Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಂವಿಧಾನದ ಮೂಲ ಆಶಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಸಮಾವೇಶ ಕೈಗೊಳ್ಳಲಾಗಿದೆ ಎಂದು ಡಿಎಸ್‌ಎಫ್ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಹೇಳಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ ಗುರುವಾರ ಸಂವಿಧಾನ ಜಾಗೃತಿ ಸಮಾವೇಶದ ಅಂಗವಾಗಿ ಜರುಗಿದ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ರಾಜ್ಯ ಹಾಗೂ ದೇಶದಲ್ಲಿ ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಗಗನ ಕುಸುಮವಾಗಿ ಕಾಣುತ್ತಿದೆ. ಆಳುವ ಸರ್ಕಾರಗಳು ಬಂಡವಾಳಶಾಹಿಗಳ ಹಿಡಿತಕ್ಕೆ ಸಿಲುಕಿ ವರ್ಗ ಸಂಘರ್ಷ ಹೆಚ್ಚಾಗಲು ಪ್ರೇರೆಪಿಸುತ್ತಿವೆ ಆದ್ದರಿಂದ ಸಂವಿಧಾನ ಜಾಗೃತಿ ಇಂದು ಅಗತ್ಯವಾಗಿದ್ದು, ಇದೇ ದಿ:೨೨ ಭಾನುವಾರ ದಂದು ಪಟ್ಟಣದ ಟಿಪ್ಪುಸುಲ್ತಾನ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಸಂವಿಧಾನ ರೂಪಕದ ಮೆರವಣಿಗೆ ನಂತರ ಹತ್ತಿರದ ಬಿ.ಎಲ್.ಡಿ.ಇ ಪ್ರೌಢಶಾಲಾ ಆವರಣದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಸಮಾವೇಶದಲ್ಲಿ ಸಚಿವರುಗಳಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸಹಿತ ಶಾಸಕರು ಹಾಗೂ ಅಖಂಡ ಸಿಂದಗಿ ತಾಲ್ಲೂಕಿನ ಎಲ್ಲ ಸಮುದಾಯಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ನೂತನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಅವರ ಯಶಸ್ಸಿಗೆ ಸಹಾಯ ಮಾಡಬೇಕು ಎಂದು ಇನ್ನರ್ ವೀಲ್ ಕ್ಲಪ್ ಅಧ್ಯಕ್ಷೆ ಮತ್ತು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಉಜ್ವಲಾ ಎ. ಸರನಾಡಗೌಡ ಹೇಳಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಗುರುವಾರ ಸಬಲಾ – ಮಹಿಳಾ ಸಬಲೀಕರಣ ಘಟಕ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾತನಾಡಿ, ಬಿ.ಎಲ್.ಡಿ.ಇ ಸಂಸ್ಥೆಯ ಮಹಿಳಾ ಸಿಬ್ಬಂದಿಯ ಸಮರ್ಪಣೆ, ಪರಿಶ್ರಮ ಮತ್ತು ನಿಷ್ಠೆ ಶ್ಲಾಘನೀಯವಾಗಿದೆ. ಅವರು ವೃತ್ತಿಪರ ಜವಾಬ್ದಾರಿಗಳ ಜೊತೆಗೆ ವೈಯಕ್ತಿಕ ಬದುಕಿನ ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿರ್ವಹಿಸುತ್ತ ಸಂಸ್ಥೆಯ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಅನುಸಂಧಾನ-2026 ರಾಷ್ಟ್ರೀಯ ಸಮ್ಮೇಳನದ ಮಾಹಿತಿ ಪರ್ತಿಕೆಯ ಬಿಡುಗಡೆ ಮಾಡಲಾಯಿತು.