Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪ್ರಕೃತಿಯ ಜೀವಂತ ಪ್ರಯೋಗಾಲಯದಲ್ಲಿ ಮಾನವನನ್ನು ಸೃಷ್ಟಿಸಿದೆ. ಚಿಂತಿಸುವ ಮತ್ತು ಯೋಚಿಸುವ ಶಕ್ತಿಯನ್ನು ಹೊಂದಿರುವ ಮಾನವನೆಂಬ ಪ್ರಯೋಗಾಲಯವುಅತಿ ಮಾನವರನ್ನು ಮತ್ತು ದೇವತೆಗಳನ್ನು ಸೃಷ್ಟಿಸಿದೆ ಎಂದು ಅತಿ ಮಾನಸ ಶಕ್ತಿಯು ಮನುಷ್ಯ ಸೃಷ್ಟಿ ಎಂಬುದನ್ನು ಜಗತ್ತಿಗೆ ಸಾರಿ ಹೇಳಿದವರು ಮಹರ್ಷಿ ಅರವಿಂದರು.ಸ್ವಾತಂತ್ರ್ಯ ಹೋರಾಟಗಾರನಾಗಿ, ಲೇಖಕನಾಗಿ, ಕವಿಯಾಗಿ, ಪತ್ರಕರ್ತನಾಗಿ, ತತ್ವಜ್ಞಾನಿಯಾಗಿ, ಯೋಗ ಗುರುವಾಗಿ, ಆಧ್ಯಾತ್ಮದ ಗುರುವಾಗಿ ಜಗತ್ತಿಗೆ ಪರಿಚಯಸಲ್ಪಟ್ಟ ಮಹರ್ಷಿ ಅರವಿಂದರ ಜೀವನ ಸಾಧನೆ ಭಾರತೀಯ ಇತಿಹಾಸದಲ್ಲಿ ಮಹತ್ವಪೂರ್ಣಸ್ಥಾನವನ್ನು ಪಡೆದಿದೆ ಎಂದರೆ ತಪ್ಪಿಲ್ಲ. ಜಗತ್ತಿನ ಮಹಾನ್ ಸಾಧಕರೆಲ್ಲರ ಜೀವನವನ್ನು ವಿಮರ್ಶಿಸಿರುವ ಮಹರ್ಷಿ ಅರವಿಂದರು ಯೋಗ ಸಾಧನೆಯನ್ನು ಯಾರು ಬೇಕಾದರೂ ಮಾಡಬಹುದು. ಯೋಗ ಸಾಧನೆ ಎಂಬುದು ಕೇವಲ ಆತ್ಮ ಸಾಕ್ಷಾತ್ಕಾರಕ್ಕಲ್ಲ… ಬದಲಾಗಿ ಮನುಕುಲದ ಉದ್ಧಾರಕ್ಕಾಗಿ ಎಂಬುದನ್ನು ಸ್ಪಷ್ಟಪಡಿಸಿದರು.ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ 15 ಆಗಸ್ಟ್ 1872ರಲ್ಲಿ ಜನಿಸಿದ ಅರವಿಂದ ಅವರ ತಂದೆ ಕೃಷ್ಣ ಧನ ಘೋಷ ಮತ್ತು ತಾಯಿ ಸ್ವರ್ಣಲತಾ ದೇವಿ ಅವರ ನಾಲ್ಕು ಮಕ್ಕಳಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸೇನೆಯಲ್ಲಿ ಸಲ್ಲಿಸಿ ನಿವೃತ್ತಿಯಾಗಿ ತವರಿಗೆ ವಾಪಸಾದ ನಿವೃತ್ತ ಯೋಧ ವಿಜಯಪುರದ ನಗರದ ಜಾಡರ ಓಣಿಯ ಅನಿಲ್ ಗೊಳಸಂಗಿ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ, ಹೂ ಮಳೆ ಸುರಿಸುವ ಜತೆಗೆ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.ಈ ವೇಳೆ ಗ್ರಾಮ ಪ್ರಮುಖ ಬೀದಿಗಳಲ್ಲಿ ವಾದ್ಯ ಮೇಳಗಳೊಂದಿಗೆ ಸಂಭ್ರಮದ ಉತ್ಸವ ಹಾಗೂ ಎಲ್ಲೆಡೆ ಭಾರತಾಂಬೆಯ ಜೈಕಾರದ ದೇಶ ಪ್ರೇಮ ಮಾರ್ಧನಿಸಿತು.ಇವರು 23 ವರ್ಷಗಳ ಕಾಲ ಭಾರತ ದೇಶದ ಸೇವೆ ಸಲ್ಲಿಸಿ, ನಿವೃತ್ತಿಯಾಗಿ ಸ್ವಗ್ರಾಮಕ್ಕೆ ಮರಳಿದ ಪ್ರಯುಕ್ತವಾಗಿ ಜಾಡರ ಓಣಿಯ ಗೆಳೆಯರ ಬಳಗ ಹಾಗೂ ಬಂಧು ಬಳಗ ಸೇರಿದಂತೆ ಎನ್.ಸಿ.