Author: editor.udayarashmi@gmail.com

ತುಮಕೂರಿನಲ್ಲಿ ಜ.೧೮ ಮತ್ತು ೧೯ ಪತ್ರಕರ್ತರ ೩೯ನೇ ರಾಜ್ಯ ಸಮ್ಮೇಳನ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ಮಂಗಳವಾರ ಪ್ರಕಟಿಸಲಾಗಿದೆ. ತುಮಕೂರಿನಲ್ಲಿ ಜನವರಿ ೧೮ ಮತ್ತು ೧೯ ರಂದು ನಡೆಯಲಿರುವ ೩೯ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.೧. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ) : ಚಂದ್ರಶೇಖರ ಮುಕ್ಕುಂದಿ, ವಿಜಯ ಕರ್ನಾಟಕ, ಗಂಗಾವತಿ, ದಿಗಂಬರ ಮುರುಳೀಧರ ಪೂಜಾರ್, ಸಂಯುಕ್ತ ಕರ್ನಾಟಕ, ಗದಗ೨. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ) : ಪ್ರಸನ್ನ ಮನೋಹರ ಕುಲಕರ್ಣಿ, ಡೆಕ್ಕನ್ ಹೆರಾಲ್ಡ್, ಖಾನಾಪುರ. ರವಿರಾಜ್ ಆರ್ ಗಲಗಲಿ, ವಿಜಯ ಕರ್ನಾಟಕ, ಬಾಗಲಕೋಟೆ.೩. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ): ಮಂಜುನಾಥ್.ಕೆ. ವಿಜಯವಾಣಿ ಬೆಂಗಳೂರು. ಶಕೀಲ ಚೌಧರಿ, ವಿಜಯ ಕರ್ನಾಟಕ ಅಫಜಲಪುರ, ಕಲಬುರಗಿ೪. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ…

Read More

ಜಯ್ ನುಡಿ(ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ ತರಹ ಕ್ಲಾಸಿಗೆ ರ‍್ಯಾಂಕ್ ಬರೋಕೆ ಆಗಲ್ಲ ಯಾವಾಗ ನೋಡಿದರೂ ಮನೆ ಮುಂದೆ, ಮೈದಾನದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಆಡ್ತಿಯಾ ನಾಯಿ ಬಾಲ ಯಾವಾಗಲೂ ಡೊಂಕು ಅದನ್ನು ನೇರ ಮಾಡಲು ಸಾಧ್ಯವಿಲ್ಲ. ನಾ ಹೇಳಿದಾಗ ಮಾತ್ರ ಅಭ್ಯಾಸ ಮಾಡುತ್ತಿಯಾ.’ ಇದು ರಾಜುವಿನ ಅಪ್ಪ ಅವ್ವನ ಮಾತುಗಳು. ರಾಜುನಿಗೂ ಹೆತ್ತವರ ಮಾತುಗಳನ್ನು ಕೇಳಿ ಕೇಳಿ ರೋಸಿ ಹೋಗುತ್ತದೆ. ನಾನು ಆಟದಲ್ಲಿ ಮುಂದಿರೋದು ಇವರಿಗೆ ಕಾಣುವುದೇ ಇಲ್ಲ ಎಂದು ಗೊಣಗಿಕೊಳ್ಳುತ್ತಾನೆ. ಮನಸ್ಥಿತಿ ಸರಿ ಇರದಿದ್ದಾಗ ಹೌದಲ್ಲ ನನಗೆ ಚೆನ್ನಾಗಿ ಹಾಡೋಕೆ ಬರಲ್ಲ. ಭಾಷಣ ಮಾಡೋಕೆ ಬರಲ್ಲ. ಅಂಕ ಜಾಸ್ತಿ ಗಳಿಸಲು ಆಗಿಲ್ಲ. ನಾನು ಕೆಲಸಕ್ಕೆ ಬಾರದವನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇತ್ತೀಚಿಗೆ ವಿಜಯಪುರ ಜಿಲ್ಲೆಯಲ್ಲಿ ಸುಮಾರು ೧೦-೧೫ ಜನರ ಡಕಾಯಿತರ ಗುಂಪು, ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರತವಾಗಿದ್ದು, ಸದರಿ ಗುಂಪು ಊರ ಹೊರ ವಲಯದಲ್ಲಿರುವ ಒಂಟಿ ಮನೆಗಳಿಗೆ ಹೋಗಿ, ಮನೆಯಲ್ಲಿ ಜನ ಇದ್ದರು, ಇಲ್ಲದೆ ಇದ್ದರು, ಮನೆಯ ಬಾಗಿಲುಗಳಿಗೆ ಕಲ್ಲು ಎತ್ತಿ ಹಾಕಿ, ಒಡೆದು, ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿರುವ ಜನರಿಗೆ ಅಪಾಯಕಾರಿ ಆಯುಧ ತೋರಿಸಿ, ಹೆದರಿಸಿ, ಬೆದರಿಸಿ, ಕೂಡಿ ಹಾಕಿ ಅವರ ಹತ್ತಿರವಿರುವ, ಹಾಗೂ ಮನೆಯಲ್ಲಿರುವ ಬೆಲೆ ಬಾಳುವ ವಸ್ತುಗಳಾದ ಬೆಳ್ಳಿ, ಬಂಗಾರ, ಹಣ ತರಬೇಕು ಎಂದು ಹೇಳುತ್ತಾರೆ. ಒಂದು ವೇಳೆ ತಂದು ನೀಡದೆ ಹೋದರೆ ಅವರ ಜೀವಕ್ಕೆ ಅಪಾಯ ಮಾಡಲು ಹಿಂಜರಿಕೆ ಮಾಡುವುದಿಲ್ಲ. ಕೊನೆಯಲ್ಲಿ ಮನೆಯಿಂದ ಹೋಗುವ ಸಮಯದಲ್ಲಿ ಮೊಬೈಲಗಳನ್ನು ತೆಗೆದುಕೊಂಡು ಹೋಗಿ ಮೊಬೈಲಗಳನ್ನು ಹಾನಿ ಮಾಡುತ್ತಾರೆ. ಈ ತರಹದ ಘಟನೆಗಳು ಇಗಾಗಲೇ ಹಿಟ್ನಳ್ಳಿ, ಬಸವನ ಬಾಗೇವಾಡಿ ಹಾಗೂ ವಿಜಯಪುರ ನಗರದಲ್ಲಿ ಜರುಗಿರುತ್ತವೆ.ಸಾರ್ವಜನಿಕರು, ಯುವಕರು ರಾತ್ರಿ ಹೊತ್ತಲ್ಲಿ ಸ್ವಯಂ-ಪ್ರೇರಿತರಾಗಿ ಸುಮಾರು ೧೫-೨೦ಜನ ಸೇರಿ ತಮ್ಮ ಗ್ರಾಮಗಳಲ್ಲಿ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಮಹಾಶಿವರಶರಣ ವೃತ್ತಗಳನ್ನು ನಿರ್ಮಾಣ ಮಾಡುವುದರಿಂದ ಅವರ ಜೀವನ ಚರಿತ್ರೆಗಳನ್ನು ಮೆಲಕು ಹಾಕಿದಂತಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಜೇವರಗಿ ರಸ್ತೆಯಲ್ಲಿರುವ ಮೋರಟಗಿ ನಾಕಾ ಬಳಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ನೂತನ ವೃತ್ತವನ್ನು ಉದ್ಘಾಟಿಸಿ ಮಾತನಾಡಿ, ಶರಣರ ಆಚಾರ-ವಿಚಾರ ಮುಂದಿನ ಯುವ ಪೀಳಿಗೆಗೆ ರವಾನಿಸುವ ಅವಶ್ಯಕತೆಯಿದೆ. ಶರಣರ ವೃತ್ತಗಳನ್ನು ಮಾಡುವುದರಿಂದ ಯುವ ಜನಾಂಗಕ್ಕೆ ಅವರ ಬಗ್ಗೆ ತಿಳಿಯುತ್ತಿದೆ. ಅವರ ತತ್ವಾದರ್ಶಗಳನ್ನು ತಿಳಿಯಲು ಸಹಾಯವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಉಪಾದ್ಯಕ್ಷ ರಾಜಣ್ಣ ನಾರಾಯಣಕರ, ಮಾಜಿ ಅದ್ಯಕ್ಷ ಹಾಲಿ ಸದಸ್ಯ ಬಾಷಾಸಾಬ ತಾಂಬೋಳಿ, ಎಂ.