Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬೆಳೆಗಳಲ್ಲಿ ಕಂಡುಬರುವ ರೋಗ ಮತ್ತು ಕೀಟ ಬಾಧೆಗಳ ಸಮಗ್ರ ನಿರ್ವಹಣೆ ಕುರಿತು ರೈತ ಮತ್ತು ವಿಜ್ಞಾನಿಗಳ ಸಂವಾದ ಮತ್ತು ಚರ್ಚಾಗೋಷ್ಠಿ ಉದಯರಶ್ಮಿ ದಿನಪತ್ರಿಕೆ ಇಂಡಿ: ಹಿಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಶೇಂಗಾ, ಜೋಳ, ಕಡಲೆ,ಗೋದಿ ಕಬ್ಬು ಮತ್ತು ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ದ್ರಾಕ್ಷಿ, ಲಿಂಬೆ, ಬದನೆ ಮತ್ತು ಮೆಣಸಿನಕಾಯಿ ಬೆಳೆಗಳ ನಿರ್ವಹಣಾ ಕ್ರಮಗಳನ್ನು ಅನುಸರಿಸಲು ವಿಜ್ಞಾನಿ ಡಾ. ಹೀನಾ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಿಂಗಾರು ಹಂಗಾಮಿನಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಕಂಡುಬರುವ ರೋಗ ಮತ್ತು ಕೀಟ ಬಾಧೆಗಳ ಸಮಗ್ರ ನಿರ್ವಹಣೆ ಕುರಿತು ರೈತ ಮತ್ತು ವಿಜ್ಞಾನಿಗಳ ಸಂವಾದ ಮತ್ತು ಚರ್ಚಾಗೋಷ್ಠಿಯಲ್ಲಿ ಮಾತನಾಡಿದರು.ಸೂಕ್ತ ಸಮಯದಲ್ಲಿ ಸೂಕ್ತ ನಿರ್ವಹಣಾ ಕ್ರಮಗಳನ್ನು ಕೈಗೊಂಡಿದ್ದೆ ಆದ್ದಲ್ಲಿ, ರೈತರು ತಾವು ಬೆಳೆಯುವ ಬೆಳೆಯ ಉತ್ಪಾದನಾ ಖರ್ಚನ್ನು ಗಣನೀಯ ಕಡಿಮೆ ಮಾಡವುದಲ್ಲದೇ, ಉತ್ತಮ ಇಳುವರಿಯೊಂದಿಗೆ ಅಧಿಕ ಲಾಭವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಡಾ. ಶಿವಶಂಕರಮೂರ್ತಿ ಮಾತನಾಡಿ, ಹಿಂಗಾರು ಬೆಳೆಗಳ ರೋಗ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಭವ್ಯ ಭಾರತದ ಭವಿಷತ್ತಿನ ಸೃಷ್ಟಿಕರ್ತರು ನಾವೇ ಕಾನೂನುಗಳ ಪರಿಮಿತಿಯಲ್ಲಿ ಹಕ್ಕುಗಳನ್ನು ಅನುಭವಿಸಬೇಕು ಈ ಬಗ್ಗೆ ಜ್ಞಾನವನ್ನು ಅರಿಯಬೇಕು ಎಂದು ಹಿರಿಯ ದಿವಾಣಿ ನ್ಯಾಯಾದೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಕೋಟೆಪ್ಪ ಕಾಂಬಳೆ ಹೇಳಿದರು.ಪಟ್ಟಣದ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ನೆಸ್ಸೆಸ್ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಕಿರಿಯ ನ್ಯಾಯಾದೀಶ ಸುನೀಲಕುಮಾರ ಎಂ.ಎಸ್ ಮಾತನಾಡಿ ಸಂವಿಧಾನದಲ್ಲಿರುವ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದರು, ಉಪನ್ಯಾಸ ನೀಡಿದ ವಿ.ಎಸ್.ಹಂಜಗಿ ‘ವಿಶ್ವದಲ್ಲಿ ಕ್ರಾಂತಿಗಳ ಮೂಲಕ ಹಕ್ಕುಗಳನ್ನು ಪಡೆದು ಪ್ರತಿಯೊಬ್ಬರು ಆತ್ಮಗೌರವದಿಂದ ಬದುಕಲು ಹಕ್ಕುಗಳು ಅವಶ್ಯಕ ಎಂದರು.