Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಬಸವಾದಿ ಶಿವಶರಣರಲ್ಲಿಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಶರಣರು ಶ್ರೇಷ್ಠ ವಚನಕಾರ ಅವರ ಬದುಕು ಬರಹ ನಮಗೆಲ್ಲ ಆದರ್ಶ ಎಂದು ಜಿಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ್ ಹೇಳಿದರು.ಪಟ್ಟಣದ ಸಿದ್ದರಾಮೇಶ್ವರ ವೃತ್ತದಲ್ಲಿ ಮಂಗಳವಾರ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ 853 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು 12ನೇ ಶತಮಾನ ಕಂಡ ಮಹಾಶರಣ ಶ್ರೀ ಸಿದ್ದರಾಮೇಶ್ವರರು ಸಮಾಜದ ಒಳಿತಿಗಾಗಿ ಬದುಕಿದ ನಿಜವಾದ ಕಾಯಕ ಯೋಗಿ ಎಂದವರು ಜಾತಿ, ಮತ, ಪಂಥಗಳೆನ್ನದೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಎಲ್ಲರೂ ಆಚರಿಸಬೇಕು. ಅವರ ತೋರಿದ ಹಾದಿಯಲ್ಲಿ ಇಂದಿನ ಭೋವಿ ಸಮಾಜ ತಮ್ಮನ್ನು ತಾವು ಅರಿತು ಬದಲಾಗಬೇಕಿದೆ ಎಂದರು.ಮಾಜಿ ಪುರಸಭೆ ಸದಸ್ಯ ಮಹಿಪಾಲರೆಡ್ಡಿ ಡಿಗ್ಗಾವಿ ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ಕೆರೆ, ಕಾಲುವೆ, ದೇವಸ್ಥಾನ, ಕಟ್ಟಿಸುವ ಮೂಲಕ ಕರ್ಮ ಮಾರ್ಗದಲ್ಲಿ ಸಾಗಿದರೆ ಮಾನವ ಜನ್ಮ ಸಾರ್ಥಕ ಎಂದು ನಿರೂಪಿಸಿದ್ದಾರೆ. ನಂತರದ ದಿನಗಳಲ್ಲಿ ಬಸವಣ್ಣ ಮತ್ತು ಸಾವಿರಾರು ಶರಣರ ಭೇಟಿಯಿಂದ ಜ್ಞಾನ ಮಾರ್ಗದಲ್ಲಿ ಸಾಗಿದ ಮಹಾ…

Read More

ಉದಯರಶ್ಮಿ ದಿನಪತ್ರಿಕೆ ಬಾಗಲಕೋಟೆ: “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾದಲ್ಲಿ ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರು ಶ್ರೀಮದ್ ಭಾಗವತ್ ಸಪ್ತಾಹ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಹರಿಭಕ್ತರ ಸಮ್ಮುಖದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿಯ ಶ್ರೀ ಸದ್ಗುರು ಪ್ರಭುಜಿ ಮಹಾರಾಜರ ದಿವ್ಯಸಾನಿದ್ಯ, ಶ್ರೀ ಸುದರ್ಶನ್ ಮಹಾರಾಜರು ಖಡಕಿಮಠ ಪಂಡರಾಪುರ ರವರ ಉಪಸ್ಥಿತಿಯಲ್ಲಿ KANNADAOTT. ORG ವೆಬ್ಸೈಟ್ ಮೂಲಕ ಬಿಡುಗಡೆಗೊಳಿಸಿದರು.ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀ ಸದ್ಗುರು ಪ್ರಭುಜೀ ಮಹಾರಾಜರ ಮಾರ್ಗದರ್ಶನದಲ್ಲಿ “ಮಾಧವಾನಂದ ಯೋ ಶೇಗುಣಸಿ” ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.”ಫಳಲೇ ಭಾಗ್ಯ ಮಾಝೆ ಧನ್ಯ ಝಾಲೋ ಸಂಸಾರಿ” ವಿಠ್ಠಲ ವಿಠ್ಠಲ… ಹರಿಭಕ್ತಿಯ ಮರಾಠಿ ಸಾಲುಗಳ ಈ ಹಾಡನ್ನು ರವೀಂದ್ರ ಸೊರಗಾವಿ, ಎ ಟಿ ರವೀಶ್ ಹಾಡಿದ್ದಾರೆ. ಎ ಟಿ ರವೀಶ್ ಸಂಗೀತ ನೀಡಿದ್ದಾರೆ.ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೆ ಮೊಟ್ಟ ಮೊದಲ ಬಾರಿಗೆ ಗೋವಾದಲ್ಲಿ…

