Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಅಖಂಡ ೧೮೮ ದಿನದ ಹೋರಾಟದ ಫಲವಾಗಿ ಬಸವನಬಾಗೇವಾಡಿ ವಿದ್ಯುತ್ ವಿಭಾಗೀಯ ಕಚೇರಿ ದಿ.12.12.2012 ರಂದು ಆದೇಶ ಸಿಕ್ಕಿತು. ಇದರಿಂದಾಗಿ 297 ಗ್ರಾಮಗಳ ಜನರು ವಿಜಯಪುರಕ್ಕೆ ಹೋಗಿ ಬರುವುದನ್ನು ತಪ್ಪಿಸಿದಂತಾಗಿದೆ. ಇಂದಿಗೆ ಈ ಕಚೇರಿಯು ಹತ್ತು ವರ್ಷದ ಹಿಂದೆ ಆದೇಶದೊಂದಿಗೆ ಆರಂಭವಾಗಿ ಇಂದಿಗೆ ಹನ್ನೊಂದು ವರ್ಷಕ್ಕೆ ಕಾಲಿಡುತ್ತಿದ್ದರೂ ಜನರಿಗೆ ಈ ಕಚೇರಿಯ ಸೌಲಭ್ಯಗಳು ಸರಿಯಾಗಿ ಜನರಿಗೆ ಸಿಗುತ್ತಿಲ್ಲ ಎಂದು ರೈತಪರ, ಜನಪರ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.ಗುರುವಾರ ದೂರವಾಣಿ ಮೂಲಕ ಮಾತನಾಡಿದ ಅವರು, ಪಟ್ಟಣದಲ್ಲಿ ವಿದ್ಯುತ್ ವಿಭಾಗೀಯ ಕಚೇರಿ ಇಲ್ಲದ ಪರಿಣಾಮವಾಗಿ ಜನರು ಜಿಲ್ಲಾ ಕೇಂದ್ರ ವಿಜಯಪುರಕ್ಕೆ ತಮ್ಮ ಕೆಲಸಗಳಿಗಾಗಿ ಅಲೆದಾಡುವ ಪರಿಸ್ಥಿತಿಯಿತ್ತು. ಅಲ್ಲದೇ ದೂರದ ತಾಳಿಕೋಟಿ, ಮುದ್ದೇಬಿಹಾಳ, ನಿಡಗುಂದಿ, ಕೊಲ್ಹಾರ ತಾಲೂಕಿನ ಸೇರಿದಂತೆ ಇದರ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಜನರು ವಿದ್ಯುತ್ ಕೆಲಸಗಳಿಗಾಗಿ ವಿಜಯಪುರದಲ್ಲಿರುವ ವಿಭಾಗೀಯ ಕಚೇರಿಗೆ ಹೋಗುವ ಪರಿಸ್ಥಿತಿಯಿತ್ತು. ಜನರ ಅಲೆದಾಡುವದನ್ನು ಮನಗಂಡು ಅವರ ಕೆಲಸಗಳು ಸುಲಭವಾಗಿ ಬೇಗನೇ ಆಗುವ ಉದ್ದೇಶದಿಂದ ಹೆಸ್ಕಾಂ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಗ್ರಂಥಾಲಯಗಳು ಜ್ಞಾನದ ಹೆಬ್ಬಾಗಿಲುಗಳಾಗಿವೆ. ಪ್ರತಿಯೊಬ್ಬರೂ ಗ್ರಂಥಾಲಯಗಳ ಲಾಭವನ್ನು ಪಡೆದುಕೊಳ್ಳಬೇಕೆಂದು ಎಂದು ವಿಜಯಪುರದ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಗ್ರಂಥಪಾಲಕ ಡಾ.ಎಂ.ಎಂ.ಬಾಚಲಾಪೂರ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಪ್ರಸ್ತುತ ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೂ ವಿದ್ಯಾರ್ಥಿಗಳಲ್ಲಿ ಜ್ಞಾನದ ಮಟ್ಟ ಏರುಗತಿಯಲ್ಲಿ ಕಂಡುಬರುತ್ತಿಲ್ಲ. ಹತ್ತು ಹದಿನೈದು ವರ್ಷಗಳ ಹಿಂದೆ ಹಳ್ಳಿಗಳಲ್ಲಿನ ಗ್ರಂಥಾಲಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಓದುಗರು ಸಿಗುತ್ತಿದ್ದರು. ಆದರೆ ಇಂದು ಓದುವ ಹವ್ಯಾಸ ಕಡಿಮೆಯಾಗುತ್ತಿದಯೇ ಎಂಬ ಪ್ರಶ್ನೆ ಮೂಡುವಂತಾಗಿದೆ. ನಿರಂತರ ಓದುವಿಕೆಯನ್ನು ಇಟ್ಟುಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್, ಇಂದಿನ ರಾಜ್ಯಸಭೆ ಸದಸ್ಯೆ ಡಾ.