Author: editor.udayarashmi@gmail.com

ಮಕ್ಕಳ ಸಾಹಿತ್ಯ ಸಂಗಮದ ಗೌರವ ಅಧ್ಯಕ್ಷ, ರಾಜ್ಯ ಪ್ರಶಸ್ತಿ ಪುರಸ್ಕೃತ‌ ಹ.ಮ.ಪೂಜಾರ ಸುದ್ದಿಗೋಷ್ಠಿ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮಕ್ಕಳು ಸಾಹಿತ್ಯಿಕವಾಗಿ ಬೆಳೆಯಬೆಕು ಎಂಬ ಸದುದ್ದೇಶದಿಂದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳಲಾಗಿದೆ ಎಂದು ಮಕ್ಕಳ ಸಾಹಿತ್ಯ ಸಂಗಮದ ಗೌರವ ಅಧ್ಯಕ್ಷ, ರಾಜ್ಯ ಪ್ರಶಸ್ತಿ ಪುರಸ್ಕೃತ‌ ಹ.ಮ ಪೂಜಾರ ಹೇಳಿದರು.ಶನಿವಾರ ಪಟ್ಟಣದ ವಿಶೇಶ್ವರ ಬಾಲಭಾರತಿ ಶಾಲೆಯಲ್ಲಿ ಡಿ. 24 ರಂದು ಹಮ್ಮಿಕೊಂಡ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಆಲಮೇಲದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಮಾಡಬೇಕು ಎಂದು ಕಂಡ ಕನಸು ಇಂದು ನನಸಾಗಿದೆ. ಈ ಸಮ್ಮೇಳನ ಅಖಿಲ ಭಾರತ ಸಮ್ಮೇಳನ ರೀತಿ ಆಯೋಜನೆ ಮಾಡಲಾಗಿದ್ದು ಇದು ಅತ್ಯಂತ ಖುಷಿ ನೀಡಿದೆ ಎಂದರು.ನಾನು ಪ್ರಾಥಮಿಕ ಶಿಕ್ಷಣ ಮತ್ತ ಶಿಕ್ಷಕನಾಗಿ ಸೇವೆಗೈದ ಆಲಮೇಲದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಮಾಡಬೇಕು ಎನ್ನುವ ಬಹುದಿನಗಳ ಕನಸು ನನಸಾಗಿದೆ. ಆಲಮೇಲ ಪಟ್ಟಣ ಸಾಹಿತ್ಯ, ಸಾಂಸ್ಕೃತಿಕ, ದೇಶಿಯ ಕಾರ್ಯಕ್ರಮ ಸೇರಿದಂತೆ ಪ್ರತಿಯೊಂದು ಅಚ್ಚುಕಟ್ಟಾಗಿ ಮಾಡುತ್ತಾರೆ ಎಂದು ಜಿಲ್ಲೆಯಲ್ಲಿ ಹೆಸರಿದೆ.…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ಇಂಡಿಯನ್ ಕೇನ್ ಶುಗರ‍್ಸ್ ಸಕ್ಕರೆ ಕಾರ್ಖಾನೆ ಘಟಕಕ್ಕೆ ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ಇವರ ನೇತೃತ್ವದಲ್ಲಿ ಕಬ್ಬು ಪರಿಶೀಲನಾ ಸಮಿತಿ ಭೇಟಿ ನೀಡಿ, ಕಬ್ಬಿನ ತೂಕದ ಕುರಿತು ಪರಿಶೀಲನೆ ಮಾಡಿದರು.ಕಾರ್ಖಾನೆಯಲ್ಲಿ ಕಬ್ಬಿನ ತೂಕದ ಮಸೀನು, ಮತ್ತು ಇಳುವರಿ ಪರಿಶೀಲಿಸಿದರಲ್ಲದೇ, ಕಬ್ಬಿನ ತೂಕದ ಮಶೀನು ಡಿಜಿಟಲ್ ಇರಬೇಕು ಮತ್ತು ಎರಡು ತೂಕದ ಮಸೀನು ಇರುವದು ಪರಿಶೀಲಿಸಿದರು.ಅದರಂತೆ ೨೬೫ ಕಬ್ಬಿಗೆ ೮.೮ ರಿಕವರಿ ೮೬೦೩೨ ಕಬ್ಬಿಗೆ ೯.೧ ರಿಕವರಿ ಬಂದಿದ್ದು ರೈತರ ಸಮ್ಮುಖದಲ್ಲಿ ಪ್ರಯೋಗಾಲದಲ್ಲಿ ಖಚಿತಪಡಿಸಿಕೊಳ್ಳಲಾಯಿತು.ಕಾರ್ಖಾನೆ ಸಿಬ್ಬಂದಿಗೆ ರೈತರಿಗೆ ತೂಕದಲ್ಲಿ ಯಾವದೇ ರೀತಿಯ ವ್ಯತ್ಯಾಸ ಆಗದಂತೆ ತಿಳಿಸಿದರು.ಎಷ್ಟು ಕಬ್ಬು ನುರಿಸಿದ್ದಾರೆ. ಎಷ್ಟು ಕಬ್ಬಿಗೆ ಹಣ ನೀಡಿದ್ದಾರೆ ಎಂಬ ಕುರಿತು ಪರಿಶಿಲನೆ ಮಾಡಿದರಲ್ಲದೆ, ಕಬ್ಬಿಗೆ ಹಣ ೧೫ ದಿವಸಕ್ಕೊಮ್ಮೆ ನೀಡುತ್ತಿದ್ದುದು ಖಚಿತಪಡಿಸಿದರು.