ಅಧ್ಯಕ್ಷೆತಯನ್ನು ಪ್ರಾಚಾರ್ಯ ಪ್ರೊ.ಆರ್.ಎಚ್. ರಮೇಶ, ಪ್ರಾಸ್ತಾವಿಕವಾಗಿ ರಾಜ್ಯಶಾಸ್ತçದ ಮುಖ್ಯಸ್ಥ ಪ್ರೊ.ರವಿಕುಮಾರ ಅರಳಿ, ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಪಿ.ಎಸ್.ದೇವರ ಪ್ರೊ. ನಂದಕುಮಾರ ಬಿರಾದಾರ ಮಾತನಾಡಿದರು.ವಕೀಲರ ಸಂಘದ ಉಪಾಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರ ಮತ್ತು ಆಗಸ್ಟ್ ಕ್ರಾಂತಿ ಟ್ರಸ್ಟ್ ಸಹಯೋಗದಲ್ಲಿ ‘ಮಹಾತ್ಮಾ ಗಾಂಧಿ ಮತ್ತು ಭಾರತೀಯ ಮಹಿಳೆ’ ಎಂಬ ದತ್ತಿ ಉಪನ್ಯಾಸ ಕಾರ್ಯಕ್ರಮ ಇದೇ ದಿ.೧೩ ರಂದು ಮಧ್ಯಾಹ್ನ ೧೨.೦೦ ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಳಗಾವಿಯ ಜಿ.ಎಸ್.ಎಸ್ ಕಾಲೇಜಿನ ಸೇವಾನಿವೃತ್ತ ಪ್ರಾಂಶುಪಾಲ ಆನಂದ ಕೃಷ್ಣಾ ಮೆಣಸೆ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ನಗರದ ಆಗಸ್ಟ್ ಕ್ರಾಂತಿ ಟ್ರಸ್ಟ್ ಸದಸ್ಯೆ ರೇವತಿ ಕಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನಗರದ ಗಾಂಧಿ ಭವನ ನಿರ್ವಹಣಾ ಸಮಿತಿ ಸದಸ್ಯ ಹಾಗೂ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪುಗೌಡ ಪಾಟೀಲ್, ಬೆಂಗಳೂರಿನ ಗಾಂಧಿವಾದಿ ಅಪ್ಪಾಸಾಹೇಬ ಯರನಾಳ ಉಪಸ್ಥಿತರಿರಲಿದ್ದಾರೆ ಎಂದು ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಅಮರನಾಥ ಪ್ರಜಾಪತಿ ಪತ್ರಿಕಾ ಪ್ರಕಟಣೆಯಲ್ಲಿ…
ಕೃಷ್ಣೆ ಸಂತ್ರಸ್ತರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಮೀನ-ಮೇಷ ಎಣಿಸಬಾರದು ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.ಬಾಗಲಕೋಟೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಸಂತ್ರಸ್ತರ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಕೊಲ್ಹಾರ ಹಿರೇಮಠದ ನೂತನ ಕಟ್ಟಡ ಜೀರ್ಣೋದ್ದಾರವನ್ನು ವೀಕ್ಷಿಸಿದ ಸಂದರ್ಭ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಫಲವತ್ತಾದ ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು.ಕೃಮೇಯೋ ಬಾಧಿತ ಸಂತ್ರಸ್ತರು ನ್ಯಾಯಯುತ ಪರಿಹಾರ ಕೇಳುತ್ತಿದ್ದಾರೆ, ನೀರಾವರಿಗಾಗಿ ಫಲವತ್ತಾದ ಜಮೀನು ಕಳೆದುಕೊಂಡಿರುವ ಅನ್ನದಾತ ಬೀದಿಗೆ ಬಂದು ಅಹೋರಾತ್ರಿ ಹೋರಾಟ ಆರಂಭಿಸಿರುವುದು ವಿಪರ್ಯಾಸವೆ ಸರಿ!. ಜಗತ್ತಿಗೆ ಅನ್ನ ನೀಡುವ ರೈತಾಪಿ ವರ್ಗದ ಬದುಕು ದುಸ್ಥರವಾಗಿದೆ ಸರ್ಕಾರ ಕೂಡಲೇ ಸಂತ್ರಸ್ತರ ಹೋರಾಟಕ್ಕೆ ಸ್ಪಂದಿಸಬೇಕು ಬಾಧಿತ ಸಂತ್ರಸ್ತರ ಹಾಗೂ ರೈತರ ಹೋರಾಟಕ್ಕೂ ಮಠಾಧೀಶರುಗಳಾದ ನಾವುಗಳು ಸದಾಕಾಲ ಬೆಂಬಲವಾಗಿ ನಿಲ್ಲುತ್ತವೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೨ ರಿಂದ ಇತ್ತೀಚೆಗೆ ನಿವೃತ್ತರಾದ ನೌಕರರು ೭ ನೇ ವೇತನ ಆಯೋಗ ಅವಧಿಯಲ್ಲಿಯೇ ಸೇವೆ ಸಲ್ಲಿಸಿದ್ದು , ಡಿ.ಸಿ.ಆರ್.ಜಿ. ಕಮ್ಯುಟೇಶನ್ , ಗಳಿಕೆ ರಜೆ , ನಗದೀಕರಣದ ಮೊತ್ತವನ್ನು ೭ ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿಯೇ ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಲು ಆಗ್ರಹಿಸಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.೦೧-೦೭-೨೦೨೨ ರಿಂದ ೩೧-೦೭-೨೦೨ ಅವಧಿಯಲ್ಲಿ ನಿವೃತ್ತ ನೌಕರ ವರ್ಗದವರಿಗೆ ೭ ನೇ ವೇತನ ಆಯೋಗದ ಅನುಷ್ಠಾನದಲ್ಲಿ ನಿವೃತ್ತ ಆರ್ಥಿಕ ಸೌಲಭ್ಯವನ್ನು ನೀಡದೇ ೬ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿಯೇ ನೀಡಲಾಗಿದೆ.ಸತತ ನಾಲ್ಕು ತಿಂಗಳುಗಳಿಂದ ಸಮಾವೇಶಗೊಂಡು ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳಿಗೆ ಉಪ ಮುಖ್ಯಮಂತ್ರಿಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ, ಪ್ರತಿಪಕ್ಷದನಾಯಕರುಗಳಿಗೆ , ಉಭಯ ಸದನಗಳ ಸಭಾಪತಿಗಳಿಗೆ, ಉಪಸಭಾಪತಿಗಳಿಗೆ ವಿಷಯ ಮನವರಿಕೆ ಮಾಡಿದ್ದೇವೆ. ಆದರೂ ಗಮನ ಹರಿಸಿಲ್ಲ. ರಾಜ್ಯದ ನಿವೃತ್ತ ನೌಕರರು ಡಿ. ೧೬ ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸುವರ್ಣ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಇದೇ ದಿನಾಂಕ ೧೩ ಶುಕ್ರವಾರದಿಂದ ೨೩ ಸೋಮವಾರ ೧೦ ದಿನಗಳ ಕಾಲ ಪಟ್ಟಣದಲ್ಲಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ಪಟ್ಟಣ ಪಂಚಾಯತ ಮತ್ತು ಶ್ರೀ ಸಂಗಮೇಶ್ವರ ವಿದ್ಯಾವರ್ದಕ ಸಂಘದ ಆಶ್ರಯದಲ್ಲಿ ಹಿಮಾಲಯನ್ ಧ್ಯಾನಯೋಗ ಕಾರ್ಯಕ್ರಮಗಳು ಜರುಗುವದು ಎಂದು ಸಂಘಟಣೆಯ ರೂವಾರಿ ಟಿ.ಟಿ.ಹಗೇದಾಳ, ಕೆ.ಎಸ್.ದೇಸಾಯಿ ಹೇಳಿದರು.ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಜಂಟಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೫.