Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಮೆಗಾ ಮಾರುಕಟ್ಟೆ ಕಾಮಗಾರಿ ಪ್ರಾರಂಭಕ್ಕೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗುರವಾರ ಜಿಲ್ಲೆಯ ನಿಡಗುಂದಿ ಪಟ್ಟಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಎಸ್.ಎಫ್.ಸಿ. ವಿಶೇಷ ಅನುದಾನ ಯೋಜನೆಯಡಿಯಲ್ಲಿ ಮೆಗಾ ಮಾರುಕಟ್ಟೆ ನಿರ್ಮಾಣಕ್ಕೆಂದು ಕಾಯ್ದಿರಿಸಿದ ಜಾಗೆಯನ್ನು ಸ್ಥಾನಿಕವಾಗಿ ಪರಿಶೀಲನೆ ನಡೆಸಬೇಕು. ಕಾಯ್ದಿರಿಸಿದ ಜಾಗ ಅತಿಕ್ರಮಣವಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸುವಂತೆ ಪಟ್ಟಣ ಪಂಚಾಯತಿಯ ಅಧಿಕಾರಿಗಳು ಹಾಗೂ ನಿಡಗುಂದಿ ತಹಶೀಲ್ದಾರರಿಗೆ ಅವರು ಸೂಚನೆ ನೀಡಿದರು.ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಆರ್.ಎಸ್. ನಲ್ಲಿರುವ ಜವಾಹರ ನವೋದಲಯ ವಿದ್ಯಾಲಯಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳೊಂದಿಗೆ ಪಿ.ಎಂ.ಸಿ. ಸಭೆ ನಡೆಸಿ, ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ನಿಡಗುಂದಿ ಪಟ್ಟಣದ ಹೊಸ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಹಾಗೂ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿರುವ ಐತಿಹಾಸಿಕ ಗೋಲಗುಮ್ಮಟ ಸ್ಮಾರಕಕ್ಕೆ M/s.Renew Private Limitedಸಂಸ್ಥೆ ರವರು ಸಿ.ಎಸ್.ಆರ್ (ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ) ಅನುದಾನದಡಿಯಲ್ಲಿ ‘ಗೋಳಗುಮ್ಮಟ ಸ್ಮಾರಕಕ್ಕೆ ಸೋಲಾರ ವಿದ್ಯುತ ದೀಪಾಲಂಕಾರ” ಅಳವಡಿಸಲಾಗಿರುತ್ತದೆ.ಡಿ.೨೧ರಂದು ಸಂಜೆ ೬ ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಗೋಲಗುಮ್ಮಟಕ್ಕೆ ಸೋಲಾರ ವಿದ್ಯುತ್ ದೀಪಾಲಂಕಾರಕ್ಕೆ ಉದ್ಘಾಟನೆ ನೆರವೇರಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಹಗುರವಾಗಿ ಮಾತನಾಡಿದ ಕ್ರಮ ಖಂಡಿಸಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿ ಆವರಣಕ್ಕೆ ಶುಕ್ರವಾರ ಆಗಮಿಸಿದ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ಮಾತನಾಡಿದ ಮಾತುಗಳನ್ನು ಖಂಡಿಸಿದರು.ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಹುಯೋಗಿ ತಳ್ಳೋಳ್ಳಿ, ಪ್ರಭು ಅಂಬಲಗಿ ಮಾತನಾಡಿ, ಅಂಬೇಡ್ಕರ್ ಈ ದೇಶದ ಶೋಷಿತ ಸಮುದಾಯಗಳ ರಾಜಕೀಯ, ಸಾಮಾಜಿಕ, ಸ್ವಾತಂತ್ರö್ಯ, ಸಮಾನತೆಯ ಧ್ವನಿಯಾಗಿದ್ದಾರೆ. ಅವರ ಕುರಿತು ಮಾತನಾಡಿದ ಅಮಿತ ಶಾ ಕೂಡಲೇ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.ಪಟ್ಟಣ ಪಂಚಾಯಿತಿ ಸದಸ್ಯ ಉಮೇಶ ರೂಗಿ, ಬಸವರಾಜ ತಳಕೇರಿ, ಶಿವಾನಂದ ಇಂಗಳಗಿ, ಕಮಲಸಾಬ್ ಕಾಟಮನಳ್ಳಿ, ಸಾಯಬಣ್ಣ ದಳಪತಿ, ಪ್ರಶಾಂತ ದೊಡಮನಿ, ಸಿದ್ಧಾರ್ಥ ತಳಕೇರಿ, ಜಾನು ಗುಡಿಮನಿ, ರಾಘವೇಂದ್ರ ತಳವಾರ…

