Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಮಾಜಿ ಸಚಿವ ದಿ.ಬಿ.ಎಸ್.ಪಾಟೀಲ ಮನಗೂಳಿ ಅವರ ಪ್ರತಿಮೆ ಆವರಣದಲ್ಲಿ ಗುರುವಾರ ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಗುರುನಮನದಂಗವಾಗಿ ಗುರುವಾರ ನುಡಿ ನಮನ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮಾತನಾಡಿ, ಈ ನಾಡಿಗೆ ಭಕ್ತರಿಗೆ ತಮ್ಮದೇಯಾದಂತಹ ಕೊಡುಗೆಯನ್ನು ನೀಡಿರುವ ಸಿದ್ದೇಶ್ವರ ಪೂಜ್ಯರ ತತ್ವಾದರ್ಶಗಳನ್ನು ಯುವಜನಾಂಗ ಅಳವಡಿಸಿಕೊಳ್ಳಬೇಕಿದೆ. ಅವರು ಹೇಳಿರುವ ಪ್ರವಚನಗಳನ್ನು ಪ್ರತಿಯೊಬ್ಬ ಮಕ್ಕಳಿಗೆ ಕೇಳಿಸುವಂತಹ ಕಾರ್ಯ ಪಾಲಕರು ಮಾಡಬೇಕು. ಇಂತಹ ಪರಮಪೂಜ್ಯರನ್ನು ಪಡೆದ ನಾವೆಲ್ಲರೂ ಧನ್ಯ ಎಂದರು.ಇಡೀ ಜಗತ್ತಿಗೆ ಸಮಾನತೆ ಸಂದೇಶ ನೀಡಿದ ವಿಶ್ವಗುರು ಬಸವೇಶ್ವರರರು ಜನಿಸಿದ ಬಸವನಬಾಗೇವಾಡಿ, ಪೂಜ್ಯ ಸಿದ್ದೇಶ್ವರರು ಜನಿಸಿದ ಸ್ಥಳ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮವಾಗಿದೆ. ಇಂತಹ ಮಹಾನ್ ಪುರುಷರು ಜನಿಸಿದ ಈ ನಾಡು ಪುಣ್ಯದ ಬೀಡಾಗಿದೆ. ಇವರು ನೀಡಿರುವ ಸಂದೇಶಗಳು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು.ಮುಖಂಡರಾದ ಅಪ್ಪುಗೌಡ ಪಾಟೀಲ, ವಿಶ್ವನಾಥಗೌಡ ಪಾಟೀಲ ಇತರರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶರಣಯ್ಯ ನಂದಿಕೋಲಮಠ,ಮಲ್ಲು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಆಧ್ಯಾತ್ಮ ಲೋಕದ ಸಿರಿಯಾಗಿದ್ದಾರೆ. ಇವರು ನೀಡಿರುವ ಸಂದೇಶಗಳು ಎಂದಿಗೂ ಸ್ಮರಣೀಯವಾಗಿವೆ. ಇವುಗಳನ್ನು ನಾವೆಲ್ಲರೂ ಅಂತರಂಗದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆಯೋಣವೆಂದು ರೋಣಿಹಾಳ ಗ್ರಾಮದ ಪ್ರಗತಿಪರ ರೈತ ಶ್ರೀಶೈಲ ಬಿರಾದಾರ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಶಿವಲಿಂಗೇಶ್ವರ ವಿರಕ್ತಮಠದ ಶರಣ ಬಳಗ, ಭಾರತೀಯ ಸೃಜನಶೀಲ ಕನ್ನಡ ಸಾಹಿತ್ಯ ಬಳಗ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಸಹಯೋಗದಲ್ಲಿ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಗುರುನಮನ ಕಾರ್ಯಕ್ರಮದಂಗವಾಗಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ಅಂತರಂಗದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಜ್ಞಾನನಿಧಿಯಾಗಿದ್ದರು. ಅವರು ತಮ್ಮ ಪ್ರವಚನದಲ್ಲಿ ಜೀವನ ಮೌಲ್ಯ,ಸಾವಯವ ಕೃಷಿ, ಶರಣರ ಸಂದೇಶ ಸೇರಿದಂತೆ ತತ್ವಶಾಸದಲ್ಲಿರುವ ಸಾರವನ್ನು ನಮಗೆ ಉಣಬಡಿಸಿದ್ದಾರೆ. ೧೨ ನೇ ಶತಮಾನದಲ್ಲಿ ಶರಣರ ಬಸವ ಕಲ್ಯಾಣ ಕೈಲಾಸವಾಗಿತ್ತು. ಇಂದು ೨೧ ನೇ ಶತಮಾನದಲ್ಲಿ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಇದ್ದ ವಿಜಯಪುರದ ಜ್ಞಾನಯೋಗಾಶ್ರಮವು ಕೈಲಾಸವಾಗಿದೆ ಎಂದರೆ ತಪ್ಪಾಗಲಾರದು. ಇಂತಹ ಪೂಜ್ಯರನ್ನು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕಳೆದ 20 ವರ್ಷದ ಹಿಂದೆ ಅಭಿವೃದ್ದಿಯಿಂದ ವಂಚಿತವಾಗಿದ್ದ ಬಸವನಬಾಗೇವಾಡಿ ಮತಕ್ಷೇತ್ರವನ್ನು ನಾನು 2004 ಕ್ಕೆಈ ಮತಕ್ಷೇತ್ರಕ್ಕೆ ಬಂದ ನಂತರ ಸರ್ಕಾರದಿಂದ ಕೋಟಿ ಕೋಟಿ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆರೋಗ್ಯ ಘಟಕ ಪ್ರಯೋಗಾಲಯ ಕಟ್ಟಡ ಉದ್ಘಾಟಿಸಿದ ನಂತರ ಪುರಸಭೆಯ ವಿವಿಧ ಯೋಜನೆ ಅಡಿಯಲ್ಲಿ ಅಂದಾಜು ರೂ. 17 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕ ಆಸ್ಪತ್ರೆಗೆ ಸರ್ಕಾರ ನೀಡಿದ ಅನುದಾನವನ್ನು ಎಲ್ಲಿಯೂ ದುರುಪಯೋಗ ಮಾಡಿಕೊಳ್ಳದೇ ಸದುಪಯೋಗ ಮಾಡಿಕೊಂಡು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಜಿಲ್ಲಾ ಆಸ್ಪತ್ರೆಯ ಒತ್ತಡವನ್ನು ತಪ್ಪಸಿದ್ದು ಶ್ಲಾಘನೀಯ. ತಾಲೂಕು ಆಸ್ಪತ್ರೆ ಕಳೆದ ಮೂರು ವರ್ಷದಿಂದ ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆಯುವ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬ್ಯಾಂಕಿನ ಚುನಾವಣೆ ಪರ್ವ ಮುಕ್ತಾಯವಾಗಿದೆ. ನಾವು ಇಂದಿನಿಂದ ಮೊದಲಿಗಿಂತ ಹೆಚ್ಚು ಅನೋನ್ಯವಾಗಿರೋಣ ಎಂದು ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.ಪಟ್ಟಣದ ಖಾಸಗಿ ಪಕ್ಷನ್ ಹಾಲ್ ನಲ್ಲಿ ಕಾಮರಾಜ ಬಿರಾದಾರ ಸ್ನೇಹಿತರ ಬಳಗ ಮತ್ತು ಅಸ್ಕಿ ಫೌಂಡೇಶನ್ ವತಿಯಿಂದ ಪಟ್ಟಣದ ದಿ ಕೋ ಅಪ್ ಬ್ಯಾಂಕ್ ನ ನೂತನ ನಿರ್ದೇಶಕರಿಗೆ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬ್ಯಾಂಕಿನ ಹಳೆಯ ನಿರ್ದೇಶಕರು ನೂತನ ನಿರ್ದೇಶಕರಿಗೆ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ಎಲ್ಲರನ್ನು ಸಹಮತದಿಂದ ಒಟ್ಟಾಗಿ ಕರೆದುಕೊಂಡು ಹೋಗುವ ಮೂಲಕ ಬ್ಯಾಂಕನ್ನು ಉನ್ನತ ಮಟ್ಟಕ್ಕೆ ಬೆಳೆಸುವ ಭರವಸೆ ನಮಗಿದೆ ಎಂದರು.ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಈ ಬ್ಯಾಂಕು ಸಾಕಷ್ಟು ಹೆಸರುವಾಸಿಯಾಗಿದೆ. ಹಲವು ಹಿರಿಯರು ಕಟ್ಟಿ ಬೆಳೆಸಿದ ಈ ಬ್ಯಾಂಕಿಗೆ ರಾಜ್ಯದ ತುಂಬೆಲ್ಲ ಬ್ರಾಂಚುಗಳಾಗಿ ರೈತರಿಗೆ, ವ್ಯಾಪಾರಸ್ಥರಿಗೆ ಇನ್ನಷ್ಟು ಸೇವೆ ನೀಡುವಂತಾಗಲಿ ಎಂದರು.