Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಂದಾಳದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗ್ರಾಮೀಣ ಪ್ರದೇಶದ ಶ್ರೇಯೋಭಿವೃದ್ಧಿಗೆ ಸರಕಾರ ಹಲವಾರು ಯೋಜನೆಗಳಿಗಾಗಿ ಅನುದಾನ ಮಂಜೂರು ಮಾಡುತ್ತಿದೆ. ಸದುಪಯೋಗವಾಗಬೇಕೆನ್ನುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಕ್ರೀಯಾಯೋಜನೆ ಮಾಡಿ ಸರಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಸೂಚಿಸಿದರು.ತಾಲೂಕಿನ ಬಂದಾಳ ಗ್ರಾಮದಲ್ಲಿ ಹಮ್ಮಿಕೊಂಡ ಜನಸಂಪರ್ಕ ಸಭೆಯನ್ನು ಶಾಸಕ ಅಶೋಕ ಮನಗೂಳಿ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಶಾಲೆಗಳ ಮೂಲಭೂತ ಸೌಕರ್ಯಗಳಾದ ಶೌಚಾಲಯ, ನೀರು, ಶಾಲಾ ಕಂಪೌಂಡ ಸೇರಿದಂತೆ ಅನೇಕ ಸೌಲಭ್ಯ ಪೂರೈಸಲು ಇಲಾಖಾವಾರು ಸಭೆ ನಡೆಸಿ ಬಂದಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಚಿಕ್ಕಸಿಂದಗಿ, ಓತಿಹಾಳ, ಬೂದಿಹಾಳ, ಬಂದಾಳ ಜನರ ಮೂಲಭೂತ ಸಮಸ್ಯೆಗಳನ್ನು ನರೇಗಾ ಯೋಜನೆಯಲ್ಲಿ ನಿರ್ವಹಿಸಬಹುದು. ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ ಅವರ ಕನಸಿನ ಮೇರೆಗೆ ತಾಲೂಕಿನ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡು ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ದೊರಕಿಸಿ ಕೋಡಬೇಕು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಓತಿಹಾಳ ಗ್ರಾಮದ ರಸ್ತೆಗಳು ಅನೇಕ ವರ್ಷಗಳಿಂದ ಹದಗೆಟ್ಟಿದ್ದು, ಅದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಕಾರಣ ರಸ್ತೆಗಳನ್ನು ದುರಸ್ಥಿಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಮತ್ತು ಬಂದಾಳ ಓತಿಹಾಳ, ಬೂದಿಹಾಳ ಹಾಗೂ ಹರನಾಳ ಮಾರ್ಗವಾಗಿ ವಿಜಯಪುರಕ್ಕೆ ತೆರಳಲು ಸಾರಿಗೆ ಬಸ್ಸ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕರಿಗೆ ವಿಜಯಪುರ ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಉಪಾಧ್ಯಕ್ಷ ಚಂದ್ರಶೇಖರ ದೇವರೆಡ್ಡಿ ಮನವಿ ಮಾಡಿಕೊಂಡರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೇಸ್ ಪಕ್ಷವು ಅವೈಜ್ಞಾನಿಕ ನಿಲುವನ್ನು ಕೈಗೆತ್ತಿಕೊಂಡು ಚುನಾವಣೆ ಗೆಲ್ಲುವ ಭರದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸಂಪೂರ್ಣ ಹದಗೆಡಿಸಿ ರಾಜ್ಯವನ್ನು ದಿವಾಳಿಯತ್ತ ದುಡಿದ್ದಾರೆ. ಮತ್ತೇ ಇದೀಗ ಏಕಾ ಏಕಿ ಶೇ.