Author: editor.udayarashmi@gmail.com

೨೦೦೦ಕಿ.ಮೀ. ೫೫ ದಿನಗಳ ಪಯಣ | ಸತತ ೩೫ ವರ್ಷಗಳಿಂದ ವ್ರತಧಾರಣೆ | ೨೫ವರ್ಷದಿಂದ ಪಾದಯಾತ್ರೆ ಉದಯರಶ್ಮಿ ದಿನಪತ್ರಿಕೆ ವರದಿ: ರಶ್ಮಿ .ಎಂ. ನೂಲಾನವರಸಿಂದಗಿ: ನಿರಂತರವಾಗಿ ೨೫ ವರ್ಷಗಳಿಂದ ಸುಮಾರು ೨೦೦೦ಕಿ.ಮೀ ೫೫ದಿನಗಳವರೆಗೆ ಪಾದಯಾತ್ರೆಯ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರುಶನ ಪಡೆಯುವ ಭಕ್ತರೊಬ್ಬರು ಸಿಂದಗಿ ನಗರಕ್ಕೆ ಮಂಗಳವಾರ ಆಗಮಿಸಿದ್ದರು. ಅವರನ್ನು ಪಟ್ಟಣದ ಎಪಿಎಂಸಿ ಯಾರ್ಡಿನ್ ಶ್ರೀಧರ್ಮಶಾಸ್ತಾ ಸನ್ನಿಧಾನಂನ್ ಅಯ್ಯಪ್ಪಸ್ವಾಮಿ ಮಾಲಾಧಾರಿ ಕಿರಣ ಶಿವಸಿಂಪಿ ಗುರುಸ್ವಾಮಿ ಹಾಗೂ ವ್ರತಧಾರಿಗಳು ಅವರನ್ನು ಸ್ವಾಗತಿಸಿ, ಭಕ್ತಿಪೂರ್ವಕವಾಗಿ ಬೀಳ್ಕೊಟ್ಟರು.ಉಪೇಂದ್ರಸ್ವಾಮಿ ಪೂಜಾರಿ ಎಂಬುವವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನಿವಾಸಿ. ಇವರೇ ಈ ಯಾತ್ರೆಯ ಭಕ್ತರು. ಹಲವು ವರ್ಷಗಳ ಹಿಂದಯೇ ಜೀವನೋಪಾಯಕ್ಕಾಗಿ ಉದ್ಯೋಗವನ್ನು ಆವರಿಸಿಕೊಂಡು ದೂರದ ಮುಂಬೈ ಪಟ್ಟಣಕ್ಕೆ ತೆರಳಿದ್ದರು. ೧೯೮೯ರಲ್ಲಿ ಮುಂಬೈನಲ್ಲಿ ಯಾರೋಬ್ಬರು ಶಬರಿಮಲೆ ಸ್ವಾಮಿ ಅಯ್ಯಪ್ಪನ ವ್ರತ ಆಚರಣೆ ಮಾಡು ಮಾಲೆ ಧರಿಸು ಎಂದು ಹೇಳಿದ್ದಕ್ಕಾಗಿ ಭಕ್ತಿಯಿಂದ ಮಾಲೆ ಧರಿಸಿ ಸು.೩-೪ ವರ್ಷಗಳವರೆಗೆ ಶಬರಿಗೆ ಹೋಗಿ ಬಂದಿದ್ದರು. ೩೫ವರ್ಷಗಳಿಂದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ಯ ಜರುಗಿದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಪೂಜಾ ಸಾರಂಗಮಠ ಹಾಗೂ ಈರಮ್ಮ ಅಗಸರ ಪ್ರಥಮ ಸ್ಥಾನ ಮತ್ತು ರೀಲ್ಸ್ ಸ್ಪರ್ಧೆಯಲ್ಲಿ ಪೂಜಾ ಸಾರಂಗಮಠ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿಯೊಬ್ಬರು ಸಹಕಾರ ನೀಡುವ ಮೂಲಕ ಯಶಸ್ವಿಗೆ ಶ್ರಮಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಸಾರಂಗಮಠದ ಆವರಣದಲ್ಲಿ ಆಲಮೇಲ ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರ ಅವರು, ಅಕ್ಷರ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಆಗಮಿಸಬೇಕು. ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಜರುಗಲು ಎಲ್ಲ ಸೌಲಭ್ಯಗಳನ್ನು ಒದಗುಸಲು ನಾನು ಸಿದ್ದನಿದ್ದೇನೆ. ಸಂಘಟಕರು ಎಲ್ಲರನ್ನು ತೊಡಗಿಸಿಕೊಂಡು ಕಾರ್ಯಚಟುವಟಿಕೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.ಈ ವೇಳೆ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಸಿಂದಗಿ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಗಿರೀಶ ಗತಾಟೆ, ರಮೇಶ ಭಂಟನೂರ, ಡಾ.ರವಿ ಗೋಲಾ, ಅಪ್ಪುಗೌಡ ಪಾಟೀಲ, ರವಿರಾಜ ದೇವರಮನಿ, ಸಿದ್ದಲಿಂಗ ಕಿಣಗಿ ಸೇರಿದಂತೆ ಅನೇಕರಿದ್ದರು

