Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಶ್ರೀ ಶಾಂತೇಶ್ವರ ವಿ ವಿವಿದ್ದೊದೇಶಗಳ ಸಹಕಾರಿ ಸಂಘದ ಇಲ್ಲಿನ ಶಾಖೆಯಲ್ಲಿ ಶ್ರೀ ಸಿದ್ದೇಶ್ವರ ಶ್ರೀಗಳ ೨ ನೇ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.ಈ ವೇಳೆ ಎಂ.ಡಿ ಶಿವಾನಂದ ಇಂಡಿ, ಭಾಜಪಾ ನಗರ ಘಟಕ ಅದ್ಯಕ್ಷ ರಾಜು ಬಳ್ಳೊಳ್ಳಿ,ಯುವ ಮುಖಂಡ ಹಣಮಂತ ನಲವಡೆ, ವಿರೇಶ ಡವಳಗಿ, ಶಾಖಾ ವೇವಸ್ಥಾಪಕರಾದ ಓ S ಹೂಗಾರ ಹಾಗೂ ಸಿದ್ದು ಬ್ಯಾಕೋಡ, ಸಿಬ್ಬಂದಿಗಳಾದ ಸಂತೋಷ ಬಾವೂರ, ಶರಣು ಸಜ್ಜನ, ರಾಜಶೇಖರ ಮ್ಯಾಗೇರಿ ಸೇರಿದಂತೆ ಮತ್ತೀತರರು ಇದ್ದರು

Read More

ವಿಜಯಪುರ ಜ್ಞಾನಯೋಗಾಶ್ರಮದಲ್ಲಿ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವದಲ್ಲಿ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನದಲ್ಲಿ ಎಲ್ಲರ ಋಣ ತೀರಿಸಲು ಸಾಧ್ಯವಿದೆ. ಆದರೆ ಗುರುವಿನ ಋಣ ಹಾಗೂ ತಾಯಿಯ ಋಣವನ್ನು ತೀರಿಸಲು ಸಾಧ್ಯವಿಲ್ಲ. ಎನ್ನುವುದನ್ನೇ ಶ್ರೀ ಸಿದ್ಧೇಶ್ವರ ಅಪ್ಪಗಳು ತಮ್ಮ ಜ್ಞಾನ ದಿವಿಟಿಗೆಯನ್ನು ಹಿಡಿದು ನಾಡಿನಾದ್ಯಂತ ತಿರುಗಾಡಿ ನಡೆನುಡಿ ಆಚಾರಗಳಿಂದ ನಮ್ಮಲ್ಲಿ ಬದಲಾವಣೆ ತಂದಿರುವ ಅಪರೂಪದ ಸಂತ ಎಂದು ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ ಹೇಳಿದರು.ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನಲ್ಲಿರುವ ಜ್ಞಾನವನ್ನು ಧಾರೆ ಎರೆದು ತಾನು ಮಾಡುವ ಕೆಲಸವನ್ನು ಶಿಷ್ಯನಿಂದ ಮಾಡಿಸುವಾತ ಗುರು. ತಾಯಿ ನಮಗೆ ಜನ್ಮ ನೀಡಿದ್ದಾಳೆ ಅವಳು ಜನ್ಮಕೊಟ್ಟ ಮಗನಿಗೆ ಗುರುವಾಗಿ ನಿಲ್ಲುತ್ತಾಳೆ. ಆದರೆ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಕೇವಲ ಗುರುವಿನ ಸ್ಥಾನವನ್ನು ತುಂಬಿಲ್ಲ. ಅವರು ತಾಯಿ ಹಾಗೂ ಗುರುವಿನ ಸ್ಥಾನ ಎರಡನ್ನೂ ತುಂಬಿದ್ದಾರೆ. ಕಲ್ಕತ್ತಾ ಸ್ವಾಮಿ ವಿವೇಕಾನಂದರ ಕರ್ಮ ಭೂಮಿ. ಹಾಗೇ…

Read More

