Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ವೈ.ಬಿ.ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಡಾ.ಮಂಜುನಾಥ ಮಠ ಪುನರಾಯ್ಕೆಯಾಗಿದ್ದಾರೆ.ಪಟ್ಟಣದ ಬ್ಯಾಂಕ್ನಲ್ಲಿ ಶುಕ್ರವಾರ ಅಧ್ಯಕ್ಷ ಹಾಗೂ ಉಪಾದ್ಯಕ್ಷರ ಆಯ್ಕೆಗಾಗಿ ಜರುಗಿದ ಸಭೆ ಸಭೆಯಲ್ಲಿ ಎಲ್ಲ ನಿರ್ದೇಶಕರು ಒಮ್ಮತದಿಂದ ಡಾ.ವೈ.ಬಿ.ಪಾಟೀಲರನ್ನು ಎರಡನೆಯ ಬಾರಿಗೆ ಅಧ್ಯಕ್ಷರನ್ನಾಗಿ ಹಾಗೂ ಹಿಂದಿನ ಉಪಾಧ್ಯಕ್ಷ ಮಂಜುನಾಥ ಮಠ ಅವರನ್ನೇ ಪುನಃ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ೨೦೨೫-೩೦ರ ಅವಧಿಗಾಗಿ ಆಯ್ಕೆ ಮಾಡಿದರು. ನಂತರ ನಿರ್ದೇಶಕ ಮಂಡಳಿಯಿಂದ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮಾತನಾಡಿ, ಮುಂದಿನ ದಿನಗಳಲ್ಲಿ ಬ್ಯಾಂಕ್ ಗ್ರಾಹಕರ ಸಹಕಾರದೊಂದಿಗೆ ಹೊಸ ಹೊಸ ಯೋಜನೆಗಳ ಮೂಲಕ ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮ ವಹಿಸುತ್ತದೆ ಎಂದು ಹೇಳುತ್ತಾ. ನಮ್ಮ ಆಯ್ಕೆ ಎಲ್ಲ ನಿರ್ದೆಶಕ ಮಂಡಳಿ ಹಾಗೂ ಸರ್ವಸದಸ್ಯರ ನಂಬಿಕೆ, ಭರವಸೆಯ ಪ್ರತೀಕವಾಗಿದೆ ಎಂದರು.ನಿರ್ದೇಶಕರಾದ ಬಿ.ಜಿ.ಪಾಟೀಲ, ಪಿ.ವ್ಹಿ.ದೇಶಪಾಂಡೆ, ಎಸ್.ಕೆ.ಸಜ್ಜನ, ಡಿ.ಡಿ.ಲಮಾಣಿ ಬಿ.ಎಮ್.ಪಾಟೀಲ, ಎಸ್.ಎಸ್.ಉತ್ನಾಳ, ವಿ.ಜಿ.ಪಾಟೀಲ, ಸಿ.ಕೆ.ಮಸಳಿ ಆಯ್.ಸಿ.ಕುದರಿ, ವ್ಹಿ. .ಎಸ್.ಪಾಟೀಲ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಪಾಟೀಲ ಹಾಗೂ ಸಿಬ್ಬಂದಿ ಇದ್ದರು.
ದೇವರಹಿಪ್ಪರಗಿ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನ ಮೂರು ಗೋಷ್ಠಿ, ಬಹಿರಂಗ ಅಧಿವೇಶನದ ನಂತರ ಸಮಾರೋಪಗೊಂಡಿತು.ಪಟ್ಟಣದಲ್ಲಿ ಶುಕ್ರವಾರ ಜರುಗಿದ ಸಾಹಿತ್ಯ ಸಮ್ಮೇಳನದಲ್ಲಿ ಮಧ್ಯಾನ್ಹವೇ ಆರಂಭಗೊಳ್ಳಬೇಕಿದ್ದ ಗೋಷ್ಠಿಗಳು ಸುಮಾರು ೨ ಗಂಟೆಗಳ ಕಾಲ ವಿಳಂಬವಾಗಿ ಆರಂಭಗೊಂಡವು. ಸಾಯಂಕಾಲ ಶರಣ ಗೋಷ್ಠಿಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.