Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಪ್ರಸ್ತುತ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ತಯಾರಿಗೆ ಮಕ್ಕಳು ಈಗಿಂದಲೇ ಮಾನಸಿಕವಾಗಿ ಸಿದ್ದತೆಗೊಳ್ಳಬೇಕು. ಆ ದಿಸೆಯಲ್ಲಿ ಎಲ್ಲ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಪರೀಕ್ಷಾ ಮುಖ್ಯ ವಾಹಿನಿಗೆ ತರಲು ಶಿಕ್ಷಕರು ಪ್ರಯತ್ನಿಸಬೇಕಲ್ಲದೇ ಫಲಿತಾಂಶ ಸುಧಾರಣೆಗೆ ನಿರಂತರ ಶ್ರಮ ವಹಿಸಬೇಕು ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರ ಕಚೇರಿಯ ವಿಜ್ಞಾನ ವಿಷಯ ಪರಿವೀಕ್ಷಕ ಎಂ.ಎಸ್.ನ್ಯಾಮಗೌಡ ಸಲಹೆಯಿತ್ತರು.ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಅವರು ಮಾತನಾಡಿದರು.ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆಗೆ ಪರೀಕ್ಷಾ ಪೂರ್ವ ತಯಾರಿ ಹಾಗೂ ಪಠ್ಯ ವಿಷಯ ಕುರಿತು ಸಂವಾದ ನಡೆಸಿದ ಅವರು, ಪರೀಕ್ಷೆಗೆ ಸಿದ್ದರಾಗಲು ಈಗಿನಿಂದಲೇ ಸಕಲ ಓದಾಭ್ಯಾಸದ ತಯಾರಿ ಮಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸನ್ನದ್ಧರಾಗಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.ಮಕ್ಕಳ ಕಲಿಕಾ ಹಾಗೂ ಫಲಿತಾಂಶ ಪ್ರಗತಿಗೆ ಶಿಕ್ಷಕರು ಒತ್ತು ನೀಡಬೇಕು. ಈ ಬಾರಿ ಗ್ರೇಡ್ ಅಂಕಗಳಿಲ್ಲ.ಪರೀಕ್ಷಾ…
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಿಇಒ ವಸಂತ ರಾಠೋಡ ಅಭಿಮತ ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಸೃಜನಾತ್ಮಕ ಸಾಂಸ್ಕೃತಿಕ ಕಲಾ ಚಟುವಟಿಕೆಗಳನ್ನು ಹೊರಹಾಕಲು ಪೂರಕವಾಗಿರುವ “ಪ್ರತಿಭಾ ಕಾರಂಜಿ-ಕಲೋತ್ಸವ” ಕಾರ್ಯಕ್ರಮ ಮಕ್ಕಳಿಗೆ ವೇದಿಕೆ ಮೇಲೆ ನಿಲ್ಲುವ ಆತ್ಮಸ್ಥೈರ್ಯ ತುಂಬುತ್ತದೆ. ಅಲ್ಲದೇ ಎಳೆ ಮನದಲ್ಲಿ ದಿಟ್ಟತೆಯ ಸ್ಟೇಜ್ ಕರೇಜ್ ದ ಕವರೇಜ್ ಗೆ ಸಹಕಾರಿಯಾಗಿದೆ ಎಂದು ಬಸವನ ಬಾಗೆವಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಅಭಿಪ್ರಾಯಿಸಿದರು.ಸಮೀಪದ ಗೊಳಸಂಗಿ ಗ್ರಾಮದ ಎಸ್.ಆರ್.ಎಡಿಪ್ರೌಢಶಾಲೆ, ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹೆಣ್ಣು ಮಕ್ಕಳ ಶಾಲೆ ಸಹಯೋಗದಲ್ಲಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ – ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಎಳೆಯ ಬಾಲ-ಬಾಲೆಯರ ಮೊಗ್ಗಿನ ಮನಭಾವದಲ್ಲಿ ಪ್ರತಿಭಾ ಕಾರಂಜಿಯು ಉತ್ಸಾಹದ ಚಿಲುಮೆ ಮೂಡಿಸಿ ದಿಟ್ಟತೆಯಿಂದ ಸ್ಪಧಾ೯ ಮನಭಾವದಲ್ಲಿ ಪ್ರತಿಭಾ ಕಾರಂಜಿಯು ವಿಶಿಷ್ಟ ರೀತಿಯಲ್ಲಿ ಯಶಸ್ವಿಯಾಗುತ್ತಲಿದೆ ಎಂದರು.