Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಜ್ಯೋತಿ ಸಾವಳಗಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆಫ್ ಕಬಡ್ಡಿ ಪ್ಲೇಯಿಂಗ್ ಎಬಿಲಿಟಿ ಆಪ್ ಸೆಲೆಕ್ಟೆಡ್ ಫಿಸಿಕಲ್, ಸೈಕಲಾಜಿಕಲ್ ಅಂಡ್ ಆಂಥ್ರೋಪೊಮೆಟ್ರಿಕ್ಸ್ ವೇರಿಯೆಬಲ್ಸ್ ಅಮಂಗ್ ಸ್ಟೇಟ್ ಲೆವಲ್ ವುಮೆನ್ ಕಬಡ್ಡಿ ಪ್ಲೇರ‍್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.ಜ್ಯೋತಿ ಸಾವಳಗಿ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ. ಜ್ಯೋತಿ. ಎ. ಉಪಾಧ್ಯೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು.ಡಾಕ್ಟರೇಟ್ ಪದವಿ ಪಡೆದಿರುವ ಜ್ಯೋತಿ ಸಾವಳಗಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.

Read More

5 ಕಿ.ಮೀ ಓಟದಲ್ಲಿ ಪತ್ನಿ – ಪುತ್ರನೊಂದಿಗೆ ಪಾಲ್ಗೊಳ್ಳುತ್ತಿರುವ ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹಿರಿಯ ಪತ್ರಕರ್ತ ಅಲ್ಲಮಪ್ರಭು ಜಿ ಮಲ್ಲಿಕಾರ್ಜುನಮಠ ತಮ್ಮ ಪತ್ನಿ ಮತ್ತು ಪುತ್ರನ ಜೊತೆ ರವಿವಾರ ನಗರದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವೃಕ್ವೊತ್ಥಾನ ಹೆರಿಟೇಜ್ ರನ್-೨೦೨೪ರ 5 ಕಿ.ಮೀ ಓಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಮಲ್ಲಿಕಾರ್ಜುನಮಠ ಅವರ ಪತ್ನಿ ಭುವನೇಶ್ವರಿ ಮೇಲಿನಮಠ ಬೆಂಗಳೂರಿನ ಯಲಹಂಕದಲ್ಲಿರುವ ಬಿ.ಎಂ.ಎಸ್.ಐ.ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಈ ದಂಪತಿಯ ಪುತ್ರ ಜಯವಿಹಾನ ಎ. ಮಲ್ಲಿಕಾರ್ಜುನಮಠ ಕೂಡ ಈ ಓಟದಲ್ಲಿ ಭಾಗವಹಿಸುವ ಮೂಲಕ ಕುಟುಂಬ ಸಮೇತ ಓಟದಲ್ಲಿ ಪಾಲ್ಗೊಳ್ಳುತ್ತಿರುವವರ ಸಾಲಿಗೆ ಸೇರಿದ್ದಾರೆ. 36ನೇಯ ಅಂತರಾಷ್ಟ್ರೀಯ ಮ್ಯಾರಥಾನ್ ಹಿರಿಯ ಪತ್ರಕರ್ತ ಅಲ್ಲಮಪ್ರಭು ಜಿ ಮಲ್ಲಿಕಾರ್ಜುನಮಠ ಅವರು ಈ ಮೊದಲು ದೇಶ – ವಿದೇಶಗಳಲ್ಲಿ ಜರುಗಿದ ಹಲವಾರು ಅಂತರರಾಷ್ಟ್ರೀಯ ಮ್ಯಾರಥಾನ್ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಕ್ರೀಡಾಪ್ರೇಮ ಮೆರೆದಿದ್ದಾರೆ.