Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಹಿಂದೆ ಕೂಡಲಸಂಗಮದಿಂದ ಸುಮಾರು ೭೦೦ಕಿ.ಮೀ ಪಾದಯಾತ್ರೆ ಮಾಡುವ ಮೂಲಕ ಬೆಂಗಳೂರಿನ ಫ್ರೀಡ್‌ಂಪಾರ್ಕ್ನಲ್ಲಿ ಧರಣಿ ನಡೆಸಿದ್ದಾರೆ. ನೆಪ ಮಾತ್ರ ಘೋಷಣೆ ಮಾಡಿ ಕೈ ತೊಳೆದುಕೊಂಡ ಘಟನೆ ನಡೆದಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಅಸಮಾಧಾನ ವ್ಯಕ್ತಪಡಿಸಿದರು.ಪಟ್ಟಣದ ಬಸವ ಮಂಟಪದಲ್ಲಿ ಬೆಳಗಾವಿ ಚಲೋ ನಿಮಿತ್ಯ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗಾಗಿ ಸುವರ್ಣ ಸೌದಕ್ಕೆ ಮುತ್ತಿಗೆ ಹಾಕಲು ಸಮಾಜದ ಶ್ರೀಗಳ ನೇತೃತ್ವದಲ್ಲಿ ಡಿ.೧೦ರಂದು ನಡೆಯುವ ಹೋರಾಟಕ್ಕೆ ಸಿಂದಗಿ ತಾಲೂಕಿನಿಂದ ೧೦೦-೧೫೦ ಟ್ಯಾಕ್ಟರ್‌ಗಳು, ೨೦-೩೦ ವಾಹನಗಳನ್ನು ಸೇರಿದಂತೆ ಕಾರುಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಂದುಗಳು ಸೇರಲಿದ್ದಾರೆ. ಅದಕ್ಕೆ ಈ ಹೋರಾಟ ಮಾಡು ಇಲ್ಲವೇ ಮಡಿ ಎನ್ನುವ ಘೋಷಣೆ ಮಾಡಿ ಶ್ರೀಗಳು ಶಪಥ ಮಾಡಿದ್ದು, ಅದಕ್ಕೆ ಈ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಕ್ಕೆ ಬೆಂಬಲ ನೀಡೋಣ ಎಂದು ವಿನಂತಿಸಿದರು.ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ, ಮಾಜಿ ಲಿಂಬೆ…

Read More

ರೈತ ಮಿತ್ರ ಏಜೆನ್ಸಿ ಗ್ರುಪ್ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವ್ಯಾಪಾರ-ವಹಿವಾಟು, ಏಜೆನ್ಸಿಗಳು ಏನೇ ಇರಲಿ ಸಂಘಟನಾತ್ಮಕ ಕಾರ್ಯ ಮಾಡುವುದರಿಂದ ಯಶಸ್ಸು ಕಾಣಲು ಸಾಧ್ಯ. ಒಗಟ್ಟಿನಲ್ಲಿ ಬಲವಿದೆ ಎಂಬ ಮಾತಿನಂತೆ ಎಂತಹ ಸಮಸ್ಯೆ ಬಂದರೂ ಬಗೆಹರಿಸುವ ಸಾಮರ್ಥ್ಯ ಸಂಘಟನಾತ್ಮಕ ಚಟುವಟಿಕೆಗಳಲ್ಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಹೊರವಲಯದ ಚಿಕ್ಕ ಸಿಂದಗಿ ಬೈಪಾಸ್ ಹತ್ತಿರವಿರುವ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ರೈತ ಮಿತ್ರ ಏಜೆನ್ಸಿ ಗ್ರುಪ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರ ಅಭಾವದಿಂದಾಗಿ ಇಂದು ಎಲ್ಲ ಕಾರ್ಯಕ್ಕೂ ಯಂತ್ರಗಳನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ. ಕೃಷಿಗೆ ಪೂರಕವಾದ ಭಾವಿ ಕೃಷಿಹೊಂಡ, ಬದುವುಗಳನ್ನು ಹಾಕುವುದು, ಗಿಡಗಂಟಿಗಳನ್ನು ಸ್ವಚ್ಛಗೊಳಿಸುವುದು, ಭೂಮಿಯನ್ನು ಸಮತಟ್ಟುಗೊಳಿಸುವುದು ಈ ಮುಂತಾದ ಚಟುವಟಿಕೆಗಳಿಗೆ ಜೆಸಿಬಿಗಳು, ಹಿಟಾಚಿಗಳು ಲೇವಲಿಂಗ್ ಟ್ಯಾಕ್ಟರ್ಗಳು, ಟಿಪ್ಪರ್, ಡಂಪರ್ ಟ್ರಾಕ್ಟರುಗಳು ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ವಾಹನಗಳನ್ನು ಇಟ್ಟುಕೊಂಡು ಕೆಲಸ ಮಾಡುವ ಈ ರೈತ ಮಿತ್ರ ಏಜೆನ್ಸಿಯವರು ರೈತರಿಗೆ ಹೊರೆಯಾಗದಂತೆ, ಯಾವುದೇ ರೀತಿಯ ಮೋಸವಾಗದಂತೆ ಕೆಲಸಗಳನ್ನು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇತ್ತೀಚೆಗೆ ರಾಣೆಬೆನ್ನೂರಿನ ಕೆ.ಎಲ್.ಇ ಸಂಸ್ಥೆಯ ರಾಜರಾಜೇಶ್ವರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆಯೋಜಿಸಿದ್ದ ಖೋ-ಖೋ ತಂಡದ ಆಯ್ಕೆಯ ಪಂದ್ಯಾವಳಿಯಲ್ಲಿ ಸಿಂದಗಿ ನಗರದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಿದ್ದಮ್ಮ ಶಂಕರಗೌಡ ಬಿರಾದಾರ ಪಾಲ್ಗೊಂಡು ಉತ್ತಮ ಸಾಧನೆ ಮಾಡಿ ವಿಶ್ವವಿದ್ಯಾಲಯ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯ ಶಿವಮಾಂತ ಪೂಜಾರಿ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Read More

ಬಸವನಬಾಗೇವಾಡಿಯಲ್ಲಿ ಉದ್ಘಾಟನೆ | ೧೦೦೮ ಮಹಾತ್ಮ ಪೂಜ್ಯರ ಪಾದಪೂಜೆ | ಲಕ್ಷಾಂತರ ಜನರು ಭಾಗಿ | ಬ್ರಿಗೇಡ್ ಅಧ್ಯಕ್ಷ ಸೋಮೇಶ್ವರ ಸ್ವಾಮೀಜಿ ಘೋಷಣೆ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಹಿಂದು ಧರ್ಮದ ರಕ್ಷಣೆ, ಹಿಂದು ಸಮಾಜಕ್ಕೆ ತೊಂದರೆಯಾದರೆ ಅಲ್ಲಿ ಧ್ವನಿ ಎತ್ತುವದು, ಸಮಾಜದ ಹಿಂದುಳಿದ ದಲಿತ ಎಲ್ಲ ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಉದ್ಧೇಶಗಳನ್ನು ಮುಂದಿಟ್ಟುಕೊಂಡು ಉತ್ತರ ಕರ್ನಾಟಕದ ಎಲ್ಲ ಮಠಾಧೀಶರು ಸಮಾಲೋಚನೆ ಮಾಡಿದ ಕ್ರಾಂತಿವೀರ ಬ್ರಿಗೇಡ್ ಅಸ್ತಿತ್ವ ಬಂದಿದೆ. ಈ ಬ್ರಿಗೇಡ್ ಅನ್ನು ೨೦೨೫ ನೇ ಫೆಬ್ರುವರಿ ೪ ರಂದು ಕ್ರಾಂತಿಪುರುಷ ವಿಶ್ವಗುರು ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಉದ್ಘಾಟಿಸಲಾಗುವದು ಎಂದು ಕ್ರಾಂತಿವೀರ ಬ್ರಿಗೇಡ್ದ ಅಧ್ಯಕ್ಷ ಮಕಾನಪುರ ಗುರುಪೀಠದ ಸೋಮೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಯಲ್ಲಾಲಿಂಗ ಮಠದ ಕಲ್ಯಾಣ ಮಂಟಪದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೨ ನೇ ಶತಮಾನದಲ್ಲಿ ಬಸವೇಶ್ವರರು ಸಮಾನತೆಯನ್ನು ತರಲು ಕ್ರಾಂತಿ ಮಾಡಿದರು. ಈ ಭಾಗದ ಮಠಾಧೀಶರರು ಹಿಂದು ಸಮಾಜ-ಧರ್ಮದ ರಕ್ಷಣೆಗಾಗಿ ಕ್ರಾಂತಿಪುರುಷನ ನೆಲದಿಂದಲೇ ಕ್ರಾಂತಿವೀರ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕರಾಟೆ ಡೋ ಕೆನ್ರ‍್ಯುಕನ್ ಶೂಟೋಕಾನ್ ಸ್ಟೈಲ್ ಇಂಡಿಯಾ ಹಾಗೂ ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ಸಂಘ ವತಿಯಿಂದ ಕೊಡಮಾಡುವ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿಗೆ ಇಲ್ಲಿನ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿ ಭಾಜನರಾಗಿದ್ದಾರೆ.ಹಲವು ವರ್ಷಗಳಿಂದ ಇಲ್ಲಿನ ಮಕ್ಕಳಿಗೆ ಉಚಿತ ಕರಾಟೆ ಶಿಕ್ಷಣ ಸೇವೆ ನೀಡುವುದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಸೇರಿ ಇತರೆ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸಾಧನೆಯನ್ನ ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಡಿ.೮ ರಂದು ಕಾರವಾರದಲ್ಲಿ ಆಯೋಜಿಸಲಾದ ಪ್ರಥಮ ಕರಾಟೆ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಶಾರದಳ್ಳಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿಂದಗಿ ತಾಲೂಕು ಘಟಕದ ವತಿಯಿಂದ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಸನ್ಮಾನಿಸಿದರು.ಶನಿವಾರ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಲ್ಲಾ ನಿರ್ದೇಶಕರಿಗೆ ಮತ್ತು ಸಿಂದಗಿ ತಾಲುಕು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲಾ ನಿರ್ದೇಶಕರಿಗೆ ಸಿಂದಗಿ ತಾಲೂಕು ಶಿಕ್ಷಕರು ಹಾಗೂ ಎಲ್ಲಾ ಇಲಾಖೆಯ ನೌಕರರ ವತಿಯಿಂದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಿದರು.ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಸಿ ಶಡಶ್ಯಾಳ, ಸಯ್ಯದ ಜುಬೇರ್ ಎಸ್ ಕೆರೂರ, ಜಗದೀಶ ಸದಾಶಿವ ಬೋಳಸೂರ, ನಿಜು ಎಮ್ ಮೇಲಿನಕೇರಿ, ಶಂಕರಗೌಡ ಆರ್ ಪಾಟೀಲ್, ನೀಲಾ ಇಂಗಳೆ, ಜಯಶ್ರೀ ಬೆಣ್ಣಿ, ಬಿ ಟಿ ಗೌಡರ, ರವೀಂದ್ರ ಪ್ರಲ್ಹಾದ ಉಗಾರ, ಆಲಮೇಲ ನೌಕರರ ಸಂಘದ ಅಧ್ಯಕ್ಷ ರವಿ ಬಿರಾದಾರ, ಸಿಂದಗಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಗವಂತನಿತ್ತ ಸಂಪತ್ತು ಬಾಳಿನ ನಿಜವಾದ ಸಂಪತ್ತು. ಮನುಷ್ಯ ಜೀವನ ಸುಂದರ ಮತ್ತು ಶುದ್ಧಗೊಳಿಸುವುದೇ ಧರ್ಮದ ಗುರಿ. ಬದುಕಿನ ಹಿರಿಮೆ ಮತ್ತು ರಹಸ್ಯ ಬೋಧಿಸುವುದೇ ನಿಜವಾದ ಧರ್ಮವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.