Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಮನೆಯಲ್ಲಿದ್ದ ಸಿಲಿಂಡರ್ ಲಿಕೇಜ್‌ನಿಂದ ಅನಾಹುತ ಸಂಭವಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ನಡೆದಿದೆ.ಗೋವಿಂದ ಗೊಲ್ಲರ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಮನೆಯಲ್ಲಿದ್ದ 1 ಲಕ್ಷ ನಗದು ‌ಹಾಗೂ 10 ಗ್ರಾಮ ಚಿನ್ನ ಜೊತೆಗೆ ಬೆಳೆ‌- ಕಾಳು ಆಹಾರ ಪದಾರ್ಥಗಳು ಬೆಂಕಿಗಾಹುತಿ ಆಗಿದೆ. ಇನ್ನೂ ಘಟನೆ ಬಗ್ಗೆ ಮಾಹಿತಿ ತಿಳಿಸಿದಾಗ ಸ್ಥಳಕ್ಕೆ ಆಗಿಮಸಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸುವ ಕಾರ್ಯಾಚರಣೆ ಮಾಡಿದರು.ಇಂಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಘಟನೆಗೆ ಕಾಂಗ್ರೆಸ್ ನ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದ ಮುನಿರತ್ನ | ಡಿಸಿಎಂ ಡಿ.ಕೆ.ಶಿವಕುಮಾರ್ & ಡಿ.ಕೆ.ಸುರೇಶ್ ರಿಂದ ಕೊಲೆ ಯತ್ನದ ಗಂಭೀರ ಆರೋಪ ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಯೋತ್ಪಾದನೆ, ನಕ್ಸಲ್ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್‌ಎಸ್‌ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ, ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂಬ ಅರಿವು ಮೂಡಿಸುತ್ತವೆ. ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಚ್ಛತೆ, ಸಹಬಾಳ್ವೆ, ಸಮಾನತೆ ಮತ್ತು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಬಾಬಾ…

