Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಅವಿರಳಜ್ಞಾನಿ ಚನ್ನಬಸವಣ್ಣನವರ ಜನ್ಮಸ್ಥಳ ತಾಲೂಕಿನ ಇಂಗಳೇಶ್ವರ ಗ್ರಾಮದಿಂದ ಚನ್ನಬಸವಣ್ಣನವರ ಐಕ್ಯಸ್ಥಳ ಉಳುವಿಯವರೆಗೆ ಹೊರಟ ಪಾದಯಾತ್ರೆಯ ಯಾತ್ರಾತ್ರಿಗಳನ್ನು ಸೋಮವಾರ ಸ್ವಾಗತಿಸಿಕೊಂಡು ಸ್ಥಳೀಯ ವಿರಕ್ತಮಠದಲ್ಲಿ ಪೂಜೆ ನೆರವೇರಿಸಿದ ನಂತರ ಸೋಮವಾರ ಬೀಳ್ಕೊಡಲಾಯಿತು.ಸ್ಥಳೀಯ ವಿರಕ್ತ ಮಠದ ಸಿದ್ದಲಿಂಗಸ್ವಾಮೀಜಿ ಮಾತನಾಡಿ, ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಲಿಂಗೈಕ್ಯ ಚನ್ನಬಸವ ಸ್ವಾಮೀಜಿ 40 ವರ್ಷಗಳವರೆಗೆ ಪಾದಯಾತ್ರೆ ಮಾಡಿರುವದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಸಮಾಜದ ಬದಲಾವಣೆಯ ಉದ್ದೇಶದಿಂದ ಅವರು ಪಾದಯಾತ್ರೆ ಮಾಡಿ ಸಾಕಷ್ಟು ಭಕ್ತರ ಪ್ರೀತಿಯ ಪಾತ್ರರಾಗಿದ್ದರು. ಆ ಪರಂಪರೆಯನ್ನು ಉಳಿಸಿಕೊಂಡು ಅಲ್ಲಿನ ಶ್ರೀಮಠದ ಭಕ್ತರು ಹೋಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.ಬಸವಾದಿ ಶರಣರ ವಚನ ಸಾಹಿತ್ಯವನ್ನು ಉಳಿಸಿದ ಕೀರ್ತಿಗೆ ಪಾತ್ರರಾದ ಚನ್ನಬಸವಣ್ಣನವರ ಐಕ್ಯಸ್ಥಳ ನಮಗೆಲ್ಲರಿಗೂ ಶ್ರದ್ಧಾ ಕೇಂದ್ರವಾಗಿದೆ. ವಚನ ಸಾಹಿತ್ಯವನ್ನು ಪರಿಚಯಿಸುವದು ಯಾತ್ರೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಯಾತ್ರಾ ಕಮೀಟಿಯ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಸಂಚಾಲಕ ವೀರಣ್ಣ ಸಜ್ಜನ, ವೀರನಗೌಡ ಬಿರಾದಾರ, ಭೀಮನಗೌಡ ಬಿರಾದಾರ, ಬಸಮ್ಮ ಮದ್ದರಕಿ, ಬಸನಗೌಡ ಉತ್ನಾಳ, ಬಸವರಾಜ…

Read More

ತಹಸೀಲ್ದಾರರಿಗೆ ಸಂಪೂರ್ಣ ಅಧಿಕಾರ ವಹಿಸಿ ಕೊಡುವಂತೆ ಅಖಂಡ ರೈತ ಸಂಘ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ತಹಸೀಲ್ದಾರರಿಗೆ ಸಂಪೂರ್ಣ ಅಧಿಕಾರವನ್ನು ಸರ್ಕಾರ ನೀಡುವ ಮೂಲಕ ಜಮೀನು ದಾರಿ ಸಮಸ್ಯೆ ಇತ್ಯರ್ಥಪಡಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಬಸವನಬಾಗೇವಾಡಿ ತಾಲೂಕಾ ಅಧ್ಯಕ್ಷ ಉಮೇಶ ವಾಲೀಕಾರ ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀನು ದಾರಿ ಸಮಸ್ಯೆ ರಾಜ್ಯಾದಂತ ರೈತರಿಗೆ ದೊಡ್ಡ ತಲೆನೋವಾಗಿದೆ. ದಿನನಿತ್ಯ ಹಳ್ಳಿಗಳಲ್ಲಿ ಹೊಲಗಳ ದಾರಿಗಾಗಿ ಕಲಹಗಳು ನಡೆಯುತ್ತಲೆ ಇವೆ. ಆದರೆ ಸರ್ಕಾರಿ ಮಾತ್ರ ಅದಕ್ಕೂ ನಮಗೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ಮೌನ ವಹಿಸಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ರೈತರು ದಾರಿಗಾಗಿ ಹೊಡದಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಹತ್ತುವುದು ಮಾಮುಲಾಗಿಬಿಟ್ಟಿದೆ. ಪೊಲೀಸ್ ಇಲಾಖೆ ಅಧಿಕಾರಿಗಳು ಇದು ಸಿವ್ಹಿಲ್…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳು ಪ್ರತಿದಿನವೂ ಯೋಜನಾಬದ್ಧವಾಗಿ ಅಭ್ಯಾಸದ ಕ್ರಮಗಳನ್ನು ಅನುಸರಿಸಿ ಸಕಾರಾತ್ಮಕ ಆಲೋಚನೆಯೊಂದಿಗೆ ಅಧ್ಯಯನ ನಡೆಸಬೇಕು. ಅಭ್ಯಾಸವು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಾಣ ಮಾಡುತ್ತದೆ ಎಂದು ಸಾಹಿತಿ, ಸಾಂಸ್ಕೃತಿಕ ಚಿಂತಕ ಡಾ.ಮಾಧವ ಗುಡಿ ಅಭಿಪ್ರಾಯಪಟ್ಟರು.ತಾಲೂಕಿನ ಮನಗೂಳಿ ಪಟ್ಟಣದ ಕೌಟಿಲ್ಯ ಶಿಕ್ಷಣ ಸಂಸ್ಥೆಯ ಶ್ರೀರಾವುಸಾಹೇಬ ಮಾರುತಿರಾವ ಗುಂಡ ಪ್ರೌಢಶಾಲೆಯಲ್ಲಿ ಈಚೆಗೆ ಜರುಗಿದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ವಿದ್ಯೆ ಪಡೆದವನಿಗೆ ಜಗತ್ತಿನ ತುಂಬೆಲ್ಲ ಅಪಾರ ಗೌರವ ಮನ್ನಣೆ ದೊರೆಯಲಿದೆ ಎಂದರು.ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಬಿ.ಸಜ್ಜನಶೆಟ್ಟಿ ಮಾತನಾಡಿ, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂಬ ನಾಣ್ಣುಡಿಯೊಂದಿಗೆ ಗುರಿ ತಲುಪಲು ಕಠಿಣ ಪರಿಶ್ರಮ, ಏಕಾಗ್ರತೆ, ತಾಳ್ಮೆ ಅತ್ಯವಶ್ಯಕ ಎಂದರು.ಮುಖ್ಯ ಅತಿಥಿ ಸಿ.ಆರ್.ಪಿ ರಮೇಶ ಬೆಳ್ಳುಬ್ಬಿ ಮಾತನಾಡಿ, ಸಮಯವನ್ನು ಗೌರವಿಸುವವರಿಗೆ ಸಮಾಜದಲ್ಲಿ ಅಪಾರ ಮೌಲ್ಯವಿದೆ. ಸಮಯದ ಸದುಪಯೋಗಪಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಬಾಳಬೇಕೆಂದು ಶುಭ ಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಕೌಟಿಲ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಾರಂಪರಿಕ ಕಲೆಗಳ ಸಂರಕ್ಷಣೆಗೆ ಇಂತಹ ಕಾರ್ಯಕ್ರಮಗಳು ಅಗತ್ಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ ಈ ಕಾರ್ಯಕ್ರಮವು ಟಿ.ಜಿ.ಹಿರೇಮಠ ಅವರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದೆ ಎಂದು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಸಿಂದಗಿ ನಗರದ ಸಾರಂಗಮಠದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಹದ ಅಂಗವಾಗಿ ಸ್ವರಾಂಜಲಿ ಶಾಸ್ತ್ರೀಯ ಗಾಯನ ನೃತ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮವು ಶಾಸ್ತ್ರೀಯ ಸಂಗೀತ ಗಾಯನದೊಂದಿಗೆ ಪ್ರಾರಂಭವಾಯಿತು. ಗಾಯಕ ಮಾನ್ವಿಯ ಬಸವರಾಜ ವಂದಲಿ ಅವರ ಸುಶ್ರಾವ್ಯ ಧ್ವನಿಯಲ್ಲಿ ಮೂಡಿಬಂದ ರಾಗಗಳು ಎಲ್ಲರ ಗಮನ ಸೆಳೆದವು.