Read More

ಜಿಲ್ಲಾ ಕಾಂಗ್ರೇಸ್ ಕಛೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕರ್ತರು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಾಂಗ್ರೆಸ್ ಪಕ್ಷವು ಅಮಿತ್ ಶಾ ರವರ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೆ ತಮಗೆ ಬೇಕಾದಷ್ಟು ಭಾಗಶಃ ತುಣುಕನ್ನು ಬಳಸಿ, ಬೇರೆಯೇ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ವಿಸ್ತರಿಸಿ, ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿರುವದನ್ನು ಖಂಡಿಸಿ ಮತ್ತು ವಿಧಾನ ಪರಿಷತ್ ಸದಸ್ಯ ಸಿಟಿ ರವಿಯವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಕಾಂಗ್ರೇಸ್ ಕಛೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಮಾತನಾಡಿ, ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್, ಕರ್ನಾಟಕದಲ್ಲಿ ಇದೀಗ ಪರೋಕ್ಷ ತುರ್ತು ಪರಿಸ್ಥಿತಿ ಹೇರಲು ಹೊರಟಿದೆ. ಕಾಂಗ್ರೆಸ್ ಪಕ್ಷದ ಈ ಹತಾಶ ಮನೋಭಾವವನ್ನು ಬಿಜೆಪಿ ಖಂಡಿಸುತ್ತದೆ. ಇದು ಜನವಿರೋಧಿ ಮಾತ್ರವಲ್ಲ; ಪ್ರಜಾಪ್ರಭುತ್ವ ವಿರೋಧಿ ಕ್ರಮ. ‘ಪ್ರಜಾಪ್ರಭುತ್ವ ದೇಗುಲ’ವೆನಿಸಿರುವ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳೆದ ಸಾಕಷ್ಟು ವರ್ಷಗಳಿಂದ ಬಡವರಿಗೆ, ಅಂಗವಿಕಲರಿಗೆ ಸೇರಿದಂತೆ ವಿವಿಧ ಸಮಸ್ಯೆಯಿಂದ ಜೀವನ ಸಾಗಿಸುತ್ತಿರುವವರನ್ನು ಗುರುತಿಸಿ ವಿವಿಧ ಯೋಜನೆಗಳ ಮೂಲಕ ಸಹಾಯ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಟ್ರಸ್ಟ್ನ ವಾತ್ಸಲ್ಯ ಮನೆ ಯೋಜನೆಯಡಿ ಮನೆ ಹಂಚಿಕೆ ಮಾಡುವ ಕಾರ್ಯಕ್ರಮದಲ್ಲಿ ಫಲಾನುಭವಿಗೆ ಮನೆ ಹಂಚಿಕೆ ಮಾಡಿ ಅವರು ಮಾತನಾಡಿದರು.ಪ್ರತಿ ನಿತ್ಯ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ದೇಶದಲ್ಲಿಯೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ನಿರ್ಗತಿಕರಿಗೆ ಮನೆ ಕಟ್ಟಿ ಕೊಡುವ ಕಾರ್ಯ ಸಾಮಾನ್ಯವಾದದ್ದಲ್ಲ. ಬರುವ ದಿನಗಳಲ್ಲಿ ಬಡವರಿಗೆ ಇನ್ನಷ್ಟು ಹೆಚ್ಚಿನ ಸೇವೆ ನೀಡುವ ಮಟ್ಟಕ್ಕೆ ಸಂಸ್ಥೆ ಬೆಳೆಯಲಿ ಎಂದು ಆಶಿಸಿದರು.ಸಂಸ್ಥೆಯ ಯೋಜನಾಧಿಕಾರಿ ನಾಗೇಶ ಎನ್.ಪಿ ಮಾತನಾಡಿ ಬಡವರಿಗಾಗಿ ಜಿಲ್ಲೆಯಲ್ಲಿ ಒಟ್ಟು ೧೪೧ ಮನೆಗಳನ್ನು ಕಟ್ಟಿ ಹಸ್ತಾಂತರಿಸಿದ್ದೇವೆ ಎಂದರು.ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯ ಶ್ರೀಶೈಲ್ ದೊಡಮನಿ, ಮುಖಂಡ ಸಿದ್ದು ಹೆಬ್ಬಾಳ, ಸಂಸ್ಥೆಯ…

