Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕು ಪಂಚಾಯತಿಯ ನೂತನ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಆನಂದಕುಮಾರ ಮ್ಯಾಗೇರಿ ಅವರು ಅಧಿಕಾರ ಸ್ವೀಕಾರ ಮಾಡಿದರು.ನಿರ್ಗಮಿತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ ಅವರು ನೂತನವಾಗಿ ಆಗಮಿಸಿದ ಆನಂದಕುಮಾರ ಮ್ಯಗೇರಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ, ಶುಭ ಕೋರಿದರು.ನಂತರ ಇಬ್ಬರು ಅಧಿಕಾರಿಗಳಿಗೆ ಮಹಾತ್ಮ ಗಾಂಧಿ ನರೇಗಾ ನೌಕರರ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಬಸವರಾಜ ಸಂಕಗೊಂಡ, ಟಿಪಿಓ ಮಹಾಂತೇಶ ಬಾಗೇವಾಡಿ, ಮಹಾತ್ಮ ಗಾಂದಿ ನರೇಗಾ ನೌಕರರ ಸಂಘದ ಜಿಲ್ಲಾ ಉಫಾಧ್ಯಕ್ಷರಾದ ಕಲ್ಲಪ್ಪ ನಂದರಗಿ, ತಾಂತ್ರೀಕ ಸಂಯೋಜಕ ನಾಗರಾಜ ಕಲಕೇರಿ, ತಾಲೂಕು ಎಮ್.ಐ.ಎಸ್ ಸಂಯೋಜಕರಾದ ಅಪರ್ಣಾ ಬದಾಮಿ, ಆಡಳಿತ ಸಹಾಯಕ ಸುನೀಲ ಬನಸೋಡೆ, ಎನ್.ಆರ್.ಎಲ್.ಎಮ್ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮಂತ ಕಟ್ಟಿ ಸೇರಿದಂತೆ ಇತರರು ಹಾಜರಿದ್ದರು.

