Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩೭ ಪರೀಕ್ಷಾ ಕೇಂದ್ರಗಳಲ್ಲಿ ಮಾ.೧೮ ರಿಂದ ಏಪ್ರಿಲ್ ೦೨ರವರೆಗೆ ಎಸ್.ಎಸ್.ಎಲ್.ಸಿ.ಪರೀಕ್ಷೆ-೧ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರ ಪ್ರಕಾರ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶದಲ್ಲಿ ಬೆಳಿಗ್ಗೆ ೮:೩೦ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರದ ೨೦೦ ಮೀಟರ್ ಪ್ರದೇಶದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಮುಕ್ತಾಯವಾಗುವರೆಗೆ ತೆರೆಯದಂತೆ ಆದೇಶಿಸಲಾಗಿದೆ.

Read More

ಪ.ಜಾ-ಪ.ಪಂಗಡ ತಾಲೂಕಾ ಮಟ್ಟದ ನೌಕರರ ಸಮಾವೇಶದಲ್ಲಿ ಶಾಸಕ ಯಶವಂತರಾಯಗೌಡ ಅಭಿಮತ ಉದಯರಶ್ಮಿ ದಿನಪತ್ರಿಕೆ ಇಂಡಿ: ನೌಕರರು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಪ.ಜಾ , ಪ.ಪಂಗಡ ನೌಕರರ ಬಡ್ತಿಯಲ್ಲಿ ಕಾಂಗ್ರೆಸ್ ಸರಕಾರ ಹೆಚ್ಚು ಸಹಾಯ ಮಾಡಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ನಗರದ ಗುರುಭವನದಲ್ಲಿ ರಾಜ್ಯ ಪ.ಜಾ, ಪ ಪಂಗಡ ಸಮನ್ವಯ ಸಮಿತಿ ಇಂಡಿ ತಾಲೂಕಾ ಶಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ನೌಕರರ ಸಮಾವೇಶಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಮತ್ತು ನಿವೃತ್ತ ನೌಕರರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.ಮೇಲು ಕೀಳು ಎಂಬ ಭಾವನೆ ಬದಿಗಿಟ್ಟು ಸೈದ್ದಾಂತುಕ ವೈಚಾರಿಕ ಚಿಂತನೆ ಇಟ್ಟುಕೊಂಡು ಬದುಕು ಸಾಗಿಸಬೇಕು. ಬುದ್ದ ಬಸವ ಅಂಬೇಡಕರ ತತ್ವಗಳ ಆಶಯದಂತೆ ಆಡಳಿತ ನಡೆಸಿ ಸರ್ವರನ್ನು ಪ್ರೀತಿಸುವ ಗುಣ ಹೊಂದಬೇಕು ಎಂದರು.ತಾಲೂಕಾ ಅಧ್ಯಕ್ಷ ಬಿ.ಎಂ.ವಠಾರ, ರಾಜ್ಯಾಧ್ಯಕ್ಷ ಡಿ.ಶಿವಶಂಕರ, ಉಪಾಧ್ಯಕ್ಷ ಆರ್ ಮೋಹನ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ವಿಜಯಕುಮಾರ, ಎಂ.ಬಿ.ಶಿವಕುಮಾರ, ಜಿಲ್ಲಾದ್ಯಕ್ಷ ಬಿ.ಎಚ್.ನಾಡಗೀರಿ ಮಾತನಾಡಿದರು.ಎಸ್.ಆರ್.ನಡಗಡ್ಡಿ, ತಾಲೂಕಾ ನೌಕರರ ಸಂಘದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಮಾರ್ಚ ೧೮ ರಿಂದ ಏಪ್ರಿಲ್ ೨ ರ ವರೆಗೆ ನಡೆಯುವ ೨೦೨೫ -೨೬ ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಯಿದಾ ಮುಜಾವರ ಹೇಳಿದರು.ನಗರದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ತಾಲೂಕಿನಲ್ಲಿ ಕನ್ನಡ ಇಂಗ್ಲೀಷ್ ಮತ್ತು ಉರ್ದು ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಒಟ್ಟು ೪೭೦೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಅದರಲ್ಲಿ ೨೪೮೧ ವಿದ್ಯಾರ್ಥಿಗಳು ಮತ್ತು ೨೨೨೫ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ.ತಾಲೂಕಿನಲ್ಲಿ ಒಟ್ಟು ೧೯ ಪರೀಕ್ಷಾ ಕೇಂದ್ರಗಳಿದ್ದು ಅದರಲ್ಲಿ ಇಂಡಿ ನಗರದಲ್ಲಿ ಒಂಬತ್ತು ಮತ್ತು ಗ್ರಾಮೀಣ ಪ್ರದೇಶದಲ್ಲಿ ೧೦ ಕೇಂದ್ರಗಳಿವೆ ಎಂದರು.ಪರೀಕ್ಷೆ ಸೂಸುತ್ರವಾಗಿ ನಡೆಯಲು ಜಾಗೃತದಳಗಳನ್ನು ರಚಿಸಲಾಗಿದೆ. ಅದರಲ್ಲಿ ಮೂರು ಜಾಗೃತದಳ, ತಹಸೀಲ್ದಾರ ನೇತೃತ್ವದಲ್ಲಿ, ಇಓ ನೇತ್ರತ್ವದಲ್ಲಿ ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಮೂರು ಜಾಗೃತದಳ ಇವೆ. ಅದಲ್ಲದೆ ಪ್ರತಿ ಕೇಂದ್ರಕ್ಕೆ ಒಬ್ಬರು ಸ್ಥಾನಿಕ ಜಾಗೃತದಳವಿದ್ದು ಅವರು ಪ್ರತಿದಿನ ಬೇರೆ ಬೇರೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವರು.ಅದಲ್ಲದೆ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ.ಕ್ಯಾಮೇರಾ…

