Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಜಿಲ್ಲೆಯ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅದನ್ನು ಕಲ್ಬುರ್ಗಿ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.ರಾಜ್ಯ ಸರಕಾರದ ಆದೇಶ ಸಂಖ್ಯೆ ಮಮ ಇ 154 ಐಸಿಡಿ 2020 ಮತ್ತು 03-12-2022 ರ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿ ಕಡತ ಅನುಮೋದನೆಯಂತೆ ಸಮ:ಉನಿವಿ/ಮಮ‌ಅಇ/ಅಂ.ಕಾ.ಕ/ಅಂ.ಸ/ ನೇಮಕಾತಿ/2024/25 ರ, ದಿನಾಂಕ 09/10/2024 ರಂದುಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಒಟ್ಟು ಅಂಗನವಾಡಿ ಕಾರ್ಯಕರ್ತೆ 313 ಸಹಾಯಕಿ 857 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಆದರೇ ಇಂಡಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ 67 ಹುದ್ದೆ ಅದರಲ್ಲಿ ಪರಿಶಿಷ್ಟ ಪಂಗಡಕ್ಕೆ ಕೇವಲ 1 ಹುದ್ದೆ ಮೀಸಲಾತಿ ನೀಡಿದ್ದು ಸರಕಾರದ ಮಾರ್ಗ ಸೂಚಿಪಾಲನೆಯಾಗಿಲ್ಲ. ಸರಕಾರದ ಆದೇಶ ದಿನಾಂಕ 28/12/2022 ರ ಸುತೋಲೇ ಪ್ರಕಾರ ರಾಜ್ಯದಲ್ಲಿ SC ಗೆ 17%…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದರು.ಮುದ್ದೇಬಿಹಾಳ: ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ಶನಿವಾರ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು. ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಒಟ್ಟು ೭೬೩೧ ಬಾಕಿ ಇರುವ ಪ್ರಕರಣಗಳಲ್ಲಿ ೨೫೮೩ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ಒಟ್ಟು ೨೦೨೧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.ಅಪರಾಧ ಪ್ರಕರಣಗಳು, ಎಂವಿಸಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ ಗಳು, ಮೆಂಟೇನೆನ್ಸ್ ಪ್ರಕರಣಗಳು, ಪಾಲು ವಾಟ್ನಿ ದಾವೆಗಳು, ಎಲ್.ಎ.ಸಿ ಇಪಿ ಪ್ರಕರಣಗಳು, ಎಮ್.ವಿ.ಸಿ ಇಪಿ ಪ್ರಕರಣಗಳು, ಅಪರಾಧ ದಂಡ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಯಿತು. ಮತ್ತು ಪೂರ್ವದಾವೆ ಪ್ರಕರಣಗಳಲ್ಲಿ, ಟ್ರಾಫಿಕ್ ಚಲನ್ ಪ್ರಕರಣಗಳು, ಕಂದಾಯ ಇಲಾಖೆಯ ಕಂದಾಯ ಅದಾಲತ್ ಪ್ರಕರಣಗಳು, ಹಾಗೂ ಬ್ಯಾಂಕಿನ ಪ್ರಕರಣಗಳು ಒಟ್ಟು ಸೇರಿ.೧೯೪೪ ಪ್ರಕರಣಗಳಲ್ಲಿ ೫೮೮ ಪ್ರಕರಣಗಳು ರಾಜಿ…

