Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಶಿಕ್ಷೆ ಒಳಪಡಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಎಸ್ಎಸ್ ಮುಖಂಡ ಶರಣು ಶಿಂಧೆ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಸಮಾಜದಲ್ಲಿ ಗೂಂಡಾ ವರ್ತನೆ ತಾಂಡವಾಡುತ್ತಿದೆ. ಹೊಟ್ಟೆಪಾಡಿಗಾಗಿ ಅಲೆದಾಡುತ್ತಿರುವ ಕೂಲಿ ಕಾರ್ಮಿಕರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವುದು ಯಾವ ನ್ಯಾಯ. ಅವರು ತಪ್ಪು ಮಾಡಿದ್ದರೆ ಅದನ್ನ ತಿಳಿ ಹೇಳುವಲ್ಲಿ ಮುಂದಾಗಬೇಕು ಹೊರತು ಕೂಲಿ ಕಾರ್ಮಿಕರು ಎಂದು ಅವರ ಮೇಲೆ ಹೀನ ಕೃತ್ಯ ಮಾಡುವುದು ಸಮಾಜದ ವಿರೋಧಿ ಕಾರ್ಯ ಮತ್ತು ಇದು ದೊಡ್ಡ ಅಪರಾಧ. ಕಾರ್ಮಿಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ ತಕ್ಷಣವೇ ವಿಜಯಪುರ ಗ್ರಾಮೀಣ ಪೊಲೀಸ್ ಇಲಾಖೆಯವರು ಅಪರಾದಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದನ್ನು ದಲಿತ ಸಂಘರ್ಷ…
ವಿವಿಧ ಇಲಾಖೆಯ ಹಾಸ್ಟೇಲ್ & ವಸತಿ ಶಾಲಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದರಣಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ , ಕ್ರೈಸ್ ವಸತಿ ನಿಲಯಗಳಲ್ಲಿ ಹಾಸ್ಟೇಲ್ & ವಸತಿ ಶಾಲಾ ಹೊರಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿಯನ್ನು ಕರ್ನಾಟಕ ರಾಜ್ಯ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಈ ಅಹೋರಾತ್ರಿ ಹೋರಾಟವು ೩ನೇ ದಿನಕ್ಕೆ ಮುಂದುವರೆದಿದೆ.ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, ೧೫೦೦ ಜನ ಹೊರಗುತ್ತಿಗೆ ನೌಕರರು ಕಳೆದ ೧೫- ೨೦ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇವರಿಗೆ ಯಾವದೇ ಸೇವಾ ಭದ್ರತೆ ಇಲ್ಲಾ, ಇವರ ಸ್ಥಳಗಳಲ್ಲಿ ಖಾಯಂ ನೌಕರರ ವರ್ಗಾವಣೆ ಯಾದರೆ, ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಈ ನೌಕರರು ಮುಂದಿನ ದಿನಗಳಲ್ಲಿ ತಮ್ಮ ಬದುಕು ಒಳ್ಳೆಯದಾಗಬಹುದೆಂದು ನಂಬಿ ೫೦೦ ರುಪಾಯಿಯಿಂದ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಾಟಕಗಳು ಬದುಕಿನ ಎಲ್ಲ ಮೌಲ್ಯಗಳನ್ನು ಬಿತ್ತುತ್ತವೆ. ಪ್ರತೀ ನಾಟಕಗಳು ಜನತೆಗೆ ಒಂದು ಹೊಸದಾದ ದಿವ್ಯ ಸಂದೇಶವನ್ನು ಕೊಡುತ್ತವೆ ಎಂದು ಕುಂಟೋಜಿ ಸಂಸ್ಥಾನ ಬಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ನುಡಿದರು.ಪಟ್ಟಣದ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ವೇದಿಕೆಯಲ್ಲಿ ವಿಶ್ವ ದಾಸೋಹದ ದಿನಾಚರಣೆಯ ಅಂಗವಾಗಿ ಹಾನಗಲ್ಲನ ಲಿಂ.ಕುಮಾರೇಶ್ವರ ಮಹಾಸ್ವಾಮಿಗಳು, ಸಿದ್ಧಗಂಗಾಮಠದ ಲಿಂ.ಶಿವಕುಮಾರ ಮಹಾಸ್ವಾಮಿಗಳು, ತಾಲೂಕಿನ ಮಡಿಕೇಶ್ವರ ಗ್ರಾಮದ ಲಿಂ.ಚನ್ನಣ್ಣ ದೇಸಾಯಿ ಅವರ ಪುಣ್ಯ ಸ್ಮರಣೋತ್ಸವದ ನೆನಪಿನಲ್ಲಿ ಸಾಣೆಹಳ್ಳಿ ಶಿವಸಂಚಾರ ನಾಟಕೋತ್ಸವದ ವತಿಯಿಂದ ಪ್ರಾರಂಭವಾದ ಮೂರು ದಿನಗಳ ನಾಟಕೋತ್ಸವದ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಒಳ್ಳೆಯ ನಾಟಕಗಳನ್ನು ನೋಡಿ ಅದರಲ್ಲಿನ ಬದುಕಿನ ಪಾಠಗಳನ್ನು, ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಜೀವನ ಹಸನಾಗಿರುತ್ತದೆ ಎನ್ನುತ್ತ, ಮೊದಲನೇ ದಿನದ ನಾಟಕ ನಾಟಕದ ಹೆಸರು ಬಂಗಾರದ ಮನುಷ್ಯ. ಲಿಂ.ಚನ್ನಣ್ಣ ದೇಸಾಯಿ ಅವರ ವ್ಯಕ್ತಿತ್ವ ಬಂಗಾರದ ಮನುಷ್ಯರ ತರವೇ ಆಗಿತ್ತು. ಅವರ ಪುತ್ರ ಪ್ರಭುಗೌಡ ದೇಸಾಯಿ ಅವರು ಸಮಾಜಕ್ಕೆ ಒಳ್ಳೆಯ ಕೊಡುಗೆಗಳನ್ನು ನೀಡುತ್ತ ಅವರದೇ ಹಾದಿಯಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈಬಿಡದಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡು ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.ರಾಜ್ಯದ ೪೩೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ವರ್ಷದಿಂದ ಗೌರವಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ೧೦,೯೭೬ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಯುಜಿಸಿ ೨೦೧೮ ರ ಮಾರ್ಗಸೂಚಿ ಸೇವೆಯಿಂದ ಕೈಬಿಡದಂತೆ ಆಗ್ರಹಿಸಲಾಯಿತು.