ಶಾಲಾ ಹಂತದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಬೇಕು ಯುಕೆಪಿ ೩ನೇ ಹಂತ ಯಥಾವಿದಿಯಾಗಿ ಜಾರಿಯಾಗಬೇಕು ಎಂದು ಆಗ್ರಹಿಸಿ ರೈತರ ಹೋರಾಟಕ್ಕೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕವು ಬೆಂಬಲ ನೀಡಿ ಯೋಜನೆ ಸಂಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಏಷ್ಯಾಖಂಡದಲ್ಲಿಯೇ ಬೃಹತ್ ನೀರಾವರಿ ಯೋಜನೆ ಆಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಆರಂಭಗೊಂಡು ಧೀರ್ಘಕಾಲವಾದರೂ ಇದುವರೆಗೂ ಪೂರ್ಣಗೊಳ್ಳದಿರುವುದು ದುರಂತವೇ ಸರಿ. ಪಕ್ಷಾತೀತ, ಜ್ಯಾತ್ಯಾತೀತವಾಗಿ ಜಿಲ್ಲೆಯ ಯಾವುದೇ ಸಮಸ್ಯೆ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಜಿಲ್ಲಾ ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘವು ಬೆಂಬಲಿಸುತ್ತದೆ. ನ್ಯಾಯಯುತವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಹೋರಾಟಕ್ಕೆ ಸ್ಪಂದಿಸಿ ಸರಕಾರವು ಎಚ್ಚೆತ್ತುಕೊಂಡು ಅಗತ್ಯ ಅನುದಾನ ನೀಡಿ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.ನೆರೆಯ ಆಂದ್ರಪ್ರದೇಶ ಸರಕಾರವು ಆಣೆಕಟ್ಟುಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ನ್ಯಾಯಬದ್ದವಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ಆಗುತ್ತಿಲ್ಲ.…
ಇಂಡಿ ಶಾಂತೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ನಡೆದ ಧರ್ಮಸಭೆ ಮತ್ತು ಸಾಮೂಹಿಕ ವಿವಾಹ ಉದಯರಶ್ಮಿ ದಿನಪತ್ರಿಕೆ ಇಂಡಿ: ಪೂಜ್ಯರು, ಹರ ಗುರುಚರಣರು, ಸಾವಿರಾರು ಜನರ ನಡುವೆ ನಡೆಯುವ ಮದುವೆ ಬಡವರ ಮದುವೆ ಅಲ್ಲ, ಇದು ಭಾಗ್ಯವಂತರ ಮದುವೆ ಎಂದು ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯರರು ಹೇಳಿದರು.