Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ರಮೇಶ ಚಟ್ಟರಕಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ತಮಗೆ ಬೇಕಾಗಿರುವ ಪರೀಕ್ಷಾ ಕೇಂದ್ರ ಹಾಕಿಸಿ ಕೊಡುವ ವಿಚಾರವಾಗಿ ವಿದ್ಯಾರ್ಥಿಗಳಿಂದ ಹಣ ಪಡೆದ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣ ಹಾಗೂ ಸುದ್ಧಿವಾಹಿನಿಗಳಲ್ಲಿ ಹರಿದಾಡಿದ್ದು ಗಮನಿಸಲಾಗಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಸಮಯದಲ್ಲಿ ವಿನಾಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿ ಮಾಡುವ ಮೂಲಕ ಶಿಕ್ಷಕರಿಗೆ ಸರಿಯಲ್ಲದ ರೀತಿಯಲ್ಲಿ ವರ್ತನೆ ಮಾಡಿರುವುದು ಮೇಲ್ನೊಟಕ್ಕೆ ಕಂಡ ಬಂದ ದಿಸೆಯಲ್ಲಿ ಈ ವಿಷಯ ಇಲಾಖೆಗೆ ಮುಜಗರ ಉಂಟು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರು ಸ್ಪಷ್ಟ ಅಭಿಪ್ರಾಯವನ್ನು ಕಾರ್ಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಗಳ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತತ್ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಆದೇಶಿಸಿದ್ದಾರೆ.
ಕೊಲ್ಹಾರದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಎಸ್.ಎಸ್.ಮ್ಯಾಗೇರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನವ ಭಾರತದ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ದಾರ್ಶನಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ಸಮಾನತೆಯ ಸಂದೇಶವನ್ನು ದೇಶಕ್ಕೆ ನೀಡಿದ ಮಹಾನ್ ಚೇತನ ಎಂದು ತಹಶೀಲ್ದಾರ ಎಸ್.ಎಸ್. ಮ್ಯಾಗೇರಿ ಹೇಳಿದರು.ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪಟ್ಟಣದ 12ನೇ ವಾರ್ಡಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿದರು.ಶಿಕ್ಷಕರಾದ ಜಗದೀಶ ಕಾಂಬಳೆ ಮತ್ತು ಸಂಗಮೇಶ ದಶವಂತ ಉಪನ್ಯಾಸ ನೀಡಿದರು.ಕಬಡ್ಡಿ ಪಟು ಪ್ರಜ್ವಲ ಚಂದ್ರಶೇಖರ ಈಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಪಟ್ಟಣದಲ್ಲಿ ಅಂಬೇಡ್ಕರ್ ಹಾಗೂ…
ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26 ನೇ ಸಾಲಿನ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ, ಪ್ರಥಮ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದ್ದು, ಕೂಡಲೇ ಇದನ್ನು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಮಂಡಿಸಿದರು.ಮಂಗಳವಾರ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ಹಗರಣವಲ್ಲ, ಮಕ್ಕಳ ಭವಿಷ್ಯದ ದೃಷ್ಟಿಕೋನದ ಪ್ರಶ್ನೆ, ಮುಂದೆ ನಿಯಮಾವಳಿ ಮೀರಿವೆ ಎಂದು ಶಾಲೆಗಳನ್ನು ಬಂದ್ ಮಾಡಿದರೆ ಆ ಮಕ್ಕಳು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದರು.ಈ ವಿಷಯವಾಗಿ ತಪ್ಪಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ, ಆದರೆ ತಪ್ಪಾಗಿದೆ ಎಂದು ಹೇಳಿ ಸುಮ್ಮನೆ ಕುಳಿತರೇ ಸಾಕೇ? ಎಂದು ಪ್ರಶ್ನಿಸಿದರು.ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ,8 ಶಿಕ್ಷಣ…
