Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವೀಣಾಂತರಂಗ ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ವೈಜ್ಞಾನಿಕ ವಿಸ್ಮಯಗಳು, ತಂತ್ರಜ್ಞಾನದ ಸುಧಾರಿತ ವಸ್ತುಗಳು ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರುವ ಇಂದಿನ ಸಮಾಜದಲ್ಲಿ ಸಾಹಿತ್ಯದ ಓದಿನ ಕುರಿತು ಜನರಲ್ಲಿ ಒಂದು ರೀತಿಯ ಅಸಡ್ಡೆಯನ್ನು ನಾವು ಕಾಣುತ್ತಿದ್ದೇವೆ. ಅಯ್ಯೋ! ಪುಸ್ತಕ ಓದುವುದಕ್ಕೆ ಸಮಯ ಎಲ್ಲಿದೆ ರೀ? ನಾವು ತುಂಬಾ ಬ್ಯುಸಿ ಎಂಬಂತೆ ತೋರಿಸಿಕೊಳ್ಳುವ ಜನರೇ ನಮ್ಮಲ್ಲಿ ಬಹಳವಾಗಿದ್ದಾರೆ. ಅರ್ಥಪೂರ್ಣವಾಗಿ ವ್ಯಸ್ತರಾಗಿದ್ದರೆ ಓಕೆ… ಸಮಯ ಸಿಗುವುದಿಲ್ಲ ಎಂದು ಹೇಳಬಹುದು. ಆದರೆ ದಿನದ 18 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಘಟಾನುಘಟಿ ಉದ್ಯಮಿಗಳು, ಆಟಗಾರರು, ಯಶಸ್ವಿ ವ್ಯಕ್ತಿಗಳು ಪುಸ್ತಕದ ಓದು ತಮ್ಮನ್ನು ಹೆಚ್ಚು ಪ್ರೇರೇಪಿಸುತ್ತದೆ ಎಂದು ಹೇಳುವುದನ್ನು ನಾವು ಅಲ್ಲಲ್ಲಿ ಕೇಳಿಯೇ ಇದ್ದೇವೆ. ಅವರಷ್ಟು ನಾವು ವ್ಯಸ್ತರಾಗಿಲ್ಲವಲ್ಲ ಎಂದು ಯೋಚಿಸಿದಾಗ ಕನಿಷ್ಠ ದಿನಕ್ಕೆ ಎರಡು ಮೂರು ಪುಟಗಳಷ್ಟಾದರೂ ಗಂಭೀರವಾದ ಓದಿನಲ್ಲಿ ತೊಡಗಿಸಿಕೊಳ್ಳುವ ಅವಶ್ಯಕತೆ ಇದೆ.ಇತ್ತೀಚೆಗೆ ಪೇಸ್ಬುಕ್ ನಲ್ಲಿ ಓರ್ವ ಹೆಣ್ಣು ಮಗಳು ತನ್ನ ಮನೆ ಕೆಲಸ ಆಫೀಸ ಕೆಲಸ, ಸಭೆ ಸಮಾರಂಭಗಳಲ್ಲಿ ಭಾಗವಹಿಸುತ್ತ…
ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಪಟ್ಟಣದ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಯಡ್ರಾಮಿಯಿಂದ ಶ್ರೀಶೈಲ ಪಾದಯಾತ್ರೆಯ ಪ್ರಥಮ ದಿನವಾದ ಬುಧವಾರದಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಚಾಲನೆ ನೀಡಿದರು.ನಂತರ ಸುಂಬಡ ಮಾರ್ಗವಾಗಿ ತೆರಳಿ, ಹಂಗರಗಾ(ಕೆ) ಗ್ರಾಮದ ಸದ್ಭಕ್ತರಾದ ಶ್ರೀ ಸಿದ್ದಣ್ಣ ಸಾಹು ಹೂಗಾರ ಅವರ ಮನೆಯಲ್ಲಿ ಎಲ್ಲ ಪಾದಯಾತ್ರಿಗಳು ಪ್ರಸಾದ ಸ್ವೀಕರಿಸಿದರು.ನಂತರ ಬಳಬಟ್ಟಿ, ಅಂಬರಖೇಡ ಮಾರ್ಗವಾಗಿ ತೆರಳಿ ಉಕ್ಕನಾಳ ಗ್ರಾಮದಲ್ಲಿ ವಾಸ್ತವ್ಯ ಮಾಡಲಾಯಿತು.