Read More

ವಿಜಯಪುರದಲ್ಲಿ ಸಿದ್ದೇಶ್ವರ ಸಂಕ್ರಮಣ ಜಾತ್ರೆ ಪೂರ್ವಭಾವಿ ಸಭೆ : ಶಾಸಕ ಯತ್ನಾಳ ಘೋಷಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಗಾದಿಗೆ ಸಿದ್ದೇಶ್ವರ ಸಂಸ್ಥೆಯಿಂದ ನಿರಂತರ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು ಎಂದು ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಘೋಷಿಸಿದರು.ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನದಲ್ಲಿ ರವಿವಾರ ಶ್ರೀ ಸಿದ್ದೇಶ್ವರ ಸಂಸ್ಥೆ ಸಂಕ್ರಮಣ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನವನ್ನು ಹಿಂದೂಗಳ ಹೊಸ ವರ್ಷ ಇದೇ ಯುಗಾದಿ ದಿನ ಲೋಕಾರ್ಪಣೆ ಗೊಳಿಸಲಾಗುತ್ತಿದ್ದು, ಅಂದೇ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು. ಇದರಿಂದ ಪಾದಯಾತ್ರಿಗಳಿಗೆ, ಶೈಕ್ಷಣಿಕ ಪ್ರವಾಸಕ್ಕೆ ಬರುವ ಮಕ್ಕಳಿಗೆ, ಬೇರೆ ಬೇರೆ ಊರುಗಳಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಶಿವಾನುಭವ ಸಮುದಾಯ ಭವನದ ಮೇಲೆ ಯಾತ್ರಿ ನಿವಾಸ ಕೂಡ ಆರಂಭಿಸಲಾಗುವುದು ಎಂದು ತಿಳಿಸಿದರು.ದಾನಿಗಳು ಮತ್ತು ಪ್ರಾಮಾಣಿಕ ಆಡಳಿತ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿಯಲ್ಲಿ ಮೂರು ಶ್ರೀಗಂಧ ಮರವನ್ನು ಕತ್ತರಿಸಿದ ಘಟನೆ ಭಾನುವಾರ ಜರುಗಿದೆ.ಭಾನುವಾರ ನಸುಕಿನ ಜಾವ ಇಲ್ಲಿಯ ರಾಕ್ ಉದ್ಯಾನದಲ್ಲಿ ಎರಡು ಹಾಗೂ ತೋಟಗಾರಿಕೆಯ ನರ್ಸರಿಯಲ್ಲಿ ಒಂದು ಸೇರಿ ಮೂರು ಗಿಡಗಳನ್ನು ಕಳ್ಳರು ಕತ್ತರಿಸಿದ್ದಾರೆ. ಆದರೆ ಅವುಗಳನ್ನು ಒಯ್ಯಲು ಸಾಧ್ಯವಾಗದೇ ಅಲ್ಲಿಯೆ ಬಿಟ್ಟು ಹೋಗಿದ್ದಾರೆ.ಕರ್ನಾಟಕವನ್ನು ಗಂಧದ ನಾಡು ಚೆಂದದ ಬೀಡು ಎಂದೆಲ್ಲಾ ಕವಿಗಳು ವರ್ಣಿಸಿದ್ದಾರೆ. ಆದರೆ ಈ ಗಂಧದ ಬೀಡಿನಲ್ಲಿ ಶ್ರೀಗಂಧದ ಮರಗಳಿಗೆ ರಕ್ಷಣೆ ಇಲ್ಲದಾಗಿದೆ.