Read More

ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ರ ಅಭಿಮತ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ವನ್ಯಜೀವಿ ಮತ್ತು ಮಾನವ ಸಂಘರ್ಷ ಹೊಸದೇನು ಅಲ್ಲ. ಈ ಹಿಂದಿನಿಂದಲೂ ಇದೆ. ಆದರೆ ತಂತ್ರಜ್ಞಾನ ಮುಂದುವರೆದಿರುವ ಜೊತೆಗೆ ಮಾಧ್ಯಮಗಳು ಜಾಸ್ತಿಯಾಗಿ ಹೆಚ್ಚು ಹೆಚ್ಚು ಪ್ರಸಾರ ಮಾಡುತ್ತಿರುವುದರಿಂದ ಸಮಸ್ಯೆ ದೊಡ್ಡದಾಗಿ ಕಾಣಿಸುತ್ತೆ. ಯಾವ ಸಮಸ್ಯೆಗಳು ಕೂಡ ದೊಡ್ಡದಲ್ಲ, ಅರಣ್ಯ ಇಲಾಖೆ ಜೊತೆಗೆ ಸ್ಥಳೀಯರ ಸಹಕಾರವಿದ್ದರೆ, ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬಹುದು ಎಂದು ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ರ ಹೇಳಿದರು.ತಾಲೂಕಿನ ಕೆ. ಎಡತೊರೆ ಗ್ರಾಮದಲ್ಲಿ ಅರಣ್ಯ ಇಲಾಖೆ, ಮೈಸೂರು ಪ್ರಾದೇಶಿಕ ವಿಭಾಗ, ಹೆಚ್ ಡಿ ಕೋಟೆ ಉಪ ವಿಭಾಗ, ಹಾರ್ಟ್ ಸಂಸ್ಥೆ ಮೈಸೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಚಿತ ಜನ-ಜಾನುವಾರುಗಳ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮಗೆ ಸಂಬಳ ಬರಬಹುದು. ಆದರೆ ಸಂಬಳಕಷ್ಟೇ ಕರ್ತ್ಯವ್ಯ ನಿರ್ವಹಿಸುವುದಿಲ್ಲ. ಅರಣ್ಯ ಸಂರಕ್ಷಣೆ ಜೊತೆಗೆ ಮಾನವ ರಕ್ಷಣೆ ಕೂಡ ನಮ್ಮ ಆದ್ಯ ಕರ್ತವ್ಯವಾಗಿದೆ.…