ಉದಯರಶ್ಮಿ ದಿನದಂದು ವಿಜಯಪುರ: ಕಲಬುರಗಿ ಜಿಲ್ಲೆ ಸೇಡಂನಲ್ಲಿ ಜ. ೨೯ರಿಂದ ಫೆ. ೬ರವರೆಗೆ ನಡೆಯಲಿರುವ ೭ನೇ ಭಾರತೀಯ ಸಂಸ್ಕೃತಿ ಉತ್ಸವದ ಪೂರ್ವಭಾವಿ ಸಭೆಯನ್ನು ಜ. ೫ ರಂದು ಬೆಳಗ್ಗೆ ೧೧ ಗಂಟೆಗೆ ಜ್ಞಾನಯೋಗಾಶ್ರಮದಲ್ಲಿ ಕರೆಯಲಾಗಿದೆ.ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ ಈ ಪೂರ್ವಭಾವಿ ಸಭೆ ನಡೆಯಲಿದೆ.ಜಿಲ್ಲೆಯ ಗಣ್ಯರು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಚಿಂತಕರು ಪಾಲ್ಗೊಳಬೇಕು ಎಂದು ಭಾರತ ವಿಕಾಸ ಸಂಗಮದ ಅಧ್ಯಕ್ಷ ಸಂ.ಗು. ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ & ಕಲಬುರ್ಗಿ ಪೌಂಡೇಶನ್ ನಿಂದ ಡಾ. ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ವಿಚಾರ ಸಂಕಿರಣ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಹಾಗೂ ವಿಜಯಪೂರ ಕಲಬುರ್ಗಿ ಪೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜ.೦೪ರಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ಬೆಳಿಗ್ಗೆ ೧೦:೩೦ಗಂಟೆಗೆ ಡಾ.ಎಂ.ಎಂ.ಕಲಬುರ್ಗಿ ಸೃಜನ ಸಾಹಿತ್ಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ತಾಲೂಕಿನ ಕಲಬುರ್ಗಿಯವರ ಅಭಿಮಾನಿಗಳು, ಸಾಹಿತ್ಯ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಶಿವಲಿಂಗ ಕಲಬುರ್ಗಿ ವಿನಂತಿಸಿಕೊಂಡಿದ್ದಾರೆ.ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಉದ್ಘಾಟಕರಾಗಿ ನ್ಯೂಜಿಲೆಂಡಿನ್ ಆಕ್ಲೆಂಡ್ ನಿವಾಸಿ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಆಗಮಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರವಾಡದ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರಣ್ಣ ರಾಜೂರ ವಹಿಸುವರು. ಪ್ರತಿಷ್ಠಾನದ ಸದಸ್ಯೆ ಹನುಮಾಕ್ಷಿ ಗೋಗಿ ಆಶಯ ನುಡಿಗಳನ್ನಾಡಲಿದ್ದಾರೆ.ಪ್ರಾಧ್ಯಾಪಕ ಡಾ.ಎಂ.ಎಸ್.ಮಾಗಣಗೇರಿ “ಕೆಟ್ಟಿತ್ತು ಕಲ್ಯಾಣ” ನಾಟಕ ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. “ನೀರು ನೀರಡಿಸಿತ್ತು”…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಫಲಾನುಭವಿಗಳಿಗೆ ವೆಲ್ಡಿಂಗ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಫಲಾನುಭವಿಯು ಚಾಲ್ತಿಯಲ್ಲಿರುವ ಕಾರ್ಮಿಕರ ಗುರುತಿನ ಚೀಟಿ, ಆಧಾರ ಕಾರ್ಡ್ ಮತ್ತು ಫಲಾನುಭವಿಯ ಭಾವಚಿತ್ರ, ಸದರಿ ದಾಖಲೆಗಳನ್ನು ಜ.