Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಆರೋಗ್ಯದ ದೇಹ ಆತ್ಮದ ಅರಮನೆಯಾದರೆ ಅನಾರೋಗ್ಯದ ದೇಹ ಆತ್ಮದ ಸೆರೆಮನೆ. ಜೀವನದಲ್ಲಿ ಆಸ್ತಿ, ಅಂತಸ್ತು, ಅಧಿಕಾರ ಯಾವುದೂ ನಮ್ಮೊಟ್ಟಿಗೆ ಇರಲಾರದು. ಸ್ಥಿರವಾಗಿ ಇರುವದು ಆರೋಗ್ಯ ಮಾತ್ರ ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಂಸ್ಥಾಪಕ, ಖ್ಯಾತ ನೇತೃ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.ಪಟ್ಟಣದ ಹುಡ್ಕೋ ಬಡವಾಣೆಯ ಗವಿಸಿದ್ದೇಶ್ವರ ವೇದಿಕೆಯಲ್ಲಿ ಹಿಮಾಲಯನ್ ಧ್ಯಾನಯೋಗಿ ಮತ್ತು ಆಧ್ಯಾತ್ಮಿಕ ಪ್ರವಚನಕಾರ ಪ.ಪೂ.ನಿರಂಜನ ಮಹಾಸ್ವಾಮಿಗಳು ೧೧ ದಿನಗಳ ಕಾಲ ನಿರಂತರವಾಗಿ ನಡೆಸಿಕೊಟ್ಟ ಯೋಗಾಭ್ಯಾಸ ಮತ್ತು ಆಧ್ಯಾತ್ಮಿಕ ಪ್ರವಚನದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಹುಟ್ಟುವಾಗ ದೇವರು ಎಲ್ಲರಿಗೂ ಒಂದೇ ತರನಾದ ದೇಹದ ಜೊತೆಗೆ ವಾರಂಟಿ ಕೊಟ್ಟಿರುತ್ತಾನೆ. ಆದರೆ ಗ್ಯಾರಂಟಿ ಕೊಟ್ಟಿರುವದಿಲ್ಲ. ನಾವು ಒಳ್ಳೆಯ ಆಚಾರ, ವಿಚಾರ, ಅಹಾರ ಪದ್ಧತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮತ್ತು ಯಾವ ವ್ಯಕ್ತಿ ಸಂತೃಪ್ತಿಯಿಂದ ಜೀವಿಸುತ್ತಾನೋ ಆ ವ್ಯಕ್ತಿ ಮಾತ್ರ ಆರೋಗ್ಯವಂತನಾಗಿ ಜೀವಿಸಲು ಸಾಧ್ಯ, ಆ ಸಂತೃಪ್ತಿ ಆಧ್ಯಾತ್ಮದಲ್ಲಿ ಮಾತ್ರ ಇರೋದು. ಎಲ್ಲರೂ ಯೋಗವನ್ನು ಕಲಿತು ಆರೋಗ್ಯವಂತರಾಗಿ ಬದುಕಬೇಕು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 2024-25ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಡಿ.17ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10-30ಕ್ಕೆ ಕ್ರೀಡಾಕೂಟವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಬೆಂಗಳೂರು ಮತ್ತು ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ವಿಜಯಪುರ ವತಿಯಿಂದ 2024-25ನೇ ಸಾಲಿನಲ್ಲಿ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 50 ಕೋಳಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆಸಕ್ತ ರೈತ ಮಹಿಳೆಯರು ದಿನಾಂಕ : 25-12-2024ರೊಳಗೆ ಆಯಾ ತಾಲೂಕಾ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶುಪಾಲನಾ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಆಯಾ ತಾಲೂಕಾ ಪಶು ಆಸ್ಪತ್ರೆ ಕಚೇರಿಗಳನ್ನು ಸಂಪರ್ಕಿಸಬಹುದಾಗಿಎ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಡಿ.19 ಹಾಗೂ 20ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಡಿ.19 ರಂದು