ಸಬಲಾ ಮಹಿಳಾ ಸಬಲೀಕರಣ ಘಟಕದ ಅಧ್ಯಕ್ಷೆ ಡಾ. ವಿಜಯಲಕ್ಷ್ಮಿ ಬೆನಕಟ್ಟಿ ಸ್ವಾಗತಿಸಿದರು. ಶಲ್ಯ ತಂತ್ರ ವಿಭಾಗದ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಈ ಹಿಂದೆ ಅದೆಷ್ಟೋ ಹುಡುಗಿಯರನ್ನು ಕಂಡ ಕಣ್ಣಿಗೆ ಹೀಗೆಂದೂ ಆಗಿರಲಿಲ್ಲ. ಮೊದಲ ಸಲದ ನೋಟವೊಂದು ಅದ್ಭುತ ಕ್ಷಣದಂತಿತ್ತು. ಹಲವು ನಿಮಿಷ ಕಣ್ರೆಪ್ಪೆಗಳನ್ನು ಒಂದಕ್ಕೊಂದು ಅಂಟಿಸದಂತೆ ಮಾಡಿತ್ತು. ಆ ಕ್ಷಣ ಇಡೀ ಜಗತ್ತು ಸ್ತಬ್ಧವಾದಂತೆ ಭಾಸವಾಯಿತು. ಕಣ್ಣುಗಳ ಮಿಲನದಲ್ಲಿ ಹೊಸದೊಂದು ಕನಸಿನ ಲೋಕ ತೆರೆದುಕೊಂಡಂತೆ ಅನಿಸಿತು. ಕಣ್ಣಿನ ಕವಿತೆಯಲ್ಲಿ ಪದಪುಂಜಗಳಿರಲಿಲ್ಲ. ಆದರೂ ಮನವು ಎಲ್ಲವನ್ನೂ ಓದಿತ್ತು. ಮಾತೇ ಹೊರಡದಂತಾಗಿತ್ತು. ಆ ಮೌನದಲ್ಲಿ ಹೊಸದೊಂದು ಲೋಕವೇ ಸೃಷ್ಟಿಯಾಗಿತ್ತು. ನಿನ್ನ ಮುಗಳ್ನಗೆ ಮನೆಯ ಮೂಲೆಯಲ್ಲಿ ಹಚ್ಚಿಟ್ಟ ಪುಟ್ಟ ದೀಪದಂತೆ ಮಿನುಗುತ್ತಿತ್ತು. ಪ್ರೇಮಕವಿ ಬರೆದ ಪ್ರೇಮ ಕಾವ್ಯಕ್ಕೆ ನೀನೇ ಸಾಕ್ಷಾತ್ ರೂಪವಾಗಿ ಬಂದಂತೆನಿಸಿತ್ತು. ಬೀಸುವ ತಂಗಾಳಿಯಲ್ಲಿ ಹಾಗೆ ನೀನು ಕಾಲೇಜಿನ ಪಾರ್ಕಿನಲ್ಲಿ ಹಂಸದಂತೆ ನಡೆದು ಹೋಗುತ್ತಿದ್ದರೆ ನನಗರಿವಿಲ್ಲದೆ ನನ್ನ ಕಾಲುಗಳು ನಿನ್ನ ಹಿಂಬಾಲಿಸಿದವು. ಪರಿಚಯವಿಲ್ಲದ ನಾನು ನಿನ್ನ ಹಿಂಬಾಲಿಸುವುದು ಕಂಡು ಹೆದರಿದ ಹರಿಣಿಸದಂತೆ ಓಡತೋಡಗಿದೆ.ನಿನ್ನ ಹೆಜ್ಜೆಗೆ ಹೆಜ್ಜೆ ಬೆರೆಸುವ ತವಕದಲ್ಲಿ ಜಗವನ್ನೇ ಮರೆತೆ. ಅಷ್ಟರಲ್ಲಿ ನಿನ್ನ ಗೆಳತಿಯರ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಹೊರವಲಯದಲ್ಲಿರುವ ಆಲಗೂರ ಎಂಟರ್ಪ್ರೈಸಸ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 45 ರಿಂದ 50 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅಂಗಡಿ ಮಾಲಿಕ ಮೆಹ್ಮದ್ ಸಾದ್ ಸಾಧಿಕ್ ಆಲಗೂರ ಅವರು ಮಾಹಿತಿ ನೀಡಿದ್ದಾರೆ.ಅಗ್ನಿ ಅವಘಡ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಮುಧೋಳ ಹಾಗೂ ಜಮಖಂಡಿಯ ಅಗ್ನಿ ಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೇ ಕಾರ್ಖಾನೆಯಲ್ಲಿ ತಯಾರಿಸುತ್ತಿದ್ದ ಫರ್ನಿಚರ್, ಸೋಫಾ ಸೇರಿದಂತೆ ಇತರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮರೆಗುದ್ದಿ- ಗಲಗಲಿ ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮಾಜಿ ಶಾಸಕ ಆನಂದ ನ್ಯಾಮಗೌಡ ಕೆಎನ್‌ಎನ್ ಎಲ್‌ನ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.