ಪಟ್ಟಣದ ಸದ್ಗುರು ಶ್ರೀ ಶಾಂತೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಶಾಂತೇಶ್ವರ ಮತ್ತು ಹಿರೇ ಇಂಡಿ ಹನುಮಾನ ದೇವಸ್ಥಾನ ಸಮಿತಿ ಮತ್ತು ಶ್ರೀ ಶಾಂತೇಶ್ವರ ಸಹಕಾರ ಸೌಹಾರ್ಧ ಸಂಯುಕ್ತ ಆಶ್ರಯದಲ್ಲಿ ನಡೆದ ಧರ್ಮಸಭೆ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮದುವೆ ಇಂದು ಎಲ್ಲ ಸಮಾಜದವರ ಸಾಮಾನ್ಯ ಮತ್ತು ಬಡ ಕುಟುಂಬಗಳ ಜಲ್ವಂತ ಸಮಸ್ಯೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಮದುವೆ ಮಾಡುವದು ಕಷ್ಟ. ಹೀಗಾಗಿ ಕಲಿತಿರುವ ವಧು ವರರು ಯುವಕರು ಗೃಹಸ್ಥಾಶ್ರಮ ಪ್ರವೇಶಕ್ಕೆ ಸಾಮೂಹಿಕ ವಿವಾಹ ಸೂಕ್ತ ಎಂದರು.ಹತ್ತಳ್ಳಿಯ ಗುರುಪಾದೇಶ್ವರ ಶ್ರೀಗಳು ಮಾತನಾಡಿದರು.೧೨ ಜೊತೆಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದ್ದರು.ವೇದಿಕೆಯ ಮೇಲೆ ಗೋಳಸಾರದ ಅಭಿನವ ಪುಂಡಲಿಂಗ ಶ್ರೀಗಳು, ನಾಗಣಸೂರದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ 2 ಗ್ರಂಥಾಲಯ ಸಹಾಯಕರ ಹುದ್ದೆಗೆ ತಾತ್ಕಾಲಿಕವಾಗಿ ಭರ್ತಿಮಾಡಿಕೊಳ್ಳಲುಅರ್ಜಿ ಆಹ್ವಾನಿಸಲಾಗಿದೆ.ಸದರಿ ಹುದ್ದೆಯು 179 ದಿನಗಳವರೆಗೆ ಅಥವಾ ಖಾಯಂ ಗ್ರಂಥಾಲಯ ಸಹಾಯಕರು ನೇಮಕಾತಿಗೊಂಡಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಇರುತ್ತದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಪಡೆದ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ದಿನಾಂಕ: 20-12-2024ರಂದು ಬೆಳಿಗ್ಗೆ 11 ಘಂಟೆಗೆ ಕೃಷಿ ಮಹಾವಿದ್ಯಾಲಯದ ಸಂದರ್ಶನ ಕೊಠಡಿಗೆ ಹಾಜರಾಗಬಹುದು ಎಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ನೋಂದಣಿಯಾದ ಲೇವಾದೇವಿ, ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಪರವಾನಿಗೆಯನ್ನು 2025ರ ಜನವರಿ 31ರೊಳಗಾಗಿ ನಿಗದಿತ ಶುಲ್ಕ ಪಾವತಿಸಿ ನವೀಕರಣಗೊಳಿಸಿಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಎಸ್.ಕೆ.ಭಾಗ್ಯಶ್ರೀ ಅವರು ತಿಳಿಸಿದ್ದಾರೆ.2025ರ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಹಣಕಾಸು ಸಂಸ್ಥೆಗಳು ಪರವಾನಿಗೆ ನವೀಕರಿಸಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ನವೀಕರಿಸದೇ ಇದ್ದಲ್ಲಿ ನಂತರ ಬಂದ ಅರ್ಜಿಗಳಿಗೆ ಕಾಯ್ದೆ 6(4) ರಲ್ಲಿ ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಹಾಗೂ ಕಾಯ್ದೆ ಕಲಂ 7ಎ(2)ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿ ಮೊತ್ತಕ್ಕೆ ಅನುಗುಣವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಿಜಯಪುರ-ಇಂಡಿ ಇವರ ಮೂಲಕ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಲು ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಸಂತ್ರಸ್ತರ ಹೋರಾಟ ಸಮಿತಿ ಬಾಗಲಕೋಟೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ದರಣಿ/ಸರದಿ ಸತ್ಯಾಗ್ರಹದಲ್ಲಿ ಇಂದು ಸೋಮವಾರ ಪಾಲ್ಗೋಂಡು ಬೆಂಬಲ ಸೂಚಿಸಿ ಅವರು ಮಾತನಾಡಿದರು.ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ ಎತ್ತರ ಮಾಡುವುದರಿಂದ ಈ ಯೋಜನೆ ಪೂರ್ಣಗೊಂಡರೆ ಉಭಯ ಜಿಲ್ಲೆಗಳಷ್ಟೇ ಅಲ್ಲ, ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ. 16 ಲಕ್ಷ ಹೆಕ್ಟೆರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಿಂದ ರೈತರ ಬಾಳು ಹಸನಾಗಲಿದೆ. ಎರಡೂ ಜಿಲ್ಲೆಗಳ 18 ಜನ ಶಾಸಕರು ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಈ…
ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಸಾಧ್ಯವಾದ ಕೆಲಸಗಳನ್ನು ಸಾಧ್ಯ ಮಾಡುವ ಮೂಲಕ ಸಚಿವ ಎಂ. ಬಿ. ಪಾಟೀಲ ಅವರು ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂದಾಜು ರೂ.160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ(ಸೈಟ್- 3) ನಿರ್ಮಾಣ ಕಾಮಗಾರಿಗೆ ಇಂದು ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿದ ನಂತರ ಜಿಲ್ಲೆಗೆ ಮತ್ತಷ್ಟು ನೀರು ಹಂಚಿಕೆಯಾಗಲಿದ್ದು, ನೀರಾವರಿ ಕ್ಷೇತ್ರವೂ ವಿಸ್ತರಣೆಯಾಗಲಿದೆ. ನೀರಾವರಿ, ರಸ್ತೆ, ಗುಣಮಟ್ಟದ ವಿದ್ಯುತ್ ಪೂರೈಕೆ, ಶಿಕ್ಷಣ ಕ್ಶೇತ್ರದ ಸುಧಾರಣೆ ಮೂಲಕ ಎಂ. ಬಿ. ಪಾಟೀಲರು ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನರ ಜೀವನಮಟ್ಟ ಮತ್ತಷ್ಟು ಸುಧಾರಿಸಲಿದ್ದು, ರೈತರು ಆರ್ಥಿಕವಾಗಿ ಹೆಚ್ಚು ಸದೃಢರಾಗಲಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ,…
