Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಇಂಡಿ: ವ್ಯವಸಾಯ ಮಾಡುವ ರೈತರಿಗೆ ಹೆಚ್ಚಿನ ಆದಾಯ ಬೇಕು ಎಂದರೆ ಕುರಿ ಮೇಕೆ ಸಾಕಾಣಿಕೆ ಒಳ್ಳೆಯ ಆಯ್ಕೆ. ರೈತರು ಮಾತ್ರವಲ್ಲ ಸಾಮಾನ್ಯ ಜನರು ಕೂಡ ಕುರಿ ಸಾಗಾಣಿಕೆ ಮಾಡಬಹುದು. ಇದರಿಂದ ಲಾಭ ಕೂಡ ಚೆನ್ನಾಗಿ ಬರುತ್ತದೆ. ಆದರೆ ಯಾವ ತಳಿಯ ಕುರಿ ಆಯ್ಕೆ ಮಾಡಬೇಕು ಎಂಬುದು ಬಹಳ ಮುಖ್ಯ ಎಂದು ನಬಾರ್ಡ ಪ್ರಬಂದಕ ವಿಕಾಸ ರಾಠೋಡ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೇವರ ನಿಂಬರಗಿ ಗ್ರಾಮದ ೩೦ ಮಹಿಳೆಯರಿಗೆ ಮಹಿಳಾ ಗುಂಪುಗಳಿಗೆ ಕುರಿ ಸಾಗಾಣಿಕೆ ಕುರಿತು ಸಾಲ ಸೌಲಭ್ಯ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕುರಿ ಗಳಿಗೆ ಔಷದೋಪಚಾರ, ಆಹಾರ, ಬೆಳವಣೆಗೆ ಮತ್ತು ಮಾರುಕಟ್ಟೆ ಕುರಿತು ಮಾತನಾಡಿದರು.ನಬಾರ್ಡದ ಕಾರ್ಯದರ್ಶಿ ಸಿ.ಆರ್.ಡಿ ಎಸ್ ಜಿ.ಎಂ ಬಿರಾದಾರ ಮಾತನಾಡಿ, ಕುರಿ ಸಾಗಾಣಿಕೆಯಲ್ಲಿ ಉಸ್ಮಾನಾಬಾದಿ ತಳಿ ಆಯ್ಕೆ ಮಾಡಿದರೆ ಅಥವಾ ಉತ್ತಮ ತಳಿ ಆಯ್ಕೆ ಮಾಡಿದರೆ ಇವುಗಳ ಮೌಂಸಕ್ಕೆ ಹೆಚ್ಚು ಬೇಡಿಕೆ ಇದೆ ಎಂದರು.ವಿಜ್ಞಾನಿಗಳಾದ ಪ್ರಸಾದ, ಡಾ. ಪ್ರಕಾಶ, ಡಾ. ವೀಣಾ ಚಂದಾವರಿ, ಮಾಜೀದ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಜನನಿ, ಜನ್ಮಭೂಮಿ ಸ್ವರ್ಗಕ್ಕಿಂತಲೂ ಶ್ರೇಷ್ಠ ಎಂಬ ಮಾತಿನಲ್ಲಿ ಸತ್ಯವಿದೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಭಗವತ್ಪಾದರು ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ಧರ್ಮಸಭೆಯ ಸಾನಿಧ್ಯ ವಹಿಸಿ ಮಾತನಾಡಿದರು.ನಮ್ಮ ಆಚಾರ, ವಿಚಾರ, ಸಂಸ್ಕಾರ, ಸಂಸ್ಕೃತಿಗೆ ಮೂಲ ಕಾರಣವೇ ನಮ್ಮ ಜನ್ಮಭೂಮಿ. ಭಾರತೀಯ ಪರಂಪರೆಯಲ್ಲಿ ಪಂಚ ಪೀಠಗಳು ಹಾಗೂ ಶಂಕರಾಚಾರ್ಯರಿಂದ ಸ್ಥಾಪಿತವಾದ ನಾಲ್ಕು ಮಠಗಳಿಗೆ ವಿಶೇಷ ಸ್ಥಾನಮಾನಗಳಿವೆ ಎಂದು ಧರ್ಮ, ಪೀಠ, ಮಠಗಳ ಕುರಿತು ವ್ಯಾಖ್ಯಾನಿಸಿ, ಜೀವನದಲ್ಲಿ ಮಾತನಾಡುವುದಕ್ಕಿಂತ ಕಾರ್ಯ ಮಾಡುವುದೇ ಮುಖ್ಯ ಎಂದರು.ಹಂಪಿಸಾವಿರದೇವರಮಠದ ವಾಮದೇವಶ್ರೀಗಳು ಮಾತನಾಡಿ, ಪುಣ್ಯ ಅಧ್ಯಯನದಿಂದ ಬರಲಾರದು, ಇದು ಮಹಾತ್ಮರ ದರ್ಶನದಿಂದ ಬರಬಲ್ಲದು. ಪಂಚ ತತ್ವಗಳ ಆಧಾರದ ಮೇಲೆ ಹುಟ್ಟಿದ ಪೀಠಗಳು ಮಾನವ ಕಲ್ಯಾಣ ಬಯಸುತ್ತವೆ. ಆಧ್ಯಾತ್ಮೀಕ ವಿಚಾರಗಳನ್ನು ಅರಿತು ನಾವು ಅಂತರಂಗದಿಂದ ಬದಲಾಗಬೇಕು ಎಂದರು.ಆಲಮೇಲ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರಶ್ರೀ ಹಾಗೂ ಸ್ಥಳೀಯ ಜಡಿಮಠದ ಜಡಿಸಿದ್ಧೇಶ್ವರಶ್ರೀ ಮಾತನಾಡಿದರು.ಧರ್ಮಸಭೆಗೆ ಆರಂಭಕ್ಕೂ ಮುನ್ನ ಕೇದಾರ ಜಗದ್ಗರುಗಳನ್ನು ಮೆರವಣಿಗೆ ಕುಂಭ ಕಳಶ ಹೊತ್ತ ಮುತೈದೆಯರೊಂದಿಗೆ ಪಂಚಾಚಾರ್ಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ವಂದಾಲ ಗ್ರಾಮದ ಮಡಿವಾಳಪ್ಪ ಹಂದಿಗನೂರ ಕುಟುಂಬಕ್ಕೆ ಸೇರಿದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದು ಸುಮಾರು ೨ ಎಕರೆ ಕಬ್ಬು ಸುಟ್ಟು ಭಸ್ಮವಾದ ಘಟನೆ ಬುಧವಾರ ಜರುಗಿದೆ.ಗ್ರಾಮದ ಸರ್ವೇ ನಂ.೬೭/೨ಬಿ ರಲ್ಲಿ ೩ ಎಕರೆಯಲ್ಲಿ ಬೆಳೆಯಲಾದ ಕಬ್ಬು ಬೆಳೆಯಲ್ಲಿ ೨ ಎಕರೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಹಾನಿಗೀಡಾಗಿದೆ. ಕಬ್ಬು ಬೆಳೆಗೆ ಬೆಂಕಿ ತಗುಲಿದ ಸುದ್ದಿ ತಿಳಿದು ಸುತ್ತಮುತ್ತಲಿನ ಜಮೀನುಗಳ ರೈತರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಪ್ರಯತ್ನ ಫಲಿಸದೇ ಇದ್ದು ಕೊನೆಗೆ ತಾಳಿಕೋಟೆ ಪಟ್ಟಣದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಉಳಿದ ಕಬ್ಬನ್ನು ಉಳಿಸಿದರು. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಬ್ಬು ಕಟಾವಿಗೆ ಬಂದು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ಹೀಗಾಗಿ ವರ್ಷದ ರೈತರ ಆದಾಯಕ್ಕೆ ಕೊಳ್ಳಿ ಇಟ್ಟಂತಾಗಿದೆ. ತಾಲ್ಲೂಕಿನಾದ್ಯಂತ ಕಳೆದ ಮೂರು ವರ್ಷದಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ ಸುಟ್ಟು ಹೋಗುತ್ತಿದೆ. ಇದರಿಂದ ರೈತರು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ,ಮುದ್ದೇಬಿಹಾಳ ತಹಶೀಲ್ದಾರ, ಪರಿಸರ ಅಧಿಕಾರಿ ವಿವೇಕ ಅವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.೧೮ ಹಾಗೂ ೧೯ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ ೧೦ ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ ಗೌರವ ಉಪಸ್ಥಿತರಿರಲಿದ್ದು, ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ವಹಿಸಲಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಸಕ್ತ ಸಾಲಿನ ತೋಟಗಾರಿಕೆ ಮೇಳವನ್ನು ಡಿ. ೨೧ರಿಂದ ೨೩ರವರೆಗೆ ಆಯೋಜಿಸಲಾಗಿದೆ. ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳ ನಡೆಯಲಿದ್ದು, ಜಿಲ್ಲೆಯ ರೈತರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: ೧೮೦೦-೪೨೫-೭೯೧೦ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರದ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಕೇರಿಯಲ್ಲಿ ಜಗದ್ಗುರುಗಳ ಸಾರೋಟ ಮೆರವಣಿಗೆ | ರಕ್ತದಾನ ಶಿಬಿರ | ಉಚಿತ ಆರೋಗ್ಯ ತಪಾಸಣಾ ಶಿಬಿರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮಹಾ ಸಂಸ್ಥಾನಮಠ ಜಾಲಹಳ್ಳಿ-ಕಲಕೇರಿಯ ಪೀಠಾಧಿಪತಿಗಳಾದ ಶಿವಾಚಾರ್ಯ ರತ್ನ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರ ೭೦ನೇ ವರ್ಷದ ಹುಟ್ಟುಹಬ್ಬದ ವರ್ಧಂತಿ ಮಹೋತ್ಸವ ಹಾಗೂ ಅಭಿನಂದನಾ ಸಮಾರಂಭ ಸೇರಿದಂತೆ ವಿವಿದ ಧಾರ್ಮಿಕ ಕಾರ್ಯಕ್ರಮಗಳಿಗೆ ಜೆ ಜೆ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಓಂಕಾರ ದ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.ಪಂಚರಂಗ ಸಂಸ್ಥಾನ ಗದ್ದುಗೆ ಮಠದ ಶ್ರೀಗುರುಮಡಿವಾಳೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು.