Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರಣಾಸಿಯಲ್ಲಿ ರಾಷ್ಟ್ರಮಟ್ಟದ ಯುಗ ದರ್ಶಿನಿ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚಿಗೆ ಜರುಗಿತು.ಈ ಸಂದರ್ಭದಲ್ಲಿ ನಗರದ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಧಾ ರಬಿನಾಳ, ನ್ಯಾಯವಾದಿ ಶ್ರೀಶೈಲ ಗಬ್ಬೂರ ಇವರಿಗೆ ಕಾಶಿಯಲ್ಲಿ ರಾಷ್ಟ್ರಮಟ್ಟದ ಯುಗದರ್ಶಿನಿ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ವಾರಣಾಸಿ ಬನಾರಸ (ಕಾಶಿ) ಹಿಂದೂ ವಿಶ್ವವಿದ್ಯಾಲಯದಲ್ಲಿ ಅಖಿಲ ಭಾರತ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಪಶು ಸಂಗೋಪನ ಸಚಿವೆ ರೇಣುದೇವಿ ಹಾಗೂ ಇದರ ಮುಖ್ಯಸ್ಥೆ, ಸಾಹಿತಿ ಡಾ.ಸರಸ್ವತಿ ಚಿಮ್ಮಲಗಿ, ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ, ಚಲನಚಿತ್ರ ನಟಿ ಪ್ರೇಮಾ, ಚೇತನಾ ಪೂಜಾರಿ, ವಿಜಯ ಪೂಜಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.ಪ್ರಶಸ್ತಿ ಪುರಸ್ಕೃತರಿಗೆ ಮಹಾನಗರ ಪಾಲಿಕೆ ಸದಸ್ಯ ಕುಮಾರ ಗಡಗಿ, ವೀರಶೈವ ಲಿಂಗಾಯತ ಸೇವಾ ಟ್ರಸ್ಟ್ ಉಪಾಧ್ಯಕ್ಷ ಚನಬಸಯ್ಯ ಹಿರೇಮಠ, ಈಶ್ವರ ಹೂಗಾರ, ಸಾಯಿಬಣ್ಣ ಕಮತಗಿ, ಆರ್.ಎಸ್. ವಾಲೀಕಾರ, ಎಂ.ಐ.ಬಿರಾದಾರ, ಸಿದ್ದು ಇಜೇರಿ, ಪ್ರದೀಮ ಮಸ್ಕಿನ, ಬಳ್ಳೂರ ಸರ್ ಹಾಗೂ ನವಲಿ ಸರ್ ಇತರರು ಅಭಿನಂದಿಸಿದ್ದಾರೆ. ಆಪ್ತ ಸ್ನೇಹಿತೆಯರ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಓರ್ವ ಸಾವಿಗೀಡಾದ ದುರ್ಘಟನೆ ಜರುಗಿದೆ.ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರ ಬಸವೇಶ್ವರ ಸಕ್ಕರೆ ಕಾರ್ಖಾನೆ ಸಮೀಪದ ತಾಲೂಕಿನ ಮುಳವಾಡ ತಾಂಡಾ ಕ್ರಾಸ್ ಹತ್ತಿರ ಶುಕ್ರವಾರ ಬೆಳಗಿನ ಜಾವ ಅಶೋಕ್ ಲೈಲ್ಯಾಂಡ ಗೂಡ್ಸ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೊಣ್ಣಾಗರ ಗ್ರಾಮದ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದ ಚಾಲಕ ರವಿ ಮಹದೇವಪ್ಪ ಮಾದರ (25) ಮೃತಪಟ್ಟಿದ್ದಾನೆ.ಮನಗೂಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸ್ಥಾವರದಲ್ಲಿ ಕಾರ್ಯ ನಿರ್ವಹಿಸುವ ಮಹಿಳೆಯರ ಅಭ್ಯುದಯಕ್ಕಾಗಿ ನಮ್ಮ ಸಂಘಟನೆಯ ಅಳಿಲು ಸೇವೆ ಸದಾಕಾಲವೂ ಇರಲಿದೆ ಎಂದು ಎನ್ಟಿಪಿಸಿ ಮಿಥಾಲಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಅಂಜು ಝಾ ಹೇಳಿದರು.ತಾಲೂಕಿನ ಕೂಡಗಿ ಎನ್ಟಿಪಿಸಿ ಮಿಥಾಲಿ ಮಹಿಳಾ ಸಂಘಟನೆಯ ವತಿಯಿಂದ ೫೦ ಮಹಿಳೆಯರಿಗೆ ಟ್ರಾಲಿ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬ್ಯಾಗ್ ವಿತರಣೆಯ ಜತೆಗೆ ಎನ್ಟಿಪಿಸಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಮಹಿಳೆಯರಿಗೆ ಆಹಾರದ ಪೊಟ್ಟಣವನ್ನೂ ನೀಡಲಾಗಿದೆ. ಇದಲ್ಲದೇ ಈ ಹಿಂದೆ ಎನ್ಟಿಪಿಸಿ ವ್ಯಾಪ್ತಿಯ ೩೫ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ೧೫ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಗುರಿ ಸಾಧಿಸಲು ವಿದ್ಯಾರ್ಥಿ ವೇತನವನ್ನೂ ನಾವು ನೀಡಿದ್ದೇವೆ ಎಂದರು.ಈ ವೇಳೆ ಸಂಘಟನೆಯ ಉಪಾಧ್ಯಕ್ಷೆ ಪದ್ಮಾಲಯ ಹೋಟಾ, ಸದಸ್ಯರಾದ ಪೂಜಾ ಪಾಂಡೆ, ಅಲ್ಕಾ ಜೈನ್, ಸುಧಾ ಶ್ರೀನಿವಾಸ ಮತ್ತಿತರರು ಸದಸ್ಯರು ಇದ್ದರು.
ಭೂಮಾಲೀಕರೊಂದಿಗೆ ಚರ್ಚಿಸಿ ಕ್ರಮದ ಭರವಸೆ ನೀಡಿರುವ ಸರ್ಕಾರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲ್ಲೂಕಿನ ಅಲಿಯಾಬಾದ, ಮದಬಾವಿ ಮತ್ತು ಬುರಣಾಪುರ ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ 1,870 ಎಕರೆ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು, ಎಲ್ಲಾ ಭೂಮಾಲೀಕರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಅಗತ್ಯವಿದ್ದಲ್ಲಿ ಮನವೊಲಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.ಈಚೆಗೆ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ನಿಯಮ 73 ರ ಅಡಿಯಲ್ಲಿ ಗಮನಸೆಳೆಯುವ ಸೂಚನೆಯಲ್ಲಿ, ವಿಜಯಪುರ ವಿಮಾನ ನಿಲ್ದಾಣ ಯೋಜನೆಗಾಗಿ 3ನೇ ಹಂತದಲ್ಲಿ ಹೆಚ್ಚುವರಿಯಾಗಿ 1,870 ಎಕರೆ ಜಮೀನನ್ನು ಸರ್ಕಾರದ ಪ್ರಾಥಮಿಕ ಅಧಿಸೂಚನೆಯಡಿ ಭೂಸ್ವಾಧೀನಪಡಿಸಿಕೊಳ್ಳಲು, 2010ರಲ್ಲಿ ರೈತರಿಗೆ 28 (1) ರಡಿ ನೋಟಿಸ್ ನೀಡಿ, ಕಲಂ (3) ರಡಿ ಆಕ್ಷೇಪಣೆಗಳ ವಿಚಾರಣಾ ನೋಟಿಸ್ ಜಾರಿ ಮಾಡಿ 14 ವರ್ಷವಾದರೂ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಪರಿಹಾರ ನೀಡಿರುವುದಿಲ್ಲ.