Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವರದಾನಿ ಲಕ್ಕಮ್ಮದೇವಿ ಪ್ರಧಾನ ವೇದಿಕೆ.ಇವಣಗಿ(ಬಸವನಬಾಗೇವಾಡಿ): ನಾಡಿನಲ್ಲಿ ಆಯೋಜಿಸುವ ಕನ್ನಡ ಸಾಹಿತ್ಯ ಸಮ್ಮೇಳನಗಳು ಭಾಷಾಭಿಮಾನ ಹೆಚ್ಚಲು ಪೂರಕವಾಗುತ್ತದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಸುಕ್ಷೇತ್ರ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರ ಹಮ್ಮಿಕೊಂಡಿದ್ದ ತಾಲೂಕು ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಅನ್ನದ ಹಾಗೂ ಆಡಳಿತ ಭಾಷೆಯಾಗಿರುವದರಿಂದ ನಾವೆಲ್ಲರೂ ಕನ್ನಡ ಕಟ್ಟಾಳುಗಳಾಗಬೇಕು. ೨೦೧೨ ರಲ್ಲಿ ವಿಜಯಪುರದಲ್ಲಿ ಜರುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾನು ಅಭಿಮಾನದಿಂದ ಭಾಗವಹಿಸುವ ಮೂಲಕ ಕನ್ನಡಮ್ಮನ ಸೇವೆ ಮಾಡಿದ್ದನ್ನು ಸ್ಮರಿಸಿಕೊಂಡರು. ಇವಣಗಿ ಗ್ರಾಮದಲ್ಲಿ ಜರುಗಿದ ತಾಲೂಕು ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಗ್ರಾಮಸ್ಥರು ಸೇರಿದಂತೆ ಕಸಾಪ ಪದಾಧಿಕಾರಿಗಳು, ಎಲ್ಲ ಇಲಾಖೆಯ ನೌಕರ ಬಾಂಧವರು,ಶಿಕ್ಷಕರು ಹಗಲಿರುಳು ಶ್ರಮಿಸಿದ್ದು ಶ್ಲಾಘನೀಯ ಎಂದರು.ತಾಲೂಕು ಕಸಾಪ ಮಾಜಿ ಅಧ್ಯಕ್ಷ ನಿಂಗಪ್ಪ ಬೊಮ್ಮನಹಳ್ಳಿ ಮಾತನಾಡಿದರು. ವೇದಿಕೆಯಲ್ಲಿ ರಾಜೇಸಾಬ ಶಿವನಗುತ್ತಿ, ನಿಂಗಪ್ಪ ಬಾಗೇವಾಡಿ, ಯಲ್ಲಪ್ಪ ಇಟಗಿ, ಯಲಗೂರದಪ್ಪ ಸುಭಾನಪ್ಪರ,ದ್ಯಾವಪ್ಪ ರೂಡಗಿ ಇತರರು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕಾಡಳಿತ, ತಾಲೂಕು ಪಂಚಾಯತ್ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯಂಗವಾಗಿ ಸೋಮವಾರ ವಿಕಲಚೇತನ ಸಪ್ತಾಹದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು.ಜಾಥಾ ಉದ್ದೇಶಿಸಿ ವಿಕಲಚೇತನರ ನೋಡಲ್ ಅಧಿಕಾರಿ ರವೀಂದ್ರ ಗುದಗೆನ್ನವರ ಮಾತನಾಡಿ,ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕುರಿತು ಜಾಗೃತಿ, ಸಮಾನ ಅವಕಾಶ ಹಾಗೂ ಸೌಲಭ್ಯ ಕಲ್ಪಿಸುವುದು ಈ ದಿನದ ಉದ್ದೇಶವಾಗಿದೆ. ಇಂದು ವಿಕಲಚೇತನರು ಎಲ್ಲ ರಂಗಗಳಲ್ಲಿ ಸಾಧನೆ ಮಾಡಿದ್ದಾರೆ. ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ವಿಕಲಚೇತನರು ಪಡೆದುಕೊಳ್ಳಬೇಕೆಂದರು.