Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಚನೆ- ಮಮತಾ ಶೃಂಗೇರಿ ಉದಯರಶ್ಮಿ ದಿನಪತ್ರಿಕೆ ದೂರ ದಿಗಂತದಲಲ್ಲಿ,ನೇಸರನು ಉದಯಿಸಿರಲುಭುವಿಯೆಲ್ಲಾ ಬೆಳಕಾಗಿ,ಎಲ್ಲೆಡೆ ಸೊಬಗು ಸುರಿದಿರಲು. ಹಕ್ಕಿಗಳ ಚಿಲಿಪಿಲಿ ಉಲಿಗೆ,ಮನದಿ ಉಲ್ಲಾಸ ಮೂಡಿರಲು,ಬಿದ್ದ ಇಬ್ಬನಿಯ ಹನಿಯೊಳು,ಸಪ್ತವರ್ಣಗಳು ಪ್ರತಿಫಲಿಸಿರಲು. ಎಳೆ ಬಿಸಿಲ ಹೊಂಗಿರಣ,ಸುಳಿಯೆಲೆಯ ಮೇಲೆ ಬಿದ್ದಿರಲು,ಚಳಿಗೆ ಮುದುಡಿದ ಮೊಗ್ಗು,ಅರೆಬಿರಿದು ಅರಳಿ ನಗುತಿರಲು. ಸುಂದರವು ಈ ಧರೆಯುಪದಗಳಲಿ ವರ್ಣಿಸಲು ಅಸದಳವುಬರೆಯ ಹೊರಟರೆ ಇಲ್ಲಿವರ್ಣಮಾಲೆಯೇ ಸೋಲುವುವು.
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬೆಳಗಿನ ಜಾವ ಹಿತ್ತಲ ಬಾಗಿಲಿನಲ್ಲಿ ಗೊಣಗುತ್ತಾ ಬಂದ ಕೆಲಸದಾಕೆಯನ್ನು ಏನೆಂದು ಪ್ರಶ್ನಿಸಿದಾಗ ಆಕೆ ಹೇಳಿದ್ದು.. ಮನೆ ಕೆಲಸ ನಾನೇ ಮಾಡಬೇಕು, ಮಕ್ಕಳನ್ನು ನಾನೇ ಜೋಪಾನ ಮಾಡಬೇಕು, ಹಣಕಾಸಿನ ಎಲ್ಲಾ ವ್ಯವಸ್ಥೆಗಳನ್ನು ನಾನೇ ಮಾಡಿಕೊಳ್ಳಬೇಕು, ಗಂಡ ಏನನ್ನು ಮಾಡದ, ನೆವ ಹೇಳಿ ಕೆಲಸ ತಪ್ಪಿಸಿಕೊಳ್ಳುವನು ಎಂದು. ನಕ್ಕು ಆಕೆಗೆ ಸಮಾಧಾನಿಸಿದ ನಾನು ನನ್ನ ಕೆಲಸದಲ್ಲಿ ತೊಡಗಿಕೊಂಡೆನಾದರೂ ಮನಸ್ಸು ಹೆಣ್ಣಿನ ಅಸ್ತಿತ್ವದ ಕುರಿತು ಪ್ರಶ್ನಿಸತೊಡಗಿತು.ಹೆಣ್ಣು ಯಾರು..? ಹುಟ್ಟಿದ ಮನೆಯಲ್ಲಿ ತನ್ನ ಜೀವಿತದ ಐದನೇ ಒಂದು ಭಾಗವನ್ನು ತಂದೆ ತಾಯಿಯ ಜೊತೆ ಕಳೆಯುವ, ವಿದ್ಯಾಭ್ಯಾಸ ಪಡೆಯುವ ಹೆಣ್ಣನ್ನು ತಂದೆ ತಾಯಿ ಮತ್ತೊಬ್ಬರ ಮನೆಗೆ ಹೋಗುವವಳು ಪರಕೀಯಳು ಎಂಬಂತೆಯೇ ಬೆಳೆಸುತ್ತಾರೆ. ಯಾವುದೇ ಸಾಮಾಜಿಕ ಹಿನ್ನೆಲೆಯಲ್ಲಿದ್ದರೂ ಕೂಡ ಪ್ರತಿಯೊಂದು ಮನೆಯಲ್ಲಿಯೂ ಕೊಟ್ಟ ಮನೆಗೆ ಹೋಗುವ, ಹೋದ ಮೇಲೆ ಅಲ್ಲಿ ಹೇಗೆ ನಡೆದುಕೊಳ್ಳಬೇಕು ಎಂದು ಬೋಧಿಸುವ ಸಮಾಜದ ಬಹು ದೊಡ್ಡ ವರ್ಗವೇ ಇದೆ. ಇದರ ಅರ್ಥ ಇಷ್ಟೇ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೀದರ್ ಜಿಲ್ಲೆಯ ಪ್ರಥಮ ದರ್ಜೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ನೇತೃತ್ವದಲ್ಲಿ ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಆತ್ಮಹತ್ಯೆಗೂ ಮುನ್ನ ಸಚಿನ್ ಪಾಂಚಾಲ್ ಅವರು ಬರೆದ ಏಳು ಪುಟಗಳ ಡೆತ್ ನೋಟವೂ ಕೂಡ ಲಭ್ಯವಾಗಿದೆ. ಆ ಡೆತ್ ನೋಟಲ್ಲಿ ಟೆಂಡರ್ ಕೊಡಿಸುವದಾಗಿ ಆರ್.