ಎ.ಖತೀಬ, ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ, ಯೋಜನಾ ಪ್ರಾಧಿಕಾರ ಸದಸ್ಯ ಅಂಬರೀಶ ಚೌಗಲೆ, ಪಂಚಮಸಾಲಿ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅದ್ಯಕ್ಷ ಅಶೋಕ ಅಲ್ಲಾಪುರ, ಮಹಾನಂದ ಬಮ್ಮಣ್ಣಿ, ಶಾಮಲಾ ಮಂದೇವಾಲಿ, ಶೈಲಜಾ ಸ್ತಾವರಮಠ, ಪ್ರತಿಭಾ ಚಳ್ಳಗಿ, ಭೋವಿ ಸಮಾಜದ ತಾಲೂಕಾಧ್ಯಕ್ಷ ಪಂಡಿತ…

Read More

ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವವನ್ನು ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅನನ್ಯ. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಅಂತವರ ತತ್ವಾದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಮಾಡಿದಕ್ಕೆ ಸಾರ್ಥಕವಾಗುತ್ತದೆ ಎಂದು ಎಚ್.ಜಿ.ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ೮೫೩ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವೇಶ್ವರರು ಹಾಗೂ ಸಿದ್ದರಾಮೇಶ್ವರರು ಕಾಯಕಯೋಗಿ ಶ್ರೇಷ್ಠ ವಚನಕಾರರಾಗಿದ್ದರು. ಹಾಗೆಯೇ ಎಲ್ಲ ಶರಣರು ಅವರನ್ನು ಅಪ್ಪಿಕೊಂಡಿದ್ದರು. ಬುದ್ಧ ಬಸವ ಡಾ. ಅಂಬೇಡ್ಕರರು, ಅಲ್ಲಮಪ್ರಭು, ಚೆನ್ನಬಸವ, ಅಕ್ಕ ಮಹಾದೇವಿ ಸೇರಿದಂತೆ ಅನೇಕ ಶರಣರು ಸಮ ಸಮಾಜದ ನಿರ್ಮಾಣಕ್ಕೆ ಎಲ್ಲ ಸಮಾಜದ ಸಮಾನತೆಯಲ್ಲಿ ಬೆಳಕು ಚೆಲ್ಲಿದ್ದಾರೆ. ಅವರಂತೆ ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹೊರಗುತ್ತಿಗೆ ಸಿಬ್ಬಂದಿಗೆ ಉತ್ತಮ ಸೇವೆ ಒದಗಿಸಲು ಸಹಕಾರ ಸಂಘಗಳ ಕಾಯಿದೆಯಡಿ ಈಗಾಗಲೇ ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಡಿಗೇರ ಹೇಳಿದರು.ಸಿಂಧಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರ ಸಂಘದ ಸಿಂದಗಿ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ನೂತನ ಸಿಂದಗಿ ಘಟಕದ ಪದಾಧಿಕಾರಿಗಳ ಹೊರಗುತ್ತಿಗೆ ನೌಕರರ ಜಿಲ್ಲಾಧ್ಯಕ್ಷ ಸನ್ಮಾನಿಸಿ ಮಾತನಾಡಿದ ಅವರು, ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಮಾದರಿಯಲ್ಲಿ ನಮ್ಮ ಜಿಲ್ಲೆಯಲ್ಲಿಯೂ ಸೊಸೈಟಿ ಮುಂದಿನ ದಿನಮಾನಗಳಲ್ಲಿ ನಮ್ಮ ಹೋರಾಟದ ಫಲದಿಂದ ಆರಂಭವಾಗಲಿದೆ ಎಂದರು.ಈ ವೇಳೆ ನೂತನ ಅಧ್ಯಕ್ಷರಾಗಿ ಅಸ್ಲಾಂ (ಜುಬೇರ) ಗುಂದಗಿ, ಉಪಾಧ್ಯಕ್ಷರಾಗಿ ಪರಶುರಾಮ ಖೈನೂರ, ಕಾರ್ಯದರ್ಶಿಯಾಗಿ ಶರಣು ಪಾಟೀಲ, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ರಾಠೋಡ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಬೂದಿ, ಜಿಲ್ಲಾ ಖಜಾಂಚಿ ಯಾಸ್ಮಿನ್ ಬಡೇಗರ್, ಜಿಲ್ಲಾ ಸಮಿತಿಯ ಸದಸ್ಯರಾದ…

Read More

ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ | ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಖಡಕ್ ಎಚ್ಚರಿಕೆ ಬೆಂಗಳೂರು: ಸಚಿವರು ಕಾರ್ಯ ವೈಖರಿಯನ್ನು ಸುಧಾರಿಸದಿದ್ದರೆ ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಎಚ್ಚರಿಕೆ ನೀಡಿದ್ದಾರೆ.ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಸಮಾವೇಶದ ಪೂರ್ವಭಾವಿ ಸಿದ್ಧತೆ ಸಭೆಯ ಭಾಗವಾಗಿ ಸೋಮವಾರ ನಡೆದ ಕೆಪಿಸಿಸಿ ಸಭೆಯನ್ನುದ್ದೇಶಿಸಿ ಸುರ್ಜೇವಾಲಾ ಆವರು ಮಾತನಾಡಿದರು.ಸಭೆಯಲ್ಲಿ ಎಲ್ಲರ ಸಮ್ಮುಖದಲ್ಲೇ ಸಚಿವರ 20 ತಿಂಗಳ ಕಾರ್ಯವೈಖರಿ ಹಾಗೂ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಕುರಿತ ವರದಿಯನ್ನು ಡಿಕೆ.ಶಿವಕುಮಾರ್ ಅವರು ಸುರ್ಜೇವಾಲಾ ಅವರಿಗೆ ಸಲ್ಲಿಸಿದರು.ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಸುರ್ಜೇವಾಲಾ ಅವರು, ಸಚಿವರ ಕಾರ್ಯಕ್ಷಮತೆಯ ಕುರಿತ ವರದಿಗಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳಿದರು. 60 ದಿನಗಳಲ್ಲಿ ಎಲ್ಲಾ ಸಚಿವರನ್ನು ಪ್ರತ್ಯೇಕವಾಗಿ ಕರೆಯಿಸಿ ಚರ್ಚೆ ಮಾಡುತ್ತೇನೆಂದು ಹೇಳಿದರು. ಇದೇ…