Read More

ಬಸವ ಜನ್ಮಭೂಮಿ ಪ್ರತಿಷ್ಠಾನದ ೧೪ನೇ ವಾರ್ಷಿಕೋತ್ಸವ | ರಾಜ್ಯಮಟ್ಟದ ವಚನವೈಭವ |ಬಸವವಿಭೂಷಣ ಮತ್ತು ಬಸವಭೂಷಣ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಸಾಧಾರಣವಾದುದನ್ನು ಸಾಧಿಸಿದ ವ್ಯಕ್ತಿಯ ಅರ್ಹತೆ ಮತ್ತು ಶ್ರೇಷ್ಠತೆಗಾಗಿ ಪ್ರಶಸ್ತಿ, ಗೌರವಾದರಗಳು ಅರಸಿ ಬಂದಾಗ ವ್ಯಕ್ತಿಯ ವಿಕಾಸ ಸಹಜ. ಅಂತಹ ಸಾಧಕರು ತಮ್ಮ ಮನಸ್ಸನ್ನು ನಿಭಾಯಿಸಿ ಗೆಲುವನ್ನು ಸಾಧಿಸಿದಾಗ ಆಗುವ ಆನಂದಕ್ಕೆ ಪಾರವೆ ಇರದು ಎಂದು ಬೆಂಗಳೂರಿನ ಸಾಹಿತಿ ವಿಜಯಲಕ್ಷ್ಮಿ ಸತ್ಯಮೂರ್ತಿ ಹೇಳಿದರು.ಇಲ್ಲಿನ ಬಸವ ಜನ್ಮಭೂಮಿ ಪ್ರತಿಷ್ಠಾನದ ವತಿಯಿಂದ ನಗರದ ಚೇತನಾ ಕಾಲೇಜಿನ ಸಭಾಂಗಣದಲ್ಲಿ ಡಿ. ೨೫ ರಂದು ಹಮ್ಮಿಕೊಂಡಿದ್ದ ಪ್ರತಿಷ್ಠಾನದ ೧೪ನೇ ವಾರ್ಷಿಕೋತ್ಸವ, ರಾಜ್ಯಮಟ್ಟದ ವಚನವೈಭವ ಹಾಗೂ ರಾಷ್ಟ್ರಮಟ್ಟದ ಬಸವವಿಭೂಷಣ ಮತ್ತು ರಾಜ್ಯಮಟ್ಟದ ಬಸವಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ನಾಡಿನೊಳು ಹೆಸರಾದ ವಿಜಯಪುರ ಜಿಲ್ಲೆ ವಚನ ಸಾಹಿತ್ಯದ ತವರು, ಬಸವೇಶ್ವರರ ಜನ್ಮಸ್ಥಳವಾದ ಬಸವನಬಾಗೇವಾಡಿ ಸಮಸ್ತ ಶರಣ ಸಂಕುಲದ ಅಸ್ಮಿತೆ. ಇಂತಹ ಪಾವನಭೂಮಿಗೆ ಬಂದಿರುವುದು ನನ್ನ ಪುಣ್ಯ ಎಂದರು.ಮುಖ್ಯ ಅತಿಥಿ ಚಿತ್ರದುರ್ಗದ ಸಾಹಿತಿ ಶೈಲಾ ಜಯಕುಮಾರ ಮಾತನಾಡಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ವಿವಿದ್ದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಪ್ರಗತಿಪರ ರೈತರಾದ ದುಂಡಪ್ಪ. ನಿರಾಳೆ ಅವರು ಸರ್ವ ರೈತರ ಒಮ್ಮತದಿಂದ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಶ್ರೀ ಸಿದ್ಧೇಶ್ವರ ಸ್ವಾಮೀಜಿ ಗುರುನಮನ ಮಹೋತ್ಸವದ ಧರ್ಮ ಧ್ವಜಾರೋಹಣ ಸಂದರ್ಭ ಯೋಗ ಗುರು ಸುಬ್ರಮಣ್ಯ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಸಿದ್ಧೇಶ್ವರ ಅಪ್ಪಾವರು ಮಹಾತ್ಮರು, ಮಹಾತ್ಮರ ಶಕ್ತಿ, ಕುಗ್ಗುವಂತಹದಲ್ಲ, ನಾಶವಾಗುವಂತಹದ್ದಲ್ಲ ಅದು ಯಾವಾಗಲೂ ಬೆಳಗುವಂತಹದ್ದು ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರುಗಳಾದ ಶ್ರೀ ಬಸವಲಿಂಗ ಸ್ವಾಮೀಜಿಗಳು ಹೇಳಿದರು.ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಧರ್ಮ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶ್ರೀ ಸಿದ್ಧೇಶ್ವರ ಅಪ್ಪಾವರ ನೀಡಿರುವ ಜ್ಞಾನ ಕೇವಲ ಜಿಲ್ಲೆ, ರಾಜ್ಯದಲ್ಲಿ ಬೆಳಗುವುದಿಲ್ಲ ಅದು ಜಗತ್ತಿನ ಬೇರೆ ದೇಶಗಳಲ್ಲಿಯೂ ಬೆಳಗುತ್ತದೆ. ಅಪ್ಪಾವರ ಜ್ಞಾನವಾಣಿಯನ್ನು ಜಗತ್ತಿನ ಬೇರೆ ಬೇರೆ ದೇಶಗಳಲ್ಲಿರುವ ಭಕ್ತರು ಅವರ ಯೂಟ್ಯೂಬ್ ಮೂಲಕ ಭಕ್ತಿಯಿಂದ ಆಲಿಸುತ್ತಾರೆ. ಈ ವರ್ಷ ಎಲ್ಲ ಭಕ್ತರು, ಪೂಜ್ಯರು, ಸಾಹಿತಿಗಳು ಈ ಗುರುನಮನ ಮಹೋತ್ಸವ ಆಚರಣೆಯ ಮೂಲಕ ನಮ್ಮ ಭಕ್ತಿ ಶ್ರದ್ಧೆಯನ್ನು ಅರ್ಪಿಸೋಣ ಎಂದರು.ಸಿದ್ದೇಶ್ವರ ಅಪ್ಪಾವರು ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಮುಂದೆ ಪ್ರವಚನಗಳು ನಿಲ್ಲಬಹುದು, ಆದರೆ ಆರೋಗ್ಯದ ಕೀಲಿಕೈಯಾಗಿರುವ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಜಿಗಜೇವಣಿ ಗ್ರಾಮದ ಗದ್ಯಾಳ ವಸ್ತಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಲ್ಲಪ್ಪ ಶಿವಪ್ಪ ವಾಘಮೋರೆ ಇವರನ್ನು ‘ಸರಸ್ವತಿ ಸಾಧಕಸಿರಿ ರಾಷ್ಟ್ರ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.ಪ್ರಶಸ್ತಿ ಪುರಸ್ಕೃತ ಮುಖ್ಯಶಿಕ್ಷಕ ಮಲ್ಲಪ್ಪ ಅವರು ಶಿಕ್ಷಕರಾಗಿ ಕಳೆದ 24 ವರ್ಷಗಳಿಂದ ಅಕ್ಷರದ ಜ್ಞಾನಾರ್ಜನೆಯನ್ನು ಮಕ್ಕಳಿಗೆ ನೀಡುತ್ತಾ ಬಂದಿರುವುದನ್ನು ಗುರುತಿಸಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಾಲಿಗ್ರಾಮ ದಾವಣಗೆರೆ ಇವರು ದಾವಣಗೆರೆ ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ 2025 ರ ಎಪ್ರಿಲ್ 27(ಭಾನುವಾರ)ದಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ನಾಗೇಶ್ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಶುಚಿತ್ವ ಮತ್ತು ಆರೋಗ್ಯ ಪರಸ್ಪರ ಸಂಬಂಧ ಹೊಂದಿರುವದರಿಂದ ನೀವು ಶುದ್ಧವಾಗಿದ್ದರೆ ನೀವು ಅನೇಕ ಸಾಂಕ್ರಾಮಿಕ ರೋಗಗಳಿಂದ ಹೋರಾಡಬಹುದು ಮತ್ತು ತಡೆಗಟ್ಟಬಹುದು ಎಂದು ಲಾಡಲಿ ಫೌಂಡೇಶನ್ ಟ್ರಸ್ಟಿನ ರಾಯಭಾರಿ ಶಿಫಾ ಜಮಾದಾರ ಹೇಳಿದರು.ಬುಧವಾರ ತಿಕೋಟಾ ಗ್ರಾಮದ ಕೆ.ಬಿ.ಎಂ.ಪಿ.ಎಸ್. ಬಾಲಕರ ಸರಕಾರಿ ಶಾಲೆಯಲ್ಲಿ ಲಾಡಲಿ ಫೌಂಡೇಶನ ಟ್ರಸ್ಟ ವತಿಯಿಂದ ತಿಕೋಟಾ, ಬಬಲೇಶ್ವರ, ತಾಜಪೂರ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಾಗೂ ಸದಸ್ಯರಿಗೆ ಸ್ವಚ್ಚತಾ ತರಬೇತಿ ಹಾಗೂ ಸ್ವಚ್ಚತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಶುಚಿತ್ವವು ನಿಮ್ಮ ದೈಹಿಕ, ಮಾನಸಿಕ ಮತ್ತು ಅಧ್ಯಾತ್ಮಿಕ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ವಚ್ಚತೆಯಿಂದ ಇರುವುದು ಲೆಕ್ಕವಿಲ್ಲದಷ್ಟು ಪ್ರಯೋಜನಗಳಿವೆ. ಅಸಮರ್ಪಕ ಕುಡಿಯುವ ನೀರು ನೈರ್ಮಲ್ಯದ ಮೇಲೆ ಪರಿಣಾಮವಾಗಿ ಅನೇಕ ರೋಗಗಳಿಗೆ ಹಾಗೂ ಸಾವಿಗೆ ಕಾರಣವಾಗುತ್ತಿದೆ. ಸ್ವಚ್ಚವಾದಂತಹ ನೀರನ್ನು ಪ್ರತಿ ವಿದ್ಯಾರ್ಥಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಲಾಡಲಿ ಫೌಂಡೇಶನ ಟ್ರಸ್ಟ ವಿಜಯಪುರ ಜಿಲ್ಲೆಯ ೨೧ ಸರಕಾರಿ ಶಾಲೆಯಲ್ಲಿ ಹೊಸದಾಗಿ ಅತ್ಯಾಧುನಿಕ ಶೌಚಾಲಯ ಕಟ್ಟುತ್ತಿದೆ. ಇದರ ಜೊತೆಗೆ ಒಂದು ವರ್ಷದ ಅವಧಿವರೆಗೆ ವಿದ್ಯಾರ್ಥಿನಿಯರಿಗೆ…

Read More

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಷ್ಟ್ರದ ಸರ್ವೋನ್ನತ ಉನ್ನತಿಗಾಗಿ ಜೀವನವನ್ನೇ ಸಮರ್ಪಿಸಿದ ಮಹಾನ್ ನಾಯಕರು ನಮ್ಮ ಹೆಮ್ಮೆಯ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಿಪ್ರಾಯ ಪಟ್ಟರು.ನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಬುಧವಾರ ಭಾರತ ದೇಶದ ಮಾಜಿ ಪ್ರಧಾನಮಂತ್ರಿಗಳು, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ರವರ 100ನೇ ಜನ್ಮದಿನೋತ್ಸವ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.ವಾಜಪೇಯಿ ಅವರು ರಾಷ್ಟ್ರ ಕಂಡ ಅಪ್ರತಿಮ ವಾಕ್ಪಟು, ಅಜಾತುಶತ್ರು, ದೇಶದ ಪ್ರಧಾನಮಂತ್ರಿಗಳಾಗಿ ಸೇವೆ ಸಲ್ಲಿಸಿ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಬದಲಾವಣೆ ತಂದಿರುವ ಅವರು, ಅಭಿವೃದ್ಧಿ ಮೂಲಕ ದೇಶದ ಚಿತ್ರಣವನ್ನೇ ಬದಲಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಾಗೂ ದೇಶ ಭಕ್ತರಿಗೆ ಬಹಳ ಅಭಿಮಾನ ಪಡುವ ಹೆಮ್ಮೆಯ ದಿವಸ ಅಟಲ್ ಜಿ ಜನ್ಮ ದಿನ. ಅವರು ನೀಡಿರುವ ಅತ್ಯುತ್ತಮ ಆಡಳಿತಕ್ಕಾಗಿ, ಜನ್ಮ ದಿನವನ್ನು…

Read More

ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿದ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಅಭಿಮತ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಗ್ರಾಹಕರಿಗೆ ತಮ್ಮ ಹಕ್ಕುಗಳ ಮತ್ತು ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸೇವಾ ಸಮಿತಿಯ ವತಿಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯಗಳು ಹಾಗೂ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಗ್ರಾಹಕರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಈ ಭೂಮಿಯ ಮೇಲೆ ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕಿದೆ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಮಾನವ ಹಕ್ಕುಗಳನ್ನು ಘೋಷಿಸಲಾಯಿತು.…

Read More