Author: editor.udayarashmi@gmail.com

ವಿಜಯಪುರದಲ್ಲಿ ಬಸವ ಜಯಂತಿ ಉತ್ಸವ ಸಮಿತಿ ಪ್ರಮುಖರಿಂದ ಸುದ್ದಿಗೋಷ್ಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಇದೇ ೧೯ ರಿಂದ ಎರಡು ದಿನಗಳ ಕಾಲ ಜಿಲ್ಲಾಡಳಿತ ಹಾಗೂ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಬಸವ ಜಯಂತಿ ಉತ್ಸವ-೨೦೨೬ ಅರ್ಥಪೂರ್ಣ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಪ್ರಮುಖ ವಿ.ಸಿ. ನಾಗಠಾಣ ತಿಳಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ದಿ.೧೯ ರಂದು ಬೆಳಿಗ್ಗೆ ಮಕ್ಕಳಿಂದ ವಚನ ಕಂಠಪಾಠ, ಬಸವಾದಿ ಶರಣರ ಕುರಿತಾದ ಮಕ್ಕಳ ಕವನಗೋಷ್ಠಿ ನಡೆಯಲಿದೆ, ನಂತರ ಯುವ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಸಂಜೆ ೬ ರಿಂದ ೯.೩೦ ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಗವಂತನ ಮರಣ ಎಂಬ ಸಾಮಾಜಿಕ ಸಂದೇಶವುಳ್ಳ ನಾಟಕ ಪ್ರದರ್ಶನ ನಡೆಯಲಿದೆ. ಚಿಕ್ಕಮಕ್ಕಳಾದಿಯಾಗಿ ಪ್ರತಿಯೊಬ್ಬರನ್ನು ಒಳಗೊಂಡು ಅದರಲ್ಲೂ ಮಕ್ಕಳಲ್ಲಿ ಬಾಲ್ಯದಲ್ಲಿಯೇ ಬಸವ ಪ್ರಜ್ಞೆ ಮೂಡಿಸುವುದಕ್ಕಾಗಿ ಹೆಚ್ಚಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.ದಿ.೨೦…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದುಷ್ಕರ್ಮಿಗಳ ಗುಂಡಿನ ದಾಳಿಗೆ ಗ್ರಾಪಂ ಸದಸ್ಯ ಭೀಕರವಾಗಿ ಸಾವಿಗೀಡಾದ ಘಟನೆ ಗುಮ್ಮಟ ನಗರದ ಹೊರ ವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.ಅಲಿಯಾಬಾದ ಗ್ರಾಪಂ ಸದಸ್ಯ, ಪಾಂಗರುನ ದೊಡ್ಡಿ ನಿವಾಸಿ ರಾಜು ಕರೆ (48) ಮೃತಪಟ್ಟ ವ್ಯಕ್ತಿ.ರಾಜು ಕರೆ ತಮ್ಮ ಥಾರ್ ವಾಹನದಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಟಿಪ್ಪರ್ ಮೂಲಕ ಡಿಕ್ಕಿ ಹೊಡೆಸಿದ್ದು, ಬಳಿಕ ಜೀಪಿನ ಮೇಲೆ ಮನಬಂದಂತೆ 6 ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಜೀಪ್ ಡೋರ್ ಓಪನ್ ಆಗದಕ್ಕೆ ನಂತರ ಜೀಪಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ದುಷ್ಕರ್ಮಿಗಳ ಭೀಕರ ದಾಳಿಯಿಂದ ರಾಜು ಕರೆ ಥಾರ್ ಜೀಪಿನಲ್ಲಿಯೇ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಈ ಹತ್ಯೆಗೆ ಹಳೇ ವೈಷಮ್ಯವೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.ಘಟನೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ವಿಜಯಪುರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ,ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸಿ, ಸಮಾಜದಲ್ಲಿ ಜಾಗೃತಿ ಮೂಡಿಸಿದರು ಎಂದರು.ಅಂಬೇಡ್ಕರ್ ರಚಿಸಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುತ್ತದೆ. ಪತ್ರಕರ್ತರಾಗಿ ನಾವು ಈ ಮೌಲ್ಯಗಳನ್ನು ಕಾಪಾಡುವುದು ನಮ್ಮ ಪ್ರಮುಖ ಜವಾಬ್ದಾರಿ,” ಎಂದು ಹೇಳಿದರು.ಜಿಲ್ಲಾ ಪ್ರದಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತ್ಯತ್ಸವ ಆಚರಿಸಿದರೆ ಸಾಲದು. ಅವರ…

Read More