ಜ್ಞಾನಯೋಗಿ ಸಿದ್ದೇಶ್ವರರ ಸ್ಮರಣ ದಿನದ ಹಿನ್ನೆಲೆ ಶ್ರೀ ಸಿದ್ದೇಶ್ವರರ ಸರಳ ಜೀವನದ ಕುರಿತು ಪ್ರೊ.ಪರಶುರಾಮ ಚೌಡಕೇರ ಮಾತನಾಡಿದರು. ಎಪಿಎಂಸಿ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಗ್ರಾಮೀಣ ಕ್ರೀಡೆ ಖೋಖೋ ಕ್ರೀಡೆಯ ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ನಿಡಗುಂದಿ ತಾಲ್ಲೂಕಿನ ಬೇನಾಳದ ಆರು ಜನ ಬಾಲಕಿಯರು ಹಾಗೂ ಮಣಗೂರಿನ ಇಬ್ಬರು ಬಾಲಕರು ಆಯ್ಕೆಯಾಗಿದ್ದು ನಮ್ಮ ತಾಲ್ಲೂಕಿಗೆ ಹೆಮ್ಮೆಯ ವಿಷಯ ಎಂದು ನಿಡಗುಂದಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ ವಂದಾಲ ಹೇಳಿದರು.ಸಮೀಪದ ಬೇನಾಳ ಆರ್.ಎಸ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ರಾಷ್ಟ್ರ ಮಟ್ಟದ ೧೪ ವಯೋಮಾನದೊಳಗಿನ ಬಾಲಕಿಯರ ಕೊಕ್ಕೊ ಸ್ಪರ್ಧೆಗೆ ಆಯ್ಕೆಯಾಗಿರುವ ರಾಜ್ಯದ ಕೊಕ್ಕೊ ಕ್ರೀಡಾಪಟುಗಳಿಗೆ ಐದು ದಿನದ ವಿಶೇಷ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.ಶಿಬಿರದ ಐದು ದಿನಗಳ ಕಾಲ ಎಲ್ಲಾ ತರಬೇತುದಾರರು ಹಾಗೂ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆಯನ್ನು ಬೇನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ ವಂದಾಲ ಮಾಡಿದ್ದಾರೆ.ಕರ್ನಾಟಕ ಖೋಖೋ ಸಂಸ್ಥೆಯ ಆಯ್ಕೆ ಸಮಿತಿಯ ಸದಸ್ಯ ಬೆಳಗಾವಿಯ ಈರಣ್ಣ ಹಳಿಗೌಡರ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಶಿಬಿರದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ವಿಜಯಪುರ ಜಿಲ್ಲೆಯ ಆರು ಜನ, ಬೆಳಗಾವಿ ಜಿಲ್ಲೆಯ ಮೂವರು, ಮೈಸೂರಿನ…

Read More

ಹೈಕಮಾಂಡ್’ಗೆ ದೂರು ನೀಡಲ್ಲ | ನಮ್ಮದು ನಿಷ್ಠರ ಬಣ | ಯಾರೊಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಠನೆ ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗುವ ಅವಶ್ಯಕತೆ ನನಗಿಲ್ಲ, ಅವರಾಗಿಯೇ ಬಂದು ನನ್ನ ಜೊತೆ ಮಾತನಾಡಿಸಿದರೂ ನಾನು ಮಾತನಾಡುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದರು.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುತ್ತೇವೆ. ಮಾತನಾಡುತ್ತೇವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವತಃ ಕರೆದರೂ ಮಾತುಕತೆ ಸಾಧ್ಯವಿಲ್ಲ. ನಮ್ಮದು ನಿಷ್ಠರ ಬಣ. ವಿಜಯೇಂದ್ರ ಪಕ್ಷದ ಅಧ್ಯಕ್ಷ ಅಷ್ಟೇ, ಅವರ ಜೊತೆ ಗುರುತಿಸಿಕೊಂಡವರೂ ಹೋರಾಟಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಹೇಳಿದರು.ಬಿಜೆಪಿಯಿಂದ ನನ್ನನ್ನು ಏಕೆ ಉಚ್ಚಾಟನೆ ಮಾಡುತ್ತಾರೆ. ಉಚ್ಚಾಟನೆ ಮಾಡಲು ನಾನು ಯಾರ ಜತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್‌ ಅಹಮದ್‌ ಖಾನ್‌ ಜೊತೆಗೂ ನನಗೆ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ರೂಪಾಯಿಗೆ ೮೦ ರೂಪಾಯಿ ನೀಡುವ ಕರಾರಿನ ಮೇರೆಗೆ ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಓಸಿ ಜೂಜಾಟವಾಡುತ್ತಿದ್ದ ವ್ಯಕ್ತಿಯ ಮೇಲೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕರಣವನ್ನು ದಾಖಲಿಸಿದ್ದಾರೆ.ತಾಲೂಕಿನ ಬಸರಕೋಡ ಗ್ರಾಮದ ಗುರಣ್ಣ ಸಂಗನಗೌಡ ಮಂಕಣಿ ಈತನು ಪಟ್ಟಣದ ಬಸ್ ನಿಲ್ದಾಣದಲ್ಲಿರುವ ನಂದಿನಿ ಮಿಲ್ಕ ಪಾರ್ಲರ್ ಬಳಿ ಜೂಜಾಟದಲ್ಲಿ ತೊಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿದ್ದು ಈತನಿಂದ ಕೆಲ ಹಣ, ಓಸಿ ಚೀಟಿ ಮತ್ತು ಬಾಲ್ ಪೆನ್ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ ನಡೆದಿದೆ.ಅಧ್ಯಕ್ಷರಾಗಿ ನಿಂಗನಗೌಡ ಪಾಟೀಲ್(ಮೋರಟಗಿ), ಉಪಾಧ್ಯಕ್ಷರಾಗಿ ಸಿದ್ದಯ್ಯ ಮಠಪತಿ (ದೇವಣಗಾಂವ) ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ರಾವುತಪ್ಪ ಬಿರಾದಾರ ಪ್ರಧಾನ ಕಾರ್ಯದರ್ಶಿ, ಗುರುಲಿಂಗಪ್ಪ ನೌಟಾಕ ಖಜಾಂಚಿ, ಗುರುಪಾದಪ್ಪ ನೆಲ್ಲಗಿ ಜಿಲ್ಲಾ ಪ್ರತಿನಿಧಿ ಹಾಗೂ ರಾಮನಗೌಡ ಪಾಟೀಲ, ಚೆನ್ನಪ್ಪ ಸಾಲೋಟಗಿ, ಸಿದ್ದರಾಮ ಶೀಲವಂತ, ರಮೇಶ ಬಿರಾದಾರ ಅವರುಗಳು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ. ಕೋಟ್ ” ಮುಂದಿನ ದಿನಗಳಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಅನುಕೂಲ ಆಗುವ, ಅವರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ.” – ನಿಂಗನಗೌಡ ಪಾಟೀಲನೂತನ ಅಧ್ಯಕ್ಷರು

