Author: editor.udayarashmi@gmail.com

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ಉದಯರಶ್ಮಿ ದಿನಪತ್ರಿಕೆ ಇಂಡಿ: ಮುಂಬರುವ ೨೦೨೬ಕ್ಕೆ ಕೇಂದ್ರ ಸರ್ಕಾರ ೮ನೇ ವೇತನ ಆಯೋಗ ಜಾರಿಗೆ ತರಲಿದ್ದು, ಅದನ್ನು ಯಥಾವತ್ತಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಜಾರಿಯಾಗುವಂತೆ ಕ್ರಮ ಜರುಗಿಸಲಾಗುವದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಭರವಸೆ ನೀಡಿದರು.ಅವರು ಶುಕ್ರವಾರ ಇಂಡಿ ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಸಭಾ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಕಳೆದ ೫ ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತಹ ಸರಕಾರದಿಂದ ೨೫ ಆದೇಶಗಳನ್ನು ಮಾಡಿಸಿದ್ದೇನೆ. ಇದನ್ನು ಅರಿತ ರಾಜ್ಯದ ನೌಕರರು ಸಂಘಟನೆಯ ಸತ್ಯ ಮತ್ತು ನ್ಯಾಯವನ್ನು ಕಂಡು ಮತ್ತೊಮ್ಮೆ ನನಗೆ ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುವದಾಗಿ ಹೇಳಿದರು.ಸಂಘದ ಸಂವಿಧಾನವನ್ನು ತಿದ್ದಿ ೧೨೨ ಪುಟಗಳಿಗೆ ಹೆಚ್ಚಿಸಿದ್ದೇನೆ. ಇದರ ಅಡಿಯಲ್ಲಿ ಎಲ್ಲಾ ನೌಕರರಿಗೂ ನ್ಯಾಯ ಸಿಗುವಂತೆ ಮಾಡಲಾಗಿದೆ. ಭ್ರಷ್ಟಾಚಾರ ಕೊನೆಗೊಳಿಸಲು ಸಂಕಲ್ಪ ತೊಡಲಾಗಿದೆ. ಸರ್ಕಾರದ ೨೫…

Read More

ಇಂಡಿಯಲ್ಲಿ ಸಂಸದ ಜಿಗಜಿಣಿಗಿ ವಿರುದ್ಧ ಪ.ಜಾತಿ ಬಲ ಸಮಾಜ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಇಂಡಿ: ಬಲ ಸಮಾಜ ಮತದಾನ ಮಾಡಿಲ್ಲವೆಂದು ಬಲ ಸಮಾಜಕ್ಕೆ ಸಂಸದ ರಮೇಶ್ ಜಿಗಜಿಣಿಗಿ ಅವರು ಅವಮಾನ ಮಾಡಿದ್ದಾರೆ. ಅದು ಅವರ ರಾಜಕೀಯಕ್ಕೆ ಶೋಭೆ ತರುವಂತದಲ್ಲ. ಅದಲ್ಲದೆ ಹಳ್ಳಿಯಲ್ಲಿ ಅಣ್ಣ ತಮ್ಮ ಎಂದು ಸೌಹಾರ್ದತೆಯಿಂದ ಬಾಳ್ವೆ ಮಾಡುವ ನಮ್ಮ ಜನರಲ್ಲಿ ಬಲ, ಎಡ ಎಂದು ಒಡಕು ಭಾವನೆ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ‌ ಎಂದು ತಾಲ್ಲೂಕಿನ ಡಿ‌ ಎಸ್ಎಸ್ ಸಾಗರ ಬಣದ ಸಂಚಾಲಕ ರಮೇಶ್ ನಿಂಬಾಳಕ ಆಕ್ರೋಶ ವ್ಯಕ್ತಪಡಿಸಿದರು‌. ಕೂಡಲೇ ಬಲ ಸಮಾಜಕ್ಕೆ ಕ್ಷಮೆಯಾಚಿಸಲು ಆಗ್ರಹಿಸಿದರು.ಶುಕ್ರವಾರ ಪಟ್ಟಣದ ಖಾಸಗಿ ಹೋಟೆಲ್ ಯೊಂದರಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ನಡೆದ ಬಿಜೆಪಿ ಸಭೆಯಲ್ಲಿ ಪತ್ರಕರ್ತರು ಸಂಸದ ರಮೇಶ್ ಜಿಗಜಿಣಿಗೆ ಅವರಿಗೆ ಕೇಳಿದ ಪ್ರಶ್ನೆಗೆ ಬಲ ಸಮಾಜದವರು ನನ್ನ ರಾಜಿನಾಮೆ ಕೇಳಲು ಅವರಿಗೇನು ಅರ್ಹತೆ‌ ಇದೆ. ಅವರೇನು ನನಗೇನು ಮತ ಹಾಕಿದ್ದಾರೇನು ಎಂದು ಬಲ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾತನಾಡಿದರು.1983…