ಚಿಮ್ಮಡದಲ್ಲಿ ಸಣ್ಣ ಮತ್ತು ಮದ್ಯಮ ಉದ್ಯಮಿಗಳ ಶಿಬಿರ ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಉದ್ಯಮ ಸ್ಥಾಪನೆಗಾಗಿ ಸಾಲ ನೀಡಲು ಬ್ಯಾಂಕುಗಳೇ ಪೈಪೊಟಿಗಿಳಿದದ್ದು ಕೇಂದ್ರ ಸರಕಾರದ ಸಹಾಯಧನದೊಂದಿಗೆ ಸಾಲ ನೀಡಲು ನಮ್ಮ ಬ್ಯಾಂಕು ಮಹತ್ವದ ಹೆಜ್ಜೆ ಇರಿಸಿದೆ ಎಂದು ಕೆನರಾ ಬ್ಯಾಂಕ್ ಪ್ರಾದೇಶೀಕ ಮುಖ್ಯಸ್ಥೆ ಕೆ.ಆರ್. ಶೈಲಜಾ ಹೇಳಿದರು.ಗ್ರಾಮದ ಸುಯೋಗ ಪೂಜಾರಿ ಉದ್ಯಮ ಕೇಂದ್ರ ಕಛೇರಿಯ ಸಬಾಭವನದಲ್ಲಿ ಆಯೋಜಿಸಲಾಗಿದ್ದ ಸಣ್ಣ ಮತ್ತು ಮದ್ಯಮ ಉದ್ಯಮಿಗಳ ಶಿಬಿರದ ಉದ್ಘಾಟಣೆ ನೆರವೇರಿಸಿ ಮಾತನಾಡಿದ ಅವರು ಕೃಷಿ ಕ್ಷೇತ್ರ ಅವಲಂಬಿತ ಉದ್ಯಮ ಸ್ಥಾಪಿಸಲು ನಮ್ಮ ಬ್ಯಾಂಕ ಬಯಸುತಿದ್ದು ಅದರೊಂದಿಗೆ ಗುತ್ತಿಗೆದಾರರಿಗೆ, ಆಸ್ಪತ್ರೆ ನಿರ್ಮಾಣಕ್ಕೆ, ಬೇಕರಿ ಉತ್ಪಣ್ಣ ತಯಾರಿಕೆಗೆ, ಹಾಲು ಮತ್ತು ಹಾಲಿನ ಉತ್ಪಣ್ಣಗಳ ತಯಾರಿಕಾ ಘಟಕ ಸೇರಿದಂತೆ ಹಲವಾರು ಬಗೆಯ ಉದ್ಯಮ ಸ್ಥಾಪಿಸಲು ಶೇ. ೩೫ ರಿಂದ ೫೦ ರ ವರೆಗೆ ಸಹಾಯಧನ ದೊಂದಿಗೆ ಸಾಲ ನೀಡಲು ನಮ್ಮ ಬ್ಯಾಂಕ್ ಸಿದ್ದವಿದ್ದು ಆಸಕ್ತರು ನಮ್ಮ ಶಾಖೆಯನ್ನು ಸಂಪರ್ಕಿಸಬೇಕೆಂದರು.ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಸುನಿಲಕುಮಾರ ಮಾತನಾಡಿ ಬ್ಯಾಂಕನಿಂದ ಸಿಗುವ ವಿವಿಧ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಇತ್ತೀಚೆಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಸವರಾಜ ರಾವೂರ ಹಾಗೂ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿದ್ದಣ್ಣ ಬೂದಿಹಾಳ ಅವರನ್ನು ಶನಿವಾರ ಪಟ್ಟಣದ ಅಕ್ಕಮಹಾದೇವಿ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಸತ್ಕರಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಮಾತನಾಡಿ, ಸರ್ಕಾರಿ ನೌಕರರು ನನ್ನನ್ನು ನಂಬಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಅವರ ಅರುಣ ತೀರಿಸಲು ಬದ್ಧನಿದ್ದೇನೆ. ಅದರಂತೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾಲೂಕಿನ ರೈತರ ಪರವಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದ ಅವರು ಅಕ್ಕಮಹಾದೇವಿ ಸೌಹಾರ್ದ ಸಂಘದವರು ಸದಾ ಸಾಮಾಜಿಕ ಕಾರ್ಯಗಳನ್ನು ಮಾಡುತ್ತ, ಒಳ್ಳೆಯದನ್ನು ಮಾಡುವ ಜನರನ್ನು ಗುರುತಿಸಿ ಸತ್ಕರಿಸುವ ಸತ್ಕಾರ್ಯ ಮಾಡುತ್ತಿರುವುದು, ಇನ್ನಷ್ಟು ಒಳ್ಳೆಯದನ್ನು ಮಾಡಲು ಅವರಿಗೆ ಪ್ರೇರೇಪಿಸುತ್ತದೆ ಎಂದರು.ವಕೀಲರ ಸಂಘದ ಅಧ್ಯಕ್ಷ ಸಿದ್ದಣ್ಣ ಬೂದಿಹಾಳ ಮಾತನಾಡಿ, ಇಂಡಿ ಪಟ್ಟಣದಲ್ಲಿ ನನ್ನ ಅವಧಿಯಲ್ಲಿಯೇ ಜಿಲ್ಲಾ ನ್ಯಾಯಾಲಯವನ್ನು ಕಟ್ಟಿಸಿ ಉದ್ಘಾಟ್ಟಿಸುವ ಕನಸು ಕಂಡಿದ್ದೇನೆ ಅದಕ್ಕೆ ಎಲ್ಲರ ಸಹಕಾರ ಅವಶ್ಯವಾಗಿದೆ.…