ಅವರು ಶನಿವಾರ ತಾಲೂಕಿನ ಕನ್ನೂರು ಗುರು ಮಠದ ಲಿಂ.ಮಲ್ಲಿಕಾರ್ಜುನ ಶಿವಾಚಾರ್ಯರ ೧೯ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಗುರು ಪರಂಪರೆಯ ಜಾತ್ರಾ ಮಹೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಸಮಸ್ತ ಜನರ ಭೋಗ ಮೋಕ್ಷಗಳಿಗೆ ಧರ್ಮವೇ ಮೂಲ. ಶ್ರಮದ ಕಾಯಕದಿಂದಲೇ ಮನುಷ್ಯನಿಗೆ ಚೈತನ್ಯ ಪ್ರಾಪ್ತಿಯಾಗುತ್ತದೆ. ಮಾನವ ಪರಿಪೂರ್ಣದೆಡೆಗೆ ಪಯಣಿಸುವುದೇ ನಿಜವಾದ ಸಾಧನೆ. ಅಹಿಂಸಾದಿ ಧ್ಯಾನ ಪರ್ಯಂತರ ದಶ ಧರ್ಮ ಸೂತ್ರಗಳ ಪರಿಪಾಲನೆಯಿಂದ ಮಾನವ ಜೀವನ ಸಾರ್ಥಕಗೊಳ್ಳುವುದೆಂದು ಸಾರಿದ ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆಗಳು ಸರ್ವಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ. ಹುಟ್ಟು ಎಷ್ಟು ಸಹಜವೋ ಹುಟ್ಟಿದ ಮನುಷ್ಯನಿಗೆ ಮೃತ್ಯು ಬಿಟ್ಟಿದ್ದಲ್ಲ. ಹುಟ್ಟು ಸಾವುಗಳ ಮಧ್ಯದ ಬದುಕನ್ನು ಮನುಷ್ಯ ಸಾರ್ಥಕಪಡಿಸಿಕೊಳ್ಳಬೇಕು. ಲಿಂ.ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು…

Read More

ಭಾರತದ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾದ ಸಾಧಕಿ ಕು.ಸಮೈರಾ ಹುಲ್ಲೂರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉದಯರಶ್ಮಿ ದಿನಪತ್ರಿಕೆ ಬಬಲೇಶ್ವರ: ಭಾರತದ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾಗಿರುವ ವಿಜಯಪುರದ ಸಾಧಕಿ ಕುಮಾರಿ ಸಮೈರಾ ಹುಲ್ಲೂರವರ ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಸರಕಾರದ ಪರವಾಗಿ ಸಾಧಕಿ ಸಮೈರಾ ಹುಲ್ಲೂರ ಅವರನ್ನು ಸನ್ಮಾನಿಸಿ, “ವಿಜಯಪುರ ಸಾಧಕರ ತವರೂರು ಬಸವ ನಾಡಿನ ಈ ನೆಲದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊರತೆ ಇಲ್ಲ, ಈಗ ಅಂಥ ಸಾಧಕರ ಪಟ್ಟಿಗೆ ಸೇರುವುದರ ಮೂಲಕ ಅತೀ ಕಿರಿಯ ವಯಸ್ಸಿನ ಪೈಲೆಟ್ ಆಗಿ ಆಯ್ಕೆಯಾಗಿರುವ ಕುಮಾರಿ ಸಮೈರಾ ಹುಲ್ಲೂರ್ ಸಾಧನೆ ವಿದ್ಯಾರ್ಥಿನಿಯರಿಗೆ ಮಾದರಿಯಾದದ್ದು, ಸಾಧಿಸಬೇಕೆಂಬ ದೃಢಸಂಕಲ್ಪ ಇರುವವರು ಯಾವ ಎತ್ತರಕ್ಕೆ ಬೇಕಾದರೂ ಹಾರಬಲ್ಲರು, ಏರಬಲ್ಲರು ಎನ್ನುವುದನ್ನು ಸಮೈರಾ ತೋರಿಸಿಕೊಟ್ಟಿದ್ದಾಳೆ. ಅವಳನ್ನು ನಾಡಿನ ಜನತೆ ಪರವಾಗಿ ಅಭಿನಂದಿಸಿ, ಸನ್ಮಾನಿಸಲು ಕರ್ನಾಟಕ ಬಾಲ ವಿಕಾಸ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿಯ ವಿವಿಧ ಸ್ಥಾನಗಳಿಗಾಗಿ ಡಿ. 