ಇಲ್ಲಿನ ಆಲಮಟ್ಟಿ ರಾಕ್ ಉದ್ಯಾನ ವನದಲ್ಲಿ ಇರುವ ಮಂಗ ವಲಯ ಪಾರ್ಕ್ನಲ್ಲಿ ನಿನ್ನೆಯ ದಿನ ರಾತ್ರಿ ಸುಮಾರು ೪ ಗಂಟೆಗೆ ಶ್ರೀಗಂಧ ಕಳ್ಳರು ಎರಡು ಶ್ರೀಗಂಧ ಮರವನ್ನು ಕತ್ತರಿಸಿ ಸಾಗಿಸುವ ಸಮಯದಲ್ಲಿ ರಾತ್ರಿ ಕಾವುಲುಗಾರ ಕಣ್ಣಿಗೆ ಬಿದ್ದುದರಿಂದ ಪರಾರಿ ಆಗಿ ಓಡಿ ಹೋಗಿರುವ ಘಟನೆ ಆಲಮಟ್ಟಿ ರಾಕ್ ಉದ್ಯಾನವನದ ಮಂಗ ವಲಯ ಪಾರ್ಕ್ನಲ್ಲಿ ನಡೆದಿದೆ.ರಾತ್ರಿ ಕಾವುಲುಗಾರರು ಅಧಿಕಾರಿಗಳಿಗೆ ಪೋನ್ ಮಾಡಿ ತಿಳಿಸಿದಾಗ ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಬೇಟಿ ನೀಡಿ ಉದ್ಯಾನವನದ ಪಕ್ಕದಲ್ಲಿ ಪಾರೀಸ್ಟ್…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಒಳ ಮಿಸಲಾತಿ ವರ್ಗೀಕರಣದ ಕುರಿತು ನ್ಯಾ.ಎ.ಜೆ. ಸದಾಶಿವ ವರದಿಯ ವಿಷಯವಾಗಿ ಅಧಿವೇಶನದಲ್ಲಿ ಮಾದಿಗ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಧ್ವನಿ ಎತ್ತಬೇಕೆಂದು ಶಾಸಕ ಅಶೋಕ ಮನಗೂಳಿ ಅವರಿಗೆ ಮಾದಿಗ ಸಮುದಾಯದ ಮುಖಂಡರು ಜೊತೆ ಗೂಡಿ ಮನವಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಮಾದಿಗರ ಸಂಘ(ರಿ) ತಾಲೂಕ ಶಾಖೆ ಸಿಂದಗಿ ತಾಲೂಕಾಧ್ಯಕ್ಷ ಯಲ್ಲು ಇಂಗಳಗಿ ಪತ್ರಿಕಾ ಹೇಳಿಕೆ ಹೇಳಿದರು.ಇದೇ ಸಂದರ್ಭದಲ್ಲಿ ಮಾದಿಗ ಸಮಾಜದ ಮುಖಂಡ ಸಾಯಬಣ್ಣ ಪುರದಾಳ ಮಾತನಾಡಿ, ಸತತ ಮೂರು ದಶಕಗಳಿಂದ ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಾ ಬಂದಿದ್ದು. ಪ್ರಸ್ತುತ ಸುಪ್ರೀಂಕೋರ್ಟ್ ಒಳ ಮೀಸಲಾತಿ ನೀಡಬೇಕೆಂದು ಆಗಸ್ಟ್ ೧,೨೦೨೪ ರಂದು ತೀರ್ಪು ನೀಡಿದೆ. ಆದರೆ ರಾಜ್ಯ ಸರಕಾರ ಒಳಮೀಸಲಾತಿ ಜಾರಿಗೊಳಿಸಲು ನ್ಯಾ.ಎಚ್.ಎನ್. ನಾಗಮೋಹನದಾಸ ಅವರ ಏಕ ಸದಸ್ಯ ಪೀಠ ರಚಿಸಿದ್ದು ಬಿಟ್ಟರೆ ಏನನ್ನು ಮಾಡಿಲ್ಲ. ಪೀಠ ರಚನೆ ಮಾಡಿ ಸುಮಾರು ೪೫ ದಿನಗಳ ಕಳೆದರು ಆಯೋಗ ಯಾವುದೇ ಕೆಲಸ ಮಾಡಿಲ್ಲ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸಮುದಾಯದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಂಚಮಸಾಲಿ ಸಮಾಜ ೨ಎ ಮೀಸಲಾತಿ ಕೇಳುತ್ತಿರುವುದು ಹಾಗೂ ಪ್ರತಿಭಟನೆ ಮಾಡುತ್ತಿರುವುದೇ ಅಸಂವಿಧಾನಿಕ ಎಂದು ಹೇಳುತ್ತಿರುವ ಮುಖ್ಯಮಂತ್ರಿಯವರದು ಉಡದ ನಾಲಿಗೆ. ಅವರು ವಿರೋಧ ಪಕ್ಷದಲ್ಲಿದ್ದಾಗ ಪಂಚಮಸಾಲಿಗಳಿಗೆ ೨ಎ ಮೀಸಲಾತಿ ಸಂವಿಧಾನಿಕ ಹಕ್ಕು. ಅದು ಪಂಚಮಸಾಲಿಗಳಿಗೆ ಸಿಗಲೆಬೇಕು ಎಂದು ಹೇಳಿದ ಸಿದ್ದರಾಮಯ್ಯನವರು ವಕೀಲ ವೃತ್ತಿಯನ್ನು ಮಾಡಿದವರು ಇಂದು ಅದೇ ಮಾತನ್ನು ತಿರುಚಿ ಮಾತನಾಡುತ್ತಿರುವುದು ಅವರ ಅಜ್ಞಾನವನ್ನು ಎತ್ತಿ ತೋರಿಸುತ್ತದೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ದಾನಪ್ಪಗೌಡ ಚನಗೊಂಡ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಂಡ ಪ್ರತಿಭಟನಾ ರ‍್ಯಾಲಿಯಲ್ಲಿ ಅವರು ಮಾತನಾಡಿದರು.ಈ ವೇಳೆ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಅಶೋಕ ಅಲ್ಲಾಪೂರ ಹಾಗೂ ಶಿವಾರಾಜ ಪೋಲಿಸಪಾಟೀಲ ಮಾತನಾಡಿ, ೨ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಅಧಿಕಾರಿಗಳನ್ನು ಬಿಟ್ಟು ಲಾಠಿ ಚಾರ್ಜ್ ಮಾಡಿಸಿ ನೂರಾರು ಜನರಿಗೆ ತೀವ್ರಗಾಯ ಹಾಗೂ ಹಲವಾರು ಜನರು ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಲಿಂಗಾಯತ ವಿರೋಧಿ ಸಿದ್ದರಾಮಯ್ಯನವರ ನಡೆ ಅಸಂವಿಧಾನಿಕ ಎಂದು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜಾನಪದ ಒಂದೇ ದಿಸೆಯಲ್ಲಿ ನಡೆಯುವುದಿಲ್ಲ. ಅದರಲ್ಲಿ ಗೀಗಿ, ಲಾವಣಿ ಪದ ಹಾಗೂ ಜಾನಪದ ಗೀತೆಗಳ ಸೇರಿದಂತೆ ವಿವಿಧ ಪ್ರಕಾರಗಳಿವೆ ಎಂದು ಜಾನಪದ ವಿದ್ವಾಂಸ ಡಾ.ಸಂಗಮೇಶ ಬಿರಾದಾರ ಹೇಳಿದರು.ಪಟ್ಟಣದ ಸಾರಂಗಮಠ ಆವರಣದಲ್ಲಿ ನೆಲೆ ಪ್ರಕಾಶನ ಸಂಸ್ಥೆ ಹಾಗೂ ಎಂ.ಎಂ.ಪಡಶೆಟ್ಟಿ ಪ್ರತಿಷ್ಠಾನ ವತಿಯಿಂದ ಹಮ್ಮಿಕೊಂಡ ೨೦೨೪ನೆಯ ಸಾಲಿನ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ಇಂದಿನ ಯುವ ಪೀಳಿಗೆಗೆ ಜಾನಪದದ ಅರಿವು ಮೂಡಿಸುವುದು ತುಂಬಾ ಅವಶ್ಯಕವಾಗಿದೆ. ಜನಪದವು ಜನರಿಂದ ಜನರ ಮೂಲಕ ಜನರಿಗೆ ಸಾಗಿ ಬಂದ ಸಾಂಸ್ಕೃತಿಕ ಸೊಗಡಾಗಿದೆ. ಇರದಲ್ಲಿ ಬದುಕಿನ ಹಲವು ಆಯಾಮಗಳು ಅಡಗಿವೆ. ಈ ಸಾಹಿತ್ಯ ಪ್ರಕಾರವನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಪ್ರಸ್ತುತ ಸಾಹಿತ್ಯ ವಲಯದ ಮೇಲಿದೆ ಎಂದರು.ಈ ವೇಳೆ ಜಾನಪದ ವಿದ್ವಾಂಸ ಡಾ.ಸಂಗಮೇಶ ಬಿರಾದಾರ ಅವರ ಬದುಕು ಬರಹ ಪುಸ್ತಕದ ಲೇಖಕ ಕಾಗವಾಡದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಬಿ.ಹೂಗಾರ ವಿಮರ್ಶಿಸಿ ಮಾತನಾಡಿ, ಲಾವಣಿ ಸಾಹಿತ್ಯದಲ್ಲಿ ಶಕ್ತಿಯಿದೆ. ಇಂತಹ ವಿಶಿಷ್ಟ ಶಕ್ತಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವ ವೈದ್ಯರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಕೆಲಸ ಮಾಡಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ವಿಲಾಸ ಎಸ್. ಬಗಲಿ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಅಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆದ 2018ನೇ ವರ್ಷದ ವಿದ್ಯಾರ್ಥಿಗಳ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಿ ಅವರು ಮಾತನಾಡಿದರು.ವೈದ್ಯರು ನ್ಯಾಯಯುತ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುವುದರಿಂದ ರೋಗಿಗಳ ಜೊತೆಗೆ ಸಮಾಜದ ಆರೋಗ್ಯಕ್ಕೂ ಕೊಡುಗೆ ನೀಡಬಹುರು. ಇದರಿಂದ ಹೆತ್ತ ಪೋಷಕರು ಮತ್ತು ಓದಿದ ಕಾಲೇಜಿನ ಹೆಸರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯ. ಹೊಸದಾಗಿ ವೈದ್ಯಕೀಯ ಸೇವೆಗೆ ಕಾಲಿಡುತ್ತಿರುವ ಯುವ ವೈದ್ಯರು ಹಣಕ್ಕೆ ಗಮನ ನೀಡದೇ ಮಾನವೀಯ ನೆಲೆಯಲ್ಲಿ ಆರೋಗ್ಯ ಸೇವೆಗೆ ಒತ್ತು ನೀಡಿದರೆ ಅದರಿಂದ ಸಿಗುವ ಗೌರವಯುತ ಸ್ಥಾನಮಾನಗಳು ಬೇರೋಂದಿಲ್ಲ ಎಂದು ಅವರು ಹೇಳಿದರು.ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಯುವ ವೈದ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಬಿ.ಎ.ಎಂ.ಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ) ವತಿಯಿಂದ ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ಮಾಡಲಾಯಿತು.ಮಾಜಿ ಕ್ರಿಕೆಟ್ ಆಟಗಾರ, ಕೆ.ಎಸ್.ಸಿ.ಎ ಸದಸ್ಯ ಮತ್ತು ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರು ವಿಜಯಪುರದಲ್ಲಿ ಸುಂದರ ಕ್ರಿಕೆಟ್ ಕ್ರೀಡಾಂಗಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೊಂದಿಗೆ ಈ ಹಿಂದೆ ಕೂಡ ಚರ್ಚಿಸಿದ್ದರು.