Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ತಗುಲದಂತೆ ತಡೆಯುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾಗಿರುವ ಎಚ್ ಪಿವಿ (ಹೂಮನ್ ಪ್ಯಾಪಿಲೋಮ ವೈರಸ್) ಲಸಿಕೆಯನ್ನು ನೀಡಲು ಆರೋಗ್ಯ ಇಲಾಖೆ ಸಜ್ಜಾಗಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದೆ.ತಾಲೂಕಿನ ಚಿಕ್ಕಲಕಿ ಕ್ರಾಸ್ ಆರೋಗ್ಯ ಕೇಂದ್ರದಲ್ಲಿ ಸರ್ಕಾರಿ ಶಾಲಾ ಪ್ರೌಢಶಾಲಾ ಬಾಲಕಿಯರಿಗೆ ಲಸಿಕೆ ನೀಡಿ ಮಾತನಾಡಿದ ಮುಖ್ಯ ಆರೋಗ್ಯಧಿಕಾರಿ ಡಾ.ಮುಕುಂದ ಕಾಂಬಳೆ ಬಾಲಕಿಯರಿಗೆ 14ರಿಂದ 15 ವರ್ಷ ವಯೋಮಾನದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ತಾಲೂಕಿನಾದ್ಯಂತ ಈ ವಯೋಮಾನದ ಸುಮಾರು ಐದು ಸಾವಿರಕ್ಕೂ ಅಧಿಕ ಬಾಲಕಿಯರಿದ್ದಾರೆ ಎಂದು ಅಂದಾಜಿಸಲಾಗಿದೆ. ಅಮೆರಿಕದ ಗಾರ್ಡಿಸಿಲ್ ಕಂಪನಿ ಉತ್ಪಾದಿಸಿರುವ ಎಚ್ಪಿವಿ ಲಸಿಕೆಯ ಒಂದು ಡೋಸ್ ಮಾತ್ರ. ಪ್ರತಿ ಬಾಲಕಿಗೆ ನೀಡಲಾಗುತ್ತದೆ. ನಮ್ಮ ಆರೋಗ್ಯ ಕೇಂದ್ರಕ್ಕೆ ಮೊದಲ ಹಂತದ ಡೋಸ್ ಪೂರೈಕೆಯಾಗಿದ್ದು, ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಚಿಕ್ಕಲಕಿ ಕ್ರಾಸ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದೆ. ಶುಷ್ರೂಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ…
ಉದಯರಶ್ಮಿ ದಿನಪತ್ರಿಕೆ ಯಾಳವಾರ (ದೇವರಹಿಪ್ಪರಗಿ): ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಭಾಗದ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಗಮನಾರ್ಹವಾಗಿದೆ ಎಂದು ಕಡಕೋಳ ಸಂಸ್ಥಾನಮಠದ ರಾಜಗುರು ಮಹಾಲಿಂಗ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದ ಸಂಸ್ಕಾರಧಾಮ ಪೂರ್ವ ಹಾಗೂ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ಸಂಸ್ಕಾರ ಉತ್ಸವ ಹಾಗೂ ೧೪ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಗ್ರಾಮದ ಮಕ್ಕಳಿಗೆ ಸತತ ೧೪ ವರ್ಷಗಳ ಕಾಲ ಸತ್ವಯುತ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುತ್ತಿರುವ ಸಂಸ್ಥೆ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹಾರೈಸಿದರು.ಪ್ರವಚನಕಾರ ಬಸಯ್ಯ ಸ್ವಾಮೀಜಿ ಮಾತನಾಡಿ, ಮಗುವಿನ ಬೆಳವಣಿಗೆಯಲ್ಲಿ ಪಾಲಕ, ಪೋಷಕ, ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯಾವುದೇ ಕಾರಣಕ್ಕೂ ಮಗುವಿನ ಶಿಕ್ಷಣದ ಜವಾಬ್ದಾರಿಯಿಂದ ನುಣಚಿಕೊಳ್ಳದೇ ನಾವು ನಮ್ಮ ಕರ್ತವ್ಯ ನಿರ್ವಹಿಸಿ ಅವರನ್ನು ಸತ್ಪçಜೆಗಳನ್ನಾಗಿಸೋಣ ಎಂದರು.