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ವಿಶೇಷವಾಗಿ ಮಹಿಳೆಯರೆ ರಥವನ್ನು ಎಳೆಯುವುದು ಸಿಂದಗಿ ಪಟ್ಟಣದಲ್ಲಿ ಇರುವುದು ಈ ಭಾಗದ ಪುಣ್ಯವೇ ಸರಿ.ಸಾರಂಗಮಠದ ಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಇಲ್ಲಿನ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಭಕ್ತರ ಇಚ್ಚೇಷ್ಟೇಗಳ ಈಡೇರಿಕೆಗಾಗಿ ಕಳೆದ ಏಳು ವರ್ಷಗಳಿಂದ ಮಹಿಳೆಯರೇ ಈ ರಥವನ್ನು ಎಳೆಯುವ ಸಂಪ್ರದಾಯಕ್ಕೆ ವಿಶೇಷ ಮನ್ನಣೆ ಕೊಟ್ಟಿರುವುದು ಇತಿಹಾಸ. ರಥದ ಬೆಳ್ಳಿ ಪೀಠದಲ್ಲಿ ರಾರಾಜಿಸುತ್ತಿದ್ದ ವೀರಭದ್ರದೇವರು ಮತ್ತು ಭದ್ರಕಾಳಿ ಅಮ್ಮನವರ ಉತ್ಸವ ಮೂರ್ತಿಗಳೊಂದಿಗೆ ಸಾಗಿದ ರಥ ಮತ್ತು ಬೆಳ್ಳಿ ಪಲ್ಲಕ್ಕಿ, ನಗರದ ಸಾರಂಗಮಠದಿಂದ ಪ್ರಾರಂಭಗೊಂಡು ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಡಾ.ಸಿದ್ಧಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ, ಕಾಯಿಪಲ್ಲೆ ಮಾರ್ಕೆಟ್ ಬಳಿ ಇರುವ ಗಚ್ಚಿನಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಅವರಣದಲ್ಲಿರುವ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ ತೆರಳಿತು.ನಗರದುದ್ದಕ್ಕೂ ಉಡಪಿಯ ಸ್ಕಂದ ಚೆಂಡೆ…