Read More

ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ. ಹಿಂದಿನ ಅಡುಗೆ ಮನೆ ಇಂದು ಮಾಯವಾಗುತ್ತಿದೆ. ಜಾನಪದ ಅಡುಗೆಗಳನ್ನು ಇಡ್ಲಿ ದೋಸೆ ತಿಂದು ಹಾಕುತ್ತಿರುವುದು ದುರಂತಮಯ ಎಂದು ಕಾಂಗ್ರೆಸ್ ಮುಖಂಡ ಡಾ ಪ್ರಭುಗೌಡ ಲಿಂಗದಳ್ಳಿ ಅಭಿಪ್ರಾಯಪಟ್ಟರು.ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಮತ್ತು ತಾಲೂಕು ಘಟಕ ತಾಳಿಕೋಟೆ ವತಿಯಿಂದ ತಾಲೂಕಿನ ಬಳಗಾನೂರ ನಿಲಗಂಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ಏರ್ಪಡಿಸಿದ ” ಸಂಕ್ರಾಂತಿ ಜಾನಪದ ಸಂಬ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಜಾನಪದ ಸಂಸ್ಕೃತಿ ಮರೆತರೆ ದೈಹಿಕ ಮತ್ತು ಮಾನಸಿಕ ದುರ್ಬಲವಾಗುತ್ತದೆ ಎಂದರು.ಅತಿಥಿಯಾಗಿ ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳದ ನಿರ್ಧೇಶಕ ಶಿವನಗೌಡ ಬಿರಾದಾರ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಗಳನ್ನು ಬಾಳನಗೌಡ ಪಾಟೀಲ ಮತ್ತು ತಂಡ ಮಾಡುತ್ತಿರುವುದು ಮೆಚ್ಚುವಂತದ್ದು ಎಂದರು.ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ, ಜಾನಪದ ಸಂಸ್ಕೃತಿ ಹಾಳಾದರೆ ಜನರ ಬದುಕಿಗೆ ಅರ್ಥ ಇರುವದಿಲ್ಲ. ನಮ್ಮ ಮೂಲ ಸಂಸ್ಕೃತಿ ಉಳಿಯಬೇಕು ಎನ್ನುವುದು ನಮ್ಮ ಪರಿಷತ್ತಿನ ಆಶಯ ಎಂದರುಗ್ರಾಮ ಸಂಸ್ಕೃತಿ ಮತ್ತು ಯುವಜನತೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಎಚ್‌ಐವಿ ಸೋಂಕು ಮತ್ತು ಏಡ್ಸ್ ರೋಗದ ಕುರಿತು ಯುವಜನತೆ ಅರಿಯುವುದು ಅಗತ್ಯವಾಗಿದೆ ಎಂದು ಡಾಪ್ಕೋ ಅಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು.ಪಟ್ಟಣದ ಬಿ.ಎಲ್.ಡಿ..ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನಲ್ಲಿ ಸೋಮವಾರ ಜರುಗಿದ ಏಡ್ಸ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಯುವಜನತೆ ಭವಿಷ್ಯದ ದೃಷ್ಠಿಯಿಂದ ವಿವಿಧ ರೋಗಗಳ ಮೂಲ, ಕಾರಣ, ಎಚ್ಚರಿಕೆ ವಹಿಸಬೇಕಾದ ಕ್ರಮಗಳು ಹಾಗೂ ರಕ್ತದಾನದ ಕುರಿತು ತಿಳಿಯಬೇಕಾಗಿದೆ ಎಂದರು.