೩೦ ರಿಂದ ೬.೩೦ ರವರೆಗೆ ಯೋಗ ತರಬೇತಿ, ೬ ವರ್ಷದ ಮಕ್ಕಳಿಂದ ೮೦ ವರ್ಷದ ವಯೋವೃದ್ದರವರೆಗೆ ಸರ್ವ ಜನಾಂಗದ ಪುರುಷ, ಮಹಿಳೆಯರು ಯೋಗ ತರಬೇತಿಯನ್ನು ಪಡೆದುಕೊಂಡು ಆರೋಗ್ಯವೃದ್ದಿಯನ್ನು ಹಿಮಾಲಯದಲ್ಲಿ ೬ ವರ್ಷಗಳ ಕಾಲ ಯೋಗ ಸಾಧನೆ ಮಾಡಿರುವ ನಿರಂಜನ ಮಹಾಸ್ವಾಮಿಗಳಿಂದ ಯೋಗಾಬ್ಯಾಸ ಜರುಗುವದು ಎಂದರು.ಸಾಯಂಕಾಲ ೬.೩೦ ರಿಂದ ೭.೩೦ ರವರೆಗೆ ಪಟ್ಟಣದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿರುವ ಭಕ್ತಾಧಿಗಳಿಗೆ ಸಾಮೂಹಿಕ ಭಜನೆ ಮಾಡುವ ಸಂಪ್ರದಾಯ ಹಾಗೂ ಶ್ರೀಗಳಿಂದ ಆದ್ಯಾತ್ಮಿಕ ಪ್ರವಚನ ಬೋಧನೆ ನಡೆಯುವದು ಈ ಕಾರ್ಯಕ್ರಮದಲ್ಲಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಅರವಿಂದರು ಕವಿ, ತತ್ವಜ್ಞಾನಿ, ಹಾಗೂ ಸ್ವಾತಂತ್ರ್ಯ ಹೋರಾಟಗಾರ ಪೂರ್ಣ ಯೋಗಮಾರ್ಗವನ್ನು ಜಗತ್ತಿಗೆ ತೋರಿದ ಮಹಾಯೋಗಿ ಎಂದು ಸಾಹಿತಿ ಗೀತಯೋಗಿ ಹೇಳಿದರು.ತಾಲೂಕಿನ ಸಾಲೋಟಗಿ ಗ್ರಾಮದ ಅರವಿಂದೋ ಸಮಿತಿ ಮತ್ತು ಸರಕಾರಿ ಹಿರಿಯ ಹೆಣ್ಣು ಮಕ್ಕಳ ಶಾಲೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಕುರುಕ್ಷೇತ್ರದಲ್ಲಿ ಯುದ್ದದಲ್ಲಿ ಭಾಗಿಯಾಗಿಯೂ ಯುದ್ದ ಮಾಡದೇ ಯುದ್ದ ಗೆಲ್ಲಿಸಿದ ಅರ್ಜುನನ ಸಾರಥಿಯಾಗಿ ಶ್ರೀಕೃಷ್ಣನಂತೆ ಅರವಿಂದ ಅವರು ಸ್ವಾತಂತ್ರ್ಯ ಹೋರಾಟದಿಂದ ದೂರಸರಿದು ಆಧ್ಯಾತ್ಮಿಕ ಕ್ಷೇತ್ರಕ್ಕೆ ಪ್ರವೇಶಿಸಿದರೂ ಅಪರೋಕ್ಷವಾಗಿ ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಕಾರಣರಾದರು ಎಂದರು.ಅರವಿಂದ ಅವರಿಗೆ ಇಂಗ್ಲೀಷ್,ಗ್ರೀಕ, ಲ್ಯಾಟಿನ, ಫ್ರೆಂಚ್, ಜರ್ಮನಿ, ಇಟಲಿ, ಹಿಂದಿ, ಬಂಗಾಲಿ, ಸಂಸ್ಕೃತ ಭಾಷೆಗಳು ಕರಗತವಾಗಿದ್ದವು ಎಂದರು.ಫ್ರೇಂಚ್ ದೇಶದ ಮೀರಾ ಅಲ್ಪಸ್ಸಾ ಅವರು ೧೯೨೦ ರಲ್ಲಿ ಶ್ರೀ ಅರವಿಂದರ ಆಧ್ಯಾತ್ಮಿಕ ಸಾಧನೆಯ ಸಹಪಯಣಿಗರಾಗಿ ಬಂದು ಕೂಡಿಕೊಂಡರು. ಶ್ರೀ ಅರವಿಂದರು ಅವರನ್ನು ಶ್ರೀ ಮಾತೆ ಎಂದು ಕರೆದರು. ಶ್ರೀ ಮಾತಾರವಿಂದರು ಭಾರತದ ಆಧ್ಯಾತ್ಮಿಕ ಕ್ಷೇತ್ರವನ್ನು ಶ್ರೀಮಂತ ಗೊಳಿಸಿದರು ಎಂದರು.ದುಂಡಪ್ಪ ಹ್ಯಾಳದ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಾವೇರಿಯಲ್ಲಿ ಡಿಸೆಂಬರ ೭ ರಿಂದ ೯ರ ವರೆಗೆ ಜರುಗಿದ ಟೈಕೊಂಡೊ ಕ್ರೀಡಾಕೂಟದಲ್ಲಿ ಸಿಕ್ಯಾಬ ಮಹಿಳಾ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಕೈಪಿಅಜ್ಮಿ ದೊಡಮನಿ ಇವರು ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಎಸ್.