Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗದಿಂದ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2024-25ನೇ ಸಾಲಿನ ಹವಾಮಾನ ಆಧಾರಿತ ವಿಮಾ ಯೋಜನೆಯಡಿ ವಿಮೆ ಕಂತು ಪಾವತಿಸಿದ್ದರೂ ಪರಿಹಾರದಿಂದ ವಂಚಿತರಾಗಿರುವ ಜಿಲ್ಲೆಯ 931 ದ್ರಾಕ್ಷಿ ಬೆಳೆಗಾರರಿಗೆ ತಕ್ಷಣವೇ ವಿಮಾ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಗುರುಲಿಂಗಪ್ಪ ಅಂಗಡಿ ಅವರ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಪತ್ರ ಅರ್ಪಿಸಿತು. ಕಳೆದ ಸಾಲಿನಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹಾಗೂ ರೋಗಬಾಧೆಯಿಂದ ದ್ರಾಕ್ಷಿ ಬೆಳೆ ನಷ್ಟವಾಗಿತ್ತು. ಜಿಲ್ಲೆಯಲ್ಲಿ 15 ಸಾವಿರಕ್ಕೂ ಅಧಿಕ ಬೆಳೆಗಾರರು ವಿಮೆ ಮಾಡಿಸಿದ್ದರು. ಆದರೆ, ನಿಯಮಾನುಸಾರ ವಿಮೆ ಕಂತು ಪಾವತಿಸಿದ್ದರೂ, ನಕಲಿ ಕ್ಷೇತ್ರ ಎಂಬ ನೆಪವೊಡ್ಡಿ ವಿಮಾ ಕಂಪನಿಗಳು ಜಿಲ್ಲೆಯ 931 ಬೆಳೆಗಾರರಿಗೆ (ವಿಶೇಷವಾಗಿ ಬಬಲೇಶ್ವರ ತಾಲೂಕಿನ ರೈತರಿಗೆ) ಪರಿಹಾರ ನೀಡದೆ ಸತಾಯಿಸುತ್ತಿವೆ ಎಂದು ಮುಖಂಡರು ಆರೋಪಿಸಿದರು.ಈ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ವಿಮಾ ಕಂಪನಿಯೊಂದಿಗೆ ಮಾತನಾಡಿ, ಬಾಕಿ…
ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳಿಂದ ಪ್ರಕರಣ ದಾಖಲು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಫೇಸ್ ಬುಕ್ ನಲ್ಲಿ ಬಸವಣ್ಣನವರು ಮತ್ತು ಅಕ್ಕಮಹಾದೇವಿ ಅವರ ಬಗ್ಗೆ ಅತ್ಯಂತ ಅಶ್ಲೀಲ ಕೀಳುಮಟ್ಟದ ಪದಗಳನ್ನು ಬಳಸುವ ಮನೋರೋಗಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ವಿಜಯಪುರ ಮತ್ತು ಬೆಳಗಾವಿಯಲ್ಲಿ ಸೈಬರ್ ಕ್ರೈಂ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ದೂರು ಸಲ್ಲಿಸಿ ಪ್ರಕರಣ ದಾಖಲಿಸಿದ್ದಾರೆ.ಎಂ ರಮಾಕಾಂತ ಎಂಬವನು ಫೇಸ್ ಬುಕ್ ನಲ್ಲಿ ಬಸವಣ್ಣನವರು ಮತ್ತು ಅಕ್ಕಮಹಾದೇವಿ ಅವರ ಬಗ್ಗೆ ಅತ್ಯಂತ ಅಶ್ಲೀಲ ಕೀಳುಮಟ್ಟದ ಪದಗಳನ್ನು ಬಳಸಿದ ಕಾರಣ ಅವನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.ವಿಜಯಪುರದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷ ಸಿದ್ದಪ್ಪ ಪಡನಾಡ, ಡಾ.ಶಾರದಾಮಣಿ ಹುನಶಾಳ, ರತ್ನತ್ಕ ಬಿರಾದಾರ, ರೇವತಿ ಬಿರಾದಾರ, ಗಂಗಾಧರ ಸಾಲಕ್ಕಿ ಅವರು ಮತ್ತು ಬೆಳಗಾವಿಯಲ್ಲಿ ಡಾ ಶಶಿಕಾಂತ ಪಟ್ಟಣ ಮತ್ತು ಸುಧಾ ಪಾಟೀಲ ಇವರು…
ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಮೃತ ಯೋಜನೆಯಡಿ ಜಿಐಎಸ್ ಆಧಾರಿತ ಮಹಾ ಯೋಜನೆಯ ಕುರಿತು ನಗರಕ್ಕೆ ಹತ್ತಿರವಿರುವ ೯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದರಿಂದ ಗ್ರಾಮ ಪಂಚಾಯತಿಗಳು ಉನ್ನತೀಕರಣಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಹೇಳಿದರು.ಗುರುವಾರ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ಜಿಲಾ ಪಂಚಾಯತಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,ನಗರದ ಸ್ಥಳೀಯ ಯೋಜನಾ ಪ್ರದೇಶಕ್ಕೆ ಅಮೃತ ಯೋಜನೆಯಡಿ ಜಿ.ಐ.ಎಸ್ ಆಧಾರಿತ ಮಹಾಯೋಜನೆ-೨೦೪೧ (ಪ-೩), ಸರ್ಕಾರದಿಂದ ತಾತ್ಕಾಲಿಕ ಅನುಮೋದನೆಯಾಗಿರುವುದರಿಂದ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಬರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಲಹೆ,ಆಕ್ಷೇಪಣೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.ಕೇವಲ ೧೦ ವರ್ಷಗಳ ಹಿಂದೆ ನೋಡುವುದಾದರೆ ವಿಜಯಪುರ ನಗರವು ಪ್ರಸ್ತುತ ಬೃಹತ್ ಮಟ್ಟದಲ್ಲಿ…
ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಒಮ್ಮೆ ಆಕಾಶವಿಡೀ ಕಾರ್ಮೋಡದಿಂದ ಕಪ್ಪಿಟ್ಟುಕೊಂಡು ಜೋರಾಗಿ ಗಾಳಿಯು ಬೀಸಲಾರಂಭಿಸಿತು. ಮಳೆಯು ಜೋರಾಗಿ ಸುರಿಯಲಾರಂಭಿಸಿ ಊರಿನ ಹಳ್ಳಕೊಳ್ಳಗಳು, ನದಿ ತೊರೆಗಳು ತುಂಬಿ ಹರಿಯಲು ಪ್ರಾರಂಭಿಸಿದವು. ಇಡೀ ಊರಿಗೆ ಪ್ರಳಯವು ಆವರಿಸಿ ಕಾಡನ ಮರಗಿಡಗಳೆಲ್ಲವೂ ನದಿಯ ನೀರಿಗೆ ಕೊಚ್ಚಿಕೊಂಡು ಹೋಗಲಾರಂಭಿಸಿತು. ಅದೇ ರೀತಿ ಈ ಕೋತಿಯಿದ್ದ ಕಾಡೂ ಪ್ರಳಯಕ್ಕೆ ತುತ್ತಾಗಿ ಅಲ್ಲಿನ ಪ್ರಾಣಿಗಳೆಲ್ಲಾ ದಿಕ್ಕುಪಾಲಾಗಿ ಒಡಲಾರಂಭಿಸಿದವು. ಕೆಲವು ಪ್ರವಾಹದ ನೀರಿಗೆ ಕೊಚ್ಚಿಕೊಂಡು ಹೋದರೆ ಕೆಲವು ಅಲ್ಲೋ ಇಲ್ಲೋ ಓಡಲಾರಂಭಿಸಿದವು. ಅದೇ ರೀತಿ ಈ ತಾಯಿ ಕೋತಿಯೂ ಪ್ರವಾಹದ ನೀರಿಗೆ ಹೆದರಿ ತನ್ನ ಮರಿಯನ್ನು ಹಿಡಿದುಕೊಂಡು ಕಾಡಿನ ಅತ್ಯಂತ ದೊಡ್ಡದಾದ ಮರವನ್ನೇರಿ ಕುಳಿತಿತು. ಕಾಡು ಸಂಪೂರ್ಣವಾಗಿ ನೀರಿನಿಂದ ಆವೃತವಾಗಿ ಮರಗಳೆಲ್ಲವೂ ಉರುಳಲಾರಂಭಿಸಿದವು. ದೊಡ್ಡದಾದ ಮರವಾದ್ದರಿಂದ ತಾಯಿ ಕೋತಿಯು ಮಗುವನ್ನು ಅಪ್ಪಿಕೊಂಡು ಮರವನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಪ್ರವಾಹವು ಮತ್ತಷ್ಟು ಹೆಚ್ಚಾಗಿ ತಾಯಿ ಕೋತಿ ಕುಳಿತಿದ್ದ ಮರವು ಅರ್ಧದಷ್ಟು ಮುಳುಗಿದಾಗ…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪಾಲಕರು ತಮ್ಮ ಸಮಾನ ವಯಸ್ಕರೊಂದಿಗೆ ಮಾತನಾಡುವಾಗ ಮಕ್ಕಳೊಂದಿಗೆ ವಿಪರೀತ ಶಿಸ್ತಿನಿಂದ ಸ ಮತ್ತು ಕಠಿಣತೆಯಿಂದ ನಡೆದುಕೊಳ್ಳಬೇಕು ಎಂದು ಹೇಳುವುದನ್ನು ನಾವು ಬಹುತೇಕ ಕೇಳಿದ್ದೇವೆ. ಮಕ್ಕಳೊಂದಿಗೆ ಶಿಸ್ತಿನಿಂದ ನಡೆದುಕೊಳ್ಳಲು ನಾವು ಬಯಸಿದಾಗ ನಮ್ಮದೇ ಆದ ಕಿಲ ನಿಯಮಾವಳಿಗಳನ್ನು ಮಾಡಿಕೊಂಡು ಅವುಗಳನ್ನು ಮಕ್ಕಳು ಪಾಲಿಸಲಿ ಎಂದು ಅಪೇಕ್ಷಿಸುತ್ತೇವೆ, ಆಶಿಸ್ತುಕ್ರಮಗಳನ್ನು ಮಕ್ಕಳ ಮೇಲೆ ಒತ್ತಾಯಪೂರ್ವಕವಾಗಿ ಹೇರುತ್ತೇವೆ. ಅವುಗಳನ್ನು ಮಕ್ಕಳು ಪಾಲಿಸದೆ ಹೋದಾಗ ಅವರನ್ನು ದಂಡಿಸುತ್ತೇವೆ ಕಠಿಣವಾಗಿ ಮಾತನಾಡುತ್ತೇವೆ, ಆದರೆ ಅವರು ನಮ್ಮ ಮಕ್ಕಳು ನಮ್ಮದೇ ಪ್ರತಿರೂಪ. ಅತಿಯಾದ ಶಿಸ್ತು ಮಕ್ಕಳು ಪಾಲಕರ ವಿರುದ್ಧ ತಿರುಗಿ ಬೀಳುವಂತೆ ಮಾಡುತ್ತದೆ. ಅವರು ಪಾಲಕರ ಮಾತನ್ನು ಮೀರಬಹುದು. ವಿದ್ಯಾಭ್ಯಾಸದಲ್ಲಿ, ಆಟೋಟಗಳಲ್ಲಿ ಆಸಕ್ತಿಯನ್ನು ಕಳೆದುಕೊಳ್ಳಬಹುದು. ಆದರೆ ಇಲ್ಲಿ ಇನ್ನೊಂದು ಪದ ಇದೆ…. ಅದುವೇ ಬದ್ಧತೆ. ಬದ್ಧತೆ ಎಂದರೆ ಯಾವುದೇ ಒಂದು ವಿಷಯಕ್ಕೆ ದೃಢವಾಗಿ ಕಚ್ಚಿಕೊಂಡು ನಿಲ್ಲುವುದು, ನಿಲುವಿಗೆ ಬದ್ಧರಾಗುವುದು. ಇಂಥವರು ನನ್ನ ಜೊತೆಗಿದ್ದರೆ ನಾನು ಪರ್ವತವನ್ನೇ ಕಿತ್ತಿ ತರಬಲ್ಲೆ ಎಂಬ ಭಾವವನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಬಲೇಶ್ವರ ತಾಲೂಕಿನಲ್ಲಿ ಬರುವ ವಿದ್ಯುತ್ ಉಪ ಕೇಂದ್ರಗಳಿಂದ ವಿತರಣೆಯಾಗುವ ಎಲ್ಲಾ ೧೧ ಕೆ.ವ್ಹಿ ಮಾರ್ಗಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಮಾರ್ಚ್ ೧೫ರ ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆ ವರೆಗೆ ಬಬಲೇಶ್ವರ ತಾಲೂಕಿನ ೧೧ ಕೆ.ವ್ಹಿ ಪಂಪಸೆಟ್ ಮಾರ್ಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಬಲೇಶ್ವರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ಮುದ್ದೇಬಿಹಾಳ ವ್ಯಾಪ್ತಿಯಲ್ಲಿನ ಹಂದ್ರಾಳ ಗ್ರಾಮದ ೦೧ನೇ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಅಂಗನವಾಡಿ ಸಹಾಯಕಿಯರ ೦೧ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುದ್ದೇಬಿಹಾಳದ ಶಿಶು ಅಭಿವೃದ್ಧಿ ಯೋಜನೆಯ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಮಾರ್ಚ್ ೨೪ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೆಪಿಟಿಸಿಎಲ್ ಇವರ ಮೂಲಕ ೧೧೦ ಕೆ.ವ್ಹಿ ಬೇ ಗಳ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ, ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಮದಾಪುರ, ಬೆಳ್ಳುಬ್ಬಿ, ದೇವರಗೆಣ್ಣೂರ, ಶಿರಬೂರ, ಬಬಲೇಶ್ವರ, ಕಂಬಾಗಿ, ಕಾಖಂಡಕಿ ಹಾಗೂ ನಿಡೋಣಿ ೧೧೦ ಕೆ.