ಡಿ.ಪಿ.ಆರ್ ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ ಕಲಬುರ್ಗಿ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಹಾಗೂ ಇತರ 8 ಜನರು ಹಣಕ್ಕಾಗಿ ಪೀಡುಸುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ ಎಂದು ಭೋಗೇಶ್ ಸೋಲಾಪುರ್ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಸಚಿನ್ ಅವರಿಗೆ ಟೆಂಡರ್ ಕೊಡಿಸುವದಾಗಿ ಹಣ ಕೂಡ ಪಡೆದಿದ್ದಾರೆ ಎನ್ನಲಾಗಿದೆ. ಟೆಂಡರ್ ಕೂಡ ಕೊಡಿಸಲಿಲ್ಲ ಹಾಗೂ ಹಣವೂ ವಾಪಸ್ ಕೊಡಲಿಲ್ಲ ಎಂದು ಗಂಭೀರ ಆರೋಪವಿದೆ. ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂದಿಸಿದಂತೆ ರಾಜು ಕಪನೂರ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಾತಃಸ್ಮರಣೀಯ ಶ್ರೀ ಯತಿಕುಲಚಕ್ರವರ್ತಿ ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಪಂಚಮ ಮಹಾಸಮಾರಾಧನಾ ಪೇಜಾವರಮಠ ಇವರ ಆರಾಧನೋತ್ಸವ ಅಂಗವಾಗಿ ಗುರುವಾರ ನಗರದ ಕೃಷ್ಣ – ವಾದಿರಾಜ ಮಠದಲ್ಲಿ ವಿಜೃಂಭಣೆಯ ರಥೋತ್ಸವ ಜರುಗಿತು.ಪಂಡಿತ ವಾಸುದೇವಚಾರ್ಯ ಮತ್ತು ಶ್ರೀಮಠದ ಗೌರವಧ್ಯಕ್ಷ ಗೋಪಾಲ ನಾಯಕ ಮಂಗಳಾರತಿ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಪಂಡಿತ ಭಾರತೀಯ ರಮಾಣಾಚಾರ್ಯ ಅವರು ಶ್ರೀಗಳ ಕುರಿತು ಪ್ರವಚನ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಮಠದ ಅಧ್ಯಕ್ಷರು ಹಾಗೂ ವೈದ್ಯರಾದ ಕಿರಣ್ ಚುಳಕಿ, ಸಮೀರ ಆಚಾರ್ಯ, ಶ್ರೀ ಮಠದ ಕಾರ್ಯದರ್ಶಿಗಳಾದ ಪ್ರಕಾಶ ಅಕ್ಕಲಕೋಟ, ಸದಸ್ಯರಾದ ವಿಕಾಸ ಪದಕಿ, ಗೋವಿಂದ ಜೋಶಿ, ವಿಜಯ ಜೋಶಿ, ರಾಕೇಶ್ ಕುಲಕರ್ಣಿ, ಪವನ ಜೋಶಿ, ಅಶೋಕ ರಾವ್, ಕೃಷ್ಣ ಪಾಡಗಾನೂರ, ಅಶೋಕ್ ಪದಕಿ, ವಿ.ಸಿ.ಕುಲಕರ್ಣಿ, ಉಮೇಶ ಕಾರಜೋಳ, ಹರೀಶಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಭೀಮಾಶಂಕರ ಹದನೂರ, ಮಹಾನಗರ ಪಾಲಿಕೆಸದಸ್ಯರಾದ ಪ್ರೇಮಾನಂದ ಬಿರಾದಾರ, ಗಿರೀಶ ಪಾಟೀಲ, ಮಹೇಂದ್ರ ನಾಯಕ, ವಿಷ್ಣು ಜಾಧವ, ಬಿ.ಆರ್.ಕುಲಕರ್ಣಿ, ವಿ.ಬಿ.ಕುಲಕರ್ಣಿ, ವೆಂಕಟೇಶ ಗುಡಿ, ಗೋವಿಂದರಾವ ದೇಶಪಾಂಡೆ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಕ್ಯಾಂಪಸ್ ಗುರುವಾರ ಸಂಪೂರ್ಣ ರಂಗು ರಂಗಾಗಿತ್ತು.ಹೊಸ ವರ್ಷವನ್ನು ಅನೇಕರು ಸಿಳ್ಳೆ ಚಪ್ಪಾಳೆ ಹೊಡೆದು, ಕೇಕ್ ಕಟ್ ಮಾಡಿ ಆಚರಿಸುತ್ತಾರೆ,ಆದರೆ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾತಾವರಣ ಸಂಪೂರ್ಣ ಇದಕ್ಕೆ ತದ್ವಿರುದ್ದವಾಗಿತ್ತು. ಎಲ್ಲಿ ನೋಡಿದರಲ್ಲಿ ಇಲಕಲ್ ಸೀರೆ, ಹಸಿರು ಬಳೆ, ಮುಡಿತುಂಬ ಮಲ್ಲಿಗೆ ಹೂ, ಕೈತುಂಬ ಹಸಿರು ಬಳೆ ಧರಿಸಿದ ವಿದ್ಯಾರ್ಥಿನಿಯರು ಮತ್ತು ಧೋತಿ, ಪಂಚೆ, ಶೆಲ್ಲೆ ಧರಿಸಿದ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿತ್ತು.ಹೌದು, ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸಂಸ್ಕೃತಿ ಹಬ್ಬ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾರತೀಯ ಉಡಿಗೆ-ತೊಡಿಗೆ, ನಮ್ಮ ಆಹಾರ ಪದ್ದತಿ ಮತ್ತು ನಮ್ಮ ಸಂಸ್ಕೃತಿಯ ಭಾಗವಾದ ಬೈಲಾಟ, ಕೋಲಾಟ, ಡೊಳ್ಳು ಕುಣಿತ, ತತ್ವಪದ, ಭರತನಾಟ್ಯ, ಬಿಸು ಕಲ್ಲಿನ ಹಾಡು, ಕುಟ್ಟು ವಾಗಿನ ಹಾಡು, ಜೋಕುಮಾರನ ಹಾಡು, ಸೀಮಂತದ ಹಾಡು, ಅರಿಸಿಣ ಹಚ್ಚುವಾಗಿನ ಹಾಡು, ಮೈನೆರೆದಾಗ ಹಾಡುವ ಹಾಡು ಸೇರಿದಂತೆ ಎಲ ರೀತಿಯಲ್ಲಿ ಹಳ್ಳಿಯ ಸಂಸ್ಕೃತಿಯನ್ನು ಬಿಂಬಿಸಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನಡೆದಾಡುವ ದೇವರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ತತ್ವ,ಆದಶ೯ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು. ಭಾರತ ಸೇವಾದಳ ಶಿಸ್ತಿನ ಸಂಸ್ಥೆಯಾಗಿದ್ದು, ಇಲ್ಲಿ ಭಾಗವಹಿಸುವ ಎಲ್ಲ ಶಿಕ್ಷಕರು, ಮಕ್ಕಳು ಶಿಸ್ತಿಗೆ ಬದ್ದರಾಗಿರಬೇಕು. ಹಾಗೂ ಇಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವನೆ, ಶಾರೀರಿಕ ಚಟುವಟಿಕೆಗಳನ್ನು ಉತ್ತಮವಾಗಿ ಕಲಿತು ತಮ್ಮ ಶಾಲಾ ಮಕ್ಕಳಿಗೆ ಕಲಿಸಬೇಕು. ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳೆಸಬೇಕೆಂದು ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಭಾರತ ಸೇವಾದಳ ಎಲ್ಲಾ ತಾಲೂಕು ಸಮಿತಿ ಹಾಗೂ ಸರ್ಕಾರಿ ಪ್ರೌಢಶಾಲೆ ಇಂಡಿ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಭಾರತ ಸೇವಾದಳ ಕಾರ್ಯಚಟುವಟಿಕೆಗಳು, ರಾಷ್ಟ್ರಧ್ವಜ ಆರೋಹಣ, ಅವರೋಹಣ ಮತ್ತು ಶಾರೀರಿಕ, ನೈತಿಕ ಯೋಗ ಮತ್ತು ಮೌಲ್ಯ ಶಿಕ್ಷಣವನ್ನು ನೀಡುವುದರ ಜೊತೆಗೆ ದೇಶಪ್ರೇಮ,…