ಸಂಸ್ಕಾರರತ್ನ ಪ್ರಶಸ್ತಿ ವಿಜೇತರಾದ ಎಸ್.ಎಸ್.ಸಾತಿಹಾಳ, ಕೆ.ಆರ್.ಕೊಕಟನೂರ, ಮಹಾಂತೇಶ ಸಂಗಮ, ಸಿ.ಕೆ.ಕಿರಣಗಿ ವೈದ್ಯ ವಿದ್ಯಾರ್ಥಿ ಹರೀಶ ನ್ಯಾಮಣ್ಣವರ ಮಾತನಾಡಿದರು.ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಪಟೇದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದಲ್ಲಿ ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ತಹಶೀಲ್ದಾರ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಶುಕ್ರವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ತರಕಾರಿ ಮಾರಾಟಗಾರರ ಕುರಿತು ತಹಶೀಲ್ದಾರ ಅವರ ಗಮನ ಸೆಳೆದರು.ಈ ಸಂದರ್ಭದಲ್ಲಿ ರಾಷ್ಟಿçÃಯ ರೈತಸಂಘದ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದಲ್ಲಿ ತರಕಾರಿ ಮಾರಾಟಗಾರರು ಬಿಸಿಲು, ಮಳೆ, ಚಳಿಯೇನ್ನದೇ ವರ್ಷದುದ್ದಕ್ಕೂ ವಿಜಯಪುರ-ಕಲಬುರ್ಗಿ ಮಧ್ಯೆದ ರಾಷ್ಟ್ರೀಯ ಹೆದ್ದಾರಿ ೫೦ ರ ಪಕ್ಕದಲ್ಲಿ ಮಾರಾಟ ಮಾಡಲು ಕುಳಿತುಕೊಳ್ಳುತ್ತಾರೆ. ಇವರಿಂದ ವಾಹನ ಸಂಚಾರಕ್ಕೂ ಅಡತಡೆ ಜೊತೆಗೆ ಮಾರಾಟಗಾರರ ಜೀವಕ್ಕೂ ಅಪಾಯಕಾರಿ ಆದ್ದರಿಂದ ಅವರಿಗೆ ಸೂಕ್ತವಾದ ಮಾರುಕಟ್ಟೆ ಪ್ರದೇಶ ಅವಶ್ಯಕವಾಗಿದೆ. ಸ್ಥಳೀಯ ಹಾಗೂ ತಾಲ್ಲೂಕು ಆಡಳಿತ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ನಮ್ಮ ಕರ್ನಾಟಕ ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ರಾಜ್ಯ ರೈತಸಂಘದ ಯುವ ಸಂಚಾಲಕ ಸಿದ್ದನಗೌಡ ಪಾಟೀಲ ಮಾತನಾಡಿ, ರೈತ ಮಾರಾಟಗಾರರಿಗೆ ಅವಶ್ಯವಿರುವ…
ಸಿಂದಗಿಯಲ್ಲಿ ವಿಶ್ರಾಂತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಖೋ-ಖೋ ಆಟ ಪ್ರಾಚೀನ ಭಾರತೀಯ ಆಟವಾಗಿದ್ದು, ಮಹಾಭಾರತದಲ್ಲಿಯೂ ಇದರ ಉಲ್ಲೇಖವಿದೆ. ಖೋ-ಖೋ ಕೇವಲ ಮನರಂಜನೆಯಲ್ಲ. ಬದಲಾಗಿ ಶಿಸ್ತು ಮತ್ತು ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆಯಾಗಿದೆ ಎಂದು ಸಿ.ಎಂ.ಮನಗೂಳಿ ಪದವಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಸಿಂದಗಿ ನಗರದ ಆರ್.ಬಿ.