೧ನೇ ಗೋಷ್ಠಿ,ಶರಣ ಗೋಷ್ಠಿ: ನ್ಯಾಯವಾದಿ ಮಹ್ಮದ್ಗೌಸ ಹವಾಲ್ದಾರ ಉದ್ಘಾಟಿಸಿ ಮಾತನಾಡಿದರು.ಸಾಹಿತಿ ಶ್ರೀಧರ ಆಸಂಗಿಹಾಳ ಮಾತನಾಡಿ, ಸರ್ವರಿಗೂ ಹಿತವೇನಿಸುವುದೇ ಸಾಹಿತ್ಯ. ಪ್ರೇಮದ ನುಡಿ, ಭಾಷೆಯನ್ನು ಜಗಕ್ಕೆ ನೀಡುವುದೇ ಸಾಹಿತ್ಯ ಇಂಥ ಸಾಹಿತ್ಯ ರಕ್ಷಕ ಮಾಡಿವಾಳ ಮಾಚಿದೇವ ಎಂದು ಹೇಳುತ್ತಾ ಮಾಚಿದೇವರ ಕಾರ್ಯ, ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮೊಹರೆ ಹಣಮಂತ್ರಾಯರ ಕುರಿತು ಮಾತನಾಡಿ, ಪತ್ರಿಕಾರಂಗದಲ್ಲಿ ಅವರು ಸಲ್ಲಿಸಿದ ಸೇವೆ, ನಡೆದುಬಂದ ದಾರಿಯ ಕುರಿತು ವಿವರಿಸಿದರು.ಹೂವಿನಹಿಪ್ಪರಗಿ ಪತ್ರಿಮಠದ ದ್ರಾಕ್ಷಾಯಣಿ ಮಾತಾಜಿ ಹಾಗೂ ಪರದೇಶಿಮಠದಶ್ರೀ ಸಾನಿಧ್ಯ ವಹಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿಯನ್ ಅಕಾಡೆಮಿ ಆಫ್ ಪೆಡಿಯಾಟ್ರಿಕ್ಸ್ (ಐಎಪಿ) ಕರ್ನಾಟಕ ರಾಜ್ಯ ಘಟಕ-2025 ರ ಅನುಸ್ಥಾಪನಾ ಸಮಾರಂಭ ಜನವರಿ 5 ರಂದು ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆಯ ಟ್ರಾಮಾ ಸೆಂಟರ್ನ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ (ಐಎಪಿ) ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಡಾ. ಎಸ್. ವಿ. ಪಾಟೀಲ, ಕಾರ್ಯದರ್ಶಿಯಾಗಿ ಡಾ. ಸಿದ್ದು ಚರ್ಕಿ ಹಾಗೂ ಇತರ ಸದಸ್ಯರು ಹೊಸ ಪದಾಧಿಕಾರಿಗಳಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಈ ಸಮಾರಂಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಐಎಪಿ ರಾಷ್ಟ್ರೀಯ ಅಧ್ಯಕ್ಷ ಡಾ. ಜಿ. ವಿ. ಬಸವರಾಜ ಹಾಗೂ ಡಾ. ಎಲ್. ಎಚ್. ಬಿದರಿ ಅಶ್ವಿನಿ ಆಸ್ಪತ್ರೆ ಮತ್ತು ಕರ್ನಾಟಕದ ನೆರೆಯ ರಾಜ್ಯಗಳ ನಾನಾ ಭಾಗಗಳಿಂದ ಪ್ರತಿಷ್ಠಿತ ವೈದ್ಯರು, ಶಿಕ್ಷಣ ತಜ್ಞರು ಹಾಗೂ ಗಣ್ಯರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಂಜಾರಾ ಕ್ರಾಸ್ ಬಳಿ ಇರುವ ಕೂಡು ರಸ್ತೆಗೆ ಸಂತ ಶ್ರೀ ಸೇವಾಲಾಲ ಮಹಾರಾಜರ ವೃತ್ತ ಎಂದು ನಾಮಕರಣ ಮಾಡಲು ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರನ್ನು ಬಂಜಾರಾ ಸಮುದಾಯದ ಧರ್ಮ ಗುರುಗಳು ಮತ್ತು ಮುಖಂಡರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.