Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕ್ಚೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ಹಾಗೂ ಸರ್ಕಾರಿ ಪ್ರೌಢಶಾಲೆ ಅರಕೇರಿ ಇವರ ತರಗತಿಯ ಮಕ್ಕಳಿಗೆ ಸಂಯೋಗದಲ್ಲಿ ಸನ್ 2024-25ನೇ ಸಾಲಿನಲ್ಲಿ ಓದುತ್ತಿರುವ ಹತ್ತನೆಯ ಟಾರ್ಗೆಟ್-625 ಎಂಬ ಕಾರ್ಯಕ್ರಮವನ್ನು ಶನಿವಾರ ಸರ್ಕಾರಿ ಪ್ರೌಢಶಾಲೆ ಅರಕೇರಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢ ಶಾಲೆ, ಅಮೋಘ ಸಿದ್ಧ ಪ್ರೌಢಶಾಲೆ ಜಾಲಗೇರಿ, ಜ್ಞಾನಜ್ಯೋತಿ ಪ್ರೌಢಶಾಲೆ ಅರಕೇರಿ, ಸರ್ಕಾರಿ ಪ್ರೌಢಶಾಲೆ ಯತ್ನಾಳ, ಶ್ರೀ ಸದ್ಗುರು ಭೀಮದಾಸ ಮಹಾರಾಜ್ ಪ್ರೌಢಶಾಲೆ ಶಿರನಾಳ, ಸರ್ಕಾರಿ ಪ್ರೌಢಶಾಲೆ ಇಟ್ಟಂಗಿಹಾಳ, ನೊಬೆಲ್ ವಿಷನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಟ್ಟಂಗಿಹಾಳ ದೊಡ್ಡಿ, ರಾಜೇಶ್ವರ ಪ್ರೌಢಶಾಲೆ ತಲಾ ಐದೈದು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಜಿ.ಟಿಕಾಗವಾಡ (ಇಸಿಒ) ರವರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿರುವ ಶಾಲೆಯ ಮಾನ್ಯ ಮುಖ್ಯೋಪಾಧ್ಯಾಯರಾಗಂಟೆಯವಿ. ಮುಲ್ಲಾ ರವರು ಮಾತನಾಡುತ್ತಾ” ಈ ಒಂದು ಕಾರ್ಯಕ್ರಮದ ಸದ್ಬಳಕೆಯನ್ನು ಬಂದಿರುವ ತಾವೆಲ್ಲರೂ ಬಳಸಿಕೊಳ್ಳಬೇಕು. ಈ ಸಲ 625ಕ್ಕೆ 625 ಅಂಕಗಳನ್ನು ನೀವೆಲ್ಲರೂ ಖಂಡಿತ ಗೆದುಕೊಳ್ಳುವಂತಹ ಮನಸ್ಥಿತಿಯನ್ನು ರೂಪಿಸಿಕೊಳ್ಳಬೇಕು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು, ತಾಳ್ಮೆ, ಸೇವಾ ಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ. ಇಂದಿನ ಮಕ್ಕಳು ಅತ್ಯುತ್ತಮ ಕಲಿಕೆ ಮೂಲಕ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಕೆಲವು ದುಶ್ಚಟಗಳ ಮೂಲಕ ಭವಿಷ್ಯಕ್ಕೆ ಸಂಚಕಾರ ತರಿಸಿಕೊಳ್ಳುತ್ತಿದ್ದಾರೆ. ಸೇವಾದಳದ ಮೂಲಕ ದೇಶಪ್ರೇಮ, ಭಕ್ತಿ ಸೇವೆ ಮನೋಭಾವ ಮೂಡಿಸಿದರೆ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದು ಚಡಚಣ ಕ್ಷೇತ್ರ ಶಿಕ್ಷಣ ಅಧಿಕಾರಿ ಸುಜಾತಾ ಹುನ್ನೂರು‌ ಹೇಳಿದರು.