ಏತ ನೀರಾವರಿ ಯೋಜನೆಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ನೀಡಿದ ಅವರು, ಆಲಮಟ್ಟಿ ಜಲಾಶಯದ ಹಿನ್ನೀರನ್ನು ಬಳಸಿಕೊಳ್ಳಲು ಯೋಜನೆ ಸಹಕಾರಿಯಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು. ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆಯವರು ವಿಶೇಷ ಮುತುವರ್ಜಿ ವಹಿಸಿ ನೀರಾವರಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಕಾಮಗಾರಿ ಪ್ರಾರಂಭಿಸಲು ಅಗತ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದು ಸಂತಸ ತಂದಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದ್ದಾರೆ.216.50 ಕೋಟಿ ವೆಚ್ಚದ ಯೋಜನೆಯಿಂದ ಆಲಮಟ್ಟಿ ಜಲಾಶಯದ ಹಿನ್ನೀರನ್ನು ಬಳಸಿಕೊಂಡು ಜಮಖಂಡಿ ಕ್ಷೇತ್ರದ ಚಿಕ್ಕಪಡಸಲಗಿ ಸೇರಿದಂತೆ ಅನೇಕ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ₹11.50 ಕೋಟಿ ಅನುದಾನ ಮೀಸಲಿರಿಸಲಾಗಿದ್ದು, ಇದರಿಂದ ಬೇಸಿಗೆ ಸಮಯದಲ್ಲಿ ಹಿನ್ನೀರನ್ನು ಬಳಸಿ ಕೊಳ್ಳಬಹುದು ಎಂದು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ ಇಟ್ಟಿಜಮಖಂಡಿ: ಇಸ್ರೇಲ್​-ಅಮೆರಿಕ ಮತ್ತು ಇರಾನ್​ ನಡುವಿನ ಭೀಕರ ಯುದ್ಧದಿಂದ ಸದ್ಯ ಜಗತ್ತಿನ ಹಲವಾರು ದೇಶಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಹಾರ್ಮುಜ್ ಜಲಸಂಧಿಯನ್ನು ಬಂದ್​ ಮಾಡುವ ಮೂಲಕ ತೈಲ ಆಮದುಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ ಇರಾನ್​. ಶೇ.60ರಷ್ಟು ತೈಲದ ಮೇಲೆ ಅವಲಂಬಿತವಾಗಿರುವ ಭಾರತ, ಸದ್ಯ ದೇಶಾದ್ಯಂತ ಗ್ಯಾಸ್​ ಬಿಕ್ಕಟ್ಟನ್ನು ಎದುರಿಸುತ್ತಿದೆ.ಯುದ್ಧ ಸಂಘರ್ಷದಿಂದ ಗ್ಯಾಸ್​ ಕೊರತೆಯನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ. ಒಂದೆಡೆ, ಕೇಂದ್ರ ಸರ್ಕಾರವು ಎಲ್​ಪಿಜಿ ಹಾಗೂ ವಾಣಿಜ್ಯ ಗ್ಯಾಸ್​ ಸಿಲಿಂಡರ್‌ಗಳ ಬೆಲೆಯನ್ನು ದಿಢೀರ್ ಏರಿಸಿದೆ. ಮತ್ತೊಂದೆಡೆ, ಹೋಟೆಲ್​ ಉದ್ಯಮವನ್ನೇ ನಂಬಿರುವ ಜನರು, ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ರಾಜ್ಯದ ನಗರಗಳಲ್ಲಿನ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬೇರೆ ದಾರಿಯಿಲ್ಲದೆ ಕ್ಲೋಸ್​ ಆಗುತ್ತಿವೆ.