ಶನಿವಾರ ಶಾಸಕರ ಕಚೇರಿಗೆ ಆಗಮಿಸಿದ ಬಂಜಾರಾ ಧರ್ಮ ಗುರುಗಳು ಮತ್ತು ಮುಖಂಡರು ನಮ್ಮ ಬಹುದಿನಗಳ ಬೇಡಿಕೆಯಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಸಚಿವರಾದ ಎಂ. ಬಿ. ಪಾಟೀಲ ಮತ್ತು ಶಾಸಕರಾದ ಸುನೀಲಗೌಡ ಪಾಟೀಲ ಅವರು ಇತ್ತೀಚಿಗೆ ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ನಗರದ ಸೋಲಾಪುರ ರಸ್ತೆಯಲ್ಲಿರುವ ಶ್ರೀ ಡಿ. ಎಲ್. ಚವ್ಹಾಣ ಅವರ ವಾಣಿಜ್ಯ ಮಳಿಗೆ ಮತ್ತು ರಿಲಾಯನ್ಸ್ ಪೆಟ್ರೋಲ್ ಪಂಪ ಹತ್ತಿರ ಇರುವ ಕೂಡು ರಸ್ತೆಗೆ ಸಂತ ಶ್ರೀ ಸೇವಾಲಾಲ ಮಹಾರಾಜರ ವೃತ್ತ ಎಂದು ನಾಮಕರಣ ಮಾಡಲು ಠರಾವು ಪಾಸ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಇದರಿಂದಾಗಿ ನಮ್ಮ ಸಮುದಾಯಕ್ಕೆ ಅತೀವ ಸಂತೋಷವಾಗಿದೆ.…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರ ಆಶ್ರಯ ಸಮಿತಿಯ ನೂತನ ಅಧ್ಯಕ್ಷರ ಹಾಗೂ ಸದಸ್ಯರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಕ್ಷೇತ್ರದ ಅಭಿವೃದ್ಧಿಗೆ ಸದಾ ತುಡಿಯುವ ಮನಸ್ಸು ಸಚಿವ ಶರಣಬಸಪ್ಪಗೌಡ ದರ್ಶನಪುರವರ ಆಶಯದಂತೆ ಆಶ್ರಯ ಕಮಿಟಿ ಅಧ್ಯಕ್ಷ ಹಾಗೂ ಸದಸ್ಯರು ಸೂಕ್ತ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕಾರ್ಯಪ್ರವೃತ್ತರಾಗಿ ಎಂದರು.ಶರಣಬಸ್ಸು (ಕಾಕ) ಡಿಗ್ಗಾವಿ ಅಧ್ಯಕ್ಷರು, ಮತ್ತು ಸೋಮಶೇಖರ ಶಹಾಪುರ, ರೇವಣಸಿದ್ದಪ್ಪ ಯಾಳಗಿ, ದೇವೇಂದ್ರಪ್ಪ ವಠಾರ, ಶ್ರೀಮತಿ ಹೀನಾ ಕೌಸರ ಎಮ್ ಪಟೇಲ್ ಕಾಚೂರ ಇವರುಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.