ಸಮಾಜಮುಖಿ ದೋರಣೆಯ, ನಿರ್ಭಿಡೆ ಮನೋಭಾವದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಅವರು ಈಗಾಗಲೇ ಸಿಂಗಾಪುರ, ಮಲೇಶಿಯಾ, ದುಬೈ, ಮಾರಿಷಸ್, ಮ್ಯಾನ್ಮಾರ್,…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಪಂಚಾಯಿತಿಯ ಕೆರೆ ಅಭಿವೃದ್ಧಿ ಕಾಮಗಾರಿಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಶನಿವಾರ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ ಮಾತನಾಡಿದ ಅವರು, ಈ ಕೆರೆಯನ್ನು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ೨೦೨೪-೨೫ ನೇ ೪೭೦೨ ಕೆರೆಗಳ ಸುಧಾರಣೆ ಲೆಕ್ಕ ಶೀರ್ಷಿಕೆ ಅಡಿಯಲ್ಲಿ ಅಂದಾಜು ರೂ. ೪.೪೦ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಜೊತೆಗೆ ಜನರಿಗೆ ವಾಯು ವಿಹಾರ ಮಾಡುವ ಟ್ರ್ಯಾಕ್, ಮಕ್ಕಳಿಗೆ ಆಟಿಕೆ ಸಾಮಾನುಗಳು, ಜನರಿಗೆ ಅನುಕೂಲವಾಗುವ ಸರಳ ವ್ಯಾಯಾಮ ಸಾಮಾನುಗಳ ಅಳವಡಿಕೆ, ವೀಕ್ಷಣೆ ಮಂಟಪ, ಉದ್ಯಾನವನ ಸೇರಿದಂತೆ ಉತ್ತಮವಾದ ತಾಣವನ್ನಾಗಿ ರೂಪಿಸಲಾಗುವದು. ಈ ಕಾಮಗಾರಿಯನ್ನು ಗುಣಮಟ್ಟದಿಂದ ಮಾಡುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸಚಿವರು ಸೂಚಿಸಿದ ಅವರು, ಈಗಾಗಲೇ ಮನಗೂಳಿ ಪಟ್ಟಣದಲ್ಲಿ ಸಿಸಿ ರಸ್ತೆ ಕಾಮಗಾರಿ, ಸರ್ಕಾರಿ ಪ್ರಥಮ ದರ್ಜೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ವಾರ್ಡ್ ಸಂಖ್ಯೆ ೨೩ ಜೈನಾಪುರದಿಂದ ಟಕ್ಕಳಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ರಸ್ತೆಯನ್ನಾಗಿ ಸುಧಾರಣೆ ಮಾಡುವಂತೆ ಸಚಿವ ಶಿವಾನಂದ ಪಾಟೀಲರ ವಿಜಯಪುರದ ನಿವಾಸದಲ್ಲಿ ಶನಿವಾರ ಜೈನಾಪೂರದ ಬೀರಲಿಂಗೇಶ್ವರ ದೇವಸ್ಥಾನ ಕಮೀಟಿ, ವೀರಶೈವ ಲಿಂಗಾಯತ ಟ್ರಸ್ಟ್ ಉಪಾಧ್ಯಕ್ಷ ಚನ್ನಬಸಯ್ಯ ಹಿರೇಮಠ ಹಾಗೂ ಈಶ್ವರ ಹೂಗಾರ ಅವರು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಚನ್ನಬಸಯ್ಯ ಹಿರೇಮಠ ಅವರು ಜೈನಾಪೂರದಿಂದ ಟಕ್ಕಳಕಿ ಗ್ರಾಮಕ್ಕೆ ಕೇವಲ ೨.೫ ಕಿಮೀ ಅಂತರವಿದೆ. ಈ ರಸ್ತೆಯನ್ನು ಡಾಂಬರ್ ರಸ್ತೆಯ ಮಾಡುವ ಜೊತೆಗೆ ಈ ರಸ್ತೆಯಲ್ಲಿ ಬರುವ ಇಗಳಿ ಹಳ್ಳಕ್ಕೆ ಬ್ರಿಜ್ ಕಮ್ ಬಾಂದಾರ ನಿರ್ಮಿಸಿದರೆ ಜೈನಾಪುರ, ಟಕ್ಕಳಕಿ ಗ್ರಾಮದ ಜನರಿಗೆ ಅನುಕೂಲವಾಗುತ್ತದೆ. ಬಾಂದಾರ ನಿರ್ಮಾಣದಿಂದ ಅನೇಕ ರೈತ ಬಾಂಧವರಿಗೆ ತುಂಬಾ ನೆರವಾಗುವ ಜೊತೆಗೆ ರಸ್ತೆ ಸಂಪರ್ಕವಾಗುತ್ತದೆ ಎಂದು ಸಚಿವರ ಗಮನಕ್ಕೆ ತಂದಾಗ ಸಚಿವರು ಈ ಕಾಮಗಾರಿಗಳನ್ನು ಶೀಘ್ರವಾಗಿ ಮಾಡಿಸಿಕೊಡುವದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಮುತ್ತು ಗಣಿ, ಮಲ್ಲಪ್ಪ ಹಣಮಂತ ಶೆಟ್ಟೆಪ್ಪಗೋಳ, ಮುತ್ತಪ್ಪ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಇಂದಿನ ದಿನಮಾನಗಳಲ್ಲಿ ಜಗತ್ತಿನ ಜನ ಸಾಮಾಜಿಕ ಜಾಲತಾಣದ ಮೊಬೈಲ್ ಯುಗದಲ್ಲಿ ಇಡೀ ದಿನ ತಮ್ಮನ್ನು ತಾವು ಮುಳುಗಿ ಪ್ರಾಚೀನ ಸಂಸ್ಕೃತಿ ಆಚಾರ- ವಿಚಾರ ಆಧ್ಯಾತ್ಮಿಕತೆಯನ್ನು ಮರೆಯುತ್ತಿರುವದು ತುಂಬಾ ಕಳವಳಕಾರಿ ಸಂಗತಿ ಎಂದು ಶಿಕ್ಷಕ, ಸಾಹಿತಿ, ದಶರಥ ಕೋರಿ ತಿಳಿಸಿದರು.