Author: editor.udayarashmi@gmail.com

ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪ್ರತಿಷ್ಠಿತ ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕಿನ ಆಡಳಿತ ಮಂಡಳಿಯ ಎಂಟು ನಿರ್ದೇಶಕ ಸ್ಥಾನಗಳಿಗೆ ಭಾನುವಾರ ತೀವ್ರ ಕುತೂಹಲ ಮೂಡಿಸಿದ ಚುನಾವಣೆಯಲ್ಲಿ ಸಂಜೆ ಜರುಗಿದ ಚುನಾವಣೆಯ ಫಲಿತಾಂಶ ಹೊರಬಂದ ನಂತರ ಐವರು ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರು ಆಯ್ಕೆಯಾದರೆ, ಹಿಂದಿನ ಆಡಳಿತ ಮಂಡಳಿಯ ಪೆನಲ್ ಬಿಟ್ಟು ಮೂವರು ಹೊಸದಾಗಿ ಸ್ಫರ್ಧೆ ಮಾಡಿದ್ದ ಹೊಸ ಪೆನಲ್‌ಗೆ, ಇನ್ನೊರ್ವ ಹಿಂದಿನ ಆಡಳಿತ ಮಂಡಳಿಯ ನಿರ್ದೇಶಕರಿಗೆ ಮತದಾರರು ಅವಕಾಶ ನೀಡಿದ್ದು ಗಮನ ಸೆಳೆಯಿತು.ಬಸವೇಶ್ವರ ಕೋ-ಆಪರೇಟಿವ್ಹ್ ಬ್ಯಾಂಕು ಒಟ್ಟು ೧೩ ನಿರ್ದೇಶಕರ ಆಡಳಿತ ಮಂಡಳಿಯನ್ನು ಹೊಂದಿದೆ. ಇದರಲ್ಲಿ ಐದು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ಎಂಟು ಸ್ಥಾನಗಳಿಗೆ ಸ್ಪರ್ಧೆ ನಡೆದ ಹಿನ್ನೆಲೆಯಲ್ಲಿ ಡಿ.೨೯ ರಂದು ಚುನಾವಣೆ ನಿಗದಿಯಾಗಿತ್ತು. ಚುನಾವಣೆ ಮತದಾನ ಪ್ರಕ್ರಿಯೆ ಸ್ಥಳೀಯ ಗುರುಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಬ್ಯಾಂಕಿನ ಒಟ್ಟು ೬೮೨ ಮತದಾರರ ಪೈಕಿ ೬೫೬ ಮತದಾರರು ಇಂದು ಜರುಗಿದ ಚುನಾವಣೆಯಲ್ಲಿ ಮತ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸೋಮವಾರ ಎಳ್ಳ ಅಮವಾಸ್ಯೆದಂಗವಾಗಿ ರೈತ ಬಾಂಧವರು ತಮ್ಮ ಹೊಲ, ತೋಟಗಳಲ್ಲಿ ಬೆಳೆದು ನಿಂತ ಬೆಳೆಗೆ ಹಾಗೂ ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಚೆರಗ ಚೆಲ್ಲಿ ಸಂಭ್ರಮಿಸುವ ಎಳ್ಳ ಅಮವಾಸ್ಯೆಯನ್ನು ಆಚರಿಸಿದರು.ಕೆಲ ರೈತ ಬಾಂಧವರು ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಹೊಲಗಳಿಗೆ ತೆರಳಿದರೆ, ಅಲ್ಪಸ್ವಲ್ಪ ಬೆಳೆ ಇದ್ದ ರೈತ ಬಾಂಧವರು ಮನೆಯ ಸದಸ್ಯರೊಂದಿಗೆ ತಮ್ಮ ಜಮೀನಿಗೆ ತೆರಳಿ ಚೆರಗ ಚೆಲ್ಲುವ ಹಬ್ಬ ಆಚರಿಸಿದರು.