Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಎ.20 ರಂದು ನಡೆಯುವ ಬಸವ ಜಯಂತಿಯ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಮತ್ತು ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ದಿನಾಂಕ 31/0 3/2026 ರಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅಹ್ವಾನಿಸಲಾಗಿದೆ. ಸ್ಪರ್ಧಿಸಲು ಇಚ್ಛಿಸುವವರ ವಿಷಯಗಳು ಈ ರೀತಿ ಇರುತ್ತದೆ .(A) ಮಕ್ಕಳಿಗಾಗಿ ನೆಡೆಯವ ಕಾರ್ಯಕ್ರಮ ಗಳು (1) ಪ್ರಬಂಧ ಸ್ಪರ್ಧೆ( 2 ) ವಚನ ಕಂಠಪಾಠ (3) ಚಿತ್ರಕಲಾ ಸ್ಪರ್ಧೆ (4)ಮಕ್ಕಳಿಗಾಗಿ ಕವಿ ಗೋಷ್ಠಿಯ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳು ಈ ಕೆಳಗಿನವರನ್ನು ಸಂಪರ್ಕ ಮಾಡಲು ಕೋರಿಕೆ .(1)ಪ್ರೊ: ನೀಲಕಂಠ ಎಸ್ ಹಳ್ಳಿ:-9060838424(2) ಪ್ರೊ: ಪೊನ್ನಪ್ಪ ಕಡೆಮನಿ -9972783456(3) ಶ್ರೀ ರಮೇಶ್ ಚೌಹಾನ್ -9611563508(4)ಶ್ರೀ ಎಸ್ ಎಸ್. ಸೊನ್ನದ -9980257774 (5)ಶ್ರೀ ಸುಭಾಷ್ ಕಣ್ಣೂರ್ -8050465396 ಇವರಲ್ಲಿ ನೊಂದ ಯಿಸಿಕೊಳ್ಳಬೇಕು (B) ಕವಿಗೋಷ್ಠಿಯಲ್ಲಿ ಭಾಗವಹಿಸುಲು ಇಚ್ಛಿಸುವವರು ವಿಷಯ :- 12ನೇ ಶತಮಾನದಲ್ಲಿ ಬಸವಾದಿ ಶರಣ ಶರಣೀಯರ ಸಾಮಾಜಕ ಚಳವಳಿ ಹಾಗೂ ಸಮಾನತೆಗಾಗಿ (ಮೌಡ್ಯ…

