Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ವಲಯ ಹಾಗೂ ಗ್ರಾಮೀಣ ವಲಯ ವ್ಯಾಪ್ತಿಯಲ್ಲಿ ಬರುವ ಮೂರು ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾತಿಗಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಗರ ವಲಯದ ಅಫಜಲಪುರ ಟಕ್ಕೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.49, ಕೆ.ಎಚ್.ಬಿ ಕಾಲೊನಿಯ ಶಾಸಕರ ಹಿರಿಯ ಪ್ರಾಥಮಿಕ ಶಾಲೆ ನಂ.24 ಹಾಗೂ ಗ್ರಾಮೀಣ ವಲಯದಲ್ಲಿ ಬರುವ ತೊರವಿಯ ಶಾಂತಿ ನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗಳು ವಿಶಾಲವಾದ ಜಾಗವನ್ನು ಹೊಂದಿ, ಮೂಲಭೂತ ಸೌಕರ್ಯಗಳ ಜೊತೆಗೆ ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಸದರಿ ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ಇಂದು (ಡಿಸೆಂಬರ ೨೪) “ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ”ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ-ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಸೇಥ್ ಗೋಡೀನ್ ಅವರು “ಉತ್ಪಾದಕರು ಗ್ರಾಹಕರನ್ನು ಹುಡುಕಬೇಡಿ. ಗ್ರಾಹಕರಿಗೆ ಏನು ಬೇಕಾಗಿದೆ ಆ ವಸ್ತುವನ್ನು ಅನ್ವೇಷಿಸಿ, ಅವಿಷ್ಕರಿಸಿ ಮತ್ತು ಉತ್ಪಾದಿಸಿ ಅಥವಾ ಸೇವೆ ನೀಡಬೇಕು”ಎಂದು ಹೇಳಿದ್ದಾರೆ. ಇಂದಿನ ಪರಿಪೂರ್ಣ ಪೈಪೋಟಿ ಮಾರುಕಟ್ಟೆಯಲ್ಲಿ ಗ್ರಾಹಕನೇ ಮಹಾಪ್ರಭು. ಉತ್ಪಾದಕರು ಮತ್ತು ಮಾರಾಟಗಾರರು ಗ್ರಾಹಕನ ವರ್ತನೆಯಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅ ಮೂಲಕ ಸರಕು-ಸೇವೆಗಳನ್ನು ಮಾರಾಟ ಮಾಡುವ ತಂತ್ರಗಾರಿಕೆಯಲ್ಲಿ ತೊಡಗಬೇಕು. ಕಂಪನಿಗಳ ಬ್ರ್ಯಾಂಡ್ ಎಂದರೆ ಗ್ರಾಹಕನ ವಿಶ್ವಾಸ-ನಂಬಿಕೆ ಮತ್ತು ವಿಧೇಯತೆಯನ್ನು ಪಡೆಯುವ ಮೂಲಕ ಗ್ರಾಹಕನ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಮತ್ತು ಪರಿಣಾಮಕಾರಿಯಾದ ಮಾರಾಟ ಮಾಡುವ ತಂತ್ರಗಾರಿಕೆಯೇ ಬಹು ಮುಖ್ಯವಾಗಿರುತ್ತದೆ. ಇಂದಿನ ಪಾಶ್ಚಾತ್ಯ ಸಂಸ್ಕೃತಿ ಪ್ರಭಾವದಿಂದಾಗಿ ನಮ್ಮ ದೇಶೀಯ ಗ್ರಾಹಕರ ಬಯಕೆ, ಬೇಕು-ಬೇಡಗಳು, ಆಸೆ-ಆಕಾಂಕ್ಷೆಗಳು, ಅಪೇಕ್ಷೆ-ಕೊಂಡುಕೊಳ್ಳುವಿಕೆ ಮತ್ತು ಬಣ್ಣ, ರಚನೆ, ವಿನ್ಯಾಸಗಳೆಲ್ಲವೂ ಕ್ಷಿಪ್ರವಾಗಿ ಬದಲಾವಣೆಯ ರೂಪವನ್ನು ಪಡೆದುಕೊಳ್ಳುತ್ತಿವೆ. ಇದರಿಂದ ಮಾರುಕಟ್ಟೆಯ ಚಿತ್ರಣವೇ ಸಮಗ್ರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಿ ಎಂದು ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕುಂಬಾರ ಕರೆ ನೀಡಿದರು.ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪೋಲಿಯೋ ಹನಿ ಮಗುವಿನ ಬೆಳವಣಿಗೆಗೆ ಬಹಳ ಮಹತ್ವ. ಎಲ್ಲ ಪಾಲಕರು ತಮ್ಮ ಕೆಲಸಗಳನ್ನು ಬದಿಗೊತ್ತಿ ಮಕ್ಕಳ ಆರೋಗ್ಯದ ಹಾಗೂ ದೇಹದ ಸದೃಢತೆಗಾಗಿ ಪಲ್ಸ್ ಪೊಲೀಯೊ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದರು.ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ಈಳಗೇರ, ಬಸಮ್ಮ ಸೋಮನಾಳ, ಸಾವಿತ್ರಿ, ಅಶಾ ಕಾರ್ಯಕರ್ತೆಯರಾದ ನೀಲಮ್ಮ ಪಾಟೀಲ, ಸುಮಂಗಲಾ ಹಿರೇಮಠ, ಶಿವಲೀಲಾ ಪತ್ತಾರ, ಅಂಗನವಾಡಿ ಸಹಾಯಕಿರಾದ ಗೌರಮ್ಮ ನಾಲತವಾಡ, ಶಾಂಭವಿ ಪಾಟೀಲ, ಕವಿತಾ ಸೋಮನಾಳ ಸೇರಿದಂತೆ ಪಾಲಕರು ಮಕ್ಕಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಕ್ಕಳ ಸರ್ವಾಂಗೀಣ ಅಭವೃದ್ಧಿಗೆ ಪಠ್ಯಕ್ರಮದ ಜೊತೆ ಜೊತೆಗೆ ಅನುಭವಾಧಾರಿತ ಶಿಕ್ಷಣವೂ ಅತ್ಯಂತ ಮುಖ್ಯ ಎಂದು ಸಂಸ್ಥಾಪಕ ಎನ್.ಎಸ್.ಹಿರೇಮಠ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್ ನಲ್ಲಿರುವ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಪ್ರವಾಸದ ಬಳಿಕ ಅವರು ಮಾತನಾಡಿದರು.ಇಂತಹ ಟ್ರಿಪ್ ಗಳ ಮೂಲಕ ಮಕ್ಕಳು ಪ್ರಕೃತಿ, ಸಮಾಜ ಹಾಗೂ ಜೀವನದ ವಾಸ್ತವಿಕತೆಯ ಬಗ್ಗೆ ಅನುಭವ ಪಡೆಯುತ್ತಾರೆ. ಪ್ರವಾಸಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸಹಕಾರ ಮನೋಭಾವ ಹಾಗೂ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತವೆ. ಪಾಲಕರೂ ರಜಾ ದಿನಗಳಲ್ಲಿ ನಿಮ್ಮ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡಿಸುವಂತೆ ಸಲಹೆ ನೀಡಿದರು.