ಬೆಳಗ್ಗೆಯಿಂದಲೇ ಮನೆಗಳಲ್ಲಿ ಮಹಿಳೆಯರು ಎಳ್ಳ ಅಮವಾಸ್ಯೆ ಹಬ್ಬಕ್ಕಾಗಿ ಸಜ್ಜಿ ಕಡಬು, ಹೂರಣದ ಕಡಬು, ಹೂರಣದ ಹೋಳಗಿ, ಶೇಂಗಾ ಹೋಳಗಿ, ಸಜ್ಜಿ ರೊಟ್ಟಿ, ಚಪಾತಿ, ವಿವಿಧ ತರಹದ ಕಾಳು, ತರಕಾರಿ ಪಲ್ಯೆ ಸೇರಿದಂತೆ ವಿವಿಧ ಖಾದ್ಯಗಳನ್ನು ತಯಾರಿಸಿ ನಂತರ ಊರ ದೇವರಿಗೆ ನೈವೇದ್ಯ ಕೊಟ್ಟ ನಂತರ ಬುತ್ತಿ ಕಟ್ಟಿಕೊಂಡು ತಮ್ಮ ತಮ್ಮ ಹೊಲಗಳಿಗೆ ಎತ್ತಿನ ಬಂಡಿ, ಟ್ರ್ಯಾಕ್ಟರ್, ಟಂಟಂ ಸೇರಿದಂತೆ ಇತರೇ ವಾಹನಗಳ ಮೂಲಕ ಕುಟುಂಬ ಸದಸ್ಯರು ಹಾಗೂ ತಮ್ಮ ಬಂಧು ಬಳಗದೊಂದಿಗೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೈಕೊಡುವ ಮಳೆ, ಸಹಕರಿಸದ ಪರಿಸರ ಇದೆಲ್ಲದರ ನಡುವೆ ಬೆಳೆ ನೀಡಿ ಬಾಳ್ವೆಗೆ ಆಸರೆಯಾದ ಭೂಮಿಗೆ ವರ್ಷಕ್ಕೊಮ್ಮೆ ಪೂಜೆ ಬೇಡವೇ? ಅಂತೆಯೇ ಹೊಲದಲ್ಲಿ ಪೂಜೆಗೈದು ಚರಗ ಚಲ್ಲುವುದರ ಮೂಲಕ ನೈವಿಧ್ಯ ಅರ್ಪಿಸಿ ಸಂಭ್ರಮಿಸುವ ಪಾರಂಪರಿಕ ಹಬ್ಬವೇ ಇಂದಿನ ಎಳ್ಳ ಅಮವಾಸ್ಯೆ.ಪಟ್ಟಣದಲ್ಲಿ ಎಳ್ಳ ಅಮವಾಸ್ಯೆಯ ಅಂಗವಾಗಿ ರೈತ ಸಮುದಾಯದ ಕುಟುಂಬಗಳು ಬೆಳಗಿನಿಂದಲೇ ತಯಾರಿಯಲ್ಲಿ ತೊಡಗಿರುವುದು ವಿಶೇಷವಾಗಿ ಕಂಡು ಬಂತು. ಮನೆಯಲ್ಲಿ ಮಹಿಳೆಯರು ಚೆರಗ ಹಾಗೂ ನೈವಿಧ್ಯಕ್ಕಾಗಿ ಸಜ್ಜೆ ಕಡಬು, ಹಿಂಡಿ ಪಲ್ಯ, ಪುಂಡಿ ಪಲ್ಯ, ಶೇಂಗಾ ಹೋಳಿಗೆ, ತುಪ್ಪ ಬದನೆಕಾಯಿ ಪಲ್ಯ, ಅನ್ನ ಸಾಂಬಾರುಗಳ ಭೋಜನ ತಯಾರಿಯಲ್ಲಿ ತೊಡಗಿಸಿ ಸಿದ್ಧಪಡಿಸಿದರು. ಇನ್ನು ರೈತರು ಎತ್ತುಗಳ ಮೈ ತೊಳೆದು ಸಿಂಗರಿಸಿ ಬಂಡಿಯನ್ನು ತಯಾರು ಮಾಡಿದರೆ, ಟ್ರ್ಯಾಕ್ಟರ್, ಅಟೋ, ಟಂಟಂಗಳನ್ನು ಹೊಂದಿದವರು ಅವುಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದು ಕಂಡು ಬಂತು.ಚರಗದ ಎಲ್ಲ ಸಿದ್ಧತೆಗಳ ನಂತರ ಮನೆಯವರು ಆಪ್ತರೊಂದಿಗೆ ಸೇರಿ ಎತ್ತಿನ ಗಾಡಿ, ಟ್ರ್ಯಾಕ್ಟರ್, ಟಂ.ಟಂ ಸಹಿತ ವಿವಿಧ ವಾಹನಗಳ ಮೂಲಕ ತಮ್ಮ ತಮ್ಮ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಉತ್ತರ ಕರ್ನಾಟಕದ ವಿಶೇಷ ಹಬ್ಬಗಳಲ್ಲಿ ಒಂದಾದ ಎಳ್ಳ ಅಮವಾಸ್ಯೆಯಂದು ಗ್ರಾಮೀಣ ಸೊಗಡಿನ ಚರಗ ಚಲ್ಲುವ ಹಬ್ಬವು ಸೋಮವಾರ ರೈತರು ಸಂಭ್ರಮದಿಂದ ಆಚರಿಸಿದರು.