Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ವಾಸಿಸುವ ಬಡವರಿಗೆ ವರದಾನವಾಗಿರುವದು ಸಂತೋಷದಾಯಕ ವಿಚಾರವಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ ಹೇಳಿದರು.ಪಟ್ಟಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಕಾರ್ಯಾಲಯ ಉದ್ಘಾಟನೆ ಹಾಗೂ ತಾಲೂಕು ಪಂಚಾಯತ ಕಛೇರಿ ವತಿಯಿಂದ ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ ಕಾರ್ಯಾಲಯದ ಸರಕಾರದಿಂದ ಫಲಾನುಭವಿಗಳಿಗೆ ಮಂಜೂರು ಆಗಿರುವ ವಿವಿಧ ಯೋಜನೆಗಳ ವಿತರಣೆ ಮಾಡಿ ಮಾತನಾಡಿದರು.ರಾಜ್ಯದ ಜನತೆ ನೋಡುವಂತಹ ತಾಲೂಕಾ ಆಡಳಿತ ಕಾರ್ಯಾಲಯ ಕಟ್ಟಡ ನಿರ್ಮಾಣ ಮಾಡುತ್ತೇನೆ. ಅಲ್ಲದೆ ತಾಲೂಕು ಆಡಳಿತದ ಎಲ್ಲ ಕಛೇರಿಗಳನ್ನು ಶೀಘ್ರದಲ್ಲಿಯೇ ಮಂಜೂರು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ಭರವಸೆ ನಿಡಿದರು.ಕೊಲ್ಹಾರ ಪಟ್ಟಣವು ವಾಣೀಜ್ಯ ಕ್ಷೇತ್ರದಲ್ಲಿ ಹೈನುಗಾರಿಕೆಯಲ್ಲಿ ಕ್ರಷಿ ಚಟುವಟಿಕೆಯಲ್ಲಿ ಮುಂದುವರೆಯುತ್ತಿರುವದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದೆ ರಾಜ್ಯದಲ್ಲಿಯೆ ದನದ ಸಂತೆ ಮಾರುಕಟ್ಟೆಯನ್ನು ಅತ್ಯಂತ ಜನಪ್ರೀಯಗೊಳಿಸಲಾಗುವದು ಎಂದರು.ಗ್ಯಾರಂಟಿ ಯೋಜನೆಯ ಜಿಲ್ಹಾಧ್ಯಕ್ಷ ಇಲಿಯಾಷ ಭೋರಾಣಿ, ತಾಲೂಕು ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿ, ಸರಕಾರಿ ಯೋಜನೆ ಪಂಚ ಗ್ಯಾರಂಟಿಗಳನ್ನು ಫಲಾಭವಿಗಳಿಗೆ…
ಲೇಖನವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಸುಮಾರು ಎರಡುವರೆ ಶತಮಾನಗಳ ದಾಸ್ಯದ ಅವಧಿಯನ್ನು ಪೂರೈಸಿ ಅಂತಿಮವಾಗಿ ಭಾರತ ದೇಶವು 1947 ಅಗಸ್ಟ್ 15 ರಂದು ಸ್ವತಂತ್ರವಾಯಿತು. ಸ್ವಾತಂತ್ರ್ಯ ದೊರೆತ ಸಮಯದಲ್ಲಿ ನಮಗೆ ನಮ್ಮದೇ ಆದ ರಾಜಕೀಯ ಆರ್ಥಿಕ ಸಾಮಾಜಿಕ ಸಹಭಾಗಿತ್ವವನ್ನು ಹೊಂದಲು ಸಂವಿಧಾನದ ಅವಶ್ಯಕತೆಯನ್ನು ಮನಗಂಡು ಆಗಸ್ಟ್ 19 ರಂದು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಲು ಸಮಿತಿಯೊಂದನ್ನು ರಚಿಸಿ ಅದಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಟಿ ಟಿ ಕೃಷ್ಣಮಾಚಾರ್, ಸೈಯದ್ ಮಹಮ್ಮದ್ ಅಸಾದುಲ್ಲಾ, ಡಿ ಪಿ ಖೇತಾನ್,ಕೆ ಕೃಷ್ಣಸ್ವಾಮಿ ಅಯ್ಯರ್, ಬಿ ಎಲ್ ಮಿತ್ತಲ್, ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯರ್, ಕೆ ಎನ್ ಮುನ್ಷಿ,ಎಂ ಮಾಧವರಾವ್ ಸಂವಿಧಾನ ಕರಡು ಪ್ರತಿ ರಚನಾ ಸಮಿತಿಯ ಸದಸ್ಯರಾಗಿದ್ದರು. ವಿವಿಧ ದೇಶಗಳ ಸಂವಿಧಾನಗಳು, ರಾಜಕೀಯ ಶಾಸ್ತ್ರದ ಕುರಿತು ವಿಶೇಷ ಅಧ್ಯಯನ ಮಾಡಿದ್ದ ಅಂಬೇಡ್ಕರ್ ಅವರು ತಮ್ಮ ಸಮಿತಿಯ ಸಲಹೆಯ ಮೇರೆಗೆ ಜಗತ್ತಿನಲ್ಲಿಯೇ ಅತ್ಯುತ್ತಮವಾದ ಸಂವಿಧಾನ ಪ್ರತಿಯನ್ನು ತಯಾರಿಸಿದರು. ಸುಮಾರು…
ರಚನೆಅಕ್ಕಮಹಾದೇವಿ ತೆಗ್ಗಿಬೆಳಗಾವಿ ಉದಯರಶ್ಮಿ ದಿನಪತ್ರಿಕೆ ಇಲ್ಲೆ ಇದ್ದಿನಿಹೀಗೆ ಇರುವೆಒಂಟಿ ಜೀವಕಾಡುತಿದೆ.ನಿನ್ನ ನೆನಪಲ್ಲೆಪ್ರತಿಕ್ಷಣ ಬದುಕಿರುವೆನಿನ್ನ ಉಸಿರೇನನ್ನ ಉಸಿರಾಗಿದೆ.ಏನು ಮೋಡಿಮಾಡಿರುವೆ ನೀನುಇಷ್ಟು ವರ್ಷ ಇಲ್ಲದ್ದುಪ್ರೀತಿ, ಪ್ರೇಮಈಗ ಉಕ್ಕಿಕ್ಕಿ ಬರುತ್ತಿದೆನಿನ್ನ ಮಾತುನಿನ್ನ ಭರವಸೆಹೊಸ ದಿಗಂತ,ನಿತ್ಯ ಜೇತನಕಾರಂಜಿಯಂತೆಪುಟಿಯುತಿದೆನೀನೆ ನನ್ನ ಸರ್ವಸ್ವಕನಸು ಬಯಕೆಯ ಬುತ್ತಿಉಸಿರು ಕಾವ್ಯ ಕವನಚಂದ್ರ, ಮಧುಚಂದ್ರಒಂಟಿ ಬದುಕಿನಬಾಳ ಬಟ್ಟೆ
ಲೇಖನವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ..ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ..ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ..ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ ಬೆಚ್ಚುತ್ತಾನೆ..ಜನರ ನೂಕಾಟ ತಳ್ಳಾಟಗಳ ನಡುವೆ ತಲೆ ಎತ್ತಿ ನೋಡುತ್ತಾನೆ. ಅಲ್ಲಿ ಒಂದು ದೊಡ್ಡ ಬೋರ್ಡ (ಫಲಕ) .. ಕಳ್ಳರಿದ್ದಾರೆ ಎಚ್ಚರಿಕೆ ಆ ಯುವಕನಿಗೆ ಶಾಕ್. ರಾಜ್ಯದ ರಾಜಧಾನಿ ಬೆಂಗಳೂರಿನ ಮುಖ್ಯ ಬಸ್ ನಿಲ್ದಾಣದಲ್ಲಿ ಈ ಅಸಹ್ಯಕರವಾದ ಫಲಕ..ಛೆ,.. ಇರಲಾರದು, ಏನೋ ತಪ್ಪಾಗಿರಬೇಕು, ಬಸ್ ನಿಲ್ದಾಣದಲ್ಲಿ ಕಳ್ಳರೇ ! ಎಂದು ಭಾವಿಸಿ ಅಲ್ಲಿದ್ದ ಒಬ್ಬ ವ್ಯಕ್ತಿಯನ್ನು ಅದರ ಬಗ್ಗೆ ಕೇಳುತ್ತಾನೆ..ಆ ವ್ಯಕ್ತಿ”ಹೌದು ಸಾರ್ ಇಲ್ಲಿ ಕಳ್ಳರು -…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿರಿಯ ರಂಗಭೂಮಿ ಕಲಾವಿದೆ, ಚಲನಚಿತ್ರನಟಿ, ಹಿನ್ನೆಲೆ ಗಾಯಕಿ, ಶ್ರೀಮತಿ ಬಿ.