೨೦೨೪-೨೫ನೇ ಸಾಲಿಗೆ ಸಂಬಂಧಿಸಿದಂತೆ ಅನ್ವಯ ೨೦೨೪-೨೫ನೇ ಹೊಸದಾಗಿ ಆಯ್ಕೆ ಮಾಡಿಕೊಳ್ಳಲು ಮುಂದಾಗಿದೆ. ಇದರಿಂದ ೫೩೫೩ ಕ್ಕೂ ಹೆಚ್ಚು ಉಪನ್ಯಾಸಕರು ಸೇವೆಯಿಂದ ಹೊರಗುಳಿಯುವಂತಾಗಿದೆ. ಇದರಿಂದ ಇನ್ನುಳಿದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವಾಗಲಿದೆ. ಕಾರಣ ೧೦,೭೯೬ ಅತಿಥಿ ಉಪನ್ಯಾಸರನ್ನು ಕರ್ತವ್ಯ ನಿರ್ವಹಿಸುವಂತೆ ಕ್ರಮ ವಹಿಸಬೇಕು. ಈ ಉಪನ್ಯಾಸಕರನ್ನು ಕೈ ಬಿಡುವದರಿಂದ ದೇ ವೃತ್ತಿಯನ್ನೇ ನಂಬಿರುವ ಕುಟುಂಬಗಳು ಬೀದಿಗೆ ಬೀಳುವಂತಾಗುತ್ತದೆ. ಇನ್ನೊಂದೆಡೆ ಬಹುತೇಕರು ಯಾವುದೇ ನೌಕರರಿಗೆ ಅರ್ಜಿ ಹಾಕಲು…
ಉದಯರಶ್ಮಿ ದಿನಪತ್ರಿಕೆ ಗೋಲಗೇರಿ: ವಚನಗಳಲ್ಲಿ ತಮ್ಮ ಸಾತ್ವಿಕ ಕೋಪತಾಪಗಳನ್ನು ವ್ಯಕ್ತಪಡಿಸುವ ಅಂಬಿಗರ ಚೌಡಯ್ಯ ಮಾನವೀಯ ಮೌಲ್ಯಗಳನ್ನು ಬೆಳಸಿಕೊಂಡಿದ್ದ ಶರಣರು ಎಂದು ಯುವ ಮುಖಂಡ ಮಡಿವಾಳ ನಾಯ್ಕೋಡಿ ಹೇಳಿದರು.ಸಿಂದಗಿ ತಾಲ್ಲೂಕಿನ ಗೋಲಗೇರಿ ಗ್ರಾಮದ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಸಂದರ್ಭದಲ್ಲಿ ಡಿ.ಎಸ್.ಎಸ್ ಸಂಚಾಲಕ ಶ್ರೀಶೈಲ ಜಾಲವಾದಿ, ರಮೇಶ ತಳವಾರ, ಸಲೀಮ ಮುಲ್ಲಾ ಶರಣರ ಜೀವನ ಕುರಿತು ಮಾತನಾಡಿದರುಈ ಕಾರ್ಯಕ್ರಮದಲ್ಲಿ ಗೋಲಗೇರಿ ಗ್ರಾಪಂ ಸದಸ್ಯರಾದ ಸೈಪನ್ ಕೋರವಾರ, ಮಲ್ಲಣ್ಣ ನಾಯ್ಕೋಡಿ ಬೆಂಗಳೂರು, ಭಾಗಣ್ಣ ಕೋಟೆಗೋಳ, ದವಲಸಾಬ ನಾಗಾವಿ, ಬಸವರಾಜ ತಳವಾರ, ಮೈಬೂಬ ಜೋಗುರ, ಅಬೂಬಕರ ಶಾಬಾದಿ, ಗೋಲ್ಲಾಳ ನಾಯ್ಕೋಡಿ, ಗೋಲ್ಲಾಳ ತಳವಾರ, ಮಹಾಂತೇಶ ನಾಯ್ಕೋಡಿ, ಮಲ್ಲಪ್ಪ ಪೂಜಾರಿ, ರವಿ ಯಡ್ರಾಮಿ, ರಾಜು ಯಂಕಂಚಿ, ವಿರೇಶ ನಾಯ್ಕೋಡಿ, ಪ್ರಕಾಶ ನಾಯ್ಕೋಡಿ, ರಾವುತ ನಾಯ್ಕೋಡಿ, ಬಂದಗಿಸಾಬ ಮೋಮಿನ್, ಮಾಂತು ನಾಯ್ಕೋಡಿ, ಲಾಲಸಾಬ ಶಾಬಾದಿ, ಖಾದಿರ ಶಾಬಾದಿ, ವಿರೇಶ ನಾಯ್ಕೋಡಿ, ಮಲ್ಲು ನಾಯ್ಕೋಡಿ, ಸುನೀಲ ಕೋಟೆಗೋಳ, ಮಡಿವಾಳಪ್ಪ ನಾಯ್ಕೋಡಿ ಸೇರಿದಂತೆ…
ಧುಮಕನಾಳದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅನಾವರಣ ಉದಯರಶ್ಮಿ ದಿನಪತ್ರಿಕೆ ಚಡಚಣ: ಕಾಯಕ ನಿಷ್ಠೆಯ, ನೇರ, ನಿಷ್ಠುರ, ಸಮಾಜದಲ್ಲಿನ ಮೂಡ ನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ವೇದಮೂರ್ತಿ ಸಂಗಯ್ಯ ಮಠ ಹೇಳಿದರು.ಸಮೀಪದ ಧುಮಕನಾಳ ಗ್ರಾಮದಲ್ಲಿ ನೂತನ ಮೂರ್ತಿ ಪ್ರತಿಷ್ಥಾಪನೆ ಹಾಗೂ ಅನಾವರಣ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ೧೨ ನೇ ಶತಮಾನದ ಮಹಾನ್ ಚೇತನ, ಖ್ಯಾತ ವಚನಕಾರರು ಸಮಾಜದಲ್ಲಿನ ಅನಿಷ್ಠ ಪದ್ದತಿಗಳನ್ನು ತಮ್ಮ ವಚನಗಳ ಮೂಲಕ ತಿದ್ದುವ ಕಾರ್ಯ ಮಾಡಿದ್ದಾರೆ. ಅಂತಹ ಮಹಾನ್ ಶರಣದ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ತಾ.ಪಂ ಸದಸ್ಯ ರಾಜಶೇಖರ ಝಳಕಿ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಅಂತಹ ಮಹಾನ್ ನಿಜಶರಣ ಅಂಬಿಗರ ಚೌಡಯ್ಯ ರವರ ಪುತ್ಥಳಿ ನಿರ್ಮಾಣ ಮಾಡಿದ್ದೀರಿ ನಿಜಕ್ಕೂ ಶ್ಲಾಘನೀಯ ಎಂದು…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಲೇಖನ- ವಿವೇಕಾನಂದ. ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಗಂಗಾ ಯಮುನಾ ಸರಸ್ವತಿ ಎಂಬ ತ್ರಿವಳಿ ನದಿಗಳ ಸಂಗಮದಲ್ಲಿ ಮಿಂದು ಮೀಯುವ ಉತ್ಸವ, ನಾನಾ ಕಾರಣಗಳಿಗಾಗಿ ಇಡೀ ರಾಷ್ಟ್ರದಾದ್ಯಂತ ಗಮನ ಸೆಳೆದಿದೆ.ಮಹಾ ಕುಂಭಮೇಳ ಒಂದು ಸಾಂಸ್ಕೃತಿಕ ಉತ್ಸವವೇ ಅಥವಾಧಾರ್ಮಿಕ ಆಚರಣೆಯೇ? ಅಥವಾ ನಂಬಿಕೆಯ ಸಂಪ್ರದಾಯವೇ? ಅಥವಾ ದೈವಭಕ್ತಿಯ ಉತ್ತುಂಗವೇ? ಅಥವಾ ಮೌಢ್ಯವೇ? ಅಥವಾ ಪುಣ್ಯ ಸ್ನಾನವೇ? ಅಥವಾ ದೇಹ ಮತ್ತು ಮನಸ್ಸುಗಳ ಶುದ್ಧೀಕರಣವೇ?ಅಥವಾ ವೈಚಾರಿಕ ಪ್ರಜ್ಞೆಯೇ? ಅಥವಾ ವೈಜ್ಞಾನಿಕ ಅರ್ಥವೇ?ಅಥವಾ ಪ್ರಾಕೃತಿಕ ಸಹಜತೆಯೇ?ಅಥವಾ ಶೋಷಣೆಯ ಮೂಲವೇ? ಅಥವಾ ಗುಲಾಮಗಿರಿಯ ಸಂಕೇತವೇ? ಅಥವಾ ಸಾಮಾನ್ಯ ಜನರ ಸಹಜ ಜೀವನ ಶೈಲಿಯೇ..?ಈ ಪ್ರಶ್ನೆಗಳಿಗೆ ಆಂತರಿಕವಾಗಿ ಒಂದಷ್ಟು ಉತ್ತರಗಳನ್ನು ಕಂಡುಕೊಳ್ಳಬೇಕಾಗಿದೆ.ಮೂಲಭೂತವಾಗಿ ಈ ಮೂರು ಬೃಹತ್ ನದಿಗಳ ಸಂಗಮ ಒಂದು ಪ್ರಾಕೃತಿಕ ವಿಸ್ಮಯ. ಆ ದೃಶ್ಯ ನಯನ ಮನೋಹರ, ಸೌಂದರ್ಯ ಲಹರಿಯ ಅದ್ಭುತ ನೋಟ. ತೀರಾ ಅಪರೂಪಕ್ಕೆ ಏರ್ಪಟ್ಟಿರುವ ನೈಸರ್ಗಿಕ ವಿಶೇಷತೆ. ಅಂತಹ…
