Author: editor.udayarashmi@gmail.com

ತಿಕೋಟಾ ತಾಲೂಕಾದ್ಯಂತ ವೈಯಕ್ತಿಕ ಶೌಚಾಲಯಗಳ ಕಾರ್ಯಾದೇಶ ವಿತರಣಾ ಅಭಿಯಾನ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಇಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರು ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯ ಜಿಲ್ಲಾ ನೂಡಲ್ ಅಧಿಕಾರಿಗಳಾದ ಬಿ.ಎಸ್.ರಾಠೋಡ ಸಾಹೇಬರು ತಾಲೂಕಿನ ಟಕ್ಕಳಕಿ ಮತ್ತು ಲೋಹಗಾಂವ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವೈಯಕ್ತಿಕ ಶೌಚಾಲಯಗಳ ಕಾರ್ಯಾದೇಶ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿದರು.ನಂತರ ಗ್ರಾಮದ ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಯೋಜನೆಯ ಕುರಿತು ಮಾಹಿತಿ ಒದಗಿಸುವದರ ಜೊತೆಗೆ ಫಲಾನುಭವಿಗಳಿಗೆ ಕಾರ್ಯಾದೇಶಗಳನ್ನು ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು: ನಮ್ಮ ಗ್ರಾಮದ ಹಿರಿಮೆಯ ಸಲುವಾಗಿ ನಾವೆಲ್ಲರೂ ಗ್ರಾಮಗಳ ಸ್ಚಚ್ಚತೆ ಹಾಗೂ ಆರೋಗ್ಯಕರ ಜೀವನ ನಡೆಸಲು ಪ್ರತಿದಿನ ಶೌಚಾಲಯ ಬಳಕೆ ಮಾಡುವುದು ಬಹಳ ಮುಖ್ಯವಾಗಿದೆ ಎಂದರು. ಪ್ರತಿ ಮನೆ ಮನೆಯಲ್ಲಿಯೂ ಶೌಚಾಲಯ ಕಟ್ಟಿಸಿಕೊಂಡು ಪ್ರತಿಯೊಬ್ಬರು ಶೌಚಾಲಯವನ್ನು ಬಳಸಬೇಕು, ಸ್ವಚ್ಛತೆಯಿಂದ ನಿರ್ವಹಣೆ ಮಾಡಬೇಕು. ಈ ಮೂಲಕ ಬಯಲು ಬರ್ಹಿದೆಸೆ ಮುಕ್ತ ಗ್ರಾಮವನ್ನಾಗಿ ಮಾಡಬೇಕೆಂದು ತಿಳಿಸಿದರು. ಬಯಲಿನಲ್ಲಿ ಶೌಚಕ್ಕೆ ಹೋಗುವುದರಿಂದ ಹಲವಾರು ರೋಗಗಳು ಹರಡಿ ಅನಾರೋಗ್ಯಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದಿನ ಒತ್ತಡದ ಜೀವನದಲ್ಲಿ ಜಾತ್ರಾ-ಉತ್ಸವದಂಗವಾಗಿ ಹಮ್ಮಿಕೊಳ್ಳುವ ಪ್ರವಚನ-ಪುರಾಣ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಮನಸ್ಸು ಆಧ್ಯಾತ್ಮಿಕ ಅಂಶಗಳ ಕಡೆಗೆ ಹೋಗುವದರಿಂದಾಗಿ ಮನಸ್ಸಿಗೆ ಪ್ರಶಾಂತತೆ ಸಿಗುವ ಜೊತೆಗೆ ಮನಸ್ಸನ್ನು ಶುದ್ಧಗೊಳಿಸುವದಕ್ಕೆ ಪೂರಕ ಎಂದು