ಜಯಶ್ರೀ ಯವರು ದಿನಾಂಕ : ೨೮-೦೧-೨೦೨೫ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ಸ್ವಯಂಬೋ ಆರ್ಟ್ಸ್ ಫೌಂಡೇಶನ್ ನಲ್ಲಿ ಕಲಾವಿದರೊಂದಿಗೆ ಸಂವಾದ ಇದ್ದು, ಜನಪದ, ರಂಗಭೂಮಿ, ಪಾರಿಜಾತ, ಚೌಡಕಿ, ಏಕ್ತಾರಿ, ರಂಗಗೀತೆ, ಹೀಗೆ ಇನ್ನು ಹಲವಾರು ಕಲಾವಿದರೊಂದಿಗೆ ಸಂವಾದ ನಡೆಸಲಿದ್ದಾರೆ.ಸಂವಾದಲ್ಲಿ ಪಾಲ್ಗೊಂಡ ಕಲಾವಿದರಿಗೆ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಲಾಗುವದು.ಈ ಸಂವಾದದಲ್ಲಿ ಭಾಗವಹಿಸುವ ಆಸಕ್ತ ಕಲಾವಿದರು, ಶರಣು ಸಬರದ, ಭಾರತ್ ಸ್ಕೌಟ್ಸ್ & ಗೈಡ್ಸ್ ಭವನದಲ್ಲಿ ಅರ್ಜಿ ಸಲ್ಲಿಸಬಹುದು. ಫೋನ್ ಮುಖಾಂತರ ಹೆಸರು ನೊಂದಾಯಿಸಬಹುದು. ಸಂಪರ್ಕಿಸುವ ಸಂಖ್ಯೆ : ಶರಣು ಸಬರದ ಮೊ : ೯೭೪೦೫೮೨೦೦೯ ಹಾಗೂ ಮೋಹನ ಕಟ್ಟಿಮನಿ ಮೊ: ೮೯೭೧೩೧೦೦೦೮ ಇದಕ್ಕೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ, ದೇಶಭಕ್ತಿ ಮತ್ತು ನಾಯಕತ್ವಕ್ಕಾಗಿ ಸ್ಮರಣೀಯರು ಎಂದು ಕೂಡಗಿ ಎನ್ ಟಿ ಪಿಸಿಯ ಪ್ರಾಜೆಕ್ಟ್ ಮುಖ್ಯಸ್ಥ ಬಿದ್ಯಾನಂದ್ ಝಾ ಹೇಳಿದರು.ತಾಲೂಕಿನ ಕೂಡಗಿ ಎನ್ ಟಿಪಿಸಿ ಟೌನ್ಶಿಪ್ ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.ನೇತಾಜಿ ಅವರ ಪ್ರಸಿದ್ಧ ಘೋಷಣೆಯಾದ “ನನಗೆ ರಕ್ತ ಕೊಡಿ, ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ಕೊಡುತ್ತೇನೆ” ಎಂದಿರುವುದು ತ್ಯಾಗ ಮತ್ತು ರಾಷ್ಟ್ರೀಯತೆಯ ಮನೋಭಾವವನ್ನು ಪ್ರತಿಧ್ವನಿಸುತ್ತದೆ. ಅವರ ಪ್ರಯತ್ನಗಳು ಮತ್ತು ದೃಷ್ಟಿಕೋನವು ನಿಸ್ವಾರ್ಥತೆ, ಏಕತೆ ಮತ್ತು ರಾಷ್ಟ್ರದ ಸೇವೆಯ ಆದರ್ಶಗಳ ಕಡೆಗೆ ತಲೆಮಾರುಗಳನ್ನು ಪ್ರೇರೇಪಿಸುತ್ತದೆ ಎಂದರು.ಈ ಸಂದರ್ಭದಲ್ಲಿ ಎನ್ ಟಿಪಿಸಿಯ ಕೆ.ಕೆ.ಹೋಟಾ, ಅಲೋಕೇಶ್ ಬ್ಯಾನರ್ಜಿ, ಯು.ಕೆ. ಜೈನ್, ಓ ಶ್ರೀನಿವಾಸ್, ಪೂಜಾ ಪಾಂಡೆ ಇತರ ಹಿರಿಯ ಅಧಿಕಾರಿಗಳು ಮತ್ತು ಉದ್ಯೋಗಿಗಳು ಗೌರವ ಸಲ್ಲಿಸಿದರು.