ತಾಲ್ಲೂಕಿನಲ್ಲಿ ಬರುವ ಎಲ್ಲ ಗ್ರಾಮಗಳ ರೈತರು ಎತ್ತಿನ ಬಂಡಿ ಹಾಗೂ ಟ್ರಾಕ್ಟರಗಳನ್ನ ಅಲಂಕಾರ ಮಾಡಿಕೊಂಡು ತಮ್ಮ ಕುಟುಂಬ ಸಮೇತರಾಗಿ ಬಂಧು ಬಾಂದವರೊಡನೆ ಹೊಲಗಳಿಗೆ ತೆರಳಿ ಭೂದೇವಿಯ ಪೂಜೆ ಸಲ್ಲಿಸಿದರು.ಹಸಿರು ಪ್ರಕೃತಿಯ ಮಡಿಲಲ್ಲಿ ರೈತರು ತಾವು ಬೇಳೆದ ಬೆಳೆಗಳ ಮಡಿಲಲ್ಲಿ ಈ ಹಬ್ಬವನ್ನು ಆಚರಣೆ ಮಾಡಿದರು. ರೈತರು ತಾವು ಶ್ರಮವಹಿಸಿದ ತೋಟವು ಉತ್ತಮ ಫಸಲು ನೀಡಲಿ ಎಂಬ ಉದ್ದೇಶದಿಂದ ಎಳ್ಳ ಅಮವಾಸ್ಯೆ ದಿನ ಚರಗ ಚಲ್ಲಿ ಭೂ ತಾಯಿಯ ಉಡಿ ತುಂಬಿ ಪೂಜೆ ಸಲ್ಲಿಸಿದರು. ತೋಟದಲ್ಲಿದ್ದ ಬನ್ನಿ ಮರಕ್ಕೆ ಸೀರೆಯುಡಿಸಿ ಉಡಿ ತುಂಬಿದರು. ಚಾಂಗಿ ಬೊಲೊ ಚಾಂಗಿಬೊಲೊ ಎಂದು ಚರಗ ಚೆಲ್ಲಿದರು.ಜಾತಿ ಮತ ಬೇಧ ಭಾವವಿಲ್ಲದೆ ಬಂಧು ಬಾಂಧವರಡೊಡನೆ ಹಿರಿಯರು, ಮಹಿಳೆಯರು, ಮಕ್ಕಳು ಎಲ್ಲರೂ ಸೇರಿ ಈಡಿ ದಿನ ಪ್ರಕೃತಿಯ ಮಡಿಲಲ್ಲಿ ಮನೆಯಿಂದ ತಂದಿದ್ದ ರುಚಿಕರವಾದ ಮೃಷ್ಠಾನ್ನ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ವಿದ್ಯಾಚೇತನ ಪ್ರಕಾಶನದಿಂದ ಪ್ರತಿವರ್ಷ ಕೊಡ ಮಾಡುವ ಬಾಲ ಸಾಹಿತ್ಯ ಪುರಸ್ಕಾರಕ್ಕಾಗಿ ೨೦೨೪ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.ಈ ಪುರಸ್ಕಾರಕ್ಕಾಗಿ ಆಸಕ್ತ ಲೇಖಕರು ಮಕ್ಕಳ ಸಾಹಿತ್ಯದ ಕಥೆ, ಕವನ, ಕಾದಂಬರಿ ಮೂರು ಪ್ರಕಾರದ ಕೃತಿಗಳನ್ನು ಕಳುಹಿಸಬಹುದು. ಒಮ್ಮೆ ಒಂದು ಪ್ರಕಾರದಲ್ಲಿ ಪ್ರಶಸ್ತಿ ಪಡೆದವರು ಮುಂದೆ ಅದೇ ಪ್ರಕಾರದ ಪ್ರಶಸ್ತಿಗಾಗಿ ಕಳುಹಿಸುವಂತಿಲ್ಲ. ಒಮ್ಮೆ ಪ್ರಶಸ್ತಿ ಪಡೆದವರು ಪ್ರಶಸ್ತಿ ಪಡೆದ ಮೂರು ವರುಷಗಳ ನಂತರ ಮತ್ತೊಂದು ಪ್ರಕಾರದ ಕೃತಿಗಳನ್ನು ಪ್ರಶಸ್ತಿಗಾಗಿ ಕಳುಹಿಸಬಹುದು.ಕೃತಿಯ ನಾಲ್ಕು ಪ್ರತಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಕೋರಿಯರ್ ಮುಖಾಂತರ ಜ.೨೫ ರೊಳಗಾಗಿ ಹ.ಮ.