Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಐದೇಶಿ ಉತ್ಸವ ಅತಿ ವಿಜೃಂಭಣೆಯಿಂದ ಸಾವಳಗಿ ಗ್ರಾಮದಲ್ಲಿ ನಡೆಯಿತು.ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಕಂಬಿ ಮಲ್ಲಯ್ಯನ ಐದೇಶಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಐದೇಶಿ ಉತ್ಸವ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ವಾದ್ಯ ಮೇಳದೊಂದಿಗೆ ಅದ್ಧೂರಿಯಾಗಿ ಉತ್ಸವ ಸಾಗಿತು.ಇಲ್ಲಿಂದ ಅಲ್ಲಿಗೆ ಹೋದಾರತ್ತ ಏನ್ ಕೊಡುವನೋ ಮಲ್ಲಯ್ಯ’ ಕೇಳಿದೆ ಅಂದರ, ಕುದರಿ ಛತ್ತರಗಿ ಸಂಪತ್ತು ಕೊಡುವನೋ ಮಲ್ಲಯ್ಯ, ಧನವು ಕೊಟ್ಟು ಧಾನ್ಯವ ಕೊಟ್ಟು, ಸಿರಿಯ ಕೊಡುವನೋ ಮಲ್ಲಯ್ಯ.ಕಂಬಿ ಮಲ್ಲಯ್ಯ ದೇವರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದು ಒಂದೆಡೆಯಾದರೆ ಅದರ ಮುಂಭಾಗದಲ್ಲಿ ಕನ್ನಡಿ, ಬಾಸಿಂಗ , ಮುತ್ತೈದೆಯರು ಆರತಿ, ದಿವಟಗಿ, ವಿವಿಧ ವಾದ್ಯ ಮೇಳದೊಂದಿಗೆ ಪ್ರತೀ ವರ್ಷದ ಪದ್ಧತಿಯಂತೆ ಕಂಬಿ ಮಲ್ಲಯ್ಯನನ್ನು ಕೂಡಿಸಿ ಮಂಗಳಾರತಿ ಮಾಡಿ ಕಂಬಿ ಐದೇಶಿ ಕಾರ್ಯಕ್ರಮ ನಡೆಯಿತು, ಸಾವಿರಾರು ಭಕ್ತರು ಕಂಬಿ ಮಲ್ಲಯ್ಯನಿಗೆ ಬೆಲ್ಲ ಅರ್ಪಿಸಿ ಭಕ್ತಿಯಿಂದ ನಮಿಸಿದರು.ಐದೇಶಿ ಇಲ್ಲಿಯ ಆಚರಣೆಯಾಗಿದ್ದು, ಈ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಾಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಚಡಚಣ ಪಟ್ಟಣದ ತಹಶೀಲ್ದಾರ್ ಕಛೇರಿ ಆವರಣದಲ್ಲಿ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಉದ್ಘಾಟಿಸಿದ ಶಾಸಕ ವಿಠ್ಠಲ ಕಟಕಧೋಂಡ ಅವರು ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಭಾರತದ ಸಂವಿಧಾನದ ಶಿಲ್ಪಿಯಷ್ಟೇ ಅಲ್ಲದೆ, ವಿಶ್ವಕ್ಕೆ ಮಾದರಿಯಾಗಿದ್ದಾರೆ, ಸಮಾಜದಲ್ಲಿಯ ಅಂಕು ಡೊಂಕುಗಳನ್ನು ತಿದ್ದುವ ಮತ್ತು ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಬಿತ್ತಿದ ಮಹಾನ್ ಚಿಂತಕರು ಎಂದು ಹೇಳಿದರು.ಯುವಜನತೆ ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಾಮಾಜಿಕ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.ಉಪನ್ಯಾಸಕರಾದ ಡಾ. ಸಂಜೀವಕುಮಾರ ಪೋತೆ ಅವರು ಅಂಬೇಡ್ಕರ್ ಅವರ ಜೀವನಚರಿತ್ರೆಯನ್ನು ಸವಿಸ್ತಾರವಾಗಿ ಪರಿಚಯಿಸಿದರು.ತಹಶೀಲ್ದಾರ ಸಂಜಯ ಇಂಗಳೆ ಮಾತನಾಡಿದರು.ಕಾರ್ಯಕ್ರಮದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಲಾಯಿತು. ಸಂವಿಧಾನದ ಪೀಠಿಕೆ ಓದಲಾಯಿತು.