ಇಂತಹ ಪರಿಸ್ಥಿತಿಯಲ್ಲಿ, ಚೆನ್ನೈನ ಒಂದು ಹೋಟೆಲ್​ನಲ್ಲಿ ಇಡ್ಲಿ, ವಡೆ ಜೊತೆಗೆ ಗ್ಯಾಸ್​ಗೂ ಸೇರಿಸಿ ಹಾಕಿದ ಬಿಲ್​ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಬಿಲ್ ಅನ್ನು ನೋಡಿದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ದಿ.14 ಶನಿವಾರ ಮತ್ತು ದಿ.15 ರವಿವಾರ ಎರಡು ದಿನಗಳವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ದಿ.14 ಶನಿವಾರ ಬೆ.11ಗಂ. ಬಾಗಲಕೋಟೆ ನವನಗರ, ಸೆಕ್ಟರ್-1ರಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ಮ.3ಗಂ. ಹೊಳೆಜೈನಾಪುರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂ.4.30ಗಂ. ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎ.ಪಿ.ಎಂ.ಸಿ ಗೋದಾಮು ಕಟ್ಟಡ, ಅಂಗನವಾಡಿ ಕಟ್ಟಡ ಉದ್ಘಾಟನೆ ಹಾಗೂ ಚಂದ್ರಗೀರಿ ಮತ್ತು ಘಟವಾಳೇಶ್ವರ ಮಠದ ಕಟ್ಟಡ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸಂ.5.30ಗಂ. ತಿಕೋಟಾದ ಬಸವೇಶ್ವರ ವೃತ್ತದಲ್ಲಿ ತುಬಚಿ-ಬಬಲೇಶ್ವರ ಯೋಜನೆಯಡಿ ಬಾಬಾನಗರದಲ್ಲಿ ಆಣೆಕಟ್ಟು ನಿರ್ಮಾಣಕ್ಕೆ ಮಂಜೂರಾದ ಹಿನ್ನೆಲೆಯಲ್ಲಿ ತಿಕೋಟಾದ ಸಮಸ್ತ ರೈತರು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂ.6.30ಗಂ. ನಗರದ ಅಥಣಿ ರಸ್ತೆಯ ಅಲ್ ಅಮೀನ್ ಎರಡನೇ ಎದುರಿನ ಸುರಭಿ-ಸಿದ್ಧೇಶ್ವರ…

Read More

ಸಾಯಿ ಹೋಮ್ ನಿಡ್ಸ್ ಮುಖ್ಯಸ್ಥ ಹಾಗೂ ಬಿಜೆಪಿ ಯುವ ಮುಖಂಡ ಉಮೇಶ ಕಾರಜೋಳ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ, ವಾಣಿಜ್ಯ ಉದ್ದೇಶದ ಸಿಲಿಂಡರ್ ಕೊರತೆಯೂ ಅಷ್ಟೊಂದು ಪ್ರಮಾಣದಲ್ಲಿ ಇಲ್ಲ, ಜನತೆ ಭಯ ಪಡುವ ಅಗತ್ಯವಿಲ್ಲ, ನೈಸರ್ಗಿಕ ಇಂಧನಗಳನ್ನು ಮಿತವಾಗಿ ಬಳಸುವುದು ಉತ್ತಮ ಎಂದು ಅಡುಗೆ ಅನಿಲ ಪೂರೈಕೆಯ ಉದ್ಯಮದಲ್ಲಿ ಅನೇಕ ವರ್ಷಗಳಿಂದ ತೊಡಗಿರುವ ಸಾಯಿ ಹೋಮ್ ನಿಡ್ಸ್ ಮುಖ್ಯಸ್ಥ ಹಾಗೂ ಬಿಜೆಪಿ ಯುವ ಮುಖಂಡ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಮೇರಿಕಾ ಹಾಗೂ ಇರಾನ್ ನಡುವೆ ಯುದ್ದ ನಡೆದಿದೆ, ಈ ಯುದ್ಧದಂತಹ ಸಂದರ್ಭದಲ್ಲಿ ಪೆಟ್ರೋಲ್, ಡಿಸೈಲ್, ಅಡುಗೆ ಅನೀಲದಂತಹ ಇಂಧನಗಳ ಪೂರೈಕೆಯಲ್ಲಿ ವ್ಯತ್ಯಯ ಸಹಜ, ಯುದ್ದ ನಾಲ್ಕೈದು ದಿನದಲ್ಲಿ ಸಮಾಪ್ತಿಯಾಗಬಹದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯುದ್ದ ಮುಂದುವರೆಯಿತು, ಈ ಹಿಂದೆ ಕೋವಿಡ್ ವೇಳೆ ಆಮ್ಲಜನಕ ಕೊರತೆ ಉಂಟಾದಾಗ ವೈದ್ಯಕೀಯ ಉದ್ದೇಶಕ್ಕಾಗಿ ಮೊದಲ ಆದ್ಯತೆ ನೀಡಲಾಗಿತ್ತು, ಕೈಗಾರಿಕಾ ಬಳಕೆಗೆ…

Read More

ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಎಂ.ನಾಗರಾಜು ಮತ್ತು ಇವಾನ್ ಡಿ’ಸೋಜಾ ಪ್ರಶ್ನೆಗಳಿಗೆ ಆಹಾರ ಸಚಿವರ ಉತ್ತರ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಪರಿಸ್ಥಿತಿ ‘ಅನಿವಾರ್ಯ’ವಾಗಿದ್ದು ಸ್ಟಾಕ್ ಲಭ್ಯವಿಲ್ಲದ ಕಾರಣ ಕನಿಷ್ಠ ಒಂದು ವಾರ ಹೋಟೆಲ್‌ಗಳಿಗೆ ವಾಣಿಜ್ಯ ಸಿಲಿಂಡರ್‌ಗಳನ್ನು ಪೂರೈಸುವುದು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.ಇದೇ ವೇಳೆ ಮುನಿಯಪ್ಪ, ಹೋಟೆಲ್ ಮಾಲೀಕರಿಗೆ ಅಗತ್ಯ ಆಹಾರಗಳನ್ನು ತಯಾರಿಸಲು ವಿದ್ಯುತ್ ಸ್ಟವ್ ಬಳಸುವಂತೆ ಸಲಹೆ ನೀಡಿದರು.ವಾಣಿಜ್ಯ ಸಿಲಿಂಡರ್‌ಗಳ ಕೊರತೆ 10 ದಿನಗಳಲ್ಲಿ ಕಡಿಮೆಯಾಗುತ್ತದೆ ಎಂದು ಭಾವಿಸುತ್ತೇನೆ ಎಂದರು.ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಇಂದು ‘ಶೂನ್ಯ ಸಮಯದಲ್ಲಿ’ದಲ್ಲಿ ಸಿಲಿಂಡರ್‌ಗಳ ಪೂರೈಕೆಯಲ್ಲಿನ ಅಡಚಣೆಯ ಕುರಿತು ಸದಸ್ಯರಾದ ಎಂ. ನಾಗರಾಜು ಮತ್ತು ಇವಾನ್ ಡಿ’ಸೋಜಾ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಗ್ಯಾಸ್ ಕೊರತೆಯಿಂದಾಗಿ ಹೋಟೆಲ್‌ಗಳು ಪರಿಣಾಮ ಬೀರಿವೆ. ಕೆಲವು ಹೋಟೆಲ್‌ಗಳು ಸ್ಥಗಿತಗೊಂಡಿವೆ. ಇನ್ನು ಕೆಲವು ಹೋಟೆಲ್‌ಗಳು ಮೆನು ಕಡಿತಗೊಳಿಸಿವೆ. ಪಿಜಿ ವಸತಿಗಳಲ್ಲಿ ಆಹಾರ ತಯಾರಿಕೆ, ದೇವಾಲಯಗಳಲ್ಲಿ ಪ್ರಸಾದ ವಿತರಣೆ ಮತ್ತು ಆಟೋಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ನಾಗರಾಜು…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿ ಕೇಂದ್ರಕ್ಕೆ ಇಂದು ಶುಕ್ರವಾರ ಕಲಕೇರಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ಸಹಕಾರಿ ಸಂಘಗಳ ಉಪನಿಬಂಧಕರಾದ ಕನಕರಾಜ ವಡ್ಡರ ಮಾತನಾಡಿ ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ಅಭಿವೃದ್ದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಿಸುತ್ತಿವೆ ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು, ಜೊತೆಗೆ ರೈತರು ತಮ್ಮ ಸರತಿಯಂತೆ ಬಂದು ಗುಣಮಟ್ಟದ ತೊಗರಿಯನ್ನು ಕೇಂದ್ರಕ್ಕೆ ನೀಡಬೇಕು ಎಂದು ಹೇಳಿದರು.ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಹಾಗೂ ಗದ್ದುಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು ಸಾನಿಧ್ಯವಹಿಸಿದ್ದರು. ಪಿಕೆಪಿಎಸ್ ಅಧ್ಯಕ್ಷ ರುದ್ರಪ್ಪ ಗುಮಶೆಟ್ಟಿ, ಸಂಗಾರೆಡ್ಡಿ ದೇಸಾಯಿ, ರೈತ ಹೋರಾಟಗಾರ ಹಣಮಂತ ವಡ್ಡರ್ ಮಾತನಾಡಿದರು.ಈ ವೇಳೆ ಪಿಕೆಪಿಎಸ್ ಉಪಾಧ್ಯಕ್ಷ ಪ್ರೇಮು ಪವಾರ, ವಿದ್ಯಾನಂದ ಹಿರೇಮಠ, ಗುರು ಕಡಕೋಳ, ವೀರಪ್ಪ ಝಳಕಿ, ಬಸಲಿಂಗಯ್ಯ ಆಲಾಳಮಠ, ಮುತ್ತು ಹೆಗ್ಗಣದೊಡ್ಡಿ, ಈರಣ್ಣ ಗುಮಶೆಟ್ಟಿ, ಬಸು ಪೂಜಾರಿ, ನಿಂಗಪ್ಪ ದೊರೆಗೋಳ,…

Read More