Read More

ದೇವರಹಿಪ್ಪರಗಿಯಲ್ಲಿ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ | ಸರ್ವಾಧ್ಯಕ್ಷ ಸಂಗಮೇಶ ಕೆರೆಪ್ಪಗೋಳ ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇಶದಲ್ಲಿ ಶುಚಿತ್ವ ಹಾಗೂ ರುಚಿತ್ವ ಇರುವ ಏಕೈಕ ಭಾಷೆ ಕನ್ನಡವಾಗಿದೆ ಎಂದು ಎಮ್ಮಿಗನೂರ ಹಂಪಿಸಾವಿರದೇವರಮಠದ ವಾಮದೇವಶ್ರೀಗಳು ಹೇಳಿದರು.ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸಾನಿಧ್ಯ ವಹಿಸಿ ಮಾತನಾಡಿದರು.ಕನ್ನಡ ಕೇವಲ ಆಡಳಿತ ಭಾಷೆಯಾಗಿರದೇ ಕಲಿಕಾಮಾರ್ಗವೂ ಆಗಿರಬೇಕು. ನಾವು ಕನ್ನಡ ಸಾಹಿತ್ಯದ ಶಕ್ತಿ ಅರಿಯಬೇಕಿದೆ. ಕನ್ನಡಕ್ಕಿರುವ ಶಕ್ತಿ ಯಾವ ಭಾಷೆಗೂ ಇಲ್ಲ. ಅದಕ್ಕಾಗಿ ಹೃದಯ ತಟ್ಟುವ, ಮುಟ್ಟುವ ಮಾತೃಭಾಷೆ ಕನ್ನಡವನ್ನು ಪ್ರೀತಿಸಿ, ಗೌರವಿಸಿ, ನಿತ್ಯ ಜೀವನದಿ ಅಳವಡಿಸಿಕೊಳ್ಳೊಣ. ಇಂಗ್ಲೀಷ ವ್ಯಾಮೋಹದಿಂದ ನಮ್ಮ ಮಕ್ಕಳನ್ನು ಹೊರಗೆ ತರೋಣ. ಕನ್ನಡ ಭಾಷೆಗೂ ಅಗಾಧ ಶಕ್ತಿಯಿದೆ ಅದನ್ನು ಜಗತ್ತಿಗೆ ತೋರಿಸುವ ಕಾಯಕವಾಗಬೇಕೆಂದರು.ಇಂಡಿ ಉಪವಿಭಾಗಾಧಕಾರಿ ಅಬೀದ್ ಗದ್ಯಾಳ ಮಾತನಾಡಿ, ಕನ್ನಡ ನಮ್ಮೆಲ್ಲರ ಅಸ್ಮಿತೆಯಾಗಿದ್ದು, ಹೊಟ್ಟೆ ಹೊರೆಯುವ ಭಾಷೆಯಾಗಬೇಕು. ಹೃದಯವಂತಿಕೆಯಿಂದ ಕನ್ನಡ ಭಾಷೆ ಅರಿತರೆ ಯಶಸ್ಸು ಸಾಧ್ಯ. ಕನ್ನಡವೇ…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು.ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್‌ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್‌ ಮಾಡಿ karnatakamediaacademy@gmail.com ಗೆ ಇ-ಮೇಲ್‌ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್ ಬಿ ಐ ಹಾಗೂ ಇತರ ಬ್ಯಾಂಕ್ ಅಧಿಕಾರಿ, ಗುಮಾಸ್ತರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು 45 ದಿನಗಳ ತರಬೇತಿಯನ್ನು ಮೈಸೂರು ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.ಆಸಕ್ತರು ಜನವರಿ 8ರ ಸಂಜೆ 4ಗಂಟೆಯೊಳಗಾಗಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರದಲ್ಲಿ ಸರ್ಕಾರ ಕೋಟಾದಡಿ ಖಾಲಿ ಉಳಿದಿರುವ ವಿಜಯಪುರದ MCA ಕೋರ್ಸಿನ ಸೀಟುಗಳ ಭರ್ತಿಗಾಗಿ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜನವರಿ 9 ಆಯಾ ಕೇಂದ್ರದಲ್ಲಿ ನಡೆಸಲಾಗುವುದು.ಅರ್ಹ ಅಭ್ಯರ್ಥಿಗಳು UUCMS ತಂತ್ರಾಂಶದಲ್ಲಿ ಜನವರಿ 3 ರಿಂದ ಜ.7ರ ವರೆಗೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯೊಂದಿಗೆ ನಿಗಧಿತ ಶುಲ್ಕ ಭರಿಸಿ, ಧೃಡಿಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸ್ನಾತಕೋತ್ತರ ಕೇಂದ್ರದ ಗಣಕ ವಿಜ್ಞಾನ ವಿಭಾಗದಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯದ ಜಾಲತಾಣ www.rcub.ac.in ಹಾಗೂ ದೂರವಾಣಿ ಸಂಖ್ಯೆ 0831-2565244ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯು ತಿಳಿಸಿದೆ