ಪಟ್ಟಣದ ಪ್ರಮುಖ ಬೀದಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಅವರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಹಂಚಲಿ ಗ್ರಾಮದ ನಿವೃತ್ತ ಶಿಕ್ಷಕ ಸಂಗಪ್ಪ ಶರಣಪ್ಪ ಸೊನ್ನದ (84) ಅವರು ಬುಧವಾರ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಪತ್ರಕರ್ತ ಚಂದ್ರಕಾಂತ ಸೊನ್ನದ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ 11ಕ್ಕೆ ಹಂಚಲಿ ಗ್ರಾಮದ ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಉದಯರಶ್ಮಿ ದಿನಪತ್ರಿಕೆ ಅಥಣಿ: ಕ್ಷೇತ್ರದ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಕಲ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ತಾಲೂಕಿನ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದ್ದು,” ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.ತಾಲೂಕಿನ ಸಪ್ತಸಾಗರ, ತೀರ್ಥ ಹಾಗೂ ಖವಟಕೊಪ್ಪ ಗ್ರಾಮಗಳಲ್ಲಿ ಸುಮಾರು 14 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಗ್ರಾಮಸ್ಥರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳು ಸಹಕಾರಿಯಾಗಲಿವೆ ಎಂದು ಅವರು ಆಶಯ ವ್ಯಕ್ತಪಡಿಸಿದರು.ಇದೇ ವೇಳೆ 30 ಜನ ಶಾಸಕರು ದೆಹಲಿಗೆ ತೆರಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸವದಿ ಅವರು, “ಶಾಸಕರು ದೆಹಲಿಗೆ ಹೋಗಿರುವ ವಿಚಾರ ನನ್ನ ಗಮನದಲ್ಲಿದೆ. ಸರ್ಕಾರ ರಚನೆಯಾದ ಸಂದರ್ಭದಲ್ಲಿ ಹೈಕಮಾಂಡ್, ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಎರಡುವರೆ ವರ್ಷಗಳ ನಂತರ ಸಚಿವ ಸಂಪುಟ ಪುನರ್ ರಚನೆ ಮಾಡಿ ಬೇರೆಯವರಿಗೆ ಅವಕಾಶ ನೀಡುತ್ತೇವೆ ಎಂಬ ಭರವಸೆ ನೀಡಿದ್ದರು. ಈಗ ಆ ಕಾಲಮಿತಿ ಮುಗಿದಿದೆ,” ಎಂದ ಅವರು “ಸಚಿವ ಸ್ಥಾನ ಕೇಳುವುದು…
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪೀಠೋಕರಣಗಳಿಂದ ಅಲಂಕೃತ ವೈಭವೋಪೇತ ಮಹಲಿನಲ್ಲಿ ಇರಬೇಕೆಂದು ನಾವೆಲ್ಲ ಹಂಬಲಿಸುತ್ತೇವೆ. ಗೆಲುವಿನ ಸರದಾರರಾಗಬೇಕೆಂದು ಕನಸು ಕಾಣುತ್ತೇವೆ. ಕೇವಲ ಅಪೇಕ್ಷೆ ಮತ್ತು ಹಂಬಲದಿಂದ ಎಲ್ಲವೂ ನೆರವೇರುವುದಿಲ್ಲ. ಅದಕ್ಕೆ ಬೆವರ ಧಾರೆಯನ್ನು ಹರಿಸಬೇಕು. ಕಾರ್ಯಕ್ಷೇತ್ರವನ್ನು ವಿಸ್ತರಿಸಬೇಕು. ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ಎಂಬ ಸಾಮಾನ್ಯ ಜ್ಞಾನ ನಮ್ಮಲಿಲ್ಲ ಅಂತೇನಿಲ್ಲ. ಶ್ರಮದಲ್ಲಿ ಗೆಲುವು ಅಡಗಿದೆ. ಅವಿರತ ಶ್ರಮದ ಫಲವಾಗಿ ದೊರೆಯುವುದೇ ಯಶಸ್ಸು. ಎಂಬುದು ಗೊತ್ತಿದೆ. ಏನೆಲ್ಲ ಗೊತ್ತಿದ್ದರೂ ನಾವೇಕೆ ಹೀಗಿರುವುದು ಎಂಬ ಪ್ರಶ್ನೆ ತಲೆ ತಿನ್ನುತ್ತದೆ. ಗೊತ್ತಿದ್ದ ಮಾತ್ರಕ್ಕೆ..ವ್ಯಾಯಾಮ ಮಾಡಿದರೆ ತೂಕ ಕಡಿಮೆಯಾಗುತ್ತದೆ. ಎಂಬುದು ಬೊಜ್ಜು ಮೈ ಇರುವವರಿಗೆ ಗೊತ್ತಿದೆ. ಚೆನ್ನಾಗಿ ಓದಿದರೆ ಉತ್ತಮ ಅಂಕ ಪಡೆಯಲು ಸಾಧ್ಯ. ಎಂಬುದು ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಗೊತ್ತಿದೆ. ಬೆಳಿಗ್ಗೆ ಬೇಗ ಎದ್ದು ಧ್ಯಾನ ಮಾಡಿದರೆ ಸಮಾಧಾನವಾಗಿರಬಹುದು. ಎನ್ನುವುದು ಕಿರಿಕಿರಿ ಅನುಭವಿಸುತ್ತಿರುವವರಿಗೆ ಗೊತ್ತು. ಆದರೂ ಅವರೆಲ್ಲ ಇದ್ದ ದೇಹ ಸ್ಥಿತಿಯಲ್ಲಿ ಇದ್ದ ಮನಸ್ಥಿತಿಯಲ್ಲೇ ಇರುತ್ತಾರೆ ಏಕೆ? ಏಕೆಂದರೆ ಕೇವಲ ಗೊತ್ತಿದ್ದ ಮಾತ್ರಕ್ಕೆ…
ಬಸವ ಜಯಂತಿ ನಿಮಿತ್ತ ಬಸವನ ಬಾಗೇವಾಡಿಯಿಂದ ವಿಜಯಪುರದವರೆಗೆ ಪಾದಯಾತ್ರೆ ಮತ್ತು 50ಕಿ.ಮೀ ಓಟ ಆಯೋಜನೆ | ಆಯೋಜಕ ಬಿ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಮಹಾತ್ಮ ಬಸವೇಶ್ವರ ಅವರ ಜಯಂತಿ ನಿಮಿತ್ತ ಅವರ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಮತ್ತು 50ಕಿ.ಮೀ ಓಟವನ್ನು ಈ ವರ್ಷ ಬಾರಿ ವಿಶಿಷ್ಟವಾಗಿ ಆಯೋಜಿಸಲಾಗಿದೆ ಎಂದು ಆಯೋಜಕ ಬಿ. ಬಿ. ಪಾಟೀಲ ತಿಳಿಸಿದ್ದಾರೆ.ಸಮಾನತೆಯ ಸಂಕೇತವಾಗಿರುವ ಬಸವಾದಿ ಶರಣರ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಮತ್ತು ಎಲ್ಲ ಜೀವಿಗಳ ಮೇಲೆ ದಯೆ ತೋರುವುದು. ‘ಕಾಯಕವೇ ಕೈಲಾಸ’ ಮತ್ತು ‘ದಾಸೋಹ’ ತತ್ವಗಳನ್ನು ಮುನ್ನಡೆಸುವುದೇ ಬಸವ ಜ್ಯೋತಿ ಯಾತ್ರೆಯ ಉದ್ದೇಶವಾಗಿದೆ.ವಿಜಯಪುರ ಜಿಲ್ಲೆಯ ಹಂದಿನಗೂರು ಗ್ರಾಮದ ಬಿ.ಬಿ.ಪಾಟೀಲ ಅವರು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿ ತಂತ್ರಜ್ಞರಾಗಿದ್ದು, ಜೊತೆಗೆ ಬಸವಾದಿ ಶರಣರ ತತ್ವ ಪ್ರಸಾರ ಕಾರ್ಯದಲ್ಲಿ ತೊಡಗಿದ್ದಾರೆ. 2012 ರಿಂದ ಪ್ರತಿ ವರ್ಷ ಬಸವ ಜಯಂತಿಯಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ…