ಇದೇ ವೇಳೆ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ವಾಮನರಾವು ದೇಶಪಾಂಡೆ, ಮಾಜಿ ತಾಪಂ ಸದಸ್ಯ ಖಾಜಾಪಟೇಲ್ ಕಾಚೂರ, ಮಹಿಪಾಲರೆಡ್ಡಿ ಡಿಗ್ಗಾವಿ. ಪುರಸಭೆ ಸದಸ್ಯರು ಹಾಗೂ ನಾಮನಿರ್ದೇಶನ ಸದಸ್ಯರುಗಳು ಸೇರಿದಂತೆ ಪುರಸಭೆ ಮುಖ್ಯಾಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಹಿಳಾ ಮತ್ತು ಪುರುಷರ ವಿಭಾಗದ ಸೈಕ್ಲಿಂಗ್ ಆಯ್ಕೆ ಪ್ರಕ್ರಿಯೆ ಜರುಗಿತು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಸೈಕ್ಲಿಂಗ್ ಪಟುಗಳ ಆಯ್ಕೆ ಪ್ರಕ್ರಿಯೆಯಲ್ಲಿ ೬ ಜನರನ್ನೊಳಗೊಂಡ ೧ ಪುರುಷ ತಂಡ ಹಾಗೂ ೬ ಜನ ಮಹಿಳೆಯರನ್ನೊಳಗೊಂಡ ೧ ಮಹಿಳಾ ತಂಡವನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಹಾವಿದ್ಯಾಲಯ ಉಪ ಪ್ರಾಚಾರ್ಯ ಡಾ.ಅನಿಲ ಬಿ ನಾಯಕ, ಐಕ್ಯೂಎಸಿ ಸಂಯೋಜಕ ಡಾ.ಪಿ. ಎಸ್. ಪಾಟೀಲ, , ದೈಹಿಕ ನಿರ್ದೆಶಕ ಎಸ್.ಕೆ.ಪಾಟೀಲ, ದಿಲೀಪಗೌಡ ಪಾಟೀಲ, ಶಶಿಧರ ಹೆರಲಗಿ, ಎಂ. ಪಿ. ಕುಪ್ಪಿ, ಅಲ್ಕಾ ಪಡತಾರೆ, ಶಿರಹಟ್ಟಿ ಮತ್ತಿತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಜ.5 ರಂದು ಸಂಜೆ 5:30ಕ್ಕೆ ಮುದ್ದೇಬಿಹಾಳ ಕ್ರಿಕೇಟ್ ಪ್ರೀಮಿಯರ್ ಲೀಗ್ ಸೀಸನ್-7 ನ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಗಳ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ, ಸೀಸನ್ ನ ರೂವಾರಿ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ಮತ್ತು ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು ವಹಿಸಿಕೊಳ್ಳಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪಂದ್ಯಾವಳಿಯ ಪ್ರಥಮ ಬಹುಮಾನ ವಿತಕರಕರಾದ ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ ಮತ್ತು ಕರ್ನಾಟಕ ಯುತ್ ಕಾಂಗ್ರೇಸ್ ನ ಪ್ರಾಧಾನ ಕಾರ್ಯದರ್ಶಿ ಸತ್ಯಜಿತ್ ಪಾಟೀಲ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ವಿ.ಎಂ.ನಾಗಠಾಣ ವಕೀಲರು, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಕಾಳಗಿ ಗ್ರಾ.ಪಂ ಮಾಜಿ…
ಲೇಖನಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಶಕುಂತಲಾ ದೇವಿ ಅವರು ಮಾನವ ಕಂಪ್ಯೂಟರ್ ಎಂದೇ ಖ್ಯಾತಿಗಳಿಸಿದ್ದ ವಿಶ್ವ ವಿಖ್ಯಾತ ಭಾರತೀಯ ಗಣಿತಶಾಸ್ತ್ರಜ್ಞೆ. ಬಾಲ ಪ್ರತಿಭೆಯಾಗಿ ಬೆಳಕಿಗೆ ಬಂದ ಇವರು ಜ್ಯೋತಿಷ್ಯ ಶಾಸ್ತ್ರದಲ್ಲೂ ವಿದ್ವಾಂಸರಾಗಿದ್ದರು. ಶಕುಂತಲಾ ದೇವಿ ಕ್ರಿಸ್ತಶಕ 1929ರ ನವೆಂಬರ್ 4ರಂದು ಬೆಂಗಳೂರಿನಲ್ಲಿ ಜನಿಸಿದರು. ಇವರ ತಂದೆ ಸಿ.ವಿ.ಎಸ್ ರಾಜಾ ರಾವ್ ಹಾಗೂ ತಾಯಿ ಸುಂದರಮ್ಮ. ಅವರ ತಂದೆ ಪುರೋಹಿತರಾಗಿದ್ದರು. ಕೆಲವು ಸಮಯ ಅವರು ಸರ್ಕಸ್ ನಲ್ಲೂ ಕೆಲಸ ಮಾಡುತ್ತಿದ್ದರು. ಶಕುಂತಲಾದೇವಿಯವರು ಚಿಕ್ಕಪ್ರಾಯದಲ್ಲಿ ಗಣಿತದಲ್ಲಿ ಅತ್ಯಾಸಕ್ತರಾಗಿದ್ದರು ಮತ್ತು ಅತ್ಯಂತ ಪ್ರತಿಭಾನ್ವಿತರಾಗಿದ್ದರು. ಹಲವಾರು ಗಣಿತದ ಸಮಸ್ಯೆಗಳನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದರು. ಬಾಲ್ಯದಿಂದಲೇ ಶಕುಂತಲಾ ದೇವಿಯವರ ಪ್ರತಿಭೆ ಸಾಮಾನ್ಯ ಜನರಿಗೂ ಅರ್ಥವಾಗುವಷ್ಟು ಜನಜನಿತವಾಗಿತ್ತು.ಮನೆತನದ ಪೌರೋಹಿತ್ಯವೃತ್ತಿಯನ್ನು ಮಾಡಲು ಒಪ್ಪದೇ ಇವರ ತಂದೆ ದೇವಸ್ಥಾನದಲ್ಲಿ ಪೂಜಾರಿಯಾಗುವುದನ್ನು ವಿರೋಧಿಸಿ ಸರ್ಕಸ್ ಕಂಪನಿ ಒಂದರಲ್ಲಿ ಕೆಲಸಕ್ಕೆ ಸೇರಿದರು. ಮಗಳಿಗೆ ಇಸ್ಪೀಟ್ ಎಲೆಗಳಲ್ಲಿ ಮಾಡುವ ಕೆಲವು ಕೈಚಳಕಗಳ ಬಗ್ಗೆ ತರಬೇತಿ ನೀಡಿದರು. ತಂದೆಯ ಈ ಪ್ರತಿಭೆ…
ಲೇಖನ- ಶ್ರೀಮತಿ ಇಂದಿರಾ ಮೋಟೆಬೆನ್ನೂರಬೆಳಗಾವಿ ಉದಯರಶ್ಮಿ ದಿನಪತ್ರಿಕೆ ‘ನಮ್ಮ ವಚನದ ನೂರೆಂಟು ಅಧ್ಯಯನಕ್ಕೆ ಶತರುದ್ರೀಯ ಯಾಗ ಸಮ ಬಾರದಯ್ಯಾ’ಸನಾತನಿಗಳ ಶ್ರೇಷ್ಠವಾದ, ಭವ್ಯವಾದ ಯಜ್ಞ ಶತರುದ್ರೀಯ ಯಜ್ಞವಾಗಿದೆ. ಶರಣರ ವಚನಗಳು ಮೌಲ್ಯಕ್ಕೆ ಅದನ್ನು ಹೋಲಿಸಿದರೆ ಅದೂ ಕೂಡ ಕಡಿಮೆಯೇ ಆಗುತ್ತದೆ.‘ವಚನದ ಸಾವಿರ ಪಾರಾಯಣಕೆ ಗಾಯತ್ರಿ ಲಕ್ಷ ಜಪ ಸಮಬಾರದಯ್ಯಾ’ ಎಂದು ಹೇಳುತ್ತಾರೆ. ವೈದಿಕ ವ್ಯವಸ್ಥೆಯನ್ನು ಧಿಕ್ಕರಿಸುತ್ತಾ ಶರಣ ಶಿವಯೋಗಿ ಸಿದ್ಧರಾಮರು ಶರಣರ ವಚನಗಳ ಹಿರಿಮೆ ಗರಿಮೆಯನ್ನು ಈ ವಚನದಲ್ಲಿ ಎತ್ತಿ ಹಿಡಿದಿದ್ದಾರೆ.