Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮತದಾರನ ದೃಢ ನಿರ್ಧಾರದ ಮತದಾನವೇ ಪ್ರಜಾಪ್ರಭುತ್ವದ ಯಶಸ್ವಿಗೆ ಕಾರಣ ಎಂದು ಮುಖ್ಯಗುರು ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರೌಢ ಶಾಲೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್ ಅಡಿಯಲ್ಲಿ ಆಯೋಜಿಸಿರುವ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಮಕ್ಕಳು ವಿದ್ಯಾರ್ಥಿ ಜೀವನದಲ್ಲೇ ದೇಶದ ಆಗು ಹೋಗುಗಳ ಬಗ್ಗೆ ಅರಿತಿರಬೇಕು. ಅಲ್ಲದೆ ತಮ್ಮ ಪಾಲಕರಿಗೂ ಮತದಾನದ ಅರಿವನ್ನು ಮೂಡಿಸಬೇಕು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆಯ ಮೂಲಕ ಪ್ರತಿನಿಧಿಗಳ ಆಯ್ಕೆ ಮಾಡುವುದು ಬಹಳ ಮಹತ್ವದ್ದಾಗಿದೆ. ನಿರ್ಭಯದಿಂದ ಯಾರಿಗೂ ಹೆದರದೆ, ಯಾರ ಒತ್ತಡ ಅಥವಾ ಆಮಿಷಕ್ಕೂ ಒಳಗಾಗದೆ ಮತದಾನ ಮಾಡಿದಲ್ಲಿ ಪ್ರಜಾಪ್ರಭುತ್ವ ಯಶಸ್ಸನ್ನು ಕಾಣುತ್ತದೆ. ನೂರಕ್ಕೆ ನೂರರಷ್ಟು ಮತದಾನ ನಡೆಸುವುದು ದೇಶದ ಗುರಿಯಾಗಿದೆ. ಮತದಾರ ಪಟ್ಟಿಯ ನೋಂದಣಿ ಮತ್ತು ಮತದಾನದ ನಿಯಮದಲ್ಲಿ ಕಾಲಕಾಲಕ್ಕೆ ಚುನಾವಣಾ ಆಯೋಗ ಮಾಡುತ್ತಿರುವ ನಿಯಮವನ್ನು ಅರಿತು ಮತದಾನ ಮಾಡುವುದು ಪವಿತ್ರ ಕಾರ್ಯವೇ ಆಗಿದೆ ಎಂದರು.ದೈಹಿಕ ಶಿಕ್ಷಕ ಬಿ.ಟಿ.ಭಜಂತ್ರಿಯವರು ಮತದಾರ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಸದಸ್ಯ ಜಿ.ಜೆ.ಪಾದಗಟ್ಟಿ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ೨೦೨೪-೨೫ನೇ ಕ್ರಿಕೆಟ್‌ ಕ್ರೀಡಾಪಟುಗಳು ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಆಯ್ಕೆಯಾಗಿದ್ದು, ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಕೆಟ್ ಕ್ರೀಡೆಯು ಇದೇ ದಿ. ೨೩-೦೧-೨೦೨೫ ರಿಂದ ೨೮-೦೧-೨೦೨೫ರ ರವರೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜರುಗಲಿದೆ. ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ತಂಡದ ತರಬೇತಿದಾರಾಗಿ ಕವಿತಾ ರಾಠೋಡ ಮತ್ತು ವ್ಯವಸ್ಥಾಪಕರಾಗಿ ಜಬಿನತಾಜ ಜಿಗಳೂರ ಭಾಗವಹಿಸಲಿದ್ದಾರೆ.ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ, ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಮತ್ತು ಡಾ.ಕಿರಣ ಜಿ ಎನ್ ಶುಭ ಹಾರೈಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಈ ನಾಡಿನ ಭಾಷೆ, ಜಲ, ಸಂಸ್ಕೃತಿ ಇವುಗಳ ಉಳಿವಿಗಾಗಿ ಟೊಂಕ ಕಟ್ಟಿ ನಿಂತವರು ಮಾತ್ರ ನಿಜವಾದ ಕನ್ನಡಿಗರು ಎಂದು ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನುಡಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ಪಟ್ಟಣದಲ್ಲಿ ಫೆ೧೫ ರಂದು ನಡೆಯಲಿರುವ ೫ನೇ ಕನ್ನಡ ಸಾಹಿತ್ಯ ಸಮ್ಮೇಳನವೊಂದು ಕನ್ನಡಿಗರ ಹಬ್ಬ. ಈ ಹಬ್ಬದ ಯಶಸ್ವಿಗಾಗಿ ಎಲ್ಲ ಸಾಹಿತಿಗಳು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಶ್ರಮಿಸಬೇಕು ಎಂದರು.ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಸಮ್ಮೇಳನದಲ್ಲಿ ಸಾಹಿತಿಗಳಿಗೆ ಹೆಚ್ಚಿನ ಒತ್ತು ಕೊಡಬೇಕು ಎಂಬ ಕೂಗು ಇದ್ದು ಖಂಡಿತ ಸಾಹಿತಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವದು. ಸಮ್ಮೇಳನದ ಯಶಸ್ವಿಗೆ ಎಲ್ಲ ಹಿರಿಯ ಮತ್ತು ಯುವ ಸಾಹಿತಿಗಳ, ಕನ್ನಡಾಭಿಮಾನಿಗಳ ಸಲಹೆ ಸೂಚನೆ ಅತೀ ಅವಶ್ಯ. ಚಿಕ್ಕ ಪುಟ್ಟ ಕಾರಣಗಳಿಗೆ ಬೇಸರ ಮಾಡಿಕೊಳ್ಳದೇ ಕನ್ನಡಾಂಬೆಯ ಜಾತ್ರೆಯನ್ನ ಅದ್ಧೂರಿಯಾಗಿಸಲು ಎಲ್ಲರೂ ಶ್ರಮಿಸಬೇಕು ಎಂದರು.ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಪಟ್ಟಣದ ಸರಕಾರಿ ಆಸ್ಪತ್ರೆಗೆ ಆಕಸ್ಮಿಕ ಭೇಟಿ ನೀಡಿದ್ದರು.ಎಲ್ಲ ವೈದ್ಯರು ಒಂದೇ ಕಡೆಗೆ ಒಂದೇ ಕೋಣೆಯಲ್ಲಿ ಕುಳಿತು ರೋಗಿಗಳಿಗೆ ತಪಾಸಣೆ ಮಾಡುವದನ್ನು ವೀಕ್ಷಿಸಿ ವೈದ್ಯರು ಬೇರೆ ಬೇರೆ ಕೋಣೆಯಲ್ಲಿ ಕುಳಿತು ರೋಗಿಗಳಿಗೆ ತಪಾಸಣೆ ಮಾಡಲು ತಿಳಿಸಿದರು.ಒಂದು ಕೋಣೆಯಲ್ಲಿ ಒಬ್ಬರೇ ವೈದ್ಯರು ಇರಬೇಕು. ರೋಗಿಗಳಿಗೆ ಟೇಬಲ್ ಅಥವಾ ಕುರ್ಚಿಯ ಮೇಲೆ ಕುಡಿಸಿ ಸರಿಯಾದ ಮಾಹಿತಿ ಕೇಳಿ ಉಪಚರಿಸಬೇಕು. ಸಧ್ಯ ರೋಗಿಗಳಿಗೆ ಯಾವ ವೈದ್ಯರು ಕೈ ಹಚ್ಚುತ್ತಲ್ಲ, ಕೇವಲ ರೋಗಿಗಳಿಗೆ ಕೇಳಿ ಚೀಟಿ ಬರೆದು ಕೊಡುವ ವ್ಯವಸ್ಥೆ ನಡೆದಿದೆ ಎಂದು ಸಾರ್ವಜನಿಕರ ದೂರಾಗಿದೆ ಎಂದರು.ಇದೇ ಪರಿಸ್ಥಿತಿ ಮುಂದೆ ವರೆದರೆ ಜಿಲ್ಲಾಧಿಕಾರಿ, ಸಿಇಒ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಕ್ರಮ ಜರುಗಿಸಲು ತಿಳಿಸುವದಾಗಿ ಸೂಚಿಸಿದರು.ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ|| ರಾಮಕೃಷ್ಣ ಇಂಗಳೆ, ಡಾ|| ರಾಜೇಶ ಕೋಳೆಕರ,ಡಾ|| ಜಗದೀಶ ಬಿರಾದಾರ, ಡಾ|| ಅಮೀತ ಕೋಳೆಕರ, ಡಾ|| ವಿಪುಲ್ ಕೋಳೆಕರ ಮತ್ತಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಚುನಾವಣಾ ಪ್ರಕ್ರಿಯೆ ಹಾಗೂ ಮತದಾನದಲ್ಲಿ ಯುವಕರನ್ನು ಉತ್ತೇಜಿಸಲು ಜ.೨೫ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದು ಯುವಕರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಲ್ಲದೇ ಮತದಾನದ ಹಕ್ಕು ಮೂಲಭೂತ ಹಕ್ಕು ಎಂಬ ಅಂಶದ ಮೇಲೆ ಕೇಂದ್ರೀಕರಿಸುತ್ತದೆ ಎಂದು ಎಚ್.ಜಿ.ಪಪೂ ಕಾಲೇಜಿನ ಉಪನ್ಯಾಸಕ ಎಫ್.ಎ. ಹಾಲಪ್ಪನವರ ಹೇಳಿದರು.ಸಿಂದಗಿ ಪಟ್ಟಣದ ಎಚ್.ಜಿ.ಪದವಿ-ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಮತದಾನದ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಜಾಪ್ರಭುತ್ವದಲ್ಲಿ ಮತದಾನದ ಮೌಲ್ಯದ ಅರಿವು ಮೂಡಿಸುವುದು ಮತ್ತು ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ. ಚುನಾವಣಾ ಪ್ರಕ್ರಿಯೆ. ಪ್ರತಿಯೊಬ್ಬ ವ್ಯಕ್ತಿಯ ಮತವು ದೇಶದ ಭವಿಷ್ಯದ ಮೇಲೆ ಹೇಗೆ ಮಹತ್ವದ ಪ್ರಭಾವ ಬೀರಬಹುದು ಎಂಬುದನ್ನು ಇದು ಒತ್ತಿಹೇಳುತ್ತದೆ ಮತ್ತು ಜವಾಬ್ದಾರಿಯುತವಾಗಿ, ನೈತಿಕವಾಗಿ ಮತ್ತು ಜ್ಞಾನದೊಂದಿಗೆ ಮತದಾನದ ಮಹತ್ವವನ್ನು ಒತ್ತಿಹೇಳುತ್ತದೆ ಎಂದರು.ಈ ವೇಳೆ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎ.ಆರ್. ಹೆಗ್ಗಣದೊಡ್ಡಿ ಮಾತನಾಡಿ, ಮತದಾನ ನಮ್ಮೆಲ್ಲರ ಹಕ್ಕು. ಯುವ ಜನಾಂಗ ಮತವನ್ನ ಮಾರಿಕೊಳ್ಳದೆ ಯೋಗ್ಯ ಅಭ್ಯರ್ಥಿಗೆ ಮತ ನೀಡುವ ಮೂಲಕ ಈ ದೇಶದ…

Read More

ನಿಯಮ ಬಾಹಿರವಾಗಿ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ | ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕಾನೂನಿಗೆ ತಿದ್ದುಪಡಿ | ಸಿಎಂ ಸಿದ್ದರಾಮಯ್ಯ ತುರ್ತುಸಭೆ ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದು ಮತ್ತು ನಿಜವಾದ ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.