Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆವ್ಹಾನ ನೀಡಿದ ಆಲಮೇಲ ತಾಲೂಕು ಕಸಾಪ ಘಟಕ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಆಲಮೇಲ ತಾಲ್ಲೂಕು ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಸಾಹಿತಿ, ಕಲಾವಿದ ಚನ್ನವೀರಶಾಸ್ತ್ರೀ ಅವರನ್ನು ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತವಾದುದು ಎಂದು ಗದಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ವಸ್ತ್ರದ ಹೇಳಿದರು.ಆಲಮೇಲ ತಾಲ್ಲೂಕು ಕಸಾಪ ಘಟಕವು ಗದಗ ನಗರದ ಚನ್ನವೀರಶಾಸ್ತ್ರೀ ಹಿರೇಮಠ ಅವರ ಮನೆಯಲ್ಲಿ ಅಧಿಕೃತ ಆವ್ಹಾನ ನೀಡಿದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ನಿಕಟಪೂರ್ವ ಅಧ್ಯಕ್ಷ ಡಾ.ರಮೇಶ ಕತ್ತಿ ‘ಆಲಮೇಲ ಕಸಾಪ ಪರವಾಗಿ ಅಭಿನಂದಿಸಿ ಸಮ್ಮೇಳನಕ್ಕೆ ಆವ್ಹಾನಿಸಿ ಪರಿಷತ್ತಿನ ಪರವಾಗಿ ಆಮಂತ್ರಣ ನೀಡಿದರು.ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ ” ಕಡಣಿ ಶಾಸ್ತ್ರೀಗಳು ಕಲೆ, ಸಾಹಿತ್ಯ ಸಂಸ್ಕೃತಿಯಲ್ಲಿ ನಾಲ್ಕು ದಶಕಗಳಿಂದಲೂ ಗಮನಾರ್ಹ ಸೇವೆ ಮಾಡಿದ್ದಾರೆ, ಅವರ ಸೇವೆಗೆ ಸಂದ ಗೌರವ ಇದು, ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ಪರಿಷತ್ತಿನ ಪದಾಧಿಕಾರಿಗಳು ಉತ್ತಮ ನಿರ್ಧಾರ ಮಾಡಿದ್ದಾರೆ ಎಂದರು.ವಿಭೂತಿ ಪತ್ರಿಕೆ ಸಂಪಾದಕ…
ನಾಗಠಾಣದಲ್ಲಿ ನಡೆದ ಚಿಂತನಗೋಷ್ಠಿ ಉದ್ಘಾಟಿಸಿದ ಇಸ್ರೋ ವಿಜ್ಞಾನಿ ಸಂಜೀವ ಗೌರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದ ಬಾಹ್ಯಾಕಾಶ ತಂತ್ರಜ್ಞಾನವು ನಿರಂತರ ಪ್ರಯೋಗ, ಹೊಸ ಅನ್ವೇಷಣೆ ಮತ್ತು ಆವಿಷ್ಕಾರಗಳ ಮೂಲಕ ಮನುಕುಲದ ಸಮಸ್ಯೆಗಳ ಪರಿಹಾರ ಮತ್ತು ಮಾನವಕಲ್ಯಾಣದ ಗುರಿಯನ್ನು ಹೊಂದಿದೆ ಎಂದು ಹಾಸನ ಎಂಸಿಎಫ್ ಇಸ್ರೋ ಕೇಂದ್ರದ ಹಿರಿಯ ವಿಜ್ಞಾನಿ ಸಂಜೀವ ಚಂದ್ರಶೇಖರ ಗೌರ ಹೇಳಿದರು.ಗುರುವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ‘ಬಾಹ್ಯಾಕಾಶದಲ್ಲಿ ಭಾರತದ ಹೆಜ್ಜೆಗಳು’ ಕುರಿತ ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.