Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಜಾತಿಗಿಂದ ನೀತಿ ಪ್ರಧಾನವಾದದ್ದು. ಮಕ್ಕಳಿರುವಾಗಲೇ ಸಾಮರಸ್ಯದ ಬದುಕನ್ನು ಕಲಿಸಲು ಎಲ್ಲ ಪಾಲಕರು ಮುಂದಾಗಬೇಕಿದೆ ಎಂದು ೧೦ನೇ ತರಗತಿ ವಿದ್ಯಾರ್ಥಿನಿ ಅಪ್ಸರಾ ಅವಟಿ ಹೇಳಿದಳು.ತಾಲೂಕಿನ ಹಡಲಗೇರಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಗವದ್ಗೀತಾ ಜಯಂತಿ ಮತ್ತು ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವಳು ಮಾತನಾಡಿದಳು.ಭಗವದ್ಗೀತಾ ಅಭಿಯಾನದ ಮೂಲಕ ಜನರಲ್ಲಿ ಸಾಮರಸ್ಯತೆ ಮತ್ತು ದೇಶದ ಸಮಗ್ರತೆ ಬೆಳೆಸಲಾಗುತ್ತಿದೆ. ಶಾಂತಿಯುತ ಸಹಬಾಳ್ವೆಯ ಅಭಿವೃಧ್ಧಿಯುತ ದೇಶ ನಿರ್ಮಾಣದ ಉದ್ದೇಶದಿಂದಲೇ ಸ್ವಾಮೀಜಿಯವರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಉತ್ತಮ ಗ್ರಂಥಗಳ ಉತ್ತಮಾಂಶಗಳನ್ನು ಎಲ್ಲರು ಅನುಸರಿಸುವಂತಾಗ ಬೇಕು. ಶಿಕ್ಷಣದ ಪಠ್ಯಕ್ರಮದಲ್ಲೂ ಜನ ಪ್ರತಿನಿಧಿಗಳು ಪಠ್ಯಪುಸ್ತಕದ ರಚನೆಯಲ್ಲಿ ಮಾನವೀಯ ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಕೊಡಬೇಕು ಎಂದಳು.ಪ್ರಮುಖರಾದ ಪ್ರಾಣೇಶ ಜೋಶಿ ಮಾತನಾಡಿ ಮನಸ್ಥೈರ್ಯ ಮತ್ತು ಧರ್ಮವನ್ನು ಬೆಳೆಸುವ ಘನ ಉದ್ದೇಶದಿಂದ ಭಗವದ್ಗೀತೆ ತಲೆ ಎತ್ತಿ ನಿಂತಿದೆ. ಅದೊಂದು ದಿವ್ಯ ಔಷಧವಾಗಿದೆ. ಸಮಾಜ ಜಾಗೃತಮಾಡುವ ಶಕ್ತಿ ಹೊಂದಿದೆ. ಭಕ್ತಿಗೆ ಅನುರೂಪವೆಂದರೆ ಕನಕದಾಸರೆಂದು ನಿದರ್ಶಿಸುವುದು ಇದೆ. ಹಾಗಾದರೆ ಆ ಮಟ್ಟದ ಭಕ್ತಿ ಪರವಶತೆ ನಮ್ಮೆಲ್ಲರಲ್ಲಿ ಬರಬೇಕಾಗಿದೆ.…