ವ್ಹಿ ಸ್ವೀಕರಣಾ ಕೇಂದ್ರದಿಂದ ೩೩ಕೆವ್ಹಿ ಹಾಗೂ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಮಾರ್ಚ್ ೧೫ರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಕಾರಣ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಗಾದಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಜರಗುವ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ನಿಮಿತ್ಯ ಭ್ರಮರಾಂಬಾ ಹಾಗೂ ಮಲ್ಲಿಕಾರ್ಜುನ ಸ್ವಾಮಿಯ ದರ್ಶನಕ್ಕೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.ಕೇಂದ್ರ ಬಸ್ ನಿಲ್ದಾಣದಿಂದ, ಬಸವನಬಾಗೇವಾಡಿ ಮುದ್ದೆಬಿಹಾಳ, ಇಂಡಿ, ಸಿಂದಗಿ, ತಾಳಿಕೋಟೆ ಘಟಕಗಳಿಂದ ನೇರವಾಗಿ ಶ್ರೀಶೈಲಕ್ಕೆ ವಾಹನಗಳ ಸೌಕರ್ಯ ಒದಗಿಸಲಾಗಿರುತ್ತದೆ.ವಿಜಯಪುರ ವಿಭಾಗದಿಂದ ಸುಮಾರು ೨೫೦ ವಾಹನಗಳನ್ನು ಕಾರ್ಯಾಚರಣೆ ಮಾಡುತ್ತಿದ್ದು, ಶ್ರೀಶೈಲ ಮಲ್ಲಿಕಾರ್ಜುನ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ಇಂದು ವೀರರಾಣಿ ಕಿತ್ತೂರು ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣ ವಿಜಯಪುರದಲ್ಲಿ ವಿಭಾಗಿಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಹಾಗೂ ವಿಭಾಗದ ಅಧಿಕಾರಿಗಳು ಭಕ್ತಾದಿಗಳ ಸಮ್ಮುಖದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ವ್ಯವಸ್ಥೆಗೆ ಚಾಲನೆ ನೀಡಿರುತ್ತಾರೆ. ಭಕ್ತಾದಿಗಳು ಸಾರಿಗೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಂದಾಗಿ ರಂಗಭೂಮಿಯ ಶ್ರೇಷ್ಠ ನಾಟಕ ಕಲೆ ಕಣ್ಮರೆಯಾಗುತ್ತಿದೆ, ಅದನ್ನು ರಕ್ಷಿಸಿ ಬೆಳೆಸುವ ಅಗತ್ಯ ಇದೆ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.ಸಮೀಪದ ಬೆಕಿನಾಳ ಗ್ರಾಮದಲ್ಲಿ ಹುಬ್ಬಳ್ಳಿ ಶ್ರೀ ಸಿದ್ದಾರೂಢರ ಪುರಾಣ ಮಹಾಮಂಗಲೋತ್ಸವದ ಅಂಗವಾಗಿ ಹಮ್ಮಿಕೊಂಡ “ಅನ್ನ ಕೊಟ್ಟ ರೈತನಿಗೆ ಸಾವು ಕೊಟ್ಟ ಸರಕಾರ” ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೇವಲ ಮನೋರಂಜನೆಗಾಗಿ ನಾಟಕಗಳನ್ನು ನೋಡದೆ ಅದರಲ್ಲಿರುವ ಒಳ್ಳೆಯದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಈ ಗ್ರಾಮದ ರಂಗಭೂಮಿ ಹವ್ಯಾಸಿ ಕಲಾವಿದರೇ ಈ ನಾಟಕವನ್ನು ಮಾಡುತ್ತಿರುವುದು ಸಂತೋಷದ ವಿಷಯವಾಗಿದ್ದು ಅವರನ್ನು ಅಭಿನಂದಿಸುತ್ತೇನೆ ಎಂದರು.ಅಧ್ಯಕ್ಷತೆ ವಹಿಸಿದ ದೇವರ ಹಿಪ್ಪರಗಿ ಮತಕ್ಷೇತ್ರ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಅವರು ಮಾತನಾಡಿ ನಾಟಕ ಒಂದು ಪ್ರಭಾವ ಪೂರ್ಣವಾದ ಮಾಧ್ಯಮವಾಗಿದ್ದು ನಮ್ಮ ಬದುಕನ್ನು ಬದಲಿಸಬಲ್ಲ ಶಕ್ತಿ ಅದಕ್ಕಿದೆ ಆದ್ದರಿಂದ ನಾಟಕದ ಹಿಂದಿರುವ ತಿರಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿ ಎಂದರು.ಗುಂಡಕನಾಳ ಬ್ರಹನ್ಮಠದ ಶ್ರೀಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ…