Read More

ರಾಜ್ಯ ಬಿಜೆಪಿ ಉಪಾಧ್ಯಕ್ಷ ಡಾ. ಮುರುಗೇಶ್ ನಿರಾಣಿ ಯಿಂದ ಸರ್ಕಾರದ ಮುಂದೆ ಪ್ರಸ್ತಾವನೆ ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಜಾಗತಿಕ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ಅಭಾವವನ್ನು ಸಮರ್ಥವಾಗಿ ಎದುರಿಸಲು, ಸ್ವದೇಶಿ ತಂತ್ರಜ್ಞಾನದ ‘ಎಥೆನಾಲ್ ಸ್ಟೌವ್’ ಬಳಕೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು ಎಂದು ಎಂ.ಆರ್.ಎನ್ ಉದ್ಯಮ ಸಮೂಹದ ಸಂಸ್ಥಾಪಕರು ಹಾಗೂ ಮಾಜಿ ಸಚಿವರು ಮತ್ತು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಮಹತ್ವದ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.ಎಥೆನಾಲ್ ಸ್ಟೌವ್‌ಗಳು ಹೊಸ ಆವಿಷ್ಕಾರವಲ್ಲ, ಇವುಗಳನ್ನು 2004ರಲ್ಲೇ ಅಭಿವೃದ್ಧಿಪಡಿಸಲಾಗಿದ್ದು, ಸೀಮೆಎಣ್ಣೆ ಒಲೆಗಳ ಮಾದರಿಯಲ್ಲೇ ಅತ್ಯಂತ ಸರಳ ಹಾಗೂ ಜನಸ್ನೇಹಿ ವಿನ್ಯಾಸವನ್ನು ಹೊಂದಿವೆ. ಈಗಾಗಲೇ ದೇಶದ ವಿವಿಧೆಡೆ ಸುಮಾರು 24 ಲಕ್ಷಕ್ಕೂ ಅಧಿಕ ಕುಟುಂಬಗಳು ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿರುವುದು ಇದರ ವಿಶ್ವಾಸಾರ್ಹತೆಗೆ ಸಾಕ್ಷಿಯಾಗಿದೆ. ವೆಚ್ಚದ ದೃಷ್ಟಿಯಿಂದ ಎಲ್‌ಪಿಜಿಗೆ ಹೋಲಿಸಿದರೆ ಎಥೆನಾಲ್ ತುಸು ದುಬಾರಿ ಎನಿಸಿದರೂ, ಇದು ಸಂಪೂರ್ಣವಾಗಿ ಪರಿಸರ ಸ್ನೇಹಿ ಇಂಧನವಾಗಿದೆ. ಯಾವುದೇ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾ.18ರಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವುದೇ ಲೋಪ ದೋಷ ವಾಗದಂತೆ ಪಾರದರ್ಶಕ, ವ್ಯವಸ್ಥಿತವಾಗಿ ಆಯೋಜಿಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು ಎಂದು ತಹಶಿಲ್ದಾರ ಸಂಜಯ ಇಂಗಳೆ ಹೇಳಿದರು.ಪಟ್ಟಣದ ಎಂ.ಎ.ಎಸ್ ಪಬ್ಲಿಕ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ತಾಲ್ಲೂಕು ಮಟ್ಟದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.ಪ್ರಾಸ್ತಾವಿಕವಾಗಿ ಬಿಇಒ ಚಿದಾನಂದ ಕಟ್ಟಿಮನಿ ಮಾತನಾಡಿ,ಚಡಚಣ ತಾಲ್ಲೂಕಿನಲ್ಲಿ 49 ಪ್ರೌಢಶಾಲೆಗಳಿದ್ದು,11 ಪರೀಕ್ಷಾ ಕೇಂದ್ರಗಳಲ್ಲಿ 3980 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ತಾಲ್ಲೂಕಿನಲ್ಲಿ ಒಟ್ಟು ಎರಡು ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಗಳು ಸುಸುತ್ರವಾಗಿ ನಡೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ ಟಿವಿ ಕಡ್ಡಯಗೋಳಿಸಲಾಗಿದೆ.ನಿರಂತರ ವಿದ್ಯುತ್ ಪೂರೈಕೆ, ಗರಿಷ್ಟ ಭದ್ರತಾ ವ್ಯವಸ್ಥೆಗೆ ಕ್ರಮ ಕೈಗೊಂಡು, ಸ್ಥಾನಿಕ ಹಾಗೂ ಸಂಚಾರಿ ಸ್ಕ್ವಾಡಗಳ ತಂಡ ರಚಿಸಲಾಗಿದೆ ಎಂದರು.ಹೆಸ್ಕಾಂನ ಕಾರ್ಯ ನಿರ್ವಾಹಕ ಇಂಜನೀಯರ್ ವಿಜಯಕುಮಾರ ಹವಾಲ್ದಾರ ಮಾತನಾಡಿ, ಪರೀಕ್ಷಾ ದಿನಗಳಂದು ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವದು ಎಂದರು.ಪಿಎಸ್ಐ ಸೋಮೇಶ ಗೆಜ್ಜಿ ಮಾತನಾಡಿ, ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5, ಝಳಕಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಮಾ.೧೮ ಬುಧುವಾರ ದಿವಸ ಸಾಯಂಕಾಲ 6:30 ಗಂಟೆಗೆ ಬಳ್ಳೂಳ್ಳಿಯ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ಅಧ್ಯಕ್ಷರು ಜ್ಞಾನ ಯೋಗಾಶ್ರಮ ವಿಜಯಪುರ ಬಸವಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಬಳ್ಳೊಳ್ಳಿ ಗ್ರಾಮ ದೇವರು ಶ್ರೀ. ವೀರಭದ್ರದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ 21ದಿನಗಳ ಪರ್ಯಂತ ಹಮ್ಮಿಕೊಂಡ ಬಬಲಾದಿ ಸದಾಶಿವಯೋಗಿಗಳ ಪುರಾಣ ಮುಕ್ತಾಯ ಸಮಾರಂಭ ಹಮ್ಮಿಕೊಂಡಿದ್ದು, ಎಲ್ಲಾ ಭಕ್ತಾದಿಗಳು, ಗ್ರಾಮಸ್ಥರು ಪುರಾಣ ಮುಕ್ತಾಯ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಸೇವಾ ಸಮಿತಿ ಅಧ್ಯಕ್ಷರು, ಮಾಜಿ ಸಚಿವರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪ್ರಕಟಣೆಗೆ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಜನರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದು, ವಿಷಮುಕ್ತ ಆಹಾರ ಸೇವನೆಯತ್ತ ವಾಲಿದ್ದಾರೆ. ಹೀಗಾಗಿ ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಕಬ್ಬು ಬೆಳೆಗಾರರು ಕೂಡ ವಿಷಮುಕ್ತ ಬೆಲ್ಲ ತಯಾರಿಕೆಗೆ ಆದ್ಯತೆ ನೀಡಲಿ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸಲಹೆ ನೀಡಿದರು.ತಾವು ಪ್ರತಿನಿಧಿಸುವ ಬಸವನಬಾಗೇವಾಡಿ ಕ್ಷೇತ್ರದ ಮನಗೂಳಿಯ ಸಾವಯವ ಕೃಷಿಕರಾದ ಅಶ್ವಿನಿ ಚಂದ್ರಶೇಖರ ರೆಡ್ಡಿ ಅವರು ಪುಣ್ಯಕೋಟಿ ಫಾರ್ಮನಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆದ ಕಬ್ಬು ಬಳಸಿ ತಯಾರಿಸಿದ ಬಕೇಟ್ ಬೆಲ್ಲ , ಬೆಲ್ಲದ ಅಚ್ಚು, ಬೆಲ್ಲದ ಪಾಕ ಹಾಗೂ ಬೆಲ್ಲದ ಪುಡಿ ಉತ್ಪನ್ನಗಳನ್ನು ಸೋಮವಾರ ಬಿಡುಗಡೆಮಾಡಿ ಮಾತನಾಡಿದ ಸಚಿವರು, ನನ್ನ ಕ್ಷೇತ್ರದಲ್ಲಿ ಕಬ್ಬು ಬೆಳೆಯುವ ರೈತರಲ್ಲಿ ಬಹುತೇಕರು ಪ್ರಗತಿಪರರು, ಸಾವಯವ ಪದ್ಧತಿ ಅನುಸರಿಸುವವರ ಸಂಖ್ಯೆ ಹೆಚ್ಚುತ್ತಿದ್ದು, ಆಶಾದಾಯಕ ಹಾಗೂ ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿದೆ ಎಂದರು.ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಮನಗೂಳಿಯ ರಿಷಬ್ ಫಾರ್ಮನಲ್ಲಿ ಸಾವಯವ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂದೆ ಬಂದಿದ್ದಾರೆ. ಸಮಾಜದಲ್ಲಿ ಅವರ ಪಾತ್ರ ತುಂಬಾ ಮಹತ್ವದಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಧೈರ್ಯದಿಂದ ಮುಂದೆ ಬರಬೇಕು ಎಂದು ಜಮಖಂಡಿಯ ಸಿಡಿಪಿಒ ಆನಂದ ಪಿ. ಹೇಳಿದರು.ನಗರದ ಅಂಜುಮನ್ ಶಾದಿ ಮಹಲ್ ಗಲಗಲಿ ಆರ್ಸಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಮೆಲ್ ಆಶಿಷ ಚಾರಿಟೇಬಲ್ ಟ್ರಸ್ಟ್ ಅಡಕುರು ಶಾಖೆ, ಜಮಖಂಡಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯವಾದಿ ಫಾ. ಸುಮನ್ ಬಾಲೂ ಮಾತನಾಡಿ, ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವುದರ ಜೊತೆಗೆ ಸಮಾಜದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ಹೇಳಿದರು.ಫಾ.ಪೀಟರ್ ಆಶೀರ್ವಾದ ಮಾತನಾಡಿ, ಮಹಿಳಾ ಸ್ವಸಹಾಯ ಗುಂಪುಗಳು ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಯನ್ನು ಸಾಧಿಸುತ್ತಿರುವುದನ್ನು ಕಂಡು ಮೆಚ್ಚುಗೆಯ ಮಾತುಗಳನ್ನು ಆಡಿದರು, ವೇದಿಕೆಯ ಮೇಲಿದ್ದ ಅತಿಥಿಗಳು ಮಹಿಳಾ ಸಬಲೀಕರಣದ ಕುರಿತು ಮಾತನಾಡಿದರು.ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳ 54 ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು, ಸದಸ್ಯರು ಸೇರಿ ಸುಮಾರು 500 ಹೆಚ್ಚು ಮಹಿಳೆಯರು ಭಾಗವಹಿಸಿದರು.ಮಹಿಳೆಯರ ಸಾಂಸ್ಕೃತಿಕ ನೃತ್ಯ…