Read More

ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶರ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿಯುತ್ತವೆ. ಹಾಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಹೇಳಿದರು.ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಕಕ್ಷಿದಾರರು ತಮ್ಮ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಬಹಳ ವರ್ಷ ನ್ಯಾಯಾಲಯಕ್ಕೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿ ನಡೆದಿದ್ದು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತಲ್ಲಿದ್ದ ಹಲವಾರು ಪ್ರಕರಣಗಳ ಪೈಕಿ ೧೩೬೨೪ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದರು. ಈ ಪೈಕಿ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು…

Read More

ವಿಜಯಪುರ ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು ತೆಗೆಯುವ ಕಾಮಗಾರಿಗಳನ್ನು ಪರಿಶೀಲಿಸಿದರು.ಬಳಿಕ ಮಾತನಾಡಿದ ಅವರು, ಹೂಳು ತೆಗೆಯುವ ಕಾಮಗಾರಿಗಳು ಪ್ರಗತಿ ಹಂತದಲ್ಲಿರುವುದರಿಂದ ಅವುಗಳನ್ನು ಆದ್ಯತೆಯ ಮೇರೆಗೆ ನಿಯಮಾನುಸಾರ ಪೂರ್ಣಗೊಳಿಸಬೇಕು. ಹಿಟ್ಟಿನಹಳ್ಳಿ ಗ್ರಾಮದ ಸೇತುವೆ ಕಾಮಗಾರಿ ಸಮೀಕ್ಷೆಯನ್ನು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಂಜಯ ಕೋಟೆನ್ನವರ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಕೇಂದ್ರ ಚುನಾವಣಾ ಆಯೋಗವು ಬಾಗಲಕೋಟೆ ವಿಧಾನ ಸಭಾ ಸಾಮಾನ್ಯ ಕ್ಷೇತ್ರದ ಉಪ ಚುನಾವಣೆಯನ್ನು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿರುವುದರಿಂದ ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದೇವೆ ಎಂದು ನಗರಸಭೆ ಪೌರಾಯುಕ್ತ ಜ್ಯೋತಿಗಿರೀಶ ಹೇಳಿದರು.ನಗರ ವ್ಯಾಪ್ತಿಯಲ್ಲಿ ರಾಜಕೀಯ ಮುಖಂಡರು ಹಾಗೂ ಇತರ ಗಣ್ಯರ ಹೆಸರಿನಲ್ಲಿ ಅಳವಡಿಸಲಾದ ಬ್ಯಾನರ್, ಪ್ಲೆಕ್ಸ್‌ ಮತ್ತು ಬಂಟಿಂಗ್ಸ್ ಇದ್ದರೆ ಸಂಬಂಧಿಸಿದ ಪಕ್ಷದವರು ತಕ್ಷಣವೇ ತೆರವುಗೊಳಿಸಿಕೊಳ್ಳಬೇಕು ಎಂದು ಸೂಚಿಸಿದರು. ಈಗಾಗಲೇ ನಮ್ಮ ಸಿಬ್ಬಂದಿ ನಗರದಲ್ಲಿರುವ ಬ್ಯಾನ‌ರ್ ಹಾಗೂ ಪ್ಲೆಕ್ಸ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಉಪಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ರಾಜಕೀಯ ವ್ಯಕ್ತಿಗಳು ಅಥವಾ ಗಣ್ಯರ ಹೆಸರಿನಲ್ಲಿ ಪ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.ಶಾಲಾ ಕಾರ್ಯಕ್ರಮಗಳು ಅಥವಾ ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವ ಸಂದರ್ಭದಲ್ಲಿ ಗಣ್ಯರ ಫೋಟೋಗಳನ್ನು ಹೊರತುಪಡಿಸಿ, ನಗರ ಸಭೆಯ ಅನುಮತಿ ಪಡೆದು ಮಾತ್ರ ಬ್ಯಾನ‌ರ್ ಅಳವಡಿಸಬೇಕು. ಯಾವುದೇ ಕಾರ್ಯಕ್ರಮ ನಡೆಸುವ ಮೊದಲು ನಗರ ಸಭೆಯಿಂದ…