ನಸುಕಿನ ಜಾವ ಶಾಲಾ ಆವರಣದಿಂದಲೇ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ಸಾಹದಿಂದ ಹೊರಟ ಮಕ್ಕಳು ದಿನಪೂರ್ತಿ ಪ್ರವಾಸವನ್ನು ಆನಂದಿಸಿದರು. ಐತಿಹಾಸಿಕ ಸ್ಥಳಗಳಾದ ಐಹೊಳ್ಳಿ, ಪಟ್ಟದಕಲ್ಲು, ಬಾದಾಮಿ, ಬನಶಂಕರಿ, ಶಿವಯೋಗ ಮಂದಿರ, ಮಹಾಕೂಟ, ಸಿದ್ಧನಕೊಳ್ಳ ಪ್ರಕೃತಿ ಸೌಂದರ್ಯ ಹಾಗೂ ಸಾಂಸ್ಕೃತಿಕ ಮಹತ್ವದ ಸ್ಥಳಗಳ ಬಗ್ಗೆ ಶಾಲೆಯ ಬೋಧಕ ಸಿಬ್ಬಂದಿಗಳು ಮಾಹಿತಿ ನೀಡಿದರು.ಪ್ರವಾಸದ ಸಂದರ್ಭದಲ್ಲೇ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾತಿಹಾಳ ಗ್ರಾಮದಿಂದ ರಬಿನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆ ಮಾರ್ಗವನ್ನು ಸರಿಪಡಿಸಲು ಆಗ್ರಹಿಸಿ ಸಾತಿಹಾಳ ಗ್ರಾಮಸ್ಥರು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ತೆರಳಿದ ಸಾತಿಹಾಳ ಗ್ರಾಮಸ್ಥರು ರಸ್ತೆ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ರವಿ ಬೂದಗೂಳಿ ಮಾತನಾಡಿ, ನಮ್ಮ ಗ್ರಾಮದಿಂದ ರಬಿನಾಳಕ್ಕೆ ಸಂಪರ್ಕಿಸುವ ರಸ್ತೆ ಇದು ಗ್ರಾಮದ ಜಮೀನುಗಳಿಗೂ ಸಹ ತೆರಳುವ ರಸ್ತೆಯಾಗಿದೆ. ಈ ರಸ್ತೆ ಮಳೆಯಿಂದ ಸಂಪೂರ್ಣ ಹಾಳಾಗಿದ್ದು ಇದರ ಸುಧಾರಣೆಗಾಗಿ ರೈತರೆಲ್ಲರೂ ಸೇರಿ ರಿಪೇರಿಯ ಕ್ರಮವಹಿಸಿದ್ದು ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಜಮೀನು ಹೊಂದಿರುವ ಸ.ನಂ ೨೩೬ ಹಾಗೂ ಸ.ನಂ೩೫೨ ರ ರೈತರು ಆಕ್ಷೇಪಿಸಿ ರಸ್ತೆ ಸುಧಾರಣೆಗೆ ಅವಕಾಶ ನೀಡುತ್ತಿಲ್ಲ. ಇದರಿಂದ ರೈತರು ತಾವು ಬೆಳೆದ ಬೆಳೆ ಕಠಾವು ಮಾಡದೇ ಇದ್ದು ಬೆಳೆ ಹಾಳಾಗುವ ಹಂತದಲ್ಲಿವೆ. ಆದ್ದರಿಂದ ತಹಶೀಲ್ದಾರ ತಾವೇ ಮಧ್ಯೆ ಪ್ರವೇಶಿಸಿ ನಮ್ಮ ಜಮೀನುಗಳಿಗೆ ತೆರಳುವ ರಸ್ತೆ ದೊರಕಿಸಿ ಬೆಳೆ ಬೆಳೆಯಲು ಅವಕಾಶ ಮಾಡಿಕೊಡಲು…

Read More

ದೇವರಹಿಪ್ಪರಗಿಯಲ್ಲಿ ಜರುಗಿದ ಕಿತ್ತೂರ ಚೆನ್ನಮ್ಮ ಜಯಂತ್ಯುತ್ಸವ & ಹಿಂದೂಗಳ ಸಂಸ್ಕೃತಿ ಸಮಾವೇಶದಲ್ಲಿ ಶಾಸಕ ಯತ್ನಾಳ ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಪಟ್ಟಣದಲ್ಲಿ ಭಾನುವಾರ ಜರುಗಿದ ಕಿತ್ತೂರ ಚೆನ್ನಮ್ಮನ ೨೦೧ನೇ ವಿಜಯೋತ್ಸವ ಹಾಗೂ ೨೪೭ನೇ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ಮೀಸಲಾತಿ ವಿಷಯಕ್ಕೆ ಬಂದಾಗ ಸಣ್ಣ ಸಮುದಾಯಗಳು ಸಹ ಸೌಲಭ್ಯಗಳಿಂದ ವಂಚಿತವಾಗುತ್ತಿವೆ. ಅವುಗಳಿಗೂ ಸಹ ನ್ಯಾಯ ದೊರಕಬೇಕು. ಈಗ ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೂ ಒಂದು ದಿನ ಜಯ ದೊರೆಯುತ್ತದೆ. ಸಂಶಯ ಬೇಡ. ನಾವು ಇತಿಹಾಸ ಬಗ್ಗೆ ತಿಳಿಯಬೇಕಾಗಿದೆ. ಸ್ವಾತಂತ್ರ್ಯಕ್ಕಾಗಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ತಂಡದ ಹೋರಾಟ, ಸುಭಾಸ್‌ಚಂದ್ರ ಭೋಸ್‌ರ ತ್ಯಾಗವನ್ನು ಅರಿತು ಹಿಂದೂತ್ವದ ಮೂಲಕ ದೇಶ, ಸಂವಿಧಾನವನ್ನು ಪ್ರೀತಿಸಿ, ಗೌರವಿಸೋಣ ಎಂದರು.ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಮಾತನಾಡಿ, ಸಮುದಾಯದ ಋಣವನ್ನು ತೀರಿಸುವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ೧ ಮತ್ತು ೨ರ ವಾರ್ಡ್ಗೆ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆರೆಪ್ಪ ಬೆಳ್ಳಿ, ಪುರಸಭೆ ಮುಖ್ಯಧಿಕಾರಿ ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಶರಣಪ್ಪ ಸುಲ್ಪಿ, ಮಾಜಿ ನಿಂಬೆ ಅಭಿವೃದ್ಧಿ ನಿಗಮ ಅಧ್ಯಕ್ಷ ಅಶೋಕ ಅಲ್ಲಾಪುರ, ಸೇರಿದಂತೆ ವಾರ್ಡಿನ ಹಿರಿಯ ನಾಗರಿಕರು, ಯುವಕರು, ಮಹಿಳೆಯರು, ಸೇರಿದಂತೆ ಅನೇಕರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಸಿಂದಗಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಹೆಗ್ಗೆರೇಶ್ವರ ದೇವಸ್ಥಾನ, ನಗರಸಭೆ, ಕಾಳಿಕಾದೇವಿ ವಿಶ್ವಕರ್ಮ ಸಮಾಜ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಡಾ.ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ೨೦೨೨ನೇ ವ್ಯಸನಮುಕ್ತ ಶಿಬಿರದ ಸಮಾರೋಪ ಸಮಾರಂಭವನ್ನು ಡಿ.೨೩ರಂದು ಬೆಳಿಗ್ಗೆ ೧೨ಗಂಟೆಗೆ ಹೆಗ್ಗೆರೇಶ್ವರ ದೇವಸ್ಥಾನ ಸಬಾಭವನದಲ್ಲಿ ಜರುಗಲಿದೆ ಎಂದು ಎಂದು ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪೂರ ತಿಳಸಿದ್ದಾರೆ.