Read More

ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ನಿಮಿತ್ಯ ಕನ್ನಡಾಂಬೆ ನುಡಿ ತೇರಿಗೆ ಚಾಲನೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಬರಹಗಾರರು, ಸಾಹಿತಿಗಳನ್ನ, ಕವಿಗಳನ್ನ ಗುರುತಿಸಿ ಸಮಾಜದಲ್ಲಿ ಬೇಳಕಿಗೆ ತಂದು ಅವರಲ್ಲಿನ ಜ್ಞಾನವನ್ನು ಎಲ್ಲರಿಗೂ ಉಣಬಡಿಸುವ ಸಲುವಾಗಿ ಸಾಹಿತ್ಯ ಸಮ್ಮೇಳನ ಮಾಡಲಾಗುತ್ತದೆ ಅದಕ್ಕೆ ಎಲ್ಲರು ಸಹಕಾರ ನೀಡಿ ಕನ್ನಡ ನುಡಿ ಜಾತ್ರೆಯನ್ನು ಯಶಸ್ವಿಗೊಳಿಸಿ ಎಂದು ಕಸಾಪ ಗೌರವಾಧ್ಯಕ್ಷ ಡಾ| ಸಂದೀಪ ಪಾಟೀಲ ಹೇಳಿದರು.ಅವರು ವಿಭೂತಿಹಳ್ಳಿಯಲ್ಲಿ ಡಿ. ೧೪ರದು ಹಮ್ಮಿಕೊಂಡಿರುವ ಆಲಮೇಲ ತಾಲೂಕ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ನಿಮಿತ್ಯ ಗುರುವಾರ ಕನ್ನಡಾಂಬೆ ನುಡಿ ತೇರಿಗೆ ಚಾಲನೆ ನೀಡಿ ಮಾತನಾಡಿದರು.ಕನ್ನಡಾಂಬೆಯ ಜಾತ್ರೆಯಲ್ಲಿ ಸಾಹಿತಗಳನ್ನು ಗುರುತಿಸುವ ದಿನಾ ತಾಲೂಕಿನ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳ ಇದಾಗಿರುವದರಿಂದ ಗ್ರಾಮೀಣ ಭಾಗದ ಕವಿಗಳು, ಬರಹಗಾರರನ್ನ, ಸಾಹಿತಿಗಳನ್ನ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಪರಿಷತ್ತು ಮಾಡಲಿದೆ ಎಂದು ಹೇಳಿದರು.ಕ.ಸಾ.ಪ ಅಧ್ಯಕ್ಷ ಶಿವಶರಣ ಗುಂದಗಿ ಮಾತನಾಡಿ ಈ ಸಮ್ಮೇಳನದಲ್ಲಿ ನಾಡಿನ ವಿವಿಧ ಸಾಹಿತಿಗಳು, ಕವಿಗಳು ಮತ್ತು ಸಂಸ್ಕೃತಿಕ ಚಟುವಟೆ ಮಾಡುವ ಕಲಾವಿದರು…