Read More

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ ದಳವಾಯಿ ಅವರಿಗೆ ರೈತ ಸಂಘ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಬೆಳೆಯುವ ಎಲ್ಲಾ ಕೃಷಿ ಬೆಳೆಗಳಿಗೆ ಸೂಕ್ತ ಬೆಲೆ ನೀಡಬೇಕು, ಸ್ವಾಮಿನಾಥನ್ನ ವರದಿ ಜಾರಿಗೆ ತರಬೇಕು ಹಾಗೂ ಎಲ್ಲಾ ಬೆಳೆಗಳಿಗೆ ಮೌಲ್ಯವರ್ಧನೆ ಮಾಡಿ ನೇರವಾಗಿ ರೈತರೆ ಮಾರಾಟ ಮಾಡಲು ಯೋಜನೆ ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ|| ಅಶೋಕ ದಳವಾಯಿ ಅವರಿಗೆ ಮನವಿ ಸಲ್ಲಿಸಿ ಸರಕಾರಕ್ಕೆ ಒತ್ತಾಯಿಸುವಂತೆ ಆಗ್ರಹಿಸಲಾಯಿತು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ವಿಜಯಪುರ ಜಿಲ್ಲೆಯು ಬರಗಾಲದ ಹಣೆಪಟ್ಟಿಯಿಂದಾಗಿ ಇಲ್ಲಿಯ ರೈತರು ಸರಿಯಾದ ನೀರು, ವಿದ್ಯುತ್ ಸಮಸ್ಯೆಗಳಿದ್ದರು ಗಡಿಭಾಗವಿರುವ ಇಲ್ಲಿ ನಕಲಿ ಬೀಜ, ಗೊಬ್ಬರ, ಕೀಟನಾಶಕಗಳ ಎಗ್ಗಿಲ್ಲದ ಹಾವಳಿಯ ನಡುವೆ ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ರೈತರು ಬೆಳೆಯುವ ಬೆಳೆಗಳಿಗೆ ಸರಿಯಾದ ಬೆಲೆ ಹಾಗೂ ಮಾರುಕಟ್ಟೆ ಇಲ್ಲದೇ ನಷ್ಟಹೊಂದಿ ರೈತ ಆತ್ಮಹತೈಯಂತಹ ಕೆಟ್ಟ ಪೀಡಗಿನಿಂದ ಕಂಗಾಲಾಗಿ ದಿಕ್ಕು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ದೇಶದಾದ್ಯಂತ ಮಹಾನ್ ಅಧ್ಯಾತ್ಮಿಕ ನಾಯಕ, ತತ್ವಜ್ಞಾನಿ, ಚಿಂತಕ ಹಾಗೂ ವಿಶ್ವ ಸನ್ಯಾಸಿ ಸ್ವಾಮಿ ವಿವೇಕಾನಂದರ 162 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳು ಯಾವಾಗಲೂ ಯುವಕರನ್ನು ಪ್ರೇರೇಪಿಸುವಂತಿವೆ. ಜೊತೆಗೆ ಅವರಲ್ಲಿ ಹೊಸ ಶಕ್ತಿ ಮತ್ತು ಪ್ರಜ್ಞೆಯನ್ನು ತುಂಬುತ್ತಿವೆ ಎಂದು ಗ್ರಾಮೀಣ ಠಾಣಾ ಕ್ರೈಮ್ ಪಿ ಎಸ್ ಐ ಗೋಳಸಂಗಿ ಹೇಳಿದರು.ಭಾನುವಾರ ಗ್ರಾಮೀಣ ಪೋಲಿಸ್ ಠಾಣಾ ಆವರಣದಲ್ಲಿ ಸ್ವಾಮಿ ವಿವೇಕಾನಂದರ 162 ನೇ ಜಯಂತಿ ಪ್ರಯುಕ್ತ ವಿಧ್ಯಾರ್ಥಿಗಳೊಂದಿಗೆ ಸಸಿ ನೆಟ್ಟು ಯುವ ದಿನಾಚರಣೆ ಆಚರಿಸಿ ಮಾತನಾಡಿದರು.