ಉದಯರಶ್ಮಿ ದಿನಪತ್ರಿಕೆ ಚಡಚಣ: ಅಮರಶಿಲ್ಪಿ ಜಕಣಾಚಾರಿ ಕಟ್ಟಿಗೆ,ಕಲ್ಲು ಬಂಡೆಗಳಿಂದ ತಾವು ತಯಾರಿಸಿದ ಶಿಲ್ಪ ಕಲೆಗಳ ಮೂಲಕ ಇಂದಿಗೂ ಜೀವಂತವಾಗಿದ್ದಾರೆ ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿ ಜಯಂತಿ ಉದ್ದೇಶಿಸಿ ಮಾತನಾಡುತ್ತಿದ್ದರು.ಅಮರಶಿಲ್ಪಿ ಜಕಣಾಚಾರ್ಯರು ಉತ್ತಮ ಕಲಾಕೃತಿಗಳನ್ನು ನಿರ್ಮಿಸಿ ನಾಡಿನ ಅಲಂಕಾರ ಹೆಚ್ಚಿಸಿದ್ದಾರೆ.ಅವರ ಪರಿಶ್ರಮದ ಫಲವಾಗಿ ನಾಡಿನಾದ್ಯಂತ ಇರುವ ಕಲಾಕೃತಿಗಳನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಯಾತ್ರಿಕರು ಆಗಮಿಸುವಂತೆ ಮಾಡಿದ್ದಾರೆ ಎಂದರು.ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ ಅಮರಶಿಲ್ಪಿ ಜಕಣಾಚಾರಿ ಅವರಂತಹ ಶಿಲ್ಪಿ ಇನ್ನೂ ಯಾರೂ ಜನಿಸಿಲ್ಲ.ಕಲ್ಲಿನಲ್ಲಿ ಕಸೂತಿಮಾಡಿ ಕಲ್ಲರಳಿಸಿ ಹೂ ಮಾಡಿದ ಮಹಾನ್ ವ್ಯಕ್ತಿ.ಬೇಲೂರು, ಹಳೇಬೀಡು, ಹಂಪಿ,ಐಹೊಳೆ, ಪಟ್ಟದಕಲ್ಲು ಮುಂತಾದ ಅನೇಕ ಯಾತ್ರಾ ಸ್ಥಳಗಳಲ್ಲಿ ಅವರು ಶಿಲೆಯಲ್ಲಿ ಜೀವಂತಕಲೆ ನಿರ್ಮಿಸಿದ್ದಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ, ಹೊಸ ವರ್ಷವು ಸರ್ವರಿಗೂ ಸುಖ, ಶಾಂತಿ, ನೆಮ್ಮದಿ ತರಲಿ.ವಿದ್ಯಾಮಾತೆ ವಿದ್ಯಾ-ಬುದ್ಧಿ ಕರುಣಿಸಲಿ ಎಂದು ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಡಾ: ರಾಜಕುಮಾರ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದರ್ಬಾರ್ ಸಮೂಹ ಶಿಕ್ಷಣ ಸಂಸ್ಥೆಯ ಬನ್ಸಿಲಾಲ ವಿಠ್ಠಲ ದಾಸ ದರಬಾರ ಪದವಿ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಜ.02 ಮಂಗಳವಾರದಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಾಧ್ಯಾಪಕ ಎಸ್.ಎಸ್. ಗೌರಿ ಅವರು, ಸರಳ ಸ್ವಭಾವದ ಸಂತ ನಿರಾಡಂಬರವಾಗಿ ಬದುಕಿ ಬದುಕಿನ ಅರ್ಥವನ್ನು ಸಾಮಾನ್ಯ ಜನರಿಗೂ ತಿಳಿಸಿದ ಮಹಾನ ಯೋಗಿ, ಬರಿ ಶಿಕ್ಷಣ ಪಡೆಯುವುದು ಮುಖ್ಯವಲ್ಲ ಸಂಸ್ಕಾರ ಸಂಸ್ಕೃತಿಯನ್ನು ಶಿಕ್ಷಕ ಸಮುದಾಯ ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದು ಅವರ ಸದಾಶಯವಾಗಿತ್ತು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮುಖ್ಯೋಪಾಧ್ಯಾಯ ರಮೇಶ್ ಕೋಟ್ಯಾಳ ಅವರು, ಶ್ರೀ ಸಿದ್ದೇಶ್ವರ ಸ್ವಾಮಿಗಳು ಆಡುಮುಟ್ಟದ ಸೊಪ್ಪಿಲ್ಲವೆಂಬಂತೆ ಜಗದ ತತ್ವ ಜ್ಞಾನದ ಮಾತು ಸಾಕ್ರೆಟಿಸ್ ಅರಿಸ್ಟಾಟಲ್ ಪ್ಲೇಟೋ ಕನ್ಫ್ಯೂಸಿಯಸ್ ರಾಮಕೃಷ್ಣ ಪರಮಹಂಸ ಸ್ವಾಮಿ ವಿವೇಕಾನಂದ ಜಗದ ದಾರ್ಶನಿಕರ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ, ನೈತಿಕ ಸಂದೇಶವನ್ನು ನಿತ್ಯ ಪ್ರಸರಣ ಮಾಡಿದ ತತ್ವಜ್ಞಾನಿ ಅಲ್ಲಮನ ಎಲ್ಲವನ್ನು ಅರಿತಿದ್ದರೂ ಅರಿಯದಂತಿದ್ದ ಅವರೊಬ್ಬ ಹೊರಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಅನಿತಾ. ಎಂ ಅವರು “ಫಿಸಿಯೋಲಾಜಿಕಲ್ ಆ್ಯಂಡ್ ಫಿಸಿಕಲ್ ಪ್ರೊಫೈಲ್ ಆಫ್ ಕಬಡ್ಡಿ ಪ್ಲೇಯರ್ಸ್ ಆಫ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.ಅನಿತಾ. ಎಂ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ.ಡಿ.ಎಮ್.ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.ಡಾಕ್ಟರೇಟ್ ಪದವಿ ಪಡೆದಿರುವ ಅನಿತಾ. ಎಂ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಬೀಳಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಬೆಂಗಳೂರು ” ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ ಹಾಗೂ ಸಪ್ತಾಹ 2024-25 ” ಪ್ರಯುಕ್ತ ರಾಜ್ಯದ ಆಯ್ದ 100 ಶಾಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ.ಬೀಳಗಿ ತಾಲ್ಲೂಕಿನ ಮುಂಡಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಇಂದು ಗ್ರಾಮದಲ್ಲಿ ಶಾಲಾ ಮಕ್ಕಳಿಂದ ” ವಾಕಥಾನ್ ಕಾರ್ಯಕ್ರಮ” ಹಮ್ಮಿಕೊಳ್ಳಲಾಯಿತು. ಇಂಧನ ಸಂರಕ್ಷಣಾ ಘೋಷಣಾ ಫಲಕಗಳನ್ನು ಹಿಡಿದು ಡೊಳ್ಳು , ಡೋಲು ಬಾರಿಸುತ್ತ ಗ್ರಾಮದಲ್ಲಿ ಜಾಗೃತಿ ಅಭಿಯಾನ ನಡೆಸಲಾಯಿತು.ಮುಖ್ಯ ಶಿಕ್ಷಕ ಬಿ ಎಸ್ ಪಾಟೀಲ ನೇತೃತ್ವದಲ್ಲಿ ಶಿಕ್ಷಕಿರಾದ ಮದಿನಾ ಪಿರಜಾದೆ, ಎೈ ಎಂ ಕಾಂಬಳೆ, ಯು ಎಲ್ ಪವಾರ, ರೇಖಾ ಬಿರಾದಾರ ಶಿಕ್ಷಕರಾದ ಎಂ ಆರ್ ಸೋಲಾಪುರ, ಎ ಡಿ ನದಾಫ ಮತ್ತು ಮಂಜುನಾಥ ಬಿರಾದಾರ ಉಪಸ್ತಿತರಿದ್ದು ಇಂಧನ ಉಳಿತಾಯದ ಮಹತ್ವ ತಿಳಿಸಿದರು.