ಸಿ ಕೆಡೆಟ್ ಗಳು ಇವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ ಬರಮಾಡಿಕೊಂಡರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಾಲಗಾರರ ಸಾಮಾನ್ಯ, ಸಾಲಗಾರ ಹಿಂದುಳಿದ ಅ ವರ್ಗ ಹಾಗೂ ಸಾಲಗಾರರಲ್ಲದ(ಬಿನ್ ಸಾಲಗಾರ) ಕ್ಷೇತಗಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಮಲ್ಲೇಶಿ ಬಸಪ್ಪ ಕಡಕೋಳ (ಪಡೆದ ಮತ 1113), ಸಂಗನಗೌಡ ಕಲ್ಲನಗೌಡ ಚಿಕ್ಕೊಂಡ (ಪಡೆದ ಮತ 1111), ಸಂತೋಷ ಬಸಪ್ಪ ಹಾರಿವಾಳ (ಪಡೆದ ಮತ 1082) , ಸಂಗನಬಸಪ್ಪ ಚನ್ನಪ್ಪ ನಾಯಕೋಡಿ (ಪಡೆದ ಮತ 1080), ಮುತ್ತಪ್ಪ ಶಿದ್ರಾಮಪ್ಪ ಉಕ್ಕಲಿ(ಪಡೆದ ಮತ 1028), ಸಾಲಗಾರ ಹಿಂದುಳಿದ ವರ್ಗ ಅ ಕ್ಷೇತ್ರದಿಂದ ಶ್ರೀಶೈಲ ಸಿದ್ದಪ್ಪ ಪರಮಗೊಂಡ(ಪಡೆದ ಮತ 999) , ಸಾಲಗಾರರಲ್ಲದ (ಬಿನ್ ಸಾಲಗಾರ) ಸಾಮಾನ್ಯ ಕ್ಷೇತ್ರದಿಂದ ಈರಣ್ಣ ಭೀಮಪ್ಪ ವಂದಾಲ(ಪಡೆದ ಮತ 23) ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಎಂ.ಹಂಗರಗಿ ಘೋಷಿಸಿದರು.ಪಟ್ಟಣದ ಬಸವ ತತ್ವ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆ ನಾಲ್ಕು ಗಂಟೆಯವರೆಗೆ ಜರುಗಿದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪುರಾಣ ಕೇವಲ ಆಧ್ಯಾತ್ಮೀಕ, ಧಾರ್ಮಿಕ ಆಚಾರ ವಿಚಾರಗಳಿಗೆ ಸೀಮಿತವಲ್ಲ. ಇದು ಜಾನಪದ ಜಗತ್ತಿನ ಸೊಗಡನ್ನು ಪರಿಚಯಿಸಬಲ್ಲದು ಎನ್ನಲು ಭಾನುವಾರದ ರೈತರು ಹಂತಿ ಕಟ್ಟಿ ಜೋಳದ ರಾಶಿ ಮಾಡುವ ರೂಪಕ ಸಾಕ್ಷಿಯಾಯಿತು.ಪಟ್ಟಣದ ವೀರಭದ್ರೇಶ್ವರ ಕಾರ್ತಿಕೋತ್ಸವದ ಅಂಗವಾಗಿ ಕಳೆದ ೧೨ ದಿನಗಳಿಂದ ಜರುಗುತ್ತಿರುವ ಕಲಬುರ್ಗಿ ಶರಣಬಸವೇಶ್ವರ ಮಹಾಪುರಾಣ ಅಂಗವಾಗಿ ಶರಣ ಬಸವೇಶ್ವರ ಜೀವನದ ವಿವಿಧ ಘಟ್ಟಗಳನ್ನು ಪರಿಚಯಿಸುವ ಸಂದರ್ಭಕ್ಕೆ ಅನುಸಾರವಾಗಿ ಭಾನುವಾರ ನಾಡಿನ ಜಾನಪದ ಸಂಸ್ಕೃತಿಯ ಪ್ರತೀಕವಾದ ಹಂತಿ ಹಬ್ಬದ ರೂಪಕವನ್ನು ಭಕ್ತರು ಮುಖ್ಯವಾಗಿ ಪಟ್ಟಣದ ರೈತ ಸಮುದಾಯ ಹಾಗೂ ಮಹಿಳೆಯರು ವಿವಿಧ ಹಂತಿಹಾಡುಗಳನ್ನು ಹೇಳಿ ಹಂತಿ ಕಟ್ಟಿ ಜೋಳದ ರಾಶಿ ಮಾಡುವುದರ ಮೂಲಕ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ನೆನಪಿಸಿದರು.