Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಮುಖ್ಯಮಂತ್ರಿ ಸಿದ್ದರಾಮಯ್ಯಾ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಜನಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ವಿಪಕ್ಷದವರ ಹೇಳಿಕೆಗಳಿಗೆ ಸೂಕ್ತ ಉತ್ತರ ನೀಡಿ ಸ್ವಾವಲಂಬಿ ಕರ್ನಾಟಕ ರೂಪಿಸುವತ್ತ ಸರ್ಕಾರ ಮುನ್ನಡೆದಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಸಮೀಪದ ಗೂಗಿಹಾಳ ಗ್ರಾಮದ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿ ಮಾಬೂಬಿ ಅಬ್ಬಾಸಲಿ ಚೌಧರಿ ಇವರು ಗೃಹ ಲಕ್ಷ್ಮೀ ನೀಡಿದ ಹಣ ಉಳಿಸಿ ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಸಮಸ್ಥ ಗ್ರಾಮಸ್ಥರಿಗೆ ಹೊಳಿಗೆ ಊಟ ಮಾಡಿಸಿದ್ದರು.ತಾಲೂಕ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಗ್ಯಾರಂಟಿ ಯೋಜನೆ ಅಧ್ಯಕ್ಷ ಶ್ರೀಶೈಲ ಕವಲಗಿ, ಜಿಲ್ಲಾ ಕೆಡಿಪಿ ಸದಸ್ಯ ನೂರಹಮ್ಮದ ಅತ್ತಾರ, ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಜಯಶ್ರೀ ಹಂದನೂರ, ಗ್ರಾಮ ಪಂಚಾಯತ ಅಧ್ಯಕ್ಷ ರಜಾಕ ಚಿಕ್ಕಗಸಿ, ಪರಸು ಬಿಸನಾಳ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ಎ ಪಿ ಎಮ್ ಸಿ ಅಧ್ಯಕ್ಷರ ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ಮಾಡಿದರು.ನೂತನ ಆಲಮೇಲ ತಾಲೂಕಿನ ಎ ಪಿ ಎಮ್ ಸಿಯ ಪ್ರಥಮ ಅಧ್ಯಕ್ಷರಾಗಿ ಬಸವರಾಜ ಬಾಗೇವಡಿ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶಿವಶರಣ ಯಶವಂತ ಗುಂದಗಿ ಸದಸ್ಯರಾಗಿ ಸೌಕತಲಿ ಕಾಶಿಮ ಸುಂಬಡ ದವಲಪ್ಪ ಸೋನ್ನ ಗೌರಿಶಂಕರ ತೊಡಕರ ಸಾಧಿಕ ಸುಂಬಡ ಯಶವಂತರಾಯಗೌಡ ರೂಗಿ ರಮೇಶ ಬಂಟನೂರ ಅಶೋಕ ಕೋಳಾರಿ ಪ್ರಭು ವಾಲಿಕಾರ ಸೋಮು ಮೇಲಿನಮನಿ ಸಂಜುಕುಮಾರ ಬೋಗುಂಡಿ ಮುಂತಾದವರು ಇದ್ದರು

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದಲ್ಲಿ ೨೦೧೮-೧೯ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನದಡಿ ಕುಂಬಾರ ಸಮಾಜಕ್ಕೆ ೧೦ ಲಕ್ಷದ ಭವನ ನಿರ್ಮಾಣದ ಭೂಮಿ ಪೂಜೆಯನ್ನು ಸಿಂದಗಿ ಶಾಸಕ ಅಶೋಕ ಮನಗೂಳಿ ಮಾಡಿದರು.ಈ ಪೂಜೆಯಲ್ಲಿ ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ ವಿರಭದ್ರ ಕತ್ತಿ ಪ.ಪಂ ಸದಸ್ಯ ಚಂದ್ರಶೇಖರ ಹಳೇಮನಿ ಭಗವಂತ ಆಲಮೇಲಕರ ರಮೇಶ ಬಂಟನೂರ ಅಶೋಕ ಕೋಳಾರಿ ಶ್ರೀಶೈಲ ಕುಂಬಾರ ಗರು ಹಡಪದ ಮಹಾಂತಗೌಡ ಹಳೇಮನಿ sಸೋಮು ಮೇಲಿನಮನಿ ಇತರರು ಇದ್ದರು

