Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಪವಾಡ ಪುರುಷ ಕೋಳಕೂರ ಸಿದ್ಧಬಸವೇಶ್ವರ ೫೯೭ನೇ ಜಯಂತೋತ್ಸವ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷ ಸಿದ್ಧಬಸವೇಶ್ವರ ಜಯಂತೋತ್ಸವ ಹಮ್ಮಿಕೊಂಡು ಬಡಾವಣೆಯ ಜನತೆಗೆ ಜ್ಞಾನ ದಾಸೋಹದೊಂದಿಗೆ ಅನ್ನದಾಸೋಹಗೈಯುತ್ತಿರುವ ಸಿ.ಎಂ.ಮಾಲಿಪಾಟೀಲರ ಭಕ್ತಿಸೇವೆ ಶ್ಲಾಘನೀಯ ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ರಾಜಕುಮಾರ ಬಡಾವಣೆಯಲ್ಲಿ ಉದ್ಯಮಿ ಸಿ.ಎಂ.ಮಾಲಿಪಾಟೀಲರು ಏರ್ಪಡಿಸಿದ ಪವಾಡ ಪುರುಷ ಕೋಳಕೂರ ಸಿದ್ಧಬಸವೇಶ್ವರ ೫೯೭ನೇ ಜಯಂತೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮನೆಯಲ್ಲಿ ಪಾಲಕರು ಸದಾಚಾರ ರೂಡಿಸಿಕೊಳ್ಳಬೇಕು. ಏಕೆಂದರೆ ಮಕ್ಕಳು ಪಾಲಕರನ್ನೇ ಅನುಸರಿಸುವುದರಿಂದ ನಮ್ಮ ನಡೆ-ನುಡಿ ಶುದ್ಧವಾಗಿರಬೇಕು. ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ನೀಡಬೇಕು. ನಮ್ಮ ದೇಶದ ಸಂಸ್ಕೃತಿ ಶ್ರೇಷ್ಠವಾಗಿದೆ. ಅದನ್ನು ಉಳಿಸಿಕೊಂಡು ಬೆಳೆಸುವ ಹೊಣೆ ನಮ್ಮೆಲ್ಲರದು ಎಂದು ಶ್ರೀಗಳು ನುಡಿದರು.ಹೊನವಾಡ ದ ಬಾಬುರಾವ ಮಹಾರಾಜರು ಪವಾಡ ಪುರುಷ ಕೋಳಕೂರ ಸಿದ್ಧಬಸವೇಶ್ವರರ ಕುರಿತು ವಿವರಿಸಿದರು.ಮಾಜಿ ಶಾಸಕ ರಾಜು ಆಲಗೂರ, ಎಸ್.ಜಿ.ಲಕ್ಕುಂಡಿಮಠ, ಹರೀಶಗೌಡ ಪಾಟೀಲ, ಜಿ.ಬಿ.ಜಿದ್ದಿಮನಿ, ನಾಡಗೌಡ, ಹೊಸಮನಿ, ಗುರುಬಸಯ್ಯ ಹಿರೇಮಠ ವೇದಿಕೆ ಮೇಲಿದ್ದರು.ಅಂಬಾದಾಸ ಜೋಶಿ, ಮಾಳವಿಕ ಜೋಶಿ ಸಂಗೀತ ಸೇವೆಗೈದರು.ಈರಣ್ಣ…
ಒಣಗಿ ನೆಲೆಕ್ಕುರುಳುತ್ತಿರವ ಭತ್ತ | ಅಕಾಲಿಕ ಮಳೆಯ ಭಯ | ಲಭ್ಯವಾಗದ ಭತ್ತ ಕಟಾವು ಯಂತ್ರಗಳು | ಸಂಕಷ್ಟದಲ್ಲಿ ರೈತರು ಉದಯರಶ್ಮಿ ದಿನಪತ್ರಿಕೆ ವರದಿ: ಇಲ್ಯಾಸ್ ಪಟೇಲ್. ಬಳಗಾನೂರಯಾದಗಿರಿ: ಭತ್ತ ಕಟಾವಿಗೆ ಯಂತ್ರ ಸಿಗದೆ ಗಿರಿನಾಡು ಯಾದಗಿರಿ ಜಿಲ್ಲಾದ್ಯಂತ ಅನೇಕ ಗ್ರಾಮಾಂತರ ಪ್ರದೇಶಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಿರುವುದು ಎದ್ದು ಕಾಣುತ್ತಿದೆ.ರೈತರು ಬೆಳೆದ ಭತ್ತ ಗದ್ದೆಯಲ್ಲಿಯೇ ಒಣಗಿ ನೆಲೆಕ್ಕುರುಳುತ್ತಿವೆ. ಅಕಾಲಿಕ ಮಳೆಯಿಂದ ಬೆಳೆದ ಭತ್ತದ ಬೆಳೆ ನೀರಿನಲ್ಲಿಯೇ ಕೊಳೆತು ಹೋಗುತ್ತದೆ ಎಂಬ ಭಯ ಕೃಷಿಕರನ್ನು ಕಾಡುತ್ತಿದೆ. ಅಕಾಲಿಕ ಮಳೆ ಭತ್ತ ಕಟಾವು ವಿಳಂಬಕ್ಕೆ ಕಾರಣವಾದರೆ, ಇನ್ನೊಂದು ಕಡೆ ಹಲವಾರು ಪ್ರದೇಶಗಳಲ್ಲಿ ಭತ್ತ ಕಟಾವು ಆರಂಭಗೊಂಡಿದ್ದರಿಂದ ಸಾಕಷ್ಟು ಪ್ರಮಾಣದಲ್ಲಿ ಹೊರರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ ಭತ್ತ ಕಟಾವು ಯಂತ್ರಗಳು ಜಿಲ್ಲೆಯಿಂದ ಹೊರ ಹೋಗಿರುವುದು ಭತ್ತ ಕಟಾವಿಗೆ ದೊಡ್ಡ ಮಟ್ಟದ ಹೊಡೆತ ನೀಡಿದೆ.