ರಾಷ್ಟ್ರೀಯ ಬಸವಸೈನ್ಯಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಜಾತ್ರಾಮಹೋತ್ಸವದಂಗವಾಗಿ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದ ಮಂಗಲ ಕಾರ್ಯಕ್ರಮದಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತ್ರೆ-ಉತ್ಸವಗಳು ಪ್ರತಿ ಕುಟುಂಬದ ಸದಸ್ಯರೊಂದಿಗೆ ಸಂಬಂಧಿಕರನ್ನು ಪರಸ್ಪರ ಭೇಟಿ ಮಾಡಲು ಸಹಕಾರಿಯಾಗಿವೆ. ಈ ಉತ್ಸವಗಳು ನಾಡಿನ ಸಂಸ್ಕ್ರತಿಯನ್ನು ಬಿಂಬಿಸುತ್ತವೆ. ನಿರಂತರವಾಗಿ ಇಂತಹ ಉತ್ಸವಗಳು ನಡೆಯುವಂತಾಗಬೇಕೆಂದರು.ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆಗೈದ ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಮಾತನಾಡಿ, ಗೌರಿ-ಶಂಕರ ದೇವಸ್ಥಾನದ ಜಾತ್ರಾಮಹೋತ್ಸವ ವರ್ಷದಿಂದ ವರ್ಷಕ್ಕೆ ಎಲ್ಲ ಜನರ ಸಹಕಾರದೊಂದಿಗೆ ಅದ್ದೂರಿಯಾಗಿ ನಡೆಯುತ್ತಿರುವದು ಶ್ಲಾಘನೀಯ. ಪ್ರವಚನ ಕಾರ್ಯಕ್ರಮದಲ್ಲಿ ನಿತ್ಯವೂ ಜ್ಞಾನ ದಾಸೋಹದ ಜೊತೆಗೆ ಅನ್ನದಾಸೋಹ ಹಮ್ಮಿಕೊಂಡಿರುವದು ಜಾತ್ರಾಮಹೋತ್ಸವದ ಸಮಿತಿಯ ಕಾರ್ಯ ಮೆಚ್ಚುವಂತಹದು. ಪ್ರತಿ ವರ್ಷ ನಿರಂತರವಾಗಿ ಇದೇ ರೀತಿಯಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಗೌರಿ-ಶಂಕರ ದೇವಸ್ಥಾನದ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ದ್ಯಾಮವ್ವನ ಸೋಗಿನ ಮೆರವಣಿಗೆಯು ಸಂಭ್ರಮದಿಂದ ಜರುಗಿತು.ಜಾತ್ರೆಯಂಗವಾಗಿ ಗೌರಿ-ಶಂಕರ ದೇವಸ್ಥಾನದಲ್ಲಿ ಕಳೆದ ಹತ್ತು ದಿನಗಳಿಂದ ಪ್ರತಿಷ್ಠಾಪಿಲಾಗಿರುವ ಗೌರಿ-ಶಿವ-ಗಂಗೆ-ನಂದಿ ಮೂರ್ತಿಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಗರ್ಭಗುಡಿಯಲ್ಲಿರುವ ನೂತನ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಮಹಿಳೆಯರು ತಮ್ಮ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ತೆರಳಿ ದೇವರಿಗೆ ನೈವೇದ್ಯ ಅರ್ಪಿಸಿದರು. ಮಹಿಳೆಯರು ಗೌರಿಗೆ ಉಡಿ ತುಂಬಿ ಧನ್ಯತಾ ಭಾವ ಅನುಭವಿಸಿದರು.