ಅವರು ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ಕಲಬುರ್ಗಿಯ ಶರಣಬಸಪ್ಪ ಅಪ್ಪನವರ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ಋಷಿಗಳ ದೇಶ ಆಧ್ಯಾತ್ಮಿಕತೆಯನ್ನು ಜಗತ್ತಿಗೆ ಪ್ರಸರಣ ಮಾಡಿದ ಪುಣ್ಯಭೂಮಿ. ಜಗತ್ತಿನ ಜನ ಓದು ಬರಹ ಕಲಿಯುವ ಮುನ್ನ ಭಾರತ ಗುರುವಾಗಿತ್ತು. ಇಂದಿನ ಮುಂದುವರೆದ ರಾಷ್ಟ್ರಗಳು ಈಗ ಕಂಡು ಹಿಡಿಯುತ್ತಿರುವ ಅನೇಕ ಸಂಶೋಧನೆಗಳ ಪೈಕಿ ಶೇಕಡಾ ೯೦% ರಷ್ಟು ಸಂಶೋಧನೆಗಳನ್ನು ಭಾರತ ಸಾವಿರಾರು ವರ್ಷಗಳ ಹಿಂದೆಯೇ ಕಂಡು ಹಿಡಿದು ಸಂಶೋಧನಾ ಕ್ಷೇತ್ರದ ಭೀಷ್ಮ ಪಿತಾಮಹ ಎನಿಸಿಕೊಂಡಿದೆ ಎಂದರು.ನ್ಯಾಯವಾದಿ, ಹಸಿರುಸೇನೆ ರೈತ ಸಂಘಟನೆ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಮಾತನಾಡಿ, ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿಯ ಕಡೆಗೆ ಒಲವು ತೋರದೆ ಮೋಬೈಲ್ ಗೀಳಿಗೆ ಬಿದ್ದು ಹಾಳಾಗುತ್ತಿದ್ದಾರೆ. ಅವರ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ಜಯಶ್ರೀ ರಾಜಶೇಖರ ಕೂಚಬಾಳ ಕರ್ನಾಟಕ ಅಂಡರ್ ೨೩ ಮಹಿಳಾ ಟಿ೨೦ ತಂಡಕ್ಕೆ ರಾಯಚೂರು ವಿಭಾಗದಿಂದ ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಶೀನ್ ಕ್ರಿಕೆಟ ಅಕಾಡೆಮಿಯಲ್ಲಿ ಕ್ರಿಕೆಟ್ ತರಬೇತಿ ಪಡೆದುಕೊಂಡು ಪ್ರಸ್ತುತ ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ೨೦೨೪-೨೫ ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಟಿ೨೦ ತಂಡದ ಅಂಡರ್ ೧೯ ಹಾಗೂ ಅಂಡರ್ ೨೩ ಎರಡು ವಿಭಾಗದಲ್ಲಿ ಸಂಭವನೀಯ ಆಟಗಾರ್ತಿಯಾಗಿ ವಿಶೇಷ ಸಾಧನೆಗೈದ ಕ್ರಿಕೆಟ್ ಕ್ರೀಡಾಪಟು ಜಯಶ್ರೀ ಕೂಚಬಾಳ ಅವರಿಗೆ ಫ್ಲೈ ಸ್ಪೋರ್ಟ್ಸ್ ಕ್ಲಬ್ ಸಿಂದಗಿ, ಕೊಹಿನೂರು ಕ್ರಿಕೆಟ್ ಕ್ಲಬ್ ವಿಜಯಪುರ, ಶಾಸಕ ಅಶೋಕ ಮನಗೂಳಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ಉಮೇಶ ಜೋಗೂರ, ನಾರಾಯಣ ಕುಲಕರ್ಣಿ, ಮುತ್ತು ಸೊನ್ನದ, ಶ್ರೀಕಾಂತ ಹೂಗಾರ, ಯಂಕನಗೌಡ ಪಾಟೀಲ, ರವಿ ದೇವರಮನಿ, ಗೊಲ್ಲಾಳಪ್ಪಗೌಡ, ಸಿದ್ದನಗೌಡ ಪಾಟೀಲ, ಆನಂದ ಶಾಬಾದಿ ಸಿದ್ದಲಿಂಗ ಕಿಣಗಿ…