ಈಗ ಭತ್ತದ ಬೆಳೆಯ ಕಟಾವು ಆರಂಭವಾಗಿದ್ದು, ಮೊದಲಿನಂತೆ ಕಟಾವು ಮಾಡಲು ಕೂಲಿ ಕಾರ್ಮಿಕರ ಸಮಸ್ಯೆ ಉದ್ಭವಿಸಿದ್ದು, ರೈತರು ಆತಂಕ ಪಡುವಂತಾಗಿದೆ. ಇದರ…
ಲೇಖನ- ಡಾ.ಶಶಿಕಾಂತ.ರುದ್ರಪ್ಪಾ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಕಲ್ಯಾಣ ಮಹಾಮನೆಯಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಚಳುವಳಿಯ ಅಗ್ರ ನಾಯಕ ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವರು.ಕಲ್ಯಾಣ ಕ್ರಾಂತಿಯು ರಕ್ತಸಿಕ್ತವಾಗಿ ಮಾರ್ಪಟ್ಟಾಗ, ವಚನಗಳಿಗೆ ಸನಾತನಿಗಳಿಂದ ಆಪತ್ತು ವಿಪತ್ತು ಬಂದು ಒದಗಿದಾಗ ವಚನಗಳ ಸಂರಕ್ಷಣೆಗೆ ಮುಂದಾಗಿ ವಚನಗಳ ಕಟ್ಟನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ಅವುಗಳನ್ನು ಒಂದೆಡೆ ಕ್ರೋಢೀಕರಿಸಿ ಬಿಜ್ಜಳನ ಮಗ ಸೋವಿದೇವ ಹಾಗೂ ಅವನ ಸೈನ್ಯದ ದಾಳಿಯಿಂದ ಉಳಿಸಲು ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವರು ಹರ ಸಾಹಸ ಯುದ್ಧ ಮಾಡಬೇಕಾಗಿ ಬಂತು.ಬಸವ ನಿಷ್ಠ ವಚನಕಾರ ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವರು. ಇವರು ಇಂದಿನ ಬಿಜಾಪುರ ಜಿಲ್ಲೆಯ ಹಿಪ್ಪರಗಿ (ದೇವರ ಹಿಪ್ಪರಗಿ) ಜನ್ಮ ತಾಳಿದರು. ಬಸವಣ್ಣ ಅಲ್ಲಮ ಅಕ್ಕ ಮಹಾದೇವಿ ಸಿದ್ಧರಾಮ ಚೆನ್ನ ಬಸವಣ್ಣ ಮತ್ತು ಮರುಳ ಶಂಕರದೇವರ ವಚನಗಳಲ್ಲಿ ಅವರರೆಲ್ಲರ ಪ್ರೀತಿಗೆ ಪಾತ್ರನಾಗಿ ಅವರಿಂದ ಸ್ತುತಿಗೆ ಒಳಗಾಗುತ್ತಾರೆ ಮಡಿವಾಳ ಮಾಚಿದೇವರು.ಅನೇಕ ಲಿಂಗಾಯತ ಕೃತಿಗಳಲ್ಲಿ ಮಡಿವಾಳ ಮಾಚಿದೇವರ ವೀರತ್ವ ಶೌರ್ಯವನ್ನು ಕಥೆ ರೂಪಕ ಪುರಾಣಗಳಲ್ಲಿ ಕಾಣಬಹುದು.. ಜನಪದಿಗರಂತೂ ಮಡಿವಾಳ…
ವಿಶೇಷ ಲೇಖನ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೀನುಗಾರಿಕೆ ಇಲಾಖೆಯಡಿ ಜಿಲ್ಲೆಯಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಸ್ಥಳೀಯ ಮೀನುಗಾರರು ಮತ್ಸ್ಯ ಕೃಷಿಯಲ್ಲಿ ತೊಡಗಿಕೊಳ್ಳುವುದುರ ಮೂಲಕ ತಮ್ಮ ಜೀವನವನ್ನು ಬೆಳಕಾಗಿಸಿಕೊಂಡಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ೭,೨೧೯.೭೧ ಹೆಕ್ಟೇರ್ ಜಲ ವಿಸ್ತೀರ್ಣವುಳ್ಳ ೧೬೦ ದೊಡ್ಡ ಕೆರೆಗಳು, ೮೧ ಗ್ರಾಮ ಪಂಚಾಯತಿ ಕೆರೆಗಳು ಹಾಗೂ ಹಲವು ಸಣ್ಣ ಹೊಂಡಗಳು ಇರುವುದಲ್ಲದೇ ೧೪೨.೦೦ ಕಿ.ಮೀ ಉದ್ದದ ವ್ಯಾಪ್ತಿಯಲ್ಲಿ ಕೃಷ್ಣ, ಭೀಮಾ ಮತ್ತು ಡೋಣಿ ನದಿಗಳು ಇವೆ. ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳು ಜಿಲ್ಲೆಯ ಮೀನುಗಾರಿಕೆ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸಿವೆ.ಜಿಲ್ಲೆಯಲ್ಲಿ ೨೪ ಮೀನುಗಾರಿಕೆ ಸಹಕಾರ ಸಂಘಗಳು ಕಾರ್ಯನಿರತವಾಗಿದ್ದು, ೬,೩೫೮ ಮೀನುಗಾರರು ಮೀನುಗಾರಿಕೆ ವೃತ್ತಿಯ ಮೇಲೆ ಅವಲಂಬಿತರಾಗಿದ್ದಾರೆ. ಪ್ರತಿ ವರ್ಷ ಶೇಕಡಾ ೧೦ ರಷ್ಟು ಮೀನು ಉತ್ಪಾದನೆ ಹೆಚ್ಚಳದ ಗುರಿ ಇದ್ದು, ಕಳೆದ ವರ್ಷ ಜಿಲ್ಲೆಯ ಆಲಮಟ್ಟಿ & ಬಸವಸಾಗರ ಜಲಾಶಯಗಳು ತುಂಬಿದ ಕಾರಣ ಮೀನು ಉತ್ಪಾದನೆ ಗಣನೀಯವಾಗಿ ಏರಿಕೆಯಾಗಿದೆ.ಜಿಲ್ಲೆಯ ಎಲ್ಲ ಇಲಾಖೆಯ ಕೆರೆಗಳು, ಗ್ರಾಮ ಪಂಚಾಯತಿ ಕೆರೆಗಳು, ಪ್ರಮುಖ ಮೂರು ನದಿ ಭಾಗಗಳು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಳವಾಡ ಸಮೀಪದಲ್ಲಿ ಟೋಲ್ನ್ನು ಏಕಾಏಕಿ ಪ್ರಾರಂಭಿಸಿ ಟೋಲ್ ಸಂಗ್ರಹಣೆ ಮಾಡುತ್ತಿದ್ದು, ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಸೇತುವೆ ಸಂಪೂರ್ಣ ಮಾಡದೇ ಹಾಗೂ ಅಲ್ಲಿ ಇರಬೇಕಾದ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಅಂಬೂಲೇನ್ಸ್, ಕ್ರೇನ್, ಶೌಚಾಲಯ, ಸೇರಿದಂತೆ ಅನಿವಾರ್ಯ ಕಾರಣಗಳಿಂದ ನಿಂತಿರುವ ವಾಹನಗಳಿಗೆ ಪೆಟ್ರೋಲ್ ಅಥವಾ ಡಿಸೇಲ್ ವ್ಯವಸ್ಥೆ, ತುರ್ತು ಪಂಚರ್ ತಿದ್ದುವ ವ್ಯವಸ್ಥೆ, ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಹೊಂದಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.ಒಂದು ತಿಂಗಳ ಸಮಯಾವಕಾಶದಲ್ಲಿ ಕಾಮಗಾರಿ ಮುಗಿಸಬೇಕು ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.ಜಿಲ್ಲಾಧ್ಯಕ್ಷ ಸಂಗಮೇಶಗ ಸಗರ ಮನವಿ ಸಲ್ಲಿಸಿ ಮಾತನಾಡಿ, ರೈಲ್ವೇ ಸೇತುವೆ ನಿರ್ಮಿಸದೇ ಟೊಲ್ ಸಂಗ್ರಹಿಸುತ್ತಿದ್ದಾರೆ, ಇದು ಕಾನೂನು ಬಾಹೀರ ಹಾಗೂ ನ್ಯಾಶನಲ್ ಹೈವೇಯವರೇ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ ಎಲ್ಲಾ ವ್ಯವಸ್ಥೆಗಳು ಕಲ್ಪಿಸಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕಳಪೆ ಗುಣಮಟ್ಟದ ಬೀಜ ವಿತರಿಸಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಶ್ರೀ ಅಮರೇಶ್ವರ ಸೀಡ್ಸ್ ಏಜೆನ್ಸಿಯ ಬೀಜಗಳನ್ನು ರಾಜ್ಯಾದ್ಯಂತ ಕೃಷಿ ಇಲಾಖೆ ಪೂರೈಕೆ ಮಾಡಲು ನಿಷೇದಿಸಬೇಕು ಮತ್ತು ಅಮರೇಶ್ವರ ಸೀಡ್ಸ್ ಏಜೆನ್ಸಿಯವರ ಮೇಲೆ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿರುವದರಿಂದ ಈ ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಕೃಷಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಪತ್ರದ ಸ್ವೀಕೃತಿ ಪ್ರತಿ ಪತ್ರಿಕೆಗೆ ನೀಡಿದ್ದು, ಇದೇ ಎಜೆನ್ಸಿಯು ೨೦೨೨ ರಲ್ಲಿ ಶೇಂಗಾ ತಳಿಯ ಬೀಜಗಳನ್ನು ಕಕ್ಕೇರಾ ರೈತ ಸಂಪರ್ಕ ಕೇಂದ್ರಕ್ಕೆ ಪೂರೈಸಿದ್ದು ಆ ಬೀಜಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿ ಕಡಿಮೆ ಗುಣಮಟ್ಟದ್ದಾಗಿದೆ ಎಂದು ಸಾಬೀತುಪಡಿಸಲಾಗಿದೆ. ಹೀಗಿದ್ದರೂ ತಾಲೂಕು ಸೇರಿದಂತೆ ರಾಜ್ಯದ ಹಲವು ಕಡೆ ಈ ಏಜೆನ್ಸಿಯವರಿಗೆ ಬೀಜ ವಿತರಿಸಲು ಅನುಮತಿ ಕೊಟ್ಟಿರುವದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಇದೇ ಏಜೆನ್ಸಿಯವರು ವಿತರಿಸಿದ ತೊಗರಿ ಬಿತ್ತನೆ ಬೀಜಗಳು ಹೂ ಉದುರಿ ಕಾಳು ಕಟ್ಟದೇ ಇರುವದು…
ನ್ಯಾಯಾಲಯದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಡಿ.೧೪ ರಂದು ಪಟ್ಟಣದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ಅನ್ನು ಹಮ್ಮಿಕೊಳ್ಳಲಾಗಿದೆ. ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿರುವ ಪಕ್ಷಗಾರರು ತಮ್ಮ ವಕೀಲರಿಗೆ ಭೇಟಿ ಮಾಡಿ ನಿಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಇಲ್ಲಿನ ಹಿರಿಯ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅಧಾಲತ್ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಪ್ರಕರಣಗಳು ಬಹು ಬೇಗನೇ ಇತ್ಯರ್ಥವಾಗದ ಹಿನ್ನೆಲೆ ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ತುರ್ತು ನ್ಯಾಯ ಪಡೆದುಕೊಳ್ಳಲು ಪಕ್ಷಗಾರರಿಗೆ ಕಾನೂನು ಸೇವಾ ಸಮಿತಿಯ ವತಿಯಿಂದ ಅವಕಾಶ ಕಲ್ಪಿಸಿ ಕೊಡಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಂಡಲ್ಲಿ ಶೀಘ್ರವಾಗಿ ನಿಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಿ ಅದಾಲತ್ ಅನ್ನು ಯಶಶ್ವಿಗೊಳಿಸಲು ನ್ಯಾಯವಾದಿಗಳು ಸಹಕಾರ ನೀಡುವಂತೆ ತಾಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಎಂಬಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಬಿಎ ಕೋರ್ಸ್ ಹಂಚಿಕೆಯಾಗಿ ಕೆಲವೇ ಕೆಲವು ಬಾಕಿ ಉಳಿದ ಸೀಟುಗಳಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಇದೇ ಡಿಸೆಂಬರ್ ೩೧ ರವರೆಗೆ ಯುಯುಸಿಎಂಎಸ್ ತಂತ್ರ್ರಾಂಶದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಮಾತ್ರ ಪಾವತಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ www.kswu.ac.in£ÀÄß ಅಥವಾ ಮೊಬೈಲ್ ಸಂಖ್ಯೆ: ೯೮೪೫೯೮೮೪೮೯, ೯೮೪೪೯೦೧೯೯೯ ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಇದೇ ಡಿ.೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರದ ವಿಜಯವಾಣಿ ದಿನಪತ್ರಿಕೆಯ ಪತ್ರಕರ್ತ ಪರಶುರಾಮ ಬಾಸಗಿ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಶೃತಿ ಬೆಳ್ಳುಂಡಗಿ, ಮಲ್ಲಮ್ಮಾ ಪೂಜಾರ, ಲಕ್ಷ್ಮೀ ಎಸ್, ದೀಪಿಕಾ ಖರ್ತಿ, ದೀಕ್ಷಾ ಮುಚ್ಚಂಡಿ ಮತ್ತು ಖುದಿಜಾ ಖಾನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ವಹಿಸಲಿದ್ದಾರೆ. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಅರಕೇರಿ ಗ್ರಾಮ ಪಂಚಾಯತಿಗೆ ಮುಖ್ಯ ಲೆಕ್ಕಾಧಿಕಾರಿಗಳು ಭೇಟಿ, ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಅರಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರೌಢಶಾಲೆ, ಗ್ರಾಮ ಪಂಚಾಯತಿ ಕಾರ್ಯಾಲಯ, ಗ್ರಂಥಾಲಯ, ವಸತಿ ನಿಲಯಗಳಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ತಿಕೋಟಾ ತಾಲೂಕು ಪಂಚಾಯತಿಯ ಆಡಳಿತಾಧಿಕಾರಿಗಳಾದ ಶ್ರೀ ರಾಮಣ್ಣ ಅಥಣಿ ರವರು ಅನೀರಿಕ್ಷಿತ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಶಾಲೆಯಲ್ಲಿ ಮತ್ತು ವಿವಿಧ ಸರಕಾರಿ ಕಾರ್ಯಾಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಆರಂಭದಲ್ಲಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು ಶಾಲೆಯಲ್ಲಿ ಗುಣಮಟ್ಟದ ಗ್ರಂಥಾಲಯ ಸಿದ್ಧಪಡಿಸಲುಶಿಕ್ಷಕರಿಗೆ ತಿಳಿಸಿದರು. ಅದಕ್ಕೆ ಬೇಕಾಗುವ ಸಾಮಗ್ರಿಗಳ ಪಟ್ಟಿ ತಯಾರಿಸಿ ತಾಲೂಕು ಪಂಚಾಯತಿಗೆ ಸಲ್ಲಿಸಲು ಸೂಚಿಸಿ, ಅಗತ್ಯ ಸಾಮಗ್ರೀಗಳನ್ನು ತಾಲೂಕು ಪಂಚಾಯತಿಯ ಅನುದಾನದಲ್ಲಿ ನೀಡುವ ಭರವಸೆ ನೀಡಿದರು. ನಂತರ ಅಡುಗೆ ಕೋಣೆ, ಉಗ್ರಾಣ ಕೋಣೆ, ಐಟಿ ಕೋಣೆ ಸೇರಿದಂತೆ ವಿವಿಧ ಕೊಠಡಿಗಳನ್ನು ವೀಕ್ಷಣೆ ಮಾಡಿ, ಶಾಲಾ ಮಕ್ಕಳೊಂದಿಗೆ…