ಶಿಸ್ತು, ದೇಶಪ್ರೇಮ, ಭಾವೈಕ್ಯ ಮೂಡಿಸುವುದೇ ಭಾರತ ಸೇವಾದಳ, ಸುಜಾತಾ ಹುನ್ನೂರ ಕ್ಷೇತ್ರ ಶಿಕ್ಪ್ಷಣಾಧಿಕಾರಿ ಚಡಚಣ ರವರ ಅಭಿಮತತಾಲ್ಲೂಕಿನ ಅರ್ಜನಾಳ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ೬ ನೇ ದಿನದ ಭಾರತ ಸೇವಾದಳದ ಶಿಬಿರದ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.ಭಾರತ ಸೇವಾದಳ ಉದ್ದೇಶ ಶಿಕ್ಷಣ, ಆರೋಗ್ಯ, ವಿಪತ್ತು ಕ್ಷೇತ್ರದಲ್ಲಿ ಸಾಧನೆ ಮಾಡಲು ಸಹಕಾರ ನೀಡುತ್ತದೆ. ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಶಿಬಿರದಲ್ಲಿ ಕಲಿತ ಭೊಧನೆ, ಶಿಸ್ತು, ಕಠಿಣ ಪರಿಶ್ರಮ, ಸ್ಪೂರ್ತಿಯನ್ನು ಮಕ್ಕಳಿಗೆ ಕಲಿಸಬೇಕು. ಇಂದಿನ ಸಮಾಜದಲ್ಲಿ ದೇಶಪ್ರೇಮ ಕಡಿಮೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜೀವನದಲ್ಲಿ ನಾವು ಎಲ್ಲರ ಋಣ ತೀರಿಸಲು ಸಾಧ್ಯವಿದೆ. ಗುರು ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ, ಆದರೆ ಶ್ರೀ ಸಿದ್ದೇಶ್ವರ ಶ್ರೀಗಳು ಕೇವಲ ಗುರುವಲ್ಲ ಜತೆಗೆ ಪ್ರತಿಯೊಬ್ಬರಿಗೂ ತಾಯಿಯ ಮಾತೃವಾತ್ಸಲ್ಯ ತೋರಿದ ಮಹಾನ ಸಂತ ಎಂದು ಬೀದರ ಭಾಲ್ಕಿ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಬಸವಲಿಂಗ ಪಟ್ಟದೇವರು ಹೇಳಿದರು.ತಾಲೂಕಿನ ಅಥರ್ಗಾ ಗ್ರಾಮದ ಗುರುದೇವಾಶ್ರಮದಲ್ಲಿ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳ ಗುರುವಂದನಾ ಮತ್ತು ಮಾತೃ ಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದರು.ಆನ್ಮ ನೀಡಿದ ತಾಯಿ, ಭೂ ತಾಯಿ, ನಾಡು ತಾಯಿ, ನುಡಿ ತಾಯಿ, ಜಲ ತಾಯಿ, ನಿಸರ್ಗ ತಾಯಿ ಹೀಗೆ ತಾಯಿಯನ್ನು ಕಾಣುತ್ತೇವೆ ಎಂದು ತಮ್ಮ ಪ್ರವಚನದಲ್ಲಿ ಹೇಳುತ್ತಿದ್ದ ಶ್ರೀಗಳು ಸ್ವಾಮಿ ವಿವೇಕಾನಂದ, ಶಿವಾಜಿ, ಭಗತಸಿಂಗ ಮೊದಲಾದವರಿಗೆ ತಾಯಿಯೇ ಪ್ರೇರಣೆಯಾಗಿದ್ದರು. ಹೀಗಾಗಿ ನಾವು ತಾಯಿಯ ಋಣ ತೀರಿಸಲು ಸಾದ್ಯವಿಲ್ಲ ಎಂದು ಶ್ರೀಗಳು ಹೇಳುತ್ತಿದ್ದುದು ಅಷ್ಟೇ ನೈಜವಿದೆ ಎಂದರು.