ಪೂಜಾರ ನಿವೃತ್ತ ಶಿಕ್ಷಕರು, ಶ್ರೀಸಂಗಮೇಶ್ವರ ಕಾಲೋನಿ ಸಿಂದಗಿ-೫೮೬೧೨೮ ಜಿಲ್ಲಾ ವಿಜಯಪುರ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು. ಕಥೆ, ಕವನ, ಕಾದಂಬರಿ ಮೂರು ಪ್ರಕಾರದ ಮಕ್ಕಳ ಸಾಹಿತ್ಯಕ್ಕೆ ಪ್ರಶಸ್ತಿ ಪ್ರತ್ಯೇಕವಾಗಿ ತಲಾ ೫ ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ೯೪೪೮೯೮೬೨೨೨ ಈ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಂದೆಲ್ಲಾ ಈ ಚರಗ ಹಬ್ಬದ ಸಂಭ್ರಮ ಸವಿಯಲು ರೈತರು ನಸುಕಿನಲ್ಲಿಯೇ ಎದ್ದು ಎತ್ತಿನಗಾಡಿಗೆ ಬಣ್ಣ ಬಳಿದು ಎತ್ತುಗಳ ಮೈತೊಳೆದು, ಗಾಡಿಯ ಗಾಲಿಯ ಕೀಲುಗಳಿಗೆ ಎಣ್ಣೆ ಬತ್ತಿ ಹಾಕಿ, ಗಾಡಿಗೆ ಕಮಾನು ಕಟ್ಟಿ ಹೂಗಳಿಂದ ಅಲಂಕಾರ ಮಾಡಿ ಬಣ್ಣ ಹಚ್ಚಿ, ಕೊಡುಗಳಿಗೆ ಹಣಸು ಹಾಕಿ ಜೂಲು, ಗೊಂಡೆ, ಬಣ್ಣದ ಗಾಜಿನ ತುಕ್ಕಡಿಗಳಿಂದ ಜೊಡಿಸಿದ ಬಾಸಿಂಗ್(ಹಣೆಪಟ್ಟಿ) ಕಟ್ಟುತ್ತಿದ್ದರು. ಎತ್ತುಗಳ ಕೊರಳಿಗೆ ಗಂಟೆಗಳ ಸರ ಕಟ್ಟಿ, ಬೆನ್ನ ಮೇಲೆ ಹಲವು ಬಣ್ಣ ಬಣ್ಣದ ಗಜ್ಜರಾ ಹೊದಿಸುತ್ತಿದ್ದರು.ತಾಲೂಕಿನಲ್ಲಿ ರೈತರು ಪ್ರತಿವರ್ಷ ಎಳ್ಳು ಅಮವಾಸ್ಯೆ ದಿನದಂದು ತಮ್ಮ ತಮ್ಮ ಹೊಲಗಳಿಗೆ ತೆರಳಿ ಚರಗ ಚೆಲ್ಲುವ ಮೂಲಕ ಭೂ ತಾಯಿಗೆ ನೈವೇದ್ಯ ಅರ್ಪಿಸುವ ಸಂಪ್ರದಾಯಕ್ಕೆ ಈ ಬಾರಿ ಹೇಳಿಕೊಳ್ಳುವಷ್ಟು ಸಂಭ್ರಮ ಇರಲಿಲ್ಲ.ಹೊಸ ಹೊಸ ಬಟ್ಟೆಗಳನ್ನು ತೊಟ್ಟ ಮಕ್ಕಳು, ಇಲಕಲ್ ಸೀರೆಗಳನ್ನು ಉಟ್ಟ ಹೆಣ್ಣು ಮಕ್ಕಳು, ಗಾಡಿಯಲ್ಲಿ ಬಗೆ ಬಗೆಯ ಅಡುಗೆ ಪದಾರ್ಥಗಳ ಬುಟ್ಟಿ, ಗಂಟುಗಳೊಂದಿಗೆ ಕುಳಿತು ಪ್ರತಿ ರೈತ ಕುಟುಂಬಕ್ಕೊಂದರಂತೆ ಬಂಡಿಗಳು ಸಾಲಾಗಿ ಹೊಲಗಳತ್ತ ಹೊರಟರೆ…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಮಹೋತ್ಸವದಲ್ಲಿ ಗದುಗಿನ ಜಗದ್ಗುರು ಸದಾಶಿವಾನಂದ ಶ್ರೀ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಒಂದು ಊರಿಂದ, ಒಂದು ಊರಿಗೆ ಹೊರಟರೆ ಸಾಕು, ಸಾವಿರಾರು ಜನರು ಶ್ರೀ ಸಿದ್ಧೇಶ್ವರ ಅಪ್ಪನವರ ಜೊತೆಯಲ್ಲಿ ಹೆಜ್ಜೆ ಹಾಕುತ್ತಿದ್ದರು ಕಾರಣ ಅವರು ಬುದ್ಧನ ಸ್ವರೂಪಿಯಾಗಿದ್ದರು ಎಂದು ಗದುಗಿನ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು ಹೇಳಿದರು.ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಮಹೋತ್ಸವದ ಅಂಗವಾಗಿ `ಜಾಗತಿಕ ತಾತ್ವಿಕ ಚಿಂತನೆಗಳು ‘ಹಮ್ಮಿಕೊಂಡಿದ್ದ ೬ ನೇ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀ ಸಿದ್ದೇಶ್ವರ ಅಪ್ಪಾಜಿಯವರಿಗೆ ಹಿರಿಯರೆಂದರೆ, ಜನಸಾಮನ್ಯರೆಂದರೆ, ರೈತರೆಂದರೆ ಅಪಾರ ಪ್ರೀತಿ ದೊಡ್ಡ-ದೊಡ್ಡ ವ್ಯಕ್ತಿಗಳಿಗಿಂತ ಅತ್ಯಂತ ಸರಳ ಸಾಮಾನ್ಯ ಜನರು ಬಂದರೆ ಸಾಕು ಅಪ್ಪನವರು ಮನಸ್ಸು ಅರಳುತ್ತಿತ್ತು. ಅಂತಹ ವ್ಯಕ್ತಿತ್ವ ಅಪ್ಪನವರದ್ದು ಎಂದರು.ಗೋಷ್ಠಿಯನ್ನು ಉದ್ಘಾಟಿಸಿದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ಮಾತನಾಡಿ, ನಾನು ಪ್ರಥಮ ಬಾರಿಗೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಪಕ್ಕದಲ್ಲಿ ಕುಳಿತಾಗ ನನಗೆ ಅನುಭವವಾಗಿದ್ದು ನಾನು ಸಾಕ್ಷಾತ ರಾಮಕೃಷ್ಣ ಪರಮ ಹಂಸರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿ ಕೌಶಲ್ಯಾಭಿವೃಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಹಾಗೂ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸೊಮಲಿಂಗ ಗೆಣ್ಣೂರು ೨೦೨೪-೨೫ನೇ ಸಾಲಿನ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೇ ಹಾಗೂ ಕರ ಪತ್ರ ಅನಾವರಣ ಗೋಳಿಸಿ ಚಾಲನೆ ನೀಡಿದರು.ಈ ಸಂಧರ್ಬದಲ್ಲಿ ನೋಡಲ್ ಅಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಜಿಲ್ಲಾ ಕೌಶಲ್ಯಭಿವೃದ್ದಿ ಅಧಿಕಾರಿಗಳಾದ ಸಿ.ಬಿ. ಕುಂಬಾರ ಮತ್ತು ಉದ್ಯೋಗಾಧಿಕಾರಿ ಮಹೇಶ ಜೆ.ಮಾಳವಾಡೆಕರ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಹಾಗೂ ಜಿಲ್ಲೆಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ: ೦೬-೦೧-೨೦೨೪ ರವರೆಗೆ ಅವಧಿಗೆ ವಿಸ್ತರಿಸಲಾಗಿದೆ. National council for Teacher Educationಇಲ್ಲಿಯ ಮಾನ್ಯತೆ ಪಡೆದಿರುವ ಬಿ. ಎಡ್ ಸರ್ಕಾರಿ ಅರೆ ಸರ್ಕಾರಿ /ಖಾಸಗಿ ಕಾಲೇಜುಗಳಲಿ ೨೦೨೪-೨೫ನೇ ಸಾಲಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರೀಸಿಯನ್, ಜೈನ್, ಸಿಖ್, ಬೌದ್ದ, ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ರೂ ೨೫.