ಜಿಲ್ಲೆಗೆ ಆಗಮಿಸಿ, ಜಿಲ್ಲಾ ಮಟ್ಟದ ಮಕ್ಕಳ ಅಹವಾಲು ಮತ್ತು ಸಂವಾದ ಕಾರ್ಯಕ್ರಮ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಮಕ್ಕಳಿಗಿರುವ ಕಾನೂನುಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಡಿ.20 ರಂದು ಇಂಡಿ ತಾಲೂಕಿನ ಅಥರ್ಗಾದಲ್ಲಿ ಪಿಯುಸಿ ಮಕ್ಕಳಿಗೆ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರದ ತನು ಫೌಂಡೇಶನ್ ಕೊಡ ಮಾಡುವ ರಾಜ್ಯಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಪಟ್ಟಣದ ಸಾಮಾಜಿಕ ಹೋರಾಟಗಾರಮುತ್ತು ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ.ಇದೇ ಡಿಸೆಂಬರ್ 15 ರಂದು ಸಂಜೆ 4 ಗಂಟೆಗೆ ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.ಈ ವೇಳೆ ಲೇಖಕ ಮಂಜುನಾಥ್ ಜುನಗೊಂಡ ವಿರಚಿತ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನೆರವೇರಲಿದೆ.ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಮುತ್ತು ಪಟ್ನಶೆಟ್ಟಿಯವರಿಗೆ ಶಾಸಕ ಅಶೋಕ್ ಮನಗೂಳಿ, ಗುತ್ತಿಗೆದಾರ ಮುತ್ತು ಮುಂಡೇವಾಡಗಿ ಮತ್ತು ಅವ್ವ ಫೌಂಡೇಶನ್, ರಾಗ ರಂಜಿನಿ ಸಂಗೀತ ಅಕಾಡೆಮಿ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಚುನಾಯಿತ ವಾರ್ಡ ಸದಸ್ಯರುಗಳನ್ನು ಆಧರಿಸಿ ಷರತ್ತುಗಳನ್ನೊಳಗೊಂಡು ಪಾಲಿಕೆಯ ೩೫ ವಾರ್ಡಗಳಿಗೆ ವಾರ್ಡ ಸಮಿತಿ ರಚಿಸಲಾಗುತ್ತಿದ್ದು, ಆಸಕ್ತ ಅರ್ಹ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ವಾರ್ಡ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯರು ವಾರ್ಡ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇತರ ಹತ್ತು ಸದಸ್ಯರು ಮಹಾನಗರ ಪಾಲಿಕೆಯಿಂದ ನಾಮ ನಿರ್ದೇಶಿತರಾಗಿರತಕ್ಕದುದ, ಅವರ ಪೈಕಿ ಕನಿಷ್ಠ ಇಬ್ಬರು ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಾಗಿರಬೇಕು. ಕನಿಷ್ಠ ಮೂರು ಜನ ಮಹಿಳಾ ಸದಸ್ಯರು ಹಾಗೂ ನಿವಾಸಿ ಕ್ಷೇಮಾಭಿವೃದ್ದಿ ಸಂಘಗಳನ್ನು ಪ್ರತಿನಿಧಿಸುವಂತಹ ಕನಿಷ್ಠ ಇಬ್ಬರು ಸದಸ್ಯರಿರುತ್ತಾರೆ.ವಾರ್ಡ ಸಮಿತಿ ಸದಸ್ಯನಾಗಿ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಾರ್ಡ ವ್ಯಾಪ್ತಿಯಲ್ಲಿ ಮತದಾರರಾಗಿರುವ ಮತದಾರ ಪಟ್ಟಿಯ ಪ್ರತಿ ಹಾಗೂ ಚುನಾವಣಾ ಗುರುತಿನ ಚೀಟಿ ನಕಲು ಪ್ರತಿಯೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಮಹಾನಗರ ಪಾಲಿಕೆಯ ಪರಿಷತ್ ಶಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : ೨೪-೧೨-೨೦೨೪ರೊಳಗಾಗಿ ಸಲ್ಲಿಸಬೇಕು.