ಮೈಕ್ರೋ-ಫೈನಾನ್ಸ್ ಕಂಪನಿಗಳು ಸಾಲಗಾರರಿಂದ ಹಣ ವಸೂಲಿ ಮಾಡಲು ಕಿರುಕುಳ ನೀಡುತ್ತಿವೆ ಎಂದು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗೃಹ ಸಚಿವ ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.ಮೈಕ್ರೋಫೈನಾನ್ಸ್ ಕಂಪನಿಗಳ ಸಂಘದ ಪ್ರತಿನಿಧಿಗಳು, ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಾದೇಶಿಕ ಅಧಿಕಾರಿಗಳು ಮತ್ತು ನಬಾರ್ಡ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಸಾಲ ವಸೂಲಾತಿ…

Read More

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಅಖಂಡ ಕರ್ನಾಟಕ ರೈತ ಸಂಘ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಹವಾಮಾನ ವೈಪರಿತ್ಯ ಹಾಗೂ ಕಳಪೆ ಬೀಜ ವಿತರಣೆಯಿಂದಾಗಿ ತೊಗರಿ ಬೆಳೆ ಸಂಪೂರ್ಣ ಹಾನಿಯಾಗಿದ್ದು ಹಾನಿಗೊಳಗಾದ ರೈತರಿಗೆ ಸೂಕ್ತ ಮದ್ಯಂತರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ರವರಿಗೆ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಶನಿವಾರದಂದು ಮಮದಾಪೂರ ಗ್ರಾಮದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾನಿಗೊಳಗಾದ ತೊಗರಿ ಮಾಹಿತಿಯನ್ನು ಸರಿಯಾಗಿ ಕಳುಹಿಸದ ಕಾರಣ ವಿಜಯಪುರ ಜಿಲ್ಲೆಯ ರೈತರು ವಿಮಾ ಕಂಪನಿ ಬಿಡುಗಡೆಮಾಡುವ ಮದ್ಯಂತರ ಪರಿಹಾರದಿಂದ ವಂಚಿತರಾಗಿದ್ದಾರೆ ಬಿತ್ತನೆ ಮಾಡಿದ ತೊಗರಿ ಬೆಳೆ ಹಾಳಾದ ಸಂದರ್ಭದಲ್ಲಿ ಬೆಳೆ ಪರಿಹಾರಕ್ಕಾಗಿ ವಿಮೆ ಮಾಡಿಸಿದ್ದರು ಕೂಡ ವಿಜಯಪುರ ಜಿಲ್ಲೆಯ ರೈತರಿಗೆ ಒಂದು ಬಿಡುಗಾಸು ಮದ್ಯಂತರ ಪರಿಹಾರ ಹಣ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಾಂತಪ್ಪ ಬಿರಾದಾರ(ಜಲಕತ್ತಿ), ಉಪಾಧ್ಯಕ್ಷರಾಗಿ ಬುರಾನಸಾಬ್ ಮಸಳಿ ಅವಿರೋಧವಾಗಿ ಆಯ್ಕೆಯಾದರು.ಪಟ್ಟಣದ ವಿ.ಪ್ರಾ.ಗ್ರಾ.ಕೃ.ಸ.ಸಂಘದ ಆವರಣದಲ್ಲಿ ಶನಿವಾರ ಜರುಗಿದ ದೇವರಹಿಪ್ಪರಗಿ ಎಲ್.ಟಿ, ಇಂಗಳಗಿ ಹಾಗೂ ನಿವಾಳಖೇಡ ಗ್ರಾಮಗಳ ವ್ಯಾಪ್ತಿಯ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.ನಂತರ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಸಹಿತ ನಿರ್ದೇಶಕರಾದ ಬಸವರಾಜ ತಾಳಿಕೋಟಿ, ಪ್ರಭಾವತಿ ಮಠಪತಿ, ಶೃತಿ ಕೋಟಿನ್, ನೀಲಮ್ಮ ಜಂಬಗಿ, ಸಂತೋಷ ದೇಸಾಯಿ, ಹಣಮಂತ್ರಾಯ ಜೋಗೂರ, ರಾಜೇಂದ್ರ ಭಾವಿಮನಿ, ಸೋಮು ಜಾಧವ, ಮೋದಿನಸಾಬ್ ಯಲಗಾರ, ವಿಠ್ಠಪ್ಪ ನಾಟೀಕಾರ ಅವರನ್ನು ಸನ್ಮಾನಿಸಲಾಯಿತು.