Read More

ರಾಜ್ಯ ಸ್ವೀಪ್ ನೊಡೆಲ್ ಅಧಿಕಾರಿ ಪಿ. ಎಸ್. ವಸ್ತ್ರದ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮತದಾರರಲ್ಲಿ ಜಾಗೃತಿ ಮೂಡಿಸಲು ಮತದಾರರ ಸಾಕ್ಷರತಾ ಸಂಘಗಳು ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತ್ರದ ಅವರು ಸೂಚನೆ ನೀಡಿದ್ದಾರೆ.ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಚಟುವಟಿಕೆಗಳನ್ನು ಕೈಗೊಂಡಿರುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,ಶಾಲೆ ಹಾಗೂ ಕಾಲೇಜುಗಳಲ್ಲಿ ಯುವ ಮತದಾರರಿಗೆ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮುಂಬರುವ ಚುನಾವಣೆಯಲ್ಲಿ ಯುವ ಮತದಾರರ ಮತದಾನದ ಪ್ರಾಮುಖ್ಯತೆ ಕುರಿತು ಅವರನ್ನು ಪ್ರೇರೇಪಿಸುವುದು. ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಗಳನ್ನು ಕೈಗೊಳ್ಳುವುದು, ಚುನಾವಣಾ ಸಾಕ್ಷರತಾ ಕ್ಲಬ್(ಇ.ಎಲ್.ಸಿ)ಗಳಡಿ ವಿನೂತನ ಚಟುವಟಿಕೆಗಳ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು. ಮತದಾನದ ಹಕ್ಕುಗಳ ಬಗ್ಗೆ ಯುವ ಮತದಾರರಿಗೆ ಅರಿವು ಮೂಡಿಸಿ, ಯುವ ಮತದಾರರ ನೋಂದಣಿ ಮಾಡಿಸಬೇಕು ಎಂದು ಹೇಳಿದರು.ಈಗಾಗಲೇ ೧೭ ವರ್ಷ ೬…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲಾಖೆಯಿಂದ ಪ್ರಸಕ್ತ ೨೦೨೪-೨೫ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೨೫-೦೧-೨೦೨೫ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೨ ರಂದು ಬೆಳಿಗ್ಗೆ ೬ ಗಂಟೆಗೆ ವೃಕ್ಷೋತ್ಥಾನ ಪಾರಂಪರಿಕ ಓಟ-೨೦೨೪ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ನಡೆಯುವ ಕಾರ್ಯಕ್ರಮಕ್ಕೆ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಓಟಕ್ಕೆ ಚಾಲನೆ ಹಾಗೂ ಹಸಿರು ನಿಶಾನೆ ತೋರುವರು.ರವಿವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗುವ ವೃಕ್ಷಥಾನ್ ಸಮಾರಂಭವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ಸಂಸದರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

Read More

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ಜಗತ್ತಿನ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು.ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರ ವರೆಗೆ ಮತ್ತು ಇಂದಿನ ಯುವ ವೃತ್ತಿಪರ, ಪ್ರಾಮಾಣಿಕ ಮತ್ತು ಕೌಶಲ್ಯಯುತ ಯುವಕರು ದೇಶದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ನಮ್ಮ ದೇಶದಲ್ಲಿ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತಿರುವ ಪರಿಣಾಮ ಇಲ್ಲಿಗೆ ಹೂಡಿಕೆ ಮಾಡಲು ವಿದೇಶಿಗರೂ ಉಳಿದ ದೇಶಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಭಾರತ ಈಗ ಪ್ರತಿಯೊಂದು ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗುತ್ತಿದ್ದು, ಜಗತ್ತಿಗೆ ನಾನಾ ವಸ್ತುಗಳನ್ನು ಸರಬರಾಜು ಮಾಡುವಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿರುವ…

Read More