ಸಿಂದಗಿ ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ, ಸಿಂದಗಿ ತಾಲೂಕು ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೋರಗಿ-ಪುರದಾಳ ವಿಶ್ವರಾಧ್ಯ ಶ್ರೀಮಠದ ತಪೋರತ್ನಂ ಮಹಾಲಿಂಗೇಶ್ವರ ಸ್ವಾಮಿಗಳು ವಹಿಸುವರು. ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ನೇರವೇರಿಸುವರು. ಅಧ್ಯಕ್ಷತೆಯನ್ನು ಅಶೋಕ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಶಾಖಾ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಎಫ್-೧೩ ಕಲ್ಯಾಣ ನಗರ ಮಾರ್ಗದ ಮೇಲೆ ಬರುವ ಕೋರ್ಟ್ ಸುತ್ತಮುತ್ತಲಿನ ಪ್ರದೇಶ , ಡಾಲ್ಫಿನ್ ದಾಬಾ, ಪ್ರೇರಣಾ ಶಾಲೆ, ದೊಡಮನಿ, ಮನಗೂಳಿ ಮತ್ತು ಬಿ.ಟಿ.ಸುಣಗಾರ ಅವರ ಕಡಿಮಿಷನ್ ಪ್ರದೇಶಗಳಲ್ಲಿ ಡಿ.೨೩ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯವಾಗುವುದರಿಂದ ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Read More

ಇಂದು (ಡಿಸೆಂಬರ ೨೩) “ರಾಷ್ಟ್ರೀಯ ರೈತ ದಿನ”ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ “ನೇಗಿಲ ಕುಲದೊಳಗಡದಿದೆ ಕರ್ಮ ನೇಗಿಲ ಮೇಲೆಯೇ ನಿಂತಿದೆ ಧರ್ಮ”ಎಂಬ ರೈತ ಗೀತೆಯ ಸಾಲುಗಳು ನಮ್ಮ ಭಾರತದ ಆರ್ಥಿಕತೆಯ ಜೀವಾಳ, ಬೆನ್ನೆಲುಬು ಮತ್ತು ಗ್ರಾಮೀಣ ಸಮೃದ್ಧಿಗೆ ಗಮನಾರ್ಹ ಕೊಡುಗೆ ನೀಡುವವ ರೈತರ ಶ್ರಮವನ್ನು ಬಿಂಬಿಸುತ್ತದೆ. ಇಂದು ಎಲ್ಲ ರಂಗಗಳು ಅತ್ಯಂತ ಲಾಭದಾಯಕತ್ವವನ್ನು ಸಾಧಿಸುತ್ತಿದ್ದರೂ ಕೃಷಿ ಕ್ಷೇತ್ರದಲ್ಲಿ ರೈತರು ಬೆಳೆದ ಫಸಲಿಗೆ ಮಾರುಕಟ್ಟೆಯಲ್ಲಿ ಉತ್ತಮ ದರವಿಲ್ಲದೇ ಕಂಗಾಲಾಗಿದ್ದಾರೆ. ಆದರೆ ರಸಗೊಬ್ಬರ, ಕೀಟನಾಶಕಗಳ ಬೆಲೆ, ಕೆಲಸಗಾರ ಕೂಲಿ ಮತ್ತು ಇನ್ನಿತರ ಕೃಷಿ ಪರಕರಗಳು ದುಬಾರಿಯಾಗುತ್ತಿವೆ ಆದರೆ ಅವರ ಉತ್ಪನ್ನಕ್ಕೆ ಸೂಕ್ತ ಬೆಲೆ ದೊರಕದೇ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿರುವುದು ತೀರ ಕಳವಳಕಾರಿ ಸಂಗತಿಯಾಗಿದೆ. ಇಂದಿನ ದಿನಗಳಲ್ಲಿ ರೈತರೆಂದರೆ ಹೆಣ್ಣು ಕೊಡಲು ಮೂಗು ಮೂರಿಯುವ ಮತ್ತು ಅನ್ನದಾತನನ್ನು ತಿರಸ್ಕಾರ ಭಾವ ತಾಳುತ್ತಿರುವ ಅದೇಷ್ಟೋ ಜನರಿಗೆ ಈ ಜಗತ್ತು ಎಷ್ಟೇ ವಿಜ್ಞನ-ತಂತ್ರಜ್ಞಾನದಲ್ಲಿ ಮುಂದುವರೆದರೂ ಅಥವಾ ಅಭಿವೃದ್ಧಿ…

Read More