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಗಬಸಾವಳಗಿ ಗ್ರಾಮದ ಮಲ್ಲಮ್ಮ ದೇವಸ್ಥಾನದ ಮುಂದೆ ಜೂಜಾಟ ಅಂದರ್-ಬಹಾರ್ ಆಟದಲ್ಲಿ ನಿರತ ಗುಂಪಿನ ಮೇಲೆ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿರುವ ಸಿಂದಗಿ ಪೊಲೀಸ್ ಠಾಣೆಯ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದ್ದು, ಗಬಸಾವಳಗಿ ಗ್ರಾಮದ ನಿವಾಸಿಗಳಾದ ಬಾಪುಗೌಡ ಶರಣಗೌಡ ಕೋನಾಳ, ಅಪ್ಪುಗೌಡ ಭೀಮನಗೌಡ ಬಿರಾದಾರ, ಬಸಣ್ಣ ಭೀಮಶ್ಯಾ ವಾಲೀಕಾರ, ಅಶೋಕ ಶಾಂತಗೌಡ ಬಿರಾದಾರ, ಸಿದ್ದಪ್ಪ ಮಡಿವಾಳಪ್ಪ ಹೂಗಾರ, ಪ್ರಕಾಶ ಸಂಗನಗೌಡ ಬಿರಾದಾರ ಎಂಬುವವರನ್ನು ಬಂಧಿಸಲಾಗಿದೆ.ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ದಿನಾಂಕ ೨೯-೧೦-೨೦೨೪ರ ಪಟ್ಟಿಯಂತೆ ಒಟ್ಟು ೧೯೫೫೮೫೩ ಮತದಾರರು ಇದ್ದು, ದಿನಾಂಕ ೬-೧-೨೦೨೫ರ ವಿಶೇಷ ಸಂಕ್ಷಿಪ್ತ ಪರಿಕ್ಷರಣೆ ಅರ್ಹತಾ ಅಂತಿಮ ಕರಡು ಮತದಾರರಂತೆ ೯೬೫೫ ಹೊಸದಾಗಿ ಮತದಾರರನ್ನು ಸೇರ್ಪಡೆಗೊಳಿಸಲಾಗಿದ್ದು, ಒಟ್ಟು ಜಿಲ್ಲೆಯಲ್ಲಿ ೧೯೬೫೫೦೮ ಅರ್ಹ ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ಅಂತಿಮಗೊಳಿಸಿ ಪ್ರಚಾರ ಪಡಿಸಲಾಗಿದೆ ಎಂದು ವಿಜಯಪುರ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರು ಹಾಗೂ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಗಳಾದ ಸುಷಮಾ ಗೋಡಬೋಳೆ ಹೇಳಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಸಂಕ್ಷಿಪ್ತ ಮತದಾರರಪಟ್ಟಿ ಪರಿಷ್ಕರಣೆ- ೨೦೨೫ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ನಮೂನೆ-೬ರಲ್ಲಿ ೧೬೯೧೮, ನಮೂನೆ-೭೨೬೩, ನಮೂನೆ-೮ರಲ್ಲಿ ೮೬೫೬ ಹಾಗೂ ೧೯೫೭ ಸೇವಾ ನಿರತ ( ಭಾರತೀಯ ಸೇನೆ ಹಾಗೂ ಇತರೆ) ಸೇವೆ ಸಲ್ಲಿಸುತ್ತಿರುವ ಮತದಾರರ ಪಟ್ಟಿಯನ್ನು ೨೯-೧೦-೨೦೨೪ರಿಂದ ೨೮-೧೧-೨೦೨೪ರ ವರೆಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ಸ್ವೀಕೃತವಾದ ಎಲ್ಲ ಹಕ್ಕು ಮತ್ತು ಆಕ್ಷೇಪಣೆಗಳನ್ನು ಅನುಮೋದಿಸಲಾಗಿದೆ. ಹಾಗೂ ಸಣ್ಣ ಪುಟ್ಟ ತಿದ್ದುಪಡೆಳನ್ನು ಸರಿ ಪಡಿಸಿ ನಿಗದಿತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಹಾಗೂ ಕೊಡಗಿನಲ್ಲಿನ ಸೈನಿಕ ಶಾಲೆಯ 6ನೇ ತರಗತಿ ಹಾಗೂ 9ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಪ್ರಾರಂಭವಾಗಿದೆ. 6ನೇ ತರಗತಿ ರ‍್ಜಿ ಸಲ್ಲಿಸಲು ವಿದ್ಯಾರ್ಥಿಯ ವಯಸ್ಸು 10 ರಿಂದ 12 ರ ಒಳಗೆ ಇರಬೇಕು. ಏ.1 2013 ರಿಂದ ಮಾ. 31 2015ರ ಒಳಗಾಗಿ ಜನಿಸಿರಬೇಕು. 