Read More

ಗ್ರಾಹಕರ ಪರದಾಟ, ಟ್ರಾಯ್ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದಲ್ಲಿ ಕಳೆದ ಎರಡು ತಿಂಗಳಿನಿಂದ ಜಿಯೋ ಮೊಬೈಲ್ ನೆಟ್‌ವರ್ಕ್ ಸರಿಯಾಗಿ ಲಭ್ಯವಾಗದೆ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕರೆ ಸಂಪರ್ಕವಾಗದೇ ಇರುವದು, ಸಂಪೂರ್ಣವಾಗಿ ನೆಟ್‌ವರ್ಕ್ ಕಾಣಿಸದಿರುವುದರಿಂದ ಹಾಗೂ ಕೆಲವೊಮ್ಮೆ ಇಂಟರ್‌ನೆಟ್ ಸೇವೆ ಬಹಳ ನಿಧಾನವಾಗಿರುವುದು ಜಿಯೋ ಗ್ರಾಹಕರು ದಿನನಿತ್ಯ ಪರದಾಡುವಂತಾಗಿದೆ.ಪಟ್ಟಣದ ಹಲವು ಪ್ರದೇಶಗಳಲ್ಲಿ ಮೊಬೈಲ್ ಸಿಗ್ನಲ್ ಬಹುತೇಕ ಸಮಯದಲ್ಲಿ ಇಲ್ಲದಿರುವುದರಿಂದ ಆನ್‌ಲೈನ್ ವ್ಯವಹಾರ, ಬ್ಯಾಂಕಿಂಗ್ ಸೇವೆಗಳು, ವಿದ್ಯಾರ್ಥಿಗಳ ಆನ್‌ಲೈನ್ ಅಧ್ಯಯನ, ವ್ಯಾಪಾರ ವಹಿವಾಟು ಹಾಗೂ ದೈನಂದಿನ ಸಂಪರ್ಕ ವ್ಯವಸ್ಥೆಗಳಿಗೆ ದೊಡ್ಡ ಮಟ್ಟದಲ್ಲಿ ಅಡಚಣೆ ಉಂಟಾಗಿದೆ ಎಂದು ಗ್ರಾಹಕರು ದೂರಿದ್ದಾರೆ. ವಿಶೇಷವಾಗಿ ವ್ಯಾಪಾರಸ್ಥರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಈ ಸಮಸ್ಯೆಯ ಬಗ್ಗೆ ಜಿಯೋ ಕಂಪನಿ ಅಧಿಕಾರಿಗಳಿಗೆ ಹಲವಾರು ಬಾರಿ ಮಾಹಿತಿ ನೀಡಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರೆ ಮಾಡಿದಾಗಲೂ ಅಥವಾ ದೂರು ನೀಡಿದಾಗಲೂ ಸ್ಪಷ್ಟ ಉತ್ತರ ಸಿಗುತ್ತಿಲ್ಲ. ಸಾವಿರಾರು ರೂಪಾಯಿ…