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಾವಿತ್ರಿಬಾಯಿ ಫುಲೆ ಅವರು ಅವರು ಸ್ವಾತಂತ್ರö್ಯ ಪೂರ್ವದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ದುಡಿದರು. ಸಗಣಿ, ಕಲ್ಲುಗಳಿಂದ ಹೊಡೆಸಿಕೊಂಡು ಅವಮಾನಗಳನ್ನು ಸಹಿಸಿದರು. ಶಿಕ್ಷಣ ನೀಡಿ ಮಾತೆಯಾದರು. ಅವರ ಕೆಲಸವು ಭಾರತದಲ್ಲಿ ಮಹಿಳಾ ಹಕ್ಕುಗಳ ಚಳುವಳಿಗೆ ಅಡಿಪಾಯ ಹಾಕಿತು, ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡಿತು ಎಂದು ಬಂಜಾರಾ ಪ್ರೌಢ ಶಾಲೆಯ ಶಿಕ್ಷಕಿ ಜೆ.ಕೆ.ರಾಠೋಡರವರು ಹೇಳಿದರು.ನಗರದ ಬಂಜಾರಾ ಪ್ರೌಢ ಶಾಲೆಯಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ‘ಸಾವಿತ್ರಿಬಾಯಿ ಫುಲೆ’ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಭಾರತದ ಹೆಸರಾಂತ ಮಹಿಳಾ ಶಿಕ್ಷಣದ ಪ್ರವರ್ತಕರಲ್ಲಿ ಒಬ್ಬರಾದ ‘ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆ’ ಭಾರತದ ಮೊದಲ ಮಹಿಳಾ ಶಿಕ್ಷಕಿ, ಸ್ತ್ರೀವಾದಿ ಮತ್ತು ಸಮಾಜ ಸುಧಾರಕ ಅವರ ಜನ್ಮದಿನವನ್ನು ಗುರುತಿಸುತ್ತದೆ ಎಂದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ಇ.ಡಿ.ಲಮಾಣಿ ಮಾತನಾಡುತ್ತ. ಸಾವಿತ್ರಿ ಬಾಯಿ ಫುಲೆ, ಸ್ವತಂತ್ರ ಪೂರ್ವ ಭಾರತದಲ್ಲಿ ಮಹಾರಾಷ್ಟ್ರ ರಾಜ್ಯದ ಒಬ್ಬ ಭಾರತೀಯ ಸುಧಾರಕ, ಕವಿ ಮತ್ತು ಶಿಕ್ಷಣ ತಜ್ಞರಾಗಿದ್ದರು. ಅವರು ಭಾರತದಲ್ಲಿ ಮೊದಲ ಮಹಿಳಾ ಶಾಲೆಯನ್ನು ತೆರೆದ ಮೊದಲ…

Read More

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಮುಂಬರುವ ೨೦೨೬ಕ್ಕೆ ಕೇಂದ್ರ ಸರ್ಕಾರ ೮ನೇ ವೇತನ ಆಯೋಗ ಜಾರಿಗೆ ತರಲಿದ್ದು, ಅದನ್ನು ಯಥಾವತ್ತಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಜಾರಿಯಾಗುವಂತೆ ಕ್ರಮ ಜರುಗಿಸಲಾಗುವದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ನೀಡಿದರು.ಅವರು ಶುಕ್ರವಾರ ಇಂಡಿ ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಸಭಾ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಕಳೆದ ೫ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಸರಕಾರದಿಂದ ೨೫ ಆದೇಶಗಳನ್ನು ಮಾಡಿಸಿದ್ದೇನೆ. ಇದನ್ನು ಅರಿತ ರಾಜ್ಯದ ನೌಕರರು ಸಂಘಟನೆಯ ಸತ್ಯ ಮತ್ತು ನ್ಯಾಯವನ್ನು ಕಂಡು ಮತ್ತೊಮ್ಮೆ ನನಗೆ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವದಾಗಿ ಹೇಳಿದರು.ಸಂಘದ ಸಂವಿಧಾನವನ್ನು ತಿದ್ದಿ ೧೨೨ ಪುಟಗಳಿಗೆ ಹೆಚ್ಚಿಸಿದ್ದೇನೆ. ಇದರ ಅಡಿಯಲ್ಲಿ ಎಲ್ಲಾ ನೌಕರರಿಗೂ ನ್ಯಾಯ ಸಿಗುವಂತೆ ಮಾಡಲಾಗಿದೆ. ಭ್ರಷ್ಟಾಚಾರ ಕೊನೆಗೊಳಿಸಲು ಸಂಕಲ್ಪ ತೊಡಲಾಗಿದೆ. ಸರ್ಕಾರದ ೨೫…

Read More