8 ರವಿವಾರದಂದು ಜರುಗಲಿರುವ ಚುನಾವಣೆ ಕಣ ರಂಗೇರಿದೆ.ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿಯ ಸಾಲಗಾರ ಸಾಮಾನ್ಯ, ಸಾಲಗಾರ ಹಿಂದುಳಿದ ಅ ವರ್ಗ/ಸಾಲಗಾರ ಮಹಿಳಾ ಹಾಗೂ ಸಾಲಗಾರರಲ್ಲದ (ಬಿನ್ ಸಾಲಗಾರ) ಸೇರಿದಂತೆ ಒಟ್ಟು 12 ಸ್ಥಾನಗಳಲ್ಲಿ ಸಾಲಗಾರ ಹಿಂದುಳಿದ ವರ್ಗ ಬ ದಿಂದ ನಿಂಗಪ್ಪ ದುಂಡಪ್ಪ ಕುಳಗೇರಿ, ಸಾಲಗಾರ ಪರಿಶಿಷ್ಟ ಜಾತಿಯಿಂದ ಸುರೇಶ ಹಣಮಂತ ನಾಯಕ, ಸಾಲಗಾರ ಮಹಿಳಾ ಮೀಸಲು ಸ್ಥಾನದಿಂದ ಜಯಶ್ರೀ ಜಗನಾಥ ಪಾಟೀಲ, ಮಾದೇವಿ ಪರಮಾನಂದ ಮೈಲೇಶ್ವರ ಸೇರಿದಂತೆ ಒಟ್ಟು ನಾಲ್ಕು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸಿಲ್ಲ ಎನ್ನಲಾಗಿದೆ.ಇನ್ನೂ ಉಳಿದ ಸಾಮಾನ್ಯ 5 ಸದಸ್ಯರ ಸ್ಥಾನಕ್ಕೆ ಮಲ್ಲೇಶಿ ಬಸಪ್ಪ ಕಡಕೋಳ, ಮುತ್ತಪ್ಪ ಸಿದ್ರಾಮಪ್ಪ ಉಕ್ಕಲಿ, ಮುರಗೇಶ ಮಲ್ಲಪ್ಪ ಸಜ್ಜನ, ವೀರಣ್ಣ ಚಂದ್ರಾಮಪ್ಪ ಪಟ್ಟಣಶೆಟ್ಟಿ, ಸಂಗನಗೌಡ ಕಲ್ಲನಗೌಡ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವೈವಿಧ್ಯತೆಯಿಂದ ಕೂಡಿದ ನಮ್ಮ ರಾಷ್ಟ್ರಕ್ಕೆ ಯೋಗ್ಯ, ಸಮರ್ಥ ಸಂವಿಧಾನ ನೀಡಿದ ಮಹಾಮಾನವತಾವಾದಿ,ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಓದಿನಲ್ಲಿ ತೊಡಗಿಸಿಕೊಂಡಿದ್ದರು. ಈ ಮೂಲಕ ಅವರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಅಜೀಂ ಪ್ರೇಮ್ಜಿ ಫೌಂಡೇಶನ್ ಕಾರ್ಯಕರ್ತ ನಿಂಗರಾಜ ಆಚಾರ್ಯ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೮ ನೇ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಷ್ಟಗಳ ಕುಲುಮೆಯಲ್ಲಿ ಬೆಂದು ಬೆಳೆದುಬಂದ ಮಹಾನ್ ನಾಯಕರು. ಆಸಕ್ತಿ ಹಾಗೂ ಒಳ್ಳೆಯ ಗುರಿಯೊಂದಿಗೆ ಇವರ ಹಾಗೇ ಅವಮಾನವನ್ನು ಸಹಿಸಿಕೊಂಡು ಮುನ್ನಡೆದರೆ ಸಾಧನೆಯೆಂಬುವದು ಸುಲಭವಾಗುತ್ತದೆ. ಇಂದು ಅಂಬೇಡ್ಕರ್ ಅವರ ವಿಚಾರಗಳು ನಮಗೆಲ್ಲಾ ಆದರ್ಶವಾಗಬೇಕೆಂದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ , ಐಕ್ಯೂಎಸಿ ಸಂಯೋಜಕ ದಿಲೀಪಕುಮಾರ ಇತರರು ಇದ್ದರು. ಡಾ.ಬಿ.ಎಂ.ಸಾಲವಾಡಗಿ ಸ್ವಾಗತಿಸಿ,ನಿರೂಪಿಸಿದರು.

Read More