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಕೇಂದ್ರ ಕಾರಾಗೃಹದ ತೋಟದಲ್ಲಿರುವ ಹುಣಸೇ ಹಣ್ಣಿನ ಮರಗಳಲ್ಲಿ ಬಿಟ್ಟಿರುವ ಹಣ್ಣನ್ನು ಜನವರಿ 20ರ ಬೆಳಿಗ್ಗೆ 11ಗಂಟೆಗೆ ಬಹಿರಂಗ ಹರಾಜು ಮಾಡಲು ನಿರ್ಧರಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-272044ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೇಂದ್ರಕಾರಾಗೃಹ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಅಂಚೆ ಇಲಾಖೆಯು ಮಿನಿ ಬ್ಯಾಂಕ್ ಆಗಿ ಪರಿವರ್ತನೆಗೊಂಡು ಗ್ರಾಹಕರ ಸೇವೆಯನ್ನು ಮಾಡುತ್ತಿದೆ ಅಂಚೆ ಇಲಾಖೆಯ ಇತರ ಸೇವೆಗಳನ್ನು ಪಡೆದುಕೊಳ್ಳಬೇಕೆಂದು ಹಿರಿಯ ಮುಖಂಡ ಶ್ರೀಮಂತಗೌಡ ನಾಗೂರ ಹೇಳಿದರು.ಅವರು ತಾಲೂಕಿನ ದೇವಣಗಾಂವ ಗ್ರಾಮದ ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನಡೆದ ಅಂಚೆ ಜನ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನೂರಾರು ವರ್ಷಗಳ ಇತಿಹಾಸ ಇರುವ ಅಂಚೆ ಇಲಾಖೆಯು ಕೇವಲ ಪತ್ರಗಳ ಬಟವಡೆ ಮಾಡುವುದನ್ನ ಅಷ್ಟೇ ಅಲ್ಲ ಅದರ ಜೊತೆಗೆ ಗ್ರಾಹಕರಿಗೆ ಅನುಕೂಲವಾಗುವ ಬ್ಯಾಂಕ್ ಸೇವೆಯನ್ನು, ಜೀವ ವಿಮೆ, ಪಿಂಚಣಿ, ಸೇರಿದಂತೆ ಅನೇಕ ಸವಲತ್ತುಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ ಆದ್ದರಿಂದ ಎಲ್ಲರೂ ಅಂಚೆ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೇ. ಈರಯ್ಯ ಮಠ ಮಾತನಾಡಿ ಹಿಂದಿನ ಕಾಲದಲ್ಲಿ ಅಂಚೆ ಇಲಾಖೆ ಜನರ ಜೀವನದ ಜೀವನ ಅಡಿಯಾಗಿತ್ತು ಕಾಲಕ್ರಮೇಣ ಸ್ವಲ್ಪ ತೆರೆಮರೆಗೆ ಸರಿದಿದ್ದರೂ ಕೂಡ ಇಂದು ಹೊಸ ಹೊಸ ಸೇವೆಗಳನ್ನು ನೀಡುವ ಮೂಲಕ ಮತ್ತಷ್ಟು ಗ್ರಾಹಕರಿಗೆ ಹತ್ತಿರವಾಗುವಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದ ಹಿರಿಯರು ಸುಮಾರು ಎರಡು ದಶಕಗಳ ಹಿಂದಿನಿಂದ ಇಂತಹ ಸಮಾವೇಶಗಳನ್ನು ಏರ್ಪಡಿಸುವ ಮುಖಾಂತರ ನೀಲಗಾರ ಸಮಾಜದ ಸಂಘಟನೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದ್ದಾರೆ, ಪ್ರಮುಖವಾಗಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವುದು ಪ್ರತಿಭಾವಂತರನ್ನ ಪುರಸ್ಕರಿಸುವುದು.