ಸಂಬಂದಿಸಿದ ಇಲಾಖೆಗೆ ಕ್ರಮಕೈಗೊಳ್ಳಲು ಆದೇಶಿಸಲು ಸಿಎಂ-ಡಿಸಿಎಂ ಗೆ ಕೊಲ್ಹಾರ ಪಟ್ಟಣ ಅಭಿವೃದ್ಧಿ ಹಿತಚಿಂತಕರ ವೇದಿಕೆ ಆಗ್ರಹ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೊಲ್ಹಾರ ಊರು ಮುಳಗಡೆಯಾಗಿ ಪುನರ್ವಸತಿ ಕೇಂದ್ರದಲ್ಲಿ ನೆಲೆನಿಂತು ಇಪ್ಪತೈದು ವರುಷ ಗತಿಸಿದರೂ ಸಂತ್ರಸ್ತರು ಸ್ವಂತ ಸೂರು ಕಟ್ಟಿಕೊಳ್ಳಲು ನಿವೇಶನಕ್ಕಾಗಿ ಅಲೆದಾಡುವದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕ್ಷೇತ್ರದ ಶಾಸಕ ಸಚಿವ ಶಿವಾನಂದ ಪಾಟೀಲ ಸಂಬಂದಿಸಿದ ಇಲಾಖೆಗೆ ಕ್ರಮಕೈಗೋಳ್ಳಲು ಆದೇಶ ಮಾಡಬೇಕು ಎಂದು ಕೊಲ್ಹಾರ ಪಟ್ಟಣ ಅಭಿವೃದ್ಧಿ ಹಿತಚಿಂತಕರ ವೇಧಿಕೆಯ ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ ಒತ್ತಾಯಿಸಿದರು.ಈ ಕುರಿತು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ಕರೆದು ಮಾತನಾಡಿದ ಅವರು ಪುನರ್ವಸತಿ ಇಲಾಖಾ ಅಧಿಕಾರಿಗಳು ಮಧ್ಯವರ್ತಿಗಳ ಜೊತೆ ಸೇರಿ ಕಾನೂನು ಬಾಹೀರವೂ ಅಥವಾ ಕಾನೂನು ಉಲಂಘನೆಯೋ ಗೊತ್ತಿಲ್ಲ ಅವರು ಮಾಡಿದ ತಪ್ಪನ್ನು ಸಂತ್ರಸ್ತರ ಮೇಲೆ ಹೊರಸಿರುವದು ಯಾಕೆ ಮುಳಗಡೆ ಸಂತ್ರಸ್ತರು ನಿವೇಶನದ ಹಕ್ಕುಪತ್ರ ಪಡೆದುಕೊಂಡು ಹಲವಾರು ವರುಷ ಕಳೆದಿವೆ ಆದರೆ ಈಗ ಇ ಸ್ವತ್ತು ಉತಾರೆ ಪಡೆಯಲು…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಬೆಂಗಳೂರಿನಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಪಟ್ಟಣದ ವಿದ್ಯಾರ್ಥಿನಿ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 590 ಅಂಕ ಗಳಿಸಿದ ಸಾಧನೆಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಸನ್ಮಾನಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮೆನ್ನಬೆತ್ತು ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಸ್ಥಳೀಯ ಕಲ್ಲಪ್ಪ ಗುರಲಿಂಗಪ್ಪ ಕಾಖಂಡಕಿ ಅವರ ಪುತ್ರಿ ಸಹನಾ ಅವರು, ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಪಿಯುಸಿ ಕಾಲೇಜುಗಳಲ್ಲಿಯೇ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಟಾಪ್ ಐದು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.ಈ ಸಾಧನೆಗಾಗಿ ಅವರಿಗೆ ಮೂರು ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಲಾಯಿತು.ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಎಚ್.ಸಿ. ಮಹಾದೇವಪ್ಪ, ಕೆ.