ವಿಕಲಚೇತನ ರಾಜ್ಯ ಪ್ರಶಸ್ತಿ ಪುರಸ್ಕ್ರತರಾದ ಬಂದೇನವಾಜ ವಾಲೀಕಾರ ಮಾತನಾಡಿ, ವಿಕಲಚೇತನರ ಬಗ್ಗೆ ಸಮಾಜ ಗೌರವದಿಂದ ಕಾಣುವ ಮೂಲಕ ಅವರಿಗೂ ಎಲ್ಲರಂತೆ ಬದುಕಲು ಅವಕಾಶಕೊಡಬೇಕು. ವಿಕಲಚೇತನರಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸುವ ಮೂಲಕ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಡಾ.ರಾಜೇಂದ್ರ ಪ್ರಸಾದ ಅವರ ಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು.ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ,…

Read More

ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯದಲ್ಲಿ ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶ ಇಟ್ಟುಕೊಂಡು ಸರ್ಕಾರ ಅನ್ನಭಾಗ್ಯ ಯೋಜನೆ ಸೇರಿ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಅವರು ಮಂಗಳವಾರ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿ ಮಾತನಾಡಿದರು.ಈ ಹಿಂದೆ ದೇವರಾಜ್ ಅರಸು ಅವರು ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯಿಂದ ಬಡವರಿಗೆ ನ್ಯಾಯ ಒದಗಿಸಿದ್ದರು. ಅವರ ಮಾದರಿಯಲ್ಲಿಯೇ ರಾಜ್ಯದ ಎಲ್ಲಾ ಜನರಿಗೆ ಸಮಬಾಳು, ಸಮಪಾಲು ಎನ್ನುವ ತತ್ವದ ಅಡಿಯಲ್ಲಿ ಇಂದಿನ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.೨೦೧೩ ರಿಂದ ೨೦೧೮ರ ವರೆಗೆ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ, ದೀನ ದಲಿತರಿಗಾಗಿ ೮೫೭೧೮ ಕೋಟಿ ವೆಚ್ಚ ಮಾಡಿದೆ. ನೀರಾವರಿಗಾಗಿ ೪೦೦೦೦ ಕೋಟಿ ವೆಚ್ಚ ಮಾಡಿದೆ. ಪ್ರಸಕ್ತ ವರ್ಷದಲ್ಲಿ ೫೮೦೦೦…

Read More

ನಿವೃತ್ತಿಗೊಂಡ ರಮಾನಂದ ಸ್ವಗ್ರಾಮಕ್ಕೆ ಆಗಮನ | ಅದ್ದೂರಿ ಸ್ವಾಗತ ಮತ್ತು ಗೌರವ ಉದಯರಶ್ಮಿ ದಿನಪತ್ರಿಕೆ ಚಡಚಣ: ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ ಕುಟುಂಬದ ಬಗ್ಗೆ ಚಿಂತಿಸದೇ ದೇಶ ರಕ್ಷಣೆಗಾಗಿ ತ್ಯಾಗಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ಭಾರತೀಯ ಸೈನಿಕರ ಸೇವೆ ನಿಜಕ್ಕೂ ಶ್ಲಾಘನೀಯವಾದುದು ಎಂದು ನಿವೃತ್ತ ಶಿಕ್ಷಕ ಎಚ್.ಎಸ್.ಬನಸೋಡೆ ಹೇಳಿದರು.