ಈ ವೇಳೆ ಮಹಾನಿಂಗಪ್ಪಗೌಡ ಬಂಡೆಪ್ಪಗೌಡ್ರ, ಚಂದ್ರಶೇಖರ ಪುರಾಣಿಕ, ಎನ್.ಆರ್.ಪಾಟೀಲ, ನಾಗಣ್ಣ ಹಾಗರಗುಂಡಗಿ, ಬಸವರಾಜ ಹೂಗಾರ, ಸಿದ್ರಾಮಪ್ಪಗೌಡ ಮಾಲಿಪಾಟೀಲ, ದೇವಿಂದ್ರಪ್ಪಗೌಡ ಸರಕಾರ, ತಿಪ್ಪಣ್ಣ ಸಾಹು ಹೆಬ್ಬಾಳ, ಮಲ್ಲಿಕಾರ್ಜುನ ಹಲಕರ್ಟಿ, ಶಂಬುಲಿಂಗ ಸಾಹು ತಾಳಿಕೋಟಿ, ಇಬ್ರಾಹಿಂಸಾಬ್ ಉಸ್ತಾದ್, ರಾಜಶೇಖರ ಡಗ್ಗಾ, ರೇವಣಸಿದ್ದ ಅಂಕಲಕೋಟಿ, ಅದಾಮ, ಆನಂದ ಯತ್ನಾಳ, ಶಾಂತಗೌಡ ಜವಳಗಿ, ಚನ್ನವೀರಪ್ಪಗೌಡ ಬಂಡೆಪ್ಪಗೌಡ್ರ, ಬಸ್ಸಯ್ಯಸ್ವಾಮಿ ಹೊರಗಿನಮಠ, ಮಂಜುನಾಥ ಕುಲಕರ್ಣಿ, ನದೀಮ ಮಳ್ಳೀಕರ ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಹಿರೇಮಠಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟ್ ಜಿಲ್ಲೆಯ ಪಿಡ್ಸ್ಪೋರ್ಡ್ ಕೌನ್ಸಿಲರ್ಯಾಗಿ ಆಯ್ಕೆಯಾದ ನವೀನ ಹಾವಣ್ಣವರ ಅವರನ್ನು ಶ್ರೀಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ನವೀನ ಹಾವಣ್ಣವರ ಮೂಲತಃ ಮನಗೂಳಿ ಪಟ್ಟಣದವರು. ರೈತ ಕುಟುಂಬದಲ್ಲಿ ಜನಿಸಿದ ಇವರು ತಮ್ಮ ಕ್ರಿಯಾಶೀಲತೆಯಿಂದಾಗಿ ಇಂದು ಅಮೇರಿಕಾದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟ್ ಜಿಲ್ಲೆಯ ಪಿಡ್ಸ್ಪೋರ್ಡ್ಕ್ಕೆ ೩೩ ಮತಗಳನ್ನು ಪಡೆದು ಕೌನ್ಸಿಲರ್ಯಾಗಿ ಆಯ್ಕೆಯಾಗಿರುವದು ಮನಗೂಳಿ ಪಟ್ಟಣಕ್ಕೆ ಹೆಮ್ಮೆಯ ಸಂಗತಿ. ಪ್ರತಿಯೊಬ್ಬ ರೈತನ ಮಕ್ಕಳು ಏನಾದರೂ ಸಾಧನೆ ಮಾಡಬೇಕೆಂಬುವದಕ್ಕೆ ಇವರು ಪ್ರೇರಣೆಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಶ್ರೀಶೈಲ ಮನಗೂಳಿ, ಶ್ರವಣ ಕೊಟ್ಯಾಳ, ರಮೇಶ ಹಾವಣ್ಣವರ, ಮಂಜು ಬನಸೋಡೆ, ಮಹಾಂತೇಶ ಮನಗೂಳಿ, ಭೀಮು ಬನ್ನೂರ ಇತರರು ಇದ್ದರು.
ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನೆ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಪೇಜಾವರ ಶ್ರೀಗಳು ಮಂಗಳೂರಿನಲ್ಲಿ ಆಯೋಜಿಸಿದ ವಚನ ಸಾಹಿತ್ಯ ಸಮ್ಮೇಳನದಲ್ಲಿ ಬಸವ ಸಮಿತಿಯ ಅಧ್ಯಕ್ಷ ಡಾ ಅರವಿಂದಣ್ಣ ಜತ್ತಿ ಅವರು ಪಾಲ್ಗೊಂಡಿದ್ದು ದುರಂತದ ಸಂಗತಿ. 