ಮಧ್ಯಾನ್ಹ ಒಂದೂವರೆ ಗಂಟೆ ಸುಮಾರಿಗೆ ಪಟ್ಟಣದ ಮಾರುತಿ ದೇವಸ್ಥಾನದ ಮುಂಭಾಗದಿಂದ ಆರಂಭವಾದ ದ್ಯಾಮವ್ವನ ಸೋಗಿನ ಮೆರವಣಿಗೆಯು ಸಂಜೆ ಗೌರಿ-ಶಂಕರ ದೇವಸ್ಥಾನಕ್ಕೆ ತಲುಪಿತು. ಮೆರವಣಿಗೆಯುದ್ದಕ್ಕೂ ಡೊಳ್ಳಿನ ಮೇಳ, ಹಲಗೆ ನಾದಕ್ಕೆ ಜನರು ಹೆಜ್ಜೆ ಹಾಕಿ ಸಂಭ್ರಮಿಸಿದರು. ದ್ಯಾಮವ್ವನ ಸೋಗು ಸಾಗುವ ಮಾರ್ಗದ ಎರಡು ಬದಿಗಳಲ್ಲಿ ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯ ಜನರು ನಿಂತು ಮೆರವಣಿಗೆಯನ್ನು ವೀಕ್ಷಿಸಿದರು.ಈ ಸಲ ಬಸಯ್ಯ ಪೂಜಾರಿ(ಮಠಪತಿ) ದ್ಯಾಮವ್ವನ ಸೋಗು ಹಾಕಿದ್ದರು. ಇವರಿಗೆ ಹಣಮಂತ ಕಾಮನಕೇರಿ ಸಾಥ್ ನೀಡಿದರು. ದ್ಯಾಮವ್ವನ ಸೇವಕಿಯರಾಗಿ ಬಾಲಕರಾದ ನಿತೀಶ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ದೈನಂದಿನ ಜೀವನದಲ್ಲಿ ಪೌಷ್ಟಿಕ ಆಹಾರ ಸೇವನೆ ಬಹಳ ಮುಖ್ಯ. ನಿಯಮಿತವಾಗಿ ವ್ಯಾಯಾಮ ಮಾಡಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ರಕ್ತಹೀನತೆಯನ್ನು ಹೋಗಲಾಡಿಸಲು ಸಾಧ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸೋಮವಾರದಂದು ‘ರಕ್ತಹೀನತೆ ತಡೆಗಟ್ಟುವ ಜಾಗೃತಿ ಕಾರ್ಯಕ್ರಮ’ವನ್ನು ಉದ್ಧೇಶಿಸಿ ಮಾತನಾಡಿದರು.ತರಕಾರಿ, ಸೊಪ್ಪು, ರಾಗಿ, ಮೊಳಕೆ ಕಟ್ಟಿದ ಕಾಳುಗಳು, ಬೆಲ್ಲ, ನೆಲ್ಲಿಕಾಯಿ, ಕಿತ್ತಳೆ ಹಣ್ಣುಗಳಂತಹ ಆಹಾರ ಸೇವನೆಯಿಂದ ದೇಹಕ್ಕೆ ಹೇರಳವಾಗಿ ಕಬ್ಬಿಣಾಂಶ ದೊರೆಯುತ್ತದೆ. ಆಗ ರಕ್ತಹೀನತೆ ಮುಕ್ತವಾಗಿ ಆರೋಗ್ಯಯುತವಾಗಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಹಿರಿಯ ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ, ರಕ್ತಹೀನತೆಗೆ ಮುಖ್ಯ ಕಾರಣ ದೇಹದಲ್ಲಿ ಕಬ್ಬಿಣಾಂಶ ಕೊರತೆ. ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ ಆದಾಗನಿಶ್ಯಕ್ತಿ, ಸುಸ್ತು, ಜೀರ್ಣಶಕ್ತಿ ಮತ್ತು ಉಸಿರಾಟದಲ್ಲಿ ಸಮಸ್ಯೆ ಕಾಣುವುದು. ಹಾಗಾಗಿ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು.ಶಿಕ್ಷಕರಾದ ಎಸ್ ಪಿ ಪೂಜಾರಿ, ಅಲ್ಫಿಯಾ ಅಂಗಡಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಇದೇ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜಾಲವಾದ ಹಾಗೂ ಕೋರವಾರ ಗ್ರಾಮಗಳ ನಡುವಿನ ರಸ್ತೆ ತಗ್ಗು ತುಂಬುವ ತುಂಡು ಗುತ್ತಿಗೆ ಕಾಮಗಾರಿ ಬೇಕಾಬಿಟ್ಟಿಯಾಗಿ ಕೈಗೊಂಡಿದ್ದು ಉತ್ತಮವಾಗಿ ನಿರ್ವಹಿಸಲು ಕೋರವಾರ ಗ್ರಾಮಸ್ಥರು ಆಗ್ರಹಿಸಿದ್ದಾರೆ.ತಾಲ್ಲೂಕಿನ ಜಾಲವಾದ ಮತ್ತು ಕೋರವಾರ ಗ್ರಾಮಗಳ ನಡುವಿನ ೦೭ ಕಿ,ಮೀ ರಸ್ತೆ ತಗ್ಗು ದಿನ್ನೆಗಳಿಂದ ತುಂಬಿದ್ದು ಬಹುತೇಕ ಹಾಳಾಗಿದೆ. ಈಗ ತಗ್ಗುದಿನ್ನೆಗಳನ್ನು ತುಂಬಿ ರಸ್ತೆ ಸರಿಪಡಿಸುವ ಕಾಮಗಾರಿ ಆರಂಭಗೊAಡಿದೆ. ಆದರೆ ಕಾಮಗಾರಿ ಬೇಕಾಬಿಟ್ಟಿಯಾಗಿ ನಡೆಸಲಾಗುತ್ತಿದೆ. ಈಗಾಗಲೇ ಬಹುತೇಕ ರಸ್ತೆ ಪೂರ್ಣಗೊಳಿಸುವ ಹಂತದಲ್ಲಿದ್ದು ಕೇವಲ ದೊಡ್ಡ ಗುಂಡಿಗಳನ್ನು ಮಾತ್ರ ನೆಪ ಮಾತ್ರಕ್ಕೆ ಮುಚ್ಚಲಾಗಿದೆ. ರಸ್ತೆಯುದ್ದಕ್ಕೂ ಇರುವ ಹಲವು ಗುಂಡಿಗಳನ್ನು ಹಾಗೆಯೇ ಬಿಡಲಾಗಿದೆ. ಇನ್ನೂ ಈಗ ಮಾಡಿರುವ ತುಂಡು ಗುತ್ತಿಗೆ ಕಾಮಗಾರಿ ಕಳಪೆ ಮಟ್ಟದ್ದಾಗಿದೆ. ಹೀಗಾದರೆ ರಸ್ತೆ ಸರಿಪಡಿಸುವ ಅಗತ್ಯವಾದರೂ ಏನಿತ್ತು? ಎಂದು ಗ್ರಾಮದ ಸಂಗಯ್ಯ ಮೇಲಿನಮಠ, ಗುಂಡಪ್ಪಗೌಡ ಬೋರಾವತ್ ಪ್ರಶ್ನಿಸಿ ತಮ್ಮ ಆಕ್ರೋಶ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು.ದೇವರಹಿಪ್ಪರಗಿ ಪಟ್ಟಣದಿಂದ ದೇವೂರ, ಮಣೂರ, ಜಾಲವಾದ ಗ್ರಾಮಗಳವರೆಗೆ ರಸ್ತೆ ಅಷ್ಟೇನೂ ಹಾಳಾಗಿಲ್ಲ. ಅಲ್ಲಿ ಕೆಲವು ಕೆಲವು ಗುಂಡಿಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಆರೋಪಿಯ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ ಪ್ರಕರಣ ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋರಗಿ ಗ್ರಾಮದಲ್ಲಿ ಜರುಗಿದೆ.