Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪರವಾನಗಿ ಇಲ್ಲದೇ ಅನಧಿಕೃತ ಮದ್ಯ ಮಾರಾಟಮಾಡುತ್ತಿದ್ದ ಕಿರಾಣಿ ಅಂಗಡಿಯ ಮೇಲೆ ದಾಳಿ ನಡೆಸಿದ ಪಿಎಸ್ಐ ಸಂಜಯ ತಿಪರೆಡ್ಡಿ ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಿದ್ದಲ್ಲದೇ, ಅನಧಿಕೃತ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ತಾಲೂಕಿನ ಕುಂಟೋಜಿ ಗ್ರಾಮದ ಸಂಗಮೇಶ ಕೋಳೂರ ಈತನ ಮೇಲೆ ದಾಳಿ ನಡೆಸಿದ್ದು, ೯೦ ಪೆಟ್ ನ ಒಟ್ಟು ೩೬ ವಿವಿಧ ಬ್ರ್ಯಾಂಡ್ ವಿಸ್ಕಿ ಪೌಚ್ಗಳು, ೧೮೦ಎಂ.ಎಲ್ ನ ೨ ಬಿಪಿ ವಿಸ್ಕಿ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ದ್ವಿತೀಯ ಪಿಯುನಲ್ಲಿ ವಿಜಯಪುರ ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ರಿಂದ ಸನ್ಮಾನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾದಾಗ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉನ್ನತ ಜೀವನ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ೨೦೨೬ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಗೆ ಕ್ರಮವಾಗಿ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ ಅವರು ಮಾತನಾಡಿದರು.ಈ ದಿಸೆಯಲ್ಲಿ ವಿದ್ಯಾರ್ಥಿಗಳು ಆಯಾ ಶೈಕ್ಷಣಿಕ ವರ್ಷಾರಂಭದಿಂದಲೇ ಆಸಕ್ತಿಯಿಂದ ಓದಲಾರಂಭಿಸಿದರೆ ಪರೀಕ್ಷೆ ಯಶಸ್ಸು ನೀರು ಕುಡಿದಷ್ಟೇ ಸುಲಭವಾಗುತ್ತದೆ ಎಂದರು.ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಠಿಣ ಅಧ್ಯಯನ ಶೈಲಿ ರೂಢಿಸಿಕೊಳ್ಳಬೇಕು. ವಿಷಯ ಕರಗತ ಮಾಡಿಕೊಂಡು ಮನನ ಮಾಡಿಕೊಳ್ಳುವ ಮೂಲಕ ತಮ್ಮನ್ನು ತಾವು ಮೌಲ್ಯಮಾಪನಕ್ಕೊಳಡಿಸಿ ಕೊಂಡರೆ, ಓದಿದ್ದೆಲ್ಲವೂ ಸ್ಮೃತಿಪಟಲದಲ್ಲಿ ಉಳಿಯುತ್ತದೆ ಎಂದರು.ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳಾದ ಡಾ. ಆನಂದ .ಕೆ. ಅವರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತ ಜನಗಣತಿ-೨೦೨೭ರ ಒಂದನೇ ಹಂತದಲ್ಲಿ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಏ.೧೬ ರಿಂದ ಮೇ ೧೫ ರವರೆಗೆ ೩೦ ದಿನಗಳ ಕಾಲ ನಡೆಯಲಿದ್ದು, ಗಣತಿದಾರರು ತಮ್ಮ ಮನೆಗಳಿಗೆ ಭೇಟಿ ನೀಡಿದ ವೇಳೆ ಅವರು ಕೇಳುವ ಪ್ರಶ್ನೆಗೆ ಉತ್ತರ ನೀಡುವ ಮೂಲಕ ಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ತಮ್ಮ ಮನೆಗೆ ಭೇಟಿ ನೀಡುವ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಸಹಕರಿಸುವ ಮೂಲಕ ಭಾರತ ಜನಗಣತಿ ಕಾರ್ಯ ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ.ಸ್ವಯಂ ಗಣತಿದಾರರಿಗೆ ಅಭಿನಂದನೆ ಜನಗಣತಿ-೨೦೨೭ ರ ಮೊದಲ ಹಂತದಲ್ಲಿ ಏ. ೧ರಿಂದ ೧೫ ರವರೆಗೆ ನಡೆದ ಸ್ವಯಂ ಗಣತಿ ಕಾರ್ಯದಲ್ಲಿ ಪಾಲ್ಗೊಂಡ ಜಿಲ್ಲೆಯ ೧೪೦೪೨ ನಾಗರಿಕರಿಗೆ ಇದೇ ವೇಳೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ನಿಂದ ಕೃಷ್ಣಪುರ ಸರ್ಕಲ್ ವರೆಗೆ ಅಂದಾಜು 3ವರೆ ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಾಗೂ 3.5 ಕೋಟಿ ವೆಚ್ಚದಲ್ಲಿ ಹ್ಯಾಂಡ್ ಪೋಸ್ಟ್ ವೃತ್ತ ಮತ್ತು ಕೊಲ್ಲೇಗೌಡನಹಳ್ಳಿ ವೃತ್ತ ಕಾಮಗಾರಿ ಗುರುವಾರದಿಂದ ಆರಂಭವಾಗಲಿದ್ದು, 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.ತಾಲೂಕಿನ ಹ್ಯಾಂಡ್ ಪೋಸ್ಟ್ ಸರ್ಕಲ್ ನಲ್ಲಿ ಒಟ್ಟು 7.5 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಶಾಸಕರಾದವರು ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಬಗ್ಗೆ ಕನಸು ಕಾಣಬೇಕಂತೆ. ಕ್ಷೇತ್ರದಲ್ಲಿ ರಸ್ತೆ ಹಾಗೂ ಸರ್ಕಲ್ ನಿರ್ಮಾಣ ನನ್ನ ಕನಸು ಕೂಡ ಹೌದು. ದಾವಣಗೆರೆ, ಮೈಸೂರು ಮತ್ತು ಧರ್ಮಸ್ಥಳ ಸೇರಿದಂತೆ ನಾಲ್ಕಾರು ಕಡೆ ಸರ್ಕಲ್ ನೋಡಿದ ಬಳಿಕ ನಮ್ಮ ಕ್ಷೇತ್ರದಲ್ಲೂ ಅದೇ ರೀತಿಯಲ್ಲಿ ಆರ್ ಪಿ ಸರ್ಕಲ್ ನಿರ್ಮಾಣ ಮಾಡಬೇಕೆಂಬ ಆಸೆಯಿತ್ತು. ಹೀಗಾಗಿ ಇಷ್ಟಪಟ್ಟು ರಸ್ತೆ ಹಾಗೂ ಎರಡು ಕಡೆ ಹೈಟೆಕ್…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಬಸವೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಡಶಾಲೆ, ಪ್ರಾಥಮಿಕ ಶಾಲೆ, ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ ಮಹಾನ್ ಮಾನವತಾವಾದಿ, ಭಾರತ ರತ್ನ, ಜ್ಞಾನ ಸೂರ್ಯ ಡಾ.ಬಿ ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೋಬ್ಬರು ಮೈಗೂಡಿಸಿಕೊಳ್ಳಬೇಕಿದೆ ಎಂದು ಹೆಳಿದರು.ಬಸವೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಿ ಜಿ ಚನಗೊಂಡ, ಪದವಿ ಕಾಲೇಜಿನ ಪ್ರಾಚಾರ್ಯ ಜಗದೀಶ ಕಾದಳ್ಳಿ, ಶಿವಾನಂದ ಹರಿಜನ್ ಮಾತನಾಡಿರು.ಕಾರ್ಯಕ್ರಮದಲ್ಲಿ ಎಸ್ ಬಿ ಪಾಟೀಲ, ನಿಂಗನಗೌಡ ಗುಂಡಕನಾಳ, ವಿಶ್ವನಾಥ ಸಿಂದಗಿ, ರವಿಕುಮಾರ ಗುಮಶೆಟ್ಟಿ, ಆರ್ ವ್ಹಿ ಕುಲಕರ್ಣಿ, ಐ ಎಂ ಝಳಕಿ ಸೇರಿದಂತೆ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಭೋದಕ,ಭೋದಕೇತರ ಸಿಬ್ಬಂದ್ದಿ ಹಾಜರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂದು ಕೃತಕ ಬುದ್ಧಿಮತ್ತೆ (ಎ.ಐ) ಇಡೀ ಜಗತ್ತಿನ ಎಲ್ಲ ಕ್ಷೇತ್ರಗಳನ್ನು ಆವರಿಸಿದ್ದು, ತಾಂತ್ರಿಕ ಜಗತ್ತು ಬಹಳಷ್ಟು ಬದಲಾವಣೆಗೆ ಒಡ್ಡಿಕೊಳ್ಳುತ್ತಿದೆ. ಆರೋಗ್ಯ ಸೇವೆಯಿಂದ ಹಿಡಿದು ಹಣಕಾಸು ವಲಯದವರೆಗೆ ತನ್ನ ಪ್ರಭಾವವನ್ನು ಬೀರುತ್ತಿದ್ದು, ಉದ್ಯೋಗಾಕಾಂಕ್ಷಿಗಳು ವಿನೂತನವಾದ ಕೌಶಲ್ಯಗಳನ್ನು ಹೊಂದಬೇಕಾಗಿರುವದು ಇಂದಿನ ಅಗತ್ಯತೆಯಾಗಿದೆ. ಸ್ಪರ್ಧಾತ್ಮಕತೆಯೊಂದಿಗೆ ಹೊಂದಿಕೊಳ್ಳಲು ತಾಂತ್ರಿಕ ವೃತ್ತಪರರು ವಿಶೇಷವಾಗಿ ಮಷಿನ್ ಲರ್ನಿಂಗ್, ಎ.ಐ.ಕಾನ್ಸೆಪ್ಟ್, ಕ್ಲೌಡ್ ಕಂಪ್ಯೂಟಿಂಗ್, ಸೈಬರ್ ಸೆಕ್ಯುರಿಟಿನಂತಹ ಮಲ್ಟಿಸ್ಕಿಲ್ಕಗಳನ್ನು ಪಡೆದುಕೊಳ್ಳಬೇಕಾಗಿದೆ. ಇತ್ತೀಚಿನ ವರದಿ ಪ್ರಕಾರ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಭಾರತ ವಿಶ್ವದ ಮೂರನೇಯ ಶ್ರೇಯಾಂಕ ಪಡೆದಿದೆ ಎಂದು ವಿಜಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ಅವರು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯ ಸಂಗಮೇಶ್ವರನಗರದ ಎಂ.