Read More

ವಿಜಯಪುರದಲ್ಲಿ ನಾಳೆ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ – ೨೦೨೪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ನಲ್ಲಿ 82 ವರ್ಷದ ತಂದೆ ಮತ್ತು ಅಮೇರಿಕಾದಲ್ಲಿ ನೆಲೆಸಿರುವ 44 ವರ್ಷದ ಮಗ ಪಾಲ್ಗೊಳ್ಳುವ ಮೂಲಕ ಈ ಬಾರಿಯ ಓಟಕ್ಕೆ ಹುಮ್ಮಸ್ಸು ನೀಡುತ್ತಿದ್ದಾರೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಮತ್ತು ಈಗ ಬೆಳಗಾವಿಯಲ್ಲಿ ವಾಸಿಸುತ್ತಿರುವ ಡಾ. ಎಸ್.ಕೆ.ಕುಲಕರ್ಣಿ (82) ಹಿರಿಯ ವಯಸ್ಸಿನಲ್ಲಿಯೂ 5 ಕಿ.ಮೀ ಓಟದಲ್ಲಿ ಭಾಗವಹಿಸುವ ಮೂಲಕ ಯುವಕರು ನಾಚುವಂತೆ ಮಾಡಿದ್ದಾರೆ. ಪಂಜಾಬಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿರುವ ಅವರು ಔಷಧ ವಿಜ್ಞಾನ ಶಾಸ್ತ್ರದಲ್ಲಿ ಹೆಸರು ಮಾಡಿದ್ದಾರೆ. ಮಗನಿಂದ ಪ್ರೇರಿತರಾಗಿರುವ ಇವರು ವೃಕ್ಷಥಾನ ಹೆರಿಟೇಜ್ ರನ್ ನಲ್ಲಿ ಭಾಗವಹಿಸುತ್ತಿರುವುದು ಗಮನಾರ್ಹವಾಗಿದೆ.ಇದೇ ವೇಳೆ ಅಮೇರಿಕಾದಲ್ಲಿ ನೆಲೆಸಿರುವ ಸೇತುಮಾದವ ಎಸ್. ಕುಲಕರ್ಣಿ ಕೂಡ 21 ಕಿ.ಮೀ ಓಟದಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ನಾನಾ ಮ್ಯಾರಥಾನಗಳಲ್ಲಿ ಓಡಿರುವ ಇವರು ಈ ಸಲ ತಂದೆಯ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಎಂ.ಇ.ಎಸ ಶಿಕ್ಷಣ ಸಂಸ್ಥೆ ಮತ್ತು ಚಡಚಣ ಪೋಲಿಸ ಠಾಣೆಯ ಸಂಯುಕ್ತ ಆಶ್ರಯದಲ್ಲಿನಗರದ ಎಂ.ಇ.ಎಸ್ ಶಾಲೆಯಲ್ಲಿ ಶುಕ್ರವಾರ ಅಪರಾಧ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಚಡಚಣ ಠಾಣೆಯ ಪೋಲಿಸ ಅಪರಾಧ ವಿಭಾಗದ ಪೋಲಿಸ ಸಬ್ ಇನ್‌ಸ್ಪೆಕ್ಟರ್ ಅಪನಾಯಕ ರವರು ಮಾತನಾಡಿ, ‘ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ’.ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಎಎಸ್ಐ ಶಿವಪುರ ಮತ್ತು ಪೋಲಿಸ ಸಿಬ್ಬಂದಿಯಾದ ವಿಜಯಕುಮಾರ ಬನಸೋಡೆ, ಸಿದ್ದು ಕಲ್ಯಾಣಶೆಟ್ಟಿ, ಹಾಗೂ ಎಂ.ಇ.ಎಸ್ ಶಾಲೆಯ ಮುಖ್ಯ ಗುರುಮಾತೆ ಜಿ.ಡಿ. ಗಚ್ಚಿನಕಟ್ಟಿ, ಎಂ.ಎಸ.ಬಿರಾದಾರ, ಕವಿತಾ ಮೇತ್ರಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಡಿ ಸಿ ಗಚ್ಚಿನಕಟ್ಟಿ , ಎಂ.ಎಸ್.ನಿವರಗಿ ಇದ್ದರು.