ನಂತರ ನಡೆದ ಭರತನಾಟ್ಯ ಪ್ರದರ್ಶನದಲ್ಲಿ ರುಜುತಾ ಸೋಮನ್, ಪ್ರಾಚೀತಿ ಡಾಂಗೆ ತಂಡದವರು ಓಡಿಸಿ ನೃತ್ಯ, ಕಥಕ್, ಕಥಕನ್ ವೇಗದ ಹೆಜ್ಜೆಗಳು ಮತ್ತು ಹಸ್ತ ಮುದ್ರೆಗಳ ಮೂಲಕ ಭಾರತೀಯ ಕಲೆಗಳ ಶ್ರೀಮಂತಿಕೆಯನ್ನು ಪ್ರದರ್ಶಿಸಿದವು. ಅವರ ನೃತ್ಯದಲ್ಲಿ ತಾಂತ್ರಿಕ ನಿಖರತೆ ಮತ್ತು ಭಾವಪೂರ್ಣ ಅಭಿನಯ ಎದ್ದು ಕಾಣುತ್ತಿತ್ತು. ಭರತನಾಟ್ಯ, ಕಥಕ್, ಓಡಿಸಿನೃತ್ಯ ಮತ್ತು ಶಾಸ್ತ್ರೀಯ ಸಂಗೀತದ ಮೂಲಕ ಅಲ್ಲಿದ್ದ ಸಭೀಕರನ್ನು ಮಂತ್ರ ಮುಗ್ಧಗೊಳಿಸಿದರು.ಸಾರಂಗಮಠದಲ್ಲಿ ಟಿ.ಜಿ.ಹಿರೇಮಠ ಸ್ಮೃತಿ ಸಮಾರೋಹದ ಅಂಗವಾಗಿ ಸ್ವರಾಂಜಲಿ ಶಾಸ್ತಿçÃಯ ಗಾಯನ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಧರ್ಮೋಪದೇಶವು ಸತ್ಯ, ನೈತಿಕತೆ, ಕರ್ತವ್ಯ ಆಧ್ಯಾತ್ಮಿಕ ಮೌಲ್ಯಗಳನ್ನು ಜೀವನದ ಉನ್ನತ ಗುರಿಗಳನ್ನು ಸಾಧಿಸಲು ಮಾರ್ಗದರ್ಶನ ನೀಡುತ್ತದೆ ಎಂದು ಸಾರಂಗಮಠದ ಪೀಠಾಧಿಪತಿ ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ಶ್ರೀ ಹುಡೇದ ಲಕ್ಷ್ಮೀ ಜಾತ್ರಾಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ನಾಲತ್ತವಾಡದ ಶ್ರೀ ವಿರೇಶ್ವರ ಶರಣರ ಮಹಾಪುರಾಣ ಹಾಗೂ ವಿರೇಶ್ವರ ಶರಣರ ತೊಟ್ಟಿಲು ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ನೆಮ್ಮದಿಯ ಬದುಕಿಗೆ ಧರ್ಮ ಪಾಲನೆ ಮಾಡಲು ಮನುಷ್ಯ ಜನ್ಮ ತಾಳಿದ ಮೇಲೆ ಲಿಂಗ ಧರಿಸುವುದರಿಂದ ಬಾಳಿನ ಭಾಗ್ಯೋದಯಕ್ಕೆ ಗುರು ಕಾರುಣ್ಯದ ಬೆಳಕು ನೀಡಿ ಪರಿಶುದ್ಧ ಮತ್ತು ಪವಿತ್ರವಾದ ಜೀವನ ರೂಪಿಸುವುದೇ ಗುರುವಿನ ಪರಮ ಧರ್ಮವಾಗಿದೆ ಎಂದರು.ಈ ವೇಳೆ ಪುರಾಣ ಪ್ರವಚನಕಾರ ವೀರಯ್ಯ ಶಾಸ್ತ್ರೀಗಳು ಮಾತನಾಡಿದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಿಂಗನಗೌಡ ಬಿರಾದಾರ ಸ್ವಾಗತಿಸಿ ನಿರೂಪಿಸಿದರು. ವೇದಿಕೆಯ ಮೇಲೆ ದೇವಸ್ಥಾನದ ಅರ್ಚಕ ನಿಂಗಯ್ಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಾಲಿ ಶಾಸಕರು ಮೂರು ವರ್ಷದ ಅವಧಿಯಲ್ಲಿ ಮೂರು ಕಿಮೀ ಡಾಂಬರ ರಸ್ತೆ ನಿರ್ಮಿಸಿ ಸಾಮಾಜಿಕ ಜಾಲತಾಣದಲ್ಲಿ ಏನೋ ಸಾಧನೆ ಮಾಡಿದ ಹಾಗೆ ಪ್ರಚಾರ ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಪೋಸ್ಟ್ ಅಥವಾ ಏನಾದರೂ ಬರೆದರೆ ಅಂತಹವರ ವಿರುದ್ಧ ಪೊಲೀಸ್ ಇಲಾಖೆಯಿಂದ ಬೆದರಿಸುವ ಕಾರ್ಯ ಮಾಡುತ್ತಾ ಪೊಲೀಸ್ ಇಲಾಖೆಯನ್ನು ಕಾಂಗ್ರೆಸ್ ಕೀಲಿ ಕೈ ತರಹ ಮಾಡಿಕೊಂಡಿದ್ದಾರೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹರಿಹಾಯ್ದರು.