ಸೊಲ್ಲಾಪುರದ ನೊಳಂಬ ರಾಣಿ ಚಾಮಲಾದೇವಿಯ ಅರಸೊತ್ತಿಗೆಯಲ್ಲಿ ರಾಜಗುರುಗಳಾಗಿ ಕೆರೆ, ಕಾಲುವೆ ನಿರ್ಮಾಣ ಮಾಡಿ, ಜನಸೇವೆ ಮಾಡಿ ಕರ್ಮಯೋಗಿಯಾದರು. ಈ ಎಲ್ಲ ಕಾರ್ಯದಲ್ಲಿ ಹಾವಿನಹಾಳ ಕಲ್ಲಯ್ಯನವರು ಜೊತೆಯಾಗಿದ್ದರು. ಸಿದ್ಧರಾಮ ವಚನ, ಸ್ವರ ವಚನ, ಬಸವ ಸ್ತೋತ್ರದ ತ್ರಿಪದಿ, ಅಷ್ಟಾವರಣ ಸ್ತೋತ್ರದ ತ್ರಿಪದಿ, ಸಂಕೀರ್ಣ ತ್ರಿವಿಧಿ ಎಂದು ಮುಂತಾಗಿ ವೈವಿಧ್ಯಮಯ ಸಾಹಿತ್ಯ ಸೃಷ್ಟಿ ಮಾಡಿದ್ದಾರೆ. ವಚನ ಮತ್ತು ಸ್ವರ ವಚನಗಳಲ್ಲಿ ‘ಕಪಿಲಸಿದ್ಧ ಮಲ್ಲಿಕಾರ್ಜುನ’ ಎಂಬ ಅಂಕಿತವಿದ್ದರೆ, ತ್ರಿವಿಧಗಳಲ್ಲಿ ‘ಯೋಗಿನಾಥ’ ಎಂಬ ಅಂಕಿತವಿದೆ.ಅಣ್ಣ ಬಸವಣ್ಣನವರ ಬಗ್ಗೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆಗೆ ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕ್ರಿಯಾ ಯೋಜನೆ ಅನುಸಾರ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.ಸಚಿವ ಶಿವಾನಂದ ಪಾಟೀಲರು ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೩.೯೬ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಸಿಸಿ ರಸ್ತೆ, ಡಾಂಬರೀಕರಣ ರಸ್ತೆ, ಚರಂಡಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೭೦ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ಅರಳಿಕಟ್ಟಿಯಿಂದ ಡಾ.ಅಂಬೇಡ್ಕರ ವೃತ್ತದವರೆಗೂ ವಿದ್ಯುತ್ ಕಂಬ ಮತ್ತು ವಿದ್ಯುತ್ ದೀಪಾಲಂಕಾರ ಅಳವಡಿಸುವ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೫೦ ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ಪಟ್ಟಣದ ನಂದಿ ತರಕಾರಿ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿ, ಪುರಸಭೆಯ ೨೦೨೩-೨೪ ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ರೂ. ೪೧…