ಅಭಿಮತ ಲೇಖನ ಉದಯರಶ್ಮಿ ದಿನಪತ್ರಿಕೆ ವೀರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ. ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ .ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು. ಉತ್ತರ ಕನ್ನಡ ಭಾಷೆಯಲ್ಲಿ ಕೇವಲ ಲಿಂಗಾಯತ ಇತ್ತು 1978 ರ ಈಚೆಗೆ ವೀರಶೈವ ದಕ್ಷಿಣದಿಂದ ಉತ್ತರ ಗಂಡು ಕನ್ನಡಿಗರ ಹೆಗಲ ಮೇಲೇರಿತು.ಇಂದು ಪರ್ಯಾಯ ಸಂಘಟನೆ ಮಾಡಿ ಸಂಘರ್ಷಕ್ಕಿಳಿಯುತ್ತೇವೆ ಎಂದೆನ್ನುವುದು ಒಂದು ಭ್ರಾ೦ತಿ ಭ್ರಮೆ.ಎಲ್ಲವೂ ಕೊನೆಗೊಳ್ಳುವುದು ರಾಜಕೀಯ ಲೆಕ್ಕಾಚಾರ.ನನ್ನ ಕೆಲವು ಪ್ರಶ್ನೆಗಳು ಸಂಬಂಧಿತರು ಉತ್ತರಿಸಲಿನ್ಯಾಯಮೂರ್ತಿ ಶ್ರೀ ನಾಗಮೋಹನದಾಸ ಅವರು ಸಲ್ಲಿಸಿದ ವರದಿ ಆಧಾರದ ಮೇಲೆ ಕರ್ನಾಟಕ ಅಂದಿನ ಸರಕಾರವು ಕೇಂದ್ರ ಮೈನಾರಿಟಿ ಇಲಾಖೆಗೆ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ಮೇಲೆ ಸಂಬಂಧಿತ ಲಿಂಗಾಯತ ಮಠಗಳು ಸಂಘಟನೆಗಳು ಕಳೆದ ಏಳು ವರ್ಷಗಳಿಂದ ಮತ್ತೆ ಪುಸ್ಟಿಕರಿಸಿದ ಅರ್ಜಿಯನ್ನು ಏಕೆ ಸಲ್ಲಿಸಲಿಲ್ಲ.ಅವತ್ತಿನ ಸಮ್ಮಿಶ್ರ ಸರಕಾರ ಕೇಂದ್ರ ಸರಕಾರಕ್ಕೆ ಏಕೆ ಮತ್ತೆ ಮೆಲ್ಮನವಿ ಸಲ್ಲಿಸಲಿಲ್ಲ.ಲಿಂಗಾಯತ ಧರ್ಮದ ಮಾನ್ಯತೆ ಮತ್ತು ಅಲ್ಪ ಸಂಖ್ಯಾತ ಮಾನ್ಯತೆಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ “ವುಮೆನ್ ಮೀಡಿಯಾ ಕ್ಲಬ್” ಉದ್ಘಾಟನಾ ಕಾರ್ಯಕ್ರಮವನ್ನು ಇದೇ ದಿ. ೨೧ ರಂದು ಮಂಗಳವಾರ ಬೆಳಿಗ್ಗೆ ೧೧:೩೦ ಗಂಟೆಗೆ ವಿಭಾಗದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಕೆನಡಾದ ಟೊರೊಂಟೊನ ಸಂವಹನ ತಜ್ಞೆ ಗೀತಾ ನಾಗರಾಜು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆನಡಾದ ಟೊರೊಂಟೊನ ಬಿ.ವಿ ನಾಗ್ ಕಮ್ಯುನಿಕೇಶನ್ಸ್ನ ಅಧ್ಯಕ್ಷ ಹಾಗೂ ಇಂಡಿಯಾ ಅಬ್ಸರ್ವರ್ ಪತ್ರಿಕೆಯ ಸಂಪಾದಕ ಬಿ.