ಸಿಂದಗಿಯ ಜ್ಯೋತಿ ನಗರದ ಜ್ಯೋತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಣಿ ಸಭೆ ಹಾಗೂ ಬಿಎಲ್‌ಎ-೨ ಸದಸ್ಯರ ಕಾರ್ಯಗಾರವನ್ನು ಮಾಜಿ ಶಾಸಕ ರಮೇಶ ಭೂಸನೂರ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಿಂದ ತುಂಬಿದೆ. ಮುಂಬರುವ ದಿನಮಾನಗಳಲ್ಲಿ ಕಾಂಗ್ರೆಸ್ ಪಕ್ಷ ಅವನತಿ ದಾರಿ ಹಿಡಿಯಲಿದೆ. ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಕೇವಲ ಪ್ರಚಾರಕ್ಕೆ ಮಾತ್ರ ಸಿಮೀತವಾಗಿದೆ ಎಂದು ಆರೋಪಿಸಿದರು.ಈ ವೇಳೆ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ…

Read More

ಮುಂದಿನ ವರ್ಷವೂ ಬಜೆಟ್ ಮಂಡನೆ | ಸಿಎಲ್‌ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯನ್ನು ಬಳಸಿಕೊಂಡು ತಾವು ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಂದೇಶ ರವಾನಿಸಿದ್ದಾರೆ.2027-28ರ ಆರ್ಥಿಕ ವರ್ಷದ 18ನೇ ಬಜೆಟ್ ಮಂಡಿಸುವುದಾಗಿ ಹೇಳಿಕೊಂಡರು.ನನ್ನ ಮುಂದಿನ ಬಜೆಟ್‌ನಲ್ಲಿ, ಪ್ರತಿಯೊಬ್ಬ ಸಚಿವರು ತಮ್ಮ ಇಲಾಖೆಗಳ ಬೇಡಿಕೆಗಳ ಕುರಿತು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಶಾಸಕರೊಬ್ಬರು ತಿಳಿಸಿದ್ದಾರೆ.ಮಳವಳ್ಳಿ ಶಾಸಕ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರು ಎಸ್‌ಸಿಗಳಿಗೆ ಆಂತರಿಕ ಕೋಟಾ ಜಾರಿಗೆ ತರುವ ನಿರ್ಧಾರದಲ್ಲಿನ ವಿಳಂಬದ ವಿಷಯವನ್ನು ಎತ್ತಿದರು. ಏಕೆಂದರೆ ಇದು ಪಕ್ಷದ ಭವಿಷ್ಯಕ್ಕೆ ಹಾನಿ ಮಾಡುತ್ತದೆ. ಮಾರ್ಚ್ 27 ರಂದು ನಿರ್ಧಾರ ತೆಗೆದುಕೊಳ್ಳಲು ಕರೆಯಲಾದ ವಿಶೇಷ ಸಚಿವ ಸಂಪುಟ ಸಭೆಯ ಮೊದಲು ಎಸ್‌ಸಿ ಸಮುದಾಯಗಳಿಂದ ಬಂದ ಎಲ್ಲಾ ಶಾಸಕರ ಸಭೆಯನ್ನು ಕರೆಯುವಂತೆ ಸೂಚಿಸಿದರು.ಹಲವು ಶಾಸಕರು ಹೆಚ್ಚಿನ ಅನುದಾನಗಳನ್ನು ಕೋರಿದರು, ಸಾಕಷ್ಟು ಆದಾಯ ಬಂದರೆ ಪೂರಕ ಬಜೆಟ್‌ನಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ (ಐPಉ) ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು ೨೫ ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಹೇಳಿದರು.ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಹಾಗಾಗಿ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯಬೇಕು. ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ,೭೦೨೨೦೨೬೫೬೯ ಅಥವಾ ೯೪೪೯೫೧೭೪೧೭ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.