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಮಟ್ಟಿಹಾಳ ಗ್ರಾಮದ ವಿವಿಧೋದ್ದೇಶ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾಗರದಿನ್ನಿ ಗ್ರಾಮದ ಹಣಮಂತಗೌಡ ಕುಬಕಡ್ಡಿ, ಉಪಾಧ್ಯಕ್ಷರಾಗಿ ಕುರುಬರದಿನ್ನಿ ಗ್ರಾಮದ ಮಾನಿಂಗಪ್ಪ ಬಿರಾದಾರ ಅವಿರೋಧವಾಗಿ ಆಯ್ಕೆಯಾದರು,11 ಜನರ ಸದಸ್ಯರ ಬಲದ ವಿವಿಧೋದ್ದೇಶ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ನಾಗರದಿನ್ನಿಯ ಹಣಮಂತಗೌಡ ಕುಬಕಡ್ಡಿ, ಉಪಾಧ್ಯಕ್ಷ ಸ್ಥಾನಕ್ಕೆ ಕುರುಬರದಿನ್ನಿಯ ಮಾನಿಂಗಪ್ಪ ಬಿರಾದಾರ ನಾಮಪತ್ರ ಸಲ್ಲಿಸಿದರು. ಇವರ ವಿರುದ್ಧ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಪವನಕುಮಾರ ಮಣೂರ ಘೋಷಣೆ ಮಾಡಿದರು.ಈ ವೇಳೆ ನಿರ್ದೇಶಕರಾಗಿ ಹಣಮಾಪೂರ ಗ್ರಾಮದ ಸಂಗಮೇಶ ಕುಬಕಡ್ಡಿ, ಹಣಮಂತ ಛಬ್ಬಿ, ಬಸವ್ವ ಹಡಪದ, ಬಾಗಾನಗರ ಗ್ರಾಮದ ಲಾಲಬಿ ದಡೆದ, ಉದಾಜಪ್ಪ ಪೂಜಾರಿ, ಮಟ್ಟಿಹಾಳ ಗ್ರಾಮದ ಮಲ್ಲಿಕಾರ್ಜುನ ಬಿರಾದಾರ, ಪರಸಪ್ಪ ಪೂಜಾರಿ, ನಾಗರದಿನ್ನಿ ಗ್ರಾಮದ ಪ್ರದೀಪ್ ಗೌಡ ಪಾಟೀಲ, ಕುರುಬರದಿನ್ನಿಯ ವಿಠ್ಠಲ ಮಾದರ ಎಲ್ಲ ಅವಿರೋಧವಾಗಿ ಆಯ್ಕೆಯಾದರು.ನೂತನವಾಗಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕುಗಳಲ್ಲಿ ಇಟ್ಟುಕೊಳ್ಳಬಾರದು. ಬ್ಯಾಂಕುಗಳ ಒಳ ಹಾಗೂ ಹೊರ ಆವರಣಗಳಲ್ಲಿ ಬ್ಯಾಂಕ್ ವ್ಯವಹಾರ ಮಾಡಲು ಬಂದಿರದೇ ಇರುವ ವ್ಯಕ್ತಿಗಳು, ಸಂಶಯಾಸ್ಪದ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿ ಅಥವಾ ಗ್ರಾಹಕರನ್ನು ಗಮನಿಸುತ್ತಿರುವಂತಹವರ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಪಿಎಸ್ಐ ಎಂ.ಬಿ. ಬಿರಾದಾರ ಹೇಳಿದರು.ಪಟ್ಟಣ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ಪೊಲೀಸ ಠಾಣೆಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಎಟಿಎಂ ಗಳಿಗೆ ಹಣ ಹಾಕಲು ಹೋಗುವಂತಹ ವಾಹನಗಳೊಂದಿಗೆ ಆಯುಧಗಳನ್ನು ಹೊಂದಿರುವ ಭದ್ರತಾ ಸಿಬ್ಬಂಧಿಯವರು ಕಡ್ಡಾಯವಾಗಿ ಇರುವಂತೆ ಜೊತೆಗೆ ಇತರೇ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ಪಾಲನೆ ಮಾಡುವುದು. ಎಟಿಎಂ ಗಳಿಗೆ ಹಗಲು ರಾತ್ರಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ, ಕಡ್ಡಾಯವಾಗಿ ಸೆಕ್ಯೂರಿಟಿ ಗಾರ್ಡ್, ಉತ್ತಮ ಸಿಸಿ ಟಿವಿ ಅಳವಡಿಕೆ ಇರುವಂತೆ ಕ್ರಮ ಕೈಗೊಳ್ಳುವುದು, ಎಟಿಎಂ ಗಳಿಗೆ ಹಣ ತುಂಬುವ ಸಿಬ್ಬಂದಿ, ವಾಹನ ಚಾಲಕ, ಆಯುಧ ಹೊಂದಿದ ಭದ್ರತಾ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ , ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಈ ಅಹೋರಾತ್ರಿ ಹೋರಾಟವು ೬ ನೇ ದಿನಕ್ಕೆ ಮುಂದುವರೆದಿದೆ.ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ, ಪ್ರಗತಿಪರ ಚಿಂತಕರಾದ ಕರೆಪ್ಪ ಗುಡಿಮನಿ, ಪ್ರಭುಗೌಡ ಪಾಟೀಲ, ಅಕ್ಷಯ ಅಜಿಮನಿ, ಬಹುಜನ ಸಮಾಜ ಪಾರ್ಟಿಯ ರಾಜ್ಯ ಪದಾಧಿಕಾರಿಗಳು ಹಾಗೂ ಪಾರ್ಟಿ ಜಿಲ್ಲಾಧ್ಯಕ್ಷ ಕಲ್ಲಪ್ಪ ತೊರವಿ, ಅಣ್ಣಾರಾಯ ಇಳಗೇರ ಸಿಐಟಿಯು ಜಿಲ್ಲಾಧ್ಯಕ್ಷ, ಭೀಮರಾಯ ಪೂಜಾರಿ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇನ್ನಿತರರು ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.ಸಂಘದ ಹುಲಗಪ್ಪ ಎಚ್. ಚಲವಾದಿ, ಜಿಲ್ಲಾಧ್ಯಕ್ಷರು, ಲಕ್ಷö್ಮಣ ಮಸಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ,ಯಮನಪ್ಪ ಬಜಂತ್ರಿ ಜಿಲ್ಲಾ…
೬ನೇ ದಿನಕ್ಕೆ ಕಾಲಿರಿಸಿದ ಹಾಸ್ಟೇಲ್ ನೌಕರರ ಅಹೋರಾತ್ರಿ ಧರಣಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ , ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಈ ಅಹೋರಾತ್ರಿ ಹೋರಾಟವು ೬ ನೇ ದಿನಕ್ಕೆ ಮುಂದುವರೆದಿದೆ.ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ, ಪ್ರಗತಿಪರ ಚಿಂತಕರಾದ ಕರೆಪ್ಪ ಗುಡಿಮನಿ, ಪ್ರಭುಗೌಡ ಪಾಟೀಲ, ಅಕ್ಷಯ ಅಜಿಮನಿ, ಬಹುಜನ ಸಮಾಜ ಪಾರ್ಟಿಯ ರಾಜ್ಯ ಪದಾಧಿಕಾರಿಗಳು ಹಾಗೂ ಪಾರ್ಟಿ ಜಿಲ್ಲಾಧ್ಯಕ್ಷ ಕಲ್ಲಪ್ಪ ತೊರವಿ, ಅಣ್ಣಾರಾಯ ಇಳಗೇರ ಸಿಐಟಿಯು ಜಿಲ್ಲಾಧ್ಯಕ್ಷ, ಭೀಮರಾಯ ಪೂಜಾರಿ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇನ್ನಿತರರು ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.ಸಂಘದ ಹುಲಗಪ್ಪ ಎಚ್. ಚಲವಾದಿ, ಜಿಲ್ಲಾಧ್ಯಕ್ಷರು,…