ಸ್ಥಳೀಯ ಕಾಲೇಜು ಉಪನ್ಯಾಸಕಿ ವ್ಹಿ.ಆರ್.ವಿಜಯಲಕ್ಷ್ಮಿ ಮಾತನಾಡಿ, ದೇಶದ ಯುವ ಸಂಪತ್ತು ಆರೋಗ್ಯಪೂರ್ಣವಾಗಿದ್ದಲ್ಲಿ ಮಾತ್ರ ದೇಶ ಭದ್ರ ಹಾಗೂ ಸದೃಡವಾಗಿರಲು ಸಾಧ್ಯ ಎಂದು ಹೇಳುತ್ತಾ, ರೋಗಿಗಳ ಕುರಿತು ಮಾನವೀಯತೆ ಇರಲಿ ಎಂದರು.ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಡಾ.ಮಂಜುನಾಥ ಮಠ, ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಪಾಟೀಲ, ಕೆಸಾಪ್ಸ್ ಜಿಲ್ಲಾ ಮೇಲ್ವಿಚಾರಕ ಬಾಬುರಾವ್ ತಳವಾರ, ಸಮಾಲೋಚಕ ಕಲ್ಲೂರ, ಟೆಕ್ನಷಿಯನ್ ಜಯಶ್ರೀ ಸುರಪೂರ, ಬಿ.ಎಲ್.ಡಿ.ಇ ಆಸ್ಪತ್ರೆಯ ಸಮಾಲೋಚಕಿ ಅರ್ಚನಾ ಏಳಕೋಟಿ, ಆಶಾ ಧಾರವಾಡಕರ, ಉಪನ್ಯಾಸಕ ನವೀನಕುಮಾರ, ಗಾಯಕಿ ಸವಿತಾ ಮೇಲಿನಮನಿ, ಎನ್‌ಟಿಇಪಿ ಸಿಬ್ಬಂದಿ ಅಷ್ಟಪುತ್ರೆ ಸೇರಿದಂತೆ ವಿದ್ಯಾರ್ಥಿ,…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಿದ್ದು ನಾಪತ್ತೆಯಾಗಿದ್ದ ಅವಳಿ ಮಕ್ಕಳ ಪೈಕಿ ಒಬ್ಬ ಮಗುವಿನ ಶವ ಮಂಗಳವಾರ ಪತ್ತೆಯಾಗಿದೆ.ಪತ್ತೆಯಾದ ಮಗು ಹುಸೇನ್ ಭಜಂತ್ರಿ (೧೩ ತಿಂಗಳು).ಸೋಮವಾರ, ತಾಯಿ ಭಾಗ್ಯಶ್ರೀ ನಿಂಗರಾಜ ಭಜಂತ್ರಿ ತನ್ನ ನಾಲ್ವರು ಮಕ್ಕಳ ಸಮೇತ ನೀರು ಪಾಲಾಗಿದ್ದಾಗ ಭಾಗ್ಯಶ್ರೀಯನ್ನು ಸ್ಥಳೀಯರು ಕಾಪಾಡಿದ್ದರು. ನಾಲ್ವರ ಪೈಕಿ ಇಬ್ಬರು ಮಕ್ಕಳ ಮೃತದೇಹ ಸೋಮವಾರವೇ ಪತ್ತೆಯಾಗಿತ್ತು.ರಕ್ಷಿಸಿದ ಅರಣ್ಯ ಕಾರ್ಮಿಕ:ಸೋಮವಾರ, ಕಾಲುವೆಯ ಸಮೀಪ ಕರ್ತವ್ಯ ನಿರ್ವಹಿಸುತ್ತಿದ್ದ ಕೆಬಿಜೆಎನ್ ಎಲ್ ಅರಣ್ಯ ವಿಭಾಗದಲ್ಲಿ ದಿನಗೂಲಿ ನೌಕರ ನಾಗೇಶ ಕೊಳ್ಳಾರ, ಕೊಚ್ಚಿಕೊಂಡು ಹೋಗುತ್ತಿದ್ದ ಮಹಿಳೆಯ ಚೀರಾಟ ಗಮನಿಸಿ, ಕೆಲವರ ಸಹಾಯದಿಂದ ತನ್ನ ಎಲೆಕ್ಟ್ರಿಕ್ ಬೈಕ್ ನ ಚಾರ್ಜರ್ ನ ಕೇಬಲ್ ಎಸೆದು ಮಹಿಳೆಯನ್ನು ಕಾಪಾಡಿದ್ದಾನೆ.ಈ ಬಗ್ಗೆ ಸ್ವತಃ ನಾಗೇಶ ಕೊಳ್ಳಾರ ಪೊಲೀಸರಿಗೆ ದೂರು ನೀಡಿದ್ದು, ಆತನ ಹೇಳಿಕೆಯ ಆಧಾರದ ಮೇಲೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಪ್ರತ್ಯಕ್ಷದರ್ಶಿಗಳ…

Read More