ನಗರದ ಹೊರವಲಯದ 2-3 ಜಾಗೆಗಳನ್ನು ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಗುರುತಿಸುವ ಪ್ರಕ್ರಿಯೆ ನಡೆದಿದ್ದು, ಅದರನ್ವಯ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿಲ್ಲಾಧಿಕಾರಿ ಭೂಬಾಲನ್ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಧಿಕಾರಿ ರಿಷಿ ಆನಂದ, ಉಪವಿಭಾಗಾಧಿಕಾರಿ ಗುರುನಾಥ, ತಹಶೀಲ್ದಾರ ಚನಗೊಂಡ, ಕೈಗಾರಿಕೆ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಇವರುಗಳು ಇಂದು ಸ್ಥಳ ಪರಿಶೀಲನೆ ನಡೆಸಿದರು.ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ, ವಿಜಯಪುರದಿಂದ ವಿಮಾನ ಸಂಪರ್ಕ ಆರಂಭಗೊಂಡರೆ, ಅಂತರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳನ್ನು ಕೂಡ ಇಲ್ಲಿ ಆಯೋಜಿಸಬಹುದು. ಆ ನಿಟ್ಟಿನಿಂದಲೇ ನಾವು ದೂರದೃಷ್ಟಿಯಿಂದ ಇಲ್ಲಿ ಅತ್ಯತ್ತಮ ಕ್ರೀಡಾಂಗಣ ನಿರ್ಮಿಸಲು ಉದ್ದೇಶ ಹೊಂದಲಾಗಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಾಠಗಳಿಗೆ ಆಟಗಳೇ ಸ್ಪೂರ್ತಿಯಾಗಿವೆ ಎಂದು ರಾಷ್ಟ್ರೀಯ ಸೈಕ್ಲಿಂಗ್ ಚಾಂಪಿಯನ್ ಮತ್ತು ಖೇಲೋ ಇಂಡಿಯಾದ ಸ್ವರ್ಣ ಪದಕ ವಿಜೇತ ಚೈತ್ರಾ ವಿ. ಬೋರ್ಜಿ ಹೇಳಿದ್ದಾರೆ.ಶನಿವಾರ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಪಾಠಗಳಿಗೆ ಸ್ಪೂರ್ತಿಯಾಗಿರುವ ಈ ಆಟಗಳು ನಮ್ಮನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತವೆ. ಸಶಕ್ತ ದೇಹದಲ್ಲಿ ಸದೃಢ ಮನಸ್ಸಿರುತ್ತದೆ. ಕ್ರೀಡೆಗಳು ಕೇವಲ ರಂಜನೆಗಾಗಿ ಅಲ್ಲ. ನಮ್ಮ ದೇಶದ ಪ್ರತಿಷ್ಟೆಯನ್ನು ಹೆಚ್ಚಿಸುವಲ್ಲಿ ನಮಗೆ ಸ್ಪೂರ್ತಿ ನೀಡುತ್ತವೆ ಎಂದು ಅವರು ಹೇಳಿದರು.ಶಾಲೆಯ ಪ್ರಾಚಾರ್ಯ ಡಾ. ಶೈಜೂ ಕೆ. ನಾಯರ ಮಾತನಾಡಿ, ನಮ್ಮ ಶಾಲೆಯಲ್ಲಿ ಆಟಗಳ ಜೊತೆಗೆ ಪಾಠಗಳಿಗೂ ಸಮನಾಗಿ ಪ್ರೋತ್ಸಾಹ ನೀಡಲಾಗುತ್ತದೆ. ಅಲ್ಲದೇ, ಅದಕ್ಕೆ ಬೇಕಾದ ಎಲ್ಲ ಪರಿಕರಗಳನ್ನು ಒದಗಿಸುವ ಮೂಲಕ ಕ್ರೀಡಾಪಟುಳಿಗೆ ಅನುಕೂಲ ಒದಗಿಸುತ್ತಿದ್ದೇವೆ ಎಂದು ಹೇಳಿದರು.ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ ಕ್ರೀಡಾ ಧ್ವಜರೋಹಣ ಮಾಡಿದರು. ವಿಠ್ಠಲ್ ಬೋರ್ಜಿಯವರು ಕ್ರೀಡಾ ಮಹೋತ್ಸವಕ್ಕೆ ಚಾಲನೆಯನ್ನು ನೀಡಿ, ಶಾಲೆಯ…

Read More