Read More

ಡಿಸೆಂಬರ್ 21 ಪ್ರಥಮ ವಿಶ್ವ ಧ್ಯಾನ ದಿನಾಚರಣೆ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರತಿನಿತ್ಯ ಧ್ಯಾನ ಮಾಡಬೇಕು ಧ್ಯಾನ ಮಾಡುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ವಿಶ್ರಾಂತಿ ದೊರೆಯುತ್ತದೆ. ದೇಹದ ದಣಿವಿಗೆ ವಿಶ್ರಾಂತಿ ಅಗತ್ಯವಿದ್ದಂತೆ ಮನಸ್ಸಿನ ಧಣಿವಿಗೆ ಧ್ಯಾನದ ಅಗತ್ಯವಿದೆ. ಒಬ್ಬ ವ್ಯಕ್ತಿಯು ತಾಂತ್ರಿಕವಾಗಿ ಶಕ್ತಿಯನ್ನು ಒಂದು ನಿರ್ದಿಷ್ಟ ವಸ್ತು, ಆಲೋಚನೆ ಇಲ್ಲವೇ ಚಟುವಟಿಕೆಯ ಮೇಲೆ ಕೇಂದ್ರೀಕರಿಸುವುದನ್ನು ಅಭ್ಯಸಿಸುವ ಏಕ ಮಾತ್ರ ವಿಧಾನ – ಗಮನ ಮತ್ತು ಜಾಗೃತಿಯನ್ನು ತರಬೇತಿ ಮಾಡಲು ಮತ್ತು ಮಾನಸಿಕವಾಗಿ ಸ್ಪಷ್ಟ ಮತ್ತು ಭಾವನಾತ್ಮಕವಾಗಿ ಶಾಂತ ಮತ್ತು ಸ್ಥಿರ ಸ್ಥಿತಿಯನ್ನು ಸಾಧಿಸಲು ಧ್ಯಾನ ಅತ್ಯವಶ್ಯಕ.ಧ್ಯಾನವನ್ನು ಹಲವಾರು ಧಾರ್ಮಿಕ ಸಂಪ್ರದಾಯಗಳಲ್ಲಿ ಕೂಡ ಅಭ್ಯಾಸ ಮಾಡಲಾಗುತ್ತದೆ. ಜಪ, ತಪ, ಭಜನೆ, ಅನುಷ್ಠಾನ ಮೌನಾನುಸಂಧಾನ ಮತ್ತು ನಾದಾನುಸಂಧಾನಗಳು ಕೂಡ ಧ್ಯಾನದ ಇನ್ನುಳಿದ ಮಾದರಿಗಳು. ಇಷ್ಟಲಿಂಗ ಪೂಜೆಯಲ್ಲಿಯೂ ಕೂಡ ಕರತಲದಲ್ಲಿ ಲಿಂಗವನ್ನು ಇರಿಸಿ ಪೂಜಿಸಿ ನಂತರ ಲಿಂಗಾನು ಸಂಧಾನದ ಮೂಲಕ ಧ್ಯಾನವನ್ನು…