ಎ. ಪುಣೇಕರ ಕಾರ್ಯದರ್ಶಿಗಳಾದ ಶ್ರೀ ಎ.ಎಸ್. ಪಾಟೀಲ, ನಿರ್ದೇಶಕ ಸಲಾವುದ್ದೀನ ಅಯುಬಿ, ಪ್ರಾಚಾರ್ಯರು, ಪಾಲಕರು, ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ೨ಎ ಮೀಸಲಾತಿಗೆ ಸಂಬಂಧಿಸಿದ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಗೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಖಂಡಿಸಿದ್ದಾರೆ.ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೆ ಈ ಭೂಮಿಯ ಮೇಲೆ ಸ್ವತಂತ್ರವಾಗಿ ಬದುಕುವ ಹಾಗೂ ಜೀವಿಸುವ ಹಕ್ಕಿದೆ. ಆದರೆ ನಮ್ಮ ಹಕ್ಕುಗಳು ನಮಗೆ ಸಿಕ್ಕಿಲ್ಲ ಅಂದಾಗ ಹೋರಾಟ ಮಾಡಿ ಪಡೆಯುವುದು ಅವರ ಕರ್ತವ್ಯ ಕೂಡ ಹೌದು. ಆದರೆ ನಮ್ಮ ದೇಶದ ಕಾನೂನು ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿಯೊಂದು ಸಮಾಜಕ್ಕೂ ಸ್ವತಂತ್ರವಾಗಿ ಬದುಕುವ ಸ್ವಾತಂತ್ರ್ಯ ಇರುತ್ತದೆ ಆದರೆ ಈ ಸರಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ ಮಾಡಿರುವುದು ಖಂಡನಿಯ. ಜೊತೆಗೆ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಂಧನ ಮಾಡಿರುವುದು ಖಂಡನಾರ್ಹ ಮತ್ತು ಮಹಾ ಅಪರಾಧ ಮಾಡಿದಂತಾಗಿದೆ. ಕೂಡಲೇ ರಾಜ್ಯದ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಿ ಅವರಿಗೆ ನ್ಯಾಯ ಕೊಡಬೇಕೆಂದು ಆಗ್ರಪಡಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಸಿಂದಗಿಗೆ ಇಂದು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಡಿ.೧೨ರಂದು ಸಂಜೆ ೪ ಗಂಟೆಗೆ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು ಸಂಜೆ ೫-೦೦ ಗಂಟೆಗೆ ಜಿಲ್ಲೆಯ ಸಿಂದಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ರಾತ್ರಿ ೭ ಗಂಟೆಗೆ ಸಿಂದಗಿಯಿಂದ ಹೊರಟು ೭-೪೫ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ.ಡಿ.೧೨ರಂದು ವಿಜಯಪುರದ ಬಿಎಲ್ಡಿಇ ಎನ್ಆರ್ಐ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ, ಡಿ.೧೩ರಂದು ಬೆಳಿಗ್ಗೆ ೯ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