೧೫ರಷ್ಟು ಬಸ್ ದರವನ್ನು ಹೆಚ್ಚಿಸುವ ಮುಖಾಂತರ ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಿಗೆ ಬಿದ್ದಿದೆ. ಇಂತಹ ಗ್ಯಾರಂಟಿ ಯೋಜನೆಗಳು ಯಾರಿಗೆ ಬೇಕು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ. ತೈಲದರ ಹೆಚ್ಚಳವಾಗದೇ ಬಸ್ ದರ ಹೆಚ್ಚಳ ಮಾಡಿರುವುದು ನೋಡಿದರೇ ಸರ್ಕಾರ ದಿವಾಳಿಯಾಗಿದೆ ಎಂಬುದು ಗೊತ್ತಾಗುತ್ತಿದೆ. ಈ ಬಸ ದರ್ ಹೆಚ್ಚಳವನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಮತ್ತು ಈ ಸರ್ಕಾರದ ಅವೈಜ್ಞಾನಿಕ ನಿಲುವನ್ನು ಜನರ ಮದ್ಯ ತಂದು ಜನರನ್ನು ರಾಜ್ಯಾದ್ಯಂತ ಜನಾಂದೋಲನ ಮಾಡಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷ ರಾಜ್ಯ ಉಪಾಧ್ಯಕ್ಷ ಡಾ.ದಸ್ತಗೀರ ಮುಲ್ಲಾ ಎಚ್ಚರಿಕೆ ನೀಡಿದ್ದಾರೆ.
ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತಾದ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶರಣರ ಪರಂಪರೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದ ಡಾ.ಕಲಬುರ್ಗಿ ಅವರು ಕಲ್ಯಾಣದ ಅವಸಾನದ ದಿನಗಳನ್ನು ನಾಟಕ ರೂಪದಲ್ಲಿ ಹೇಳಿದ್ದಾರೆ ಎಂದು ಚಡಚಣ ಶ್ರೀ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.ಅವರು ಪಟ್ಟಣದ ಮಾಂಗಲ್ಯ ಭವನದಲ್ಲಿ ಕರ್ನಾಟಕ ಸರ್ಕಾರದ ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗು ವಿಜಯಪುರದ ಕಲಬುರ್ಗಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಡಾ.ಎಂ.ಎಂ.ಕಲಬುರ್ಗಿ ಅವರ ಸೃಜನ ಸಾಹಿತ್ಯ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಸಮಾರಂಭದಲ್ಲಿ ಕಲಬುರ್ಗಿ ಅವರು ರಚಿಸಿದ ಕೆಟ್ಟಿತ್ತು ಕಲ್ಯಾಣ ಎಂಬ ನಾಟಕದ ಕುರಿತಾಗಿ ಮಾತನಾಡಿದರು.ಅವರದು ಚಲನಶೀಲವಾದ ಸಂಶೋಧನೆ. ಸುಮಾರು ೧೨ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕಾರ್ಯ ಶ್ಲಾಘನೀಯ ಎಂದರು.ಈ ವೇಳೆ ಡಾ.ಕಲಬುರ್ಗಿ ಅವರ ಕಾವ್ಯವಾದ ನೀರು ನೀರಡಿಸಿತ್ತು ಮತ್ತು ನೀರಾಗ ನಿಂತೀನಿ ನಿರಡಿಸಿ ಕಾವ್ಯದ ಕುರಿತು…
ಉದಯರಶ್ಮಿ ದಿನಪತ್ರಿಕೆ ನವದೆಹಲಿ: ಕುಮಾರಿ ಹರ್ಷಿತಾ ಕುಶಾಲಪ್ಪ ಅವರು ಭರತ ನಾಟ್ಯ ಶಾಸ್ತ್ರೀಯ ನೃತ್ಯದ ವಿದ್ವತ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಪ್ರಸ್ತುತ ಇವರು ರಾಷ್ಟ್ರದ ರಾಜಧಾನಿ ಕ್ಷೇತ್ರವಾದ ನೋಯ್ಡಾದ ಪ್ರತಿಷ್ಟಿತ ಶಾಲೆಯೊಂದರಲ್ಲಿ ನೃತ್ಯ ಗುರುಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ದೆಹಲಿಯಲ್ಲಿ ನಡೆಯುವ ಅನೇಕ ಕಾರ್ಯಕ್ರಮಗಳಲ್ಲಿ ಇವರು ಪ್ರಸ್ತುತಿ ನೀಡಿ ಭೇಷ್ ಎನಿಸಿಕೊಂಡಿದ್ದಾರೆ.ಇಲ್ಲಿನ ಅನೇಕ ಕನ್ನಡಿಗರಿಗೆ ನೃತ್ಯ ಸಂಯೋಜನೆ ಮಾಡಿ ಕನ್ನಡಿಗರ ಮನೆಮಾತಾಗಿದ್ದಾರೆ.ವಿದ್ವಾನ ದೀಪಕ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಪುತ್ತೂರಿನ ಶ್ರೀ ಮೂಕಾಂಬಿಕಾ ಸಾಂಸ್ಕೃತಿಕ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ನಡೆದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.