Read More

ಅವೈಜ್ಞಾನಿಕ ವೇಗ ನಿಯಂತ್ರಕದಿಂದ ಅಪಘಾತ | ಸಾರ್ವಜನಿಕರ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ಚಡಚಣ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದ ಸಮೀಪ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ರಸ್ತೆ ವೇಗ ನಿಯಂತ್ರಕ (ಹಂಪ್) ಕಾರಣದಿಂದ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.ಮಹಾರಾಷ್ಟ್ರ ರಾಜ್ಯದ ಇಸ್ಲಾಂಪುರ ನಿವಾಸಿ ಮುಮ್ತಾಜ್ ಅಬ್ದುಲ್ ಶೇಖ್ (55) ಮೃತಪಟ್ಟ ಮಹಿಳೆ. ಅವರು ತಮ್ಮ ಪತಿ ಅಬ್ದುಲ್ ಶೇಖ್ ಅವರೊಂದಿಗೆ ಮೈನಳ್ಳಿ ಗ್ರಾಮದಿಂದ ಬೈಕ್‌ನಲ್ಲಿ ಇಸ್ಲಾಂಪುರಕ್ಕೆ ತೆರಳುತ್ತಿದ್ದ ವೇಳೆ ಬರಡೋಲ ಗ್ರಾಮದ ಬಳಿ ರಸ್ತೆ ಮಧ್ಯೆ ನಿರ್ಮಿಸಲಾಗಿದ್ದ ಅವೈಜ್ಞಾನಿಕ ವೇಗ ನಿಯಂತ್ರಕದಿಂದಾಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ಪರಿಣಾಮ ಮುಮ್ತಾಜ್ ಅವರ ತಲೆಗೆ ಪೆಟ್ಟು ಬಿದ್ದ ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತೆಯ ಪತಿ ಅಬ್ದುಲ್ ಶೇಖ್ ಮಾತನಾಡಿ, “ರಸ್ತೆಯ ಮೇಲಿನ ವೇಗ ನಿಯಂತ್ರಕಕ್ಕೆ ಯಾವುದೇ ಮುನ್ನೆಚ್ಚರಿಕೆ ಫಲಕ, ಬಣ್ಣದ ಗುರುತು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಯಲ್ಲಿ ಜೂನ್ 6 ರಂದು ಶನಿವಾರ ಅಪ್ರೆಂಟಿಸ್‌ಶಿಪ್‌ಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.ಶನಿವಾರ ಬೆಳಿಗ್ಗೆ 9.30 ಗಂಟೆಗೆ ಟೋಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ (ಟಿಐಇಐ) ಅವರು ಈ ಸಂದರ್ಶನ ನಡೆಸಲಿದ್ದು, ಐಟಿಐ ಪಾಸಾದ ಮತ್ತು ಐಟಿಐ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆವಿಜಯಪುರ ಜಿಲ್ಲೆಯಲ್ಲಿ ಬರುವ ಎಲ್ಲ ಐಟಿಐ ತರಬೇತಿದಾರರು ಎರಡು ಭಾವಚಿತ್ರ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಈ ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ತರಬೇತಿ ಕೇಂದ್ರದ ಪ್ರಾಚಾರ್ಯ ಎಂ. ಡಿ. ಪಡಸಲಗಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9964658059 ಮತ್ತು 9916853605 ಸಂಪರ್ಕಿಸಬಹುದಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಹಂಪಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ಪ್ರೊ ವಾಸುದೇವ ಬಡಿಗೇರ ಅವರ ದೇವರ ದಾಸಿಮಯ್ಯನವರ ಮರು ಚಿಂತನೆ ವಿಷಯ ನಿಜಕ್ಕೂ ಅರ್ಥರಹಿತ ಪೂರ್ವಾಗ್ರಹಪೀಡಿತ ವಿಚಾರಗಳೇ ಹೊರತು ಅವರ ಯಾವ ವಿಚಾರಗಳು ಸತ್ಯದ ನಿಲುವಿಗೆ ನಿಲ್ಲುವುದಿಲ್ಲ.ಇನ್ನು ಮೈಸೂರಿನ ಪ್ರೊ ವಸಂತಕುಮಾರ ಅವರು ಇದೆ ರಾಗದ ಪುನರಾವರ್ತನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಒಬ್ಬರೇ ಎಂದು ಹಂಚಿಕೊಂಡಿದ್ದಾರೆಓತಿಕ್ಯಾತಕ್ಕೆ ಬೇಲಿ ಸಾಕ್ಷಿ ಎನ್ನುವ ಹಾಗಿದೆ ಎಂದು ಪುಣೆ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ (ರಾಮದುರ್ಗ) ಕಟುವಾಗಿ ಟೀಕಿಸಿದ್ದಾರೆ.ಈ ಕುರಿತು ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಡಾ ಏಚ್ ದೇವೀರಪ್ಪ, ಡಾ ತಿಪ್ಪೇರುದ್ರಸ್ವಾಮಿ, ಡಾ ಎಂ ಚಿದಾನಂದ ಮೂರ್ತಿ, ಡಾ ವೃಷಭೇಂದ್ರಸ್ವಾಮಿ, ಡಾ ಎಂ ಎಂ ಕಲಬುರ್ಗಿ, ಪ್ರೊ ವಿದ್ಯಾಶಂಕರ, ಡಾ ವೀರಣ್ಣ ರಾಜೂರ, ಡಾ ವೀರಣ್ಣ ದಂಡೆ, ಡಾ ಜಯಶ್ರೀ ದಂಡೆ, ಪ್ರೊ. ಬಿ ಆರ್ ಪೊಲೀಸ ಪಾಟಿಲ, ಪ್ರೊ…

Read More

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮತ್ತು ಪದಾಧಿಕಾರಿಗಳಿಂದ ಸ್ವಾಗತ ಉದಯರಶ್ಮಿ ದಿನಪತ್ರಿಕೆ ಕಲಬುರಗಿ: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ.ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸರ್ಕಾರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದರೊಂದಿಗೆ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಬೂಟ್, ಷೂ ಸೇರಿದಂತೆ ಪಠ್ಯಪುಸ್ತಕ ಉಚಿತವಾಗಿ ವಿತರಿಸುತ್ತಿದೆ. ಆದ್ದರಿಂದ ಪಾಲಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಒಳಗಾಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದು ಎಸ್ ಡಿ ಎಮ್ ಸಿ ಅಧ್ಯಕ್ಷ ಹಣಮಂತ ಶೆಟ್ಟೆನ್ನವರ ಮನವಿ ಮಾಡಿದರು.ತಾಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಉಪ್ಪಾರ ತೋಟದಲ್ಲಿ ಮುಖ್ಯದ್ವಾರದ ಬಳಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹೂಗಳನ್ನು ಹಾಕುವುದರ ಮೂಲಕ ಮತ್ತು ಕೈಯಲ್ಲಿ ಗುಲಾಬಿ ಹೂ ನೀಡುವುದರ ಮೂಲಕ ಮುಗುಳ್ನಗೆಯಿಂದ ವಿದ್ಯಾರ್ಥಿಗಳನ್ನು ಶಾಲಾ ಆವರಣಕ್ಕೆ ಬರಮಾಡಿಕೊಂಡರು. ನಂತರ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.ನಂತರ ಮುಖ್ಯೋಪಾಧ್ಯಾಯರಾದ ಕಾಶಿನಾಥ್ ಜಾಧವ ಮಾತನಾಡಿ, ನಿರಂತರ ಅಧ್ಯಯನ, ಪರಿಶ್ರಮದಿಂದ ಗುರಿ ತಲುಪಲು ಸಾಧ್ಯ. ಉನ್ನತ ಶಿಕ್ಷಣದ ಜೊತೆಗೆ ಉನ್ನತ ಹುದ್ದೆಯನ್ನು ಅಲಂಕರಿಸುವತ್ತ ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಹಿರಿಯರಾದ…

Read More

ಬಿಡದಿ ಟೌನ್ ಶಿಪ್, ಶರಾವತಿ ಪಂಪ್ಡ್ ಸ್ಟೋರೇಜ್, ಕ್ರಿಕೆಟ್ ಸ್ಟೇಡಿಯಂ ಯೋಜನೆ ಕೈಬಿಡದಿದ್ದರೆ ಹೋರಾಟ ನಿಶ್ಚಿತ :ಶಾಸಕ ಯತ್ನಾಳ ಎಚ್ಚರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈತರ ಮರಣ ಶಾಸನ ಆಗಲಿರುವ ಬಿಡದಿ ಟೌನ್ ಶಿಪ್ ಯೋಜನೆ, ಪಶ್ಚಿಮ ಘಟ್ಟಗಳಿಗೆ ಮಾರಕವಾಗಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಹಾಗೂ ಆನೇಕಲ್ ನ ಫಲವತ್ತಾದ ಭೂಮಿಯಲ್ಲಿ ಬರುತ್ತಿರುವ ಕ್ರಿಕೆಟ್ ಸ್ಟೇಡಿಯಂ ಯೋಜನೆಗಳನ್ನು ಮುಂಬರುವ ಸಂಪುಟ ಸಭೆಯಲ್ಲಿ ರದ್ದುಗೊಳಿಸದಿದ್ದರೆ, ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಿಶ್ಚಿತ ಎಂದು ಶಾಸಕ ಬಸನಗೌಡ ಪಾಟೀಲ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ರಿಯಲ್ ಎಸ್ಟೇಟ್ ಲಾಬಿಗೆ, ಬಂಡವಾಳಶಾಹಿಗಳ ಒತ್ತಡಕ್ಕೆ ಶರಣಾಗಿರುವ ಸರ್ಕಾರ ಒತ್ತಾಯಪೂರ್ವಕವಾಗಿ ರೈತರ ಜಮೀನನ್ನು ಪಡೆಯುತ್ತಿರುವುದು ಖಂಡನೀಯ. ರೇಷ್ಮೆ, ಮಾವು, ಅಡಿಕೆ, ಬಾಳೆ, ತರಕಾರಿ, ಹಲಸು, ಪೇರಳೆ ಹೀಗೆ ವಿವಿಧ ರೀತಿಯ ಬೆಳೆಗಳನ್ನು ಬೆಳೆಯುತ್ತಿರುವ ಬಿಡದಿಯ ರೈತರು ಸಮೃದ್ಧರಾಗಿದ್ದರೆ. ಸುಮಾರು 6500 ಎಕರೆಯ ಅತ್ಯಂತ ಫಲವತ್ತಾದ, ನೀರಾವರಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಸ್ವಾಧೀನಪಡೆಸಿಕೊಳ್ಳುತ್ತಿರುವ ಸರ್ಕಾರದ ಕ್ರಮ ಅತಾರ್ಕಿಕವಾದದ್ದು.ಕೃಷಿಗೆ ಯೋಗ್ಯವಲ್ಲದ…