ಇಳಕಲ್ಲ ಚಿತ್ತರಗಿ ಶ್ರೀ ವಿಜಯ ಮಹಾಂತೇಶ ಸಂಸ್ಥಾನಮಠದ ಗುರು ಮಹಾಂತ ಶ್ರೀಗಳು ಮಾತನಾಡಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ದೈಹಿಕ ಶಿಕ್ಷಕರ ಸೇವೆ ಅಮೂಲ್ಯ. ವಿದ್ಯಾರ್ಥಿಗಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ಸಾಕಷ್ಟು ಶ್ರಮಿಸುವವರು ದೈಹಿಕ ಶಿಕ್ಷಕರು ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಹೇಳಿದರು.ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೈಹಿಕ ಶಿಕ್ಷಕರಾದ ಎ.ಸಿ.ಕೆರೂರ, ಎಸ್.ಆರ್.ಸುಲ್ಪಿ, ವಿ.ಎಸ್.ತೆಗ್ಗಿ, ಎಲ್.ಎಂ.ಜೋಗಿ, ಎಂ.ಎಸ್.ನಾಟೆಕಾರ, ರುದ್ರಮ್ಮ ಟಕ್ಕಳಕಿ, ಶ್ರೀಶೈಲ್ ಅಂಗಡಿ, ವಿ.ಜಿ.ನಾಗರಾಳ, ಎಚ್.ವಾಯ್.ತೋಳಮಟ್ಟಿ, ಬಾಲಚಂದ್ರ ಮೇಟಿ, ಎಸ್.ಪಿ.ಹಂಡರಗಲ್ಲ ಇವರಿಗೆ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶಾಲೆಯ ಮುಖ್ಯೋಪದ್ಯಾಯ ಅನಿಲ ರಾಠೋಡ, ಎಸ್.ಎಸ್.ಲಮಾಣಿ, ಬಸಯ್ಯ ಹಿರೇಮಠ, ಪ್ರಾಣೇಶ ಯಾದವ ಇದ್ದರು. ಸಂಗಮೇಶ ಸಜ್ಜನ, ಎಂ.ಎಸ್.ಬಿರಾದಾರ, ಗುರು ಸಾಲಿಮಠ, ಚಂದ್ರು ಮನಗೂಳಿ ಕಾರ್ಯಕ್ರಮ ನಿರ್ವಹಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜಯ ಕರ್ನಾಟಕ ಸಂಘಟನೆ ಸಿಂದಗಿ ತಾಲುಕಾ ಘಟಕದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು.ಈ ವೇಳೆ ಅಧ್ಯಕ್ಷತೆಯನ್ನು ಜಿಲ್ಲಾ ವಕ್ತಾರ ಚನ್ನಪ್ಪಗೌಡ ಎಸ್. ಬಿರಾದಾರ ವಹಿಸಿದ್ದರು.ತಾಲೂಕಾಧ್ಯಕ್ಷ ಸಂತೋಷ ಮನಗೂಳಿ, ಸಿದ್ರಾಮಪ್ಪ ಅವಟಿ, ರಮೇಶ ರಾಥೋಡ್, ನಾಗಣ್ಣ ಪಡೆಕನೂರು, ಭಿಮಾನಗೌಡ ಬಿರಾದಾರ, ಅಣ್ಣಾರಾಯ ವಾಲೀಕಾರ, ಮಹಾಂತೇಶ್ ನಾಗೋಜಿ, ಸಿದ್ದನಗೌಡ ಬಿರಾದಾರ, ಅಶೋಕ ಪಾಟೀಲ, ಬಸವರಾಜ ಅಲ್ಲಾಪುರ, ಶಿವಪುತ್ರ ಮಲ್ಲೇದ, ವಿನೋದ ಚಬನೂರ, ಶಂಕರಲಿಂಗ ಬಿರಾದಾರ, ಸಂಗಮೇಶ ಇಜೇರಿ ಸೇರಿದಂತೆ ಅನೇಕರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಂಚಾಯತ್‌ರಾಜ ವ್ಯವಸ್ಥೆಯಲ್ಲಿ ಗಣಕಯಂತ್ರ ನಿರ್ವಾಹಕರ ಕೊಡುಗೆ ಅಪಾರ. ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ತಂತ್ರಜ್ಞಾನದ ನೆರವಿನೊಂದಿಗೆ ಗಣಕಯಂತ್ರ ನಿರ್ವಾಹಕರ ಕೆಲಸದಿಂದ ಸಾಕಷ್ಟು ಪ್ರಗತಿ ಸಾಧಿಸಲಿದೆ ಎಂದು ತಾಪಂ ಇಒ ರಾಮು ಅಗ್ನಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಗಣಕ ಯಂತ್ರ ಪಿತಾಮಹ ಚಾರ್ಲ್ಸ್ ಬ್ಯಾಬೇಜ್‌ರವರ ಜನ್ಮ ದಿನೋತ್ಸವವನ್ನು ಕರ್ನಾಟಕ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶದಂತೆ ಕಂಪ್ಯೂಟರ್ ಆಪರೇಟರ್ ದಿವಸ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೧೮-೧೯ನೇ ಶತಮಾನದಲ್ಲಿ ವಿಜ್ಞಾನಿ, ಗಣಿತ ತಜ್ಞ, ತತ್ವಶಾಸ್ತ್ರಜ್ಞರಾದ ಚಾರ್ಲ್ಸ್ ಬ್ಯಾಬೇಜ್‌ರವರು ಯುದ್ಧದ ಸಂದರ್ಭದಲ್ಲಿ ಯುದ್ಧ ಸಾಮಗ್ರಿ ಸಲಕರಣೆಗಳನ್ನು ಲೆಕ್ಕ ಪತ್ರ ಇಡಲು ತೊಂದರೆಯಾದ ಸಮಯದಲ್ಲಿ ಅವಿಸ್ಕರಿಸಿದ ತಂತ್ರವೇ ಗಣಕಯಂತ್ರ ಅದುವೇ ಇಂದಿನ ನಮ್ಮ ಇಲಾಖೆಯಲ್ಲಿ ಬಳಸಲು ಅನುಕೂಲವಾಗಿದೆ.ಈ ವೇಳೆ ದೇವರ ಹಿಪ್ಪರಗಿ, ಆಲಮೇಲ ಮತ್ತು ಸಿಂದಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗಣಕಯಂತ್ರ ನಿರ್ವಾಹಕರು ಸೇವಾ ಭದ್ರತೆ, ಕೆಲಸಕ್ಕೆ ತಕ್ಕಂತೆ ಸಂಬಳ ನೀಡುವಂತೆ ನೀಡಬೇಕು. ಹಾಗೂ ಹೆಚ್ಚುವರಿ ಕೆಲಸ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಕ್ಕಳ, ಯುವಜನಾಂಗದ ಮನಸ್ಸನ್ನು ವಿಕಸನಗೊಳಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ೧೨ ನೇ ಶತಮಾನದ ಬಸವಾದಿ ಶರಣರು ರಚಿಸಿದ ವಚನಗಳು ಮಾರ್ಗದರ್ಶಿಯಾಗಿವೆ ಎಂದು ನರಸಲಗಿಯ ಎಸ್.ಡಿ.ಎಸ್.ಬಿ.ಸಂಯುಕ್ತ ಪಪೂ ಕಾಲೇಜಿನ ಪ್ರಾಚಾರ್ಯ ಎ.ಎಂ.ನರಸರಡ್ಡಿ ಹೇಳಿದರು.ತಾಲೂಕಿನ ನರಲಸಗಿ ಗ್ರಾಮದ ಎಂ.ಡಿ.ಎಸ್.ಬಿ. ಸಂಯುಕ್ತ ಪಪೂ ಕಾಲೇಜಿನಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಲಿಂ.ಸಿದ್ರಾಮಪ್ಪ ನಾಗಪ್ಪ ಕನ್ನೂರ, ಲಿಂ. ಸೋಮಪ್ಪ ಶಿವಪ್ಪ ಹೆಬ್ಬಾಳ, ಲಿಂ.ಮನೋಹರ ತವನಪ್ಪ ದಂಡಾವತಿ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರು ರಚಿಸಿರುವ ವಚನಗಳ ಅರ್ಥಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಜೀವನವನ್ನು ಪಾವನಗೊಳಿಸಬೇಕಿದೆ. ನಾಡಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಶರಣರ ಸಾಹಿತ್ಯವನ್ನು ಪ್ರಸರಣ ಮಾಡುವಲ್ಲಿ ತನ್ನ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು.