ಶಿವ ದೇವಾಲಯಕ್ಕೆ ಹೋಗಿ ಬರೋಣ ಎಂದು ಹೇಳಿದರು. ಸಪತ್ರಿಕರಾಗಿ ಶಿವ ದೇವಾಲಯಕ್ಕೆ ಹೊರಟ ಬಸವಣ್ಣನವರು ಹೊಳೆಯ ಈಚೆ ಬದಿಯಲ್ಲಿ ಬಿಜ್ಜಳ ಮಹಾರಾಜನು ಕಟ್ಟಿಸುತ್ತಿದ್ದ ಅರಮನೆಯನ್ನು ವೀಕ್ಷಿಸಿದರು. ನಂತರ ಹೊಳೆಯ ಬಳಿ ಸಾಗಿ ತೆಪ್ಪ ನಡೆಸುವ ಅಂಬಿಗನನ್ನು ಹೊಳೆಯಾಚೆಗಿನ ಶಿವ ದೇವಾಲಯಕ್ಕೆ ಬರುವಿರಾ ಎಂದು ಕೇಳಿದಾಗ ಆತ ಅತ್ಯಂತ ಅದ್ಭುತವಾಗಿ ಈ ಹೊಳೆಯನ್ನು ನಾನು ದಾಟಿಸಬಲ್ಲೆ, ಭವದ ಹೊಳೆಯಲ್ಲ ಎಂದು ಹೇಳಿದನು. ಆತನ ಮಾತಿನಿಂದ ಚಕಿತರಾದ ಬಸವಣ್ಣನವರು ಆತನ ನಿರ್ಭಿಡೆಯ ವ್ಯಕ್ತಿತ್ವ, ಬಿರುಸಾದ ಮಾತುಗಳು ಒಂದು ಕ್ಷಣ ಅವನನ್ನೇ ದಿಟ್ಟಿಸಿ ನೋಡುವಂತೆ ಮಾಡಿದವು. ಮುಂದೆ ಲೋಕಾಭಿರಾಮದ ಮಾತುಗಳನ್ನಾಡುತ್ತಾ ಆಚೆ ದಡ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಅನ್ನೋ ಭಾವನೆ ಕಾಂಗ್ರೆಸ್ ನಾಯಕರಲ್ಲಿ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.ತಾಲೂಕಿನ ಕುಂಟೋಜಿ ಗ್ರಾಮಕ್ಕೆ ಆಗಮಿಸಿದ ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಸಿದ್ಧರಾಮಯ್ಯನವರೇ ೫ ವರ್ಷಗಳ ಕಾಲ ಮುಖ್ಯ ಮಂತ್ರಿ ಅಂತಾ ಡಿಕೆಶಿ, ಸುರೇಶ ಮತ್ತು ಜಾರಕಿಹೊಳಿ ಕೂಡ ಹೇಳ್ತಾರೆ. ಪುನಃ ಅವರವರೇ ಮೀಟಿಂಗ್ ಮಾಡ್ತಾರೆ. ಒಂದೆಡೆ ಒಕ್ಕಲಿಗರ ಮೀಟಿಂಗ್, ಇನ್ನೊಂದೆಡೆ ಹಿಂದುಳಿದವರ ದಲಿತರ ಮೀಟಿಂಗ್ ಹಿಗೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಜಾತಿಯ ವಿಷಬೀಜ ಬಿತ್ತುತ್ತಿದೆ ಎಂದರು.ಈ ವೇಳೆ ಮಲಕೇಂದ್ರಗೌಡ ಪಾಟೀಲ, ಕೆಂಚಪ್ಪಣ್ಣ ಬಿರಾದಾರ, ಮುತ್ತಣ್ಣ ಹುಗ್ಗಿ, ಸಂಗಮ್ಮ ದೇವರಳ್ಳಿ, ಶಿಲ್ಪಾ ಕುದರಗೊಂಡ ಸೇರಿದಂತೆ ಹಲವರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ದೇಶ ಸ್ವತಂತ್ರವಾದ ನಂತರ ಗೋ ಹತ್ಯೆ ನಿಷೇಧ ನಮ್ಮ ಮೊದಲನೇ ಕಾನೂನು ಆಗಿರುತ್ತೆ ಅಂತ ಹೇಳಿದ್ರು. ಸಧ್ಯ ಅವರೇನಾದ್ರು ಬದುಕಿದ್ರೆ ಗೋವಿನ ಬಗ್ಗೆ ಈ ಕಾಂಗ್ರೇಸ್ ನವರು ನಡೆಸಿಕೊಳ್ಳೋ ರೂಪ ನೋಡಿದ್ರೆ ನೇಣು ಹಾಕಿಕೊಂಡು ಸತ್ತೇ ಹೋಗತಿದ್ರು ಎಂದು ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಕುಟುಕಿದರು.ತಾಲೂಕಿನ ಕುಂಟೋಜಿ ಗ್ರಾಮ ವ್ಯಾಪ್ತಿಯಲ್ಲಿ ನಡೆದ ಕ್ರಾಂತಿವೀರ ಬ್ರಿಗೇಡ್ ಕರ್ನಾಟಕದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಗೋವನ್ನ ಪ್ರತಿದಿನ ಕೊಲ್ಲಲಾಗುತ್ತಿದೆ. ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಮಂಜುನಾಥ ಸ್ವಾಮಿಯ ದರ್ಶನಕ್ಕೆಂದು ತೆರಳುವ ಭಕ್ತರಿಗೆ ಹಸುವಿನ ತಲೆ, ಚರ್ಮದ ದರ್ಶನವಾಗುತ್ತಿದೆ. ಇದರ ಹಿಂದೆ ಈ ದೇಶದ ಹಿಂದೂಗಳಿಗೆ ನೋವಾಗಲಿ ಎನ್ನುವ ಉದ್ದೇಶ ಇದೆ. ಸರ್ಕಾರ ಇದಕ್ಕೆ ಯಾರೊಬ್ಬ ಆರೋಪಿಯನ್ನು ಬಂಧಿಸಿಲ್ಲ. ಹಿಂದೆ ನಮ್ಮ ಸರ್ಕಾರದಲ್ಲಿ ಎಲ್ಲ ಜಿಲ್ಲೆಗಳಿಗೆ ಗೋ ಶಾಲೆ ತೆರೆಯಲು ಬಜೆಟ್ ನಲ್ಲಿ ದುಡ್ಡಿಡಲಾಗಿತ್ತು. ೧೪ ಜಿಲ್ಲೆಗಳಲ್ಲಿ ಗೋ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜ೨೧ ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗೋಣ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಕರೆ ನೀಡಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಗಾಂಧೀಜಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ನೂರು ವರ್ಷ ತುಂಬಿದ ಹಿನ್ನೆಲೆ, ಅವರ ನೆನಪುಗಳನ್ನು ಜನತೆಗೆ ಮುಟ್ಟಿಸುವ ಮೂಲಕ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಲ್ಲಿ ರಾಜಕಾರಣದಲ್ಲಿ ಬದಲಾವಣೆಯನ್ನು ತರಲು ಸಾಧ್ಯ ಎನ್ನುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಅಂದಾಜು ಒಂದೂವರೆ ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಅನ್ನೋದು ಸಂಕಲ್ಪವಾಗಿದೆ. ವಿಶೇಶವಾಗಿ ಪಂಚಾಯತ ಸದಸ್ಯರುಗಳು, ಮುಖಂಡರುಗಳು, ಕೇಂದ್ರ ಕಾರ್ಯಕರ್ತರು ಮತ್ತು ಗಣ್ಯ ಮಾನ್ಯರು ಕಡ್ಡಾಯವಾಗಿ ಭಾಗುವಂತೆ ಕಟ್ಟಪ್ಪಣೆ ನೀಡಲಾಗಿದೆ ಎಂದರು.ಅಂದು ಬೆಳಿಗ್ಗೆ ೧೧ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುವದು. ಯಾವುದೇ ವಿಳಂಬವಾಗುದಿಲ್ಲ ಎಂದು ತಿಳಿಸಲಾಗಿದೆ. ಹೊರಡುವ ದಿನ ವಾಹನಗಳು ತಯಾರಿಯಲ್ಲಿರುತ್ತವೆ. ಮಹಿಳಾ ಕಾರ್ಯಕರ್ತರಿಗೆ…

Read More