Read More

ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಆಡಂ ಹಾರ್ಟ-ಡೇವಿಸ್ ಅವರು, “ಸೈಕಲ್ ಎಂದರೆ ಮನುಷ್ಯನ ಪಾರಂಪರಿಕ-ಸಾಂಪ್ರದಾಯಿಕ ಮತ್ತು ಅತ್ಯಂತ ಸುಲಭ ಮತ್ತು ಅಗ್ಗದ ಸಾರಿಗೆಯ ಸಾಧನ.ಸೈಕಲ್ ತುಳಿಯುವುದರಿಂದ ನಿಮ್ಮ ದೇಹಕ್ಕೆ ಕಸರತ್ತು ಮತ್ತು ವ್ಯಾಯಾಮ ನೀಡುವ ಸವಾರಿಯಾಗಿದೆ” ಎಂದು ಹೇಳಿದ್ದಾರೆ. ಸೈಕಲ್ ಸವಾರಿ ಎಂದರೆ ಕೇವಲ ವ್ಯಾಯಾಮವಲ್ಲ. ಅದು ನಮ್ಮ ದೇಹ ಮತ್ತು ಮನಸ್ಸಿಗೆ ನವ ಚೈತನ್ಯವನ್ನು ನೀಡುವ ಒಂದು ಸಾಧನ. ನಾವು ಬಾಲ್ಯದಲ್ಲಿದ್ದಾಗ ಒಡನಾಡಿ ಇದ್ದಂತೆ. ಇದರಿಂದ ಪ್ರಕೃತಿಯ ಸೌಂದರ್ಯವನ್ನು ಸವಿಯಲು, ಆರೋಗ್ಯವನ್ನು ಕಾಪಾಡಲು ಮತ್ತು ಪರಿಸರವನ್ನು ಸಂರಕ್ಷಿಸಲು ಸಹಕಾರಿಯಾಗಿದೆ. ನಮ್ಮ ಪಾರಂಪರಿಕ-ಸಾಂಪ್ರದಾಯಿಕ ವಾಹನವಾದ ಈ ಸೈಕಲ್ ಅನ್ನು ಬಳಸಿ, ಮುಗಿದು ಹೋಗುತ್ತಿರುವ ಇಂಧನವನ್ನು ಉಳಿಸಿ. ನಾವು ಸಣ್ಣವರಿದ್ದಾಗ ಗೆಳೆಯರೊಂದಿಗೆ ಜೊತೆಗೂಡಿ ಸೈಕಲ್ ಸವಾರಿ ಮಾಡುತ್ತಾ ನಾ ಮುಂದು ತಾ ಮುಂದು ಎಂದು ಸ್ಪರ್ಧೆಗಿಳಿಯುತ್ತಿದ್ದ ಸಂದರ್ಭಗಳು ನೆನೆಪಿಗೆ ಬಂದರೆ ಮನಸ್ಸಿಗೆ ಆಹ್ಲಾದಕರವೆನಿಸುತ್ತದೆ. ಸೈಕಲ್ ಒಂದು ವ್ಯಕ್ತಿ ಚಾಲಿತ ವಾಹನವಾಗಿದ್ದು, ಮಾನವನಿಗೆ ದೈಹಿಕ ಕಸರತ್ತು ನೀಡಬಲ್ಲ ಸಾಧನ. ಯಾವುದೇ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಸೋಮವಾರ ತಹಶಿಲ್ದಾರ ಬಿ ಎಸ್ ಕಡಕಭಾವಿ ಅವರ ಮುಖಾಂತರ ಸರಕಾರಕ್ಕೆ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು .ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ರ್ಯಾಲಿ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತಲುಪಿ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವ ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ ಡಿ ಇನಾಮದಾರ ಮಾತನಾಡಿ, ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿ ಪ್ರತಿಯೊಂದು ಜೀವಿಗೂ, ಪ್ರಕೃತಿಗೂ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದೆ. ಅದರಲ್ಲಿಯೂ ಮುಖ್ಯವಾಗಿ ಗೋವು (ಹಸು) ಭಾರತೀಯ ಸಂಸ್ಕೃತಿ, ಕೃಷಿ ಪ್ರಧಾನ ಆರ್ಥಿಕತೆ ಮತ್ತು ಕೋಟ್ಯಂತರ ಜನರ ಭಾವನೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ. ಶಾಂತಿ, ಕರುಣೆ ಮತ್ತು ಪೋಷಣೆಯ ಸಂಕೇತವಾಗಿರುವ ಹಸುವನ್ನು ಭಾರತದ ‘ರಾಷ್ಟ್ರ,…

Read More