ಸಿಂದಗಿ ತಾಲ್ಲೂಕಿನ ಬೋರಗಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಜರುಗಿದೆ. ಗ್ರಾಮದ ಈರಣ್ಣ ರಟಗಲ್ ಎಂಬ ಕಾಂಗ್ರೆಸ್ ಮುಖಂಡ ತನ್ನ ಫೇಸ್‌ಬುಕ್ ಜಾಲತಾಣದಲ್ಲಿ ಪಂಚಮಸಾಲಿ ಸಮಾಜದ ೨ಎ ಮೀಸಲಾತಿ ಅಂಗವಾಗಿ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಲಾಠಿ ಚಾರ್ಜ್ ಮಾಡಿಸಿದ ಮುಖ್ಯಮಂತ್ರಿ ಎಂಬ ಹೇಳಿಕೆಯೊಂದಿಗೆ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಭಾಷೆಯನ್ನು ಬಳಸಿ ಪೋಸ್ಟ್ ಮಾಡಿದ್ದು, ಇದನ್ನು ಖಂಡಿಸಿ ಬೋರಗಿ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಈರಣ್ಣ ರಟಗಲ್ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಆರೋಪಿಯನ್ನು ಗಡಿಪಾರು ಮಾಡಲು ಒತ್ತಾಯಿಸಿ ಗ್ರಾಮದಲ್ಲಿ ಪ್ರತಿಭಟನೆ ಕೈಗೊಂಡರು.ಪ್ರತಿಭಟನೆ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೆ ಮುಂದುವರೆದ…

Read More

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳು ಪ್ರಜಾಪ್ರಭುತ್ವದ ತಳಹದಿಯಾಗಿವೆ. ಪ್ರಜಾಪಭುತ್ವ ಯಶಸ್ವಿಗೆ ಪ್ರಬುದ್ಧ ಹಾಗೂ ಜಾಗರೂಕ ಮತದಾರರಿಂದಲೇ ಸಾಧ್ಯ, ಪ್ರೌಢ ಹಾಗೂ ಪದವಿ ಪೂರ್ವ ಹಂತದಿಂದಲೇ ಮತದಾನದ ಮಹತ್ವ ಹಾಗೂ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿ ಈ ಕುರಿತು ಅರಿವು ಮೂಡಿಸಲು ಪ್ರಬಂಧ, ಚಿತ್ರಕಲೆ, ರಸಪ್ರಶ್ನೆಯಂತಹ ಅನೇಕ ಸ್ಫರ್ಧೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಬಿ. ಎಸ್. ರಾಠೋಡ ಅಭಿಪ್ರಾಯಪಟ್ಟರು.ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಬಾಲಕಿಯಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಶಾರದಾ ಸಭಾ ಭವನದಲ್ಲಿ ಇತ್ತಿಚಿಗೆ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮತದಾನ ಜಾಗೃತಿಗಾಗಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಕ್ಕಳಲ್ಲಿ ಕುತೂಹಲ ಕೆರಳಿಸುವ, ಅವರು ಏಕಾಗ್ರತೆಯಿಂದ ನೋಡುವ, ಮಾನವೀಯ ಮೌಲ್ಯಗಳನ್ನು ಬೀರುವಂತಹ ಅಂಶಗಳು ಮಕ್ಕಳ ಸಾಹಿತ್ಯದಲ್ಲಿರಬೇಕು. ಈ ನಿಟ್ಟಿನಲ್ಲಿ ಇಂದು ಬಿಡುಗಡೆಗೊಂಡ ಇಂದುಮತಿ ಲಮಾಣಿಯವರ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಒಳಗೊಂಡಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಸಾಹಿತಿ ಜಂಬುನಾಥ ಕಂಚ್ಯಾಣಿ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ವಿಜಯಪುರದ ಗೋರಬಾಯಿ ಟೋಳಿ ಮಹಿಳಾ ಸಮೂಹ ಸಂಸ್ಥೆಯ ಸಹಯೋಗದಲ್ಲಿ ದಿ.ಶಂಕರ ಡಾಕಪ್ಪ ಲಮಾಣಿ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರಧಾನ ಮತ್ತು ಇಂದುಮತಿ ಲಮಾಣಿಯವರ ಕಾಡಿನ ಕರಡಿ ನಾಡಿಗೆ ಬಂತು ಶಿಶು ಕಥಾ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಬುದ್ಧಿಮಟ್ಟವನ್ನು ವಿಕಾಸಗೊಳಿಸುವ ಶಕ್ತಿ ಸಾಮರ್ಥ್ಯ ಮಕ್ಕಳ ಸಾಹಿತ್ಯದಲ್ಲಿರಬೇಕು. ಮಕ್ಕಳ ಒಡನಾಡಿಗಳು, ಅವರ ಪ್ರೀತಿ ವಿಶ್ವಾಸಗಳಿಸಿದ್ದರೆ ಮಾತ್ರ ಅಂತಹವರಿಂದ ಉತ್ತಮ ಮಕ್ಕಳ ಸಾಹಿತ್ಯ ಹೊರಬರುತ್ತದೆ ಎಂದರು.ಗ್ರಾಮೀಣ ಭಾಗದಲ್ಲಿ ಜನಿಸಿದ ಇಂದುಮತಿ ಲಮಾಣಿ ಅವರು ಹಲವಾರು…

Read More

ವೀಣಾಂತರಂಗ – ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿ – ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಈ ಜಗತ್ತಿನಲ್ಲಿ ಹೆಣ್ಣು ಮಕ್ಕಳಿಗೆ ಅವರು ಯಾರು, ಅವರು ಹೇಗಿರಬೇಕು, ಅವರು ಹೇಗೆ ಬದುಕಬೇಕು ಎಂಬುದನ್ನು ನಿರಂತರವಾಗಿ ಭೋದಿಸಲಾಗುತ್ತದೆ. ಹೆಣ್ಣು ಮಕ್ಕಳನ್ನು ಅವರಿರುವಂತೆಯೇ ಸ್ವೀಕರಿಸುವ ಮನಸ್ಥಿತಿಯನ್ನು ನಮ್ಮ ಸಮಾಜ ಬೆಳೆಸಿಕೊಳ್ಳಬೇಕು. ಮನೋ ದೈಹಿಕವಾಗಿ ಹೆಣ್ಣುಮಕ್ಕಳನ್ನು ಗಟ್ಟಿಗಿತ್ತಿಯರನ್ನಾಗಿ ಬೆಳೆಸುವ, ತಮ್ಮ ಬದುಕಿನ ನಿರ್ಧಾರಗಳನ್ನು ತಾವೇ ಕೈಗೊಳ್ಳುವ ಸಾಮರ್ಥ್ಯವನ್ನು ಹೊಂದುವಂತೆ ಪ್ರಸ್ತುತ ದಿನಮಾನದ ಅವಶ್ಯಕತೆಯಾಗಿದೆ.