900 ವರ್ಷಗಳ ಮೇಲೆ ವೈದಿಕರಿಗೆ ಬಸವಣ್ಣವರನ್ನು ತಮ್ಮ ಸಭೆ ಸಮಾರಂಭದಲ್ಲಿ ತರುವ ಚಿಂತಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ, ಬಸವ ಭಕ್ತರು ಯಾವ ಆಚಾರ್ಯತ್ರಯರ ವಿರೋಧಿಗಳಲ್ಲ, ಆದರೆ ಅವರ ತತ್ವ ಸಿದ್ಧಾಂತಗಳನ್ನು ಒಪ್ಪುವುದಿಲ್ಲ. ಆದರೆ ಪೌರೋಹಿತ್ಯ ಪ್ರಧಾನವಾದ ವೈದಿಕರು ಬಸವಣ್ಣನವರನ್ನು ಒಪ್ಪುವದಿಲ್ಲ ಮತ್ತು ಶರಣರ ತತ್ವ ಸಿದ್ಧಾಂತಗಳನ್ನು ದ್ವೇಷಿಸುತ್ತಾರೆ ವಿರೋಧಿಸುತ್ತಾರೆ. ಹೀಗಿದ್ದಾಗ ವೇದಿಕೆಯ ಮೇಲೆ ಪೇಜಾವರ ಶ್ರೀಗಳು ವಚನಗಳು ವೇದ ಶಾಸ್ತ್ರಗಳ ಕನ್ನಡೀಕರಣವಾಗಿದೆ ಎಂದು ಹೇಳಿದಾಗ ತುಟಿ ಪಿಟಕ್ಕೆನ್ನದೆ ಮೌನವಾಗಿದ್ದ ಡಾ ಅರವಿಂದ ಜತ್ತಿ ಅವರ ನಡೆಯು ಅನೇಕರಲ್ಲಿ ಸಂಶಯ ಮೂಡಿಸಿದೆ ಎಂದು ಬಸವ ತಿಳುವಳಿಕೆ ಮತ್ತು ಸಂಶೋಧನೆ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಬುಧವಾರ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪೂಜ್ಯ ಶ್ರೀಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ-ಗಚ್ಚಿನಮಠದ ವತಿಯಿಂದ ೩೩೮ನೆಯ ಸದ್ವಿಚಾರಗೋಷ್ಠಿಯನ್ನು ಜ.೧೩ರ ಬನದ ಹುಣ್ಣಿಮೆ ದಿನದಂದು ಸಾಯಂಕಾಲ ೬:೩೦ಗಂಟೆಗೆ ಶ್ರೀಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯುರ ದಿವ್ಯ ಸಾನಿಧ್ಯದಲ್ಲಿ ವಹಿಸಿಕೊಳ್ಳಲಿದ್ದಾರೆ. ಹಾಗೂ ಶ್ರೀಪದ್ಮರಾಜ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತç ಉಪನ್ಯಾಸಕ ಗಿರೀಶ ಎಸ್.ಕುಲಕರ್ಣಿ ಮಕರ ಸಂಕ್ರಮಣದ ಮಹತ್ವ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬಿ.ಎಸ್.ಡಬ್ಲೂö್ಯ ಪರೀಕ್ಷೆಯಲ್ಲಿ ರ್ಯಾಂಕ ಬಂದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ೩ನೆಯ ರ್ಯಾಂಕ ಪಡೆದ ಐಶ್ವರ್ಯ ತಮದೊಡ್ಡಿ, ೪ನೆಯ ರ್ಯಾಂಕ ಪಡೆದ ವಿದ್ಯಾಶ್ರೀ ಪಡಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕಾರಣ ತಾಲೂಕಿನ ಶ್ರೀಮಠದ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ದಾಸೋಹ ಸೇವೆಯನ್ನು ಲಿಂ.ಹೊನ್ನಪ್ಪಗೌಡ ಬಿರಾದಾರ ಅವರ ಸ್ಮರಣಾರ್ಥ ದಯಾನಂದಗೌಡ ಬಿರಾದಾರ, ಲಿಂ.ಬಸಪ್ಪ ಲೋಣಿ ಅವರ ಸ್ಮರಣಾರ್ಥ ಬಂಡೆಪ್ಪ ಲೋಣಿ, ಲಿಂ.ಶಂಭುಲಿಂಗಯ್ಯ ಮಠ ಹಾಗೂ ಧರ್ಮಪತ್ನಿ ವಿಮಲಾ ಮಠ ಅವರ ಸ್ಮರಣಾರ್ಥ ಸುಧಾರಾಣಿ ಮಠ ಅವರು…