ಕೆ.ಎಸ್. ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ವಿಚಾರಸಂಕೀರಣದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಕಾರ್ಪೋರೇಟ್ ಜಗತ್ತಿನಲ್ಲಿ ಉದ್ಯೋಗಿಗಳು ತಮ್ಮ ಸ್ವಂತ ಭಾವನೆಗಳನ್ನು ಅರ್ಥೈಸಿಕೊಂಡು ಇತರ ಸಹದ್ಯೋಗಿಗಳ ಶಕ್ತಿ-ಸಾಮರ್ಥ್ಯ ಗುರುತಿಸಿ, ಒತ್ತಡ ನಿವಾರಣೆ, ಪರಿಣಾಮಕಾರಿ ಸಂವಹನ, ಸಹಾನುಭೂತಿ ಮತ್ತು ಸವಾಲುಗಳನ್ನು ನಿಭಾಯಿಸಲು ಭಾವನಾತ್ಮಕ…
ವಿಜಯಪುರ ಜಿಲ್ಲಾಡಳಿತದಿಂದ ವಿಜೃಂಭಣೆಯ ಅಂಬೇಡ್ಕರ ಜಯಂತ್ಯುತ್ಸವ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ದ ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬ ಮಹಾಪುರುಷರು ಮೂಢನಂಬಿಕೆಯಂತಹ ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಚಿಂತನೆಗಳನ್ನು ಅರುಹಿದವರು. ಘನತೆಯಿಂದ ಬದುಕುವ ಚಿಂತನೆಗಳನ್ನು ಜಗತ್ತಿಗೆ ಸಾರಿದ್ದಾರೆ. ಹಾಗಾಗಿ ಮಹಾನ್ ಪುರುಷರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು. ಸಮಾನತೆ,ಸ್ವಾತಂತ್ರ್ಯ, ಅಭಿವ್ಯಕ್ತಿ, ಗೌರವಯುತ ಹಾಗೂ ಘನತೆ ಜೀವನ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತರತ್ನ ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಮಂಗಳವಾರ ಜರುಗಿದ ಡಾ. ಅಂಬೇಡ್ಕರವರ ೧೩೫ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕರ್ನಾಟಕ ಬ್ಯಾಂಕ್ ಬಬಲೇಶ್ವರ ಶಾಖೆಯ ವ್ಯವಸ್ಥಾಪಕ ನಟರಾಜ ಮಿಶಿ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಸಂವಿಧಾನದ ಪಿತಾಮಹರಾದ ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೆನಿಸಿದ್ದಾರೆ ಎಂದರು.ದಲಿತ ಸಮಾಜ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ, ಮಾತನಾಡಿದರು. ಇದೇ ಸಂದರ್ಭದಲ್ಲಿ ಮೊಹರೆ ಹಣಮಂತ್ರಾಯ ವೃತ್ತದಿಂದ ಪಟ್ಟಣ ಪಂಚಾಯಿತಿವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಜಿ. ಯಡ್ರಾಮಿ,…
ಸಿಂದಗಿ ಪಟ್ಟಣದ ವಿವಿಧೆಡೆ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿದ ಅದ್ಭುತ ಸಂದೇಶಗಳು, ಇಂದಿಗೂ ಸಹ ಜನಜನಿತವಾಗಿದ್ದು, ಸಂದೇಶಗಳನ್ನು ಪಾಲಿಸುವ ಪ್ರತಿ ಪ್ರಜೆಯೂ ಜೀವನದಲ್ಲಿ ಎಂದೂ ಕುಗ್ಗಲಾರ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತಕ್ಕೆ ಬಾಬಾಸಾಹೇಬರು ನೀಡಿದ ಕೊಡುಗೆ ಅನನ್ಯ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಬೇಕು. ಅವರ ತತ್ವ ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು ಎಂದರು.ಈ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ ಮತ್ತು ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ.…