ಇವರು ತಮ್ಮ ಹತ್ತನೇ ತರಗತಿಯಿಂದಲೇ ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿ, ಆ ದಿಸೆಯಲ್ಲಿ ಸತತ ಅಧ್ಯಯನದೊಂದಿಗೆ ಆಸಕ್ತಿಯುತವಾಗಿ ಭರತ ನಾಟ್ಯವನ್ನು ತಮ್ಮ ಉಸಿರಾಗಿಸಿಕೊಂಡು ಸತತ ಪರಿಶ್ರಮದಿಂದ ವಿದ್ವತ್ ಪರೀಕ್ಷೆ ಪಾಸು ಮಾಡಿರುವ ಹರ್ಷಿತ ಕುಶಾಲಪ್ಪ ಅವರಭವ್ಯ ಭವಿತವ್ಯ ಉಜ್ವಲವಾಗಲೆಂದು ಸ್ವರಾಂಜಲಿ,ಗಣೇಶ ಮಿತ್ರ ಮಂಡಳಿ ಹಾಗೂ ಡೆಲ್ಲಿ ಫ್ರೆಂಡ್ಸ್ ಗೆಳೆಯರ ಬಳಗದ ಸದಸ್ಯರು ಶುಭ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 2ನೇ ಪುಣ್ಯಸ್ಮರಣೆಯ ಗುರುನಮನ ಮಹೋತ್ಸವದ ಅಂಗವಾಗಿ ನಗರದ ಜ್ಞಾನಯೋಗಾಶ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಮತ್ತು ರಕ್ತದಾನ ಶಿಬಿರ ಗುರುವಾರ ಮತ್ತು ಶುಕ್ರವಾರ ನಡೆಯಿತು.ಈ ಶಿಬಿರವನ್ನು ಸಸಿಗೆ ನೀರೆರೆಯುವ ಮೂಲಕ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ನಮ್ಮನ್ನು ಅಗಲಿ 2 ವರ್ಷಗಳಾದರೂ, ಅವರು ತೋರಿದ ಸನ್ಮಾರ್ಗ, ಜ್ಞಾನ ದಾಸೋಹಗಳು ಅಜರಾಮರವಾಗಿವೆ. ಯಾವಾಗಲೂ ಪ್ರಕೃತಿಯ ಆರಾಧಕರಾಗಿದ್ದರು. ನಾವು ಪ್ರಕೃತಿಯ ಜೊತೆ ಪ್ರೀತಿಯಿಂದಿದ್ದರೆ, ಸುಖಕರ ಜೀವನ ಸಾಗಿಸಬಹುದು ಎಂದು ತೋರಿಸಿ ಕೊಟ್ಟಿದ್ದರು. ಇಂದಿನ ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಆರೋಗ್ಯಕರ ಜೀವನಶೈಲಿ ಪಾಲಿಸಿ, ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.ಪ್ರತಿ ವರ್ಷ ಗುರು ಪೂರ್ಣಿಮೆ ಮತ್ತು ಗುರುನಮನ ಮಹೋತ್ಸವದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಅಯುರ್ವೇದ ಮಹಾವಿದ್ಯಾಲಯದಲ್ಲಿ ಜನೇವರಿ 8 ರಿಂದ ಜನೇವರಿ 10ರ ವರೆಗೆ ಮೂರು ದಿನಗಳ ಕಾಲ ಆಮ್ಲಪಿತ್ತ(ಅಸಿಡಿಟಿ) ಅಂದರೆ ಸಾಮಾನ್ಯ ಲಕ್ಷಣಗಳಾದ ಎದೆ ಉರಿ, ಹುಳಿತೇಗು, ಅಜೀರ್ಣ, ಪಿತ್ತವಾಂತಿ, ತಲೆ ನೋವು, ಅರುಚಿ ಮೂಂತಾದ ಪಿತ್ತದ ತೊಂದರೆಗಳಿಗೆ ಸಂಬಂಧಿಸಿದ ರೋಗಗಳ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ.ಈ ನಿಗದಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿದ್ದು, ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೊಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಪೂರ್ವ ನೋಂದಣಿಗಾಗಿ ಡಾ.ಕಿರಣ ಸಿ. ಎಂ, ಮೊಬೈಲ್ ನಂ. 8095808011 ಮತ್ತು 7204748422 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಅಯುರ್ವೇದ ಮಹಾವಿದ್ಯಾಲಯದಲ್ಲಿ ನಾಳೆ ಜನೇವರಿ 7 ರಿಂದ ಮಾರ್ಚ್ 7ರ ವರೆಗೆ ಎರಡು ತಿಂಗಳ ಕಾಲ ಕಿಡ್ನಿ ಫೆಲ್ಯುರ್ (Chronic Kidney Disease) ಮತ್ತು ಕಿಡ್ನಿಗೆ ಸಂಭದಿಸಿದ ಇತರೆ ರೋಗಗಳಿಗೆ ವಿಶೇಷವಾಗಿ ಹೆಚ್ಚಿನ ಕ್ರೀಯಾಟೆನಿನ್ ಹೋಂದಿರುವ ರೋಗಿಗಳಿಗೆ ವಿಶೇಷ ಸಲಹೆ ಹಾಗೂ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದ್ದು, ಕಿಡ್ನಿ ಸಂಬಂಧಿತ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಈ ಉಚಿತ ಶಿಬಿರದ ಸದುಪಯೊಗವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ.ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿ ಮತ್ತು ಪೂರ್ವ ನೋಂದಣಿಗಾಗಿ ಡಾ. ಆಶ್ವಿನಿ ಸಜ್ಜನವರ- ಮೊಬೈಲ್ ನಂ. 7406737888 ಮತ್ತು 8073853981 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಶೋಕ ಬ್ರಾಹ್ಮಣ, ಜೈನ , ಬೌದ್ಧ ಸೇರಿದಂತೆ ಆಗಿನ ಎಲ್ಲಾ ಮತಗಳಿಗೂ ದಾನ- ದತ್ತಿಗಳನ್ನು ಕೊಟ್ಟಿದ್ದಾನೆ. ಇದನ್ನು ಅವನ ಶಾಸನಗಳೇ ಹೇಳುತ್ತವೆ ಎಂದು ಕಶೀರ , ಮಾಗಧ ಕಾದಂಬರಿಗಳ ಖ್ಯಾತಿಯ ಲೇಖಕಿ ಸಹನಾ ವಿಜಯಕುಮಾರ್ ಹೇಳಿದರು.ಶನಿವಾರ ದಿನಾಂಕ 4 ರಂದು , ನಗರದ ಶುಭಶ್ರೀ ಸಾಗರ ಹಾಲ್ ನಲ್ಲಿ ನಡೆದ ಅಖಿಲ ‘ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ’ ಆಯೋಜನೆ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಅವರು’ ಅಶೋಕ ಸಾಮ್ರಾಜ್ಯ ಕಂದಹಾರದಿಂದ ಹಿಡಿದು ಸುವರ್ಣಗಿರಿ ಅಂದರೆ ಇವತ್ತಿನ ಉತ್ತರ ಕರ್ನಾಟಕದ ಭಾಗದವರೆಗೂ ಇತ್ತು. ಅಶೋಕನ ಅತಿಹೆಚ್ಚು ಶಾಸನ ಸಿಕ್ಕಿರುವುದು ನಮ್ಮ ಕರ್ನಾಟಕದಲ್ಲಿಯೇ. ಡೇರಿಯಸ್ ನ ಪ್ರಭಾವ ಅಶೋಕ ಶಾಸನಗಳ ಬರೆಸಲು ಪ್ರಾರಂಭಿಸಿದ. ಡೇರಿಯಸ್ ಅಂತಿಯೇ ಅಶೋಕ ಎತ್ತರವಾದ ಬಂಡೆಗಳಲ್ಲಿ ಶಾಸನಗಳನ್ನು ಬರೆಸಿದ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ ಜಿಲ್ಲಾಧ್ಯಕ್ಷ ನಾರಾಯಣ ಬಾಬಾನಗರ ವಹಿಸಿದ್ದರು.ನಿರೂಪಣೆ ರಾಹುಲ್ ಮರಳಿ, ಸ್ವಾಗತ ಪರಿಚಯ – ವರಣು ಸೋಲಾಪುರ, ವಂದನಾರ್ಪಣೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಾವಣಗೆರೆಯ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ೭೦ನೇ ವಾರ್ಷಿಕೋತ್ಸವ ಹಾಗೂ ಕನ್ನಡ ನಿತ್ಯೋತ್ಸವದ ಅಂಗವಾಗಿ ಕೊಡಮಾಡುವ ೨೦೨೫ನೇ ಸಾಲಿನ ರಾಷ್ರ್ಟಮಟ್ಟದ ‘ಸರಸ್ವತಿ ಸಾಧಕ ಸಿರಿ’ ಪ್ರಶಸ್ತಿಗೆ ನಗರದ ಮೂವರು ಸಾಧಕರು ಆಯ್ಕೆಯಾಗಿದ್ದಾರೆ.ಸಾಹಿತ್ಯ ಕೃಷಿಯಲ್ಲಿ ಮಾಡಿರುವ ಸಾಧನೆಗಾಗಿ ಬಸವ ಜನ್ಮಭೂಮಿ ಪ್ರತಿಷ್ಠಾನದ ಸಂಚಾಲಕˌ ಸಾಹಿತಿ ಮುರುಗೇಶ ಸಂಗಮ ಮತ್ತು ಕವಯತ್ರಿ ಈರಮ್ಮ ಬೋನೂರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಶಿಕ್ಷಕಿ ತಾರಾಮತಿ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದ್ದು ˌ ಎ.೨೭ ರಂದು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಈ ಮೂವರು ಸಾಧಕರಿಗೆ ರಾಷ್ರ್ಟಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