ಬೂದಿಹಾಳ ಕ್ರೀಡಾಂಗಣದಳ್ಳಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ ಮಹಿಳಾ ಪದವಿ ಕಾಲೇಜು ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡ ಅಂತರ ಮಹಾವಿದ್ಯಾಲಯಗಳ ಖೋ-ಖೋ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆ ೨೦೨೫-೨೬ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಕ್ರೀಡೆ ಉತ್ತಮ ಆರೋಗ್ಯಕ್ಕೆ ರಹದಾರಿ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಹೆಚ್ಚೆಚ್ಚು ಭಾಗವಹಿಸುವುದರಿಂದ ಸದೃಢ ದೇಹ ಹಾಗೂ ಸದೃಢ ಮನಸ್ಸು ಹೊಂದಲು ಸಾಧ್ಯ. ದೈಹಿಕ ಚಟುವಟಿಕೆ, ಮಾನಸಿಕ ಕಸರತ್ತು ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುವ ಭಾರತೀಯ ಪಾರಂಪರಿಕ ಆಟಗಳಲ್ಲಿ ಖೋ-ಖೋ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ತಮ್ಮ ಕೊಡುಗೆ ನೀಡುತ್ತಿರುವದು ಹಮ್ಮೆಯ ಸಂಗತಿ ಎಂದು ವಿಜಯಪುರದ ಶರಣಬಸವೇಶ್ವರ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷೆ ಭಾಗ್ಯಶ್ರೀ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ವಿಜಯಪುರದ ರೆಡ್ ಕ್ರಾಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಮಹಿಳೆ ಎಂದರೆ ಇನ್ನೊಬ್ಬರ ಹಾದಿಯಲ್ಲಿ ಸಾಗುವ ಬದಲು ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು. ಹೆಣ್ಣು ಸಂಸಾರದ ಕಣ್ಣು, ಹೆಣ್ಣು ತಾಯಿಯಾಗಿ, ಮಗಳಾಗಿ ಸೊಸೆಯಾಗಿ ಹೇಗೆ ತನ್ನ ಪಾತ್ರವನ್ನು ನಿಭಾಯಿಸುತ್ತಾ ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿ ಕೊಳ್ಳುತ್ತಾಳೆ ಎಂದರು.ಶಿಕ್ಷಕಿ, ಸಾಹಿತಿ ಗಿರಿಜಾ ಪಾಟೀಲ ಮಾತನಾಡಿ, ಗಂಡು-ಹೆಣ್ಣು ಎಂಬುದು ಸೃಷ್ಟಿಯ ಭೇದ ಹೊರತು ಸಾಧನೆಯಲ್ಲಿ ಭೇದವಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆ ತಾನೇನು ಕಡಿಮೆ ಇಲ್ಲದಂತೆ ಸಾಧಿಸಿದ್ದಾಳೆ. ಹೆಣ್ಣಿನ ಹಿರಿಮೆ, ಗರಿಮೆ ಸಂಸ್ಕೃತಿ ,…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮತಕ್ಷೇತ್ರದ ಕೊಲ್ಹಾರ ತಾಲೂಕಿನ ಮಲಘಾಣ ಹಾಗೂ ಕುಪಕಡ್ಡಿ ಗ್ರಾಮಗಳಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಚಿವ ಶಿವಾನಂದ ಪಾಟೀಲ ಅವರು ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಈ ಕಾಲೇಜುಗಳನ್ನು ಮಂಜೂರು ಮಾಡಿಸಿದ್ದು ಶ್ಲಾಘನೀಯ.