ರೈತರು ಸುಗ್ಗಿಯ ಕಾಲದಲ್ಲಿ ಸಂಭ್ರಮಿಸುತ್ತಿದ್ದ ದಿನಗಳನ್ನು ನೆನಪಿಸುವಂತೆ ಪ್ರತ್ಯಕ್ಷ ಹಂತಿ ಮಾಡುವು ಮೂಲಕ ತಮ್ಮ ಬದುಕಿನ ಸೊಗಡನ್ನು ಪುನಃ ಮೆಲಕು ಹಾಕುವಂತಾಯಿತು ಹಾಗೂ ಇಂದಿನ ಮಕ್ಕಳು ಹಾಗೂ ಯುವಕರಿಗೆ ಪರಿಚಯಿಸುವಂತಾಯಿತು. ವಿಶೇಷವಾಗಿ ಹಂತಿಹಬ್ಬದ ಎತ್ತುಗಳ ವೇಷದಾರಿಗಳು ಸಹ ನೋಡುಗರ ಗಮನ…
ಕಬ್ಬಿನ ಗದ್ದೆಗಳ ಮೇಲಿನ ವಿದ್ಯುತ್ ತಂತಿಗಳನ್ನು ಬದಲಾಯಿಸಲು ರೈತರ ಆಗ್ರಹ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವಿದ್ಯುತ್ ಅವಘಡದಿಂದಾಗಿ ಪಟ್ಟಣದ ೪ ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ಸಂಭವಿಸಿದೆ.ಪಟ್ಟಣದ ಪಾಂಡುರಂಗ ದೇಶಪಾಂಡೆ ಅವರ ಆರು ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು. ಶುಕ್ರವಾರ ಬೆಳಿಗ್ಗೆ ವಿದ್ಯುತ್ ತಂತಿಗಳ ಸ್ಪರ್ಶದಿಂದ ಘಟನೆ ಸಂಭವಿಸಿದ್ದು ಅಗ್ನಿಶಾಮಕ ತಂಡದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕಳೆದ ವರ್ಷವು ಇದೇ ಸಮಯದಲ್ಲಿ ಮೂರು ಎಕರೆಯಲ್ಲಿ ಬೆಳೆದ ಕಬ್ಬು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ನಷ್ಟ ಸಂಭವಿಸಿತ್ತು. ಆ ಸಂದರ್ಭದಲ್ಲಿ ಕಬ್ಬಿನ ಗದ್ದೆಯ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗದಂತೆ ಕ್ರಮ ಕೈಗೊಳ್ಳಲು ರೈತರು ಸೂಚಿಸಿದ್ದರು. ಆದರೆ ಹೆಸ್ಕಾಂ ಯಾವುದೇ ಕ್ರಮ ವಹಿಸದ ಹಿನ್ನೆಲೆಯಲ್ಲಿ ಘಟನೆ ಈ ಬಾರಿಯು ಪುನರಾವರ್ತನೆಯಾದಂತಾಗಿದೆ.ಹೆಸ್ಕಾಂ ಸಿಬ್ಬಂದಿ ಕೂಡಲೇ ಪಟ್ಟಣ ಸೇರಿದಂತೆ ತಾಲ್ಲೂಕಿನ ಕಬ್ಬಿನ ಗದ್ದೆಗಳ ಮೇಲಿನ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕು. ಹಾಗೂ ರೈತರಿಗೆ ಆದ ನಷ್ಟವನ್ನು ತಕ್ಷಣವೇ ತುಂಬಿ ಕೊಡಬೇಕು. ಜೊತೆಗೆ ಸರ್ಕಾರ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾಂಪ್ರದಾಯಿಕ ಛಟ್ಟಿ ಜಾತ್ರೆಯ ಅಂಗವಾಗಿ ರಾವುರಾಯನು ಪಲ್ಲಕ್ಕಿ ಉತ್ಸವದ ಮೂಲಕ ಮಲ್ಲಯ್ಯನ ದೇವಸ್ಥಾನ ಪ್ರವೇಶಿಸಿ ಮರಳಿ ಸ್ವಸ್ಥಾನಕ್ಕೆ ಮರಳುವುದರೊಂದಿಗೆ ಜಾತ್ರೆ ಸಂಪನ್ನಗೊಂಡಿತು.