ಸುಧಾಮೂರ್ತಿ ಅವರಂತಹ ವ್ಯಕ್ತಿಗಳು ನಮಗೆ ಆದರ್ಶವಾಗಬೇಕಿದೆ ಎಂದರು.ಪ್ರಪಂಚದಲ್ಲಿಯೇ ಭಾರತವು ಒಂದು ತುಂಬಾ ವಿಶಿಷ್ಠ ದೇಶವಾಗಿದೆ. ನಾಗರಿಕತೆಗಳು ಕಣ್ಣು ಬಿಡುವದಕ್ಕಿಂತ ಮುನ್ನವೇ ದೇಶದಲ್ಲಿ ಸ್ಥಿರವಾದ ಜೀವನ ನಡೆದಿತ್ತು.ಪ್ರಪಂಚವು ಅಕ್ಷರಜ್ಞಾನ ಪಡೆಯುವಾಗಲೇ ಪ್ರಾಚೀನ ಭಾರತದಲ್ಲಿ ಸರ್ವಶ್ರೇಷ್ಠವಾದ ಗ್ರಂಥಾಲಯಗಳು ತಲೆಯೆತ್ತಿದ್ದು ಭಾರತೀಯರಿಗೆ ಹೆಮ್ಮೆಯ ಸಂಗತಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಂಶಯಾಸ್ಪದವಾಗಿ ವ್ಯಕ್ತಿಯ ಮೃತದೇಹವೊಂದು ತಾಲೂಕಿನ ಚಲಮಿ ತಾಂಡಾ ಗ್ರಾಮದ ಮನೆಯೊಂದರಲ್ಲಿ ಪತ್ತೆಯಾಗಿದೆ.ಮೃತ ದುರ್ದೈವಿಯನ್ನು ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿ ಗ್ರಾಮದ ಶಂಕ್ರಪ್ಪ ಬಡಿಗೇರ(೫೭) ಎಂದು ಗುರುತಿಸಲಾಗಿದೆ.ಈತ ಹುಣಸಗಿ ತಾಲೂಕಿನ ಕುರೇಕಿನಾಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಎಂದು ತಿಳಿದು ಬಂದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಅಸುನೀಗಿದ್ದಾನೆ ಎನ್ನಲಾಗಿದ್ದು, ಘಟನೆಯ ಹಿನ್ನಲೆ ನಿಘೂಡವಾಗಿದೆ.ಈ ವ್ಯಕ್ತಿ ಇಲ್ಲಿಗೆ ಯಾಕೆ ಬಂದಿದ್ದ? ಇದು ಕೊಲೆಯಾ ಅಥವಾ ಸಹಜ ಸಾವಾ ಎಂಬ ಬಗ್ಗೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಬೇಟಿ ನೀಡಿ ಪರಿಶೀಲಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಿಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ರನ್ನು ಕಂಡು, ಜನೆವರಿ ತಿಂಗಳಲ್ಲಿ ಜರುಗುವ ತಿಕೋಟಾ ತಾಲೂಕ ಪ್ರಥಮ ಸಮ್ಮೇಳನ ಕುರಿತಂತೆ ಗುರುವಾರ ಸಮಾಲೋಚನೆ ಮಾಡಲಾಯಿತು.ಮುಂಬರುವ ದಿನಗಳಲ್ಲಿ ತಿಕೋಟಾದಲ್ಲಿ ನಡೆಸಲು ಉದ್ದೇಶಿಸಿರುವ ಪ್ರಥಮ ಕನ್ನಡ ಸಮ್ಮೇಳನವನ್ನು ಅತ್ಯಂತ ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ಆಚರಿಸುವುದು ತಿಕೋಟಾ ತಾಲ್ಲೂಕಿನ ಎಲ್ಲಾ ಜನರ ಆಶಯವಾಗಬೇಕೆಂದರು.ಸಮ್ಮೇಳನದ ಯಶಸ್ಸಿಗೆ ತನು ಮನ ಧನ ಗಳಿಂದ ಸಂಪೂರ್ಣ ಸಹಕಾರ ನೀಡುವದಾಗಿ ತಿಳಿಸಿದರು ಎಂದು ಕ ಸಾ ಪ ತಾಲ್ಲೂಕಾಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಘಟನಾ ಕಾರ್ಯದರ್ಶಿಗಳಾದ ಪ ಪೂ ಬಾಬುರಾವ್ ಮಹಾರಾಜರು ಮತ್ತು ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ಡಾ.ಎಂ.ಡಿ.ಮೇತ್ರಿಯವರನ್ನು ನೇಮಕಗೊಳಿಸಿ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.ರಾಘವೇಂದ್ರ ಎಸ್.