ಉಪ ಕೃಷಿ ನಿರ್ದೇಶಕರು ಚಂದ್ರಕಾಂತ ಪವಾರ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಅಧಿಕಾರಿ ಎಸ್.ಎಸ್.ಗುರುಬೇಟ ಪೋಲಿಸ ಇಲಾಖೆ ಎ.ಎಸ್.ಐ ಅಂಗಡಿ ಅಬಕಾರಿ ನಿರೀಕ್ಷಕರು ರಾಹುಲ ನಾಯಕ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹಿಂದೂಗಳ ಸಂಸ್ಕೃತಿ ಸಮಾವೇಶ ಹಾಗೂ ಪಂಚಮಸಾಲಿ ಮೀಸಲಾತಿ ಪ್ರತಿಜ್ಞಾವಿಧಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪೂರ್ವ ತಯಾರು ವೀಕ್ಷಿಸಿದರು.ಪಟ್ಟಣದ ಇಂಡಿ ರಸ್ತೆಯಲ್ಲಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದ ಹತ್ತಿರದ ದಾನಗೊಂಡ ಲೇಔಟ್‌ನ ಸ್ಥಳಕ್ಕೆ ಶನಿವಾರ ಆಗಮಿಸಿದ ಸ್ವಾಮೀಜಿ ಕಾರ್ಯಕ್ರಮದ ರೂಪುರೇಷೆ ಮಾಹಿತಿ ಪಡೆದು ಪೂರ್ವತಯಾರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿ, ಸಮುದಾಯದ ಶೈಕ್ಷಣಿಕ, ಸಾಮಾಜಿಕ ಸ್ಥಾನಮಾನ ಹಾಗೂ ಮೀಸಲಾತಿಗಾಗಿ ಕೈಗೊಂಡ ಸಮಾವೇಶದಲ್ಲಿ ಸಮುದಾಯದ ಎಲ್ಲರೂ ಭಾಗವಹಿಸಲು ಕರೆ ನೀಡಿದರುಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಭಾನುವಾರದ (ಇಂದು) ಸಮಾವೇಶದ ಯಶಸ್ವಿಗಾಗಿ ಈಗಾಗಲೇ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ವಿವಿಧ ಕಾರ್ಯಗಳ ಜವಾಬ್ದಾರಿ ನಿರ್ವಹಿಸಲು ಮುಂದಾಗಿರುವುದು ಸಂತೋಷದ ವಿಷಯ ಎಂದರು.ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭೆಯ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ, ತಾಲ್ಲೂಕಾಧ್ಯಕ್ಷ ಗುರುರಾಜ ಆಕಳವಾಡಿ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ, ಸಿ.ಕೆ.ಕುದರಿ, ಮುದುಕಪ್ಪ ದಾನಗೊಂಡ, ಶಿವನಗೌಡ ಪಾಟೀಲ, ಶ್ರೀಶೈಲ ಮುಳಜಿ, ಶ್ರೀಶೈಲ ದಾನಗೊಂಡ,…

Read More

ರೈತರಿಗೆ ಸರಿಯಾಗಿ ಬೆಳೆ ಪರಿಹಾರ ಒದಗಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಡಚಣದಲ್ಲಿ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಹಾಗೂ ಭೀಮಾ ನದಿ ಪ್ರವಾಹದಿಂದ ರೈತರ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಸರಕಾರದಿಂದ ರೈತರಿಗೆ ಬೆಳೆ ಪರಿಹಾರ ಸರಿಯಾಗಿ ತಲುಪುತ್ತಿಲ್ಲ ಕಾರಣ ರೈತರಿಗೆ ಸರಿಯಾಗಿ ಪರಿಹಾರ ಕಲ್ಪಿಸುವಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶನಿವಾರ ತಹಶೀಲದಾರ ಕಛೇರಿ ಎದುರು ಪ್ರತಿಭಟನೆ ನಡೆಸಿ, ತಹಶೀಲದಾರ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಹಾಗೂ ಭೀಮಾ ನದಿ ಪ್ರವಾಹದಿಂದ ರೈತರ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಸರಕಾರದಿಂದ ಕೆಲ ರೈತರಿಗೆ ಅಲ್ಪ, ಸ್ವಲ್ಪ ಪ್ರಮಾಣದಲ್ಲಿ ಪರಿಹಾರ ಬಂದಿದೆ. ಇನ್ನು ಅನೇಕ ರೈತರಿಗೆ ಪರಿಹಾರದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ ಎ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ನಡೆದ ಪ್ರಸಕ್ತ ವರ್ಷದ ಪದವಿ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಾಘ್ಭಟ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯ ವೃತ್ತಿಯು ಅತ್ಯಂತ ಪವಿತ್ರವಾಗಿದೆ. ರೋಗಿಗಳೊಂದಿಗೆ ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿಸಿದರೆ ಅವರ ಅರ್ಧ ರೋಗ ಗುಣವಾಗುತ್ತದೆ. ಯುವ ವೈದ್ಯರು ವೈದ್ಯರು ಆರೋಗ್ಯ, ಸಮಯ ಹಾಗೂ ಅನುಭವಕ್ಕೆ ಯಾವಾಗಲು ಮಹತ್ವ ನೀಡಬೇಕು. ಈಗ ಪದವಿ ಪಡೆದಿರುವ ಯುವ ವೈದ್ಯರು ಸನ್ಮಾರ್ಗದಲ್ಲಿ ನಡೆಯುತ್ತ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದ ಬಿ. ಎಲ್.…

Read More

ವಿಜಯಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ಎಂಎಲ್ಸಿ ಸುನೀಲಗೌಡ ಪಾಟೀಲ ಬರೆದ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸ್ಪಂದಿಸಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಲಿಖಿತವಾಗಿ ಪತ್ರ ಬರೆಯುವ ಮೂಲಕ ಸ್ಪಂದಿಸಿದ್ದಾರೆ.ಶಾಸಕ ಸುನೀಲಗೌಡ ಪಾಟೀಲ ಅವರು 24.11.2025 ರಂದು ಕೇಂದ್ರ ಸಚಿವ ನಿತೀನ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರದ ಸೋಲಾಪುರದಿಂದ ಪ್ರಾರಂಭವಾಗಿ ರಾಜ್ಯದ ವಿಜಯಪುರ ಮೂಲಕ ಚಿತ್ರದುರ್ಗ ಮೂಲಕ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಆಂತಾರಾಜ್ಯ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಾಗಿರುವ ಈ ರಸ್ತೆ ಹದಗೆಟ್ಟಿದೆ. ವಿಜಯಪುರದಿಂದ ಚಿತ್ರದುರ್ಗದವರೆಗೆ ರಸ್ತೆಯ ಮೇಲ್ಪದರು ಕಿತ್ತು ಹೋಗಿದೆ. ವಿಜಯಪುರ- ಸೋಲಾಪುರ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಶಿಕ್ಷಕರ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಉದ್ದೇಶದಿಂದ ನನ್ನ ಮತಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ “ಗುರು ಸ್ಪಂದನ” ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಝಳಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಚಡಚಣ ತಾಲೂಕಿನ “ಗುರು ಸ್ಪಂದನ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರ ರಕ್ಷಕರಂತೆ ಸಮಾಜ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಜವಾಬ್ದಾರಿ ಹೊತ್ತಿದ್ದಾರೆ ಎಂದರು.ಗ್ರಾಮೀಣ ಭಾಗದ ಸರ್ಕಾರಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ವಿಜಯಪುರ ಜಿಲ್ಲಾ ಉಪನಿರ್ದೇಶಕರ ಕಚೇರಿ ಶಿಕ್ಷಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂಬ ಅಸಮಾಧಾನವನ್ನೂ ಕೂಡಾ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ವ್ಯಕ್ತಪಡಿಸಿದರು.ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ನೌಕರರ ಸೇವಾ ಪುಸ್ತಕವು ಶಿಕ್ಷಕರ ಸಂವಿಧಾನಕ್ಕೆ ಸಮಾನವಾಗಿದ್ದು, ಅದರಲ್ಲಿ ಸಂಪೂರ್ಣ ಹಾಗೂ ಸರಿಯಾದ ಮಾಹಿತಿ ಇರಬೇಕು. ಶಿಕ್ಷಣ ಸಚಿವರ ಸಮ್ಮುಖದಲ್ಲಿಯೇ ಗ್ರಾಮೀಣ ನೌಕರರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

Read More

ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ ಸಚಿವ ಎಂ.ಬಿ.ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ದಾರೆ.ನೀಟ್ ಪಾಸಾಗಿ ಸರಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರು. ಈ ಮಾಹಿತಿ ತಿಳಿದ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಇಬ್ಬರೂ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಾಗಿರುವ ಕಾಲೇಜು ಪ್ರವೇಶ ಶುಲ್ಕ, ಊಟ ಹಾಗೂ ವಸತಿ ಬೇಕಾಗುವ ಒಟ್ಟು ಮೊತ್ತವನ್ನು ನೀಡಿದ್ದಾರೆ.ಶನಿವಾರ ಬೆಳಿಗ್ಗೆ ಸಚಿವ ಎಂ‌. ಬಿ. ಪಾಟೀಲ ಅವರು ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವಿನ ಚೆಕ್ ವಿತರಿಸಿದರು.