Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇಂದ್ರ ಪುರಸ್ಕೃತ ಶಿಷ್ಯವೇತನ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇ-ಕೆವೈಸಿ ಬಯೋ ಮೆಟ್ರಿಕ್ ಮಾಡುವುದು ಕಡ್ಡಾಯವಾಗಿರುತ್ತದೆ.ಈಗಾಗಲೇ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಬಯೋಮೆಟ್ರಿಕ್ ಇ-ದೃಢೀಕರಣ ಮಾಡಲು ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಮತ್ತು ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಯಲ್ಲಿ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ಮತ್ತು ಆಧಾರ ಕಾರ್ಡ ಪ್ರತಿಯೊಂದಿಗೆ ಬಯೋಮೆಟ್ರಿಕ್ ಇ-ದೃಢೀಕರಣವನ್ನು ಉಚಿತವಾಗಿ ಮಾಡಿಕೊಂಡು ಶಿಷ್ಯವೇತನ ಪಡೆಯಲು ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಘಟನೆ, ಶಿಸ್ತು, ಸಮಯ ಪಾಲನೆ, ದೇಶ ಸೇವೆಗೆ ಸದಾ ಸಿದ್ದವಾಗಿದ್ದು, ಸೇವೆಯೇ ತನ್ನ ಉಸಿರಾಗಿಸಿಕೊಂಡು ಸೇವೆ ಗೈಯುತ್ತಿರುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪ್ರಾಚಾರ್ಯೆ ಡಾ. ಆರ್ ಎಂ ಮಿರ್ದೆ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಜರುಗಿದ ೨೦೨೪-೨೫ ಪ್ರಸಕ್ತ ವರ್ಷದ ರೋವರ್ಸ್ ಮತ್ತು ರೆಂಜರ್ಸ ವಿದ್ಯಾರ್ಥಿಗಳಿಗೆ ದೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಉದ್ದೇಶಗಳು ಸಿದ್ದಾಂತಗಳನ್ನು ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪ. ಅದರಂತೆ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲಿ ಇಂತಹ ಬೃಹತ್ ಸಂಘಟನೆಯಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ದಿದ್ದು, ನಗರದ ಮೂರು ಜನ ಗಣ್ಯರು ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದಾರೆ.ಕಾಂಗ್ರೆಸ್ ಮುಖಂಡ ಹಮೀದ್ ಮುಶ್ರಿಫ್ ಅವರು ರೂ.1.50 ಲಕ್ಷ (1 ಲಕ್ಷ 50 ಸಾವಿರ ರೂಪಾಯಿ) ಹಣವನ್ನು ಪ್ರಾಯೋಜಕತ್ವಕ್ಕಾಗಿ ನೆರವು ನೀಡಿದ್ದಾರೆ.ಅದೇ ರೀತಿ ನಗರದ ಖ್ಯಾತ ಉದ್ಯಮಿ ಜೆ. ಜಿ. ಪಾರೇಖ ಅವರು ರೂ. 1.01 (1 ಲಕ್ಷ 1 ಸಾವಿರ ರೂಪಾಯಿ ಹಣವನ್ನು) ನೀಡಿದ್ದಾರೆ. ಈ ಹಣವನ್ನು ವೃಕ್ಷಥಾನ್ ಹೆರಿಟೇಜ್ ರನ್ 21 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುತ್ತಿರುವ ಬಡ ಯುವಕರ ನೋಂದಣಿಗೆ ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.ನಗರದ ಗಣ್ಯ ವ್ಯಾಪಾರಸ್ಥ ಶರಣು ಗುಡ್ಡೊಡಗಿ ಅವರು ರೂ. 75 ಸಾವಿರ ಹಣವನ್ನು ಪ್ರಾಯೋಜಕತ್ವಕ್ಕಾಗಿ ನೀಡಿದ್ದಾರೆ.ಹಮೀದ್ ಮುಶ್ರಿಫ್ ಮತ್ತು ಶರಣು ಗುಡ್ಡೊಡಗಿ ಅವರು ಕಳೆದ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್ ಓಟಕ್ಕೂ ಪ್ರಾಯೋಜಕತ್ವಕ್ಕಾಗಿ ಆರ್ಥಿಕ ನೆರವು ನೀಡಿದ್ದು ಗಮನಾರ್ಹವಾಗಿದೆ. ಮೂರೂ ಜನ ಪ್ರಾಯೋಜಕರಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವೃಕ್ಷಥಾನ್ ಹೆರಿಟೇಜ್ ರನ್-2024ಕ್ಕೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದ್ದು, ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಹೆಸರು ನೋಂದಣಿ ಅವಧಿಯನ್ನು ಡಿಸೆಂಬರ್ 7ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಪ್ರೊಮೊಷನ್ ಗಾಗಿ ಇಂದು ರವಿವಾರ ಬೆಳಿಗ್ಗೆ ಭೂತನಾಳ ಕೆರೆಯ ಹಿಂಭಾಗದಲ್ಲಿ ಕರಾಡದೊಡ್ಡಿ ಬಳಿ ಇರುವ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ ನಡೆದ 5 ಕಿ. ಮೀ. ಓಟ ನಡೆಯಿತು. ಈ ಓಟಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ ಅವರೊಂದಿಗೆ ಜಂಟಿಯಾಗಿ ಚಾಲನೆ ನೀಡಿದ ಬಳಿಕ ಟಿ. ಭೂಬಾಲನ್ ಅವರು ಮಾತನಾಡಿದರು.ಈ ಬಾರಿಯ ಓಟಕ್ಕೆ ಈಗಾಗಲೇ ಸಾವಿರಾರು ಹೆಸರು ನೋಂದಾಯಿಸಿದ್ದಾರೆ. ಆದರೆ, ಇನ್ನೂ ಹಲವಾರು ಜನರು ಹೆಸರು ನೋಂದಾಯಿಸಲು ಅವಧಿಯನ್ನು ವಿಸ್ತರಿಸುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರ ಬೇಡಿಕೆಗೆ…
ಉದಯರಶ್ಮಿ ದಿನಪತ್ರಿಕೆ ಚಡಚಣ:ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಬೇಕಾದರೆ ದೃಡ ಸಂಕಲ್ಪ ಮಾಡಬೇಕೆಂದು ಇಸ್ರೋ ವಿಜ್ಞಾನಿ ಸಂಜೀವ ಗೌರ ಹೇಳಿದರು.ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ವಿಜ್ಞಾನಿಗಳಾಗಬೇಕಾದರೆ ಕಷ್ಟ ಪಟ್ಟು ಓದಬೇಕಾಗುತ್ತದೆ. ಸಂಶೋದನೆ ಎಂಬುವದು ಒಂದರೆಡು ದಿನದಲ್ಲಿ ಆಗುವಂತಹದಲ್ಲ ಅದಕ್ಕೆ ನಿರಂತರ ಅಧ್ಯಯನ ಬೇಕಾಗುತ್ತದೆ. ಇಸ್ರೋ ಸಂಸ್ಥೆಯಲ್ಲಿ ಅನೇಕ ವಿಜ್ಞಾನಿಗಳು ಹಳ್ಳಿಯಿಂದಲೆ ಬಂದವರಾಗಿದ್ದಾರೆ. ಸಾಧನೆ ಮಾಡಲು ದೃಡ ಮನಸ್ಸಿದ್ದರೆ ಸಾಕು ಎಂದು ಹೇಳಿದರು.ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಚಂದ್ರಯಾನ-೩ ರಲ್ಲಿ ದೇಶದ ವಿಜ್ಞಾನಿಗಳು ಮಾಡಿದ ಸಾದನೆಯ ಕುರಿತು ಹೇಳಿದರು. ಇದಲ್ಲದೆ ಬಾಹ್ಯಾಕಾಶ ಕೇಂದ್ರದಲ್ಲಿ ವಿಜ್ಞಾನಿಗಳು ಯಾವ ರೀತಿ ಜೀವನ ನಡೆಸುತ್ತಾರೆ ಅಲ್ಲಿ ಅವರು ಎದುರಿಸುವ ಸಮಸ್ಯೆಗಳ ಕುರಿತು ಸವಿಸ್ಥಾರವಾಗಿ ಹೇಳಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಮನೋಜ ಕಟಗೇರಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಎಸ್.ಎಸ್. ಚೋರಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕ ವಿ.ಸಿ.ಬಾಡನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಪಾರ್ವತಿ ತಂಬಾಕೆ ಅವರು ಸಲ್ಲಿಸಿದ್ದ “ಆ್ಯನ್ ಅನಾಲಿಟಿಕಲ್ ಸ್ಟಡಿ ಆಫ್ ಸೆಲೆಕ್ಟೆಡ್ ಫಿಜಿಕಲ್, ಫಿಜಿಯೋಲಾಜಿಕಲ್, ಸೈಕಲಾಜಿಕಲ್ ಕಾಂಪೊನೆಂಟ್ಸ್ ಆ್ಯಂಡ್ ಡಿಫರೆಂಟ್ ಲೆವೆಲ್ ಆಫ್ ಪರ್ಫಾರ್ಮೆನ್ಸ್ ಆನ್ ನಾರ್ಥ ಕರ್ನಾಟಕ ಸೈಕ್ಲಿಸ್ಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.ಪಾವರ್ತಿ ತಂಬಾಕೆ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ. ಸಕ್ಪಾಲ ಹೂವಣ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಪಾವರ್ತಿ ತಂಬಾಕೆ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಕೇರಳದ ಕಾಸರಗೋಡಿನ ಹಿರಿಯ ಸಾಹಿತಿ ರಾಧಾಕೃಷ್ಣಾ ಉಳಿಯತ್ತಡ್ಕ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡದ ಕವಿಗಳು ಸೂಕ್ಷ್ಮ ಸಂವೇದನಾ ಶೀಲತ್ವದಿಂದ ಕನ್ನಡ ನಾಡಿನ ಪರಿಸರದ ಪ್ರಭಾವಕ್ಕೆ ಒಳಪಟ್ಟು, ನಾಡು – ನುಡಿ ಮೇಲೆ ಬೆಳಕು ಚೆಲ್ಲುವ ಅಮೂಲ್ಯವಾದ ಕೃತಿಗಳನ್ನು ರಚಿಸುವ ಮೂಲಕ ಸಂಸ್ಕೃತಿಕ ಪರಂಪರೆಯನ್ನು ಕಟ್ಟಿ ಬೆಳಿಸಿದ್ದಾರೆ. ಯುವ ಕವಿ ಕಲ್ಲಪ್ಪ ಶಿವಶರಣ ಅವರು ನಮ್ಮ ಹಿರಿಯ ತಲೆಮಾರಿನ ಕವಿಗಳು ಹಾಕಿಕೊಟ್ಟ ಮಾರ್ಗದಲ್ಲಿ ನವ ಕವಿತೆಗಳನ್ನು ಬರೆಯುವ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸತನ ಸೃಷ್ಠಿಸುವ ಭರವಸೆಯ ಕವಿಯಾಗಿ ಹೊರಹೊಮ್ಮಿದ್ದಾರೆ ಎಂದು ಚನ್ನಬಸವ ಪಟ್ಟದೇವರು ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ, ನೆರೆಯ ಕೇರಳದ ಕಾಸರಗೋಡಿನ ಹಿರಿಯ ಸಾಹಿತಿ ಡಾ. ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರು ಹೇಳಿದರು.ನಗರದ ಅಷ್ಟಫೈಲ್ ಬಂಗ್ಲೆ ಹತ್ತಿರದ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ವಿವಿದ್ಧೋದ್ದೇಶಗಳ ಸಂಸ್ಥೆಯ ನೂತನ ಕಛೇರಿಯಲ್ಲಿ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ವಿವಿದ್ಧೋದ್ದೇಶಗಳ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಯುವ ಕವಿ ಕಲ್ಲಪ್ಪ ಶಿವಶರಣ ಅವರ ಚೊಚ್ಚಲ ಕವನ ಸಂಕಲನ…
’ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ’ ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರು ಮೊ:9844013068 ಉದಯರಶ್ಮಿ ದಿನಪತ್ರಿಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳಿಗೆ ಅಜೀವ ಕಾರ್ಯಕರ್ತರು ಅಥವಾ ಸದಸ್ಯರ ಅವಶ್ಯಕತೆ ಇದೆಯೇ..ಪ್ರಜಾಪ್ರಭುತ್ವದ ಕ್ರಮಬದ್ಧ ಮುಂದುವರಿಕೆಗಾಗಿ, ಆಡಳಿತಾತ್ಮಕ ಕೆಲಸಗಳಿಗಾಗಿ, ಚುನಾವಣಾ ವ್ಯವಸ್ಥೆ ಇದೆ. ನಮ್ಮ ಪ್ರತಿನಿಧಿಗಳನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಈ ಚುನಾವಣಾ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಒಮ್ಮೆ ಚುನಾವಣೆ ನಡೆದು ಸೇವೆಗಾಗಿಯೋ, ಅಧಿಕಾರಕ್ಕಾಗಿಯೋ ಒಟ್ಟಿನಲ್ಲಿ ಬಹುಮತ ಪಡೆದ ವ್ಯಕ್ತಿಯೊಬ್ಬ ಜನ ಪ್ರತಿನಿಧಿಯಾಗಿ ಆಯ್ಕೆಯಾದ ನಂತರ ಈ ಕಾರ್ಯಕರ್ತರಿಗೆ ಇರುವ ಕೆಲಸವಾದರೂ ಏನು..