ನಮ್ಮ ಸಂವಿಧಾನ, ನಮ್ಮ ಹೆಮ್ಮೆ | ಬಿಜೆಪಿ ಸಂವಿಧಾನದ ಪರ, ಮೀಸಲಾತಿ ಪರ | ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸಂವಿಧಾನದ ಪರ, ಮೀಸಲಾತಿ ಪರ ತಿದ್ದುಪಡಿಗಳನ್ನು ಬಿಜೆಪಿ ಮಾಡಿದೆ ಮತ್ತು ಡಾ. ಅಂಬೇಡ್ಕರ್ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಹಕ್ಕಿದೆ ಎಂದು ಕರ್ನಾಟಕ ಬಿಜೆಪಿ ಗುರುವಾರ ಪ್ರಶ್ನಿಸಿದೆ?‘ಸಂವಿಧಾನ ಸನ್ಮಾನ’ ಮತ್ತು ‘ನಮ್ಮ ಸಂವಿಧಾನ, ನಮ್ಮ ಹೆಮ್ಮೆ’ ಅಭಿಯಾನದ ಅಂಗವಾಗಿ ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಿತುಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿ.ಟಿ. ರವಿ ಮತ್ತು ಇತರರು ಭಾಗವಹಿಸಿದ್ದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, “2015 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ಸಂವಿಧಾನದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಕರ್ನಾಟಕ ಕೋ ಆಫ್ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಚನ್ನಪ್ಪಗೌಡ ಲಕ್ಕನಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಗುರಲಿಂಗಪ್ಪಗೌಡ ಭಿಕ್ಷಪ್ಪ ಪಾಟೀಲ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಆಯ್ಕೆ ಪ್ರಕ್ರಿಯೆಯ ಬಳಿಕ ಊರಿನ ಹಿರಿಯರು, ವರ್ತಕರು, ಉದ್ಯಮಿಗಳು, ಹಿಂದಿನ ಆಡಳಿತ ಸಮಿತಿಯ ಸದಸ್ಯರು ಮತ್ತು ಸ್ನೇಹಿತರು ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಶುಭ ಹಾರೈಸಿದರು.