ಸ್ವಾಮಿ ವಿವೇಕಾನಂದರ ಜಯಂತಿಯನ್ನು ಭಾರತದಲ್ಲಿ ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ. ರಾಷ್ಟ್ರೀಯ ಯುವ ದಿನದಂದು, ವೈಯಕ್ತಿಕ ಅಭಿವೃದ್ಧಿ, ಸಮಾಜ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಧನಾತ್ಮಕವಾಗಿ ಕೊಡುಗೆ ನೀಡಲು ಯುವಕರನ್ನು ಪ್ರೇರೇಪಿಸಲು ಮತ್ತು ಪ್ರೋತ್ಸಾಹಿಸಲು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ ಎಂದುಹೇಳಿದರು.ಈ ಸಂದರ್ಭದಲ್ಲಿ ವಿಧ್ಯಾರ್ಥಿ ಬಸವರಾಜ ಕಂಠಿಕಾರ, ಸಚೀನ ಅವರಾಧಿ ಅನೇಕ ವಿಧ್ಯಾರ್ಥಿಗಳು ಹಾಗೂ ಹವಾಲ್ದಾರ್ ವಿಠ್ಠಲ ಹೊಸಮನಿ, ಸಿದ್ದು ವಾಲಿಕಾರ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಿಜ ಶರಣ ಅಂಬಿಗರ ಚೌಡಯ್ಯನವರ ಸಮಾಜದ ವತಿಯಿಂದ ಜನವರಿ 19ರಂದು ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಮುಳಗುಂದ ನಾಕಾ ಹತ್ತಿರದ ಕ್ಲಾರ್ಕ್ಸ್ ಇನ್ ಸ್ಟಾರ್ ಹೊಟೆಲ್‌ನಲ್ಲಿ ವಧು- ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ಸಮಾವೇಶದಲ್ಲಿ ವಧು ವರರ ಫೋಟೋ ಇಮೇಜ್ ಹಾಗೂ ವಿಡಿಯೋಗಳನ್ನು ಸ್ಕ್ರೀನ್ ಪ್ಲೇ ಮೂಲಕ ತೋರಿಸಲಾಗುವುದು. ಸಮಾವೇಶದಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರುನ್ನು ನೋಂದಾಯಿಸಿಕೊಳ್ಳಲು ಪ್ರತಿಯೊಬ್ಬ ಪ್ರತಿನಿಧಿಗೆ 1 ಸಾವಿರ ಪ್ರವೇಶ ಶುಲ್ಕ ಇರುವುದು. ಸಮಾವೇಶದಲ್ಲಿ ಯಾವುದೇ ಏಜೆಂಟರಿಗೆ ಹಾಗೂ ಮದ್ಯವರ್ತಿಗಳಿಗೆ ಅವಕಾಶವಿರುವುದಿಲ್ಲ. ತಮ್ಮ ಭಾವಚಿತ್ರ ಬಯೋಡೇಟಾ, ಪ್ರವೇಶ ಶುಲ್ಕದೊಂದಿಗೆ ಸಮಾವೇಶದ ಸಂಚಾಲಕರಾದ ದೇವೇಂದ್ರ ಅಂಬಿಗೇರ ಮೋ ಸಂಖ್ಯೆ ಹಾಗೂ ವಾಟ್ಸ್ಪ ನಂ 9880638379 ಮೂಲಕ ಕಳುಹಿಸಿಕೊಡುವಂತೆ, ಹಾಗೂ ಸಮಾಜದ ಯುವಕ, ಯುವತಿಯರು ಹಾಗೂ ಪಾಲಕರು ಸೇರಿದಂತೆ ಸಮಾಜದ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಜ್ಞಾನಗಂಗಾ ವಿವಿಧೋದ್ದೇಶಗಳ ಸಹಕಾರಿ ಸಂಘದ ನಿರ್ದೇಶಕರಾದ ಶಿವಾನಂದ .ಅಂಬಿಗೇರ ಮೋ.ಸಂಖ್ಯೆ 9448342873 ಪ್ರಕಟಣೆಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಇಲ್ಲಿಯ ಬೇನಾಳ ಬ್ರಿಜ್ ಬಳಿಯಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೋಮವಾರ ಜರುಗಿದೆ.ಮೃತಪಟ್ಟವರನ್ನು ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತಿ (೫), ರಕ್ಷಾ ನಿಂಗರಾಜ ಭಜಂತ್ರಿ (೩), ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ (೧೩ ತಿಂಗಳು) ಮೃತಪಟ್ಟಿದ್ದಾರೆ.