ಹೆಚ್. ಮುನಿಯಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಕೃಷಿಯಲ್ಲಿ ನಿರಂತರ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದ್ದು, ಇಳುವರಿ ಕುಂಠಿತವಾಗುತ್ತಿದೆ. ಮಣ್ಣಿನ ಸಾರಾಂಶ ಸಂರಕ್ಷಿಸುವ ನಿಟ್ಟಿನಲ್ಲಿ ರಾಸಾಯನಿಕ ಗೊಬ್ಬರ ಬದಲಾಗಿ ಸಾವಯವ ಗೊಬ್ಬರ ಬಳಕೆ ಮಾಡಬೇಕೆಂದುಶಾಸಕ ಅನಿಲ್ ಚಿಕ್ಕಮಾದು ರೈತರಿಗೆ ಸಲಹೆ ನೀಡಿದರು. ತಾಲೂಕಿನ ಮೈಸೂರು-ಮಾನಂದವಾಡಿ ಮಾರ್ಗ ಮಧ್ಯೆದಲ್ಲಿರುವ ಲಕ್ಷ್ಮೀಪುರದಲ್ಲಿ ನೂತನವಾಗಿ ಆರಂಭವಾಗಿರುವ ಮೈಟೆಕ್ ಆಗ್ರೋ ಸಲ್ಯೂಷನ್ಸ್ ಕಚೇರಿ ಓಪನ್ ಮಾಡಿ ಮಾತನಾಡಿದರು. ಈ ಹಿಂದೆ ನಮ್ಮ ಪೂರ್ವಜರು ಸಾವಯವ ಗೊಬ್ಬರ ಬಳಸಿ, ಜಮೀನಿನಲ್ಲಿ ತರಕಾರಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದರು. ಈ ಪದ್ಧತಿಯು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಮಾನವನ ಆರೋಗ್ಯಕ್ಕೂ ಸಹಕಾರಿಯಾಗಿತ್ತು. ನೈಸರ್ಗಿಕವಾಗಿ ಬೆಳೆದ ತರಕಾರಿಗಳನ್ನು ತಿಂದು ಮನುಷ್ಯ 100-120 ವರ್ಷಗಳವರೆಗೆ ಬದುಕುತ್ತಿದ್ದರು. ಆದರೆ ಇತ್ತೀಚಿಗೆ ಜಾಸ್ತಿ ಕೆಮಿಕಲ್ಸ್ ಬಳಕೆ ಮಾಡುವುದರಿಂದ ಭೂಮಿಯ ಆರೋಗ್ಯ ಕೆಡುವುದರ ಜೊತೆಗೆ ಮನುಷ್ಯ ಜೀವಿಯು ಕೂಡ ಅನಾರೋಗ್ಯಕ್ಕೆ ತುತ್ತಾಗಿ 30 ವರ್ಷದ ಆಸುಪಾಸಿನಲ್ಲೇ ಅಕಾಲಿಕ ಮರಣಕ್ಕೀಡಾಗುತ್ತಿದ್ದಾರೆ. ದಯವಿಟ್ಟು ತಾಲೂಕಿನ ಜನತೆ ಸಾವಯವ ಗೊಬ್ಬರ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಇಂದಿನ ದಿನಮಾನಗಳಲ್ಲಿ ಮೊಬೈಲ್ ಅಬ್ಬರದ ನಡುವೆ ಮಕ್ಕಳಿಗೆ ಯೋಗ, ಧ್ಯಾನವೇ ಪರಿಹಾರ ಎಂದು ನಿವೃತ್ತ ಮುಖ್ಯಗುರು ಡಿ.ಎಂ.ಚೌದರಿ ಹೇಳಿದರು.ಪಟ್ಟಣದ ಗುರು ಖಾಸ್ಗತೇಶ್ವರ ಮಿಡ್ಬ್ರೇನ್ ಯೋಗ ಮತ್ತು ಧ್ಯಾನ ತರಬೇತಿ ಕೇಂದ್ರದ ವತಿಯಿಂದ, ಶಾಲಾ ಆವರಣದಲ್ಲಿ, ವಿದ್ಯಾರ್ಥಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಈಗಿನ ಪರಿಸರದಲ್ಲಿ ಮಕ್ಕಳು ಮೊಬೈಲ್, ಕಂಪ್ಯೂಟರ್ ಗಳ ಹಿಂದೆ ಬಿದ್ದು ತಮ್ಮ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಪಾಲಕರು ಎಷ್ಟೇ ಹತೋಟಿಗೆ ತರಬೇಕೆಂದರೂ ಸಾಧ್ಯವಾಗುತ್ತಿಲ್ಲ. ಇಂತವರಿಗೆ ಗುರು ಖಾಸ್ಗತೇಶ್ವರ ಮಿಡ್ಬ್ರೇನ್ ಯೋಗಾ ಶಾಲೆ ಮಕ್ಕಳಿಗೆ ಯೋಗ ಮತ್ತು ಧ್ಯಾನದ ತರಬೇತಿ ನೀಡುವ ಮೂಲಕ ಮಕ್ಕಳ ಮೂರನೇ ಕಣ್ಣನ್ನು ತೆರೆಸಿ ಅವರ ನೆನಪಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಶ್ರಮಿಸುತ್ತಿದ್ದಾರೆ. ಈ ವಿದ್ಯೆ ಪಡೆದ ಮಕ್ಕಳು ಶೈಕ್ಷಣಿಕವಾಗಿ ಸಾಕಷ್ಟು ಪ್ರಗತಿ ಹೊಂದುವ ವಿಶ್ವಾಸ ನನಗಿದೆ. ಅಂತಹ ಶಕ್ತಿ ಯೋಗ ಮತ್ತು ಧ್ಯಾನಕ್ಕಿದೆ ಎಂದರು.ಅತಿಥಿಯಾಗಿದ್ದ ಪ್ರೊ.ಪ್ರಕಾಶ ನರಗುಂದ ಮಾತನಾಡಿ, ನಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವದರ ಜೊತೆಗೆ ದೈಹಿಕವಾಗಿ,…