ಭೂಸ್ವಾಧೀನ್ ಕಾರ್ಯ ಅಗತ್ಯವಿದ್ದರೂ ಕೂಡ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಕೃಷಿ ಚಟುವಟಿಕೆ ಇಲ್ಲದೆ, ಬ್ಯಾಂಕ್ ಸಾಲ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಗರದ ತಾಲೂಕು ಕಚೇರಿಯಲ್ಲಿ ಅಭಿಲೇಖಾಲಯದಲ್ಲಿನ ದಾಖಲೆಗಳು ಮತ್ತು ಸರ್ವೇ ದಾಖಲೆಗಳ ಡಿಜಿಟಲೀಕರಣದ ಭೂ ಸುರಕ್ಷಾ ಯೋಜನೆಗೆ ಶುಕ್ರವಾರ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಚಾಲನೆ ನೀಡಿದರು..ಬಳಿಕ ಮಾತನಾಡಿದ ಅವರು, ರೈತರು ತಮ್ಮ ಭೂ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು ತಹಸೀಲ್ದಾರ ಕಚೇರಿಗೆ ಅಲೆದಾಡಿದರೂ ದಾಖಲೆಗಳು ದೊರೆಯುತ್ತಿರಲಿಲ್ಲ. ೪೦-೫೦ ವರ್ಷದ ಹಳೆಯ ಭೂ ದಾಖಲೆಗಳ ಪತ್ರದ ಕಾಗದ ಹಳೆಯದಾಗಿ ಹರಿದು ಹೋಗಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿತ್ತು. ಇದನ್ನು ಚಿಂತಿಸಿ ಸರಕಾರ ಮುಂದಾಗಿದೆ ಎಂದು ತಿಳಿಸಿದರು.ಭೂ ಸುರಕ್ಷಾ ಎಂಬ ಅಪ್ಲಿಕೇಶನ್ ನಲ್ಲಿ ನಿಮ್ಮ ಭೂ ದಾಖಲೆಯ ಸಂಖ್ಯೆಯನ್ನು ನೀಡಿದರೆ ಸಾಕು ಒಂದು ನಿಮಿಷದಲ್ಲಿ ನಿಮ್ಮ ಭೂ ದಾಖಲೆ ಪತ್ರಗಳನ್ನು ನೀಡುವ ಕ್ರಾಂತಿಕಾರಿ ಯೋಜನೆಯನ್ನು ಸರಕಾರ ಮಾಡಿದೆ. ಇಂದು ಡಿಜಟಲೀಕರಣ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿರುವದು ಸಂತಸದ ವಿಷಯ. ಈ ಯೋಜನೆಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಅವರಿಗೆ ಬೇಕಾದ ಸಮಯದಲ್ಲಿ ದಾಖಲೆಗಳ ಪ್ರಿಂಟ್ ಗಳನ್ನು ಕೊಡಬಹುದು ಎಂದರು.ರೈತರಿಗೆ ಸಮಸ್ಯೆಗಳನ್ನು ಪರಿಹರಿಸಲು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಪುರಸಭೆಗೆ ಸಂಗೀತಾ ಕರಕಟ್ಟಿ ಇವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಭೀಮನಗೌಡ ಪಾಟೀಲ, ರೇಖಾ ಮೂರಮನ, ಶಬ್ಬಿರ ಖಾಜಿ, ಅಯೂಬ ಬಾಗವಾನ, ದೇವೆಂದ್ರ ಕುಂಬಾರ,ಸಂಗೀತಾ ಕರಕಟ್ಟಿ, ಭಾಗಿರಥಿ ಕುಂಬಾರ, ಮುಸ್ತಾಕ ಅಹಮ್ಮದ ಇಂಡಿಕರ, ಅಸ್ಲಂ ಕಡಣಿ, ಉಮೇಶ ದೇಗಿನಾಳ, ಕವಿತಾ ರಾಠೋಡ ಸದಸ್ಯರಾಗಿ ಆಯ್ಕೆ ಯಾಗಿದ್ದಾರೆ.ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಜಹಾಂಗೀರ ಸೌದಾಗರ ಮತ್ತು ಸ್ಥಾಯಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಅಭಿಮತ ಉದಯರಶ್ಮಿ ದಿನಪತ್ರಿಕೆ ಹೊನವಾಡ: ಭಾರತೀಯರಾದ ನಾವು ಬಹುದೊಡ್ಡ ಸಂಸ್ಕೃತಿಯ ವಾರಸುದಾರರಾಗಿದ್ದೇವೆ ಎಂದು ಕೊಲ್ಲಾಪುರದ ಸಿದ್ಧಗಿರಿ ಸಂಸ್ಥಾನ ಮಠ ಕನ್ಹೆರಿಯ ಜಗದ್ಗುರು ಅದೃಷ್ಟ ಕಾಡಸಿದ್ದೇಶ್ವರ ಸ್ವಾಮಿಗಳು ಮಾತನಾಡಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ಪ್ರಥಮ ಫೌಂಡೇಶನ್ ವತಿಯಿಂದ ಜ್ಞಾನಯೋಗಿ ಪರಮಪೂಜ್ಯ ಸಿದ್ದೇಶ್ವರ ಮಹಾಸ್ವಾಮಿಗಳ ನುಡಿ ನಮನ ಕಾರ್ಯಕ್ರಮ ಹಾಗೂ ಪೊನ್ನಂಬಾಡು ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.