ಡಾ.ಫ.ಗು.ಹಳಕಟ್ಟಿ ಕುರಿತು ಅರುಂಧತಿ ಹತ್ತಿಕಾಳ ಮಾತನಾಡಿ, ಫ.ಗು.ಹಳಕಟ್ಟಿ ಅವರು ವಚನಗಳ ಸಂಗ್ರಹಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಡುವ ಮೂಲಕ ವಚನಗಳ ಸಂಗ್ರಹ ಮಾಡಿ ಅವುಗಳ ಸಂರಕ್ಷಣೆ ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ.…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ 420 ರಿಂದ 450 ಜನರು ಸಾವಿಗಿಡಾಗಿದ್ದಾರೆ. 1350 ರಿಂದ 1400 ಜನರು ಗಾಯಗೊಂಡಿದ್ದಾರೆ. ಪ್ರತಿಯೊಬ್ಬರೂ ರಸ್ತಾ ಸುರಕ್ಷತಾ ನಿಯಮಗಳನ್ನು ವಾಹನ ಚಲಾಯಿಸಿದರೆ ಇಂತಹ ಅನಾಹುತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ನಂತರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮ ಅರಿತುಕೊಳ್ಳಬೇಕು, ವಾಹನಗಳನ್ನು ವೇಗವಾಗಿ ಚಾಲನೆ ಮಾಡಬಾರದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ನಡೆದುಕೊಂಡು ಹೋಗುವವರು ಪಾದಚಾರಿ ರಸ್ತೆಯಲ್ಲಿ ಹೋಗುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ವಿದ್ಯಾರ್ಥಿನಿಯರಿಗೆ ಯಾರಾದರೂ ತೊಂದರೆ ಕೊಟ್ಟರೆ 112 ಸಂಖ್ಯೆಗೆ ಕರೆಮಾಡುವ ಮೂಲಕ ಪೊಲೀಸ್ ಇಲಾಖೆಯ ನೆರವು ಪಡೆದುಕೊಳ್ಳಬೇಕೆಂದರು.ಡಿ.ವೈ.ಎಸ್.ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಪಾಲಕರು 18 ವರ್ಷದೊಳಗಿನ ಮಕ್ಕಳಿಗೆ ಬೈಕ್ ಇತರೆ ವಾಹನ ಚಾಲನೆ ಮಾಡದಂತೆ ನೋಡಿಕೊಳ್ಳಬೇಕು.…

Read More

ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ ನೀಡಿದ ಸಚಿವ ಶಿವಾನಂದ ಪಾಟೀಲ ಅಬಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಮಿನಿವಿಧಾನಸೌಧದ ಮೇಲಂಸ್ತಿನ ಕೋಣೆಯಲ್ಲಿ ತಾಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಶನಿವಾರ ಚಾಲನೆ ನೀಡಿದರು.