ಪಟ್ಟಣದಲ್ಲಿ ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ನಂತರ ಜರುಗುವ ರಾವುತರಾಯನ ಪಲ್ಲಕ್ಕಿ ಉತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮಲ್ಲಯ್ಯನ ದೇವಸ್ಥಾನ ತಲುಪಿದ ರಾವುತರಾಯನು ಪಲ್ಲಕ್ಕಿ ಉತ್ಸವ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ನಂತರ ದೇವಸ್ಥಾನದಲ್ಲಿ ಆಸೀನನಾದನು. ಶನಿವಾರ ಛಟ್ಟಿ ಅಂಗವಾಗಿ ಕಾರ್ತಿಕೋತ್ಸವ ಹಾಗೂ ಮಹಾಪ್ರಸಾದ ನೆರವೇರಿಸಲಾಯಿತು. ನಂತರ ಪಲ್ಲಕ್ಕಿ ಉತ್ಸವದ ಮೂಲಕ ಭಾನುವಾರ ಮರಳಿ ಪಟ್ಟಣದ ತನ್ನ ದೇವಸ್ಥಾನಕ್ಕೆ ಮರಳಿದನು.ಸಾಂಪ್ರದಾಯಿಕವಾಗಿ ರಾವುತರಾಯನು ಮಲ್ಲಯ್ಯನ ದೇವಸ್ಥಾನದಲ್ಲಿ ಷಷ್ಠಿಯವರೆಗೆ ಅಂದರೆ ಆರು ದಿನಗಳವರೆಗೆ ಇದ್ದು ನಂತರ ಮರಳಿ ತನ್ನ ಮೂಲದೇವಸ್ಥಾನಕ್ಕೆ ಮರಳುವನು. ಈ ಛಟ್ಟಿ ಜಾತ್ರೆಯ ಅಂಗವಾಗಿ ಪ್ರತಿ ವರ್ಷ ಜಾನುವಾರಗಳ ಬೃಹತ್ ಪ್ರದರ್ಶನ, ಮಾರಾಟ ಮೇಳ ಹಾಗೂ ಅತ್ಯುತ್ತಮ ರಾಸುಗಳಿಗೆ ಬಹುಮಾನ ವಿತರಣೆಗಳು ಪ್ರತಿವರ್ಷದಂತೆ ಈ ಬಾರಿ ವಿಜಯಪುರ ರಸ್ತೆಯಲಿರುವ ಗುರುಬಾಳಪ್ಪ ಯರಗಲ್ ಇವರ ಜಮೀನಿನಲ್ಲಿ ಜರುಗಿತು. ಕಾರಣಿಕರ ಹೇಳಿಕೆಗಳುಪ್ರತಿವರ್ಷವು…
ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ-ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಕಂಡು ಬಂದಿರುವ ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ಅವಶ್ಯವಿರುವ ಸೂಕ್ತ ಚಿಕಿತ್ಸೆಯನ್ನು ಕೊಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೆಸ್ ನಾಯಕರು ಹಾಗೂ ಗುತ್ತಿಗೆದಾರ ಸಂತೋಷ ಹರನಾಳ ಅವರನ್ನು ರಾಷ್ಟ್ರೀಯ ಅಹಿಂದ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಸಂಘಟನೆಯ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೊ.ಬೀರಲಿಂಗೇಶ್ವರ ಪೂಜಾರಿ ನೇಮಕಾತಿ ಕುರಿತು ಆದೇಶ ಪತ್ರ ನೀಡಿದ್ದಾರೆ. ಮುಂದಿನ ಆದೇಶದವರೆಗೂ ವಿಜಯಪುರ ಜಿಲ್ಲಾಧ್ಯಕ್ಷರಾಗಿ, ಅಹಿಂದ ಸಂಘಟನೆಯ ವರ್ಗಗಳ, ಸಮುದಾಯದ, ಜಾತ್ಯಾತೀತ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಹಕ್ಕುಗಳ ಪರ ನ್ಯಾಯಯುತ ಸಂಘಟನೆಗೆ ಶ್ರಮಿಸಬೇಕು ಎಂದು ತಿಳಿಸಲಾಗಿದೆ.