ಸಂಪರ್ಕ, ಆರೋಗ್ಯ, ಶಿಕ್ಷಣ, ಕೃಷಿ, ಪರಿಸರ, ಹವಾಮಾನ ಬದಲಾವಣೆ ಅಧ್ಯಯನ ಹೀಗೆ ಹತ್ತು ಹಲವು ಕ್ಷೇತ್ರಗಳಿಗೆ ಇಸ್ರೋ ಸೇವೆ ಒದಗಿಸುತ್ತಿದೆ. ಶಿಸ್ತುಬದ್ದ ಅಧ್ಯಯನದೊಂದಿಗೆ ಜ್ಞಾನ ಗಳಿಸಿಕೊಂಡು ಮಕ್ಕಳು ಬದುಕಿನಲ್ಲಿ ಯಶಸ್ಸು ಪಡೆಯಲು ಸಾಧ್ಯ. ಸೌಲಭ್ಯಗಳ ಕೊರತೆ ಇದ್ದಾಗಲೂ ಸತತ ಪ್ರಯತ್ನ, ಪರಿಶ್ರಮ, ನಿರ್ಧಿಷ್ಟ ಗುರಿಯೊಂದಿಗೆ ಮುನ್ನಡೆದಾಗ ಗ್ರಾಮೀಣ ಭಾಗದ ಮಕ್ಕಳು ಕೂಡ ವಿಜ್ಞಾನಿಯಾಗಿ, ದೇಶಸೇವೆ ಸಲ್ಲಿಸಲು ಸಾಧ್ಯ.ಕಡಿಮೆ ವೆಚ್ಚ, ಉತ್ತಮ…
ಬಿ.ಎಲ್.ಡಿ.ಇ.ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಿಂದ ನಡೆದ ಕ್ಷೇತ್ರ ವರದಿಗಾರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳಿಗೆ ಕ್ಷೇತ್ರ ವರದಿಗಾರಿಕೆ ವೃತ್ತಿ ಕೌಶಲ್ಯ ಹೆಚ್ಚಿಸುವುದರ ಜೊತೆಗೆ ಸೃಜನಾತ್ಮಕ ಬರವಣಿಗೆಗೆ ಸಹಕಾರಿಯಾಗುತ್ತದೆ ಎಂದು ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರೊ.ಮಲಿಕ್ ಜಮಾದಾರ ಹೇಳಿದರು.ನಗರದ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆದಿಲ್ ಶಾಹಿ ಐತಿಹಾಸಿಕ ಕುಮಟಗಿ ಕೆರೆ ಕ್ಷೇತ್ರ ವರದಿಗಾರಿಕೆ ವಿಶೇಷ ಭೇಟಿ ನೀಡಿ ಮಾತನಾಡಿದ ಅವರು, ವೃತ್ತಿ ಜೀವನಕ್ಕೆ ಕೌಶಲ್ಯ ಅತೀ ಮುಖ್ಯ ಎಂದರು.ಪತ್ರಿಕೋದ್ಯಮ ನಿರಂತರ ಕ್ರಿಯಾಶೀಲತೆ ಬೇಡುತ್ತದೆ. ಓದುಗರಿಗೆ ನಿತ್ಯ ಹೊಸದನ್ನು ಕೊಡುವ ಜವಾಬ್ದಾರಿ ನಿಭಾಯಿಸುವುದು ಅತ್ಯಂತ ಕಷ್ಟದ ಕೆಲಸ. ಅದರಲ್ಲೂ ನಾವು ಕಂಪ್ಯೂಟರ್ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ವೃತ್ತಿ ಬದುಕು ಕಠಿಣ ಅನುಭವಗಳನ್ನು ನೀಡುತ್ತದೆ ಹಾಗಾಗಿ ನಾವು ವಿದ್ಯಾರ್ಥಿ ಜೀವನದಲ್ಲೇ ಎಲ್ಲವನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.