Read More

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಬಾನಗರ ಬಳಿ ಎರಡೂವರೆ ವರ್ಷದಲ್ಲಿ ಡ್ಯಾಂ ನಿರ್ಮಾಣವಾಗಲಿದ್ದು, ಇದರಿಂದ ತಿಕೋಟಾ ಭಾಗದ ರೈತರಿಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ಬಾಬಾನಗರ ಬಳಿ ಡ್ಯಾಂ‌ ನಿರ್ಮಾಣಕ್ಕೆ ಕಾರಣರಾದ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ‌ ಅವರನ್ನು ರೈತರು ಅಭಿನಂದನೆ ಕಾರ್ಯಕ್ರಮ ಆಯೋಜಿಸಿ ಮಣುಕ(ಒಣದ್ರಾಕ್ಷಿ) ಹಾರದಿಂದ ಸನ್ಮಾನಿಸಿ ತಾವು ಬೆಳೆದ ತೋಟಗಾರಿಕೆ ಉತ್ಪನ್ನಗಳ‌ನ್ನು ಸಮರ್ಪಿಸಿ ಕೃತಜ್ಞತೆ ಸಲ್ಲಿಸಿದರು.ರೈತರಿಂದ ಅಭಿನಂದನೆ ಸ್ವೀಕರಿಸಿ ಮಾತಮಾಡಿದ ಸಚಿವರು, ತಾವು ಜಲಸಂಪನ್ಮೂಲ‌ ಸಚಿವರಾದ ನಂತರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಗಾಗಿ ಕೈಗೊಂಡ ಕ್ರಮಗಳು, ಎದುರಿಸಿದ ಸವಾಲುಗಳು, ಅಸಾಧ್ಯವಾದುದುನ್ನು ಸಾಧಿಸಿದ ಬಳಿಕ ರೈತರಿಗೆ ಆದ ಸಂತಸದ ಕುರಿತು ಅನುಭವ ಹಂಚಿಕೊಂಡರು.ಆದರೂ, ಬೇಸಿಗೆಯಲ್ಲಿ ತಿಕೋಟಾ ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿತ್ತು. ‌ನೀರಾವರಿ ಆಗಿರುವ ಹಿನ್ನೆಲೆಯಲ್ಲಿ ರೈತರ ಜಮೀನು…

Read More

*ಉದಯರಶ್ಮಿ ದಿನಪತ್ರಿಕೆ* ಸರಗೂರು: 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತೆ. ಮೊದಲ ಎರಡೂವರೆ ವರ್ಷ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ, ಬಾಕಿ ಎರಡೂವರೆ ವರ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಆಗ್ತಾರೆ. ನನ್ನ ಭವಿಷ್ಯವಾಣಿ ಯಾವುದೇ ಕಾರಣಕ್ಕೂ ಸುಳ್ಳಾಗಲ್ಲ ಎಂದು ನಂಜನಾಥಪುರದ ಸಿಂಗಪಟ್ಟಣ ಶ್ರೀ ಮಾರಮ್ಮ ದೇವಸ್ಥಾನದ ಪೂಜಾರಿ ಪುಟ್ಟಸ್ವಾಮಿ ಭವಿಷ್ಯ ನುಡಿದಿದ್ದಾರೆ.ತಾಲೂಕಿನ ನಂಜನಾಥಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಭವಮೂರ್ತಿ ಸಿಂಗಪಟ್ಟಣ ಶ್ರೀ ಮಾರಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. 2028ಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ನಿಂತು ಪ್ರಚಾರ ಮಾಡಿದ್ರೆ, ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬರುತ್ತೆ. ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ರೆ 117 ಸ್ಥಾನ ಗೆಲ್ಲುತ್ತೆ. ಒಂದು ವೇಳೆ ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸಿದರೆ 135 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಮೊದಲ ಎರಡೂವರೆ ವರ್ಷ ಅವಧಿಗೆ ಹೈಕಮಾಂಡ್ ನಾಯಕರ ಕೃಪಾಕಟಾಕ್ಷದಿಂದ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ. ಉಳಿದ…