ಆಡಳಿತ ಸಮಿತಿಯ ಸದಸ್ಯರಾದ ಪ್ರಭುದೇವ ಕಲಬುರ್ಗಿ, ಸತೀಶ ಓಸ್ವಾಲ, ಸಂಗನಗೌಡ ಬಿರಾದಾರ, ರಾಜಶೇಖರ ಕರಡ್ಡಿ, ಚಂದ್ರಶೇಖರ ಸಜ್ಜನ, ಅಜಿತ ನಾಗಠಾಣ, ನಿಂಗಪ್ಪ ಚಟ್ಟೇರ, ಶ್ರೀಕಾಂತ ಛಲವಾದಿ, ಶ್ರೀಶೈಲ ಪೂಜಾರಿ, ರಕ್ಷಿತಾ ಬಿದರಕುಂದಿ, ವಿಜಯಲಕ್ಷ್ಮಿ ಬೂದಿಹಾಳಮಠ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಗಣ್ಯರಾದ ಮಹಾಂತಪ್ಪ ನಾವದಗಿ, ಬಸನಗೌಡ ಪಾಟೀಲ್, ದಾನಪ್ಪ ನಾಗಠಾಣ, ರಮೇಶ ಕುಮಾರ ಓಸ್ವಾಲ್, ಭೀಮಣ್ಣ ಬಿರಾದಾರ, ಗುಲಾಬಚಂದ ಒಸ್ವಾಲ್, ನಿಂಗರಡ್ಡಿ ಮಂಗ್ಯಾಳ, ಪ್ರಭುಗೌಡ ಬಿರಾದಾರ, ಆರ್.ಬಿ. ಪಾಟೀಲ, ಮುತ್ತಣ್ಣ ಪ್ಯಾಟಿಗೌಡರ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿ ನಡೆಯುವ ಸಿಂದಗಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು ೨೦೨೪-೨೩ನೆಯ ಸಾಲಿನ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಕೊಡ ಮಾಡುವ ಐದು ರ್ಯಾಂಕಗಳಲ್ಲಿ ಬಿ.ಎಸ್.ಡಬ್ಲೂö್ಯ ವಿಭಾಗದ ವಿದ್ಯಾರ್ಥಿನಿಯರಾದ ಐಶ್ವರ್ಯ ತಮದೊಡ್ಡಿ ರಾಜ್ಯಕ್ಕೆ ಮೂರನೆಯ ರ್ಯಾಂಕ್, ವಿದ್ಯಾಶ್ರೀ ಪಡಶೆಟ್ಟಿ ನಾಲ್ಕನೆಯ ರ್ಯಾಂಕ್ ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿನಿಯರ ಕಠಿಣ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆ ಇಷ್ಟೊಂದು ರ್ಯಾಂಕ್ಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್ರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯ ಎಸ್.ಎಂ.ಪೂಜಾರಿ, ಉಪನ್ಯಾಸಕ, ಪತ್ರಿಕಾ ಪ್ರತಿನಿಧಿ ಮಹಾಂತೇಶ ನೂಲಾನವರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿನಿಯರಿಗೆ ಶುಭ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸಚಿವ ಅಮಿತ್ ಷಾ ಅವರು ಡಾ. ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಾರೆ. ಜಿಲ್ಲೆಯ ಸಂಸದರಾದ ರಮೇಶ್ ಜಿಗಜಿಣಿ ಅವರು ಕೇಂದ್ರ ಸಚಿವರ ಮಾತನ್ನ ಸಮರ್ಥಿಸಿಕೊಳ್ಳುತ್ತಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ವಿಜಯೇಂದ್ರ ಅವರು ಖರ್ಗೆ ಅವರು ನನಗೆ ಸುಪಾರಿ ನೀಡಿದ್ದಾರೆ ಎನ್ನುವ ಮಾತು ಅವರ ಹುದ್ದೆಗೆ ಘನತೆ ತರುವಂತ ವಿಚಾರವಲ್ಲ. ಇಂಥಹ ಮಾತುಗಳು ರಾಜ್ಯದ ಜನ ಆಲಿಸುತ್ತಿದ್ದಾರೆ ಮತ್ತು ಬಿಜೆಪಿಯವರನ್ನೇ ಮಾತನಾಡಿಕೊಳ್ಳುತ್ತಿದ್ದಾರೆ. ರಾಜಕಾರಣ ಸತ್ಯ ಮತ್ತು ಸಂವಿಧಾನ ಬದ್ಧವಾಗಿ ಇರಬೇಕೆ ಹೊರತು ಅಸಂಬದ್ಧ ಮಾತುಗಳು ಅಸಂಬದ್ಧ ವಿಚಾರಗಳನ್ನ ಒಳಗೊಂಡಿರಬಾರದು. ಸಚಿವ ಪ್ರಿಯಾಂಕ ಖರ್ಗೆ ಅವರ ಮೇಲೆ ಮಾಡುತ್ತಿರುವ ಆರೋಪಗಳನ್ನ ತಕ್ಷಣವೇ ಬಿಜೆಪಿ ಮುಖಂಡರು ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯದ ಜನತೆಯ ಸಹನೆ ಮಿತಿಮೀರುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡೆತ್ ನೋಟದಲ್ಲಿ ಸಚಿವರ ಹೆಸರಿಲ್ಲ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದಾಗ ಬಿಜೆಪಿ ಅವರು ನಡೆಸುತ್ತಿರುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಮೈ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದರೂ, ಸರ್ಕಾರದ ಯಾವುದೇ ಪ್ರತಿನಿಧಿ ಅವರ ಬಳಿ ಹೋಗದೆ ಇರುವುದು ನಿಜಕ್ಕೂ ಅಮಾನವೀಯವಾದದ್ದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಆಶಾ ಕಾರ್ಯಕರ್ತೆಯರು ಮೂಲಭೂತ ಆರೋಗ್ಯ ಸೇವೆಗಳನ್ನು ತಲುಪಿಸಲು, ಆರೋಗ್ಯ ಜಾಗೃತಿಯನ್ನು ಉತ್ತೇಜಿಸುವ ಮಹತ್ತರವಾದ ಪಾತ್ರವನ್ನು ವಹಿಸುತ್ತಾರೆ. ಸುರಕ್ಷಿತ ಹೆರಿಗೆ, ಆರೋಗ್ಯವಂತ ಶಿಶುವಿನ ಜನನ, ಆರೈಕೆ ಹಾಗೂ ಪೌಷ್ಟಿಕತೆಯ ಅರಿವು ಮೂಡಿಸುವುದಲ್ಲದೆ ಕ್ಷಯ, ಮಲೇರಿಯಾ, ಡೆಂಗೀ, ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಅವಿರತ ಶ್ರಮಿಸುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ಆಶಾ ಕಾರ್ಯಕರ್ತೆಯರ ಸಂಬಳವನ್ನು ರೂ.15 ಸಾವಿರಕ್ಕೆ ಏರಿಸುತ್ತೇವೆ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ ಈಗ ತನ್ನ ಮಾತನ್ನು ತಪ್ಪಿದೆ.ಹೆಚ್ಚುತ್ತಿರುವ ಜೀವನ ವೆಚ್ಚ, ಬೆಲೆ ಏರಿಕೆಯಿಂದ ಆಶಾ ಕಾರ್ಯಕರ್ತೆಯರ ಜೀವನವೂ ದುಸ್ತರವಾಗಿದೆ. ಕಾಂಗ್ರೆಸ್ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬಿಟ್ಟು, ಕೂಡಲೇ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಬೇಕು ಹಾಗೂ ಅವರ ಆಶ್ವಾಸನೆ ನೀಡಿದಂತೆ ಅವರ ವೇತನವನ್ನು…