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಪರಿಷತ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿಪ್ರಹಾರ ಹಾಗೂ ಬಂಧನ ಮಾಡಿರುವ ಕ್ರಮಕ್ಕೆ ಖಂಡನೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟಗಾರರನ್ನು ಬಂಧಿಸಿ ಲಾಠಿಪ್ರಹಾರ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ತಾಲ್ಲೂಕು ಪಂಚಮಸಾಲಿ ಸಮುದಾಯದಿಂದ ರಾಷ್ಟ್ರೀಯ ಹೆದ್ದಾರಿ-೫೦ನ್ನು ತಡೆದು ಪ್ರತಿಭಟಿಸಲಾಯಿತು.ಪಟ್ಟಣದ ಕರಿಸಿದ್ಧೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿದ ಸಮುದಾಯದವರು ಪಾದಯಾತ್ರೆಯ ಮೂಲಕ ಹೊರಟು ಪತ್ತಾರಕಟ್ಟಿ, ಮೇನ್‌ಬಜಾರ್, ಮೊಹರೆ ಹಣಮಂತ್ರಾಯ ವೃತ್ತ, ಬಸ್ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿ ತೆರಳಿ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಕುಳಿತು ಪ್ರತಿಭಟನೆಗೆ ಇಳಿದರು.ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸಾಹೇಬಗೌಡ ದಾನಗೊಂಡ, ಬಾಬುಗೌಡ ಪಾಟೀಲ(ಜಿಡ್ಡಿಮನಿ), ಮಾತನಾಡಿ, ಸರ್ಕಾರದ ಕ್ರಮವನ್ನು ಖಂಡಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಪ್ರಕಾಶ ಸಿಂದಗಿ ಮಾತನಾಡಿ, ರಾಜ್ಯ ಸರ್ಕಾರದ ಕ್ರಮದ ಕುರಿತು ಸಮುದಾಯದ ಅಭಿಪ್ರಾಯವನ್ನು ಜಿಲ್ಲಾಡಳಿತಕ್ಕೆ ತಲುಪಿಸಲಾಗುವುದು ಎಂದು ಭರವಸೆ ನೀಡಿದಾಗ ಧರಣಿ ಕೊನೆಗೊಂಡಿತು.ಪಂಚಮಸಾಲಿ ಸಮುದಾಯದ ತಾಲ್ಲೂಕು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಸ್ವಾತಂತ್ರ್ಯ ಪೂರ್ವ ಅಹಾರ ಉತ್ಪಾದನೆ ಕಡಿಮೆ ಇತ್ತು. ನಂತರದ ಸಮಯದಲ್ಲಿ ೫೦ ಕೋಟಿಗೆ ಜನಸಂಖ್ಯೆಗೆ ಸಾಲುವಷ್ಟು ಇತ್ತು, ೧೯೬೦ ರಲ್ಲಿ ಹಸಿರು ಕ್ರಾಂತಿಯ ನಿಮಿತ್ಯ ಅಹಾರ ಉತ್ಪಾದನೆ ಹೆಚ್ಚಾಯಿತು. ಈಗ ೧೪೪ ಕೋಟಿ ಜನರಿಗೆ ಸಾಲುವಷ್ಟು ಆಹಾರ ಉತ್ಪಾದನೆ ಮಾಡಬೇಕಾಗಿದೆ ಎಂದು ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ. ಆರ್.ಬಿ.ಬೆಳ್ಳಿ ಹೇಳಿದರು.ಪಟ್ಟಣದ ಆರ್.ಎಂ. ಶಹಾ ಶಾಲೆಯಲ್ಲಿ ಉತ್ಥಾನ ಮಹೋತ್ಸವ ನಿಮಿತ್ಯ ನಡೆದ ಕೃಷಿ ಮೇಳ ಮತ್ತು ತಾಲೂಕಿನ ಕೃಷಿಕರಿಗೆ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಹಸಿರು ಕ್ರಾಂತಿಯ ನಂತರ ದೇಶದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆ ಹೆಚ್ಚಾಗಿ ಕೃಷಿಯಲ್ಲಿ ವಾತಾವರಣ ಕಲುಷಿತವಾಗುತ್ತಿದೆ. ರೈತರು ಆಧುನಿಕ ಕೃಷಿ ಪದ್ದತಿಯಲ್ಲಿ ಹೆಚ್ಚಿನ ಇಳುವರಿ ಮತ್ತು ಅಧಿಕ ಹಣ ಪಡೆಯುವ ಕೃಷಿಯತ್ತ ಒಲುವು ತೋರುತ್ತಿದ್ದಾರೆ.