ವಿದ್ಯಾರ್ಥಿಗಳಿಗೆ ಪಾಠ ಎಷ್ಟು ಮುಖ್ಯವೋ ಪ್ರಯೋಗತ್ಮಕ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಕ್ಕಳು ವಿಕಲಚೇತನರೆಂದು ಅವರನ್ನು ಮನೆಯಲ್ಲೇ ಇರಿಸದೇ ಶಾಲೆಗಳಿಗೆ ಸೇರಿಸಿ ವಿಶೇಷ ಜ್ಞಾನ ನೀಡಿ, ಎಲ್ಲರಂತೆ ಸಾಮಾನ್ಯ ಜೀವನ ಸಾಗಿಸಲು ಅನುಕೂಲ ಕಲ್ಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಅವರು ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ‘ವಿಶ್ವ ವಿಕಲಚೇತನರ ದಿನ’ವನ್ನು ಉದ್ಘಾಟಿಸಿ ಮಾತನಾಡಿದರು.ವಿಶ್ವದಲ್ಲಿ ಬಹಳಷ್ಟು ವಿಕಲಚೇತನರು ತಾವು ಯಾರಿಗಿಂತ ಕಡಿಮೆ ಇಲ್ಲ ಎಂಬುದನ್ನು ನಾನಾ ರಂಗಗಳಲ್ಲಿ ಸಾಧಿಸಿ ತೋರಿಸಿದ್ದಾರೆ. ಅಂಗವೈಕಲ್ಯ ಅವರ ಪ್ರತಿಭೆಗೆ ಅಡ್ಡಿಯಾಗದಂತೆ ಸಮಾಜ ಅವರಿಗೆ ಸಮಾನ ಅವಕಾಶಗಳನ್ನು ಕೊಡಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ವಿಕಲಾಂಗ ವ್ಯಕ್ತಿಗಳು ಕಲೆ, ವಿಜ್ಞಾನ, ಕ್ರೀಡೆ, ಸಂಗೀತ, ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಈ ದಿನವು ವಿಕಲಾಂಗ ವ್ಯಕ್ತಿಗಳ ಅಪಾರ ಸಾಮರ್ಥ್ಯವನ್ನು ಮತ್ತು ಅವರ ನಾಯಕತ್ವವನ್ನು ಸಶಕ್ತಗೊಳಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ ಎಂದು ಹೇಳಿದರು.ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿದ್ಯಾರ್ಥಿ ದೆಸೆಯೆಯಲ್ಲಿಯೇ ಭವಿಷ್ಯದ ಮುಂದಾಲೋಚನೆ ರೂಢಿಸಿಕೊಳ್ಳಬೇಕಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಾಣೇಶ ಜೋಶಿ ಹೇಳಿದರು.ಪಟ್ಟಣದ ಅಭ್ಯುದಯ ಶಾಲೆಯಲ್ಲಿ ಶಿರಸಿಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಯತಿವರೇಣ್ಯರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ—೨೦೨೪ ಸಂಬಂಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದ ಸಮಗ್ರತೆ ಸಂಸ್ಕೃತಿಯ ಮೇಲೆ ನಿಂತಿದೆ. ಅದನ್ನು ರಾಮಾಯಣ, ಮಹಾಭಾರತದಂತಹ ಆದರ್ಶ ಗ್ರಂಥಗಳು ಎತ್ತಿ ಹಿಡಿಯುತ್ತಿವೆ. ಭಗವದ್ಗೀತಾ ಅಭಿಯಾನದಂತಹ ವಿಶಿಷ್ಠ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಬದುಕಿಗೆ ಅರ್ಥವನ್ನು ತರುವ ಕಾರ್ಯವನ್ನು ಸರ್ಣವಲ್ಲೀ ಶ್ರೀಗಳು ನಡೆಸುತ್ತಿದ್ದಾರೆ. ನಾವೆಲ್ಲ ಜಾಗೃತಗೊಳ್ಳಬೇಕಾಗಿದೆ. ಅಲ್ಲದೆ ಸಾಧನೆಯ ಪಥದಲ್ಲಿ ಸಾಗುವಾಗ ಮೂಕನಾಗಿರಬೇಕು. ಸಾಧನೆಯ ಗುರಿಯನ್ನು ಮುಟ್ಟುವ ಗಮನವೊಂದೆ ಇರಬೇಕು. ವಿದ್ಯಾರ್ಥಿಗಳು ಭಗವದ್ಗೀತೆಯ ಅಧ್ಯಯನದ ಮೂಲಕ ಬೆಳಕಿನ ದಾರಿ ಕಂಡುಕೊಳ್ಳ ಬೇಕಾಗಿದೆ ಎಂದರು.ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಚ್.ಮುದ್ನಾಳ ಮಾತನಾಡಿ ನಾವು ಪ್ರತಿ ಕ್ಷಣದಲ್ಲೂ ಸರಿಯೋ? ತಪ್ಪೋ? ಎನ್ನುವುದನ್ನ ಯೋಚಿಸುತ್ತಿರಬೇಕು. ಕೆಟ್ಟದ್ದನ್ನು ಪ್ರಾರಂಭದ ಹಂತದಿಂದಲೇ ಕೈಬಿಡುತ್ತಿರಬೇಕು. ಭಗವಂತ ನಮ್ಮಿಂದ ಏನನ್ನೂ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಭಾಗದ ಮಹಿಳೆಯರ ಸ್ವಾವಲಂಬನೆ, ವಿದ್ಯಾರ್ಥಿಗಳ ಏಳಿಗೆ, ಅನಾಥರಿಗೆ ಊರುಗೋಲಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಗತಿಪರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್ ಎಸ್ ಚಂಡಕಿ ಹೇಳಿದರುಅವರು ತಾಲೂಕಿನ ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ವತಿಯಿಂದ, ವಿದ್ಯಾರ್ಥಿಗಳಿಗೆ ಉಚಿತವಾಗಿ ಮೂರು ತಿಂಗಳ ಟ್ಯೂಷನ್ ಕ್ಲಾಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರುಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಗ್ರಾಮೀಣ ಭಾಗಕ್ಕೆ ತಲುಪಿಸುತ್ತಿರುವ ಪೂಜ್ಯ ಹೆಗ್ಗಡೆ ದಂಪತಿಗಳಿಗೆ ನಮ್ಮ ಶಾಲೆಯ ಪರವಾಗಿ ಕೃತಜ್ಞತೆಗಳು ಸಲ್ಲಿಸಬೇಕಿದೆ, ಗಾಂಧೀಜಿಯವರ ಗ್ರಾಮ ಅಭಿವೃದ್ಧಿ ಕನಸನ್ನು ಧರ್ಮಸ್ಥಳ ಸಂಸ್ಥೆ ನನಸು ಮಾಡುತ್ತಿದೆ, ಮಹಿಳೆಯರ ಸಬಲೀಕರಣ, ಅನಾಥರ, ವಿದ್ಯಾರ್ಥಿಗಳ ಏಳಿಗೆಗಾಗಿ ಶ್ರಮಿಸುತ್ತಿದೆ ಇಂದಿನಿಂದ ಪ್ರಾರಂಭವಾಗುವ ಟ್ಯೂಷನ್ ಕ್ಲಾಸ್ ಸದುಪಯೋಗ ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಂಕಗಳನ್ನು ಗಳಿಸಬೇಕು ಎಂದರು.ಸಿಂದಗಿ ತಾಲೂಕು ಯೋಜನಾಧಿಕಾರಿ ಕೃಷ್ಣಮೂರ್ತಿಪ್ರಾಸ್ತಾವಿಕ ಮಾತನಾಡಿ ಯೋಜನೆಯು ನಡೆದು ಬಂದ ಹಾದಿ, ಸ್ವ ಸಹಾಯ ಸಂಘಗಳ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಇಲ್ಲಿನ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾಯಾ೯ಲಯ ಆವರಣದಲ್ಲಿ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನದ ಪ್ರಯುಕ್ತ ಸಸಿಗಳನ್ನು ನೆಡಲಾಯಿತು.