ಬದ್ಧತೆಯ ಜೊತೆ ಜೊತೆಗೆ ಧೈರ್ಯ, ಆತ್ಮವಿಶ್ವಾಸ ಭಾವನಾತ್ಮಕ ಜಾಣ್ಮೆ, ತಾಳ್ಮೆ ಮತ್ತು ತಮ್ಮ ನಿರ್ಧಾರಗಳಲ್ಲಿ ಸ್ಪಷ್ಟತೆಯನ್ನು ಹೊಂದಿದ್ದು ಜಗತ್ತನ್ನು ಎದುರಿಸುವ ಛಾತಿಯನ್ನು ಹೆಣ್ಣು ಮಕ್ಕಳಲ್ಲಿ ಬೆಳೆಸಬೇಕಾಗಿದೆ. ಪ್ರಾಚೀನ ಕಾಲದಿಂದಲೂ ಹೆಣ್ಣು ಮಕ್ಕಳು ತಾಳ್ಮೆ, ಕೌಟುಂಬಿಕ ಪ್ರೀತಿ, ಶ್ರದ್ಧೆಯನ್ನು ಹೊಂದಿದ್ದು ಸಮಯ ಬಂದಾಗ ಧೈರ್ಯ, ಸಾಹಸ ಮತ್ತು ದಿಟ್ಟತನದ ಪ್ರತೀಕವಾಗಿ ಬೆಳೆದಿದ್ದಾರೆ. ಹೆಣ್ಣುಮಕ್ಕಳನ್ನು ಕುಟುಂಬದ ಮರ್ಯಾದೆಯನ್ನು ಕಾಪಾಡುವ ಹೆಸರಿನಲ್ಲಿ ಹತ್ತಿಕ್ಕಲಾಗುತ್ತಿರುವ ಇಂದಿನ ದಿನಮಾನಗಳಲ್ಲಿ ನಮ್ಮ ಸಂಸ್ಕೃತಿಯ ಉಳಿಯುವಿಕೆಗೆ ಅಗತ್ಯವಾದ ಮೌಲ್ಯಗಳು ಮತ್ತು ಸಾಮಾಜಿಕ ಸಂಬಂಧಗಳನ್ನು ಸರಿಪಡಿಸುವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಾಸಕ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹಾಗೂ ಸಿದ್ದಸಿರಿ ಆಡಳಿತ ಮಂಡಳಿಯ ನಿರ್ಣಯದಂತೆ, ನಗರದಲ್ಲಿ ಇದೇ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷೋತ್ಥಾನ್ ಹೆರಿಟೇಜ್ ರನ್-2024ಕ್ಕೆ ಸಿದ್ಧಸಿರಿ ಸೌಹಾರ್ದ್ ಸಹಕಾರಿ ವತಿಯಿಂದ ರೂ.10 ಲಕ್ಷ ದೇಣಿಗೆಯ ಚೆಕ್ ನ್ನು ಸೋಮವಾರ ಸಹಕಾರಿಯ ನಿರ್ದೇಶಕಿ ಶೈಲಜಾ ಪಾಟೀಲ ಯತ್ನಾಳ ರವರು ವೃಕ್ಷೋತ್ಥಾನ್ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.ನಂತರ ಮಾತನಾಡಿದ ಅವರು, ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಜಿಲ್ಲೆ ಹಾಗೂ ನಗರ ಮತಕ್ಷೇತ್ರದಲ್ಲಿ ಅರಣ್ಯ ವೃದ್ಧಿಗಾಗಿ ಹಾಗೂ ಸಾಮಾಜಿಕ, ಧಾರ್ಮಿಕ ಕಾರ್ಯಗಳಿಗೆ ನಿರಂತರವಾಗಿ ವಿವಿಧ ರೀತಿಯಲ್ಲಿ ಸಹಾಯ ಸಹಕಾರ ನಡೆಯುತ್ತಲೇ ಇದೆ. ಕಳೆದ ಜುಲೈ ತಿಂಗಳಲ್ಲಿ ವಿಜಯಪುರ ನಗರ ಮತಕ್ಷೇತ್ರದಲ್ಲಿ ಸಸಿಗಳನ್ನು ಬೆಳೆಸಲು ಹಾಗೂ ಸಂರಕ್ಷಣೆಗಾಗಿ ರೂ.10 ಲಕ್ಷ, ಅದಕ್ಕಿಂತ ಮೊದಲು ಟ್ರೀಗಾರ್ಡ್ ವ್ಯವಸ್ಥೆ ಕಲ್ಪಿಸಲು ರೂ.10 ಲಕ್ಷ ಜಿಲ್ಲಾಡಳಿತಕ್ಕೆ ನೀಡಲಾಗಿತ್ತು. ಅದೇ ರೀತಿ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಪ್ರವಾಸೋದ್ಯಮ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ…

Read More