Read More

ಪಂಚಾಯತ್ ರಾಜ್ ಇಲಾಖೆ ಆಯುಕ್ತರಿಂದ ನರೇಗಾ ಕಾಮಗಾರಿಗಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ ಅವರು ಗುರುವಾರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕೈಗೊಂಡಿರುವ ನರೇಗಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ನರ್ಸರಿ ಕಾಮಗಾರಿ ವೀಕ್ಷಣೆ, ಸಸಿಗಳನ್ನು ನಾಟಿ ಮಾಡಿರುವ ಕುರಿತು ಪರಿಶೀಲನೆ ನಡೆಸಿದ ಅವರು, ಪ್ರತಿ ದಿನಕ್ಕೆ ( ಬೆಳಿಗ್ಗೆ ಹಾಗೂ ಮದ್ಯಾಹ್ನ ) ಎರಡು ಬಾರಿ ಎನ್ ಎಂ ಆರ್ ಹಾಜರಾತಿಗೆ ಕ್ರಮ ವಹಿಸಬೇಕು. ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಬದಿ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಡುಗೆ ಕೋಣೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಉತ್ತಮ ಸಾಮಗ್ರಿಗಳನ್ನು ಬಳಸುವಂತೆ ತಿಳಿಸಿದ ಅವರು ಕಳಪೆ ಮಟ್ಟದ ಕಾಮಗಾರಿಯಾಗದಂತೆ ಎಚ್ಚರಿಕೆ ವಹಿಸುವಂತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷಿ ಮಹಾವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ 2 ಗ್ರಂಥಾಲಯ ಸಹಾಯಕರ ತಾತ್ಕಾಲಿಕ ಹುದ್ದೆಗೆ ಡಿಸೆಂಬರ್ 22ರಂದು ನಡೆಯಬೇಕಾಗಿದ್ದ ಸಂದರ್ಶನವನ್ನು ಡಿಸೆಂಬರ್ 24ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಕೃಷಿ ಮಹಾವಿದ್ಯಾಲಯದ ಸಂದರ್ಶನ ಕೊಠಡಿಯಲ್ಲಿ ನಡೆಯಲಿದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಪಡೆದ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ಗಾಂಧಿ ಚಿಂತನೆಗಳು ಮತ್ತು ಪ್ರಸ್ತುತ ಭಾರತ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಡಾ.ಫ.ಗು.ಹಳಕಟ್ಟಿ ಸ್ನಾತಕೋತ್ತರ ಕೇಂದ್ರ ವಚನಸಂಗಮ ತೊರವಿ, ವಿಜಯಪುರ ಇವರ ಸಂಯುಕ್ತಾಯಶ್ರದಲ್ಲಿ ಗಾಂಧೀಜಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಗಾಂಧಿ ವಿಚಾರಧಾರೆಗಳ ಕುರಿತು ಡಿ.13 ರಂದು ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಗುಂಪು ಚರ್ಚೆ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 3 ಗಂಟೆಯುವ ಕಾರ್ಯಕ್ರಮಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿರ್ದೇಶಕರಾದ ಪ್ರೊ: ಎಸ್.ಎಂ.ಗಂಗಾಧರಯ್ಯ ಅಧ್ಯಕ್ಷತೆ ವಹಿಸಲಿದಾರೆ. ಗಾಂಧಿವಾದಿಗಳಾದ ಆನಂದ ಕೃಷ್ಣಾ ಮೆಣಸೆ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಸಿಂಡಿಕೇಟ್ ಸದಸ್ಯರಾದ ರಫೀಕ್ ಭಂಡಾರಿ, ಗಾಂಧಿವಾಧಿ ಅಪ್ಪಾಸಾಹೇಬ ಯರನಾಳ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರೈಸಿದ ಸವಿ ನೆನಪಿಗಾಗಿ ಹೆಸರಾಯಿತು ಕರ್ನಾಟಕ ಕನ್ನಡದ ಏಕೀಕರಣದ ಇತಿಹಾಸ ಪರಿಚಸುವ ಪುಸ್ತಕ ಹೊರತರುತಿದ್ದೇವೆ ಈ ಪುಸ್ತಕಕ್ಕೆ ಈ ಕೆಳಗಿನ ವಿಷಯ ಆಯ್ಕೆ ಮಾಡಿಕೊಂಡು ಲೇಖನಗಳನ್ನು ಬರೆದು ಕಳಿಸಬಹುದು.ವಿಷಯ:

Read More

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಉಪನ್ಯಾಸಕರು, ಬೆಳಗಾವಿ ಮೊ:೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಏನೇನೋ ಮಾಡುವ ಮನಸ್ಸು ಇದ್ದರೂ ದೈನಂದಿನ ಜೀವನದಲ್ಲಿ ಒಂದು ತೀವ್ರತರವಾದ ಅಸಮಾಧಾನ. ನಿರುತ್ಸಾಹ, ನಿಸ್ತೇಜ, ನಿಸ್ಸಾರ ಬೆಂಬಿಡದೇ ಕಾಡಿಸುತ್ತದೆ. ಇದು ನಮಗೆಲ್ಲರಿಗೂ ಒಂದಿಲ್ಲೊಂದು ಸಲ ಆಗುವ ಅನುಭವವೇ ಆಗಿದೆ. ಕೆಲವೊಮ್ಮೆ ಒಬ್ಬರೇ ಕುಳಿತು ಯೋಚನೆ ಮಾಡುವ ಪ್ರಸಂಗ ಬಂದಾಗ ಈ ನಿರುತ್ಸಾಹ ನನ್ನ ಸುಂದರ ಬದುಕನ್ನು ಹಾಳುಗೆಡುವುತ್ತಿದೆ ಎಂದೆನಿಸದೇ ಇರದು. ಬದುಕಿನ ಪಯಣದಲ್ಲಿ ನಿರುತ್ಸಾಹದ ನಿಲ್ದಾಣವು ಏಕಾದರೂ ಬರುತ್ತದೆಯೋ ಎಂದು ಹಲಬುತ್ತೇವೆ. ನಿರುತ್ಸಾಹ ಒಮ್ಮೆ ಪಾಯ ತೋಡಿದರೆ ಸಾಕು ಅದೇ ಅರಸ. ನಾವು ಗುಲಾಮರು. ಮುಸ್ಸಂಜೆ ಬಾನಂಚಿನಲ್ಲಿ ಮೂಡಿದ ಮಳೆಬಿಲ್ಲು ಕಂಡರೂ ಮಂಕು ಕಣ್ಣಿಗೆ. ಹೊಸದಾಗಿ ಅರಳಿದ ಹೂಗಳ ಹಿತವಾದ ಸುವಾಸನೆಗೂ ನಿರಾಸಕ್ತಿ. ನಿರುತ್ಸಾಹದ ನದಿ ಸರಾಗವಾಗಿ ಹರಿದುಕೊಂಡು ಹೋಗುತ್ತದೆ. ಅದು ಒಂದು ತರಹ ಜೀವಚ್ಛವದ ಹಾಗೆ. ಆಕಾಶದ ಉದ್ದಗಲ ಹಾರುವ ಹಕ್ಕಿ ಆಗಬೇಕು ಎಂದು ಕನಸು ಕಾಣುವ ಕಂಗಳಿಗೆ ನಿರುತ್ಸಾಹ ನಕ್ಷತ್ರಕನಂತೆ…

Read More

ಸಾವಿಲ್ಲದ ಶರಣರು ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಶ್ರೀ ಶಿರಡಿ ಸಾಯಿಬಾಬಾ ಒಬ್ಬ ಶ್ರೇಷ್ಠ ಅಜ್ಞಾತ ಸಾಧಕ ತಪಸ್ವಿ ಕೇವಲ ಮಹಾರಾಷ್ಟ್ರವಲ್ಲ ಇಡೀ ಭಾರತ ಜಗತ್ತನ್ನು ವ್ಯಾಪಿಸಿದ ಅವರ ಭಕ್ತ ಸಂಕುಲವು ಶಿರಡಿಯನ್ನು ಒಂದು ಆಧ್ಯಾತ್ಮಿಕ ಕ್ಷೇತ್ರವಾಬ್ಬಾಗಿ ಮಾಡಿದೆ.ಶಿರಡಿ ಸಾಯಿ ಬಾಬಾ (ಅಜ್ಞಾತ – ೧೫ ಅಕ್ಟೋಬರ್ ೧೯೧೮) ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು ಮತ್ತು ತಮ್ಮ ಜೀವನದ ಅವಧಿಯಲ್ಲಿ ಹಾಗು ನಂತರ ಅವರು ಮುಸ್ಲಿಮ್ ಅಥವಾ ಹಿಂದೂಗಳೇ ಎಂಬುದು ಅನಿಶ್ಚಿತವಾಗಿಯೇ ಉಳಿಯಿತು.ಆಧ್ಯಾತ್ಮಿಕ ಸಾಧಕ ಯಾವುದೇ ವ್ಯಕ್ತಿಯಾದರು ಸರಿ ಜನಿಸಿದ ಮೇಲೆ ತನ್ನನು ತಾನು ಗುರುವಿಗೆ ಸಮರ್ಪಿಸಿಕೊಳ್ಳದಿದ್ದರೆ/ಶರಣಾಗತನಾಗದಿದ್ದರೆ ಆತನಿಗೆ ಮುಕ್ತಿ ಹಾಗು ಜೀವನದ ಏಳಿಗೆಗಳೇ ಇರುವುದಿಲ್ಲ ಎಂಬ ಅಂಶವನ್ನು ಶಿರಡಿ ಸಾಯಿಬಾಬಾ ಬಲವಾಗಿ ನಂಬಿದ್ದರು…