Read More

ಉದಯರಶ್ಮಿ ದಿನಪತ್ರಿಕೆ ಸರಗೂರು: 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತೆ. ಮೊದಲ ಎರಡೂವರೆ ವರ್ಷ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ, ಬಾಕಿ ಎರಡೂವರೆ ವರ್ಷ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿ ಆಗ್ತಾರೆ. ನನ್ನ ಭವಿಷ್ಯವಾಣಿ ಯಾವುದೇ ಕಾರಣಕ್ಕೂ ಸುಳ್ಳಾಗಲ್ಲ ಎಂದು ನಂಜನಾಥಪುರದ ಸಿಂಗಪಟ್ಟಣ ಶ್ರೀ ಮಾರಮ್ಮ ದೇವಸ್ಥಾನದ ಪೂಜಾರಿ ಪುಟ್ಟಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ನಂಜನಾಥಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಭವಮೂರ್ತಿ ಸಿಂಗಪಟ್ಟಣ ಶ್ರೀ ಮಾರಮ್ಮ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. 2028ಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದೆ ನಿಂತು ಪ್ರಚಾರ ಮಾಡಿದ್ರೆ, ಬಿಜೆಪಿ ಸುಲಭವಾಗಿ ಅಧಿಕಾರಕ್ಕೆ ಬರುತ್ತೆ. ಏಕಾಂಗಿಯಾಗಿ ಸ್ಪರ್ಧೆ ಮಾಡಿದ್ರೆ 117 ಸ್ಥಾನ ಗೆಲ್ಲುತ್ತೆ. ಒಂದು ವೇಳೆ ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸಿದರೆ 135 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೆ. ಮೊದಲ ಎರಡೂವರೆ ವರ್ಷ ಅವಧಿಗೆ ಹೈಕಮಾಂಡ್ ನಾಯಕರ ಕೃಪಾಕಟಾಕ್ಷದಿಂದ ವಿ. ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ.…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಎಸ್ ಎಮ್ ಇಟ್ಟಿಜಮಖಂಡಿ: ಬೇಸಿಗೆ ಕಾಡುತ್ತಿರುವುದನ್ನು ಅರಿತು ಎಲ್ಲೆಡೆ ರಸ್ತೆ ಬದಿಗಳಲ್ಲಿ ಎಳನೀರು ಮಾರಾಟಗಾರರು ಕಳೆದ ವಾರದಿಂದ ಹೆಚ್ಚಾಗಿದ್ದು ತಾಲೂಕಿನ ಗ್ರಾಮೀಣ ಹಾಗೂ ವಿವಿಧೆಡೆಗಳಿಂದ ಎಳನೀರು ತಂದು ಮಾರಾಟ ನಡೆಸುತ್ತಿದ್ದಾರೆ. ಬಿಸಿಲಿನ ಧಗೆಯಿಂದ ರಕ್ಷಿಸಿಕೊಳ್ಳಲು ಎಳನೀರು ಮತ್ತು ಕಲ್ಲಂಗಡಿ ಹಣ್ಣಿಗೆ ಹೆಚ್ಚು ಮೊರೆ ಹೋಗುತ್ತಿದ್ದಾರೆ. ನಗರದ ಬಹುತೇಕ ಹಣ್ಣಿನ ಜ್ಯೂಸ್‌ ಸೆಂಟರ್‌ಗಳಲ್ಲಿಯೂ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಅನೇಕ ರಸ್ತೆ ಬದಿಗಳಲ್ಲಿ ಎಳನೀರು, ಕಲ್ಲಂಗಡಿ, ಸೌತೆಕಾಯಿ ಮಾರಾಟದ ಭರಾಟೆ ಜೋರಾಗಿ ನಡೆಯುತ್ತಿದೆ. ಬಹುತೇಕ ರಸ್ತೆ ಬದಿಗಳಲ್ಲಿ ಎಳನೀರು ಮತ್ತು ಕಲ್ಲಂಗಡಿ ಹಣ್ಣಿನ ವ್ಯಾಪಾರಿಗಳು ಕಂಡು ಬರುತ್ತಿದ್ದಾರೆ.ದಿನೇದಿನೆ ಹೆಚ್ಚುತ್ತಿರುವ ರಣ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದು, ಇದರಿಂದ ಪಾರಾಗಲು ಎಳನೀರು , ಕಲ್ಲಂಗಡಿ, ಕಬ್ಬಿನ ಹಾಲು, ಮಜ್ಜಿಗೆ ಹಾಗೂ ಹಣ್ಣಿನ ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಜಮಖಂಡಿ ಸೇರಿದಂತೆ ಕೋಟೆನಾಡಿನ ಪ್ರದೇಶಗಳಾದ ಮುಧೋಳˌ ಬೀಳಗಿˌ ಮಹಾಲಿಂಗಪೂರˌ ತೇರದಾಳˌ ರಬಕವಿ-ಬನಹಟ್ಟಿ ಸೇರಿದಂತೆ ಹಲವು ಕಡೆ ಬಿಸಿಲ ಕಾವು ಏರುತ್ತಿದೆ. ಈಗಾಗಲೇ ಬಿಸಿಲ ಹೊಡೆತಕ್ಕೆ ಕಂಗಾಲಾಗಿರುವ…

Read More