ಶೂನ್ಯ ಬಂಡವಾಳ, ಸಾವಯುವ ಕೃಷಿ, ಸುಸ್ಥಿರ ಕೃಷಿ ಯತ್ತ ಪ್ರಯತ್ನಿಸಿ ಜನರು ರೈತರು ಉತ್ತಮ ಆರೋಗ್ಯದ ಕಡೆಗೂ ಗಮನ ನೀಡಿ ಹೆಚ್ಚು ರಸಾಯನಿಕ ಔಷದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ “೨ಅ ಮೀಸಲಾತಿಗೆ” ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿದ್ದ ಪಂಚಮಸಾಲಿ ಸಮಾಜ ಬಾಂಧವರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಗುರುವಾರ ವಿವಿಧೆಡೆ ಟೈರ್‌ಗೆ ಬೆಂಕಿಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಮಾಜ ಬಾಂಧವರು ಸಿದ್ದರಾಮಯ್ಯನವರ ಭಾವಚಿತ್ರವನ್ನು ಸುಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಸಮಾಧಾನಕರವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಮುಖ್ಯಮಂತ್ರಿಗಳು ಲಾಟಿ ಪ್ರಹಾರ ನಡೆಸಿ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡಿದ್ದಾರೆ, ಗೃಹ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಮೇಲೆ ಮತ್ತು ಪೊಲೀಸ್ ಆಯುಕ್ತರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದರು.ಬಾಕ್ಸ-ದಶಕಗಳಿಂದ ಮೀಸಲಾತಿ ಹೋರಾಟ ನಡೆಯುತ್ತಿದೆ. ಯಾವ ಸರಕಾರವೂ ನಮ್ಮ ಹೋರಾಟಕ್ಕೆ ಇಷ್ಟು ಕಡೆಗಣನೆ ಮಾಡಿರಲಿಲ್ಲ. ಈ ಸರಕಾರ ಲಾಠೀ ಪ್ರಹಾರ ನಡೆಸಿ ಹೋರಾಟ ಹತ್ತಿಕ್ಕುವ ಕಾರ್ಯ ಮಾಡಿದ್ದರೂ ಸಹಿತ ಕಾಂಗ್ರೇಸ್…

Read More

ಬೀಜೋತ್ಪಾದನೆ ಕೃಷಿ ಬಗೆಗಿನ ರೈತ ತರಬೇತಿ ಕಾರ್ಯಕ್ರಮ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಪ್ರಾಧಾನ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಆದಾಯ ಖಚಿತವೆಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಭಾವಿಕಟ್ಟಿ ಹೇಳಿದರು.ಪಟ್ಟಣದ ನಾಲತವಾಡ ರಸ್ತೆಯಲ್ಲಿರುವ ಖಾಸಗಿ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಬೀಜ ನಿಗಮದ ಪ್ರಾಂತೀಯ ಕಛೇರಿ ಧಾರವಾಡ ಹಾಗೂ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಾನುವಾರ ಮಿಷನ್ ಯೋಜನೆಯಡಿ ಏರ್ಪಡಿಸಲಾಗಿದ್ದ ಬೀಜೋತ್ಪಾದನೆ ಕೃಷಿ ಬಗೆಗಿನ ರೈತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗುಣಮಟ್ಟದ ಬೀಜವು ಕೃಷಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು ಆ ಮೂಲಕ ಬೆಳೆ ಇಳುವರಿಯನ್ನು ಪ್ರತಿಶತ ೧೫-೨೦ ರಷ್ಟು ಹೆಚ್ಚಿಸಲು ಸಾಧ್ಯವಾಗಲಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಅರವಿಂದ ಕೊಪ್ಪ ಮಾತನಾಡಿ ಸಸ್ಯ ಸಂರಕ್ಷಣಾ ಕಾರ್ಯಗಳಿಗೆ ಸಮಗ್ರ ಕೀಟ…

Read More