ಲಿಂ. ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ | ಪುರಾಣ ಪ್ರವಚನ ಮಹಾಮಂಗಲ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕಾಗಿರುವುದು ಅನಿವಾರ್ಯ. ನಾವೆಲ್ಲರೂ ಹೃದಯ ಶ್ರೀಮಂತಿಕೆ ಬೆಳೆಸಿಕೊಳ್ಳೋಣ. ಧರ್ಮವನ್ನು ಎಲ್ಲರೂ ಸೇರಿ ಉಳಿಸೋಣ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಯಂಕಂಚಿ ಗ್ರಾಮದ ಕುಂಟೋಜಿ ಹಿರೇಮಠದಲ್ಲಿ ಲಿಂ. ರುದ್ರಮುನಿ ಶಿವಾಚಾರ್ಯರ ೪೭ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಉಜ್ಜಯಿನಿ ಶ್ರೀಮದ್ ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಕಾರ್ಯಕ್ರಮದ ಮಹಾಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ಸನಾತನ ಧರ್ಮವನ್ನು ಮಠಮಾನ್ಯಗಳು ಉಳಿಸಿ ಬೆಳೆಸುತ್ತಿವೆ. ಮಠಗಳಲ್ಲಿ ಸಂಸ್ಕಾರ, ಸಂಸ್ಕೃತಿ ಇಂದಿನ ಯುವ ಪೀಳಿಗೆಗೆ ದೊರೆಯುತ್ತಿದೆ ಎಂದರು.ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಯಶವಂತರಾಯಗೌಡ ರೂಗಿ ಮಾತನಾಡಿ, ಶ್ರೀಗಳು ಯಂಕಂಚಿ ಗ್ರಾಮವನ್ನು ಕೈಲಾಸವನ್ನಾಗಿ ಮಾಡಿದ್ದಾರೆ. ನಮ್ಮ ನಡೆ ನುಡಿ, ಸಂಸ್ಕಾರ ಎಲ್ಲಿ ಎಂದರೆ ಅದು ಯಂಕಂಚಿ ಕುಂಟೋಜಿ ಮಠದಲ್ಲಿದೆ. ಎಲ್ಲರೂ ಸೇರಿಕೊಂಡು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: “ಎಸ್ಟ್ಡಿ ಆನ್ ಟೊಪೋಲಾಜಿಕಲ್ ಇಂಡಸಿಸ್ ಓವರ್ ಗ್ರಾಫ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಘಟಿಕೋತ್ಸವದಲ್ಲಿ ಸಿಂದಗಿಯ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ರಂಜನಾ ಮಹಾದೇವ ಸಂಕಪಾಲ್ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.ರಂಜನಾ ಮಹಾದೇವ ಸಂಕಪಾಲ್ ಅವರು ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ವಿಶ್ವನಾಥ ಅವಟಿ ಮಾರ್ಗದರ್ಶನದಲ್ಲಿ ಅವರ ಸಂಶೋಧನೆ ಕೈಗೊಂಡಿದ್ದರು.ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ನಿರ್ದೇಶಕರು, ಪ್ರಾಚಾರ್ಯ ಡಿ.ಎಂ.ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಅಭಿನಂಧಿಸಿದ್ದಾರೆ.