ಇದು ಶೈಕ್ಷಣಿಕ ಪ್ರಗತಿಗೆ ಪೂರಕವಾಗುತ್ತದೆ. ಎರಡು ಗ್ರಾಮಗಳಲ್ಲಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿರುವ ಸಚಿವ ಶಿವಾನಂದ ಪಾಟೀಲ, ಸರ್ಕಾರಕ್ಕೆ ಅಭಿನಂದನೆಗಳು ಎಂದು ಜಿಲ್ಲಾ ಯುವ ಕಾಂಗ್ರೆಸ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಂಧಾನದ ಮೂಲಕ ಸಮಾಧಾನ ಕಂಡುಕೊಳ್ಳುವದೇ ನಿಜವಾದ ಜಯ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅಭಿಪ್ರಾಯ ಪಟ್ಟರು.ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ಅದಾಲತ್ ನಲ್ಲಿ ಅವರು ಮಾತನಾಡಿದರು.ಪಕ್ಷಗಾರರ ಕಾನೂನು ಹೋರಾಟಕ್ಕೆ ಕೇವಲ ಒಂದೇ ದಿನದಲ್ಲಿ ಸುಖಾಂತ್ಯ ಹಾಡಲು ಲೋಕ್ಅದಾಲತ್ ಪ್ರತೀ ೩ ತಿಂಗಳಿಗೊಮ್ಮೆ ಸಿದ್ಧವಿರುತ್ತೆ. ನಿಮ್ಮ ಪ್ರಕರಣಗಳನ್ನು ಲೋಕ್ಅದಾಲತ್ ಮೂಲಕ ಬಗೆಹರೆಸಿಕೊಳ್ಳಲು ನಿಮ್ಮ ವಕೀಲರಿಗೆ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಭೇಟಿ ಮಾಡಬಹುದು ಎಂದರು.ಅದಾಲತ್ ನಲ್ಲಿ ಮೂರು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೭೧೧೦ ಬಾಕಿ ಇರುವ ಪ್ರಕರಣಗಳಲ್ಲಿ ೧೮೨೮ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳಲ್ಲಿ ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್.ಎ.ಸಿ ಇಪಿ ಪ್ರಕರಣಗಳು, ಎಮ್.ವಿ.ಸಿ ಇ.ಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳ ಪೈಕಿ ಒಟ್ಟು ೮೩೯ ಪ್ರಕರಣಗಳನ್ನು ಮತ್ತು…
ಬೃಹತ್, ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ರೈತರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ಭಾಗದ ಭೂಮಿ ಬಂಗಾರವಿದ್ದಂತೆ. ಅದನ್ನು ಯಾರೂ ಮಾರಾಟ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಹೇಳಿದರು.ಶನಿವಾರ ತಿಕೋಟಾ ತಾಲೂಕಿನ ರಾಂಪೂರ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲಾ ಆವರಣದಲ್ಲಿ ನೂತನ ಅಂಗನವಾಡಿ ಕಟ್ಡಡ, ಕ್ರೀಡಾ ಸಲಕರಣೆ, ಎಪಿಎಂಸಿ ಗೋದಾಮು ಉದ್ಘಾಟನೆ ಹಾಗೂ ಚಂದ್ರಗಿರಿ ಘಟಿವಾಳೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ವಿವಿಧ ಕಟ್ಟಡ ಶಂಕುಸ್ಥಾಪನೆಯ ಕಾರ್ಯಕ್ರಮದ ಸಸಿಗೆ ನೀರು ಉಣಿಸುವದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಕುಡಿಯಲು ನೀರಿನ ಕೊರತೆ ಇದ್ದ ಈ ಭಾಗದಲ್ಲಿ ಕಳೆದ ಒಂದು ದಶಕದಲ್ಲಿ ನೀರಾವರಿಯಿಂದಾಗಿ ಅಂತರ್ಜಲ ವೃದ್ಧಿಯಾಗಿದೆ. ರೈತರು ಕೃಷಿ, ತೋಟಗಾರಿಕೆಯಲ್ಲಿ ತೊಡಗುವ ಮೂಲಕ ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಈಗ ಬಾಬಾನಗರ ಬಳಿ ಜಲಾಶಯ ಕಟ್ಟಲಾಗುವುದು. ಇದರಿಂದ…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀರಾವರಿಗಾಗಿ ಭೂಮಿ ಕಳೆದುಕೊಂಡ ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮಿದೇವಿ, ಶ್ರೀ ಈಶ್ವರ, ಶ್ರೀ ನಂದಿ ಮತ್ತು ಶ್ರೀ ಮಾರುತೇಶ್ವ ದೇವರ ನೂತನ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಾಗೂ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಯುಕೆಪಿ 3ನೇ ಹಂತದ ಭೈಸ್ವಾಧೀನವಾಗಲಿರುಬ ಜಮೀನುಗಳ ರೈತರಿಗೆ ಒಪ್ಪಂದದಂತೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ಕೆ ಬಾಗಲಕೋಟೆಯಲ್ಲಿ ಚಾಲನೆ ನೀಡಲಾಗಿದೆ. ಈ ಮೂಲಕ ನಿರಾಶ್ರೀತರ ಕಣ್ಣೀರು ಒರೆಸುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಗೆ ಒತ್ತು ನೀಡುತ್ತಿದ್ದೇವೆ. ಜೈನಾಪುರ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಯಲ್ಲಿಯೇ ಸರಕಾರ ಬಡವರು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಡಣಿ ಸಾಹಿತ್ಯ ಸಮ್ಮೇಳನ ದತ್ತಿಯಿಂದ ಮಮತಾ ಮುಳಸಾವಳಗಿ(ಗುಮಶೆಟ್ಟಿ) ಅವರ ಮಮತೆಯ ಮರುಳಾರಾಧ್ಯ ಶತವಚನಗಳು ಕೃತಿಯು ಜಿಲ್ಲಾ ಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.ಅಲ್ಲದೆ ಕಡಣಿ ಗುರುವಂದನಾ ದತ್ತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾರಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಅಶೋಕ ಬಡಿಗೇರ ಇವರನ್ನು ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯನ್ನು ರವಿವಾರ ದಿನಾಂಕ ೧೫-೦೩-೨೦೨೬ ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮುಂಜಾನೆ ೧೧:೦೦ ಗಂಟೆಗೆ ಜರುಗುವುದು. ಷ.ಬ್ರ. ಸಿದ್ದರಾಮ ಶಿವಾಚಾರ್ಯರು ಹಿರೇಮಠ ಸಂಸ್ಥಾನ ಕಲಕೇರಿ ಸಾನಿಧ್ಯ ವಹಿಸುವರು. ಡಾ. ವಿ.ಎಂ. ಬಾಗಾಯತ ವಿಶ್ರಾಂತ ಪ್ರಾಚಾರ್ಯರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಡಿ.ಎಂ. ಘೋರ್ಪಡೆ ವಿಶ್ರಾಂತ ಪ್ರಾಚಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ. ಶಿಲ್ಪಾ ಭಸ್ಮೆ ಜಿಲ್ಲಾ ಗೌರವ ಕಾರ್ಯದರ್ಶಿ ಹಾಗೂ ಸಿದ್ರಾಮಯ್ಯ ಲಕ್ಕುಂಡಿಮಠ ಅಧ್ಯಕ್ಷರು ತಾಲೂಕಾ ಕಸಾಪ ತಿಕೋಟಾ ಉಪನ್ಯಾಸ ನೀಡಲಿದ್ದಾರೆ. ಶಿವಶರಣ ಗುಂದಗಿ ಅಧ್ಯಕ್ಷರು, ತಾಲೂಕಾ ಕಸಾಪ ಆಲಮೇಲ, ಅಶೋಕ ಕೊಳಾರಿ ಗೌರವ ಕೋಶಾಧ್ಯಕ್ಷರು ಆಲಮೇಲ, ಡಾ. ರಮೇಶ…