9ನೇ ತರಗತಿಗೆ ಅರ್ಜಿಸಲ್ಲಿಸಲು ವಿದ್ಯಾರ್ಥಿಯ ವಯಸ್ಸು ಏ. 1 2010 ರಿಂದ ಮಾ. 31. 2012ರ ಒಳಗಾಗಿ ಜನಿಸಿರಬೇಕು.ಜನವರಿ 13 ಸಂಜೆ 5ಗಂಟೆ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 14ರ ರಾತ್ರಿ 11.50ರ ವರೆಗೆ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಜ.16 ರಿಂದ 18ರ ವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಗೆ ರೂ.800 ನಿಗದಿ ಪಡಿಸಲಾಗಿದೆ ಹಾಗೂ ಪ.ಜಾ/ಪ.ಪಂ ದವರಿಗೆ ರೂ. 650 ಶುಲ್ಕ ನಿಗದಿಪಡಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 08352-270638ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಧಾರವಾಡ ವಿಭಾಗದ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಯಲ್ಲಿ 6 ತಿಂಗಳ ತರಭೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ತಮ್ಮ ಪಿ.ಯು.ಸಿ ಅಂಕಪಟ್ಟಿ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಅರ್ಜಿ ಯ ಜೊತೆಗೆ ಸಲ್ಲಿಸಬೇಕು. ಜ.10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2448183ಗೆ ಸಂಪರ್ಕಿಸಬಹುದು ಎಂದು ಪ್ರಕಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರದ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ 2022-23 ಹಾಗೂ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆ ವ್ಯಾಪ್ತಿಗೆ ತರಲು ಜನವರಿ 6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಯೋಜನೆಯಡಿ ಅರ್ಹ ಪದವಿಧರರಿಗೆ ಮಾಸಿಕ 3,000ರೂ ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ 1,500 ಮಾಸಿಕ ಭತ್ಯೆ ಸಿಗಲಿದೆ. ಅರ್ಹ ಅಭ್ಯರ್ಥಿಗಳು ನೇರವಾಗಿ ಸೇವಾ ಸಿಂಧು ಪೋರ್ಟಲ್ https://sevssindhugs.karnataka.gov.in ನಲ್ಲಿ ತಮ್ಮ ಹೆಸರು ನೋಂದಾಯಿಸಿ ಕೊಳ್ಳಬಹುದು. ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ದಾಖಲಾತಿಯನ್ನು ಪರಿಶೀಲಿಸಿಕೊಳ್ಳಬಹುದು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ದಾಖಲಾತಿ ಆಗಿರದಿದ್ದರೆ ಅಭ್ಯರ್ಥಿಗಳನ್ನು ತಮ್ಮ ದಾಖಲಾತಿಗಳನ್ನು ತೆಗೆದುಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿಗೆ ಪಿಯುಸಿ ಪ್ರಮಾಣ ಪತ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರಪಾಲಿಕೆ ದೀನ್ ದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಡೇ-ನಲ್ಮ್ ಅಭಿಯಾನದಡಿ ಜಿಲ್ಲೆಯ ಆಸ್ತಿ ತೆರಿಗೆ ಹಾಗೂ ನೀರಿನ ಶುಲ್ಕ ವಸೂಲಾತಿ ಸಂಗ್ರಹಣೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮಹಿಳಾ ಸ್ವಸಹಾಯ ಸಂಘವು ಈಗಾಗಲೇ ಡೇ-ನಲ್ ಅಭಿಯಾನದಡಿ ನೊಂದಾಯಿಸಿರಬೇಕು ಹಾಗೂ ಪಂಚಸೂತ್ರ ಅನುಸರಿಸುತ್ತಿರಬೇಕು. ಸಂಘಸ ಸದಸ್ಯರು ಕನಿಷ್ಠ 7ನೇ ತರಗತಿಯ ವರೆಗೆ ಶಿಕ್ಷಣ ಹಾಗೂ ಎಲೆಕ್ಟಾçನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು. ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಬ್ಯಾಂಕನ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು. ಸ್ವ-ಸಹಾಯ ಗುಂಪು ಸಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಡೇ.ಎನ್‌ಯುಎಲ್‌ಎಂ ಅಭಿಯಾನದಡಿ ನೋಂದಾಯಿಸಿಕೊಂಡು ಮಾನ್ಯತೆ ಇರುವ ಎಂಐಎಸ್ ಕೋಡ್ ಹೊಂದಿರಬೇಕು. ಸಂಘ ರಚನೆಯಾಗಿ ಕನಿಷ್ಟ 3 ವರ್ಷ ಪೂರೈಸಿರಬೇಕು. ಸಂಘ ಅಥವಾ ಸಂಘದ ಸದಸ್ಯ ಯಾವುದೇ ಅಪರಾಧ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬಾರದು. ನಗರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೇಂದ್ರ ಸರ್ಕಾರದ ಸಮರ್ಥ ಜವಳಿ ಇಲಾಖೆಯಲ್ಲಿನ ಯೋಜನೆಯಾದ ಉಚಿತ ಹೋಲಿಗೆ ತರಬೇತಿ ಹಾಗೂ ಕೌಶಲ್ಯ ತರಬೇತಿಗೆ ಪಟ್ಟಣದ ವಿಜಯಪುರ ರಸ್ತೆಯ ಎನ್.ಎಸ್.ಹಿರೇಮಠ ಬಿಲ್ಡಿಂಗ್‌ನಲ್ಲಿರುವ ಓಜೋನ್ ಸಲ್ಯುಶನ್ ಕೇಂದ್ರದ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ.೧೮-೪೦ರ ವಯೋಮಾನದ ಎಲ್ಲಾ ವರ್ಗದ ಯುವಕ ಯುವತಿಯರಿಗೆ ಯಾಂತ್ರೀಕೃತ ಹೊಲಿಗೆ ಯಂತ್ರ ತರಬೇತಿ, ವ್ಯಕ್ತಿತ್ವ ವಿಕಸನ ತರಬೇತಿ, ಹಾಗೂ ಇನ್ನಿತರ ಕೌಶಲ್ಯ ತರಬೇತಿ ಪ್ರಾರಂಭ ಮಾಡಲಾಗುತ್ತಿದೆ. ತರಬೇತಿ ಮುಗಿದ ನಂತರ ಪ್ರಮಾಣ ಪತ್ರ ನೀಡುವುದರ ಜೊತೆಗೆ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪಠ್ಯಪುಸ್ತಕ ಸೇರಿದಂತೆ ಇನ್ನಿತರ ಹೋಲಿಗೆ ಸಾಮಗ್ರಿಗಳನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ೪ಭಾವಚಿತ್ರದ ಜೊತೆಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ನೀಡಬೇಕು. ಕನಿಷ್ಠ ೭ನೇ ತರಗತಿ ಪಾಸಾಗಿರಬೇಕು. ಮೇಲೆ ತಿಳಿಸಿದ ಎಲ್ಲ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಖುದ್ದಾಗಿ ಕಾರ್ಯಾಲಯಕ್ಕೆ ಬಂದು ಅರ್ಜಿ ಸಲ್ಲಿಸಬೇಕು. ಮತ್ತು ಹೆಚ್ಚಿನ ಮಾಹಿತಿಗಾಗಿ ೯೪೭೨೯೭೪೧೬೦ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ಸಂಸ್ಥೆಯ ಮುಖ್ಯಸ್ಥ…

Read More