ಸಚಿವ ಶಿವಾನಂದ ಪಾಟೀಲ ಮಾತನಾಡಿ, ಭೂಸುರಕ್ಷಾ ಯೋಜನೆಯು ರಾಜ್ಯದ ಕಂದಾಯ ಇಲಾಖೆಯು ಕೈಗೊಂಡಿರುವ ಒಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯಡಿ ತಾಲೂಕು ಕಚೇರಿಯ ಅಭಿಲೇಖಾಲಯಗಳಲ್ಲಿರುವ ಅತ್ಯಂತ ಪ್ರಮುಖವಾದ ಹಳೆಯ ಮತ್ತು ಸ್ವಾತಂತ್ರ್ಯಪೂರ್ವದ ಅವಧಿಯ ಭೂ ದಾಖಲೆಗಳನ್ನು ಇಂಡೆಕ್ಸಿಂಗ್,ಕ್ಯಾಟಲಾಗಿಂಗ್, ಸ್ಕ್ಯಾನಿಂಗ್ ಮತ್ತ ಅಪ್‌ಲೋಡಿಂಗ್ ಮಾಡಿ ಗಣಕೀಕರಣಗೊಳಿಸಲಾಗುತ್ತಿದೆ. ಹಳೆಯ ಶಿಥಿಲಗೊಂಡ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ರೂಪದಲ್ಲಿ ಉಳಿಸಿಕೊಳ್ಳಲು ನಕಲಿ ದಾಖಲೆಗಳ ಸೃಷ್ಟಿಯನ್ನು ತಡೆಗಟ್ಟಲು ಮತ್ತು ಅವುಗಳನ್ನು ಅನ್‌ಲೈನ್‌ನಲ್ಲಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಭೂ ಸುರಕ್ಷಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.ಡಿಜಿಟಲೀಕರಣದಿಂದ ಅಭಿಲೇಖಾಲಯದ ಸಿಬ್ಬಂದಿಗಳನ್ನು ಸಂಪರ್ಕಿಸಿ ದಾಖಲೆಗಳನ್ನು ಪಡೆಯುವುದು ತಪ್ಪುತ್ತದೆ. ದಾಖಲೆಗಳ ವ್ಯತ್ಯಾಸ ರೆಕಾರ್ಡ್…

Read More

ವಿಜಯಪುರದಲ್ಲಿ ಕೃಷಿ ಮೇಳ ೨೦೨೪-೨೫ ಉದ್ಘಾಟಿಸಿದ ಸಚಿವ ಎಂ.ಬಿ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮಗಳ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶವು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ ಹೇಳಿದರು.ಶನಿವಾರ ನಗರದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಹಾರ ಮತ್ತು ಪೌಷ್ಠಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಎಂಬ ಶಿರ್ಷಿಕೆಯೊಂದಿಗೆ ಕೃಷಿ ಮೇಳ ೨೦೨೪-೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸುಮಾರು ೧೪ ಸಾವಿರ ಕೋಟಿ ರೂಗಳನ್ನು ವ್ಯಯಿಸಿ ಜಿಲ್ಲೆಯ ಬಹುತೇಕ ಭೂಮಿಯನ್ನು ನೀರಾವರಿಗೆ ಒಳಪಡಿಸಿದ್ದೇವೆ. ಜಿಲ್ಲೆಯಲ್ಲಿರುವ ಕರೆಗಳನ್ನು ತುಂಬಿಸಿ ಭೂಮಿಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿ ಬೋರವೆಲ್ ಹಾಗೂ ಬಾವಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ಕಾಣಹುದಾಗಿದೆ. ಇದರಿಂದ ಜಿಲ್ಲೆಯಲ್ಲಿ ೧೦ ಕಾರ್ಖಾನೆಗಳು ನಡೆಯುವಷ್ಟು ಕಬ್ಬನ್ನು ಜಿಲ್ಲೆಯ ರೈತರು ಬೆಳೆಯುತ್ತಿದ್ದಾರೆ. ಜಿಲ್ಲೆಯು ನೀರಾವರಿಗೆ ಒಳ ಪಟ್ಟನಂತರ ಕೃಷಿ…

Read More