ನಂತರ ಜಿಲ್ಲಾ ಏಡ್ಸ್ ಹಾಗೂ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ಅಧ್ಯಕ್ಷತೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸುಮಾರು ೭೧ ಜನ ಸ್ವಯಂಪ್ರೇರಿತರಾಗಿ ಪೂಜ್ಯರ ೭೦ನೇ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಮಾಡಿದರು.ವಿಜಯಪುರದ ಶ್ರೀಗೌರಿ ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ಮತ್ತು ಸುಚಿರಾಯು ಆಸ್ಪತ್ರೆಯ ಡಾ. ಶಂಕರರಾವ್ ದೇಶಮುಖ, ಡಾ.ರಾಜೇಶ್ವರಿ ದೇಸಾಯಿ ಮತ್ತು ಡಾ.ಸಂತೋಷಕುಮಾರ ಗಲಗಲಿ ಇವರಿಂದ ಉಚಿತ…
ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪ ಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಆಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು. ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದಿನಾಂಕ: ೨೪-೧೨-೨೦೨೫ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್…
೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಅಧಿಕಾರಿಗಳಿಗೆ ಡಿಸಿ ಡಾ. ಕೆ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಡಿ ಡಿ.೨೧ ರಿಂದ ೨೪ರವರೆಗೆ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸಕ್ತ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಅತ್ಯಂತ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿಯೋಜನಗೊಂಡ ವೈದ್ಯರು,ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.ತಮ್ಮ ವ್ಯಾಪ್ತಿಯಲ್ಲಿನ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಕುರಿತು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ದಿನದ ೨೪ ಗಂಟೆಯೂ ಲಸಿಕಾ ಕೇಂದ್ರಗಳನ್ನು ತೆರೆಯುವಂತೆ…
ವಿಧಾನಸಭೆಯಲ್ಲಿ ‘ಗೃಹ ಲಕ್ಷ್ಮಿ’ ಕೋಲಾಹಲ :ಬಿಜೆಪಿ ಸಭಾತ್ಯಾಗ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಷಾದ ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರಿ ಮಾತಿನ ಸಮರವೇ ನಡೆದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಭಾತ್ಯಾಗ ನಡೆಸಿದ ಪ್ರಸಂಗ ಬುಧವಾರ ನಡೆಯಿತು.ರಾಜ್ಯ ಸರ್ಕಾರದ ಮಹಿಳಾ ಸಹಾಯ ಯೋಜನೆಯಡಿ 1.26 ಕೋಟಿ ಫಲಾನುಭವಿಗಳಿಗೆ ಎರಡು ತಿಂಗಳ ಕಂತುಗಳನ್ನು “ವಿತರಿಸದಿರುವ” ಆರೋಪವನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಬುಧವಾರ ಕರ್ನಾಟಕ ವಿಧಾನಸಭೆಯಿಂದ ಸಭಾತ್ಯಾಗ ಮಾಡಿತು.ಪ್ರಮುಖವಾಗಿ ಗೃಹ ಲಕ್ಷ್ಮಿ ಯೋಜನೆಯ ಪಾವತಿ ಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರವು ಸದನಕ್ಕೆ “ತಪ್ಪು” ಮಾಹಿತಿಯನ್ನು ಒದಗಿಸುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿದ ನಂತರ ಪ್ರತಿಭಟನೆ ನಡೆಯಿತು. ಬಿಜೆಪಿ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗಿದರು, ಇದು ಸದನದ ಕಲಾಪವನ್ನು ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲು ಕಾರಣವಾಯಿತು. ಸದನಕ್ಕೆ…