Read More

ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ವೀರಶೈವ ಲಿಂಗಾಯತ ಸಮಾಜದಿಂದ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೇಲಾದ ಲಾಠಿ ಚಾರ್ಜ್ ವಿರೋಧಿಸಿ ಶಹಾಪುರ ಸಿಂದಗಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಗುರುವಾರ ಪ್ರತಿಭಟನೆ ಮಾಡಲಾಯಿತು .ಈ ವೇಳೆ, ಪಂಚಮಸಾಲಿ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಕುಳಗೇರಿ ಮಾತನಾಡಿ, ಕೂಡಲಸಂಗಮದ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಆಗ್ರಹಿಸಿದ ಲಿಂಗಾಯತ ಪಂಚಮಸಾಲಿ ಸಮುದಾಯದ 2- ಎ ಮೀಸಲಾತಿ ಹೋರಾಟವನ್ನು ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನೆ ನಿಯಂತ್ರಿಸಲು ದುರುದ್ದೇಶದಿಂದ ಲಾಠಿಚಾರ್ಜ್ ನೆಪದಲ್ಲಿ ಸಮಾಜ ಬಾಂಧವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸರ್ಕಾರದ ಕ್ರಮ ಅತ್ಯಂತ ಹೀನ ಕೃತ್ಯವಾಗಿದೆ . ಪ್ರತಿಯೊಬ್ಬರಿಗೂ ಅನ್ಯಾಯದ ವಿರುದ್ಧ ಹೋರಾಟ ಮಾಡುವ ಸ್ವಾತಂತ್ರ್ಯ ಇದೆ. ಆದರೆ ಸರ್ಕಾರಕ್ಕೆ ಹೋರಾಟದ ಬಿಸಿ ಅರಗಿಸಿಕೊಳ್ಳಲು ಆಗದೇ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಗುರುವಾರ ಜಮಾಯಿಸಿ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರ ಮೇಲೆ ನಡೆದ ಲಾಠಿ ಜಾರ್ಜ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಬಸವೇಶ್ವರ ವೃತ್ತದವರೆಗೂ ಮೆರವಣಿಗೆ ಮೂಲಕ ಆಗಮಿಸಿದ ನಂತರ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅರ್ಧ ಗಂಟೆ ಕಾಲಕ್ಕೂ ಹೆಚ್ಚು ರಸ್ತೆ ತಡೆದು ಟೈಯರ್ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.ಪ್ರತಿಭಟನೆ ಉದ್ದೇಶಿಸಿ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಮಾತನಾಡಿ, ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಮೀಸಲಾತಿಗಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ಮಾಡಿದರುವದು ಅನ್ನದಾತರಿಗೆ ಮಾಡಿರುವ ಹಲ್ಲೆಯಾಗಿದೆ. ಇದು ನಮ್ಮ ಸಮಾಜಕ್ಕೆ ಮಾಡಿರುವ ಅವಮಾನವಾಗಿದೆ. ನಮ್ಮ ಬಾಂಧವರು ಸಮಾಜದ ಬಡ ವಿದ್ಯಾರ್ಥಿಗಳ ಶಿಕ್ಷಣ, ಉದ್ಯೋಗಕ್ಕಾಗಿ ಮೀಸಲಾತಿಗಾಗಿ…

Read More