ಕಾಲುವೆಗೆ ಬಿದ್ದಿದ್ದ ಮೃತ ಮಕ್ಕಳ ತಾಯಿ ಭಾಗ್ಯ ಳನ್ನು ಮೀನುಗಾರರು ಕಾಲುವೆ ನೀರಿನಿಂದ ಎತ್ತಿ ಬದುಕಿಸಿದ್ದಾರೆ.ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎನ್ನಲಾಗಿದೆ.ತಾಯಿ ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಜಿಗಿದದ್ದರಿಂದ ಈ ದುರ್ಘಟನೆ ಸಂಭವಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ‘ಉರ್ದು ಭಾಷಣ’ ವಿಭಾಗದಲ್ಲಿ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಾ ಹೊನ್ನುಟಗಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿದ್ಯಾರ್ಥಿನಿ ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಅವಳ ಸಾಧನೆಗೆ ಉರ್ದು ಭಾಷಾ ಶಿಕ್ಷಕ ಯಾಸೀನ್ ಗರಡಿಮನಿ, ಮುಖ್ಯಶಿಕ್ಷಕ ಆರ್.ಎಲ್.ರಾಠೋಡ, ಎಸ್‌ಡಿಎಮ್‌ಸಿ ಅಧ್ಯಕ್ಷ ಅಬ್ದುಲ್ಲಾ ಚೌಧರಿ, ಉಪಾಧ್ಯಕ್ಷ ಸಾಧಿಕಪಾಷಾ ಮಾಲಿಪಾಟೀಲ ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದಚುನಾವಣೆಯಲ್ಲಿ ರಿಯಾಜ್ ಯಲಗಾರ, ಕಾಸುಗೌಡ ಬಿರಾದಾರ, ಕಾಸು ಜಮಾದಾರ ನೇತೃತ್ವದ ಬಣ ಜಯಗಳಿಸಿದ ಹಿನ್ನೆಲೆಯಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.ಪಟ್ಟಣದ ವಿ.ಪ್ರಾ.ಗ್ರಾ.ಕೃ.ಸ. ಸಂಘದ ಆಡಳಿತ ಮಂಡಳಿಯ ಹತ್ತು ಸ್ಥಾನಗಳಿಗೆ ಭಾನುವಾರ ಜರುಗಿದ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಒಂದೇ ಬಣದ ಹತ್ತು ಅಭ್ಯರ್ಥಿಗಳು ಅಧಿಕ ಮತಗಳನ್ನು ಪಡೆಯುವುದರ ಮೂಲಕ ಜಯಗಳಿಸಿದರು. ಒಟ್ಟು ೧೨ ಜನ ಸದಸ್ಯರ ಆಡಳಿತ ಮಂಡಳಿಗೆ ಹಿಂದುಳಿದ ವರ್ಗ ‘ಅ’ ಮೀಸಲು ಸ್ಥಾನದಿಂದ ಒಬ್ಬರು ಹಾಗೂ ಪರಿಶಿಷ್ಟ ಜಾತಿಯ ಮೀಸಲು ಸ್ಥಾನದಿಂದ ಒಬ್ಬರು ಹೀಗೆ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು ಇನ್ನೂಳಿದ ಸಾಮಾನ್ಯ ಸ್ಥಾನ-೫ ಮಹಿಳಾ ಮೀಸಲು-೨ ಹಿಂದುಳಿದ ವರ್ಗ ‘ಬ’ ಸ್ಥಾನ-೦೧, ಪರಿಶಿಷ್ಟ ಪಂಗಡ-೦೧, ಬಿನ್ ಸಾಲಗಾರರ ಕ್ಷೇತ್ರ-೦೧ ಹೀಗೆ ಒಟ್ಟು ೧೦ ಸ್ಥಾನಗಳಿಗೆ ಚುನಾವಣೆ ಜರುಗಿತು.ಚುನಾವಣೆಯಲ್ಲಿ ಸಾಮಾನ್ಯ ಸ್ಥಾನಗಳಿಗೆ ಹಣಮಂತ್ರಾಯ ಜೋಗೂರ, ಬಸವರಾಜ ತಾಳಿಕೋಟಿ, ಶಾಂತಪ್ಪ ಬಿರಾದಾರ, ಮೋದಿನಸಾಬ್ ಯಲಗಾರ, ರಾಜೇಂದ್ರ ಭಾವಿಮನಿ. ಮಹಿಳಾ ಮೀಸಲು ಸ್ಥಾನಗಳಿಗೆ ಶೃತಿ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ನೌಕರರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಅವರು ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ನೌಕರರ ಸಂಘದ ಇಂಡಿ ಶಾಖೆಯ ೨೦೨೫ ನೇ ಇಸವಿಯ ನೂತನ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿದರು.ಸರ್ಕಾರಿ ಎಲ್ಲ ಇಲಾಖೆಗಳ ನೌಕರರು ಭ್ರಷ್ಟಾಚಾರ ಮುಕ್ತವಾಗಿ ತಮ್ಮ ಕಾರ್ಯ ನಿರ್ವಹಿಸಿದ್ದೇ ಆದಲ್ಲಿ ಆಡಳಿತ ವ್ಯವಸ್ಥೆ ಚುರುಕುಗೊಳ್ಳುತ್ತದೆ, ಅಲ್ಲದೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಆ ನಿಟ್ಟಿನಲ್ಲಿ ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ಬಸವರಾಜ ರಾವೂರ, ನಿಜಣ್ಣ ಕಾಳೆ, ಎಸ್.ವಿ. ಹರಳಯ್ಯ, ಜಿ.ಎಂ. ಬಿರಾದಾರ, ಎಂ.ಎಸ್. ಹರಿಜನ, ಯಮನೇಶ ಬಿರಾದಾರ, ರವಿ ಗಿಣ್ಣಿ, ದತ್ತಾತ್ರೇಯ ಲಾಳಸಂಗಿ, ಶಿವಶರಣ ಹಂಜಗಿ, ಅಲ್ಲಾಭಕ್ಷ ವಾಲಿಕಾರ, ಅಸ್ಲಾಂ ಪಟೇಲ, ವೈ.ಟಿ ಪಾಟೀಲ ಸೇರಿದಂತೆ ಇನ್ನಿತರರು ಇದ್ದರು.

Read More

ಸಿಂದಗಿ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಿಷಾದ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಸಾಯನಿಕ ರಸಗೊಬ್ಬರಗಳ ಅತೀಯಾದ ಬಳಕೆಯಿಂದ ಭೂಮಿಯು ಬಂಜರುಗೊಳ್ಳುತ್ತಿದ್ದು, ನಾವು ಭೂಮಿಗೆ ವಿಷ ಉಣ್ಣಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಿಷಾದ ವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ಸಾರಂಗಮಠದ ಆವರಣದಲ್ಲಿ ವಿನಾಯಕ್ ಸಾವಯವ ರೈತಮಿತ್ರ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ಕೃಷಿ ಕಾಯಕ ಮಾಡುವುದು ಅತ್ಯಂತ ದುಬಾರಿಯಾಗಿದೆ. ರಸಗೊಬ್ಬರಗಳ ಬೆಲೆ, ದುಡಿಯುವ ಆಳುಗಳ ದಿನಗೂಲಿ ಹಲವು ಪಟ್ಟು ಹೆಚ್ಚಾಗಿದ್ದು, ರೈತ ಬೆಳೆದ ಬೆಳೆಗೆ ಬೆಲೆ ಮಾತ್ರ ಹೆಚ್ಚಾಗದೇ ಇರುವುದರಿಂದ ಕೃಷಿಕ ಸಾಲಗಾರನಾಗುತ್ತಿದ್ದಾನೆ. ಇದೆಲ್ಲವೂ ಹೋಗಲಾಡಿಸಿ ಸುಸ್ಥಿರ ಮತ್ತು ಸ್ವಾವಲಂಬಿ ಕೃಷಿಯತ್ತ ಹೆಚ್ಚೆ ಇಡಬೇಕಾದರೆ ಸಾವಯವ ಕೃಷಿಯನ್ನು ರೈತರು ಅಪ್ಪಿಕೊಂಡು ಒಪ್ಪಿಕೊಳ್ಳಲೆಬೇಕಾದ ಅನಿವಾರ್ಯತೆ ಇದೆ ಎಂದ ಅವರು, ಪ್ರತಿಯೊಬ್ಬರು ಗೋವು ಆಧಾರಿತ ಕೃಷಿಯನ್ನು ಕೈಗೊಳ್ಳಬೇಕು. ಹೊಲದಲ್ಲಯೇ ಸಿಗುವ ಕೃಷಿತ್ರಾö್ಯಜ್ಯ ಸಂಪನ್ಮೂಲಗಳಿAದ ಗೊಬ್ಬರ ತಯಾರಿಸಿ ಭೂಮಿಯ ಆರೋಗ್ಯವನ್ನು ಹೆಚ್ಚಿಸಬೇಕು ಎಂದರು.ಈ ವೇಳೆ ಆಲಮೇಲದ ಸಾವಯವ ಕೃಷಿಕ ಸುನೀಲ ನಾರಾಯಣಕರ…

Read More