ಕೃಷಿ-ಋಷಿ ಪರಂಪರೆಯನ್ನು ಸಮನ್ವಯಗೊಳಿಸಿದ ಅನರ್ಘ್ಯ ಸಂತ. ಸಿದ್ಧೇಶ್ವರ ಶ್ರೀಗಳ ಜೀವನವೇ ಶ್ರೇಷ್ಠ ಮಾದರಿ ಮಾರ್ಗ ಎಂದು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಮಾತನಾಡಿದರು.ನುಡಿದಂತೆ ನಡೆದ ಸರಳತೆಯ ಸಂತರಾಗಿದ್ದ ಸಿದ್ಧೇಶ್ವರ ಕೇವಲ ತಮ್ಮ ನಡೆ, ನುಡಿಗಳಿಂದಲೇ ಜಗತ್ತಿನ ಆಕರ್ಷಣೆಯಾಗಿದ್ದ ಸಿದ್ಧೇಶ್ವರರು ಕೋಟ್ಯಂತರ ಭಕ್ತರ ಹೃದಯ ಗೆದ್ದ ಬಹು ದೊಡ್ಡ ಸಂತ ಎನಿಸಿದ್ದರು ಎಂದು ಹೊನವಾಡದ ಬಾಬುರಾವ ಮಹಾರಾಜರು ಪ್ರಾಸ್ತಾವಿಕವಾಗಿ ಮಾತನಾಡಿದರುಇದೆ ಸಂದರ್ಭದಲ್ಲಿ ಪ್ರಥಮ ಫೌಂಡೇಶನ್ ಕೊಡ ಮಾಡಲ್ಪಡುವ ಪ್ರಶಸ್ತಿಗಳನ್ನು ನೀಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಟಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ ನೇ ಜಾತ್ರಾಮಹೋತ್ಸವದ ನಿಮಿತ್ತ ಜ.೧೨ರಿಂದ ಜ.೨೨ವರೆಗೆ ಶ್ರೀ ರೇವಣಸಿದ್ದೇಶ್ವರ ಮಹಾಪುರಾಣ ಪ್ರವಚನ ಕಾರ್ಯಕ್ರಮ ಪ್ರಾರಂಭೋತ್ಸವ ಹಾಗೂ ಜ.೨೩ರಂದು ಬೆಳಿಗ್ಗೆ ೯ ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳ ಭವ್ಯ ಮೆರವಣಿಗೆ ಮತ್ತು ಬೆಳಿಗ್ಗೆ ೧೧.೩೦ ಗಂಟೆಗೆ ಧರ್ಮಸಭೆ ನಡೆಯಲಿದೆ ಕಾರಣ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಕರೆ ನೀಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಶ್ರೀಗಳು, ಜ.೧೨ರಿಂದ ಜ.೨೨ರವರೆಗೆ ಸಂಜೆ ೬.೩೦ ಗಂಟೆಗೆ ಶ್ರೀಮಠದ ಆವರಣದಲ್ಲಿ ಶ್ರೀ ರೇವಣಸಿದ್ದೇಶ್ವರರ ಮಹಾಪುರಾಣ ಪ್ರವಚನ ಕಾರ್ಯಕ್ರಮ ನಡೆಯುವುದು. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಷಣೆ ಶಿಬಿರ. ಜ.೨೨ರಂದು ರಂದು ಸಂಜೆ ಸದ್ಗುರು ಶಿವಯೋಗಿ ಡಾ.ಚಂದ್ರಶೇಖರ ಮಹಾಸ್ವಾಮಿಗಳು ಜಾಹಗೀರದಾರ ಅವರ ೫೪ನೆಯ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಮಾರುತಿ ನಗರದ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಚರಂಡಿ ತುಂಬಿ ಇಲ್ಲಿನ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿದ್ದಾರೆಎಂದು ಇಲ್ಲಿನ ನಿವಾಸಿ ಸಂಗನಗೌಡ ಪಾಟೀಲ ತಮ್ಮ ಆಕ್ರೋಶವನ್ನು ಹೊರಹಾಕಿದರು.ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಇಲ್ಲಿ ನೀರಿನ ಪೈಪೊಂದು ಒಡೆದು ಹೋಗಿ ಸುಮಾರು ದಿನಗಳಾಗಿವೆ. ಇಲ್ಲಿಂದ ಬರುವ ನೀರು ಶೇಖರಣೆಯಾಗಿ ಗಬ್ಬು ವಾಸನೆ ಬೀರುತ್ತಿದೆ. ಈ ಬಗ್ಗೆ ಯಾರೊಬ್ಬರೂ ಗಮನಹರಿಸಿಲ್ಲ. ಕೂಡಲೇ ಈ ಬಗ್ಗೆ ಸೂಕ್ತ ಶಾಶ್ವತ ಪರಿಹಾರ ಕಲ್ಪಿಸಬೇಕು. ತಪ್ಪಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.ಮತ್ತೋರ್ವ ನಿವಾಸಿ ಯಮನವ್ವ ಮಂಡಿ ಮಾತನಾಡಿ ಈ ಸಮಸ್ಯೆಯಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಬದುಕುತ್ತಿದ್ದೇವೆ. ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ತಿಳಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಪುರಸಭೆ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ ಪುಣ್ಯ ಕಟ್ಟಿಕೊಳ್ಳಬೇಕು ಎಂದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮದ ಸಮೀಪವಿರುವ ಸರ್ಕಾರಿ ಆದರ್ಶ ವಿದ್ಯಾಲಯ ಸೌಲಭ್ಯ ಒದಗಿಸಬೇಕೆಂದು ವಿದ್ಯಾಲಯದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು ಶುಕ್ರವಾರ ತಾಲೂಕು ಪಂಚಾಯಿತಿ ಇಓ, ತಹಸೀಲ್ದಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಬರೆದ ಮನವಿ ಪತ್ರಗಳನ್ನು ಆಯಾ ಇಲಾಖೆಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿದ್ಯಾಲಯದ ಎಸ್ಡಿಎಂಸಿ ಅಧ್ಯಕ್ಷ ಆನಂದ ಸಜ್ಜನ ಅವರು, ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಸುಮಾರು ೮೦೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾಲಯದಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಅಲ್ಲದೇ ವಿದ್ಯಾಲಯದ ಬಿಸಿಯೂಟ ತಯಾರಿಸಲು, ಶೌಚಾಲಯದ ಬಳಕೆಗೂ ನೀರು ಇಲ್ಲದಂತಾಗಿದೆ. ಇದು ಅಲ್ಲದೇ ವಿದ್ಯಾಲಯಕ್ಕೆ ಸರಿಯಾದ ಬಸ್ಸಿನ ಸೌಕರ್ಯ ಸರಿಯಾಗಿ ಇರದೇ ಇರುವದರಿಂದಾಗಿ ವಿದ್ಯಾರ್ಥಿಗಳು ಸಕಾಲಿಕವಾಗಿ ಬರಲು ಸಾಧ್ಯವಾಗುತ್ತಿಲ್ಲ. ವಿದ್ಯಾಲಯಕ್ಕೆ ಅನೇಕ ಸಮಸ್ಯೆಗಳಿದ್ದರೂ ತನ್ನ ಕಾರ್ಯ ಚಟುವಟಿಕೆ ನಡೆಸುತ್ತಿದೆ. ವಿದ್ಯಾಲಯದ ಸಮಸ್ಯೆಗಳ ಕುರಿತು ಸಚಿವರಿಗೆ,…