೦೩ ರಿಂದ ಜ.೧೮ರ ಒಳಗಾಗಿ, ಈ ಕೆಳಕಂಡ ಷರತ್ತುಗಳ ಅನ್ವಯ ಕಟ್ಟಡ ಕಾರ್ಮಿಕರು ನೋಂದಾಯಿಸಿ ಒಂದು ವರ್ಷ ಪೂರ್ಣಗೊಂಡಿರಬೇಕು. ಕಾರ್ಮಿಕ ಗುರುತಿನ ಚೀಟಿ ಚಾಲ್ತಿಯಲ್ಲಿರಬೇಕು. ಕಾರ್ಮಿಕ ಗುರುತಿನ ಚೀಟಿಯಲ್ಲಿ ನಮೂದಿಸಿದ ವೃತ್ತಿಯ ಕಿಟ್‌ಗಳನ್ನು ಮಾತ್ರ ವಿತರಿಸಲಾಗುವುದು. ಸದರಿ ಅರ್ಜಿಯನ್ನು ಬಂದಾಳ ರಸ್ತೆಯ ಬಮ್ಮಣ್ಣಿ ಬಿಲ್ಡಿಂಗ್ ಸಿಂದಗಿ ಕಛೇರಿಯಲ್ಲಿ ಸಲ್ಲಿಸಬೇಕು. ಸದರಿ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇರೆಗೆ ವಿತರಿಸಲಾಗುವುದು ಎಂದು ಎಂದು ತಾಲೂಕು ಕಾರ್ಮಿಕ ನಿರೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಎಕ್ಸಲಂಟ್ ವಿಜ್ಞಾನ ಪ.ಪೂ.ಕಾಲೇಜಿನಲ್ಲಿ ಗುರುನಮನ ಮಹೋತ್ಸವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಶ್ಚಾತ್ಯ ಜೀವನ ಶೈಲಿ ಎಡೆಗೆ ಮಾರು ಹೋಗುತ್ತಿರುವ ಯುವ ಸಮೂಹಕ್ಕೆ ಭಾರತೀಯತೆಯನ್ನು ತಿಳಿಸಿಕೊಡುವ ಮೂಲಕ ಸಂಸ್ಕಾರವಂತ ಭಾರತ ನಿರ್ಮಾಣ ಮಾಡಲು ಹೊರಟ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕಾರ್ಯ ಶ್ಲಾಘನೀಯ ಮಾತ್ರವಲ್ಲ ಇತರರಿಗೆ ಮಾದರಿಯಾಗಿದೆ. ಇದಕ್ಕೆ ಕಾರಣೀಕರ್ತರಾಗಿರುವ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಕೌಲಗಿ ಅಭಿನಂದನಾರ್ಹರು ಎಂದು ವಾಗ್ಮಿ ಅಶೋಕ ಹಂಚಲಿ ಹೇಳಿದರು.ಬುಧವಾರ ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಗುರು ನಮನ ಮೊಹೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು; ಇಂದು ಶಾಲಾ ಕಾಲೇಜುಗಳಲ್ಲಿ ಕಲಿಯುವ ಮಕ್ಕಳು ಜನೆವರಿ ಬಂತೆಂದರೆ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮೈ ಮರೆಯಲು ಮುಂದಾಗುತ್ತಾರೆ. ಆದರೆ ಎಕ್ಸಲಂಟ್ ಕಾಲೇಜು ಅಡ್ಡ ದಾರಿಯಲ್ಲಿ ಹೋಗುವ ಯುವ ಸಮೂಹವನ್ನು ಸರಿದಾರಿಗೆ ತರುವ ಕಾರ್ಯ ನಾವು ಮಾಡುತ್ತೇವೆ ಎನ್ನುವಂತೆ ಗುರು ನಮನ ಮಹೋತ್ಸವ ಆಯೋಜನೆ ಮಾಡಿ, ನಡೆದಾಡುವ ದೇವರು ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೋಲಾಪುರ ರಸ್ತೆಯಲ್ಲಿರುವ “ಶುಭಶ್ರೀ ಸಾಗರ ಹೋಟೆಲ್‌ ನಲ್ಲಿ” ಶನಿವಾರ ಸಂಜೆ (ಜ.