ಮಂಗಳವಾರದಂದು ಶಿರಾಡೋಣ ಗ್ರಾಮದ ಬೀರೇಶ್ವರ ದೇವಾಸ್ಥಾನದ ಆವರಣದಲ್ಲಿ ಗ್ರಾಮದ ಅಭಿಮಾನ ಬಳಗ ಹಾಗೂ ಗೆಳೆಯರ ಬಳಗದವರು ಸೇರಿದಂತೆ ಗ್ರಾಮಸ್ಥರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೨೪ ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧ ರಮಾನಂದ ಭೀಮಾಶಂಕರ ಕುಲಕರ್ಣಿ ಅವರ ಸ್ವಾಗತ ಮತ್ತು ಸನ್ಮಾನ ಸಮಾರಂಭದ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು. ಸೈನ್ಯಕ್ಕೆ ಸೇರಬೇಕಾದರೇ ಪುಣ್ಯ ಮಾಡಿರಬೇಕು. ಅಂತಹ ಪಣ್ಯ ರಮಾನಂದ ಕುಲಕರ್ಣಿರವರು ಪಡೆದುಕೊಂಡು ಬಂದಿದ್ದರೂ ಎನ್ನುವುದರಿಂದಲೇ ಅವರ ೨೪ ವರ್ಷ ಸೇನೆಯಲ್ಲಿನ ಸುದೀರ್ಘ ಭಾರತಾಂಭೆ ಸೇವೆಗೆ ಇಂದು ಗೌರವ ಸಿಕ್ಕಂತಾಗಿದೆ. ರಮಾನಂದ ಅವರಂತೆ ಈ ಗ್ರಾಮದಲ್ಲಿ ಇನ್ನು ಮುಂದೆ ನೂರಾರು ಸಂಖ್ಯೆ ಯುವಕರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಲೋಕಸಭಾ ಸಂಸದರಾದ ರಮೇಶ ಜಿಗಜಿಣಗಿ ಅವರು ಕೇಂದ್ರ ರೇಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಜಿಲ್ಲೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಸಲ್ಲಿಸಿ ಮನವಿ ಮಾಡಿಕೊಂಡಿದ್ದಾರೆ.ಮಂಗಳವಾರ ರೇಲ್ವೆ ಸಚಿವರನ್ನು ಭೇಟಿ ಮಾಡಿ ೬೫೩೫/೩೬ ಗೋಳಗುಮ್ಮಟ ಎಕ್ಸಪ್ರೆಸ್ ಸೂಪರ್ ಫಾಸ್ಟ್ ಪರಿವರ್ತಿಸುವುದು, ಪ್ರತಿದಿನ ೨೦೬೫೭/೨೦೬೫೮ ಹುಬ್ಬಳ್ಳಿ ದೆಹಲಿ ಹಾಗೂ ೧೭೩೨೩/೧೭೩೨೪ ಹುಬ್ಬಳ್ಳಿ ವಾರಣಸಿ ದಿನಾಂಪ್ರತಿ ಮಾಡುವುದು ಮತ್ತು ವಿಜಯಪುರ ಮಂಗಳೂರು ಹಾಗೂ ವಿಜಯಪುರ ಯಶವಂತಪುರ ತಾತ್ಕಾಲ್ ರೈಲುಗಳನ್ನು ಖಾಯಂ ಮಾಡಿ ಓಡಿಸುವ ಬೇಡಿಕೆಯನ್ನು ಸಲ್ಲಿಸಿದ್ದು, ಈ ಬೇಡಿಕೆಗೆ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರದಲ್ಲಿ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಹಣ, ಸಂಪತ್ತು ಹಾಗೂ ಜಮೀನು ಇದ್ದವನಿಗೆ ಸಧ್ಯದ ಜಗತ್ತಿನಲ್ಲಿ ಬೆಲೆ ಇಲ್ಲ, ಯಾರ ಹತ್ತಿರ ವಿಧ್ಯೆ ಇದೆಯೋ ಆ ವ್ಯಕ್ತಿಗೆ ಜಗತ್ತಿನಲ್ಲಿ ಗೌರವದ ಬೆಲೆ ಇದೆ ಎಂದು ಬಸವನ ಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕನಮಡಿಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ಇವರ ಸಹಯೋಗದೊಂದಿಗೆ ಮಾಣಿಕೇಶ್ವರಿ ಹಾಗೂ ಚೈತನ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಯಾವ ಮಗುವಿನಲ್ಲಿ ಯಾವ ಪ್ರತಿಭೆ ಇದೆ ಎಂದು ಶಿಕ್ಷಕರು ಗುರ್ತಿಸಬೇಕು. ಮಕ್ಕಳ ಪ್ರತಿಭೆ ಗುರ್ತಿಸಿ ಪ್ರೋತ್ಸಾಹಿಸಬೇಕು. ಪ್ರತಿಯೊಂದು ಮಕ್ಕಳಲ್ಲಿ ವಿಶೇಷ ಪ್ರತಿಭೆ ಇದ್ದೆ ಇರುತ್ತದೆ. ಮಕ್ಕಳನ್ನು ಎತ್ತರ ಮಟ್ಟಕ್ಕೆ ಒಯ್ಯುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ನಿರಂತರ ಅಧ್ಯಯನ ಮಾಡುತ್ತಾ ಇರಬೇಕು. ಆಗ ಮಕ್ಕಳ ವಿಧ್ಯೆ ಹೆಚ್ಚಾಗುತ್ತದೆ.ಶಿಕ್ಷಕರು ಶಿಲ್ಪಿಗಳು ಇದ್ದಂತೆ, ಮಕ್ಕಳ ಪ್ರತಿಭೆ ಗುರ್ತಿಸಿದಾಗ ಜಗತ್ತೆ ಅವರನ್ನು…