ಮುದ್ದೇಬಿಹಾಳ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸ್ವಚ್ಛ ಭಾರತ ಕನಸನ್ನು ಸಾಕಾರಗೊಳಿಸಲು ಪಕ್ಷಬೇಧ ಮರೆತು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮನವಿ ಮಾಡಿದರು.ಪಕ್ಷ ಮತ್ತು ವಿವಿಧ ದಲಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಟ್ಟಣದ ಅಂಬೇಡ್ಕರ್ ವೃತ್ತದ ಸ್ವಚ್ಛತಾ ಕಾರ್ಯಕ್ರಮದ ಬಳಿಕ ಅವರು ಮಾತನಾಡಿದರು.ದೇಶದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗಾಗಿ ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೊದೀಜಿ ಅವರು ನೀಡಿದ ಕರೆಗೆ ಸ್ಪಂದಿಸಿ, ಪಟ್ಟಣದ ಅಂಬೇಡ್ಕರ್ ವೃತ್ತಗಳನ್ನು ಸ್ವಚ್ಛಗೊಳಿಸುವ ಕಾರ್ಯ ಉತ್ಸಾಹದಿಂದ ಮಾಡಿದ್ದೇವೆ. ಈ ಕಾರ್ಯದಿಂದ ಅಂಬೇಡ್ಕರ್ ವೃತ್ತ ಹೊಸ ಮೆರುಗು ಪಡೆದುಕೊಂಡಿದ್ದೂ ಅಲ್ಲದೇ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದರು.ಡಿಎಸ್‌ಎಸ್ ಮುಖಂಡ ಹರೀಶ ನಾಟೆಕಾರ್ ಮಾತನಾಡಿ ಇದು ಕೇವಲ ಸ್ವಚ್ಛತಾ ಕಾರ್ಯವಲ್ಲ, ನಮ್ಮ ಸಮಾಜದ ಜವಾಬ್ದಾರಿ. ಇಂತಹ ಅಭಿಯಾನಗಳಿಂದ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಹೆಚ್ಚುತ್ತದೆ. ಮುಂದೆಯೂ ಇಂತಹ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತೇವೆ ಎಂದರು.ಈ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಬಂದಾಳ ಗ್ರಾಮ ಎಂಬಲ್ಲಿ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.೧೨ರಂದು ರಾತ್ರಿ ವೇಳೆ ನಡೆದಿದೆ.ಮೃತರನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ಜಯಶ್ರೀ ಭಗವಂತರಾಯ ಮಾಗಣಗೇರಿ (೨೧) ಎಂದು ಗುರುತಿಸಲಾಗಿದೆ. ಏ.೧೨ರಂದು ಮನೆಯಲ್ಲಿದ್ದು ಸಂಜೆ ವೇಳೆ ಮನೆಯಲ್ಲಿ ಕಾಣದೇ ನಾಪತ್ತೆಯಾಗಿದ್ದರು. ಹುಡುಕಾಡಿದಾದ ರಾತ್ರಿ ವೇಳೆ ಬಂದಾಳ ಸರಕಾರಿ ಶಾಲೆಯ ಸಮೀಪದ ಬಾವಿಯಲ್ಲಿ ಏ.೧೩ರಂದು ಬೆಳಿಗ್ಗೆ ಆಕೆಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ. ಮೃತ ದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬರಬೇಕಿದೆ.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ರಸ್ತೆ ಬದಿಗೆ ಉರುಳಿದ ಸಾರಿಗೆ ಬಸ್, ೧೬ ಜನ ಪ್ರಯಾಣಿಕರಿಗೆ ಗಾಯ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ಬದಿಗೆ ಉರುಳಿದ ಪರಿಣಾಮ ೧೬ ಜನ ಪ್ರಯಾಣಿಕರು ಗಾಯಗೊಂಡ ಘಟನೆ ಪಟ್ಟಣದ ಮುಳವಾಡ ಕಾಲುವೆ ಬಳಿಯ ತಿರುವಿನಲ್ಲಿ ಸಂಭವಿಸಿದೆ.ಪಟ್ಟಣದ ಬಸವನ ಬಾಗೇವಾಡಿ ರಸ್ತೆಯಲ್ಲಿನ ಮುಳವಾಡ ಏತ ನೀರಾವರಿ ಕಾಲುವೆಯ ಬಳಿ ತಿರುವಿನಲ್ಲಿ ಸೋಮವಾರ ಬಸವನಬಾಗೇವಾಡಿಯಿಂದ ದೇವರಹಿಪ್ಪರಗಿಗೆ ಬರುತ್ತಿದ್ದ ಬಸವನ ಬಾಗೇವಾಡಿ ಘಟಕಕ್ಕೆ ಸೇರಿದ ಸಾರಿಗೆ ಬಸ್(ಕೆ.ಎ.೨೮ ಎಫ್ ೧೯೫೮) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಪರಿಣಾಮ ೧೬ ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚು ಗಾಯಗೊಂಡ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ಹಾಗೂ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಗಿದೆ.ಅಪಘಾತದ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್‌ರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೫-೨೬ನೇಯ ಸಾಲಿನಲ್ಲಿ ಸಿಇಟಿ/ನಿಟ್ ತರಬೇತಿಗಾಗಿ ಬೆಂಗಳೂರಿನ ಎಕ್ಷೆಲ್ ಅಕಾಡೆಮಿಯ ಸಹಯೋಗದೊಂದಿಗೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವರ್ಷಪೂರ್ತಿ ತರಬೇತಿಯನ್ನು ನೀಡಲಾಗಿದೆ. ಪ್ರಸ್ತುತ ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಹೇಳಿದರು.ಸಿಂದಗಿ ಪಟ್ಟಣದ ಆರ್.ಡಿ.ಪಾಟೀಲ ಕಾಲೇಜಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲೂ ಉತ್ತಮ ಸಾಧನೆ ಮಾಡಿದ್ದಾರೆ. ಗಣೇಶ ಬಿರಾದಾರ ಎಂಬ ವಿದ್ಯಾರ್ಥಿ ೬೦೦ ಅಂಕಗಳಿಗೆ ೫೮೮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆಗೆ ೭ನೆಯ ಸ್ಥಾನ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಕಾಲೇಜಿನ ಒಟ್ಟು ಫಲಿತಾಂಶ ಶೇ.೯೪.೨೪ರಷ್ಟಾಗಿದೆ. ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕವಾಗಿ ಅಷ್ಟೇ ಅಲ್ಲದೇ ರೇಂಜರ್ ವಿವಿಧ ಕ್ರೀಡೆಗಳಲ್ಲಿಯೂ ಭಾಗವಹಿಸುವ ಮೂಲಕ ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಸಾಧನೆ ಮಾಡಿದ್ದಾರೆ. ಬೆಲ್ಟ್ಕುಸ್ತಿಯಲ್ಲಿ ಗಣೇಶ ಎಂಬ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ೩ನೆಯ ಸ್ಥಾನ ಪಡೆದುಕೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ ಎಂದರು.ಈ ವೇಳೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಏಪ್ರೀಲ್ ೧೪ರ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.ಅಂದು ಬೆಳಿಗ್ಗೆ ೮.೦೦ ಗಂಟೆಗೆ ಮಾಹಾನುಭಾವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಮಹಾನುಭಾವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಬುದ್ಧವಿಹಾರ ಜಲನಗರದಿಂದ ಪ್ರಾರಂಭಿಸಿ, ಜಿಲ್ಲಾ ನ್ಯಾಯಾಲಯದ ಮಾರ್ಗವಾಗಿ, ಕಂದಗಲ್ ಶ್ರೀ ಹನುಮಂತರಾಯರ ರಂಗಮಂದಿರದ ವರೆಗೆ ನಡೆಸಲಾಗುವುದು.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಕಾರ್ಯಕ್ರಮಕ್ಕೆ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಕ್ಷಯ ತೃತೀಯ ಪ್ರಯುಕ್ತ ಏ.೨೦ ರಂದು ಜಿಲ್ಲೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಬಾಲ್ಯ ವಿವಾಹ ಜರುಗಿಸಿದಲ್ಲಿ, ಅದು ಬಾಲ್ಯವಿವಾಹ ನಿಷೇಧ ಕಾಯ್ದೆ-೨೦೦೬ರನ್ವಯ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಜಿಲ್ಲೆಯ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಯಾವುದೇ ವ್ಯಕ್ತಿ ಕಾನೂನು ಪ್ರಕಾರ ಸಮಾನವಾಗಿ ಹೊಣೆಗಾರರಾಗುತ್ತಾರೆ.ವಿವಾಹ ಸಮಾರಂಭವನ್ನು ನಡೆಸುವ ಪುರೋಹಿತರು, ಅದನ್ನು ಏರ್ಪಡಿಸುವ ಸಂಬಂಧಿಕರು, ಸುಗಮಗೊಳಿಸುವ ಆಯೋಜಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ಈ ಸಂಬಂಧ ಕ್ರಿಮಿನಲ್ ಪಿಟಿಷನ್ ಸಂಖ್ಯೆ ೧೬೦೫/೨೦೨೬ರಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು ಸ್ಪಷ್ಟ ಆದೇಶ ಹೊರಡಿಸಿದೆ.ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಲ್ಯ ವಿವಾಹ…

Read More