ಆರ್. ಅವರು ಆದೇಶಿಸಿದ್ದಾರೆ. ಮಾಹಿತಿ ಹಕ್ಕು ಉಲ್ಲಂಘನೆ,ದೀನ ದುರ್ಬಲರು, ಜನಸಾಮಾನ್ಯರ ಮೇಲೆ ದೌರ್ಜನ್ಯ, ಜನಾಂಗೀಯ ನಿಂದನೆ, ಮಹಿಳೆ‌ ಮತ್ತು ಮಕ್ಕಳ ಮೇಲೆ‌ ಕಿರುಕುಳ, ಮಾಹಿತಿ ಹಕ್ಕು ಬಳಕೆದಾರರ ಮೇಲೆ ಹಲ್ಲೆ, ಸುಳ್ಳು ದೂರು, ದಬ್ಬಾಳಿಕೆಯಂತಹ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರಗಳ ವಿರುದ್ಧ ಹೋರಾಟ ನಡೆಸಿ‌ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಶ್ರಮಿಸುವಂತೆ ರಾಜ್ಯಾಧ್ಯಕ್ಷರು ನೇಮಕಾತಿಯಲ್ಲಿ‌ ಸೂಚಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿಯಲ್ಲಿ ಪಂಚಮಸಾಲಿಗಳು ನ್ಯಾಯಯುತವಾಗಿ ಮೀಸಲಾತಿ ಪಡೆಯಲು ಶಾಂತಿಯುತವಾಗಿ ಮಾಡುತ್ತಿದ್ದ ಹೋರಾಟವನ್ನು ಪೊಲೀಸ್ ಶಕ್ತಿ ಪ್ರಯೋಗಿಸಿ ಹತ್ತಿಕ್ಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರಕಾರ ಆಧುನಿಕ ಬ್ರಿಟೀಷರಂತೆ ವರ್ತಿಸಿರುವುದು ಖಂಡನೀಯವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಗೈದ ಜನವಿರೋಧಿ ರಾಜ್ಯ ಸರಕಾರವನ್ನು ಕಿತ್ತೊಗೆದು ರಾಷ್ಟ್ರಪತಿ ಆಡಳಿತವನ್ನು ಹೇರಬೇಕೆಂದು ನ್ಯಾಯವಾದಿ ದಾನೇಶ ಅವಟಿ ಅವರು ಆಗ್ರಹಿಸಿದರು.ಅವರು ನಗರದಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದ ಮುಂದೆ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಎಸಗಿರುವ ದೌರ್ಜನ್ಯವನ್ನು ಖಂಡಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಲಿಂಗಾಯತ ಪಂಚಮಸಾಲಿ ವಕೀಲರ ವೇದಿಕೆ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಇನ್ನೋರ್ವ ನ್ಯಾಯವಾದಿ ಬಸವರಾಜ ಯಾದವಾಡ ಅವರು ಮಾತನಾಡಿ, ಬೆಳಗಾವಿಯಲ್ಲಿ ಪಂಚಮಸಾಲಿ ಶ್ರೀಗಳು ಹಾಗೂ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಎಸಗಿರುವ ದೌರ್ಜನ್ಯ ಪ್ರಕರಣವನ್ನು ಸುಪ್ರೀಮ್ ಕೋರ್ಟಿನ ಹಾಲಿ ನ್ಯಾಯಾದೀಶರ ನೇತೃತ್ವದಲ್ಲಿ ಉನ್ನತ ನ್ಯಾಯಾಂಗ ತನಿಖೆಗೆ ಒಪ್ಪಿಸಿ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ನೊಂದ…

Read More

ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರಿಶೀಲಿಸಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಪವನ ಮಾಲಪಾಟಿ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಜನರಿಗೆ ನರೇಗಾ ಯೋಜನೆಯಡಿ ನಿರಂತರವಾಗಿ ಉದ್ಯೋಗ ಒದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪವನಕುಮಾರ ಮಾಲಪಾಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸ್ತುತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ ೪೨.೦೦ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ೩೦.೭೦ಲಕ್ಷಗಳ ಮಾನವ ದಿನಗಳ ಸೃಜನೆಯಾಗಿದೆ. ಪ್ರಸ್ತುತ ವರ್ಷ ಮುಕ್ತಾಯಗೊಳ್ಳಲು ೪ ತಿಂಗಳು ಬಾಕಿ ಇದೆ. ಆದ್ದರಿಂದ ಬಾಕಿ ಉಳಿದ ಮಾನವ ದಿನಗಳನ್ನು ಗ್ರಾಮ ಪಂಚಾಯಿತಿ ಮತ್ತು ಅನುಷ್ಠಾನ ಇಲಾಖೆಗಳಾದ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆಗಳಿಂದ ನಿಗದಿಪಡಿಸಿದ ಕಾಲದಲ್ಲಿ ಮಾನವ ದಿನಗಳನ್ನು ಸೃಜನೆ ಮಾಡಬೇಕು. ಇದಕ್ಕೆ ಪೂರಕವಾಗಿ ಗ್ರಾಮ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿ.ಶಂಕರ ಢಾಕಪ್ಪ ಲಮಾಣಿಯವರ ಪುಣ್ಯಸ್ಮರಣಾರ್ಥವಾಗಿ ಪ್ರತಿವರ್ಷ ಕೊಡಮಾಡಲಾಗುವ “ಶಂಕರ ಶ್ರೀ” ದತ್ತಿ ನಿಧಿ ಪುರಸ್ಕಾರಕ್ಕೆ ಈ ವರ್ಷ ನಾಡಿನ ಶ್ರೇಷ್ಠ ಸಾಹಿತಿಗಳಾದ ಡಾ.ಬಾಬು ಕೃಷ್ಣಮೂರ್ತಿ ಯವರನ್ನು ಆಯ್ಕೆ ಮಾಡಲಾಗಿದೆ. “ಗೋರಬಾಯಿ ಟೋಳಿ(ರಿ) ಮಹಿಳಾ ಸಮೂಹ ಸಂಸ್ಥೆ” ವಿಜಯಪುರ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬಸವನ ಬಾಗೇವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಡಿಸೆಂಬರ ೧೪ ರಂದು ಬಾಗೇವಾಡಿಯ ಶಂಕರಶ್ರೀ ವನದಲ್ಲಿ ಜರುಗಲಿದೆ. ಈ ಪ್ರಶಸ್ತಿಯೂ ಹತ್ತು ಸಾವಿರ ಗೌರವ ಧನ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.ಡಾ.ಬಾಬು ಕೃಷ್ಣಮೂರ್ತಿಯವರು ಕನ್ನಡ ಸಾಹಿತ್ಯದಲ್ಲಿ ಸುದಿರ್ಘ ಸೇವೆ ಸಲ್ಲಿಸಿದರು. ಸಾಹಿತ್ಯ, ಸಂಸ್ಕೃತಿಯಲ್ಲಿಯೂ ಅಪಾರ ಆಸಕ್ತಿಯುಳ್ಳವರು, ಜೊತೆಗೆ ಕ್ರಿಯಾಶೀಲ ಪ್ರತಿಭೆಗಳನ್ನು ಸೃಜನಶೀಲ ಮನಸ್ಸುಗಳನ್ನು ಪೋಷಿಸುತ್ತಾ ಬಂದವರು. ಕನ್ನಡ ಸಾಹಿತ್ಯ ದ ಮಹಾನ್ ಕನಸುಗಾರರಾಗಿ ಕನಸುಗಳನ್ನು ನನಸಾಗಿಸುವಲ್ಲಿ, ಅವರು ತೋರುವ ಕರ್ತವ್ಯ ನಿಷ್ಠೆ, ದೂರ ದೃಷ್ಟಿ ಸಾಹಿತ್ಯ ಸೇವಾ ಕರ್ತವ್ಯ ನಿಷ್ಠೆ , ಅನನ್ಯವಾದದು. ಚಂದ್ರಶೇಖರ್ ಆಜಾದ್, ಭಗತ್ ಸಿಂಗ್,…

Read More