Read More

ಡಾ. ಫ.ಗು.ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ IEEE-INNOVA-2024 ಕಾರ್ಯಕ್ರಮ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಹೆರಳವಾದ ಪ್ರಾಕೃತಿಕ ಸಂಪನ್ಮೂಲ ಮತ್ತು ಯುವ ಶಕ್ತಿಯ ಕಣಜವಾಗಿದ್ದು, ಇಲ್ಲಿನ ಯುವಕರು ಮಾತಿಗಿಂತ ಕಾಯಕದ ಮೂಲಕ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ IEEE-INNOVA-2024 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರು ಸಿಂಗಾಪುರ ಜೊತೆ ಆರೋಗ್ಯಯುತ ಸ್ಪರ್ಧೆ ಮಾಡುತ್ತಿದೆ. ರಾಜ್ಯ ಸರಕಾರ ಬೆಂಗಳೂರು ಹೊರತು ಪಡಿಸಿ ಬಿಯಾಂಡ್ ಬೆಂಗಳೂರು ಯೋಜನೆಯಂತೆ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಇತರ ಜಿಲ್ಲೆಗಳಿಗೂ ಆದ್ಯತೆ ನೀಡುತ್ತಿದೆ. ಉತ್ತರ ಕರ್ನಾಟಕದ ಯುವಕರು ಹೆಚ್ಚು ಪ್ರತಿಭಾವಂತರಾಗಿದ್ದು, ಶ್ರದ್ಧೆ, ಪ್ರಾಮಾಣಿಕತೆ ಹಾಗೂ ನಿಯತ್ತಿನಿಂದ ಕೆಲಸ ಮಾಡುತ್ತಾರೆ. ಅವರಿಗೆ ಆಂಗ್ಲಭಾಷೆಯ ಸಂವಹನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ, ಬೃಹತ್ ಉದ್ಯೋಗ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶವನ್ನು ಸಂವಿಧಾನದ ಚೌಕಟಿನಲ್ಲಿ ಭದ್ರವಾಗಿ ನಿಲ್ಲಿಸಿದ ಅಂಬೇಡ್ಕರ್ ಅವರನ್ನು ನೆನೆಯುವುದನ್ನು ಅಮಿತ್ ಶಾ ಟೀಕಿಸುತ್ತಾರೆಂದರೆ ಬಿಜೆಪಿಗರಲ್ಲಿ ಅಂಬೇಡ್ಕರ್ ಅವರ ಬಗ್ಗೆ ಎಷ್ಟೊಂದು ಗೌರವವಿದೆ ಎಂಬುದು ಅರ್ಥವಾಗುತ್ತದೆ. ಅವರು ಕೇಂದ್ರ ಸಚಿವರಾಗಿರಲು ಯೋಗ್ಯರಲ್ಲ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ವಿಜಯಪುರ ಜಿಲ್ಲಾ ಎಸ್ಸಿ ಘಟಕದ ಉಪಾಧ್ಯಕ್ಷೆ ಪ್ರಿಯಾಂಕ ಚೇತನ ತೋರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ನಮಗೆ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರೇ ನಿಜವಾದ ದೇವರು! ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ.-ಸೂರ್ಯ ಚಂದ್ರ ಇರುವರೆಗೂ ಬಾಬಾಸಾಹೇಬರ ಸ್ಮರಣೆ ಇರುತ್ತದೆ. ಅಮಿತ್ ಶಾ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು. ಅವರು ಸಂಸತ್ತಿನಲ್ಲಿ ಸಚಿವರಾಗಿರಲು ಯೋಗ್ಯರಲ್ಲ. ತಕ್ಷಣ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು. ಅಮಿತ್ ಶಾ ಅವರೇ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಭಿಕ್ಷೆಯಲ್ಲಿ ನೀವು ಕಾರ್ಯ ನಿರ್ವಹಿಸುತ್ತಿದ್ದೀರಿ ಅದನ್ನು ಮೊದಲು ಅರಿತುಕೊಂಡು ಅಮಿತ್ ಶಾ ಅವರು ತಮ್ಮ…

Read More