Read More

*ಉದಯರಶ್ಮಿ ದಿನಪತ್ರಿಕೆ* ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ 2024-25ನೇ ಸಾಲಿನ ಶೇ24.10, ಶೇ. 7.25, ಹಾಗೂ ಶೇ.5ರಷ್ಟು ಯೋಜನೆಯ ಕಲ್ಯಾಣ ಕಾರ್ಯಕ್ರಮಗಳಡಿ ಸಹಾಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ (ಶಿಷ್ಯವೇತನ), ಬಡತನ ರೇಖೆಗಿಂಡ ಕೆಳಗಿರುವವರಿಗೆ 24/7 ಕುಡಿಯುವ ನೀರು ಸಂಪರ್ಕ, ವಿಶೇಷಚೇತನರಿಗೆ ಇಲೆಕ್ಟ್ರಿಕಲ್ ತ್ರಿಚಕ್ರ ವಾಹನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಫಲಾನುಭವಿಗಳು ನಿಗದಿತ ನಮೂನೆ ಅರ್ಜಿಯನ್ನು ಪಾಲಿಕೆ ಕಚೇರಿಯಲ್ಲಿ ಪಡೆದುದಿನಾಂ ಕ : 20-12-2024ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸೂಚನಾ ಫಲಕ ಅಥವಾ ವಿಷಯ ನಿರ್ವಾಹಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನದಲ್ಲಿ ಸಾಧನೆ ಮಾಡಲು ಮನಸ್ಸು ಮುಖ್ಯ, ಮನಸ್ಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷ ಚೇತನರು ಒಂದು ವಿಶೇಷ ಸದೃಢ ಮನಸ್ಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ-ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸೊತ್ತು. ದೃಢ ಮನಸ್ಸು ಹೊಂದಿ, ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಹೇಳಿದರು.ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಯಶಸ್ವಿಗೆ ಸಹಕಾರಿಯಾಗಿದೆ. ಜೀವನದಲ್ಲಿ ಸಾಧನೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಯುವಜನರಿಗೆ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ಡಿ.10ರಿಂದ 17ರವರೆಗೆ 8 ದಿನಗಳ ಆಯೋಜಿಸಲಾಗಿದೆ.ಆಸಕ್ತ ಯುವಕ-ಯುವತಿಯರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿ ಅರ್ಜಿ ಪಡೆದು, ದಿನಾಂಕ : 08-12-2024ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: 08352-251085, ಮೊ: 8792185141 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More