ಬಿಒಓ ಕಚೇರಿ ಸಿಬ್ಬಂದಿ ಅಂಬರೀಶ್ ಪಲ್ಲೇದ, ಬಿ.ಡಿ.ತೇಲಿ, ವಿಶ್ರಾಂತ ಶಿಕ್ಷಕ ತಳವಾರ ಇತರರು ತಮ್ಮ ದೈನಂದಿನ ಕಾಯಕದ ಜೊತೆಗೆ ಸಸಿಗಳನ್ನು ನೆಟ್ಟು, ನೀರುಣಿಸಿದರು. ಹಸಿರು ಭಾವದ ಸಾಮಾಜಿಕ ಜವಾಬ್ದಾರಿ ಮೆರೆದರು.ಸಾಮಾಜಿಕ ಸೇವಾ ಮನೋಭಾವನೆಯಲ್ಲಿ ನೆಮ್ಮದಿ, ಸಂತೃಪ್ತಿ ಲಭಿಸುತ್ತದೆ. ಆ ಕಾರಣ ಪ್ರತಿಯೊಬ್ಬರು ಪ್ರಕೃತಿ ಪ್ರೇಮಾಂಕುರ ಬೆಳೆಸಿಕೊಂಡು ಹಸಿರು ನಂದನಕ್ಕೆ ಕಾರಣರಾಗಬೇಕು. ಮನುಕುಲದ ಜೀವ ಸತ್ವಕ್ಕೆ ಒಂದಿಷ್ಟು ನೇಚರ್ ಪರಿಸರ ಸಂರಕ್ಷಿಸುವ ಹಸಿರು ತತ್ವ ಹೃದಯ ಮನಭಾವದಲ್ಲಿ ಚಿಗುರೊಡೆಯಬೇಕು ಎಂದರು.
’ವೀಣಾಂತರಂಗ’ ಲೇಖನ- ವೀಣಾ ಹೇಮಂತ್ ಗೌಡ ಪಾಟೀಲಮುಂಡರಗಿ, ಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ರತನ್ ಟಾಟಾ ಅವರ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿದ ವ್ಯಕ್ತಿ ಅವರ ಅಜ್ಜಿ ನವಾಜ್ ಬಾಯ್ ಟಾಟಾ… ಲೇಡಿ ರತನ್ ಟಾಟಾ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ಈಕೆ ಟಾಟಾ ಉದ್ಯಮವನ್ನು ಸ್ಥಾಪಿಸಿದ ಜಮಶೇಡ್ ಜೀ ಟಾಟಾ ಅವರ ಕಿರಿಯ ಮಗನನ್ನು ವಿವಾಹವಾಗಿದ್ದರು.ಟಾಟಾ ಸಂಸ್ಥೆಯ ಅತ್ಯಂತ ಹಿರಿಯ ನಿರ್ದೇಶಕರಲ್ಲಿ ಒಬ್ಬರಾಗಿದ್ದ ಈಕೆ ಅತಿ ದೊಡ್ಡ ದಾನಿಯಾಗಿದ್ದರು.1965ರ ಆಗಸ್ಟ್ ತಿಂಗಳಲ್ಲಿ ಆಕೆ ನಿಧನ ಹೊಂದಿದಾಗ ಮುಂಬೈಯ ಅಗಸ್ಟ್ 22ರ ಟೈಮ್ಸ್ ಆಫ್ ಇಂಡಿಯಾ ಪೇಪರ್ ನಲ್ಲಿ ಪಾರ್ಸಿ ಜನಾಂಗದ ಅತ್ಯಂತ ಪ್ರಭಾವಿ ಉದ್ಯಮಿ ಮಾತ್ರವಲ್ಲದೇ ಸಮಾಜ ಕಲ್ಯಾಣ ವಲಯದಲ್ಲಿಯೂ ಹೆಸರಾದ ಮಹಿಳೆ ಎಂದು ಆಕೆಯ ಕುರಿತು ಹೇಳಲಾಗಿತ್ತು.ರತನ್ ಟಾಟಾ ಅವರ ಉದ್ಯಮ ತರಬೇತಿ ಸಂಸ್ಥೆಯಲ್ಲಿ 300ಕ್ಕೂ ಹೆಚ್ಚು ಯುವತಿಯರು ವಿವಿಧ ಉದ್ಯಮಶೀಲತಾ ಕೆಲಸಗಳಲ್ಲಿ ತರಬೇತಿ ಹೊಂದಿದ್ದು ಅವರೆಲ್ಲರ ಜವಾಬ್ದಾರಿಯನ್ನು ಮತ್ತು ಸಂಸ್ಥೆಯ ಜವಾಬ್ದಾರಿಯನ್ನು ಖುದ್ದು ಆಕೆಯೇ ವಹಿಸಿದ್ದಳು. ಪಾರ್ಸಿ…