ಲೇಖನ- ಯೋಗೆಶ್ ಸೈನಸಾಕಳೆಪತ್ರಿಕೋದ್ಯಮ ವಿದ್ಯಾರ್ಥಿ,ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯವಿಜಯಪುರ ಉದಯರಶ್ಮಿ ದಿನಪತ್ರಿಕೆ ಸನಾತನ ಧರ್ಮದಲ್ಲಿ ಪ್ರತಿಯೊಂದು ಹಬ್ಬಕ್ಕೂ ಮತ್ತು ಪ್ರತಿಯೊಂದು ಆಚರಣೆಗೂ ಹಾಗೂ ಉತ್ಸವಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ, ಅದೇ ರೀತಿ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಈ ಮಹಾಕುಂಭ ಮೇಳವೂ 12 ವರ್ಷಗಳಿಗೊಮ್ಮೆ ನಡೆಯುವ ಪ್ರಪಂಚದಾದ್ಯಂತ ಅತಿ ದೊಡ್ಡ ಧಾರ್ಮಿಕ ಉತ್ಸವವಾಗಿದೆ, ಈ ಮೇಳವೂ ಸಮುದ್ರ ಮಂಥನದ ಧಾರ್ಮಿಕ ಪೌರಾಣಿಕ ಕಥೆಗಳನ್ನು ಒಳಗೊಂಡಿದೆ. ಈ ಮೇಳ ದಲ್ಲಿ ಸ್ನಾನ ಮಾಡಿದರೆ ನಮ್ಮೆಲ್ಲ ಪಾಪಗಳು ನಶಿಸಿ ಹೋಗುತ್ತವೆ ಎಂದು ನಂಬಲಾಗುತ್ತದೆ .ಈ ಮಹಾಕುಂಭ ಮೇಳವು 2025 ರಲ್ಲಿ ಜನವರಿ 13 ರಿಂದ ಪ್ರಾರಂಭಗೊಂಡು ಫೆಬ್ರುವರಿ 26 ಕ್ಕೆ ಅಂತ್ಯಗೊಳ್ಳುತ್ತದೆ. ಹಿಂದೂ ಕ್ಯಾಲೆಂಡರ್ ನ ಪ್ರಕಾರ ಮಹಾಕುಂಭವು ಪೌಷ ಪೂರ್ಣಿಮೆಯ ದಿನದಂದು ಪ್ರಾರಂಭಗೊಂಡು ಮಹಾಶಿವರಾತ್ರಿ ಯೊಂದಿಗೆ ಅಂತ್ಯಗೊಳ್ಳುತ್ತದೆ. ಈ ಮಹಾಕುಂಭ ಮೇಳವೂ 45 ದಿನಗಳ ಕಾಲ ನಡೆಯಲಿದೆ.ಈ ಮೇಳಕ್ಕೆ ಈ ವರ್ಷ ವಿದೇಶಗಳಿಂದ ಮತ್ತು ಭಾರತದಿಂದ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ.…

Read More

ಆಲಮೇಲ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಸಿ.ಕೆ.ಎಚ್.ಶಾಸ್ತ್ರೀ ಉದಯರಶ್ಮಿ ದಿನಪತ್ರಿಕೆ ಗದಗ: ವಿಜಯಪುರ ಜಿಲ್ಲಾ ಆಲಮೇಲದಲ್ಲಿ ದಿನಾಂಕ ೧೪ ರಂದು ನಡೆಯಲಿರುವ ಆಲಮೇಲ ತಾಲೂಕಾ ೨ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ ಕೆ ಎಚ್ ಶಾಸ್ತ್ರೀ (ಕಡಣಿ) ಇವರನ್ನು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನಿಸಲಾಯಿತು.ಗದುಗಿನ ವಿಶ್ವಪ್ರಸಿದ್ದ ವಿರೇಶ್ವರ ಪುಣ್ಯಾಶ್ರಮದಲ್ಲಿ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳ ಸನ್ನಿಧಿಯಲ್ಲಿ ಗುರುಕುಲ ಮಾದರಿಯಲ್ಲಿ ಸಂಗೀತ ಸಾಹಿತ್ಯ ಕಥಾ ಕೀರ್ತನ ಪುರಾಣ ಪ್ರವಚನ ಗಮಕ ವಾಚನ ಅಧ್ಯಯನ ಮಾಡಿ, ಸಂಗೀತದಲ್ಲಿ ಕರ್ನಾಟಕ ಸರಕಾರದ ಸಿನೀಯರ ಗ್ರೇಡ್ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿ ಆಕಾಶವಾಣಿ ದೂರದರ್ಶನ ಕಲಾವಿದರಾಗಿ ಮಾನ್ಯತೆ ಪಡೆದವರು. ಕರ್ನಾಟಕ ಆಂದ್ರ ಪ್ರದೇಶ ಗೋವಾ ರಾಜ್ಯಗಳಲ್ಲಿ ಪ್ರವಚನ ನೀಡಿದ್ದಾರೆ ಈಗಲೂ ನೀಡುತ್ತಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಲಕ್ಕುಂಡಿ ಉತ್ಸವ ಹಂಪಿ ಉತ್ಸವ ಗಳಲ್ಲಿ ಕಥಾ ಈರ್ತನೆ ಗಮಕ ವಾಚನ ತತ್ವಪದ ಗಾಯನ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಸುಮಾರು ೨೦೦ ಭಕ್ತಿಗೀತೆ…

Read More