೦೦೦/ ಗಳ ವಿಶೇಷ ಪ್ರೋತ್ಸಾಹಧನ ಪ್ರತಿ ವರ್ಷ (ಗರಿಷ್ಟ ಎರಡು ವರ್ಷಕ್ಕೆ ಮಾತ್ರ) ನೀಡಲಾಗುವುದು. ವಿದ್ಯಾರ್ಥಿಗಳು ಸೇವಾಸಿಂದುವಿನ ಪೋರ್ಟಲ್ ನಲ್ಲಿ ( https://sevasindhu.karnataka.gov.in)ವೆಬ್ ಸೈಟ್ ಮೂಲಕ ಅಗತ್ಯ ದಾಖಲಾತಿ ಯೋಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪ ದಂಖ್ಯಾತ ಕಛೇರಿ (೦೮೩೫೨೨೯೫೫೨೩) ಹಾಗೂ ತಾಲೂಕು ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳಾದ ವಿಜಯಪುರ (೮೧೨೩೭೧೦೭೬೬) ಬಸವನ ಬಾಗೇವಾಡಿಯ (೯೯೭೨೩೪೦೭೨೧) ಮುದ್ದೇಬಿಹಾಳ (೮೭೨೨೪೪೫೫೫೨)…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ಯ ಇಲಾಖೆ ಜಿಲ್ಲಾ ಪಂಚಾಯತಿ ವಿಜಯಪುರ 2024-25 ನೇ ಸಾಲಿನ ಕರ ವಸೂಲಾತಿ ಆಂದೋಲನದಲ್ಲಿ ತಾಲ್ಲೂಕಿನ ತೊರವಿ ಗ್ರಾಮ ಪಂಚಾಯತಿ ಜಿಲ್ಲೆಯಲ್ಲೆ ಅತಿ ಹೆಚ್ಚು ಕರ ವಸೂಲಾತಿ ಮಾಡಿ ಪ್ರಥಮ ಸ್ಥಾನ ಪಡೆದಿರುತ್ತದೆ.ಆರ್.ಡಿ.ಪಿ.ಆರ್ ಇಲಾಖೆಯ ಎಲ್ಲ ವೃಂದ ಸಂಘಗಳ ಹಾಗೂ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಇತ್ತಿಚೆಗೆ ನಡೆದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾಂಭದಲ್ಲಿ ಈ ಪ್ರಶಸ್ತಿ ಪತ್ರವನ್ನು ಪಿಡಿಓ ರಾಜಶ್ರೀ ತುಂಗಳ, ಕರ ವಸೂಲಿಕಾರ ಸಚಿನ ಕಾಂಬಳೆ, ಕಾರ್ಯದರ್ಶಿ ನಿಂಗಮ್ಮ ಕಾಖಂಡಕಿ ಅವರಿಗೆ ಹಿರಿಯ ಅಧಿಕಾರಿಗಳಿಂದ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.ಮಾದರಿ ಗ್ರಾಮ ಪಂಚಾಯತಿಯಾಗಿ ಅಭಿವೃದ್ಧಿ ಹೊಂದಿದ ಈ ಗ್ರಾಮದಲ್ಲಿ ಕರ ವಸೂಲಾತಿಯಿಂದ ಮಾದರಿ ಗ್ರಂಥಾಲಯ, ಗ್ರಾಮ ಸ್ವಚ್ಚತೆ, ಕಂಪೌಂಡ ಗೋಡೆ, ಪೈಪಲೈನ್ ಬೀದಿ ದೀಪ, ಸಿಬ್ಬಂದಿಗಳ ವೇತನ ಎಲ್ಲವೂ ನಿರ್ವಹಣೆ ಮಾಡುತ್ತಾ ಅತ್ಯುತ್ತಮ ಗ್ರಾಮ ಪಂಚಾಯತಿಯಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಅಭಿವೃದ್ಧಿಗೆ ಶ್ರಮಿಸಿದ ಅಧ್ಯಕ್ಷ,…

Read More