೪) ಸಂಜೆ ೫.೩೦ ಗಂಟೆಗೆ “ಓದುಗರೊಂದಿಗೆ ಸಂವಾದ” ಕಾರ್ಯಕ್ರಮ ಜರುಗಲಿದೆ.”ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ವಿಜಯಪುರ” ಆಯೋಜನೆಯ ಈ ಕಾರ್ಯಕ್ರಮದಲ್ಲಿ “ಕಶೀರ”,”ಅವಸಾನ”, “ಮಾಗಧ” ಕಾದಂಬರಿಗಳ ಖ್ಯಾತಿಯ , ಜನಪ್ರಿಯ ಕಾದಂಬರಿಗಾರ್ತೀಯರಾದ “ಸಹನಾ ವಿಜಯಕುಮಾರ್” ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಹನಾ ವಿಜಯಕುಮಾರರ ಹೊಸ ಕಾದಂಬರಿ “ಮಾಗಧ” ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಓದುಗರು, ಲೇಖಕರ ಹಸ್ತಾಕ್ಷರ ಮತ್ತು ಅವರೊಟ್ಟೆಗೆ ಸೆಲ್ಫಿಯ ಅವಕಾಶವೂ ಇದೆ ಎಂದು “ಅಭಾಸಾಪ ವಿಜಯಪುರ” ಜಿಲ್ಲಾಧ್ಯಕ್ಷರಾದ ನಾರಾಯಣ ಬಾಬಾನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಹಾಗೂ ಪುಸ್ತಕಗಳಿಗಾಗಿ ಸಂಪರ್ಕಿಸಿ – 9880050818 ವಿವೇಕ ಕುಲಕರ್ಣಿ , 87480 03989 ರಂಜಿತ್‌ ಸಿಂಗ್‌ ರಜಪೂತ

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬಬಲಾದಿಯ ಅರ್ಥಾರ್ಥ ಸಾರವಾಡದ ಕಾಲಜ್ಞಾನ ಬಹಳ ಅದ್ಭುತವಾದದ್ದು. ಈ ಭವ್ಯ ಪರಂಪರೆಯ ಮೂಲಪುರುಷನೇ ಸಾರವಾಡದ ಚಿಕ್ಕಪ್ಪಯ್ಯ ಎಂದು ಸಾರವಾಡದ ಓಂಕಾರಯ್ಯ ಶ್ರೀಗಳು ಹೇಳಿದರು.ಅವರು ಬುಧವಾರ ತಾಲೂಕಿನ ಚಿಕ್ಕಬೇವನೂರ ಗ್ರಾಮದ ಸದಾಶಿವ ಅಜ್ಜನ ಮಠದಲ್ಲಿ ಚಿಕ್ಕಬೇವನೂರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.ಸಾರವಾಡದ ಅಧಿದೇವತೆ ಚಿಕ್ಕಪ್ಪಯ್ಯ ಮೊಟ್ಟಮೊದಲು ಕಾಲಜ್ಞಾನದ ಹಾಡುಗಳನ್ನು ಬರೆದು ಶ್ರೀಕಾರ ಹಾಕಿದರು. ನಂತರ ಈ ಪರಂಪರೆಯನ್ನು ಆತನ ಕೃಪಾಪುತ್ರ ಸದಾಶಿವ ಮುತ್ಯ ಮುಂದುವರೆಸಿಕೊಂಡು ಬಂದರು ಕಾಲಜ್ಞಾನದಲ್ಲಿ ಅವರು ಹೇಳಿದ ನುಡಿಗಳು ಇಂದಿಗೂ ಸತ್ಯವಾಗಿದೆ ಎಂದು ಹೇಳಿದರು.ಅಕ್ಕಮಹಾದೇವಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಮೇಶ ಬಳಬಟ್ಟಿ ಮಾತನಾಡಿ, ತ್ರಿಕಾಲ ಜ್ಞಾನ ಹೊಂದಿದ ಸಾರವಾಡದ ಶ್ರೀ ಮಠದ ಶಾಖಾ ಮಠ ಚಿಕ್ಕಬೇವನೂರ ಗ್ರಾಮದಲ್ಲಿಯೂ ಪ್ರಾರಂಭವಾಗಿದ್ದು ಸಂತಸ ತಂದಿದೆ. ಗ್ರಾಮಸ್ಥರು ಪ್ರತೀ ವರ್ಷವೂ ಸಹ ಜಾತ್ರಾ ಮಹೋತ್ಸವ ನೆರವೇರಿಸುವ ಜೊತೆಗೆ ಸಾಮೂಹಿಕ ವಿವಾಹ, ಧರ್ಮ ಸಭೆಗಳನ್ನು ಏರ್ಪಡಿಸಿ ಬಡವರ ಪಾಲಿಗೆ ಆಸರೆಯಾಗಬೇಕು ಎಂದು ಸಲಹೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ ಅವರು ಜನೇವರಿ ೩ ಶುಕ್ರವಾರದಂದು ಇಂಡಿ ನಗರಕ್ಕೆ ಆಗಮಿಸಲಿದ್ದು, ಅವರಿಗೆ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಬಸವರಾಜ ರಾವೂರ ಹೇಳಿದರು.ಅವರು ಗುರುವಾರ ಪಟ್ಟಣದ ಸರಕಾರಿ ನೌಕರರ ಸಂಘದ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಶುಕ್ರವಾರ ಬೆಳಿಗ್ಗೆ ೧೧ ಘಂಟೆಗೆ ಇಂಡಿ ಪಟ್ಟಣದ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದ್ದು, ಅಭಿನಂದನಾ ಸಮಾರಂಭದಲ್ಲಿ ನೌಕರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಇಲಾಖೆಯ ನೌಕರರು ಭಾಗವಹಿಸಿ, ನಮ್ಮ ಒಳಿತಿಗಾಗಿ ಸದಾ ಹೋರಾಟ ನಡೆಸುತ್ತಿರುವ ಷಡಕ್ಷರಿ ಅವರಿಗೆ ಅಭಿನಂದಿಸೋಣ ಎಂದರು.ಎನ್‌ಪಿಸಿ ರದ್ದುಗೊಳಿಸಿ ಓಬಿಸಿ ಜಾರಿಮಾಡಬೇಕು. ಎಲ್ಲ ನೌಕರ ಕುಟುಂಬಗಳಿಗೆ ಆರೋಗ್ಯ ರಕ್ಷಣೆಗೆ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಹಿಂಗಾರು ಹಂಗಾಮಿನಲ್ಲಿ ನಿಂಬೆ ಬೆಳೆಗೆ ಸೊರಗೆ ರೋಗ, ಕಜ್ಜಿ ರೋಗ, ಹಿಟ್ಟು ತಿಗಣೆಯ ಬಾಧೆ ಕಂಡು ಬರುತ್ತಿದ್ದು ಸಮಗ್ರ ನಿರ್ವಹಣಾ ಕ್ರಮ ಅನುಸರಿಸಲು ಡಾ.ಹೀನಾ ಹೇಳಿದರು.ಕೃಷಿ ವಿಜ್ಞಾನ ಕೇಂದ್ರ ಇಂಡಿ ವತಿಯಿಂದ ಸಾಲೋಟಗಿ ಗ್ರಾಮದ ಬಾಬು ಅವಟಿಯವರ ತೋಟದಲ್ಲಿ ನಿಂಬೆ ಬೆಳೆಯಲ್ಲಿ ಬಹಾರ ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾತನಾಡುತ್ತಿದ್ದರು.ಸಮಗ್ರ ರೋಗ ನಿರ್ವಹಣೆಗೆ ಕೈ ಕೊಡರ್ಮ ಮತ್ತು ಸುಡಮನಾಸ್ ಜೈವಿಕ ರೋಗ ನಿರೋಧಕ ಇವುಗಳನ್ನು ತಿಪ್ಪಿ ಗೊಬ್ಬರ ದಲ್ಲಿ ಬೆರೆಸಿ ಮರದ ಬುಡಕ್ಕೆ ಬಿಡಬೇಕು. ಹಾಗೂ ಕಾಂಡಗಳಿಗೆ ಬೋರ್ಡೋ ಪೇಸ್ಟ ತಯಾರಿಕೆ ಮಾಡಿ ಲೇಪನ ಮಾಡುವದರಿಂದ ರೋಗವನ್ನು ಹತೋಟೆ ಮಾಡಬಹುದು ಎಂದರು.ಡಾ. ಪ್ರೇಮಚಂದ್ರ, ಡಾ. ವೀಣಾ ಚಂದಾವರಿ ಮತ್ತು ಡಾ. ಬಾಲಾಜಿ ನಾಯ್ಕ ಮಾತನಾಡಿದರು.ಶ್ರೀಕಾಂತ ಅವಟಿ, ಸೋಮಣ್ಣ ಕೆರುರ ಭೀಮಾಶಂಕರ ಅವರಾದಿ ಸೇರಿದಂತೆ ಸುಮಾರು ೨೦ ಕ್ಕೂ ಹೆಚ್ಚು ರೈತರು ಪಾಲ್ಗೊಂಡಿದ್ದರು.

Read More