Read More

’ಜಯ್ ನುಡಿ’ (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿ, ಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಜೀವನವೆಂಬುದು ಬಗೆಹರಿಸುವ ಸಮಸ್ಯೆಯಲ್ಲ. ಅದು ವಾಸ್ತವದ ಅನುಭವ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ವಾಸ್ತವವನ್ನು ನಿರ್ಲಕ್ಷಿಸಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಅಸಮಾಧಾನ ಅಥವಾ ಅಹಿತಕರವಾದ ಸಂಗತಿಯನ್ನು ಒಪ್ಪಿಕೊಳ್ಳದಿರುವುದು ಸುಲಭ. ವಾಸ್ತವನ್ನು ಎದುರಿಸುವುದು ಕಷ್ಟ. ನಾವು ಎದುರಿಸಲು ಸಿದ್ಧರಿರದಿದ್ದರೂ ಅದನ್ನು ಎದುರಿಸುವುದು ನಮ್ಮ ಪ್ರಸ್ತುತ ಸಂದರ್ಭದಲ್ಲಿ ಅಗತ್ಯವಿದೆ. ಏಕೆಂದರೆ ನೆಮ್ಮದಿಯನ್ನು ಪಡೆಯಲು ಅದುವೇ ಅತ್ಯುತ್ತಮ ಮಾರ್ಗ. ಉಜ್ವಲ ಭವಿಷ್ಯವನ್ನು ಹೊಂದಲು ಕೆಲಸ ಮಾಡುವುದು ಕಷ್ಟವಲ್ಲ ಎನಿಸಬಹುದು. ಆದರೆ ಬದುಕಿನಲ್ಲಿ ಅತಿ ದೊಡ್ಡ ಸಾಲೆಂದರೆ ವಾಸ್ತವವನ್ನು ಅರಿಯುವುದು. ಪ್ರಸ್ತುತ ಪರಿಸ್ಥಿತಿಯನ್ನು ಹೇಗೆ ಸ್ವೀಕರಿಸುವುದು? ನಿಮ್ಮ ಭಾವನೆಗಳನ್ನು ಆರೋಗ್ಯಕರ ಮತ್ತು ಸಹಾನುಭೂತಿಯ ರೀತಿಯಲ್ಲಿ ನಿಭಾಯಿಸುವುದು ನಿಜಕ್ಕೂ ತುಸು ಕಠಿಣವೆನಿಸುತ್ತದೆ. ಸಂತೋಷಕರ ಜೀವನ ನಿರ್ಮಿಸಲು ವಾಸ್ತವತೆಯಲ್ಲಿ ಬದುಕುವುದು ಮುಖ್ಯವಾಗಿದೆ. ಐರಿಸ್ ಮುರ್ಡೊಕ್ ಹೇಳಿದಂತೆ ‘ನಾವು ಕಾಲ್ಪನಿಕ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ. ಭ್ರಮೆಯ ಜಗತ್ತಿನಲ್ಲಿ ಜೀವನದ ಸತ್ಯವನ್ನು ಕಂಡುಕೊಳ್ಳುವುದೇ ದೊಡ್ಡ ಕೆಲಸ..’…

Read More

ಉದಯರಶ್ಮಿ ದಿನಪತ್ರಿಕೆ ಗದಗ: ಕರ್ನಾಟಕ ಎಂದು ಹೆಸರಾಗಿ 50 ವರ್ಷ ಪೂರೈಸಿದ ಸವಿ ನೆನಪಿಗಾಗಿ ಹೆಸರಾಯಿತು ಕರ್ನಾಟಕ ಕನ್ನಡದ ಏಕೀಕರಣದ ಇತಿಹಾಸ ಪರಿಚಸುವ ಪುಸ್ತಕ ಹೊರತರುತಿದ್ದೇವೆ. ಈ ಪುಸ್ತಕಕ್ಕೆ ಈ ಕೆಳಗಿನ ವಿಷಯ ಆಯ್ಕೆ ಮಾಡಿಕೊಂಡು ಲೇಖನಗಳನ್ನು ಬರೆದು ಕಳಿಸಬಹುದುವಿಷಯ:

Read More

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ವಿಶೇಷ ಉಪನ್ಯಾಸ – 271 ಉದಯರಶ್ಮಿ ದಿನಪತ್ರಿಕೆ ವರದಿ: ಸುಧಾ ಪಾಟೀಲಬೆಳಗಾವಿ: ಬೆಂಗಳೂರಿನ ನಿರ್ಮಾಣದಲ್ಲಿ ಎಲೆ ಮಲ್ಲಪ್ಪ ಶೆಟ್ಟರು, ಗುಬ್ಬಿ ತೋಟದಪ್ಪನವರ ಜೊತೆಗೆ ಕೆ. ಪಿ. ಪುಟ್ಟಣ್ಣ ಶೆಟ್ಟರದು ಸಹಿತ ಸಾಹಿತ್ತಿಕ, ಸಾಂಸ್ಕೃತಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಮಹತ್ತರವಾದ ಯೋಗದಾನವಿದೆ ಎಂದು ಹೇಳುತ್ತಾ ಡಾ. ಶಶಿಕಾಂತ ಪಟ್ಟಣ ಸರ್ ಅವರು ತಮ್ಮ ಉಪನ್ಯಾಸವನ್ನು ಪ್ರಾರಂಭ ಮಾಡಿದರು.1856ರ ಏಪ್ರಿಲ್ 29ರಂದು ಬೆಂಗಳೂರು ಬಳಿಯ ಕೃಷ್ಣರಾಜಪುರದಲ್ಲಿ ಎಲ್ಲಪ್ಪಶೆಟ್ಟಿ ಮತ್ತು ಎಲ್ಲಮ್ಮ ದಂಪತಿಗಳ ಸುಪುತ್ರರಾಗಿ ಲಿಂಗಾಯತ ಕುಟುಂಬದಲ್ಲಿ ಜನಿಸಿದರು. ಇವರ ಪ್ರೌಢಶಾಲೆಯ ವಿದ್ಯಾಭ್ಯಾಸ ಬೆಂಗಳೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿಯೂ ಕಾಲೇಜಿನ ವಿದ್ಯಾಭ್ಯಾಸ ಸೆಂಟ್ರಲ್ ಕಾಲೇಜಿನಲ್ಲಿಯೂ ನಡೆಯಿತು.ಕೆ ಪಿ ಪುಟ್ಟಣ್ಣ ಶೆಟ್ಟಿಯವರು 1875ರಲ್ಲಿ ಮೈಸೂರು ಸರ್ಕಾರದಲ್ಲಿ ಕರಣಿಕರಾಗಿ, 1884ರಲ್ಲಿ ಮೈಸೂರು ರಾಜ್ಯ ರೈಲ್ವೆ ಇಲಾಖೆಯಲ್ಲಿ ಟ್ರಾಫಿಕ್ ಮ್ಯಾನೇಜರ್ ಆಗಿ, ನಂತರ 1886 ರಲ್ಲಿ ಸಹಾಯಕ ಕಮಿಷನರ್ ಆಗಿ . ಇದರ ಜೊತೆಗೆ ಜಿಲ್ಲಾಧಿಕಾರಿಗಳಾಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ಉಪಕರಣಗಳನ್ನು ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ನಿಗದಿತ ಅರ್ಜಿ ನಮೂನೆಯನ್ನುvijayapura.nic.in ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅಥವಾ ಕಚೇರಿಗೆ ಭೇಟಿ ನೀಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ದಿನಾಂಕ : 06-01-2025ರೊಳಗೆ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಸ್ಟೇಶನ್ ಬ್ಯಾಕ್ ರೋಡ, ಶಿಕಾರಖಾನೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9972162222 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದಿಂದ ಪ್ರಸಕ್ತ 2024-25ನೇ ಸಾಲಿಗೆ ಆಧುನೀಕರಣ ತಾಂತ್ರಿಕ ತರಬೇತಿ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶದವರಿಗೆ ಮೋಟರ್ ರಿವೈಂಡಿಂಗ್, ಪ್ಲಂಬಿಂಗ್ ಆಂಡ್ ಸ್ಯಾನಿಟರಿ ಮತ್ತು ರಿಪೇರಿಂಗ್ ಆಂಡ್ ಸರ್ವಿಸಿಂಗ್ ಆಫ್ ಹೋಮ್ ಅಪ್ಲೈನ್ಸಿಸ್ ವೃತ್ತಿಗಳಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರು ನಿಗದಿತ ಅರ್ಜಿ ನಮೂನೆಯನ್ನು vijayapura.nic.in ವೆಬ್‍ಸೈಟ್ ಮೂಲಕ ಡೌನ್‍ಲೋಡ್ ಮಾಡಿಕೊಂಡು ಅಥವಾ ಕಚೇರಿಗೆ ಭೇಟಿ ನೀಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅವಶ್ಯಕ ದಾಖಲೆಗಳೊಂದಿಗೆ ದಿನಾಂಕ : 15-12-2024ರೊಳಗೆ ಉಪನಿರ್ದೇಶಕರ ಕಚೇರಿ, ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಸ್ಟೇಶನ್ ಬ್ಯಾಕ್ ರೋಡ, ಶಿಕಾರಖಾನೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9972162222 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳು ವಿಶಾಖ ಪಟ್ಟಣದಲ್ಲಿ ನಡೆಯಲಿರುವ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ತಂಡದ ಕ್ರೀಡಾಪಟುಗಳ ಜತೆಗೆ ತಂಡದ ವ್ಯವಸ್ಥಾಪಕರಾಗಿ ಬಳ್ಳಾರಿಯ ಅಲ್ಲಂ ಸುಮಂಗಲಮ್ಮ ಮಹಿಳಾ ಮಹಾವಿದ್ಯಾಲಯದ ಅಶೋಕ್ ಭಾಗವಹಿಸಲಿದ್ದಾರೆ. ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.

Read More