ಯತ್ನಾಳರೊಂದಿಗೆ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥದ ಆಶಯ ವ್ಯಕ್ತಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ: ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಹೊರಗಿನವರಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರಾಗಿರುವ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವಲ್ಲಿ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು ಎಂದು ಮಾಜಿ ಮುಖ್ಯಮಂತ್ರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಯಾವುದೇ ಲೋಪದೋಷಗಳಿದ್ದರೆ ಎದುರು-ಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು…
ಜೆಎಸ್ಎಸ್ ಆಸ್ಪತ್ರೆಯಲ್ಲಿ ಸಂಭ್ರಮದ ವಿಶ್ವ ವಿಕಲಚೇತನರ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾರಲ್ಲಿ ನ್ಯೂನ್ಯತೆಗಳನ್ನು ಮೀರಿ ಬೆಳೆಯುವ ಶಕ್ತಿ ಇರುತ್ತದೆಯೋ ಅಂಥವರಿಗೆ ದೇವರು ಸವಾಲುಗಳನ್ನು ಎಸೆಯುತ್ತಾನೆ. ಆ ದೇವರು ಎಸೆದ ಸವಾಲನ್ನು ಸಮರ್ಪಕವಾಗಿ ಎದುರಿಸಿದವನ ಸಾಧಕನಾಗಿ ಹೊರ ಹೊಮ್ಮುತ್ತಾನೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಸವಿತಾ ಕಾಳೆ ಹೇಳಿದರು.ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ವಿಲಚೇತರ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು; ಸಮಸ್ಯೆಗಳು ಮನುಷ್ಯನನ್ನು ಸಾಧಕನನ್ನಾಗಿ ಹೊರಹೊಮ್ಮಿಸುವುದಕ್ಕೆ ಪ್ರೇರಣೆ ನೀಡುತ್ತವೆ. ಅಂತೆಯೇ ದೈಹಿಕವಾಗಿ ಅಂಗ ವೈಕ್ಯಲತೆಯೂ ಸಹ ಮನಸ್ಸಿನಲ್ಲಿ ಅಡಗಿರುವ ಸೂಪ್ತ ಚೇತನವನ್ನು ಜಾಗೃತಗೊಳಿಸಿ ಸಾಧನೆಯ ಶಿಖರವೇರುವುದಕ್ಕೆ ಪ್ರೇರಣೆ ನೀಡುತ್ತದೆ. ನನಗೆ ಅಂಗವೈಕಲ್ಯವಿದೆ ಎಂದು ಮರುಗುತ್ತ ಕುಳಿತರೆ ಏನು ಮಾಡುವುದಕ್ಕೂ ಸಾಧ್ಯವಾಗುವುದಿಲ್ಲ. ನಮಗೆ ದೇವರು ನೀಡಿದ ಈ ಸವಾಲು ನಿಜವಾಗಲೂ ನಮ್ಮಲ್ಲಿರುವ ಶಕ್ತಿಯನ್ನು ಜಗತ್ತಿಗೆ ತೋರಿಸುವುದಕ್ಕೆ ಮಾಡಿಕೊಟ್ಟ ಅವಕಾಶ ಎಂದು ತಿಳಿದು ಮುನ್ನುಗಿದ್ದರೆ ಎಲ್ಲವೂ ಸರಿಯಾಗಿರುವ…