ತಿಕೋಟಾ ತಾಲೂಕಿನ ಅರಕೇರಿ ಎಲ್. ಟಿ-1ರ ವಿದ್ಯಾರ್ಥಿನಿ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರೀತಿ ಅಂದ್ರೆ ಎರಡು ದೇಹಗಳನ್ನು ಒಂದೇ ಜೀವವನ್ನಾಗಿಸೋದು ಎನ್ನೋದು ಎಲ್ಲರ ಅಂಬೋಣ. ಅದು ಕೊಡುವ ರೋಮಾಂಚನದ ಭಾವವನ್ನು ಇನ್ನಾವದೂ ಕೊಡಲಾರದು. ಇನ್ನಾವುದರಲ್ಲಿ ಅದು ಸಿಗಲು ಸಾಧ್ಯವೇ ಇಲ್ಲ. ಪ್ರೀತಿಗೆ ಕರಗದ ಮನಸ್ಸಿಲ್ಲ. ಎಲ್ಲರಿಂದ ಪೆದ್ದು ಎಂದು ಕರೆಸಿಕೊಳ್ಳುವವರಿಗೂ ಒಂದು ಕಿರುನಗೆ ಬಿಸಾಕಿದರೆ ಸಾಕು. ಒಂದು ಕಣ್ಸನ್ನೆ ಮಾಡಿದರೆ ಸಾಕು. ಇದುವರೆಗೂ ಸೈಲೆಂಟಾಗಿದ್ದ ಅವರ ಮನಸ್ಸು ವೈಬ್ರೇಟ್ ಮೋಡಿನಲ್ಲಿ ವಿಹರಿಸುತ್ತೆ.ಈ ಪ್ರೀತಿಯನ್ನು ಹೊಸ ಮುತ್ತಿನಂತೆ ಎದೆಚಿಪ್ಪಿನಲ್ಲಿ ಕೂಡಿಟ್ಟುಕೊಂಡು ಬದುಕಿನ ಒಂದಲ್ಲ ಒಂದು ಹಂತದಲ್ಲಿ ಎಲ್ಲರೂ ಅನುಭವಿಸಿಯೇ ಇರುತ್ತಾರೆ. ಪ್ರೀತಿಯ ಗಾಳಕ್ಕೆ ಸಿಗದವರು ತುಂಬಾ ವಿರಳ. ಪ್ರೀತಿಯ ಉಸಾಬರಿಯೇ ಬೇಡ ನನ್ನ ಪಾಡಿಗೆ ನಾನಿರುತ್ತೇನೆ ಎಂದು ಗಟ್ಟಿಯಾಗಿ ನಿಂತವನ ಮುಂದೆ ಅದೆಲ್ಲಿಂದಲೋ ಬಂದ ನೀನು ಅದೊಂದು ದಿನ ನನ್ನ ಕಣ್ಣಿಗೆ ಬಿದ್ದೆ, ನೀನು ಕಣ್ಣಿಗೆ ಬಿದ್ದ ಕ್ಷಣದಿಂದ ನಿಂತಲ್ಲೇ ನಿಲ್ಲಲಾರದ ಕೂತಲ್ಲೇ ಕೂರಲಾರದ ಪರಿಸ್ಥಿತಿ. ಅರೆ ಗಳಿಗೆಯಲ್ಲಿ ನೀನು ಅದೇನು ಜಾದೂ ಮಾಡಿದೆ. ನನ್ನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯಪುರ, ಬೆಂಗಳೂರಿನ ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಹಾಗೂ ವೀ ಕೇರ್ ಸೊಸೈಟಿ ಅವರ ಸಹಯೋಗದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ರ‍್ಯಾಂಪ್ ಯೋಜನೆಯಡಿ ಉದ್ಯಮಿಗಳಿಗೆ ನೀಡುವ ಸೇವೆಗಳ ವ್ಯಾಪ್ತಿ ಗುಣಮಟ್ಟ ಮತ್ತು ತಲುಪುವಿಕೆಯನ್ನು ಹೆಚ್ಚಿಸುವ ಪ್ರಕ್ರಿಯೆ ಬಿಡಿಎಸ್ಪಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಡಿ.೧೭ ರಂದು ಬಾಗಲಕೋಟ ಹಾಗೂ ಜಮಖಂಡಿ ಬೈಪಾಸ್ ರಸ್ತೆಯಲ್ಲಿರುವ ರೂಡಸೆಟ್ ಸಂಸ್ಥೆಯಲ್ಲಿ ನಡೆಯಿತು.ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಾದ ಸಿದ್ದಯ್ಯ ಬಿ ಮಾತನಾಡಿ, ಹೊಸ ಉದ್ಯಮಿದಾರರು ಬ್ಯಾಂಕಿನ ಸಾಲ-ಸೌಲಭ್ಯಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ. ಉದ್ದಿಮೆದಾರರ ಬಳಿ ಸೂಕ್ತ ದಾಖಲಾತಿಗಳಿದ್ದಲ್ಲಿ, ಬ್ಯಾಂಕಿನಿಂದ ಸುಲಭವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಶಾಖಾ ವ್ಯವಸ್ಥಾಪಕರಾದ ಸದಾಶಿವ, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸತೀಶ ಕಾಪಸೆೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ…

Read More