ವಿ ನಾಗರಾಜು ಭಾಗವಹಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಹಿಸಲಿದ್ದಾರೆ.ಅತಿಥಿಗಳಾಗಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ ಭಾಗವಹಿಸಲಿದ್ದು, ಬೋಧಕ ಬೋದಕೇತರ ಸಿಬ್ಬಂದಿವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಮೀಡಿಯಾ ಕ್ಲಬ್ ಅಧ್ಯಕ್ಷೆ ಶಿಲ್ಪಾ ಪವಾರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.ಪದಾಧಿಕಾರಿಗಳ ಆಯ್ಕೆ: ಇತ್ತೀಚೆಗೆ ನಡೆದ ವುಮೆನ್ ಮೀಡಿಯಾ ಕ್ಲಬ್ ಸಭೆಯಲ್ಲಿ ೨೦೨೪-೨೫ನೆಯ ಸಾಲಿನ ಪದಾಧಿಕಾರಿಗಳನ್ನು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕಳ್ಳರ ಸುಳ್ಳು ವದಂತಿ ಜನತೆ ಕಿವಿಗೊಡದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ, ರಾತ್ರಿ ವೇಳೆ ತಮ್ಮ ಸುತ್ತಮುತ್ತ ಸಂಶಯಾಸ್ಪದ ವ್ಯಕ್ತಿಗಳು ಓಡಾಟ ನಡೆಸುತ್ತಿರುವುದ ಕಂಡುಬಂದರೆ ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಬೇಕು. ಜನರ ರಕ್ಷಣೆಗೆ ಸದಾ ಪೊಲೀಸ್ ಇಲಾಖೆಯ ಸದಾ ಇದೆ. ಪೊಲೀಸ್ ಇಲಾಖೆಯೊಂದಿಗೆ ಜನರು ಸಹಕಾರ ನೀಡಬೇಕೆಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಸೋಮವಾರ ಸಂಜೆ ಕರೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಬಡಾವಣೆಗಳಲ್ಲಿ ರಾತ್ರಿ ವೇಳೆ ಯಾರೂ ಅನಗತ್ಯವಾಗಿ ಬೈಕ್ನಲ್ಲಿ ಸಂಚರಿಸಿ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು. ಕಳ್ಳರು ಬರುತ್ತಾರೆ ಎಂದು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕೆಲವರು ರಾತ್ರಿ ವೇಳೆಯಲ್ಲಿ ಕಾವಲು ಕಾಯುತ್ತಿರುವದರಿಂದಾಗಿ ಬಡವಾಣೆ ನಿವಾಸಿಗಳಿಗೆ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಈ ನಿಟ್ಟಿನಲ್ಲಿ ಹಿರಿಯರು ಗಮನ ಹರಿಸಿ ಈ ರೀತಿಯಾಗದಂತೆ ನೋಡಿಕೊಳ್ಳುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಔಷಧ ಅಂಗಡಿ ಹೊರತು ಪಡಿಸಿ ರಾತ್ರಿ ೧೦ ಯೊಳಗೆ…