ಜ.5 ರವಿವಾರದಂದು ವಿಜಯಪುರ ಮತ್ತು ಅಥರ್ಗಾ ನೀಲಗಾರ ಸಮಾಜದ ಸಂಯುಕ್ತ ಆಶ್ರಯದಲ್ಲಿ ಜಗದಾರಾಧ್ಯ ಶ್ರೀ ಜಯಶಾಂತಲಿಂಗೇಶ್ವರ ಗುರುಭವನದಲ್ಲಿ ನೆರವೇರುವ ಸಮಾವೇಶವು ನಮ್ಮ ಸಮಾಜದ ರಾಜ್ಯಮಟ್ಟದ 9ನೇಯ ಸಮಾವೇಶವಾಗಿದೆ.ಈ ಸಮಾವೇಶದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ, ಪ್ರಮುಖವಾಗಿ ಪ್ರತಿಭಾ ಪುರಸ್ಕಾರ, 80 ವಯಸ್ಸು ದಾಟಿದ ಹಿರಿಯರಿಗೆ ಸನ್ಮಾನ ಮತ್ತು ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಸನ್ಮಾನ ಜೊತೆಗೆ ವರಕನ್ಯಾ ಸಮಸ್ಯೆ ಕುರಿತು ಚರ್ಚೆ ಕೈಗೊಳ್ಳಲಾಗುತ್ತದೆ.ಭವಿಷ್ಯದಲ್ಲಿ ಸಮಾಜದ ಅಭಿವೃದ್ಧಿಗಾಗಿ ನಮ್ಮ ಸಮಾಜವನ್ನು ಸರ್ಕಾರದ ಮುಖಾಂತರ ವಿಶೇಷ ಪ್ರಾಧಿಕಾರದ ಸ್ಥಾನಮಾನ ಪಡೆಯಲು ಪ್ರಯತ್ನಿಸುವುದು, ಸಹಕಾರಿ ಬ್ಯಾಂಕನ್ನು ಸ್ಥಾಪಿಸುವುದು ,ಮತ್ತು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವ ವಿಚಾರವಾಗಿ ಚರ್ಚಿಸಲಾಗುವುದು ಎಂದು ವಿಜಯಪುರದ ನೀಲಗಾರ ಸಮಾಜದ ರಾಜ್ಯ ಮಟ್ಟದ ಪದಾಧಿಕಾರಿಯಾದ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸಾರ್ಥಕ ಬದುಕಿನ ಸಾಧಕಿ,‌ ಕವಿ ಲೇಖಕಿ, ಸ್ತ್ರೀ ವಾದಿ, ಸಮಾಜ ಸುಧಾರಕಿ, ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳು, ಬದುಕು, ಬರಹಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಡಾ ಸಿದ್ದಲಿಂಗ ರಾಠೋಡ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 194 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದಮನಿತ ಮಹಿಳೆಯರ ಧ್ವನಿಯಾಗಿ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡುವ ಮೂಲಕ, ವಿಧವೆಯರ, ಆರ್ಥಿಕ ದುರ್ಬಲ ಮಹಿಳೆಯರ ಬಲವರ್ಧನೆ ಅವಿರತ ಶ್ರಮಿಸಿ, ಅಕ್ಷರದ್ವನೆಂದು ಕೀರ್ತಿಗೆ ಭಾಜನಳಾದ ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದವರು, ಮಹಿಳೆಯರು ಮುಖ್ಯವಾಹಿನಿಗೆ ಬರಲು, ಅವರ ಬದುಕಿನಲ್ಲಿ ಭರವಸೆ ತುಂಬಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷ, ವಿಠ್ಠಲ ಎಸ್ ಭಜಂತ್ರಿ, ಮಹಿಳೆಯರು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ, ಮಹಿಳೆಯರ…

Read More