Read More

ಇರಾನ್ ಮೇಲಿನ ಯುದ್ಧದ ಪರಿಣಾಮ | ತಾಳೆ, ಸೂರ್ಯಕಾಂತಿ ಎಣ್ಣೆ 15 ದಿನಕ್ಕಾಗುವಷ್ಟು ದಾಸ್ತಾನು ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿ ಜಮಖಂಡಿ: ಯುದ್ಧದ ಪರಿಣಾಮ, ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ ಯುದ್ದದಿಂದಾಗಿ ಲಭ್ಯತೆ ಇಲ್ಲ ಎನ್ನಲಾಗ್ತಿದೆ. ಈಗ ಕೇವಲ 15 ದಿನದ ದಾಸ್ತಾನು ಇದೆ ಎನ್ನುತ್ತಿರುವ ವ್ಯಾಪಾರಿಗಳು, ಇನ್ನೊಂದೆಡೆ ಭಾರಿ ಬೆಲೆ ಏರಿಕೆ ಮಾಡಿದ್ದಾರೆ.ವಿದೇಶಗಳಿಂದ ಕಚ್ಚಾ ತೈಲವಾಗಿ ಆಮದು ಮಾಡಿಕೊಂಡು, ಇಲ್ಲಿ ಶುದ್ಧೀಕರಿಸಿ ಹಾಗೂ ಪ್ಯಾಕಿಂಗ್‌ ಮಾಡಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ. ಸನ್‌ಫ್ಲವರ್‌ ಎಣ್ಣೆಯ ಕಚ್ಚಾ ತೈಲವನ್ನು ಉಕ್ರೇನ್‌ ಹಾಗೂ ಕೆಲವು ಯೂರೋಪಿನ ರಾಷ್ಟ್ರಗಳಿಂದ ತರಲಾಗುತ್ತದೆಸನ್‌ಫ್ಲವರ್‌ ಎಣ್ಣೆ ಲೀಟರ್‌ಗೆ 165 ರೂ. ಇದ್ದದ್ದು ಈಗ 178 ರೂ.ಗೆ ಏರಿಕೆಯಾಗಿದೆ.ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್‌-ಇಸ್ರೇಲ್‌ ಯುದ್ಧದಿಂದಾಗಿ ದೇಸಿ ಮಾರುಕಟ್ಟೆ ಮೇಲೂ ಪರಿಣಾಮ ಬೀಳಲು ಆರಂಭವಾಗಿದೆ. ಅದರಲ್ಲೂ ಅಡುಗೆ ಎಣ್ಣೆ ಬೆಲೆ ದಿನೇ ದಿನೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕೊರತೆ ಉಂಟಾಗಿ ಕೃತಕ ಅಭಾವ ಸೃಷ್ಟಿಯಾಗುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಣ್ಣನವರ ಜನ್ಮಭೂಮಿ, ಸೂಫಿ ಸಂತರು ನಡೆದಾಡಿದ ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದಲ್ಲಿ ಕೆ. ಸಿ. ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಪವಿತ್ರ ರಂಜಾನ್ ಅಂಗವಾಗಿ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬಸವಾದಿ ಶರಣರು ಸಮಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದಿಲ್ ಶಾಹಿ ಬಾದಷರು ಅಭಿವೃದ್ಧಿ ಮಾಡಿದ್ದಾರೆ. ಸೌಹಾರ್ಧತೆ ಮತ್ತು ಭಾವೈಕ್ಯತೆಗೆ ಜಿಲ್ಲೆ ಹೆಸರಾಗಿದೆ. ಈ ಬಾರಿ ಯುಗಾದಿ ಮತ್ತು ರಂಜಾನ್ ಜೊತೆಗೆ ಬಂದಿವೆ. ಎಲ್ಲರಿಗೂ‌ ದೇವರು ಒಳಿತನ್ನು ಮಾಡಲಿ ಎಂದು ಸಚಿವರು ಹೇಳಿದರು.ಧರ್ಮಗುರು ತನ್ವೀರ್ ಪೀರಾ ಹಾಶ್ಮಿ ಮಾತನಾಡಿ, ಕರ್ನಾಟಕ ಮತ್ತು ವಿಜಯಪುರ ಜಿಲ್ಲೆ ಶರಣರು, ಸೂಫಿ‌ ಸಂತರ ನಾಡಾಗಿವೆ. ಯುಗಾದಿ ಮತ್ತು ರಂಜಾನ್ ಒಟ್ಟಿಗೆ ಬಂದಿರುವುದರಿಂದ ಎಲ್ಲರೂ ಸೇರಿ ಆಚರಿಸೋಣ ಎಂದು ಹೇಳಿದರು.ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಮಾತನಾಡಿ, ಪ್ರತಿವರ್ಷ ಕೆ. ಸಿ. ಮಾರುಕಟ್ಟೆಯಲ್ಲಿ ಇಫ್ತಿಯಾರ ಕೂಟ…

Read More