ಚುನಾವಣಾಧಿಕಾರಿ ದತ್ತಾತ್ರೇಯ ನಾಯ್ಕೋಡಿ, ಕಾರ್ಯನಿರ್ವಹಣಾಧಿಕಾರಿ ಶರಣಗೌಡ ಅಂಗಡಿ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಕಾಸು ಜಮಾದಾರ, ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಮಲ್ಲಣ್ಣ ಜಲಕತ್ತಿ, ಈರಣ್ಣ ಒಂಟೆತ್ತೀನ್, ಅಜೀಜ್ ಯಲಗಾರ, ಬಸವರಾಜ…

Read More

ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಯ ನೀಡಿದ್ದಾರೆ.ಶನಿವಾರ ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು ಸಾಂತ್ವನ ಹೇಳಿ ವೈಯಕ್ತಿಕವಾಗಿ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಿದರು. ಅಲ್ಲದೇ, ನೀವು ಇನ್ನು ಮುಂದೆ ಜಮಖಂಡಿ ತಾಲೂಕಿನಲ್ಲಿಯೇ ಕೆಲಸ ಮಾಡಲು ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದರು.ಈ ವೇಳೆ ಕಾರ್ಮಿಕರಿಂದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಅವರಿಗೆ ಆತ್ಮಸ್ಥ್ಮೈರ್ಯ ತುಂಬಿದರು. ನಿಮಗೆ ಸರಕಾರದಿಂದ ಸಕಲ ನೆರವು ಒದಗಿಸಲು ಕ್ರಮ ಕೈಗೊಳ್ಳುತ್ತೇನೆ. ಸರಕಾರ ನಿಮ್ಮೊಂದಿಗಿದೆ.…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ, ಸಮಾಜದಲ್ಲಿ ಉತ್ತಮ ಆಡಳಿತಕ್ಕೆ ಮತದಾನದ ಪಾತ್ರ ಅನನ್ಯವಾದದ್ದು ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್ ಎಸ್ ಎಸ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಮೃತ್ ಸಮುದಾಯದ ಯೋಜನೆ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ದಿನಾಂಕ 24-01-2025 ಶುಕ್ರವಾರದಂದು ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಯುವ ಪೀಳಿಗೆ ಮತದಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಚುನಾಯಿತ ಪ್ರತಿನಿಧಿಗಳ ಶೈಕ್ಷಣಿಕ ಅಗತ್ಯತೆಗಳು, ಸಾರ್ವಜನಿಕರಿಗೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ವಾಸ್ತವಿಕ ಸಮಗ್ರ ಮಾಹಿತಿ, ರಾಜಕೀಯ ಪಕ್ಷಗಳು ನೀಡುವ ಪ್ರಮುಖ ಭರವಸೆಗಳ ಮತ್ತು ಹೊಣೆಗಾರಿಕೆ ಬಗ್ಗೆ ಇಂದಿನ ವಿದ್ಯಾರ್ಥಿಗಳು ಅರಿಯುವುದು ಅವಶ್ಯಕವಾಗಿದೆ…

Read More