ನಾವೆಲ್ಲರೂ ಭಾರತೀಯರೇ, ವಿವಿಧ ಪಕ್ಷಗಳ ಬೆಂಬಲವನ್ನು ಆ ಸಂದರ್ಭಕ್ಕೆ ತಕ್ಕಂತೆ ಮಾಡುತ್ತೇವೆ. ಗೆದ್ದ ನಂತರ ಅಭ್ಯರ್ಥಿಗಳು ತಮ್ಮ ತಮ್ಮ ಸಂವಿಧಾನಾತ್ಮಕ ಕೆಲಸಗಳನ್ನು ಕಾನೂನು ಅಡಿಯಲ್ಲಿ ಮಾಡುತ್ತಾರೆ. ಏಕೆಂದರೆ ಗೆದ್ದ ನಂತರ ಆತ ಯಾವುದೋ ಒಂದು ಪಕ್ಷಕ್ಕೆ ಸೀಮಿತವಾಗಿರುವುಳಿದಿಲ್ಲ. ಎಲ್ಲಾ ಸಾರ್ವಜನಿಕರಿಗೂ ಆತ ಸಮಾನ ಪ್ರತಿನಿಧಿ. ಇಂತಹ ಸಂದರ್ಭದಲ್ಲಿ ಕಾರ್ಯಕರ್ತರು ಮಾಡಬಹುದಾದ ಕೆಲಸವಾದರೂ ಏನು..ಸುಮ್ಮನೆ ಅನಾವಶ್ಯಕವಾಗಿ ಎಂದೋ ಬರುವ ಚುನಾವಣೆಗಾಗಿ, ಯಾವುದೋ ಪಕ್ಷದ ಬೆಂಬಲಿಗನಾಗಿ,…
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಜ್ಞಾನ ಜ್ಯೋತಿ ಶ್ರೀ ಸಿದ್ಧೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಾನಂದ ಗಣೇಶಮಠ ಇವರು ಜಿಲ್ಲಾ ಪಂಚಾಯತ್ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ಸದನ ಬೆಂಗಳೂರು ಇವರ ಸಹಯೋಗದಲ್ಲಿ ಇತ್ತೀಚೆಗೆ ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.ಈ ವೇಳೆ ಅಧಿಕಾರಿಗಳು ಶಿಕ್ಷಕ ಶಿವಾನಂದ ಗಣೇಶಮಠ ಅವರಿಗೆ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದನೆ ಸಲ್ಲಿಸಿದರು.
ಶ್ರೀ ಗೌರಿ ಶಂಕರ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ ರಕ್ತದಾನ ಶಿಬಿರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮೀಪದ ಅಸ್ಕಿ ಗ್ರಾಮದಲ್ಲಿ ಶ್ರೀ ಗೌರಿ ಶಂಕರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ವಿಜಯಪುರ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂದಗಿ, ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಕಿ, ಶ್ರೀ ಗೌರಿ ಶಂಕರ ಜಾತ್ರಾ ಕಮಿಟಿ ಅಸ್ಕಿ ಮತ್ತು ಗ್ರಾಮ ಪಂಚಾಯತ್ ಕಾರ್ಯಾಲಯ ಹಾಗೂ ಗ್ರಾಮದ ವಿವಿಧ ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಕಾರ್ಯಕ್ರಮ ಉದ್ದೇಶಿಸಿ ಎಸ್ ಡಿ ಕುಲಕರ್ಣಿ, ಅನಿಲ್ ಕುಮಾರ್ ಕಿರಣಗಿ, ಎಂ ಡಿ ಮೋತಿಬಾಯಿ ಅವರು ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸಿ ಎಂಬ ಘೋಷದೊಂದಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಮತ್ತು ರಕ್ತದಾನ ಮಾಡುವುದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ, ರಕ್ತದಾನವನ್ನು ೧೮ ವರ್ಷ ಮೇಲ್ಪಟ್ಟ ಎಲ್ಲಾ ಆರೋಗ್ಯವಂತ ಯುವಕ ಯುವತಿಯರು ವರ್ಷದಲ್ಲಿ ಎರಡು ಸಲ ರಕ್ತ…