ಹಸಿವು ನೀಗಿಸುವ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಶಾಸಕ ಲಕ್ಷ್ಮಣ ಸವದಿ | ಜನಸಾಮಾನ್ಯರೊಂದಿಗೆ ಕುಳಿತು ಉಪಾಹಾರ ಸೇವನೆ ಉದಯರಶ್ಮಿ ದಿನಪತ್ರಿಕೆ ಅಥಣಿ: ಬಡವರು, ಕಾರ್ಮಿಕರು ಹಾಗೂ ಸಾರ್ವಜನಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ’ಇಂದಿರಾ ಕ್ಯಾಂಟೀನ್’ಅನ್ನು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಕಟ್ಟಡದ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರೊಂದಿಗೆ ಸಾಲಿನಲ್ಲಿ ನಿಂತು ತಾವೇ ತಟ್ಟೆ ಹಿಡಿದು ಆಹಾರ ಪಡೆದು, ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ವಿದ್ಯಾರ್ಥಿಗಳಿಗೆ ಹೊಟ್ಟೆತುಂಬ ಊಟ ಸಿಗಬೇಕು ಎನ್ನುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ ಎಂದರು.ಪಟ್ಟಣದ ಆಯಕಟ್ಟಿನ ಜಾಗದಲ್ಲಿ ಈ ಕ್ಯಾಂಟೀನ್ ಆರಂಭವಾಗಿರುವುದರಿಂದ ನಿತ್ಯ ನೂರಾರು ಜನರಿಗೆ ಅನುಕೂಲವಾಗಲಿದೆ.ಈ…
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ ಸವದಿ ಘೋಷಣೆ ಉದಯರಶ್ಮಿ ದಿನಪತ್ರಿಕೆ ಅಥಣಿ: “ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ತುಳಿತಕ್ಕೊಳಗಾದವರ ಸಮಾನತೆಗಾಗಿ ಹೋರಾಡಿದವರು. ಅವರ ವಿಚಾರಧಾರೆಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಅವರು ತಾಲೂಕು ಆಡಳಿತ, ತಾಲೂಕು ಪಂಚಾಯತ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತೋಟಗಾರಿಕಾ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿಪಟ್ಟಣದ ಉದ್ಯಾನವನ ಪಕ್ಕದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಭೂಮಿ ಪೂಜೆ ನೆರವೇಸಲಿದ್ದೆವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆತಾಲೂಕಿನಲ್ಲಿ ಈಗಾಗಲೇ ಪಶು ವೈದ್ಯಕೀಯ ಕಾಲೇಜು ಆರಂಭವಾಗಿದೆ. 508 ಕೋಟಿ ರೂ. ವೆಚ್ಚದ ಕೃಷಿ ಕಾಲೇಜು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ತಂದೆಯೋರ್ವ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾರ್ಚ್ನಲ್ಲಿಯೇ ಈ ಘಟನೆ ನಡೆದಿದ್ದು, ಇದೀಗ ಅಸಲಿಯತ್ತು ಬಯಲಾಗಿದೆ.ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ.ಘಟನೆ ವಿವರ:ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ.15 ರಂದು ತನ್ನ ಆರು ವರ್ಷದ ಪುತ್ರ ಸಿದ್ಧಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಮನೆಯಿಂದ ಕರೆದೊಯ್ದಿದ್ದಾನೆ. ಬಳಿಕ ಮನೆಗೆ ಬಂದು ಮಗನನ್ನು ಶಾಲೆಗೆ ಸೇರಿಸಿದ್ದಾಗಿ ತಿಳಿಸಿದ್ದಾನೆ. ಏಪ್ರೀಲ್ 1 ರಂದು ಸಿದ್ಧಾರ್ಥನ ಜನ್ಮ ದಿನವಿದ್ದು, ಆಚರಣೆಗಾಗಿ ಕರೆತರಲು ಮಲ್ಲಿಕಾರ್ಜುನನ ಪತ್ನಿ ಭಾಗ್ಯಶ್ರೀ ದುಂಬಾಲು ಬಿದ್ದಿದ್ದಾಳೆ. ಕಡೇ ಪಕ್ಷ ಫೋನ್ ಮಾಡಿಯಾದರೂ ಮಗನೊಂದಿಗೆ ಮಾತನಾಡಿಸು ಎಂದು ಒತ್ತಾಯಿಸಲಾಗಿ ಯಾರ ಜೊತೆಗೋ ಮಾತನಾಡಿಸಿದ್ದು, ಮಗನ ಕೈಗೆ ಮೊಬೈಲ್ ಕೊಡುವಂತೆ ಹೇಳಿದಾಗ, ಆತ ಮಾತನಾಡಲು ನಿರಾಕರಿಸುತ್ತಿರುವುದಾಗಿ ಅಪರಿಚಿತರು…
ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರ ತತ್ವ, ಸಿದ್ಧಾಂತಗಳು ಸದಾ ಪ್ರಸ್ತುತವಾಗಿದ್ದು, ಅವುಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಮಂಗಳವಾರ ತೊರವಿಯಲ್ಲಿ ಡಾ. ಅಂಬೇಡ್ಕರ ಅವರವ135ನೇ ಜಯಂತಿಗೆ ಚಾಲನೆ ನೀಡಿದ ಅವರು, ನಂತರ ವಿಜಯಪುರ ನಗರದಲ್ಲಿ ಡಾ. ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಬಳಿಕ ದಲಿತ ಸಂಘಟನೆಗಳ ಮಹಾ ಒಕ್ಕೂಟ ಮತ್ತು ಡಾ. ಬಿ. ಆರ್. ಅಂಬೇಡ್ಕರ ಶಕ್ತಿ ಸಂಘದ ವತಿಯಿಂದ ಆಯೋಜಿಸಲಾದ ಜಯಂತಿ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ವಿಶ್ವಶ್ರೇಷ್ಠ ಸಂವಿಧಾನ ನೀಡಿದ ಬಾಬಾಸಾಹೇಬ ಅಂಬೇಡ್ಕರ ಅವರು ದೀರ್ಘಾಯುಷಿಯಾಗಿ ಬಾಳುವುದು ಮುಖ್ಯವಲ್ಲ. ಜೀವನದಲ್ಲಿ ಹೇಗೆ ಬದುಕುತ್ತೀರಿ ಎಂಬುದು ಮುಖ್ಯ ಎಂದು ಪ್ರತಿಪಾದಿಸಿದ್ದರು. ಅವರ ಆಶಯಗಳಿಗೆ ಅನುಗುಣವಾಗಿ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಈ ರೀತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ವಿವಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ಡಾ. ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಜೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ದೇಶದ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಆಳವಾದ ಕಾನೂನು ಪಾಂಡಿತ್ಯ, ಸಮಾಜದ ನಾನಾ ವರ್ಗಗಳ ಸಮಸ್ಯೆಗಳ ಕುರಿತು ಹೋಂದಿದ್ದ ಸೂಕ್ಷ್ಮ ಅರಿವು ಹಾಗೂ ಸಮಾನತೆಯ ಬದ್ಧತೆಯು ಭಾರತದ ಸಂವಿಧಾನವನ್ನು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಲು ಕಾರಣವಾಗಿದೆ ಎಂದು ಹೇಳಿದರು.ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿದರು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ…
ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆದ ಡಾ.ಅಂಬೇಡ್ಕರ್ ಜಯಂತಿಯಲ್ಲಿ ಡಾ.ಅನೀಲ ನಾಯಕ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಾ.ಅಂಬೇಡ್ಕರ್ ಅವರು ಶ್ರೇಷ್ಠ ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕೀಯ ಚಿಂತಕ ವಿಶ್ವ ಮಾನವತೆಯ ಹರಿಕಾರರಾಗಿ ಸಾಮಾಜಿಕ ನ್ಯಾಯದ ಪರ ಹಾಗೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿದ ಧೀಮಂತ ನಾಯಕ ಎಂದು ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಅನೀಲ ಬಿ ನಾಯಕ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಯುನಿಟ್-1 ಮತ್ತು ಯುನಿಟ್-II, ವೈಆರ್ಸಿ ಹಾಗೂ ಎಸ್ಸಿ ಎಸ್ಟಿ ಸೆಲ್ ಸಹಯೋಗದಲ್ಲಿ ಡಾ. ಬಿ ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮನೆ ಮನೆಗೆ, ಮನ ಮನಕೆ ಬಾಬಾಸಾಹೇಬರು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಪ್ರಿಲ್ ೧೪ ರಿಂದ…
ವಿಜಯಪುರದಲ್ಲಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದಿಂದ ೨೦ ಜನ ಸಾಧಕರಿಗೆ ಪ್ರಶಸ್ತಿ ಪ್ರಕಟ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆಯ. ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಏ.೨೫ ರಂದು ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಬೆಳಿಗ್ಗೆ 10:೦೦ ಘಂಟೆಗೆ ಪ್ರಥಮ ಬಸವ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ವಿಜಯಪುರದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ್ ಸಂಬಣ್ಣಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ.ಅಜಿತ್ ರಾಂಪುರೆ ಮುಖ್ಯ ಕಾರ್ಯನಿರ್ವಾಹಕರು ಮತ್ತು ಡೀನ್ ಅರೆಯುಸ್ ವಿಶ್ವವಿದ್ಯಾಲಯ ಅರೋಬಾ ಇವರು ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಲಿದ್ದಾರೆ.ಇದೆ ಸಂಧರ್ಭದಲ್ಲಿ ಡಾ.ಅಶೋಕ ಆಲೂರ , ಕುಲಪತಿಗಳು, ಕೊಡಗು ವಿಶ್ವವಿದ್ಯಾಲಯ ಇವರು ‘ಬಸವ ತತ್ವ ಜಗದ ತತ್ವ ‘ ಎಂಬ ವಿಷಯ ಕುರಿತು ಅನುಭಾವ ನೀಡಲಿದ್ದಾರೆ.ಡಾ.ಶಶಿಕಾಂತ ಪಟ್ಟಣ, ಅಧ್ಯಕ್ಷರು, ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರ, ಪುಣೆ ಇವರು ಅಧ್ಯಕ್ಷ ಸ್ಥಾನ ವಹಿಸಲಿದ್ದು, ಗೌರವ ಉಪಸ್ಥಿತರಾಗಿ ಡಾ.ಮಹಾಂತೇಶ ಬಿರಾದಾರ, ಬಿಎಲ್ಡಿಇ ಸಂಸ್ಥೆ ಆಡಳಿತ ಅಧಿಕಾರಿಗಳು, ಸುರೇಶ…