ಯಾವುದೇ ಅನಧಿಕೃತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಿಡ್ನಿ ದಾನ ಮಾಡುವುದರಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನಡೆದ ವಿಶ್ವ ಕಿಡ್ನಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಿಗೆ ಕಿಡ್ನಿ ದಾನ ಮಾಡಿರುವ ತಾಯಂದಿರು ಅವರಿಗೆ ಎರಡನೇ ಬಾರಿಗೆ ಜನ್ಮ ನೀಡಿದ್ದಾರೆ. ಕಿಡ್ನಿ ದಾನ ಮಾಡುವವರಲ್ಲಿ ಮಹಿಳೆಯರೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಹೇಳಿದ ಅವರು ತಾಯಂದಿರ ಈ ತ್ಯಾಗ ಮತ್ತು ಸಮರ್ಪಣೆ ಮನೋಬಾವ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು. ಅಲ್ಲದೇ, ಮೂತ್ರಪಿಂಡ ಕಾಯಿಲೆ ತಡೆಗಟ್ಟಲು ಅನುಸರಿಸೇಬೇಕಾದ ಜೀವನಶೈಲಿ ಮತ್ತು ಕೈಗೊಳ್ಳಬೇಕಿರುವ ಮುನ್ನೇಚರಿಕೆ ಕ್ರಮಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.ಯೂರಾಲಜಿ ವಿಭಾಗದ ಮುಖ್ಯಸ್ಥ ಡಾ. ಎಸ್. ಬಿ. ಪಾಟೀಲ ಪ್ರಾಸ್ತವಿಕವಾಗಿ ಮಾತನಾಡಿ, ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈವರೆಗೆ ನಡೆಸಲಾಗಿರುವ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗಳ ಕುರಿತು ವಿವರಿಸಿದರು. ಅಲ್ಲದೇ, ಡಯಾಲಯಿಸಿಸ್ ಪ್ರಯೋಜನಗಳು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಉಜ್ವಲಾ ಸಂಸ್ಥೆಯ ಮುಖ್ಯಸ್ಥೆ ಸುನಂದಾ ತೊಳಬಂದಿ ಹೇಳಿದರು. ನಗರದ ಕೃಷ್ಣ-ವಾದಿರಾಜ ಮಠದಲ್ಲಿ ಅಖಿಲ ಭಾರತ ಮಧ್ವ ಮಹಾ ಮಂಡಳ ಸಹಕಾರದೊಂದಿಗೆ ಹಮ್ಮಿಕೊಂಡ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಮಹಿಳೆಯರು ಅಬಲೆಯರಲ್ಲ ಸಬಲೆಯರು ಎಂದು ಹೆಮ್ಮೆಯಿಂದ ಹೇಳುವ ಕಾಲ ಇದು. ದಶ ದಿಕ್ಕುಗಳಲ್ಲಿಯೂ ಮಹಿಳೆಯರ ಸಾಧನೆ ಕುರಿತು ಚರ್ಚೆ ನಡೆಯುತ್ತಿರುವುದೆ ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು ಅವರು ವಿವರಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಸಮೀತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಸುನಂದಾ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಮೂಲಕ ಪ್ರತಿಭೆಗಳು ಹೊರಬರಬೇಕೆಂದು ಕರೆ ನೀಡಿದರು.ಮಹಿಳೆಯರು ಸ್ವಯಂ ರಕ್ಷಣೆಗೆ ಕರಾಟೆಯಂತಹ ಸಾಧನೆಗಳನ್ನು ಅರಿಯಬೇಕೆಂದರು.ಚಿತ್ತಾ ಗೋಟೇಕರ ಮಾತನಾಡಿ ಮಹಿಳೆಯರು ಸಮಾಜದಲ್ಲಿ ತಲೆ ಎತ್ತಿ ನಡೆಯಲು ಧೈರ್ಯದಿಂದ ಮುನ್ನಗ್ಗಬೇಕೆಂದು ಕರೆ ನೀಡಿದರು. ಅತಿಥಿಗಳಾಗಿ ರುಕ್ಮಿಣಿ ಗೋಪಾಲ ನಾಯಕ, ಡಾ. ಜಯಶ್ರೀ ರಾಮರಾವ…

Read More